ಗುರುವಾರ, ಆಗಸ್ಟ್ 29, 2024

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

 


                                                             ವಾ.ವಿ.ಸಂ.150

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

ಯಾದಗಿರಿ : ಆಗಸ್ಟ್ 29, (ಕ.ವಾ) : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಆಗಸ್ಟ್ 30, 31 ರಂದು ಹಾಗೂ ಸೆಪ್ಟೆಂಬರ್ 2, 3 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಪ್ರವಾಸವು ಕೆಳಗಿನಂತಿದೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ಅವರು ತಿಳಿಸಿದ್ದಾರೆ.

     2024ರ ಆಗಸ್ಟ್ 30ರ ಶುಕ್ರವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ  10.30 ಗಂಟೆಗೆ ಆಗಮಿಸಿ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ತದನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

     2024ರ ಆಗಸ್ಟ್ 31ರ ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 6 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

     2024ರ ಸೆಪ್ಟೆಂಬರ್ 2ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 6 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

      2024ರ ಸೆಪ್ಟೆಂಬರ್ 3ರ ಮಂಗಳವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಕೆಂಭಾವಿ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 



                                                              ವಾ.ವಿ.ಸಂ.149




ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನ ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ಆಯೋಜನೆ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ : ಆಗಸ್ಟ್ 29, (ಕ.ವಾ) : ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಯರಗೋಳ ಗ್ರಾಮದಿಂದ ಕಡೆಚೂರ ಗ್ರಾಮದ ಗಡಿ ರವರೆಗೆ ಬರುವಂತಹ ಸುಮಾರು 27 ಜನ ವಸತಿ ಸ್ಥಳಗಳಲ್ಲಿ ಮಾನವ ಸರಪಳಿ ನಿರ್ಮಿಸಲು ಮೂಲಕ ಯಶಸ್ವಿಗೊಳಿಸುವಂತೆ  ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಧಿಕಾರಿಗಳಿಗೆ ಸೂಚಿಸಿದರು.


     ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.

     ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಉದ್ದೇಶ ಹೊಂದಿದ್ದು, ಜಿಲ್ಲೆಯ ಜನತೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

     ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಸಂವಿಧಾನದ ಗೌರವ, ಘನತೆ ಹೆಚ್ಚಿಸುವ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಾರಿ ಹೇಳುವಂತಹ ಮಾನವ ಸರಪಳಿ ರಚಿಸಿ ಯಶಸ್ವಿಯಾಗಿ,  ಯಾವುದೇ ಲೋಪ ಆಗದಂತೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

     ಈ ಕಾರ್ಯಕ್ರಮದ ಯಶಸ್ವಿಗಾಗಿ 20 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ.  ಪ್ರತಿ 1 ಕಿ.ಮೀ. ವ್ಯಾಪ್ತಿಗೆ ಏರಿಯಾ ಅಧಿಕಾರಿಗಳು ಮತ್ತು ಪ್ರತಿ 3 ಕಿಲೋಮೀಟರ್ ವ್ಯಾಪ್ತಿಗೆ ತಾಲೂಕ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗುತ್ತದೆ ಎಂದು ತಿಳಿಸಿದರು.

     ಕಾರ್ಯಕ್ರಮಕ್ಕೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ದೇಶಭಕ್ತಿ,ಐಕ್ಯತೆ, ಸಂವಿಧಾನ  ಮತ್ತು  ಪ್ರಜಾಪ್ರಭುತ್ವದ ಮಹತ್ವ  ಸಾರುವಂತಹ ಮಾನವ ಸರ್ಪಳಿಯನ್ನು ನಿರ್ಮಿಸಬೇಕು. ವಿವಿಧ ಸಾಂಸ್ಕೃತಿಕ, ಕಲಾ ತಂಡಗಳ, ಸಂಘ ಸಂಸ್ಥೆಗಳ ಸಹಭಾಗಿತ್ವ ದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.  ತುರ್ತು ಸೇವೆಗಾಗಿ ಆರೋಗ್ಯ ಇಲಾಖೆಯಿಂದ  ನುರಿತ ಸಿಬ್ಬಂದಿ ಗಳೊಂದಿಗೆ ಚಿಕಿತ್ಸೆ ಸೌಲಭ್ಯ ಇರುವ ಆಂಬುಲೆನ್ಸ್ ವ್ಯವಸ್ಥೆ, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಕಲಾತಂಡಗಳ ನಿಯೋಜನೆ ಮಾಡುವಂತೆ ಹಾಗೂ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

     ರೂಟ್ ಮ್ಯಾಪ್ ಗ್ರಾಮಗಳು : ಯರಗೋಳ, ಯರಗೋಳ ತಾಂಡ, ಮಲ್ಕಪನಳ್ಳಿ, ಗೇಮುನಾಯಕ ತಾಂಡ, ವೆಂಕಟೇಶ ನಗರ, ಅಲ್ಲಿಪೂರ ತಾಂಡ, ಅಲ್ಲಿಪೂರ, ಕಂಚಗಾರಹಳ್ಳಿ, ಚಾಮನಳ್ಳಿ ತಾಂಡ,  ಆರ್ಯಭಟ ಸ್ಕೂಲ್, ಆದರ್ಶ ಸ್ಕೂಲ್, ಮೆಡಿಕಲ್ ಕಾಲೇಜು, ಮುದ್ನಾಳ ದೊಡ್ಡತಾಂಡ, ಮುಂಡರಗಿ, ಆಶನಾಳ ತಾಂಡ, ರಾಮಸಮುದ್ರ, ಮೈಲಾಪೂರ, ಹಳಿಗೇರಾ, ಆರ್ ಹೊಸಳ್ಳಿ, ನಗಲಾಪೂರ, ಬಳಿಚಕ್ರ, ಕಿಲ್ಲನಕೇರಾ, ಕರಿಬೆಟ್ಟ, ರಾಚನಳ್ಳಿ, ಶೆಟ್ಟಿಹಳ್ಳಿ, ಕಡೆಚೂರ, ಕಡೆಚೂರ ಬಾರ್ಡರ್ ಒಟ್ಟು 68 ಕಿಲೋಮೀಟರ್ ಮಾನವ ಸರಪಳಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

     ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಡಿವೈಎಸ್ಪಿ ಅರುಣಕುಮಾರ , ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕುಮಾರಿ ಸರೋಜಾ, ಡಿಡಿಪಿಐ ಮಂಜುನಾಥ, ಡಿಡಿಪಿಯು ಚನ್ನಬಸಪ್ಪ ಕುಳಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ತಹಶೀಲ್ದಾರ ಸುರೇಶ ಅಂಕಲಗಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


                                                              ವಾ.ವಿ.ಸಂ.148

“ಆರೋಗ್ಯ ಮೇಳ” ಕಾರ್ಯಕ್ರಮ




ಒಬ್ಬ ವ್ಯಕ್ತಿ ಅಂಗಾಗ ದಾನವು ಹಲವು ಜನರಿಗೆ ಜೀವವನ್ನು ಉಳಿಸಬಹುದು

ಯಾದಗಿರಿ : ಆಗಸ್ಟ್ 29, (ಕ.ವಾ) : ಹೆಚ್ಚು ಹೆಚ್ಚಾಗಿ ಸ್ವಯಂ ಪ್ರೇರಣೆಯಿಂದ ಅಂಗಾದ ದಾನ ಮಾಡುವುದು ಮತ್ತು ಕುಟುಂಬಸ್ಥರಿಗೆ ಪ್ರೇರೆಪಿಸುವುದು ಇದು ಒಬ್ಬ ವ್ಯಕ್ತಿ ಅಂಗಾAಗ ದಾನವು ಹಲವು ಜನರಿಗೆ ಜೀವವನ್ನು ಉಳಿಸ ಬಹುದು ಎಂದು ಮತ್ತು ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಸೊಳ್ಳೆಗಳ ನಿಯಂತ್ರಣ ಸಮುದಾಯ ಜವಾಬ್ದಾರಿಯಾಗಿದ್ದು ಎಲ್ಲರ ಸಹಕಾರದಿಂದ ಸೊಳ್ಳೆಗಳಿಂದ ಹರಡುವ ರೋಗಗಳಿಂದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ನಿಯಂತ್ರಿಸಲು ಸಾರ್ವಜನಿಕರಿಗೆ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳಾದ ಡಾ.ಸಾಜೀದ್ ಕರೆ ನೀಡಿದರು.

   ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಕುರಕುಂದ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುರಕುಂದ ಪ್ರಾ.ಆ.ಕೇಂದ್ರ ಸಹಯೋಗದಲ್ಲಿ “ಆರೋಗ್ಯ ಮೇಳ” ನೇತ್ರದಾನ ಪಾಕ್ಷಿಕ ವiತ್ತು ಅಂಗಾAಗ ದಾನ ಕುರಿತು ಆರೋಗ್ಯದ ಅರಿವು ಆರೋಗ್ಯ ಮೇಳ ಇತ್ತೀಚಿನ ಕಾರ್ಯಕ್ರಮದಲ್ಲಿ ಮಾತನಾಡಿದರು. 

     ವಡಗೇರಾ ತಾಲೂಕಿನ ಕುರಕುಂದ ಗ್ರಾಮದಲ್ಲಿ ಗ್ರಾಮದ ಸಾರ್ವಜನಿಕರು ಅಂಗಾAಗದಾನದ ಮಹತ್ವದ ಕುರಿತು ತಿಳಿದುಕೊಂಡು ಹೆಚ್ಚು ಹೆಚ್ಚಾಗಿ ಸ್ವಯಂ ಪ್ರೇರಣೆಯಿಂದ ಅಂಗಾದ ದಾನ ಮಾಡುವುದು ಮತ್ತು ಕುಟುಂಬಸ್ಥರಿಗೆ ಪ್ರೇರೆಪಿಸುವುದು ಇದು ಒಬ್ಬ ವ್ಯಕ್ತಿ ಅಂಗಾAಗ ದಾನವು ಹಲವು ಜನರಿಗೆ ಜೀವವನ್ನು ಉಳಿಸ ಬಹುದು ಎಂದು ಮತ್ತು ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಸೊಳ್ಳೆಗಳ ನಿಯಂತ್ರಣ ಸಮುದಾಯ ಜವಾಬ್ದಾರಿಯಾಗಿದ್ದು ಎಲ್ಲರ ಸಹಕಾರದಿಂದ ಸೊಳ್ಳೆಗಳಿಂದ ಹರಡುವ ರೋಗಗಳಿಂದ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದರು.


     ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಮಲ್ಲಪ್ಪ ಕಣಜಿಕರ್ ಅವರು ಮಾತನಾಡಿ, ರಾಷ್ಟಿçÃಯ 39ನೇ ನೇತ್ರದಾನ ಪಾಕ್ಷಿಕ ಕಾರ್ಯಕ್ರಮ ಆಗಸ್ಟ್ 25 ರಿಂದ ಸೆಪ್ಟೆಂಬರ್ 8ರ ವರೆಗೆ ನಡೆಯಲಿದ್ದು, ಕಣ್ಣಿನ ಮಹತ್ವ ಕುರಿತು ವಿವರಿಸಿ ಎಲ್ಲರೂ ನೇತ್ರದಾನ ಮಾಡುವಂತೆ ಆನ್‌ಲೈನ್ ಪೋರ್ಟಲ್‌ನಲ್ಲಿ ಜೀವನ್ ಸಾರ್ಥಕತೆ ಆ್ಯಪ್ ಮೂಲಕ ನೋಂದಾಯಿಸಕೊಳ್ಳಬೇಕು ಇದರಿಂದ ಒಬ್ಬ ವ್ಯಕ್ತಿಯ ನೇತ್ರದಾನವು ಇಬ್ಬರು ಕಾರ್ನಿಯಾ ಅಂಧರಿಗೆ ವರವಾಗುವುದು, ನೇತ್ರದಾನ ಮರಣದ 6 ಗಂಟೆಯೊಳಗೆ ನೇತ್ರಗಳನ್ನು ಸಂಗ್ರಹಿಸಲಾಗುವುದು ಎಂದು ತಿಳಿಸಿದರು. ಶಾಲಾ ಮಕ್ಕಳನ್ನು ಉದ್ದೇಶಿಸಿ ರಕ್ತಹೀನತೆ ತಡೆಗಟ್ಟಲು ಪ್ರತಿವಾರದಲ್ಲಿ ಒಂದು ದಿನ ಕಬ್ಬಿಣಾಂಶ ಮಾತ್ರೆಯನ್ನು ಸೇವಿಸಬೇಕು ಎಂದು ಮತ್ತು ಹೆಣ್ಣುಮಕ್ಕಳು ಮುಟ್ಟಿನ ಶುಚಿತ್ವ ಕಡೆಗಮನ ಹರಿಸಲು ಮತ್ತು ಆರೋಗ್ಯ ಇಲಾಖೆಯಿಂದ ಶುಚಿ ನ್ಯಾಪಕಿನ್ ಉಚಿತವಾಗಿ ಪಡೆದುಕೊಳ್ಳುವಂತೆ ಹೇಳಿದರು.

     ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ.ರಮೇಶ ಗುತ್ತೇದಾರ ಅವರು ಮಾತನಾಡಿ ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಯಾವುದಿಲ್ಲ ಆರೋಗ್ಯವೇ ಮಹಾಭಾಗ್ಯ ಪೌಷ್ಠಿಕ ಆಹಾರ ಸೇವಿಸಿ ಉತ್ತಮ ಆರೋಗ್ಯ ಪಡೆಯಬೇಕೆಂದು ತಿಳಿಸಿದರು.

     ಕುರಕುಂದ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಮರಲಿಂಗಪ್ಪ ಅವರು ಮಾತನಾಡಿ, ಆರೋಗ್ಯ ಮೇಳದಲ್ಲಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮ ಕುರಿತು ಜಾಗೃತಿ ಮೂಡಿಸುವುದು ಉಚಿತ ಆರೋಗ್ಯ ತಪಾಸಣೆ ಮಾಡುವುದು ಹಾಗೂ ಚಿಕಿತ್ಸೆಯನ್ನು ನೀಡುವುದಾಗಿರುತ್ತದೆ, ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

     ಕಾರ್ಯಕ್ರಮದಲ್ಲಿ ರಾಷ್ಟಿçÃಯ 39ನೇ ನೇತ್ರಧಾನ ಪಾಕ್ಷೀಕ ಅಂಗವಾಗಿ ಕರಪತ್ರಗಳ ಬಿಡುಗಡೆ ಹಾಗೂ ಹಿರಿಯ ನಾಗರಿಕರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.

     ಕಾರ್ಯಕ್ರಮದ ನಿರೂಪಣೆ ಯಾದಗಿರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ತುಳಸಿರಾಮ ಚವ್ಹಾಣ ನೆರವೇರಿಸಿದರು, ಪ್ರಾರ್ಥನೆ ಗೀತೆ ವಿದ್ಯಾರ್ಥಿನಿ ಕು.ಅಯ್ಯಮ್ಮ ಕು.ಚಾಂದಬೀ, ಸ್ವಾಗತ ಸಿ.ಹೆಚ್.ಒ ಮಹಾದೇವಪ್ಪ, ವಂದನಾರ್ಪಣೆ ಹೆಚ್.ಎಸ್ ಶಾಂತಿಲಾಲ್ ಅವರು ನೇರವೆರಿಸಿದರು.

     ಈ ಸಂದರ್ಭದಲ್ಲಿ ಕುರಕುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮುದ್ದಮ್ಮ ಗುಡುಸಾಬ ಶೇಕ್‌ಸಿಂದಿ, ಜಿಲ್ಲಾ ಆರ್.ಸಿ.ಹೆಚ್ ಆಯುಷ್ ವೈದ್ಯರು ಡಾ.ಶೃತಿ, ಶಂಕರಾನAದ, ಸುದರ್ಶನ, ಹಾಗೂ ಡಾ.ಅಮೀತ, ಮಾಳಪ್ಪ ಪುರ್ಲೇ, ಶ್ರೀಮತಿ ಶೀಭಾರಾಣಿ, ಮಹಿಬೂಬ್, ಬಿಹೆಚ್‌ಇಓ, ಬಸವರಾಜ ಎಸ್‌ಟಿಎಸ್ ಉಮೇಶ, ಹಿ.ಆ.ನೀರಿಕ್ಷಣಾಧಿಕಾರಿ ಸಂಗಣ್ಣ ನುಚ್ಚಿನ್, ಪ್ರಾ.ಆ.ಕೇಂದ್ರದ ರಾಜಶೇಖರ, ಹಿ.ಆ.ನಿ.ಅಧಿಕಾರಿಗಳು, ಹಣಂತ್ರಾಯಗೌಡ, ಪಿ.ಹೆಚ್.ಸಿ.ಒ ಶ್ರೀಮತಿ ಮರೇಮ್ಮ, ಯಾದಗಿರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.


ಬುಧವಾರ, ಆಗಸ್ಟ್ 28, 2024

 ರಾಷ್ಟಿçÃಯ ಕ್ರೀಡಾ ದಿನಾಚರಣೆ ಕಾರ್ಯಕ್ರಮ


ಯಾದಗಿರಿ : ಆಗಸ್ಟ್ 28 (ಕ.ವಾ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯಾದಗಿರಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್‌ರವರ ಜನ್ಮ ದಿನಾಚರಣೆ ಹಿನ್ನೆಲೆ ರಾಷ್ಟಿçÃಯ ಕ್ರೀಡಾ ದಿನಾಚರಣೆಯನ್ನು ಯಾದಗಿರಿ ಸರ್ಕಾರಿ ಪದವಿ ಮಹಾವಿದ್ಯಾಲಯ ಸಭಾಂಗಣದಲ್ಲಿ 2024ರ ಆಗಸ್ಟ್ 29ರ ಗುರುವಾರ  ರಂದು ಬೆಳಿಗ್ಗೆ 10 ಗಂಟೆಗೆ ರಾಷ್ಟಿçÃಯ ಕ್ರೀಡಾ ದಿನಾಚರಣೆ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.


     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಕಾರ್ಯಕ್ರಮ ಉದ್ಘಾಟಿಸುವರು.

     ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು. ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಚನ್ನಾರೆಡ್ಡಿ ಪಾಟೀಲ್ ತುನ್ನೂರ ಅಧ್ಯಕ್ಷತೆ ವಹಿಸುವರು. ರಾಯಚೂರು ಲೋಕಸಭಾ ಸದಸ್ಯರು ಶ್ರೀ ಜಿ.ಕುಮಾರ ನಾಯಕ, ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ ಮುಖ್ಯ ಅತಿಥಿಗಳಾಗಿ ಆಗಮಿಸುವರು.

     ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ, ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಾಜಾ ವೇಣುಗೋಪಾಲ ನಾಯಕ, ಯಾದಗಿರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರು ಶ್ರೀ ವಿನಾಯಕ ಮಾಲಿ ಪಾಟೀಲ್ ಅತಿಥಿಗಳಾಗಿ ಪಾಲ್ಗೊಳ್ಳುವರು. 

     ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರು ಹಾಗೂ ಸರ್ವರೂ ಆಗಮಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಗರಿಮಾ ಪನ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಜಿ.ಸಂಗೀತಾ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಶ್ರೀ ರಾಜು ಬಾವಿಹಳ್ಳಿ ಅವರು ಪ್ರಕಟಣೆ ಕೋರಿದೆ.


  

 ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ಗುರಿ ಸಾಧಿಸಿ :  ಜಿಲ್ಲಾಧಿಕಾರಿ ಡಾ.ಸುಶೀಲ ಬಿ





ಯಾದಗಿರಿ: ಆಗಸ್ಟ್, 28 ( ಕ. ವಾ) : ಕೆಕೆಆರ್ಡಿಬಿ, ಶಾಸಕರ, ಸಂಸದರ, ಎಮ್ಎಲ್ಸಿ ನಿಧಿಯಡಿ ಮತ್ತು ಗಡಿನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅನುದಾನದಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಡಿ ಅನುಷ್ಠಾನದಲ್ಲಿರುವ ಕಾಮಗಾರಿಗಳನ್ನು ಶೀಘ್ರವಾಗಿ ಕಾರ್ಯನಿರ್ವಹಿಸುವ ಮೂಲಕ ನಿಗದಿತ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರದಂದು ನಡೆದ ಕೆಕೆಆರ್ಡಿಬಿ, ಶಾಸಕರ, ಸಂಸದರ, ಎಮ್ಎಲ್ಸಿ ನಿಧಿಯಡಿ ಮತ್ತು ಗಡಿನಾಡು ಪ್ರದೇಶ ಅಭಿವೃದ್ದಿ ಮಂಡಳಿಗಳಿಂದ ನಿಗದಿಪಡಿಸಲಾದ  ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಇಲಾಖೆ, ಕೆಆರ್‌ಐಡಿಎಲ್ ಇಲಾಖೆಯ ಅಧಿಕಾರಿಗಳಿಗೆ  ಕಾಮಗಾರಿಗಳನ್ನು ಶೀಘ್ರವೇ ಮುಗಿಸಿ ಅಭಿವೃದ್ಧಿಗೆ ನೆರವಾಗಬೇಕು ಎಂದು ಸೂಚಿಸಿದರು.

ಕಳೆದ ಸಾಲಿನಲ್ಲಿ ಅನುಮೋದನೆಗೊಂಡ ಕಾಮಗಾರಿಗಳ ಅಂದಾಜು ಪಟ್ಟಿಗಳನ್ನು ಸಲ್ಲಿಸಿ ಆಡಳಿತಾತ್ಮಕ ಅನುಮೋದನೆ ಪಡೆದು ಕಾಮಗಾರಿಗಳನ್ನು  ಪ್ರಾರಂಭಿಸಿ ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ  ಸೂಚಿಸಿದರು.


ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಮೆಗಾ ಮ್ಯಾಕ್ರೋ ಯೋಜನೆಯಡಿ ತೋಟಗಾರಿಕೆ ಇಲಾಖೆಯ,  ಲೋಕೋಪಯೋಗಿ ಇಲಾಖೆಯ, ಪಂಚಾಯತ ರಾಜ್ ಇಲಾಖೆಯ  , ಆರೋಗ್ಯ ಇಲಾಖೆಯ  ಸಂಬಂಧಿಸಿದ ಕಾಮಗಾರಿಗಳು ಪ್ರಾರಂಭಿಸಬೇಕಾಗಿದ್ದು, ಇನ್ನೂ ಪ್ರಾರಂಭವಾಗದೇ ಇರುವ ಕುರಿತು ಸಂಬಂಧಪಟ್ಟ ಅನುಷ್ಠಾನ ಅಧಿಕಾರಿಗಳಿಂದ  ಮಾಹಿತಿ ಪಡೆದು   ಈ ಕಾಮಗಾರಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸುವಂತೆ  ಕ್ರಮವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಮಂಡಳಿಯ ವತಿಯಿಂದ ಅನುಮೋದನೆಗೊಂಡ ಶಾಲಾ ಕಟ್ಟಡಗಳು, ಅಂಗನವಾಡಿ ಕಟ್ಟಡಗಳು, ಆರೋಗ್ಯ ಕೇಂದ್ರಗಳ ಕಟ್ಟಡಗಳನ್ನು ಆದ್ಯತೆಯ ಮೇರೆಗೆ ಪ್ರಾರಂಭಿಸಿ ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದರು.

ಸ್ಥಳ ಸಮಸ್ಯೆ ಇರುವ ಶಾಲಾ ಹಾಗೂ  ಅಂಗನವಾಡಿ ಕಟ್ಟಡಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ಮತ್ತು ಡಿಡಿಪಿಐ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರುವುದರ ಮೂಲಕ ಸಮಸ್ಯೆಗಳನ್ನು ಇತ್ಯರ್ಥಪಡಿಸಿ. ಪ್ರತಿ ಮಾಹೆಗೆ ನಿಗದಿಪಡಿಸಲಾದ ಆರ್ಥಿಕ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸಲು ಎಲ್ಲಾ ಅನುಷ್ಠಾನ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಪಿಓ ಕುಮುಲಯ್ಯ ಕೆ, ಪಿಡಬ್ಲ್ಯೂಡಿ ಇಲಾಖೆ ಎಇಇ ಅಭಿಮನ್ಯು, ನಿರ್ಮೀತಿ ಕೇಂದ್ರದ ಅಧಿಕಾರಿ ಕಿರಣಕುಮಾರ, ಡಿಡಿಪಿಐ ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಗಂಗಾಧರ ದೊಡ್ಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರಾದೇವಿ ಮಠಪತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಸೋಮವಾರ, ಆಗಸ್ಟ್ 26, 2024

ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ

                                                             ವಾ.ವಿ.ಸಂ.131
ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ
ಯಾದಗಿರಿ : ಆಗಸ್ಟ್ 26, (ಕ.ವಾ) : ಯಾದಗಿರಿ ನಗರದ ಅಜೀಜ್ ಕಾಲೋನಿ ನಿವಾಸಿಯಾದ ಶೇಖ ಇರ್ಫಾನ್ 25 ವರ್ಷ ಪುರುಷ ಕಾಣೆಯಾಗಿದ್ದು, ಈ ಕುರಿತು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ನಗರ ಠಾಣಾಧಿಕಾರಿ ತಿಳಿಸಿದ್ದಾರೆ.

     ಕಾಣೆಯಾದ ಪುರುಷ 2024ರ ಆಗಸ್ಟ್ 20 ರಂದು ರಾತ್ರಿ ಸಮಯದಲ್ಲಿ ಅಂದಾಜು 2 ಗಂಟೆಗೆ ಸುಮಾರಿಗೆ ತನ್ನ ಮೊಬೈಲ್ ಮನೆಯಲ್ಲಿ ಬಿಟ್ಟು ಮನೆಯಿಂದ ಹೋಗಿದ್ದು, ಮರಳಿ ಮನೆಗೆ ಬಂದಿರುವುದಿಲ್ಲ. ಕುಟುಂಬದವರು ಪರಿಚಯವಿರುವ ನಗರದಲ್ಲಿ ಎಲ್ಲಾ ಕಡೆ ಹುಡುಕಾಡಿದ್ದು, ಎಲ್ಲಿಯೂ ಕಂಡು ಬಂದಿರುವುದಿಲ್ಲ. ಪುರುಷ ಕಾಣೆಯಾದ ಬಗ್ಗೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುರುಷನ ಮಾಹಿತಿ ಸಿಕ್ಕರೆ ಯಾದಗಿರಿ ನಗರ ಪೊಲೀಸ್ ಠಾಣೆ  ತಿಳಿಸಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

                                                              ವಾ.ವಿ.ಸಂ.130

ಶ್ರೀ ಕೃಷ್ಣನ ದಿವ್ಯ ಸಂದೇಶಗಳು ಎಲ್ಲರಿಗೆ ದಾರಿ ದೀಪ : ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ




ಯಾದಗಿರಿ : ಆಗಸ್ಟ್ 26, (ಕ.ವಾ) : ಶ್ರೀಕೃಷ್ಣನ ದಿವ್ಯ ಸಂದೇಶಗಳು ಉತ್ತಮ ಜೀವನಕ್ಕೆ ದಾರಿ ದೀಪವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಅವರು ಅಭಿಪ್ರಾಯಪಟ್ಟರು.

     ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯಾದಗಿರಿ ನಗರಸಭೆ, ಸಹಯೋಗದಲ್ಲಿ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಸೋಮವಾರದಂದು

 ಹಮ್ಮಿಕೊಂಡಿದ್ದ, ಶ್ರೀ ಕೃಷ್ಣ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ, ಪುಷ್ಪಾರ್ಚನೆಗೈದು ಅವರು ಮಾತನಾಡಿದರು.

     ಜಯಂತಿಗಳು ಜಾತಿ ಮತ್ತು ಸಮುದಾಯಗಳಿಗೆ ಸೀಮಿತ ಆಗಬಾರದು ಎಂದು ಮಹಾನ್ ಪುರುಷರ ಸಂದೇಶಗಳನ್ನು ಜನಮನಕ್ಕೆ ತಲುಪಿ ಸದೃಢ ಸಮಾಜದ ನಿರ್ಮಾಣ ಮಾಡುವುದಕ್ಕಾಗಿ ಸರ್ಕಾರದ ವತಿಯಿಂದ ಜಯಂತಿ ಆಚರಿಸುವ ಉದ್ದೇಶವಾಗಿದೆ. ಶ್ರೀಕೃಷ್ಣ ಪರಮಾತ್ಮನಾದನು ಮತ್ತು ಇಡೀ ಪ್ರಪಂಚದ ಸೃಷ್ಟಿಕರ್ತನೆಂದು ಪರಿಗಣಿಸಲ್ಪಟ್ಟಿದ್ದಾನೆ ಎಂದರೆ ತಪ್ಪಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

     ಶಿಕ್ಷಕರಾದ ಬಸವರಾಜ ಎಸ್ ಯಾದವ್ ಹೊಸಳ್ಳಿ ಅವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ,  ಶ್ರೀ ಕೃಷ್ಣನು ಭಗವದ್ಗೀತೆ ಮೂಲಕ ಧರ್ಮ ಪರಿಪಾಲನೆ, ಅನೈತಿಕತೆ ವಿರುದ್ಧ ಹೋರಾಟ, ಸತ್ಯ, ಪ್ರೀತಿ, ವಾತ್ಸಲ್ಯ, ಒಳ್ಳೆಯ ಜೀವನದ ಬಗ್ಗೆ ಆದರ್ಶ ಸಂದೇಶಗಳು ಸಮಾಜಕ್ಕೆ ಹಾಗೂ ವಿಶ್ವಕ್ಕೆ ಮಾದರಿಯಾಗಿವೆ ಎಂದು ಹೇಳಿದರು.

     ಶ್ರೀಕೃಷ್ಣನು ಯುದ್ಧ ಹಾಗೂ ಶಾಂತಿಯಲ್ಲಿ ಘನತೆ ಹಾಗೂ ಗೌರವವನ್ನು ಕಾಪಾಡಿಕೊಂಡಿದ್ದ. ಕಂಸ, ಜರಾಸಂಧ, ನರಕಾಸುರ ಹಾಗೂ ಕೌರವರ ಸಂವಹಾರಕ್ಕೆ ಕಾರಣಿಕರ್ತನು ಹಾಗೂ ಭಾರತಿಯರ ಪಾಲಿಗೆ ದೈವಿಸ್ವರೂಪಿಯಾಗಿದ್ದಾನೆ. ಶಿಷ್ಠರ ರಕ್ಷಕ ದೃಷ್ಠರ ಸಂವಹಾರಕನಾಗಿ ಜನ ಮಾನಸದಲ್ಲಿ ಉಳಿದಿದ್ದು, ಪಾಂಡವರಿಗೆ ಯುದ್ಧದಲ್ಲಿ ನೀಡಿದ ನೆರವು ಗೆಲವುಗೆ ಕಾರಣವಾಯಿತು. ಶ್ರೀಕೃಷ್ಣನ ಜೀವನವು ಎಲ್ಲರಿಗೆ ಮಾರ್ಗದರ್ಶಿಯಾಗಿದೆ ಎಂದು ಹೇಳಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಮಾಜದ ಹಾಗೂ ಜಯಂತಿ ಸಮಿತಿಯ ಜಿಲ್ಲಾಧ್ಯಕ್ಷ ತಾಯಪ್ಪ ಯಾದವ್ ಕಾಳೆಬೆಳಗುಂದಿ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ  ಉತ್ತರದೇವಿ ಮಠಪತಿ, ಮಾಳಪ್ಪ ಯಾದವ ಕಾಡಂಗೇರಾ, ನಾರಾಯಣ ಬದ್ದೆಪಲ್ಲಿ, ನರಸಿಂಹಲು,ನಾಗಪ್ಪ ಯಾದವ್ ಹೊನಗೇರಾ, ಯಲ್ಲಪ್ಪ ಯಾದವ್ ಮೋಟನಹಳ್ಳಿ, ವೆಂಕಟೇಶ ಯಾದವ್ ಬದ್ದೆಪಲ್ಲಿ, ಲಕ್ಷö್ಮಣ ಹೊನಗೇರಾ, ನಿಂಗಪ್ಪ ಗಜ್ಜಿ ಹೊನಗೇರಾ, ಗುರುನಾಥ ಬದ್ದೆಪಲ್ಲಿ, ಮಹೇಶ ಪುಟಪಾಕ, ಭೀಮಣ್ಣ ಖಾಡಂಗೇರಾ, ಶರಣ್ಮುಖ ಪುರಲೆ, ನಾಗರಾಜ ಖಾಡಂಗೇರಾ, ಹೊನ್ನಪ್ಪ ಹೊನಗೇರಾ, ಶೇಖರ ಹೊನಗೇರಾ,ಸಣ್ಣೆಪ್ಪ ಮುಖಂಡರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...