ಶುಕ್ರವಾರ, ಮಾರ್ಚ್ 3, 2017

ಭಾರತ ಸಂವಿಧಾನದ ಮೂಲಭೂತ ಕರ್ತವ್ಯಗಳನ್ನು ಪಾಲಿಸಿ
-:ಗೌರವಾನ್ವಿತ ಶ್ರೀ ಸದಾನಂದ ಎನ್. ನಾಯಕ್
ಯಾದಗಿರಿ, ಮಾರ್ಚ್, 02 (ಕರ್ನಾಟಕ ವಾರ್ತೆ): ಭಾರತ ಸಂವಿಧಾನದ ನಾಗರಿಕರ ಮೂಲಭೂತ ಕರ್ತವ್ಯಗಳನ್ನು ಪಾಲಿಸಿದರೆ ನಿಮ್ಮಗಷ್ಟೇ ಅಲ್ಲ, ಸಮಾಜಕ್ಕೂ ಒಳಿತಾಗಲಿದೆ ಎಂದು ಜಿಲ್ಲಾ ಸೆಷೆನ್ಸ್  ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಸದಾನಂದ ಎನ್. ನಾಯಕ್ ಅವರು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,  ಜಿಲ್ಲಾ ವಕೀಲರ ಸಂಘÀ ಹಾಗೂ ಸರಕಾರಿ ಪದವಿ ಮಹಾವಿದ್ಯಾಲಯ, ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸರಕಾರಿ ಪದವಿ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾಗಿದ್ದ “ನಾಗರೀಕರ ಮೂಲಭೂತ ಕರ್ತವ್ಯಗಳು” ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ವಿದ್ಯಾರ್ಥಿಗಳು ಹೇಗೆ ತಮ್ಮ ಕರ್ತವ್ಯಗಳನ್ನು ಪಾಲಿಸಿಕೊಂಡು ಅಭಿವೃದ್ಧ್ದಿ ಸಾಧಿಸಬೇಕೆಂಬ ಬಗ್ಗೆ ಡಿ.ವಿ.ಜಿ ಅವರ “ಮಂಕುತಿಮ್ಮನ ಕಗ್ಗ” ಪ್ರಸ್ತಾಪಿಸಿದ ಅವರು, ದ್ವೇಷ ಮತ್ತು ಅಸೂಯೆಯನ್ನು ಇಟ್ಟುಕೊಳ್ಳದೇ ಉದಾತ್ತತೆಯಿಂದ ಹೋರಾಡಿದರೆ, ನಿಮ್ಮ ಅಭಿವೃದ್ಧಿಗೆ ಸಹಾಯವಾಗಲಿದೆ ಎಂದು ಹೇಳಿದರು.
ಸಂವಿಧಾನದ ಧ್ಯೇಯೋದ್ದೇಶ ಮತ್ತು ಪ್ರಜೆಗಳ ಆಶೋತ್ತರಗಳಿಗೆ ಗೌರವ ಕೊಡಬೇಕೆಂದು ಹೇಳಿದ ಅವರು, ನಿಮ್ಮ ವಿದ್ಯಾಭ್ಯಾಸದಲ್ಲಿ ಅನ್ಯುನ್ನತ ಪಡೆಯುವುದು ಸಹ ಒಂದು ಕರ್ತವ್ಯ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶೋಭಾವತಿ ಎಮ್. ಕೆ. ಅವರು ಮಾತನಾಡಿ, ತಮ್ಮ-ತಮ್ಮ ಕರ್ತವ್ಯಗಳನ್ನು ಪರಿಪೂರ್ಣವಾಗಿ ಪಾಲಿಸಿದಲ್ಲಿ ಅದಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ ಎಂದು ಅವರು ವಿದ್ಯಾರ್ಥಿಗಳಿಗೆ ಹೇಳಿದರು.

ಕೇವಲ ಅದೃಷ್ಟವನ್ನು ನಂಬದಿರಿ, ನೀವು ಯಾವ ಉದ್ದೇಶದಿಂದ ಕಾಲೇಜಿಗೆ ಬರುತ್ತಿರೋ ಆ ಕರ್ತವ್ಯಗಳನ್ನು ಸರಿಯಾಗಿ ಪಾಲಿಸಿ,  ತಕ್ಕ ಪರಿಶ್ರಮ ಪಟ್ಟರೆ ನಿಮ್ಮ ಬಾಳು ಒಳ್ಳÉಯದಾಗಲಿದೆ ಎಂದು ಹೇಳಿದರು. 
ನೀವು ಒಳ್ಳೆಯ ದಾರಿಯಲ್ಲಿ ಹೋದರೆ ನಿಮ್ಮ ಪೋಷಕರಿಗೆ, ನೀವು ಕಲಿತ ವಿದ್ಯಾ ಸಂಸ್ಥೆಗೆ ಹಾಗೂ ವೈಯಕ್ತಿಕವಾಗಿ ನಿಮಗೂ ಒಳಿತಾಗಲಿದೆ ಎಂದು ಹೇಳಿದರು.
ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ|| ಸುಭಾಶ್ಚಂದ್ರ ಕೌಲಗಿ ಅವರು, ಕರ್ತವ್ಯ ಪಾಲನೆ ಕುರಿತಂತೆ ಬಸವಣ್ಣನವರ ವಚನಗಳನ್ನು ವಾಚನ ಮಾಡಿದರು. 
ಬಸವಣ್ಣನ ಪ್ರಕಾರ ಪ್ರತಿಯೊಬ್ಬ ಮನುಷ್ಯನಿಗೂ ಆತ್ಮಸಾಕ್ಷಿ ಇರುತ್ತದೆ. ಆತ್ಮ ನಮ್ಮನ್ನು ಜಾಗೃತಿಗೊಳಿಸುತ್ತದೆ. ಈ ಹಿನ್ನೆಲೆಯಲ್ಲಿ ತಮ್ಮ ಕರ್ತವ್ಯಗಳನ್ನು ಪೂರೈಸಿದಾಗ ನÀಮ್ಮ ರಾಷ್ಟ್ರ ಸಂಪೂರ್ಣ ಸಮೃದ್ಧವಾಗುತ್ತದೆ. ಆಗ ನಮ್ಮ ವ್ಯಕ್ತಿತ್ವವೂ ಮಾದರಿಯಾಗುತ್ತದೆ ಎಂದು ಅವರು ಹೇಳಿದರು. 
ಸರ್ಕಾರಿ ನೌಕರನಿಗೆ ಮಾತ್ರ ಕರ್ತವ್ಯಗಳು ಸೀಮಿತವಾಗಿಲ್ಲ. ಹುಟ್ಟಿದ ಪ್ರತಿಯೊಬ್ಬ ಮನುಷ್ಯನಿಗೂ ತನ್ನದೇ ಆದ ಕರ್ತವ್ಯಗಳಿವೆ. ಅವುಗಳನ್ನು ಪಾಲಿಸಿಕೊಂಡು ಹೋಗಬೇಕೆಂದು ಕರೆ ನೀಡಿದರು.
ವಿಚಾರ ಸಂಕಿರಣದಲ್ಲಿ ವಕೀಲರಾದ ಎಸ್. ನಿಂಗಣ್ಣ ಬಂದಳ್ಳಿ ಅವರು ಮೂಲಭೂತ ಕರ್ತವ್ಯಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು. ರಾಷ್ಟ್ರ ಗೀತೆ ಹಾಗೂ ರಾಷ್ಟ್ರ ಧ್ವಜವನ್ನು ಗೌರವಿಸಬೇಕು. ಸ್ವಾತಂತ್ರ್ಯ ಹೋರಾಟದ ಸ್ಫೂರ್ತಿ ಕೊಟ್ಟ ಉದಾತ್ತ ಆದರ್ಶಗಳನ್ನು ಮನನಗೊಳಿಸಬೇಕು. ತಮ್ಮ ಸಂಸ್ಕøತಿಗೆ ಪ್ರಪಂಚದಲ್ಲೇ ದೊಡ್ಡ ಹೆಸರಿದ್ದು, ಅದನ್ನು ಗೌರವಿಸಬೇಕು. ಪತ್ರಿಯೊಬ್ಬರು ಸಾಮರಸ್ಯವನ್ನು ಮತ್ತು ಭಾತೃತ್ವವನ್ನು ಪ್ರೇರೇಪಿಸಬೇಕು ಮುಂತಾದ ಮೂಲಭೂತ ಕರ್ತವ್ಯಗಳನ್ನು ವಿದ್ಯಾರ್ಥಿಗಳಿಗೆ ವಿವರವಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಶ್ರೀ ವಿಶ್ವನಾಥ್ ಉಭಾಳೆ ಅವರು ಉಪಸ್ಥಿತರಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಶ್ರೀ ಸಿದೇಶ್ವರಪ್ಪ,ಜಿ.ಬಿ. ಅವರು ಸ್ವಾಗತಿಸಿದರು. ಸರಕಾರಿ ಪದವಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಶ್ರೀ ದೇವಿಂದ್ರಪ್ಪ ಹಳ್ಳಿಮನಿ ಅವರು ವಂದಿಸಿದರು. ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ರಾಘವೇಂದ್ರ ಬಂಡಿಮನಿ ಅವರು ಕಾರ್ಯಕ್ರಮ ನಿರೂಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...