ಗುರುವಾರ, ನವೆಂಬರ್ 2, 2017

62ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ: ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ
ಸಾಮಾಜಿಕ ಮತ್ತು ಸಾಂಸ್ಕøತಿಕ ಬೆಳವಣಿಗೆಗೆ ಕನ್ನಡ ಭಾಷೆಯಿಂದ ಅದ್ಭುತ ಕೊಡುಗೆ 
-: ಸಚಿವ ಶ್ರೀ ಪ್ರಿಯಾಂಕ್ ಎಂ. ಖರ್ಗೆ
ಯಾದಗಿರಿ: ನವೆಂಬರ್ 1, (ಕರ್ನಾಟಕ ವಾರ್ತೆ): ಕನ್ನಡ ಭಾಷೆಗೆ ಸಾವಿರಾರು ವರ್ಷದ ಪ್ರಾಚೀನತೆ ಇದ್ದು, ನಮ್ಮ ದೇಶದ ಸಾಮಾಜಿಕ ಮತ್ತು ಸಾಂಸ್ಕøತಿಕ ಬೆಳವಣಿಗೆಗೆ ಅದ್ಭುತ ಕೊಡುಗೆ ನೀಡಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಎಂ. ಖರ್ಗೆ ಅವರು ಗುಣಗಾನ ಮಾಡಿದ್ದಾರೆ.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ನಗರಸಭೆ, ಕನ್ನಡ ರಾಜ್ಯೋತ್ಸವ ದಿನಾಚರಣೆ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಬುಧವಾರ ನಡೆದ 62ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಭಾರತೀಯ ಭಾಷೆಗಳಲ್ಲಿ ಕನ್ನಡ ಎಂಟು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆಯುವ ಮೂಲಕ ದೇಶದಲ್ಲೇ ಅತ್ಯಂತ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆ ಎಂಬ ಹಿರಿಮೆ ಕನ್ನಡದ್ದು ಎಂದು ಅವರು ಹೇಳಿದರು. 
ಕುವೆಂಪು ಅವರ ಕವಿವಾಣಿಯಂತೆ ನಮ್ಮದು ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇದು ನಮ್ಮ ಪರಂಪರೆಯ ದ್ಯೋತಕವಾಗಿದೆ. ಆದರೆ, ಕೆಲ ಪಟ್ಟಭದ್ರಾ ಶಕ್ತಿಗಳು ಭಾಷೆ-ಭಾಷೆ ನಡುವೆ ಒಡಕು ಮೂಡಿಸಲು ಪ್ರಯತ್ನ ನಡೆಸಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮವಾಗಿದೆ. ಕನ್ನಡ ನಾಡು ವೈವಿಧ್ಯತೆಯಿಂದ ಕೂಡಿದ ನಾಡಾಗಿದ್ದು, ರನ್ನ, ಪೊನ್ನ, ಜನ್ನ, ನಾಗವರ್ಮ, ಬಸವಣ್ಣ, ಅಕ್ಕಮಹಾದೇವಿ, ಕುಮಾರವ್ಯಾಸ, ಪುರಂದರದಾಸ, ಕನಕದಾಸ ಇಂತಹ ಮಹಾನುಭಾವರು ಮತ್ತು ಶ್ರೇಷ್ಠ ಕವಿಗಳಿಗೆ ಜನ್ಮ ಕೊಟ್ಟ ನಾಡು ಎಂದು ಅವರು ಗುಣಗಾನ ಮಾಡಿದರು. ರಾಜ್ಯ ಸಂಗೀತ, ಶಿಲ್ಪಕಲೆ, ವಾಸ್ತುಶಿಲ್ಪಕ್ಕೆ ಹೆಸರು ವಾಸಿಯಾಗಿದ್ದು, ಕನ್ನಡ ಸಾಹಿತ್ಯದ ಶೈಲಿ ಭಾರತ ಮತ್ತೆಲ್ಲೂ ಕಾಣಲಾಗದು ಎಂದು ಅವರು ಹೇಳಿದರು.
ರಾಜ್ಯ ಧಾರ್ಮಿಕ, ಸಾಂಸ್ಕøತಿಕ ಜೊತೆಗೆ ಪ್ರಾಕೃತಿಕವಾಗಿಯೂ ಶ್ರೀಮಂತವಾಗಿದೆ ಎಂದು ಹೇಳಿದ ಅವರು, ರಾಜ್ಯದ ಭೌಗೋಳಿಕ ಲP್ಪ್ಷಣಗಳನ್ನು ನೋ
ಡಿದರೆ, ಕರ್ನಾಟಕ “ಒಂದು ರಾಜ್ಯ, ಹಲವು ಜಗತ್ತು” ಸೃಷ್ಠಿಸಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕೇವಲ ಒಂದು ಭೂ ಪ್ರದೇಶಕ್ಕೆ ಮಾತ್ರ ಕರ್ನಾಟಕ ಸೀಮಿತವಾಗದೆ ನಾಡಿನ ಸಂಸ್ಕøತಿ, ಜನ ಸಮುದಾಯ, ಜೀವನ ಪದ್ಧತಿ ಎಂಬ ವಿಶಾಲ ಅರ್ಥವನ್ನು ಹೊಂದಿ ಭವ್ಯ ಸಂಸ್ಕøತಿಯ ನಾಡಾಗಿದೆ ಎಂದು ಪ್ರಿಯಾಂಕ್ ಎಂ. ಖರ್ಗೆ ಹೇಳಿದರು.
ಕರ್ನಾಟಕದಲ್ಲಿ ಕನ್ನಡ ಉಳಿಸಿ ಬೆಳೆಸುವ ದೃಷ್ಟಿಯಿಂದ ಸರಕಾರವು ಖಾಸಗಿ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿಗಾಗಿ ಹಲವು ಯೋಜನೆ ಜಾರಿಗೆ ತಂದಿದ್ದು, ಖಾಸಗಿ ಕ್ಷೇತ್ರದ ಉದ್ಯೋಗದಲ್ಲಿ ಕನ್ನಡಿಗರಿಗೆ ಪ್ರಾಶಸ್ತ್ಯ ನೀಡಲು ಕ್ರಮಕೈಗೊಂಡಿದೆ ಎಂದು ಅವರು ಹೇಳಿದರು. 
ರಾಜ್ಯದಲ್ಲಿ 200 ಕೆರೆಗಳ ಸಮಗ್ರ ಅಭಿವೃದ್ಧಿಯನ್ನು ಮಾಡಲಾಗಿದೆ. ಹಾಗೆಯೇ ಯಾದಗಿರಿ ಜಿಲ್ಲೆಯಲ್ಲಿ 440 ಕೋಟಿ ರೂ.ವೆಚ್ಚದಲ್ಲಿ 35 ಕೆರೆಗಳ ಅಭಿವೃದ್ಧಿ ಪಡಿಸಲು ಇತ್ತೀಚೆಗೆ ಸಚಿವ ಸಂಪುಟ ಅಂಗೀಕಾರ ನೀಡಿದ್ದು, ಇನ್ನೆರಡು ತಿಂಗಳಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಅವರು ಘೋಷಿಸಿದರು. 
ಪ್ರವಾಸೋದ್ಯಮ ಕ್ಷೇತ್ರಗಳ ಅಭಿವೃದ್ಧಿಗಾಗಿ ಯಾದಗಿರಿ-ಕಲಬುರಗಿ-ಬೀದರ ಸೇರಿ ಡೆಕ್ಕನ್ ಸಕ್ರ್ಯೂಟ್ ಹೆರಿಟೇಜ್ ರಚಿಸಿದ್ದು, ಈಗಾಗಲೇ 50 ಕೋಟಿ ರೂ. ಮೀಸಲಿಡಲಾಗಿದೆ. ವಿಶೇಷವಾಗಿ ಶಹಾಪುರದ ಮಲಗಿರುವ ಬುದ್ಧ, ಯಾದಗಿರಿ ಐತಿಹಾಸಿಕ ಕೋಟೆ, ಪಕ್ಷಿಧಾಮ ಮುಂತಾದವುಗಳಿಗೆ ಈಗಾಗಲೇ ಅನುದಾನ ಬಿಡುಗಡೆ ಮಾಡಿ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಲಾಗಿದೆ. ಎರಡು ತಿಂಗಳಲ್ಲಿ ಟೆಂಡರ್ ಕರೆದು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು. 
ಕರ್ನಾಟಕವನ್ನು  ಸದೃಢಗೊಳಿಸಲು ರಾಜ್ಯ ಸರ್ಕಾರ ಹಲವಾರು ಯೋಜನೆಗಳು ಹಾಗೂ ನೀತಿಗಳ ಮೂಲಕ ರಾಜ್ಯದ ಜನತೆಯನ್ನು ಸಬಲೀಕರಿಸುತ್ತಿದೇವೆ. ರಾಜ್ಯ, ದೇಶವಲ್ಲದೆ,  ವಿಶ್ವಮಟ್ಟದಲ್ಲಿ ನಮ್ಮ ರಾಜ್ಯ ಆರ್ಥಿಕವಾಗಿ ಮುಂದಿರಬೇಕೆಂದು ನಮ್ಮ ಸರ್ಕಾರದ ಆಶಯ ಎಂದು ಅವರು ನುಡಿದರು.
ರಾಜ್ಯದಲ್ಲಿ ಅತಂತ್ಯ ಹಿಂದುಳಿದ ಕಡುಬಡವರಿಗೆ ಅನುಕೂಲವಾಗಲೆಂದು ಸರಕಾರ ಅನ್ನಭಾಗ್ಯ ಯೋಜನೆ ಜಾರಿಗೆ ತಂದು ಹಸಿವು ಮುಕ್ತ ಕರ್ನಾಟಕ ನಿರ್ಮಾಣ ಮಾಡಲು ಸಂಕಲ್ಪ ಹೊಂದಲಾಗಿದೆ ಎಂದರು. ರೈತರ ಹಿತದೃಷ್ಟಿಯಿಂದ ಸಹಕಾರಿ ಸಂಘದಿಂದ ಮೂರು ಲಕ್ಷದವರೆಗೂ ಬಡ್ಡಿ ರಹಿತ ಸಾಲವನ್ನು ವಿತರಿಸಲಾಗುತ್ತಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ವಿವಿಧ ಸಾಲಕ್ಕಾಗಿ 3.65 ಕೋಟಿ ರೂ.ಅನುದಾನ ನೀಡಿ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ 65 ಲಕ್ಷ ಮಕ್ಕಳಿಗೆ ಬಿಸಿಯೂಟ ಯೋಜನೆ ಲಾಭ ಹಾಗೂ 63 ಲಕ್ಷ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಿಸಲಾಗಿದೆ. ಪಶುಭಾಗ್ಯ ಯೋಜನೆಯಲ್ಲಿ 1.2 ಲಕ್ಷ ರೂ.ಅನುದಾನ ನೀಡಿ ಹೈನುಗಾರಿಕೆ ಸಾಲಕ್ಕೆ ಪ್ರೋತ್ಸಾಹ ನೀಡಿದ್ದು 9 ಲಕ್ಷ ಜನರು ಪಶುಭಾಗ್ಯ ಯೋಜನೆ ಲಾಭ ಪಡೆದಿದ್ದಾರೆ ಎಂದು ವಿವರಿಸಿದರು. 
ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಸುಭಾಶ್ಚಂದ್ರ ಕೌಲಗಿ ಅವರು ಉಪನ್ಯಾಸ ನೀಡಿ,  ಕನಕದಾಸರು, ಪುರಂದರದಾಸರು ಮುಂತಾದವರು ನಾಡು, ನುಡಿ, ಜನರ ಏಕತೆಗಾಗಿ ಸಾಹಿತ್ಯದ ಮೂಲಕ ಶ್ರಮವಹಿಸಿದ್ದಾರೆ. ಇವರ ಸಚಿದೇಶವನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಪ್ರತಿಪಾದಿಸಿದರು. ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕೇವಲ ನವೆಂಬರ್ ಕನ್ನಡಿಗರಾಗದೇ, ನಿತ್ಯ ಕನ್ನಡಿಗರಾಗಬೇಕೆಂದು ಅವರು ಕರೆ ನೀಡಿದರು.
ಇದೇ ವೇಳೆ ವಿವಿಧ ರಂಗದಲ್ಲಿ ಸೇವೆಗೈದ ಪತ್ರಕರ್ತರಾದ ಬಸವರಾಜ ಅಂಗಡಿ ಕೊಡೇಕಲ್, ರಾಜೇಶ ಪಾಟೀಲ ಯಡ್ಡಳ್ಳಿ, ಅಮೀನ್.ಆರ್.ಹೊಸೂರ, ದುರ್ಗೇಶ ಮಂಗಿಹಾಳ, ಕುಮಾರಸ್ವಾಮಿ ಕಲಾಲ್ ಹಾಗೂ ನಿಂಗನಗೌಡ ದೇಸಾಯಿ(ಸಾಹಿತ್ಯ ಹಾಗೂ ಸಂಶೋಧನಾ ಕ್ಷೇತ್ರ), ಡಾ:ಬಸವರಾಜ ಎಸ್.ಕಲೆಗಾರ(ಚಿತ್ರಕಲೆ), ಡಾ:ಭೀಮರಾಯ ಲಿಂಗೇರಿ (ಸಾಹಿತ್ಯ) ಹಾಗೂ ಚಂದ್ರಶೇಖರ ಗೋಗಿ ಲಿಂಗೇರಿ(ಸಂಗೀತ) ಇವರನ್ನು ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. 
ನಂತರ ಎಸ್.ಎಸ್.ಎಲ್.ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಆಂಗ್ಲ ಮಾಧ್ಯಮ ಹಾಗೂ ಕನ್ನಡ ಮಾಧ್ಯಮ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು.   
ವಿವಿಧ ಇಲಾಖೆಗಳಿಂದ ತಯಾರಿಸಲಾದ ಸ್ತಬ್ಧ ಚಿತ್ರಗಳನ್ನು ಮೆರವಣಿಗೆ ಮಾಡಲಾಯಿತು. ಗದಗ ಜಿಲ್ಲೆಯ ಕಾವೇರಮ್ಮ ತಂಡದ ಮಹಿಳಾ ಡೊಳ್ಳಿನ ಕಲಾ ತಂಡ, ಗದಗದ ರಾಜಶೇಖರ ಹಿರೇಮಠ ಕಲಾ ತಂಡದ ಜಗ್ಗಲಿಗೆ, ಬೀದರ ಶೋಭಾ ಓಂಕಾರ ತಂಡದ ಲಂಬಾಣಿ ನೃತ್ಯ ಸೇರಿದಂತೆ ವಿವಿಧ ಕಲೆಗಳ ಪ್ರರ್ದಶಿಸಲಾಯಿತು. 
ಗಡಿ ಪ್ರದೇಶಾಭಿವೃದ್ಧ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಗುರುಮಠಕಲ್ ಶಾಸಕರಾದ ಶ್ರೀ ಬಾಬುರಾವ ಚಿಂಚನಸೂರು, ಜಿಲ್ಲಾ ಪಂಚಾಯತನ ಅಧ್ಯಕ್ಷರಾದ ಶ್ರೀ ಬಸರೆಡ್ಡಿಗೌಡ ಮಾಲಿಪಾಟೀಲ್ ಅನಪೂರ, ಜಿಲ್ಲಾ ಪಂಚಾಯತ ಉಪಾಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಶರಣಗೌಡ ಹೊಸಮನಿ, ನಗರಸಭೆಯ ಅಧ್ಯಕ್ಷರಾದ ಕು|| ಲಲಿತಾ ಮೌಲಾಲಿ ಅನಪೂರ, ತಾಲೂಕ ಪಂಚಾಯತ ಅಧ್ಯಕ್ಷರಾದ ಶ್ರೀ ಭಾಷು ಎಸ್. ರಾಠೋಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ಸಿದ್ಧಪ್ಪ ಹೊಟ್ಟಿ, ಜಿಲ್ಲಾಧಿಕಾರಿಗಳಾದ ಶ್ರೀ ಮಂಜುನಾಥ ಜೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ|| ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ವೇದಿಕೆಯಲ್ಲಿದ್ದರು. 
ಡಾ|| ಜ್ಯೋತಿಲತಾ ತಡಿಬಿಡಿ ಮಠ ಅವರು ಕಾರ್ಯಕ್ರಮ ಸ್ವಾಗತಿಸಿ ನಿರೂಪಿಸಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ದತ್ತಪ್ಪ ಸಾಗನೂರು ವಂದಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...