ಸೋಮವಾರ, ಸೆಪ್ಟೆಂಬರ್ 23, 2019

ಮಾನ್‌ಧನ್ ಯೋಜನೆಗೆ ಹೆಸರು ನೋಂದಾಯಿಸಿ
 ಯಾದಗಿರಿ, ಸೆಪ್ಟೆಂಬರ್ ೨೩ (ಕರ್ನಾಟಕ ವಾರ್ತೆ): ಅಸಂಘಟಿತ ಕಾರ್ಮಿಕರು ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯಡಿಯಲ್ಲಿ ಹೆಸರು ನೋಂದಾಯಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಹಾತ್ಮಗಾಂಧಿ ರಾಷ್ಟಿಯ ಗ್ರಾಮೀಣ ಉದ್ಯೊಗ ಖಾತರಿ ಯೋಜನೆ (ಎಂನರೇಗಾ)ಯ ಜಿಲ್ಲಾ ಐಇಸಿ ಸಂಯೋಜಕ ಪರಶುರಾಮ ಜಿನಕೇರಾ ಅವರು ಸಲಹೆ ನೀಡಿದರು.
ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ಪ್ರಧಾನಮಂತ್ರಿ ಶ್ರಮಯೋಗಿ ಮಾನ್- ಧನ್ ಯೋಜನೆ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಎಂನರೇಗಾ ಮತ್ತಿತರ ಕಾರ್ಮಿಕರು ಈ ಯೊಜನೆ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುವ ಮೂಲಕ ಸದುಪಯೋಗ ಪಡೆದುಕೊಳ್ಳಬೇಕು. ಕಾರ್ಮಿಕ ಇಲಾಖೆಯಿಂದ ಈ ಯೋಜನೆಯಡಿ ಈಗಾಗಲೇ ಅಸಂಘಟಿತ ಕೂಲಿಕಾರರ ನೋಂದಣಿ ಆರಂಭಿಸಲಾಗಿದೆ. ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವೀಸ್ ಸೆಂಟರ್, ಗ್ರಾಮ ಪಂಚಾಯಿತಿ ಅಥವಾ ಕಾರ್ಮಿಕ ಇಲಾಖೆ ಶಾಖೆಯಲ್ಲಿ ನೋಂದಣಿ ಮಾಡಬೇಕು. ನರೇಗಾ ಕೂಲಿಕಾರ್ಮಿಕರನ್ನು ಸೇರ್ಪಡೆ ಮಾಡಿಸಿದರೆ ಪಿಂಚಣಿ ಸೌಲಭ್ಯದಿಂದ ಕುಟುಂಬಗಳು ಸುಸ್ಥಿರ ಜೀವನ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಮಿಕ ಇಲಾಖೆಯ ಎಕ್ಸಿಕ್ಯೂಟಿವ್ ಲಕ್ಷö್ಮಣ ಪೂಜಾರ ಅವರು ಮಾತನಾಡಿ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಗೆ ಒಳಪಡಬೇಕಾದರೆ ೧೮ರಿಂದ ೪೦ ವರ್ಷ ವಯೋಮಿತಿ ಇರಬೇಕು. ಮಾಸಿಕ ಆದಾಯ ೧೫ ಸಾವಿರ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಈ ಯೋಜನೆ ಅಡಿಯಲ್ಲಿ ಅಸಂಘಟಿತ ಕಾರ್ಮಿಕರಾದ ಗೃಹ, ಬೀದಿಬದಿ ವ್ಯಾಪಾರಿಗಳು, ಬೀಡಿ ಕಾರ್ಮಿಕರು, ಚಿಂದಿ ಆಯುವವರು, ಎಂನರೇಗಾ ಅಕುಶಲ ಹಾಗೂ ಮುಂತಾದ ಅಸಂಘಟಿತ ಕಾರ್ಮಿಕರು ಒಳಪಡುತ್ತಾರೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಧರ್ಮಿಬಾಯಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲ್ಲೂಕು ಐಇಸಿ ಸಂಯೋಜಕ ಮಲ್ಲಿಕಾರ್ಜುನ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಮು ಪವಾರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...