ಗುರುವಾರ, ಸೆಪ್ಟೆಂಬರ್ 26, 2019

ಇಂದು ಕಾನೂನು ಅರಿವು-ನೆರವು ಕಾರ್ಯಕ್ರಮ
ಯಾದಗಿರಿ, ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದೇವದಾಸಿ ಪುನರ್ವಸತಿ ಯೋಜನೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಂಯುಕ್ತಾಶ್ರಯದಲ್ಲಿ ದೇವದಾಸಿಯರು ಹಾಗೂ ನೊಂದ ಮಹಿಳೆಯರಿಗಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ ೯ ಗಂಟೆಗೆ ಯಾದಗಿರಿ ನಗರದ ಸಿಡಿಪಿಒ ಕಚೇರಿಯ ತಾಲ್ಲೂಕು ಸ್ತಿ ಶಕ್ತಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರಿ ಶಿವನಗೌಡ ಅವರು ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪ್ರಭಾಕರ ಅವರು ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರಿ ಪ್ರಕಾಶ ಅರ್ಜುನ ಬನಸೊಡೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ರಾಧಾ ಜೆ.ಮಣ್ಣೂರು, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ.ಗುರುರಾಜ ಹಿರೇಗೌಡ್ರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ನಾಗಯ್ಯ ಗುತ್ತೆದಾರ, ಕಾರ್ಯದರ್ಶಿ ವಿನಯಕುಮಾರ ಕುಲಕರ್ಣಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಎಸ್.ಎನ್.ಹಿರೇಮಠ, ಡ್ಯಾಪ್ಕೂ ಕಚೇರಿ ಜಿಲ್ಲಾ ಮೇಲ್ವಿಚಾರಕಿ ಆರತಿ ಎಂ.ಧನಶ್ರಿÃ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು.
ಇಂದು ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಪಾಕ್ಷಿಕ ಕಾರ್ಯಕ್ರಮ
ಯಾದಗಿರಿ, ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಆರೋಗ್ಯ ಸಂಘದ ಸಂಯುಕ್ತಾಶ್ರಯದಲ್ಲಿ ಆರೋಗ್ಯ ಮೇಳ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಪಾಕ್ಷಿಕ ಕಾರ್ಯಕ್ರಮವನ್ನು ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ ೧೦.೪೫ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶು ಸಂಗೋಪನಾ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಶಾಸಕರಾದ ನಾಗನಗೌಡ ಕಂದಕೂರ, ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ(ರಾಜುಗೌಡ), ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ವಿನೋದ ಪಾಟೀಲ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೆÃಶಪ್ಪ ಅಚೋಲ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸೆ.೩೦ರಂದು ವಿದ್ಯುತ್ ಗ್ರಾಹಕರ ಸಭೆ
ಯಾದಗಿರಿ, ಸೆಪ್ಟೆಂಬರ್ ೨೬ (ಕರ್ನಾಟಕ ವಾರ್ತೆ): ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಕಲಬುರಗಿ ವೃತ್ತದ ವ್ಯಾಪ್ತಿಗೆ ಬರುವ ಶಹಾಪುರ, ಸುರಪುರ ಮತ್ತು ಹುಣಸಗಿ ಉಪ ವಿಭಾಗಗಳಲ್ಲಿ ಜೆಸ್ಕಾಂ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ೩೦ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
ಶಹಾಪುರ ಜೆಸ್ಕಾಂ ಉಪ ವಿಭಾಗ ಕಚೇರಿ ಆವರಣದಲ್ಲಿ ಬೆಳಿಗ್ಗೆ ೧೦ರಿಂದ ೧೧.೩೦ ಗಂಟೆಯವರೆಗೆ ಸಭೆ ನಡೆಯಲಿದೆ. ಸುರಪುರದಲ್ಲಿ ಮಧ್ಯಾಹ್ನ ೧೨ರಿಂದ ೨ ಗಂಟೆಯವರೆಗೆ ಹಾಗೂ ಹುಣಸಗಿಯಲ್ಲಿ ಮಧ್ಯಾಹ್ನ ೩.೩೦ರಿಂದ ಸಂಜೆ ೫ ಗಂಟೆಯವರೆಗೆ ಸಭೆ ನಡೆಯಲಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...