ಗುರುವಾರ, ಸೆಪ್ಟೆಂಬರ್ 19, 2019

ಜಿಲ್ಲಾ ಮಟ್ಟದ ದಸರಾ ಕ್ರಿಡಾಕೂಟಕ್ಕೆ ಚಾಲನೆ
ದೈಹಿಕ, ಮಾನಸಿಕ ಸದೃಢತೆಗೆ ಕ್ರಿಡೆಗಳು ಪೂರಕ
-ರಾಜಶೇಖರಗೌಡ ಪಾಟೀಲ್ ವಜ್ಜಲ್
ಯಾದಗಿರಿ, ಸೆಪ್ಟೆಂಬರ್ ೧೯ (ಕರ್ನಾಟಕ ವಾರ್ತೆ): ಕ್ರಿಡಾ ಚಟುವಟಿಕೆಗಳು ಜೀವನದ ಬಹುಮುಖ್ಯ ಭಾಗವಾಗಿದ್ದು, ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರಿಡೆಗಳು ಪೂರಕವಾಗಿವೆ. ಆದ್ದರಿಂದ ಪ್ರತಿಯೊಬ್ಬರೂ ಕ್ರಿಡೆಗಳಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಹೇಳಿದರು.
ನಗರದ ಜಿಲ್ಲಾ ಕ್ರಿಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ೨೦೧೯-೨೦ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರಿಡಾಕೂಟಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಕ್ರಿಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯ. ಆದ್ದರಿಂದ ಕ್ರಿಡಾಪಟುಗಳಿಗೆ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯವಾಗಿರುತ್ತದೆ. ಇಂದಿನ ಸೋಲು ಮುಂದಿನ ಗೆಲುವಿಗೆ ಪೂರಕವಾಗುತ್ತದೆ. ಸೋತಾಗ ನಿರಾಶರಾಗದೆ ತೀರ್ಪುಗಾರರು ನೀಡುವ ತೀರ್ಪಿಗೆ ಬದ್ಧರಾಗಿರಬೇಕು. ಎಲ್ಲರೂ ಕ್ರಿಡೆಗಳಲ್ಲಿ ಭಾಗವಹಿಸುವ ಮೂಲಕ ಕ್ರಿಡಾ ಸ್ಫೂರ್ತಿ ಮೆರೆಯಬೇಕು ಎಂದು ಅವರು ಹೇಳಿದರು.
ಜಿಲ್ಲಾ ಮಟ್ಟದಲ್ಲಿ ವಿಜೇತರಾದ ಕ್ರಿಡಾಪಟುಗಳು ಮುಂದೆ ವಿಭಾಗಮಟ್ಟ ಹಾಗೂ ರಾಜ್ಯ ಮಟ್ಟದ ಕ್ರಿಡೆಗಳಲ್ಲಿ ಭಾಗವಹಿಸಿ ಜಿಲ್ಲೆಯ ಕೀರ್ತಿ ತರಬೇಕು ಎಂದು ಸಲಹೆ ನೀಡಿದ ಅವರು, ಜಿಲ್ಲಾ ಕ್ರಿಡಾಂಗಣದ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ ೮ ಲಕ್ಷ ರೂ. ಅನುದಾನ ನೀಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಕ್ರಿಡೆಗಳಲ್ಲಿ ಭಾಗವಹಿಸುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಪ್ರತಿಯೊಬ್ಬರಲ್ಲಿಯೂ ಪ್ರತಿಭೆ ಇರುತ್ತದೆ. ಪ್ರತಿಭೆಗಳನ್ನು ಗುರುತಿಸಲು ಇಂತಹ ಕ್ರಿಡಾಕೂಟಗಳು ವೇದಿಕೆಯನ್ನು ಕಲ್ಪಿಸುತ್ತವೆ. ಹೀಗಾಗಿ ಎಲ್ಲರೂ ಕ್ರಿಡಾ ಚಟುವಟಿಕೆಗಳಲ್ಲಿ ಭಾಗಹಿಸಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ ಅವರು ಮಾತನಾಡಿ, ಗುರಿ ಸಾಧನೆಗೆ ಕ್ರಿಡಾಪಟುಗಳಲ್ಲಿ ಸತತ ಪ್ರಯತ್ನ ಇರಬೇಕು. ಅಂದಾಗ ಏನಾದರೂ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.
ಸದಾಶಿವಪ್ಪಗೌಡ ರೊಟ್ನಡಗಿ, ನಗರಸಭೆಯ ಸದಸ್ಯರಾದ ಹಣಮಂತ ಟಿ.ನಾಯಕ, ಸುರಪುರ ತಾಲ್ಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಂಜೀವ್ ದರಬಾರಿ, ಯಾದಗಿರಿ ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಹಣಮಂತ ಹೊಸಮನಿ, ಗೌರವ ಅಧ್ಯಕ್ಷರಾದ ಶಂಕರಗೌಡ ಪಾಟೀಲ್, ಉಪನ್ಯಾಸಕರಾದ ರುದ್ರಗೌಡ ಪಾಟೀಲ್ ಅವರು ಉಪಸ್ಥಿತರಿದ್ದರು.
ಯುವ ಸಬಲೀಕರಣ ಮತ್ತು ಕ್ರಿಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚನ್ನಬಸಪ್ಪ ಕುಳಗೇರಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪವಿತ್ರಾ ಶಿರವಾಳ ಕ್ರಿÃಡಾ ಪ್ರತಿಜ್ಞಾವಿಧಿ ಬೋಧಿಸಿದರು. ಶೃತಿ ಹಾಗೂ ಸಂಗಡಿಗರು ಪ್ರಾರ್ಥನಾ ಗೀತೆ ಹಾಡಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ತುಳಜಪ್ಪ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕರಾದ ಬಸಲಿಂಗಪ್ಪ ವಂದಿಸಿದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...