ಶನಿವಾರ, ನವೆಂಬರ್ 30, 2019


ನಾಳೆ ಜಿಲ್ಲಾಧಿಕಾರಿಗಳಿಂದ ಫೋನ್ ಇನ್ ಕಾರ್ಯಕ್ರಮ
ಯಾದಗಿರಿ, ನವೆಂಬರ್ 30 (ಕರ್ನಾಟಕ ವಾರ್ತೆ): “ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ” ಯೋಜನೆಯ ಕುರಿತಂತೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಡಿಸೆಂಬರ್ 2ರಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯ ಸಾರ್ವಜನಿಕರು ಯೋಜನೆಯ ಬಗ್ಗೆ ಸಂಶಯಗಳಿದ್ದರೆ ನೇರವಾಗಿ ಮೊ:9449933946 ಸಂಖ್ಯೆಗೆ ಕರೆ ಮಾಡಿ ಮುಕ್ತವಾಗಿ ಮಾತನಾಡಿ ತಿಳಿದುಕೊಳ್ಳಬಹುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಪತ್ರಿಕೋದ್ಯಮ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ
ಯಾದಗಿರಿ, ನವೆಂಬರ್ 30 (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾದಗಿರಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಿಂದ 2019-20ನೇ ಸಾಲಿನ ವಿಶೇಷ ಘಟಕ ಉಪಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀμï ಭಾμÉಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಬೇರೆ ಯಾವುದೇ ಉದ್ಯೋಗ ಮಾಡಬಾರದು. 10 ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳಿಗೆ ಮಾಸಿಕವಾಗಿ ತಲಾ 15,000 ರೂ.ಗಳ ಶಿಷ್ಯವೇತನ ನೀಡಲಾಗುವುದು.
ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯವರಾಗಿರಬೇಕು. ಒಂದು ವೇಳೆ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ದೈಹಿಕವಾಗಿ ಸದೃಢರಾಗಿರಬೇಕು. ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಡಿಸೆಂಬರ್ 5ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ (ಮಿನಿ ವಿಧಾನಸೌಧ), “ಬಿ” ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ: ಬಿ2ಎ, ಬಿ2ಬಿ ಹಾಗೂ ಬಿ3, ಚಿತ್ತಾಪುರ ರಸ್ತೆ, ಯಾದಗಿರಿ-585202, ದೂ:08473-253722, ಇ-ಮೇಲ್: varthabhavanyadagiri@gmail.com ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕ ಬಂಧುಗಳ ನೇಮಕಕ್ಕೆ ಅರ್ಜಿ ಆಹ್ವಾನ
ಯಾದಗಿರಿ, ನವೆಂಬರ್ 30 (ಕರ್ನಾಟಕ ವಾರ್ತೆ): ಕಾರ್ಮಿಕ ಇಲಾಖೆ ಮತ್ತು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮತ್ತು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗಳ ಯೋಜನೆ ಹಾಗೂ ಕಲ್ಯಾಣ ಕಾರ್ಯಕ್ರಮಗಳನ್ನು ಒಗ್ಗೂಡಿಸಿ ಒಂದೇ ಸೂರಿನಡಿ (Umbrella Scheme) ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಎಂಬ ಯೋಜನೆಯನ್ನು ರೂಪಿಸಿದ್ದು, ಕಾರ್ಮಿಕ ಬಂಧುಗಳ ಮುಖೇನ ಇಲಾಖೆಯು ಅನುಷ್ಠಾನಗೊಳಿಸಲಿದೆ. ಈ ಕಾರ್ಮಿಕ ಬಂಧುಗಳನ್ನು ನೇಮಕ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಾರ್ಮಿಕ ಅಧಿಕಾರಿ ಶ್ರೀಹರಿ ದೇಶಪಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಮಿಕ ಬಂಧುಗಳು ನಗರ ಪ್ರದೇಶದ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಹಾಗು ಗ್ರಾಮೀಣ ಪ್ರದೇಶಗಳ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಏಕವ್ಯಕ್ತಿ ಸಂಸ್ಥೆಯಂತೆ ಸ್ವಯಂಸೇವಕರಾಗಿ ಕಮೀಷನ್ ಆಧಾರದ ಮೇಲೆ ಕಾರ್ಯನಿರ್ವಹಿಸಲಿದ್ದು, ಇವರು ಕಾರ್ಮಿಕರನ್ನು ಸಶಕ್ತರನ್ನಾಗಿ ಮಾಡಿ ಅವರ ಉನ್ನತೀಕರಣಕ್ಕಾಗಿ ಕೆಲಸ ಮಾಡಲಿದ್ದಾರೆ. ಅಸಂಘಟಿತ ಕಾರ್ಮಿಕರನ್ನು ಫಲಾನುಭವಿಗಳನ್ನಾಗಿ ನೋಂದಾಯಿಸಲು ವಿವಿಧ ಸೌಲಭ್ಯಗಳ ಕ್ಲೇಮ್ ಅರ್ಜಿಗಳನ್ನು ವಿಲೇವಾರಿ ಮಾಡಲು, ವಂತಿಗೆ ಸಂಗ್ರಹಿಸಿ ಮಂಡಳಿಗಳಿಗೆ ಪಾವತಿ ಮಾಡಲು, ಅರ್ಹ ನೋಂದಾಯಿತ ಕಾರ್ಮಿಕರು ಸ್ಮಾರ್ಟ್ ಕಾರ್ಡ್‍ನ್ನು ಪಡೆಯಲು, ಕಾರ್ಮಿಕರು ಮತ್ತು ಅಧಿಕಾರಿಗಳಿಗೆ ಸಹಕಾರ ನೀಡುವುದು ಮತ್ತು ಅಸಂಘಟಿತ ಕಾರ್ಮಿಕರಿಗೆ ಅರಿವು ಮೂಡಿಸಲು ನೆರವಾಗುವುದರ ಜೊತೆಗೆ ಅಸಂಘಟಿತ ಕಾರ್ಮಿಕರ ಸರ್ವತೋಮುಖ ಏಳಿಗೆಗೆ ಶ್ರದ್ಧೆಯಿಂದ ಶ್ರಮಿಸುವುದು, ಮುಂತಾದ ತತ್ಸಂಬಂಧ ಕೆಲಸ ಕಾರ್ಯಗಳನ್ನು ಕಾರ್ಮಿಕ ಬಂಧುಗಳು ನಿರ್ವಹಿಸಬೇಕಾಗುತ್ತದೆ.
ಅರ್ಹತೆ ಮತ್ತು ವಿದ್ಯಾರ್ಹತೆ: ಅವನು / ಅವಳು ಅಂಗೀಕೃತ ಶೈಕ್ಷಣಿಕ ಸಂಸ್ಥೆ, ಮಂಡಳಿಯಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ನಿರುದ್ಯೋಗಿ ಅಸಂಘಟಿತ ಕಾರ್ಮಿಕರನ್ನು ಸಹ ಪರಿಗಣಿಸಲಾಗುವುದು. ಕಾರ್ಮಿಕ ಬಂಧುವಾಗಿ ಆಯ್ಕೆಯಾಗುವ ಗ್ರಾಮ ಪಂಚಾಯಿತಿ ಅಥವಾ ಪಟ್ಟಣದ ವ್ಯಾಪ್ತಿಯಲ್ಲಿ ನೆಲಸಿದವರಾಗಿರಬೇಕು. ವಯೋಮಿತಿ 21ರಿಂದ 35 ವರ್ಷ ಇದ್ದು, ದ್ವಿಚಕ್ರ ವಾಹನ, ಡ್ರೈವಿಂಗ್ ಲೈಸೆನ್ಸ್ ಮತ್ತು ಸ್ಮಾರ್ಟ್ ಫೋನ್ ಹೊಂದಿರಬೇಕು ಹಾಗು ಕನಿಷ್ಠ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಕಮೀಷನ್ ಆಧಾರದ ಮೇಲೆ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲು ಸಿದ್ಧರಿರಬೇಕು.
ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪ್ರದೇಶ ವ್ಯಾಪ್ತಿಯಲ್ಲಿ ಅಂದಾಜು ಕನಿಷ್ಠ 1000 ಹಾಗೂ ನಗರ ಪ್ರದೇಶದ ಅಸಂಘಟಿತ ಕಾರ್ಮಿಕರು ಲಭ್ಯವಿರುವ ಸ್ಥಳಗಳಲ್ಲಿ ಒಬ್ಬರಂತೆ ಪ್ರತಿ 5ರಿಂದ 10 ವಾರ್ಡ್‍ಗಳಿಗೆ ತಲಾ ಒಬ್ಬರಂತೆ ಕಾರ್ಮಿಕ ಬಂಧುವನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಜಿಲ್ಲೆಯ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಿ, ನಿಗದಿತ ಅರ್ಜಿ ನಮೂನೆಯನ್ನು ಪಡೆದು, ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 6ರೊಳಗಾಗಿ ಕಾರ್ಮಿಕ ಇಲಾಖೆಗೆ ಸಲ್ಲಿಸತಕ್ಕದ್ದು ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ, ನವೆಂಬರ್ 29, 2019

ಜಿಲ್ಲೆಯಾದ್ಯಂತ ಡಿಸೆಂಬರ್ ೨ರಿಂದ ಮಾರ್ಚ್ ೧೦ರವರೆಗೆ ಅಭಿಯಾನ
ಇಂದ್ರಧನುಷ್ ಲಸಿಕೆಯಿಂದ ಯಾರೂ ವಂಚಿತವಾಗಬಾರದು
-ಸಿಇಒ ಶಿಲ್ಪಾ ಶರ್ಮಾ
ಯಾದಗಿರಿ, ನವೆಂಬರ್ ೨೯ (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಡಿಸೆಂಬರ್ ೨ರಿಂದ ೨೦೨೦ರ ಮಾರ್ಚ್ ೧೦ರವರೆಗೆ ನಡೆಯಲಿರುವ ತೀವ್ರತರದ ಮಿಷನ್ ಇಂದ್ರಧನುಷ್ ೨.೦ ಅಭಿಯಾನದಲ್ಲಿ ಲಸಿಕೆಯಿಂದ ವಂಚಿತವಾದ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ತಪ್ಪದೇ ಲಸಿಕೆ ಹಾಕಬೇಕು. ಲಸಿಕೆಯಿಂದ ಯಾರೂ ವಂಚಿತವಾಗಬಾರದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ತೀವ್ರತರದ ಮಿಷನ್ ಇಂದ್ರಧನುಷ್ ಕಾರ್ಯಕ್ರಮದ ಡಿ.ಪಿ.ಟಿ., ಟಿ.ಡಿ. ಶಾಲಾ ಲಸಿಕೆ ಅಭಿಯಾನದ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸರ್ವೇ ಮುಖಾಂತರ ಲಸಿಕೆಯಿಂದ ವಂಚಿತ ೬,೬೪೦ ಮಕ್ಕಳು ಹಾಗೂ ೩೯೩ ಗರ್ಭಿಣಿಯರನ್ನು ಗುರುತಿಸಿದ್ದು, ಅಭಿಯಾನದಲ್ಲಿ ಇವರೆಲ್ಲರಿಗೂ ಲಸಿಕೆ ನೀಡಬೇಕು. ಅಭಿಯಾನದ ಯಶಸ್ವಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಇದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಕೂಡ ಅಗತ್ಯ ಸಹಕಾರ ನೀಡಬೇಕು ಎಂದು ಅವರು ನಿರ್ದೇಶಿಸಿದರು.
ಅಭಿಯಾನದ ಕುರಿತಂತೆ ಜಿಲ್ಲೆಯ ಪ್ರತಿ ಶಾಲೆಯಿಂದ ಮಕ್ಕಳ ಮೂಲಕ ಜಾಗೃತಿ ಜಾಥಾ ನಡೆಸಬೇಕು. ಇದಕ್ಕಾಗಿ ಶಾಲೆಗಳ ವಿಜ್ಞಾನ ಶಿಕ್ಷಕರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಕ ಮಾಡಬೇಕು. ವಿಜ್ಞಾನ ಶಿಕ್ಷಕರು ಇಲ್ಲವಾದಲ್ಲಿ ಕ್ರಿಯಾಶೀಲ ಶಿಕ್ಷಕರನ್ನು ನೇಮಿಸಬೇಕು. ಯಾವುದೇ ಮಗು ಲಸಿಕೆಯಿಂದ ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳಲು ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಂದ ಸುತ್ತೋಲೆ ಹೊರಡಿಸುವಂತೆ ಅವರು ತಿಳಿಸಿದರು.
ಸಮುದಾಯಗಳ ಸಹಭಾಗಿತ್ವ ಇರಲಿ: ತೀವ್ರತರದ ಮಿಷನ್ ಇಂದ್ರಧನುಷ್ ನಿರಂತರ ಲಸಿಕಾ ಕಾರ್ಯಕ್ರಮ ಯಶಸ್ವಿಗೆ ಸಮುದಾಯಗಳ ಸಹಭಾಗಿತ್ವ ತುಂಬಾ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಮಂದಿರ, ಮಸೀದಿ ಹಾಗೂ ಚರ್ಚ್ಗಳಲ್ಲಿ ಸಮುದಾಯದ ಮುಖ್ಯಸ್ಥರು ಅಥವಾ ಮುಖಂಡರು ತಪ್ಪದೇ ಲಸಿಕೆ ಪಡೆಯುವಂತೆ ಸಾರ್ವಜನಿಕರಿಗೆ ಕರೆ ನೀಡಬೇಕು ಎಂದು ಸಿಇಒ ಶಿಲ್ಪಾ ಶರ್ಮಾ ಅವರು ಸಭೆಯಲ್ಲಿ ಹಾಜರಿದ್ದ ವಿವಿಧ ಸಮುದಾಯಗಳ ಮುಖಂಡರನ್ನು ಮನವಿ ಮಾಡಿದರು.
ಆಯುಷ್ಮಾನ್ ಕಾರ್ಡ್ ಪಡೆಯಿರಿ: ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು ವರ್ಷದಲ್ಲಿ ೫ ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಎಪಿಎಲ್ ಪಡಿತರ ಚೀಟಿ ಹೊಂದಿರುವ ಮತ್ತು ಹೊಂದಿರದ ಕುಟುಂಬಗಳು ೧.೫೦ ಲಕ್ಷ ರೂ.ವರೆಗೂ ಸಹಪಾವತಿ (ಶೆ.೭೦ರಷ್ಟು ಫಲಾನುಭವಿ ಭರಿಸತಕ್ಕದ್ದು, ಶೆ.೩೦ರಷ್ಟು ಸರ್ಕಾರ ಭರಿಸುತ್ತದೆ)ಯೊಂದಿಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಪ್ರತಿಯೊಬ್ಬರು ನೋಂದಾಯಿಸಿ ಯೋಜನೆಯ ಲಾಭ ಪಡೆಯುವಂತೆ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಕಲಬುರಗಿಯ ವಿಭಾಗಮಟ್ಟದ ವೈದ್ಯಕೀಯ ಸರ್ವೇಕ್ಷಣಾಧಿಕಾರಿ (ವಿಶ್ವ ಆರೋಗ್ಯ ಸಂಸ್ಥೆ) ಡಾ.ಅನಿಲ್‌ಕುಮಾರ್ ಎಸ್.ತಾಳಿಕೋಟಿ ಅವರು ಮಾತನಾಡಿ, ತೀವ್ರತರದ ಮಿಷನ್ ಇಂದ್ರಧನುಷ್ ಲಸಿಕಾ ಕಾರ್ಯಕ್ರಮ ನಾಲ್ಕು ಸುತ್ತುಗಳಲ್ಲಿ ನಡೆಯಲಿದ್ದು, ಮೊದಲನೇ ಸುತ್ತು ಡಿಸೆಂಬರ್ ೨ರಿಂದ ೧೦ರವರೆಗೆ, ಎರಡನೇ ಸುತ್ತು ಜನವರಿ ೩ರಿಂದ ೧೧ರವರೆಗೆ, ಮೂರನೇ ಸುತ್ತು ಫೆಬ್ರುವರಿ ೩ರಿಂದ ೧೧ರವರೆಗೆ ಹಾಗೂ ನಾಲ್ಕನೇ ಸುತ್ತು ಮಾರ್ಚ್ ೨ರಿಂದ ೧೦ರವರೆಗೆ ನಡೆಯಲಿದೆ ಎಂದು ಹೇಳಿದರು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿಗಳಾದ ಡಾ.ಲಕ್ಷಿö್ಮÃಕಾಂತ ಅವರು ಮಾತನಾಡಿ, ಧನುರ್ವಾಯು, ನಾಯಿಕೆಮ್ಮು ಮತ್ತು ಗಂಟಲುಮಾರಿ ರೋಗಗಳನ್ನು ತಡೆಗಟ್ಟಲು ೫-೬ ವರ್ಷದೊಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಚುಚ್ಚುಮದ್ದು ನೀಡಲಾಗುವುದು. ಧನುರ್ವಾಯು ಮತ್ತು ಗಂಟಲುಮಾರಿ ರೋಗಗಳನ್ನು ತಡೆಗಟ್ಟಲು ೭-೧೬ ವರ್ಷದೊಳಗಿನ ಮಕ್ಕಳಿಗೆ ಎಲ್ಲಾ ಶಾಲೆಗಳಲ್ಲಿ ಚುಚ್ಚುಮದ್ದು ನೀಡಲಾಗುವುದು. ಜಿಲ್ಲೆಯಲ್ಲಿ ೧೯ ಗಂಟಲುಮಾರಿ ಪ್ರಕರಣಗಳಿದ್ದು, ಈ ರೋಗ ತ್ವರಿತವಾಗಿ ಹರಡುವುದರಿಂದ ಪ್ರತಿಯೊಬ್ಬ ಪೋಷಕರು ಮಕ್ಕಳಿಗೆ ತಪ್ಪದೇ ಲಸಿಕೆ ಕೊಡಿಸಬೇಕು ಎಂದು ಕೋರಿದರು.
ಡಿ.೧೦ರ ವರೆಗೆ ಕುಷ್ಠರೋಗ ಪತ್ತೆ:
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ಜಿಲ್ಲೆಯಾದ್ಯಂತ ಕುಷ್ಠರೋಗ ಪತ್ತೆ ಹಚ್ಚುವ ಹಾಗೂ ಚಿಕಿತ್ಸೆ ಆಂದೋಲನವು ನವೆಂಬರ್ ೨೫ರಿಂದ ಆರಂಭವಾಗಿದ್ದು, ಡಿಸೆಂಬರ್ ೧೦ರ ವರೆಗೆ ನಡೆಯಲಿದೆ. ಈ ಆಂದೋಲನದಲ್ಲಿ ಆಶಾ ಕಾರ್ಯಕರ್ತೆ ಮತ್ತು ಪುರುಷ ವಾಲೆಂಟೀರ್ ಮನೆಮನೆಗೆ ಭೇಟಿ ನೀಡಲಿದ್ದು, ಸಾರ್ವಜನಿಕರು ರೋಗ ಪತ್ತೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಸಭೆಯಲ್ಲಿ ಮನವಿ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಎಸ್.ಪಾಟೀಲ್, ಡಾ.ಮಿಸ್ಬಾ, ಭಾರತೀಯ ವೈದ್ಯಕೀಯ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ.ಪಿ.ವಿಜಯಕುಮಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಡಿ.೩ರಂದು ಎಸ್‌ಪಿ ಅವರಿಂದ ಫೋನ್ ಇನ್ ಕಾರ್ಯಕ್ರಮ
ಯಾದಗಿರಿ, ನವೆಂಬರ್ ೨೯ (ಕರ್ನಾಟಕ ವಾರ್ತೆ): ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಷ್ ಭಗವಾನ್ ಸೋನವಣೆ ಅವರಿಂದ ಫೋನ್ ಇನ್ ಕಾರ್ಯಕ್ರಮವನ್ನು ಡಿಸೆಂಬರ್ ೩ರಂದು ಮಂಗಳವಾರ ಬೆಳಿಗ್ಗೆ ೧೧ರಿಂದ ೧೨ ಗಂಟೆಯವರೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ಸಾರ್ವಜನಿಕರು, ಫಿರ್ಯಾದಿ ಹಾಗೂ ನೊಂದವರು ಪೊಲೀಸ್ ಇಲಾಖೆಗೆ ಸಂಬAಧಿಸಿದAತಹ ಸಮಸ್ಯೆಗಳು ಯಾವುದಾದರೂ ಇದ್ದಲ್ಲಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸಂಚಾರ ವ್ಯವಸ್ಥೆ ಇನ್ನಿತರೆ ಸುಧಾರಣೆಗಳ ಬಗ್ಗೆ ಸಲಹೆಗಳು ಇದ್ದಲ್ಲಿ ನೇರವಾಗಿ ಮೊ.ನಂ.೯೪೮೦೮೦೩೬೦೦ ಹಾಗೂ ದೂ:೦೮೪೭೩-೨೫೩೭೩೬ ಸಂಖ್ಯೆಗಳಿಗೆ ಕರೆ ಮಾಡಬಹುದು. ತಮ್ಮ ಸಲಹೆ, ಸಮಸ್ಯೆ, ದೂರುಗಳನ್ನು ಹೇಳಿದಲ್ಲಿ ಅವುಗಳನ್ನು ತಕ್ಷಣವಾಗಿ ಪರಿಹಾರ, ಕ್ರಮ ಕಂಡುಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಡಿ.೨ರಿಂದ ಗ್ರಾಮ ಪಂಚಾಯಿತಿಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಣೆ
ಯಾದಗಿರಿ, ನವೆಂಬರ್ ೨೯ (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ ಯೋಜನೆಯ ಕಾರ್ಡ್ಗಳನ್ನು ಡಿಸೆಂಬರ್ ೨ರಿಂದ ನಿಗದಿತ ದಿನಾಂಕಗಳAದು ಬೆಳಿಗ್ಗೆ ೮ ಗಂಟೆಯಿAದ ಸಂಜೆಯವರೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ವಿತರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದ್ದಾರೆ.
ಡಿಸೆಂಬರ್ ೨ರಂದು ಯಾದಗಿರಿ ತಾಲ್ಲೂಕಿನ ಮುದ್ನಾಳ, ಡಿ.೩ರಂದು ಬಂದಳ್ಳಿ, ಡಿ.೪ರಂದು ಹೊನಗೇರಾ, ಡಿ.೫ರಂದು ಹತ್ತಿಕುಣಿ, ಡಿ.೬ರಂದು ಠಾಣಗುಂದಿ, ಡಿ.೭ರಂದು ಅರಕೇರಾ- ಬಿ., ಡಿ.೯ರಂದು ಯರಗೋಳ, ಡಿ.೧೦ರಂದು ಅಲ್ಲಿಪೂರ, ಡಿ.೧೧ರಂದು ಮುಂಡರಗಿ, ಡಿ.೧೨ರಂದು ರಾಮಸಮುದ್ರ, ಡಿ.೧೩ರಂದು ಅರಕೇರಾ-ಕೆ, ಡಿ.೧೬ರಂದು ಯಂಪಾಡ, ಡಿ.೧೭ರಂದು ಪಸ್‌ಪುಲ್, ಡಿ.೧೮ರಂದು ಕಂದಕೂರ, ಡಿ.೧೯ರಂದು ಅನಪೂರ, ಡಿ.೨೦ರಂದು ಮಿನಾಸಪುರ, ಡಿ.೨೧ರಂದು ವರ್ಕನಳ್ಳಿ, ಡಿ.೨೩ರಂದು  ಹಳಿಗೇರಾ, ಡಿ.೨೪ರಂದು ಕಿಲ್ಲನಕೇರಾ, ಡಿ.೨೬ರಂದು ಬಳಿಚಕ್ರ, ಡಿ.೨೭ರಂದು ಕಡೇಚೂರ, ಡಿ.೩೦ರಂದು ಮಾದ್ವಾರ, ಡಿ.೩೧ರಂದು ಅಜಲಾಪುರ, ಜನವರಿ ೧ರಂದು ಜೈಗ್ರಾಮ, ಜ.೨ರಂದು ಯಲ್ಹೇರಿ, ಜ.೩ರಂದು ಕೌಳೂರು, ಜ.೪ರಂದು ಮಲ್ಹಾರ, ಜ.೬ರಂದು ಸೈದಾಪುರ, ಜ.೭ರಂದು ಬೆಳಗುಂದಿ, ಜ.೮ರಂದು ಬಾಡಿಯಾಳ, ಜ.೯ರಂದು ಕಾಕಲವಾರ, ಜ.೧೦ರಂದು ಚಪೆಟ್ಲಾ, ಜ.೧೩ರಂದು ಗಾಜರಕೋಟ, ಜ.೧೬ರಂದು ಮೊಟ್ನಳ್ಳಿ, ಜ.೧೭ರಂದು ಕಾಳಬೆಳಗುಂದಿ, ಜ.೧೮ರಂದು ಯಲಸತ್ತಿ, ಜ.೨೦ರಂದು ಕೊಂಕಲ್, ಜ.೨೧ರಂದು ಚಿನ್ನಾಕರ, ಜ.೨೨ರಂದು ಚಂಡರಕಿ, ಜ.೨೩ರಂದು ಪುಟಪಾಕ.
ಶಹಾಪುರ ತಾಲ್ಲೂಕು: ಡಿ.೨ರಂದು ಗುಲಸರಂ, ಡಿ.೩ರಂದು ನಾಯ್ಕಲ್, ಡಿ.ರಂದು ಖಾನಾಪೂರ, ಡಿ.೫ರಂದು ತಡಬಿಡಿ, ಡಿ.೬ರಂದು ದೋರನಳ್ಳಿ, ಡಿ.೭ರಂದು ತುಮಕೂರ, ಡಿ.೯ರಂದು ಐಕೂರ್, ಡಿ.೧೦ರಂದು ಹಯ್ಯಾಳ-ಬಿ, ಡಿ.೧೧ರಂದು ಬಿರನೂರ, ಡಿ.೧೨ರಂದು ಕೊಂಕಲ್, ಡಿ.೧೩ರಂದು ಬೆಂಡೆಬೆAಬಳಿ, ಡಿ.೧೬ರಂದು ಗೋನಾಲ್, ಡಿ.೧೭ರಂದು ಬಿಳ್ಹಾರ, ಡಿ.೧೮ರಂದು ವಡಗೇರಾ, ಡಿ.೧೯ರಂದು ಹಾಲಗೇರಾ, ಡಿ.೨೦ರಂದು ಕುರಕುಂದಾ, ಡಿ.೨೧ರಂದು ಉಳ್ಳೆಸೂಗೂರು, ಡಿ.೨೩ರಂದು ಕಾಡಂಗೇರಾ-ಬಿ, ಡಿ.೨೪ರಂದು ಟಿ.ವಡಗೇರಾ, ಡಿ.೨೬ರಂದು ಗುಂಡಗುರ್ತಿ, ಡಿ.೨೭ರಂದು ಗೋಗಿ-ಕೆ, ಡಿ.೩೦ರಂದು ಗೋಗಿಪೇಠ, ಡಿ.೩೧ರಂದು ಉಕ್ಕಿನಾಳ, ಜನವರಿ ೧ರಂದು ಚಾಮನಾಳ, ಜ.೨ರಂದು ಶಿರವಾಳ, ಜ.೩ರಂದು ಅಣಬಿ, ಜ.೪ರಂದು ಚಟ್ನಳ್ಳಿ, ಜ.೬ರಂದು ಉರಸುಗುಂಡಗಿ, ಜ.೭ರಂದು ಇಬ್ರಾಹಿಂಪುರ, ಜ.೮ರಂದು ಹೊಸಕೇರಾ, ಜ.೯ರಂದು ವನದುರ್ಗ, ಜ.೧೦ರಂದು ಕಕ್ಕಸಗೇರಾ, ಜ.೧೩ರಂದು ನಾಗನಟಗಿ, ಜ.೧೬ರಂದು ಕನ್ಯಾಕೋಳೂರು, ಜ.೧೭ರಂದು ರಸ್ತಾಪುರ, ಜ.೧೮ರಂದು ಹತ್ತಿಗುಡೂರು, ಜ.೨೦ರಂದು ಎಂ.ಕೊಳ್ಳೂರು, ಜ.೨೧ರಂದು ಸಗರ, ಜ.೨೨ರಂದು ಮದ್ದರಕಿ, ಜ.೨೩ರಂದು ಹೋತಪೇಠ, ಜ.೨೪ರಂದು ಮುಡಬೂಳ.
ಸುರಪುರ ತಾಲ್ಲೂಕು: ಡಿ.೨ರಂದು ಅಗ್ನಿ, ಡಿ.೩ರಂದು ಮುದ್ನೂರು-ಕೆ, ಡಿ.೪ರಂದು ಅರಕೇರಾ-ಜೆ, ಡಿ.೫ರಂದು ಕೋಳಿಹಾಳ, ಡಿ.೬ರಂದು ಅಲ್ದಾಳ, ಡಿ.೭ರಂದು ದೇವಾಪುರ, ಡಿ.೯ರಂದು ತಿಂಥಣಿ, ಡಿ.೧೦ರಂದು ಅರಕೇರಾ-ಕೆ, ಡಿ.೧೧ರಂದು ಹೆಮನೂರ, ಡಿ.೧೨ರಂದು ಸುಗೂರು, ಡಿ.೧೩ರಂದು ಖಾನಾಪುರ-ಎಸ್.ಎಚ್., ಡಿ.೧೬ರಂದು ದೇವಿಕೇರಾ, ಡಿ.೧೭ರಂದು ಬಾದ್ಯಾಪುರ, ಡಿ.೧೮ರಂದು ದೇವರಗೋನಾಲ, ಡಿ.೧೯ರಂದು ಹೆಗ್ಗಣದೊಡ್ಡಿ, ಡಿ.೨೦ರಂದು ನಗನೂರ, ಡಿ.೨೧ರಂದು ಮಾಲಗತ್ತಿ, ಡಿ.೨೩ರಂದು ಕರಡಕಲ್, ಡಿ.೨೪ರಂದು ಕಿರದಳ್ಳಿ, ಡಿ.೨೬ರಂದು ವಾಗಣಗೇರಾ, ಡಿ.೨೭ರಂದು ಪೇಠಅಮ್ಮಾಪುರ, ಡಿ.೩೦ರಂದು ಕಚಕನೂರ, ಡಿ.೩೧ರಂದು ಬೈಚಬಾಳ, ಜನವರಿ ೧ರಂದು ದೇವತ್ಕಲ್, ಜ.೨ರಂದು ಹೆಬ್ಬಾಳ-ಬಿ, ಜ.೩ರಂದು ವಜ್ಜಲ್, ಜ.೪ರಂದು ಹುಣಸಗಿ, ಜ.೬ರಂದು ಮಾಳನೂರ, ಜ.೭ರಂದು ಬೈಲಕುಂಟಿ, ಜ.೮ರಂದು ಬರದೇವನಹಾಳ, ಜ.೯ರಂದು ಜೋಗುಂಡಬಾವಿ, ಜ.೧೦ರಂದು ಕಾಮನಟಗಿ, ಜ.೧೩ರಂದು ಕೊಡೇಕಲ್, ಜ.೧೬ರಂದು ಮಾರನಾಳ, ಜ.೧೭ರಂದು ನಾರಾಯಣಪುರ, ಜ.೧೮ರಂದು ರಾಜನಕೂಳ್ಳೂರ, ಜ.೨೦ರಂದು ಮಲ್ಲಾ-ಬಿ, ಜ.೨೧ರಂದು ಯಕ್ತಾಪುರ, ಜ.೨೨ರಂದು ಯಾಳಗಿ, ಜ.೨೩ರಂದು ಏವೂರ್, ಜ.೨೪ರಂದು ಗೆದ್ದಲಮರಿ, ಜ.೨೬ರಂದು ಹಗರಟಗಿ.
ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಬಿಪಿಎಲ್ ಕುಟುಂಬಗಳಿಗೆ ಒಂದು ವರ್ಷಕ್ಕೆ ೫ ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ. ಎಪಿಎಲ್ ಕುಟುಂಬಗಳಿಗೆ ಸರ್ಕಾರಿ ಪ್ಯಾಕೇಜ್ ದರದ ಶೇ.೩೦ರಷ್ಟು ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ೧.೫೦ ಲಕ್ಷ ರೂಪಾಯಿ ಇರುತ್ತದೆ. ಈ ಯೋಜನೆಯಲ್ಲಿ ೧೬೫೦ ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸೆ ಲಭ್ಯವಿದೆ. ಸಾರ್ವಜನಿಕರು ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಹಾಜರುಪಡಿಸಿ ಈ ಯೋಜನೆಯಡಿ ನೋಂದಾಯಿಸಿ ಲಾಭ ಪಡೆಯಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕರು ಹತ್ತಿರದÀ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಕಾರ್ಡ್ನ್ನು ಪಡೆಯಬಹುದು. ಈ ಕಾರ್ಡ್ನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆ, ಶಹಾಪೂರ ಮತ್ತು ಸುರಪೂರ ತಾಲ್ಲೂಕು ಆಸ್ಪತ್ರೆಗಳು ಹಾಗೂ ವಡಿಗೇರಾ, ಸೈದಾಪೂರ, ಗುರುಮಠಕಲ್, ಅರಕೇರಾ ಬಿ., ಹುಣಸಗಿ, ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಯಾದಗಿರಿ, ಶಹಾಪೂರ, ಸುರಪೂರ ನಗರ ಆರೋಗ್ಯ ಕೇಂದ್ರಗಳಲ್ಲಿ ೧೦ ರೂಪಾಯಿ ಶುಲ್ಕ ನೀಡಿ ಪಡೆಯಬಹುದು. ಅಲ್ಲದೆ, ನಿಮ್ಮ ಹತ್ತಿರದಲ್ಲಿರುವ ಸೇವಾಸಿಂಧು ಕೇಂದ್ರಗಳಲ್ಲಿ ಕಾಗದದ ಕಾರ್ಡ್ಗೆ ೧೦ ರೂಪಾಯಿ ಹಾಗೂ ಪ್ಲಾಸ್ಟಿಕ್ ಕಾರ್ಡ್ಗೆ ೩೫ ರೂಪಾಯಿ ನೀಡಿ ಪಡೆದುಕೊಳ್ಳಬಹುದು. ಯಾದಗಿರಿ ತಹಸೀಲ್ ಕಚೇರಿ ಆವರಣದಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಕೂಡ ಆರೋಗ್ಯ ಕಾರ್ಡ್ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.
ಡಿ.೧೦ರಂದು ವಿಭಾಗಮಟ್ಟದ ಸಮಾಲೋಚನೆ ಸಭೆ
ಯಾದಗಿರಿ, ನವೆಂಬರ್ ೨೯ (ಕರ್ನಾಟಕ ವಾರ್ತೆ): ಕರ್ನಾಟಕ ಸರ್ಕಾರವು ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ್ ಅವರ ಆಯೋಗದ ವತಿಯಿಂದ ಕಲಬುರಗಿ ವಿಭಾಗ ಮಟ್ಟದ ಸಮಾಲೋಚನಾ ಸಭೆಯನ್ನು ಡಿಸೆಂಬರ್ ೧೦ರಂದು ಬೆಳಿಗ್ಗೆ ೧೧ ಗಂಟೆಗೆ ಕಲಬುರಗಿಯ ರಂಗಮAದಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆಗೆ ಅನುಗುಣವಾಗಿ ಶಿಕ್ಷಣ ಮತ್ತು ಸರ್ಕಾರಿ, ಸಾರ್ವಜನಿಕ ಉದ್ಯೋಗಗಳಿಗೆ ಈಗಿರುವ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಕುರಿತು ಸಾರ್ವಜನಿಕರಿಂದ ಹಾಗೂ ಸಂಬAಧಿಸಿದ ಸಮುದಾಯ, ಸಂಘ- ಸಂಸ್ಥೆಗಳು, ವಿದ್ವಾಂಸರು, ಸಾಮಾಜಿಕ ಕಾರ್ಯಕರ್ತರಿಂದ ಮನವಿ ಅಥವಾ ಅಹವಾಲುಗಳನ್ನು ಸ್ವೀಕರಿಸಲು ಸಭೆಯನ್ನು ಏರ್ಪಡಿಸಲಾಗಿದೆ. ಆಸಕ್ತಿ ಇರುವ ಯಾರಾದರೂ ಆಯೋಗಕ್ಕೆ ಮನವಿ, ಅಹವಾಲು, ವರದಿ, ಬೇಡಿಕೆಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದು. ಮನವಿಗಳು ಆಯೋಗದ ವಿಷಯಕ್ಕೆ ಸಂಬAಧಿಸಿರಬೇಕು ಮತ್ತು ಸಂಕ್ಷಿಪ್ತವಾಗಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ
ಯಾದಗಿರಿ, ನವೆಂಬರ್ ೨೯ (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಸಮಗ್ರ ಮಕ್ಕಳ ರಕ್ಷಣಾ ಯೋಜನೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನದಲ್ಲಿ ಬರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಯಾದಗಿರಿ ಕಚೇರಿಯಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಗೆ ಗುತ್ತಿಗೆ/ಸಂಚಿತ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಪತ್ರಾಂತಿಕ ಅಧಿಕಾರಿಗಳಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದವರು ಅರ್ಜಿ ಸಲ್ಲಿಸಬಹುದು. ಮಾಸಿಕ ವೇತನ ೩೨,೮೦೦ ರೂ. ಒಂದು ವರ್ಷದ ಅವಧಿಗೆ ಅಥವಾ ಸರ್ಕಾರದಿಂದ ಅಥವಾ ಇಲಾಖೆಯಿಂದ ಸದರಿ ಹುದ್ದೆಗಳಿಗೆ ನಿಯಮಾನುಸಾರ ಭರ್ತಿ ಮಾಡುವವರೆಗೂ ಇದರಲ್ಲಿ ಯಾವುದು ಮೊದಲೋ ಅದರಂತೆ. ಸಂಚಿತ ವೇತನ ಹೊರತುಪಡಿಸಿ ಯಾವುದೇ ಭತ್ಯೆಗಳಿಗೆ ಅರ್ಹರಿರುವುದಿಲ್ಲ. ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಅರ್ಜಿ ಪಡೆದು ಡಿಸೆಂಬರ್ ೧೦ರಂದು ಮಧ್ಯಾಹ್ನ ೩ ಗಂಟೆÀವರೆಗೆ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಬ್ಲಾಕ್ ಸಂಖ್ಯೆ:ಸಿ-೧೭, ಒಂದನೇ ಮಹಡಿ, ಜಿಲ್ಲಾಡಳಿತ ಭವನ ಸಂಕೀರ್ಣ, ಯಾದಗಿರಿ ಇಲ್ಲಿಗೆ ಸಲ್ಲಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗುರುವಾರ, ನವೆಂಬರ್ 28, 2019

ದಾಳಿಂಬೆ ಬೆಳೆ ಒಂದು ದಿನದ ವಿಚಾರ ಸಂಕಿರಣ
ಉತ್ಕೃಷ್ಟ ದಾಳಿಂಬೆ ಉತ್ಪಾದನೆಗೆ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳಿ
-: ಡಾ.ಜೋತ್ಸನಾ ಶರ್ಮಾ
ಯಾದಗಿರಿ, ನವೆಂಬರ್ ೨೮ (ಕರ್ನಾಟಕ ವಾರ್ತೆ): ದಾಳಿಂಬೆ ಬೆಳೆಯಲ್ಲಿ ಮಣ್ಣು ಮತ್ತು ನೀರಿನ ನಿರ್ವಹಣೆ ಮಹತ್ವವಾಗಿದ್ದು, ಅದರ ಸಮಗ್ರ ಬೇಸಾಯಕ್ಕೆ ಸೂಕ್ತವಾದ ವಾತವರಣ ಯಾದಗಿರಿ ಜಿಲ್ಲೆಯಲ್ಲಿದೆ. ರೈತರು ಉತ್ಕೃಷ್ಟವಾದ ದಾಳಿಂಬೆ ಉತ್ಪಾದನೆಗೆ ವೈಜ್ಞಾನಿಕ ಪದ್ಧತಿ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಸೊಲ್ಲಾಪುರದ ರಾಷ್ಟಿಯ ದಾಳಿಂಬೆ ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ.ಜೋತ್ಸನಾ ಶರ್ಮಾ ಅವರು ಹೇಳಿದರು.
ಜಿಲ್ಲೆಯ ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಅದಾಮ ಇಂಡಿಯಾ ಪ್ರೆöÊವೆಟ್ ಲಿಮಿಟೆಡ್ ಸಂಸ್ಥೆಯ ಸಹೋಗದಲ್ಲಿ ಬುಧವಾರ ರಾಷ್ಟಮಟ್ಟದ ವಿಜ್ಞಾನಿಗಳಿಂದ ದಾಳಿಂಬೆ ಬೆಳೆ ಕುರಿತು ಹಮ್ಮಿಕೊಂಡಿದ್ದ ಒಂದು ದಿನದ ವಿಚಾರ ಸಂಕಿರಣವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ದಾಳಿಂಬೆ ಬೆಳೆಯ ವಿವಿಧ ತಳಿಗಳ ಬಗ್ಗೆ ವಿವರಣೆ ನೀಡಿದ ಅವರು, ಹೊಸದಾಗಿ ಬಿಡುಗಡೆಗೊಳ್ಳುತ್ತಿರುವ ರೊಗ ನಿರೋಧಕ ತಳಿಗಳ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. 
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರಾದ ಡಾ.ಬಿ.ಎಮ್. ಚಿತ್ತಾಪೂರ ಅವರು ಮಾತನಾಡಿ, ದಾಳಿಂಬೆ ಬೆಳೆಯಲ್ಲಿ ಸರಿಯಾದ ಸಮಯಕ್ಕೆ ಚಾಟನಿ ಮಾಡುತ್ತಾ ಅದಕ್ಕೆ ಸರಿಯಾದ ಆಕಾರ ನೀಡಿ ನಿರ್ವಹಣೆ ಮಾಡುವುದು ಹಾಗೂ ತೋಟದ ಸುತ್ತಮುತ್ತ ಜೈವಿಕ ತಡೆಗಳನ್ನು ನಿರ್ಮಾಣ ಮಾಡಿ ಬೆಳೆಯನ್ನು ಸಂರಕ್ಷಣೆ ಮಾಡಲು ತಿಳಿಸಿದರು.
ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಹಾಗೂ ದಾಳಿಂಬೆ ತಜ್ಞರಾದ ಡಾ.ವಿ.ಐ. ಬೆಣಗಿ ಅವರು ಮಾತನಾಡಿ, ದಾಳಿಂಬೆ ಬೆಳೆಯಲ್ಲಿ ಮೊದಲು ಎರಡು ವರ್ಷಗಳವರೆಗೆ ಯಾವುದೇ ತರಹದ ಹಣ್ಣುಗಳನ್ನು ಪಡೆಯಬಾರದು. ರೋಗ ಮತ್ತು ಕೀಟಗಳ ಹಾವಳಿಯನ್ನು ತಡೆಯಲು ಸಕಾಲಕ್ಕೆ ಜೈವಿಕ ಮತ್ತು ರಸಾಯನಿಕ ಕ್ರಮಗಳನ್ನು ಹಾಗೂ ಖರ್ಚು ಕಡಿಮೆ ಮಾಡುವಂತಹ ಪದ್ಧತಿಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕೀಟ ಶಾಸ್ತçಜ್ಞರಾದ ಡಾ.ಅರುಣಕುಮಾರ ಹೊಸಮನಿ ಅವರು ಮಾತನಾಡಿ, ದಾಳಿಂಬೆ ಬೆಳೆಯಲ್ಲಿ ರೋಗಗಳ ಮತ್ತು ಕೀಟಗಳ ನಿರ್ವಹಣೆಗೆ ಜೈವಿಕ ಕೀಟನಾಶಕಗಳ ಬಳಕೆ ಮತ್ತು ಅವುಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಬಳಕೆ ಮಾಡಲು ಸಾಧ್ಯವಿರುವುದರಿಂದ ರೈತರು ಕೃಷಿ ವಿಜ್ಞಾನ ಕೇಂದ್ರದಿAದ ಮಾಹಿತಿ ಪಡೆದು ಬಳಸಲು ತಿಳಿಸಿದರು.
ರಾಯಚೂರು ಕೃಷಿ ವಿ.ವಿ.ಯ ಸಹ ಸಂಶೋಧನಾ ನಿರ್ದೇಶಕರಾದ ಡಾ.ಜೆ.ಆರ್.ಪಾಟೀಲ್ ಅವರು ಮಾತನಾಡಿ, ದಾಳಿಂಬೆ ಬೆಳೆಯಲ್ಲಿ ಸಸ್ಯ ಪ್ರಚೋದಕಗಳ ಸರಿಯಾದ ಬಳಕೆ ಕುರಿತು ಮಾಹಿತಿ ನೀಡಿದರು. ರೈತರು ಗುಂಪುಗಳನ್ನು ರಚನೆ ಮಾಡಿಕೊಂಡು ದಾಳಿಂಬೆ ಮಾರಾಟ ಮಾಡುವುದರಿಂದ ಹೆಚ್ಚಿನ ಲಾಭ ಪಡೆಯಬಹದು ಎಂದು ತಿಳಿಸಿದರು.
ಕಾಡಾ ಭೀಮರಾಯನಗುಡಿ ಜಂಟಿ ನಿರ್ದೇಶಕರಾದ ಡಾ.ಜಿಯಾವುಲ್ಲಾ ಅವರು ರೈತರಿಗೆ ಅಚ್ಚುಕಟ್ಟು ಪ್ರದೇಶದಲ್ಲಿ ಪರ್ಯಾಯ ಹಣ್ಣು ಬೆಳೆಗಳ ಬೇಸಾಯಕ್ಕೆ ಕರೆ ನೀಡಿದರು. ಅದಮಾ ಇಂಡಿಯಾ ಪ್ರೆöÊ.ಲೀ. ಸಂಸ್ಥೆಯ ಅಧಿಕಾರಿಗಳಾದ ಡಾ.ಮಂಜುನಾಥ ಹಾಗೂ ಡಾ. ಅನೀಲ ಭಂಡಾರೆ ಅವರು ಮಾತನಾಡಿ, ದಾಳಿಂಬೆ ಬೆಳೆಯಲ್ಲಿ ಬರುವ ಜಂತು ಹುಳುವಿನ ನಿರ್ವಹಣೆಗೆ ನಿಮಿಟ್ಜ ಉತ್ಪನ್ನದ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರಿನ ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ.ಸೆಂಥಿಲ್ ಕುಮಾರ ಅವರು ದಾಳಿಂಬೆ ಬೆಳೆಯಲ್ಲಿ ಸಂಸ್ಕರಣೆಗೆ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ಮಣ್ಣು ಮತ್ತು ಜಲತಜ್ಞರಾದ ಡಾ.ರಾಜಕುಮಾರ ಹಳ್ಳಿದೊಡ್ಡಿ ಅವರು ದಾಳಿಂಬೆ ಬೆಳೆಯಲ್ಲಿ ಹನಿ ನೀರಾವರಿ ಕುರಿತು ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ ಬಾಬು ಅವರು ದಾಳಿಂಬೆ ಬೆಳೆಗಾರರಿಗೆ ಇಲಾಖೆಯಲ್ಲಿರುವ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕೃಷಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ ಡಾ.ಮೋಹನ ಚವ್ಹಾಣ, ಜೈವಿಕ ತಂತ್ರಜ್ಞಾನ ವಿಜ್ಞಾನಿಗಳಾದ ಡಾ.ಪ್ರಕಾಶ ಪಾಟೀಲ, ಕೃಷಿ ವಿಜ್ಞಾನ ಕೇಂದ್ರದ ಸತೀಶ ಕಾಳೆ, ಡಾ.ಉಮೇಶ ಬಾರಿಕರ, ಡಾ.ಮಹೇಶ ಹಾಗೂ ಅದಮಾ ಸಂಸ್ಥೆಯ ಆನಂದ ಅದ್ದೇಮಲ, ಪ್ರಭಾಕರ ರೆಡ್ಡಿ ಅವರು ಉಪಸ್ಥಿತರಿದ್ದರು.
ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ.ಮಲ್ಲಿಕಾರ್ಜುನ ಕೆಂಗನಾಳ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಿಂದ ಸುಮಾರು ೧೫೦ಕ್ಕೂ ಹೆಚ್ಚು ರೈತರು ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಮಾಹಿತಿ ಪಡೆದರು.

ವಾಡಿ-ಗದಗ ರೈಲ್ವೆ ಯೋಜನೆಗಾಗಿ ಭೂಸ್ವಾಧೀನ
ಎಕರೆಗೆ ೧೭ ಲಕ್ಷ ರೂ. ಪರಿಹಾರ ನಿಗದಿ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ನವೆಂಬರ್ ೨೮ (ಕರ್ನಾಟಕ ವಾರ್ತೆ): ವಾಡಿ-ಗದಗ ರೈಲ್ವೆ ಯೋಜನೆಗಾಗಿ ಜಿಲ್ಲೆಯ ಸುರಪುರ ತಾಲ್ಲೂಕಿನ ಖಾನಾಪುರ ಎಸ್.ಎಚ್. ಗ್ರಾಮದಲ್ಲಿ ರೈತರಿಂದ ಒಟ್ಟು ೪೧ ಎಕರೆ ೨೨ ಗುಂಟೆ ಜಮೀನನ್ನು ಸ್ವಾಧೀನಪಡಿಸಿಕೊಂಡಿದ್ದು, ಎಕರೆಗೆ ೧೭ ಲಕ್ಷ ರೂ. ಪರಿಹಾರ ವಿತರಿಸಲಾಗುವುದು ಎಂದು ಭೂ-ಬೆಲೆ ನಿರ್ಧರಣಾ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ವಾಡಿ-ಗದಗ ರೈಲ್ವೆ ಮಾರ್ಗ ನಿರ್ಮಾಣ ಕಾಮಗಾರಿಗೆ ಸ್ವಾಧೀನಪಡಿಸಿಕೊಂಡ ಜಮೀನು ಮಾಲೀಕರೊಂದಿಗೆ ನಡೆದ ಭೂ-ಬೆಲೆ ನಿರ್ಧರಣಾ ಸಲಹಾ ಸಮಿತಿಯ ಎರಡನೇ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ರೈಲ್ವೆ ಹಾಗೂ ರಾಷ್ಟಿçÃಯ ಹೆದ್ದಾರಿ ಯೋಜನೆಗಳು ಬಂದಷ್ಟು ಜಿಲ್ಲೆ ಅಭಿವೃದ್ಧಿ ಸಾಧಿಸುತ್ತದೆ. ಜಿಲ್ಲೆಯ ಜನರ ಆರ್ಥಿಕ ಪ್ರಗತಿಗೆ ರೈಲ್ವೆ ಯೋಜನೆ ವರದಾನವಾಗಿದೆ. ಸರಕಾರದ ಭೂಸ್ವಾಧೀನ ಮಾನದಂಡಗಳ ಪ್ರಕಾರ ಈ ರೈಲ್ವೆ ಯೋಜನೆಗಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿದೆ. ನಿಗದಿತ ಬೆಲೆಯಂತೆ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಮತ್ತು ಶೀಘ್ರವಾಗಿ ಹಣ ವರ್ಗಾವಣೆ ಆಗುತ್ತದೆ ಎಂದು ಅವರು ಹೇಳಿದರು.
ಭೂ-ಬೆಲೆ ನಿರ್ಧರಣಾ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನಾಧಿಕಾರಿ ಡಾ.ಬಿ.ಶರಣಪ್ಪ ಅವರು ಮಾತನಾಡಿ, ರೈಲ್ವೆ ಯೋಜನೆಗಾಗಿ ವಶಪಡಿಸಿಕೊಂಡ ಜಮೀನು ಸುತ್ತಲಿನಲ್ಲಿ ೫೦ ಫೀಟ್ ವರೆಗೆ ಶಾಲೆ, ವಾಣಿಜ್ಯ ಕಟ್ಟಡ, ಮನೆ ಅಥವಾ ಇತರೆ ಯಾವುದೇ ರೀತಿಯ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಇರುವುದಿಲ್ಲ. ಕೃಷಿ ಚಟುವಟಿಕೆ ನಡೆಸಬಹುದು ಎಂದು ಮಾಹಿತಿ ನೀಡಿದರು.
ಖಾನಾಪುರ ಎಸ್.ಎಚ್. ಗ್ರಾಮದ ರೈತರು ಸಭೆಯಲ್ಲಿ ಮಾತನಾಡಿ, ರೈಲ್ವೆ ಯೋಜನೆಗಾಗಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ಗುಂಟೆಗಳಷ್ಟು ಉಳಿಯುತ್ತಿದೆ. ಇದರಲ್ಲಿ ಕೃಷಿ ಕಾರ್ಯಕ್ಕೆ ಸಾಧ್ಯವಾಗುವುದಿಲ್ಲ. ಅಲ್ಲದೇ, ಕಟ್ಟಡ ನಿರ್ಮಾಣಕ್ಕೂ ಅವಕಾಶ ಇರುವುದಿಲ್ಲ. ಉಳಿದ ಅಲ್ಪ ಜಮೀನನ್ನೂ ಕೂಡ ಖರೀದಿ ಮಾಡಬೇಕು ಎಂದು ಕೋರಿದರು.
ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಕೆಐಎಡಿಬಿ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಡಿ.೧ರಂದು ಪೊಲೀಸ್ ನೇಮಕಾತಿ ಪರೀಕ್ಷೆ
ಯಾದಗಿರಿ, ನವೆಂಬರ್ ೨೮ (ಕರ್ನಾಟಕ ವಾರ್ತೆ): ಸಶಸ್ತç ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಯ ಲಿಖಿತ ಸಿಇಟಿ ಪರೀಕ್ಷೆ ಡಿಸೆಂಬರ್ ೧ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೧೨.೩೦ ಗಂಟೆಯವರೆಗೆ ಯಾದಗಿರಿ ನಗರದ ವಿವಿಧ ಶಾಲಾ- ಕಾಲೇಜುಗಳಲ್ಲಿ ನಡೆಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ ಅವರು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಆನ್‌ಲೈನ್ ವೆಬ್‌ಸೈಟ್‌ನಿಂದ ಕರೆಪತ್ರವನ್ನು ಪಡೆದುಕೊಳ್ಳಬೇಕು. ಅಧಿಸೂಚನೆಯಲ್ಲಿ ತಿಳಿಸಿರುವಂತೆ ಪರೀಕ್ಷಾ ದಿನದಂದು ಕರೆಪತ್ರದೊಂದಿಗೆ ಪಾಸ್‌ಪೋರ್ಟ್, ಡ್ರೆöವಿಂಗ್ ಲೈಸೆನ್ಸ್, ಪ್ಯಾನ್‌ಕಾರ್ಡ್, ಸರ್ವಿಸ್ ಐಡಿಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಎಲೆಕ್ಷನ್ ಫೋಟೋ ಐಡಿ ಕಾರ್ಡ್ ಇವುಗಳಲ್ಲಿ ಯಾವುದಾದರೂ ಒಂದು ಗುರುತಿನ ಚೀಟಿ ಪ್ರತಿಯನ್ನು ಸಹ ತಪ್ಪದೆ ತರಬೇಕು. ಅಭ್ಯರ್ಥಿಗಳು ನಿಗದಿತ ಸಮಯಕ್ಕೆ ಮುಂಚಿತವಾಗಿ ಹಾಜರಾಗಬೇಕು. ಪರೀಕ್ಷಾ ಕೊಠಡಿಯಲ್ಲಿ ಯಾವುದೇ ನೋಟ್‌ಬುಕ್, ಮೊಬೈಲ್, ಕ್ಯಾಲುಕುಲೇಟರ್ ಹಾಗೂ ಪುಸ್ತಕಗಳನ್ನು ತೆಗೆದುಕೊಂಡು ಬರುವುದನ್ನು ನಿಷೇಧಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಯಾದಗಿರಿ, ನವೆಂಬರ್ ೨೮ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್(ಎಸ್.ಎಸ್.ಪಿ) ನಲ್ಲಿ ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪ ಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ ೩೧ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಸಲು ನವೆಂಬರ್ ೩೦ ಕೊನೆಯ ದಿನವಾಗಿತ್ತು. ಹೆಚ್ಚಿನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಸಾಧ್ಯವಾಗದಿರುವ ಕಾರಣ ಅವಧಿ ವಿಸ್ತರಿಸಲಾಗಿದೆ. ವಿದ್ಯಾರ್ಥಿ ವೇತನದ ವೆಬ್‌ಸೈಟ್ http://ssp.postmatric.karnataka.gov.in ನಲ್ಲಿ ಇ-ಅಟೆಸ್ಟೇಶನ್ ಮಾಡಿ ಖಾತೆ ಸೃಜಿಸಿ, ಅರ್ಜಿ ಸಲ್ಲಿಸಬೇಕು. ನ್ಯಾಷನಲ್ ಸ್ಕಾಲರ್‌ಶಿಪ್ ಪೋರ್ಟಲ್ (ಎನ್‌ಎಸ್‌ಪಿ)ನಲ್ಲಿ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತರ ಸಮುದಾಯದ ಎಲ್ಲಾ ವಿದ್ಯಾರ್ಥಿಗಳು ಎಸ್.ಎಸ್.ಪಿಯಲ್ಲಿಯೂ ಸಹ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ. ಸಾಮಾನ್ಯ ಪದವಿಯ ಎಲ್ಲಾ ಕೋರ್ಸ್ಗಳು, ಸ್ನಾತಕೋತ್ತರ ಪದವಿಯ ಎಲ್ಲಾ ಕೋರ್ಸ್ಗಳಲ್ಲಿ, ಇಂಜಿನಿಯರಿ0ಗ್ ಹಾಗೂ ವೈದ್ಯಕೀಯ ಶಿಕ್ಷಣದ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಇ- ಅಟೆಸ್ಟೇಶನ್ ಮಾಡುವುದು ಕಡ್ಡಾಯವಾಗಿರುತ್ತದೆ.
ಇ-ಅಟೆಸ್ಟೇಶನ್ ಮಾಡಿಸಿ ಅಲ್ಲಿ ಸಿಗುವ ಐಡಿ ಸಂಖ್ಯೆಯಿAದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಪಿಯುಸಿ, ಐಟಿಐ, ನರ್ಸಿಂಗ್ (ಜೆಎಎನ್‌ಎಮ್), ಪ್ಯಾರಾಮೆಡಿಕಲ್, ಡಿಪ್ಲೋಮಾ ಕೋರ್ಸ್ಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಇ-ಅಟೆಸ್ಟೇಶನ್ ಮಾಡುವ ಅಗತ್ಯ ಇರುವುದಿಲ್ಲ. ನೇರವಾಗಿ ತಮ್ಮ ಎಸ್‌ಎಟಿಎಸ್ ಐಡಿ ಸಂಖ್ಯೆಯಿAದ ವಿದ್ಯಾರ್ಥಿವೇತನ ಖಾತೆ ಸೃಜಿಸಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್  www.gokdom.kar.nic.in ವಿದ್ಯಾರ್ಥಿ ವೇತನದ ವೆಬ್‌ಸೈಟ್ http://ssp.postmatric.karnataka.gov.in ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ದೂ:೦೮೪೭೩-೨೫೩೨೩೫ ಸಂಪರ್ಕಿಸುವAತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದರಪಟ್ಟಿ ಆಹ್ವಾನ
ಯಾದಗಿರಿ, ನವೆಂಬರ್ ೨೮ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿಗೆ ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿಯ ದೈನಂದಿನ ಕೆಲಸ ಕಾರ್ಯಗಳಿಗಾಗಿ ಮಾರ್ಚ್ ೨೦೨೦ರವರೆಗೆ ಬಾಡಿಗೆ ವಾಹನ ನೀಡಲು ಅರ್ಹ ಟರ‍್ಸ್ ಮತ್ತು ಟ್ರಾವೆಲ್ಸ್, ಏಜೆನ್ಸಿ, ನೋಂದಾಯಿತ ಟ್ಯಾಕ್ಸಿದಾರರಿಂದ ದರಪಟ್ಟಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದರಪಟ್ಟಿಯನ್ನು ಸಲ್ಲಿಸುವ ಅರ್ಹ ಆಸಕ್ತರು ೩೦೦ ರೂ. ಡಿ.ಡಿಯನ್ನು ಜಿಲ್ಲಾ ಆಯುಷ್ ಅಧಿಕಾರಿಗಳು, ಯಾದಗಿರಿ ಇವರ ಹೆಸರಿಗೆ ಸಂದಾಯ ಮಾಡಿ ಅರ್ಜಿ ಫಾರಂಗಳನ್ನು ಡಿಸೆಂಬರ್ ೩ರವರೆಗೆ ಪಡೆಯಬಹುದಾಗಿದೆ. ದರಪಟ್ಟಿಗಳನ್ನು ದ್ವಿಲಕೋಟೆಯಲ್ಲಿ ಡಿಸೆಂಬರ್ ೫ರಂದು ಸಂಜೆ ೫.೩೦ ಗಂಟೆಯೊಳಗಾಗಿ ತಲುಪುವಂತೆ ನೇರವಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು. ಡಿಸೆಂಬರ್ ೬ರಂದು ಬೆಳಿಗ್ಗೆ ೧೧ ಗಂಟೆಗೆ ಟೆಂಡರ್‌ದಾರರ ಸಮಕ್ಷಮದಲ್ಲಿ ಟೆಂಡರ್ ತೆರೆಯಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಬುಧವಾರ, ನವೆಂಬರ್ 27, 2019

ಯಾದಗಿರಿಯ ನೀರು ಶುದ್ಧೀಕರಣ ಘಟಕಕ್ಕೆ ಮಾನ್ಯ ಜಿಲ್ಲಾಧಿಕಾರಿಗಳಾದ ಎಂ. ಕೂರ್ಮಾ ರಾವ್ ಅವರು ಬುಧವಾರ ಭೇಟಿ ನೀಡಿದರು. ನಗರಸಭೆ ಪೌರಾಯುಕ್ತರಾದ ರಮೇಶ್ ಸುಣಗಾರ ಅವರು ಹಾಜರಿದ್ದರು.
ಡಿ.೩ರಂದು ವಿಶ್ವ ವಿಕಲಚೇತನರ ದಿನಾಚರಣೆ
ಯಾದಗಿರಿ, ನವೆಂಬರ್ ೨೭ (ಕರ್ನಾಟಕ ವಾರ್ತೆ): ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ವಕೀಲರ ಸಂಘ ಹಾಗೂ ಎಲ್ಲಾ ಸಂಘ- ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ೨೦೧೯-೨೦ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ ೩ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಬಾಲಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ ಅರ್ಜುನ ಬನಸೊಡೆ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ವಿಧಾನಸಭಾ ಸದಸ್ಯರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ ಅವರು ಅತಿಥಿಗಳಾಗಿ ಆಗಮಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ್ ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚೋಲಾ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಭಾಗವಹಿಸುವರು.
ಹಣಕಾಸು ಸಂಸ್ಥೆಗಳ ನವೀಕರಣಕ್ಕೆ ಸೂಚನೆ
ಯಾದಗಿರಿ, ನವೆಂಬರ್ ೨೭ (ಕರ್ನಾಟಕ ವಾರ್ತೆ): ಯಾದಗಿರಿ ಉಪವಿಭಾಗದಲ್ಲಿ ೨೦೧೫-೧೬ರಲ್ಲಿ ನೋಂದಣಿಯಾದ ಮತ್ತು ನವೀಕರಿಸಿದ ಎಲ್ಲಾ ಹಣಕಾಸು ಸಂಸ್ಥೆಗಳ ಲೇವಾದೇವಿಗಾರರು ಮತ್ತು ಗಿರವಿದಾರರ ಪರವಾನಗಿಗಳನ್ನು ದಿ:೦೧-೦೪-೨೦೨೦ ರಿಂದ ೩೧-೦೩-೨೦೨೫ರ ಅವಧಿಗಾಗಿ ನವೀಕರಣ ಅರ್ಜಿಗಳನ್ನು ಕರ್ನಾಟಕ ಮನಿಲೆಂಡಿAಗ್ ಕಾಯ್ದೆ- ೧೯೬೫ ನಿಯಮ ೫(೨) ರನ್ವಯ ಅಗತ್ಯ ದಾಖಲೆಗಳೊಂದಿಗೆ ೨೦೨೦ರ ಜನವರಿ ೩೧ರೊಳಗಾಗಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿಗೆ ಸಲ್ಲಿಸಲು ಸೂಚಿಸಿದೆ.
ಲೇವಾದೇವಿ ಪರವಾನಗಿ ಶುಲ್ಕ ೫೦೦೦ ರೂ. ಮತ್ತು ಗಿರಿವಿದಾರರಿಗೆ ಪರವಾನಗಿ ಶುಲ್ಕ ೨೫೦೦ ರೂ.(೫ ವರ್ಷದ ಅವಧಿಗಾಗಿ) ಲೆಕ್ಕ ಶೀರ್ಷಿಕೆ ೧೪೭೫-೦೦-೨೦೦-೦೧ರಡಿ ಚಲನ ಮೂಲಕ ಕರ್ನಾಟಕ ಎಸ್.ಬಿ.ಐ ಯಾದಗಿರಿಯಲ್ಲಿ ನವೀಕರಣ ತುಂಬಿ, ಚಲನಿನ ಪ್ರತಿ ನವೀಕರಣ ಪ್ರಸ್ತಾವನೆಯೊಂದಿಗೆ ಮುದ್ದಾಂ ಸಲ್ಲಿಸಬೇಕು.
ಶಾಖೆಗಳನ್ನು ಹೊಂದಿದ ಹಣಕಾಸು ಸಂಸ್ಥೆಯವರು ೨೫೦೦ ರೂ. ಪರವಾನಗಿ ಶುಲ್ಕವನ್ನು ಪ್ರತ್ಯೇಕವಾಗಿ ಭರಿಸಬೇಕು. ೨೦೨೦ರ ಜನವರಿ ೩೧ರ ನಂತರ ಬಂದ ಅರ್ಜಿಗಳನ್ನು ಕಲಂ (೪)ರ ಪ್ರಕಾರ ಶುಲ್ಕದೊಂದಿಗೆ ೫ ಸಾವಿರ ರೂ. ದಂಡ ವಸೂಲಿ ಮಾಡಲಾಗುವುದು. ಸಂಸ್ಥೆಯ ಮೂಲ ಲೇವಾದೇವಿ ಪರವಾನಗಿ ಮತ್ತು ನಕಲು ಪ್ರತಿ ಸಲ್ಲಿಸಬೇಕು. ಪಾಲುದಾರರ ಡೀಡ್ ಬದಲಾವಣೆಗೊಂಡಿದ್ದಲ್ಲಿ ನಕಲು ಪ್ರತಿ ಮತ್ತು ೩೧-೦೩-೨೦೧೬ರವರೆಗಿನ ಆಡಿಟ್ ವರದಿಯನ್ನು ಲಗತ್ತಿಸಬೇಕು.
ಏಪ್ರಿಲ್- ೨೦೧೯ರಿಂದ ಜನವರಿ- ೨೦೨೦ರ ವರೆಗಿನ ೧೦ ತಿಂಗಳವಾರು ಸಾಲ ವಿಚಾರಣೆ, ಸಾಲ ವಸೂಲಿ ಹಾಗೂ ಪ್ರತಿ ತಿಂಗಳ ಕೊನೆಯಲ್ಲಿ ಬಾಕಿ ಉಳಿದಿರುವ ಬಗ್ಗೆ ತಃಖ್ತೆಯನ್ನು ದ್ವಿಪ್ರತಿಗಳಲ್ಲಿ ಲಗತ್ತಿಸಬೇಕು. ತಪ್ಪಿದಲ್ಲಿ ಲೇವಾದೇವಿ ಕಾಯ್ದೆ ಪ್ರಕಾರ ಹಣಕಾಸು ಸಂಸ್ಥೆಯ ಪರವಾನಿಗೆ ರದ್ದುಪಡಿಸಲು ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ:೯೮೮೬೦೧೪೨೭೮ ಸಂಪರ್ಕಿಸಬಹುದು ಎಂದು ಯಾದಗಿರಿ ಉಪವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂವಿಧಾನ ದಿನಾಚರಣೆ: ಪ್ರತಿಜ್ಞಾವಿಧಿ ಸ್ವೀಕಾರ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ಸಂವಿಧಾನ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂವಿಧಾನದ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ಸಂವಿಧಾನ ಗೌರವಿಸುವುದು ನಮ್ಮ ಕರ್ತವ್ಯ
-ನ್ಯಾಯಾಧೀಶರಾದ ಶ್ರೀ ಶಿವನಗೌಡ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ನಮ್ಮ ದೇಶದ ಪ್ರಜೆಗಳ ಹಿತ ರಕ್ಷಣೆಗಾಗಿ ಹಾಗೂ ಅವರ ಹಕ್ಕುಗಳ ಸಂರಕ್ಷಣೆಗಾಗಿ ಭಾರತ ಸಂವಿಧಾನ ರಚನೆಯಾಗಿದೆ. ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯಬೇಕು ಹಾಗೂ ಅದನ್ನು ಗËರವಿಸುವುದು ನಮ್ಮ ಕರ್ತವ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಶಿವನಗೌಡ ಅವರು ಹೇಳಿದರು.
ನಗರದ ಜಿಲ್ಲಾ ವಕೀಲರ ಸಂಘದ ಆವರಣದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ “ಸಂವಿಧಾನ ದಿನ” ಅಂಗವಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು- ನೆರವು ಕಾರ್ಯಕ್ರಮ ಮತ್ತು ಅಭಿಯಾನವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಭಾರತದ ಪ್ರಜೆಗಳಾದ ನಮಗೆ ನಮ್ಮ ಸವಿಂಧಾನವು ಅಮೂಲ್ಯವಾದ ಮೂಲ¨ ಹಕ್ಕುಗಳನ್ನು ನೀಡಿದೆ. ಅಲ್ಲದೆ ಮೂಲ¨ ಕರ್ತವ್ಯಗಳನ್ನು ನೀಡಿದ್ದು, ಅದನ್ನು ಪಾಲಿಸುವ ಹಾಗೂ ಗೌರವಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಪ್ರಜೆಯ ಮೇಲಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ ಅರ್ಜುನ ಬನಸೊಡೆ ಅವರು ಸಂವಿಧಾನದ ಮುನ್ನುಡಿಯನ್ನು ಓದಿ ಹೇಳಿದರು ಹಾಗೂ ಮೂಲ¨ ಹಕ್ಕುಗಳು ಮತ್ತು ಮೂಲ¨ ಕರ್ತವ್ಯ ಕುರಿತು ಉಪನ್ಯಾಸ ನೀಡಿದರು.
ರಾಷ್ಟಿçಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ಜಿಲ್ಲಾ ಪ್ರಾಧಿಕಾರವು “ಸಂವಿಧಾನ ದಿನ” ಅಂಗವಾಗಿ ಮೂಲ¨ ಹಕ್ಕುಗಳು ಮತ್ತು ಮೂಲ¨ ಕರ್ತವ್ಯದ ಕುರಿತು ಜಿಲ್ಲೆಯಾದ್ಯಂತ ನವೆಂಬರ್ ೨೬ರಿಂದ ೨೦೨೦ರ ನವೆಂಬರ್ ೨೬ರವರೆಗೆ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಸವರಾಜ ಪಾಟೀಲ್ ಕ್ಯಾತನಾಳ ಅವರು ಕಾರ್ಯಕ್ರಮದ ಅದs್ಯಕ್ಷತೆ ವಹಿಸಿದ್ದರು. ವಕೀಲರಾದ ಮಹಿಪಾಲರೆಡ್ಡಿ ಅವರು ಉಪನ್ಯಾಸ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಗೌರವಾನ್ವಿತ ಶ್ರೀ ನಾಮದೇವ ಕೆ.ಸಾಲಮಂಟಪಿ, ಸಿವಿಲ್ ನ್ಯಾಯಾಧೀಶರಾದ ಶ್ರೀ ಲೋಕೇಶ್ ಧನಪಾಲ ಹವಲೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಸ್ಮೀತಾ ಮಾಲಗಾಂವೆ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರಾದ ಸಿ.ಎಸ್. ಮಾಲಿಪಾಟೀಲ್, ಜವಾಹರ ಕಾನೂನು ಪದವಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶೇಖ ಲಾಯಕ ಅಲಿ, ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ನಾಗಯ್ಯ ಗುತ್ತೇದಾರ, ಪ್ರಧಾನ ಕಾರ್ಯದರ್ಶಿ ವಿನಯಕುಮಾರ ಕುಲಕರ್ಣಿ, ಜಂಟಿ ಕಾರ್ಯದರ್ಶಿ ವಿಜಯಕುಮಾರ ಕೊಂಕಲ್, ಖಜಾಂಚಿ ಪರಶುರಾಮ ಅವರು ಉಪಸ್ಥಿತರಿದ್ದರು.

ಮಂಗಳವಾರ, ನವೆಂಬರ್ 26, 2019

ಇಂದು ಅಡಿಗಲ್ಲು ಸಮಾರಂಭ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ೨೦೧೯-೨೦ನೇ ಸಾಲಿನ ೫೦೫೪ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಗುರುಮಠಕಲ್ ತಾಲ್ಲೂಕಿನ ಅರಕೇರಾ- ಮೋಟ್ನಳ್ಳಿ ರಸ್ತೆ ಕಿ.ಮೀ. ೬.೫೦ರಿಂದ ೧೧.೭೦ರ ವರೆಗೆ ೫ ಕೋಟಿ ರೂ. ವೆಚ್ಚದ ರಸ್ತೆ ಸುಧಾರಣೆ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು ನವೆಂಬರ್ ೨೭ರಂದು ಬೆಳಿಗ್ಗೆ ೧೧ ಗಂಟೆಗೆ ಯಂಪಾಡ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಶಿಲಾನ್ಯಾಸ ನೆರವೇರಿಸುವರು. ಶಾಸಕರಾದ ನಾಗನಗೌಡ ಕಂದಕೂರ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಬಿ.ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಲೋಕಸಭಾ ಸದಸ್ಯರಾದ ಡಾ.ಉಮೇಶ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಯಂಪಾಡ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮುಂಜುಬಾಯಿ ಜೈಯಿಂದ್ರ ಚವ್ಹಾಣ್, ಜಿಲ್ಲಾ ಪಂಚಾಯಿತಿ ಕಂದಕೂರ ಕ್ಷೇತ್ರದ ಸದಸ್ಯರಾದ ಸರಸ್ವತಿ ಸುಭಾಷಚಂದ್ರ ಕಟಕಟಿ, ತಾಲ್ಲೂಕು ಪಂಚಾಯಿತಿ ಕಂದಕೂರ ಕ್ಷೇತ್ರದ ಸದಸ್ಯರಾದ ಈಶ್ವರ ಕೆ.ನಾಯ್ಕ್ ರಾಠೋಡ ಅವರು ಅತಿಥಿಗಳಾಗಿ ಭಾಗವಹಿಸುವರು.

ಡಿ.೭ಕ್ಕೆ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಸಭೆ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಮೂರನೇಯ ಅವಧಿಗೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆ ಸಭೆಯನ್ನು ಡಿಸೆಂಬರ್ ೭ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಯುಷ್ಮಾನ್ ಕಾರ್ಡ್ ಪಡೆಯಲು ಮನವಿ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಬಿಪಿಎಲ್ ಕುಟುಂಬಗಳಿಗೆ ಒಂದು ವರ್ಷಕ್ಕೆ ೫ ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ. ಸಾರ್ವಜನಿಕರು ಈ ಯೋಜನೆಯಡಿ ನೋಂದಾಯಿಸಿ ಲಾಭ ಪಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಮನವಿ ಮಾಡಿದ್ದಾರೆ.
ಎಪಿಎಲ್ ಕುಟುಂಬಗಳಿಗೆ ಸರ್ಕಾರಿ ಪ್ಯಾಕೇಜ್ ದರದ ಶೇ.೩೦ರಷ್ಟು ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ೧.೫೦ ಲಕ್ಷ ರೂಪಾಯಿ ಇರುತ್ತದೆ. ಈ ಯೋಜನೆಯಲ್ಲಿ ೧೬೫೦ ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸೆ ಲಭ್ಯವಿದೆ. ಹತ್ತಿರದÀ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಹಾಜರುಪಡಿಸಿ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಕಾರ್ಡ್ನ್ನು ಪಡೆಯಬಹುದು. ಈ ಕಾರ್ಡ್ನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆ, ಶಹಾಪೂರ ಮತ್ತು ಸುರಪೂರ ತಾಲ್ಲೂಕು ಆಸ್ಪತ್ರೆಗಳು ಹಾಗೂ ವಡಿಗೇರಾ, ಸೈದಾಪೂರ, ಗುರುಮಠಕಲ್, ಅರಕೇರಾ ಬಿ., ಹುಣಸಗಿ, ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಯಾದಗಿರಿ, ಶಹಾಪೂರ, ಸುರಪೂರ ನಗರ ಆರೋಗ್ಯ ಕೇಂದ್ರಗಳಲ್ಲಿ ೧೦ ರೂಪಾಯಿ ಶುಲ್ಕ ನೀಡಿ ಪಡೆಯಬಹುದು.
ಅಲ್ಲದೆ, ನಿಮ್ಮ ಹತ್ತಿರದಲ್ಲಿರುವ ಸೇವಾಸಿಂಧು ಕೇಂದ್ರಗಳಲ್ಲಿ ಕಾಗದದ ಕಾರ್ಡ್ಗೆ ೧೦ ರೂಪಾಯಿ ಹಾಗೂ ಪ್ಲಾಸ್ಟಿಕ್ ಕಾರ್ಡ್ಗೆ ೩೫ ರೂಪಾಯಿ ನೀಡಿ ಪಡೆದುಕೊಳ್ಳಬಹುದು. ಯಾದಗಿರಿ ತಹಸೀಲ್ ಕಚೇರಿ ಆವರಣದಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಕೂಡ ಆರೋಗ್ಯ ಕಾರ್ಡ್ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಡಿ.೧ರಿಂದ ಚಾಲು- ಬಂದ್ ಪದ್ಧತಿಯಂತೆ ಕಾಲುವೆಗೆ ನೀರು
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನ ಹಿಂಗಾರು ಹಂಗಾಮಿಗಾಗಿ ನಾರಾಯಣಪುರ ಎಡದಂಡೆ ಕಾಲುವೆಯ ವಿತರಣಾ ಕಾಲುವೆ ೧ರಿಂದ ೨೫ ಹಾಗೂ ನಾರಾಯಣಪುರ ಬಲದಂಡೆ ಕಾಲುವೆಯ ವಿತರಣಾ ಕಾಲುವೆ ೧ರಿಂದ ೧೪ರ ವರೆಗೆ ಮತ್ತು ರಾಂಪೂರ ಏತ ನೀರಾವರಿ ಕಾಲುವೆಗಳಲ್ಲಿ ಚಾಲು- ಬಂದ್ ಪದ್ಧತಿಯಂತೆ ನೀರು ಹರಿಸಲಾಗುವುದು ಎಂದು ಕೃಷ್ಣ ಭಾಗ್ಯ ಜಲನಿಗಮ ನಿಯಮಿತ ಕಾರ್ಯನಿರ್ವಾಹಕ ಇಂಜಿನಿಯರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಲಮಟ್ಟಿಯಲ್ಲಿ ನವೆಂಬರ್ ೧೭ರಂದು ಜರುಗಿದ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಿದಂತೆ, ನಾರಾಯಣಪುರ ಎಡದಂಡೆ ಕಾಲುವೆ ಕಿ.ಮೀ. ೦.೦೦ ರಿಂದ ೭೭.೦೦ ವರೆಗೆ, ವಿತರಣಾ ಕಾಲುವೆ ಸಂ. ೧ರಿಂದ ೨೫ರ ವರೆಗೆ, ನಾರಾಯಣಪುರ ಬಲದಂಡೆ ಕಾಲುವೆ ಕಿ.ಮೀ.೦.೦೦ ರಿಂದ ೮೨.೦೦ ವರೆಗೆ, ವಿತರಣಾ ಕಾಲುವೆ ಸಂಖ್ಯೆ: ೧ರಿಂದ ೧೪ರ ವರೆಗೆ ಮತ್ತು ರಾಂಪೂರ ಏತ ನೀರಾವರಿಯ ಕಾಲುವೆಗಳಿಗೆ ನವೆಂಬರ್ ೨೧ರಿಂದ ನವೆಂಬರ್ ೩೦ರವರೆಗೆ ಕಾಲುವೆ ಜಾಲದಲ್ಲಿ ನೀರನ್ನು ನಿಲ್ಲಿಸಿ, ಡಿಸೆಂಬರ್ ೧ರಿಂದ ಹರಿಸಲಾಗುತ್ತದೆ. ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಈ ಕೆಳಕಂಡAತೆ ಚಾಲು/ಬಂದ್ ಪದ್ಧತಿಯಂತೆ ನೀರನ್ನು ಹರಿಸಲಾಗುವುದು.
ನೀರು ನಿಲ್ಲಿಸುವ ದಿನಾಂಕಗಳು: ನವೆಂಬರ್ ೨೧ರಿಂದ ನ.೩೦ರವರೆಗೆ, ಡಿಸೆಂಬರ್ ೧೫ರಿಂದ ಡಿ.೨೨ರವರೆಗೆ, ೨೦೨೦ರ ಜನವರಿ ೬ರಿಂದ ಜ.೧೩ರವರೆಗೆ, ಜನವರಿ ೨೮ರಿಂದ ಫೆಬ್ರುವರಿ ೪ರ ವರೆಗೆ, ಫೆಬ್ರುವರಿ ೧೯ರಿಂದ ಫೆ.೨೬ರವರೆಗೆ, ಮಾರ್ಚ್ ೧೨ರಿಂದ ಮಾ.೧೯ರವರೆಗೆ ಸೇರಿದಂತೆ ಒಟ್ಟು ೪೦ ದಿನ ನೀರು ನಿಲ್ಲಿಸಲಾಗುವುದು.
ನೀರು ಬಿಡುವ ದಿನಾಂಕಗಳು: ಡಿಸೆಂಬರ್ ೧ರಿಂದ ಡಿ.೧೪ರ ವರೆಗೆ, ಡಿಸೆಂಬರ್ ೨೩ರಿಂದ ೨೦೨೦ರ ಜನವರಿ ೫ರ ವರೆಗೆ, ಜನವರಿ ೧೪ರಿಂದ ಜ.೨೭ರವರೆಗೆ, ಫೆಬ್ರುವರಿ ೫ರಿಂದ ಫೆ.೧೮ರ ವರೆಗೆ, ಫೆಬ್ರುವರಿ ೨೭ರಿಂದ ಮಾರ್ಚ್ ೧೧ರ ವರೆಗೆ ಸೇರಿದಂತೆ ಒಟ್ಟು ೭೦ ದಿನ ನೀರು ಬಿಡಲಾಗುವುದು. ಮುಂದಿನ ದಿನಾಂಕವನ್ನು ಜಲಾಶಯದ ನೀರಿನ ಲಭ್ಯತೆಗೆ ಅನುಗುಣವಾಗಿ ಫೆಬ್ರುವರಿ ತಿಂಗಳಲ್ಲಿ ಜರುಗುವ ಸಭೆಯಲ್ಲಿ ನಿರ್ಧರಿಸಲಾಗುವುದು.
ನೀರು ಪೂರೈಕೆಯ ಯಾವುದೇ ಸಮಸ್ಯೆಗಳಿಗೆ ತಮ್ಮ ಅಚ್ಚುಕಟ್ಟು ಪ್ರದೇಶಕ್ಕೆ ಸಂಬAಧಿಸಿದAತೆ ಕೆಳಕಂಡ ಕಾರ್ಯಪಾಲಕ ಅಭಿಯಂತರರನ್ನು ಸಂಪರ್ಕಿಸಬಹುದು. ಕೃಭಾಜನಿ(ನಿ) ನಾರಾಯಣಪೂರ ಅಣೆಕಟ್ಟು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಎಚ್.ನಾಯಕೋಡಿ ಮೊ:೯೩೮೦೫೮೧೦೬೦, ಎಡದಂಡೆ ಕಾಲುವೆ ವಿಭಾಗ ರೋಡಲಬಂಡಾ ಇಇ ಸುರೇಂದ್ರಬಾಬು ಮೊ:೯೪೪೯೪೦೪೯೨೧, ಬಲದಂಡೆ ಕಾಲುವೆ ವಿಭಾಗ ನಂ.೫ ರೋಡಲಬಂಡಾ ಇಇ ವೆಂಕಟೇಶಲು ಮೊ:೭೩೪೯೬೭೭೧೨೬, ಎಡದಂಡೆ ಕಾಲುವೆ ವಿಭಾಗ ಹುಣಸಗಿ ಇಇ ಎಸ್.ಎಚ್.ನಾಯಕೋಡಿ ಮೊ:೯೩೮೦೫೮೧೦೬೦, ನಿಮಪೋ ವೃತ್ತ-೧ ನಾರಾಯಣಪೂರ ಅಧೀಕ್ಷಕ ಇಂಜಿನಿಯರ್ ಎಸ್.ರಂಗರಾಮ್ ಮೊ:೯೪೮೩೫೪೫೬೬೯ ಅವರನ್ನು ಸಂಪರ್ಕಿಸಬಹುದು.
ಭತ್ತ, ಕಬ್ಬು, ಬಾಳೆ ನಿಷೇಧ: ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯಿಸಿದಂತೆ ಅಚ್ಚುಕಟ್ಟು ಕ್ಷೇತ್ರದಲ್ಲಿ ಭತ್ತ, ಕಬ್ಬು ಹಾಗೂ ಬಾಳೆಯ ಬೆಳೆಗಳನ್ನು ನಿಷೇಧಿಸಿ, ಲಘು ನೀರಾವರಿ ಹಾಗೂ ಅಲ್ಪಾವಧಿ ಬೆಳೆಗಳು ಮಾತ್ರ ಬೆಳೆಯುವುದಕ್ಕೆ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರನ್ವಯ ಅಚ್ಚುಕಟ್ಟು ಪ್ರದೇಶದ ರೈತಬಾಂಧವರು ಸಹಕರಿಸಿ, ಲಘು ನೀರಾವರಿ ಬೆಳೆಗಳನ್ನು ಮಾತ್ರ ಬೆಳೆಯಲು ಹಾಗೂ ಮಿತವಾಗಿ ನೀರನ್ನು ಬಳಸಲು ವಿನಂತಿಸಲಾಗಿದೆ. ಕಾಲುವೆ ಜಾಲದ ನೀರು ನಿರ್ವಹಣೆ ಸಮಯದಲ್ಲಿ ತೂಬಿನ ಗೇಟುಗಳನ್ನು ಕಾಲುವೆ ಕಟ್ಟಡಗಳನ್ನು ರಕ್ಷಿಸುವುದು ಎಲ್ಲಾ ರೈತ ಬಾಂಧವರ ಕರ್ತವ್ಯವಾಗಿರುತ್ತದೆ ಹಾಗೂ ಕಾಲುವೆ ಮೇಲೆ ಸೈಫನ್ ಪೈಪ್‌ಗಳು ಮತ್ತು ಅನಧಿಕೃತ ಪಂಪುಗಳನ್ನು ಹಾಕುವುದನ್ನು ನಿಷೇಧಿಸಲಾಗಿದೆ. ಅಚ್ಚುಕಟ್ಟು ಪ್ರದೇಶದ ಎಲ್ಲಾ ರೈತಬಾಂಧವರು ಚಾಲು/ಬಂದ್ ಪದ್ಧತಿಯನ್ನು ಅನುಸರಿಸುವ ಮೂಲಕ ನೀರಿನ ಬಳಕೆಯಲ್ಲಿ ಮಿತವ್ಯಯ ಸಾಧಿಸಲು ಅವರು ಕೋರಿದ್ದಾರೆ.

ಪತ್ರಿಕೋದ್ಯಮ ವಿದ್ಯಾರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ
ಯಾದಗಿರಿ, ನವೆಂಬರ್ ೨೫ (ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಯಾದಗಿರಿ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಿಂದ ೨೦೧೯-೨೦ನೇ ಸಾಲಿನ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಜಿಲ್ಲಾ ಕಚೇರಿಯಲ್ಲಿ ಕ್ಷೇತ್ರ ಪ್ರಚಾರ ಕಾರ್ಯಕ್ರಮ ಹಾಗೂ ಮಾಧ್ಯಮ ಚಟುವಟಿಕೆಗಳ ನಿರ್ವಹಣೆ ಕುರಿತು ತರಬೇತಿ ನೀಡಲು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಯು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದವರಾಗಿರಬೇಕು. ಕನ್ನಡ, ಇಂಗ್ಲೀಷ್ ಭಾಷೆಯ ಓದು ಮತ್ತು ಬರಹ ಬಲ್ಲವರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಬೇರೆ ಯಾವುದೇ ಉದ್ಯೋಗ ಮಾಡಬಾರದು. ೧೦ ತಿಂಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಇಬ್ಬರು ಅಭ್ಯರ್ಥಿಗಳಿಗೆ ಮಾಸಿಕವಾಗಿ ತಲಾ ೧೫,೦೦೦ ರೂ.ಗಳ ಶಿಷ್ಯವೇತನ ನೀಡಲಾಗುವುದು.
ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯವರಾಗಿರಬೇಕು. ಒಂದು ವೇಳೆ ಜಿಲ್ಲೆಯ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನೆರೆಯ ಜಿಲ್ಲೆಯ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಅರ್ಹರು ತಮ್ಮ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಡಿಸೆಂಬರ್ ೫ರೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ ಭವನ (ಮಿನಿ ವಿಧಾನಸೌಧ), “ಬಿ” ಬ್ಲಾಕ್, ಮೊದಲನೇ ಮಹಡಿ, ಕೊಠಡಿ ಸಂಖ್ಯೆ: ಬಿ೨ಎ, ಬಿ೨ಬಿ ಹಾಗೂ ಬಿ೩, ಚಿತ್ತಾಪುರ ರಸ್ತೆ, ಯಾದಗಿರಿ-೫೮೫೨೦೨, ದೂ:೦೮೪೭೩-೨೫೩೭೨೨, ಇಮೇಲ್: varthabhavanyadagiri@gmail.com ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಕಲಚೇತನರ ಕ್ರೀಡಾಕೂಟ
ಯಾದಗಿರಿ, ನವೆಂಬರ್ ೨೫ (ಕರ್ನಾಟಕ ವಾರ್ತೆ): ವಿಕಲಚೇತನರು ಕೂಡ ಎಲ್ಲರಂತೆ ಸ್ಪರ್ಧೆ ಮಾಡುವ ಸಾಮರ್ಥ್ಯ ಹೊಂದಿರುತ್ತಾರೆ. ವಿಕಲಚೇತನರು ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಅವರಲ್ಲಿ ಸಹ ಆತ್ಮಸ್ಥೆöÊರ್ಯ ಬರುತ್ತದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಶರಣಪ್ಪ ಪಾಟೀಲ್ ಅವರು ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಎಲ್ಲಾ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರಿಗಾಗಿ ಏರ್ಪಡಿಸಿದ್ದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಚುಟುವಟಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವು ಸಹ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಡಿಸೆಂಬರ್ ೩ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದ್ದು, ದಿನಾಚರಣೆ ಪ್ರಯುಕ್ತ ವಿಕಲಚೇತನರಿಗೆ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸ್ವಯಂ ಸೇವಾ ಸಂಸ್ಥೆಯ ಮುಖ್ಯಸ್ಥರಾದ ಅಜೀತ್ ದೋಖಾ, ಸುಭಾಸ ವಕೀಲ, ತಾಲ್ಲೂಕು ಮಟ್ಟದ ಅಂಗವಿಕಲರ ಹೋರಾಟ ಅಧ್ಯಕ್ಷರಾದ ಸಾಹೇಬ ಜಾನಿ ಅವರು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು. ಇಲಾಖೆ ಸಿಬ್ಬಂದಿಗಳಾದ ನಾಗಮ್ಮ ಜಕಾತಿ, ರಾಧಾ ಜಿ, ಶರಣಪ್ಪ, ಅಬ್ದುಲ್, ಮಲ್ಲಯ್ಯ, ತಿಪ್ಪಣ್ಣ ಹಾಗೂ ವಿ.ಆರ್.ಡಬ್ಲೂö್ಯ ಮತ್ತು ಎಮ್.ಆರ್.ಡಬ್ಲೂö್ಯ ರವರು ಉಪಸ್ಥಿತರಿದ್ದರು.

ಸೋಮವಾರ, ನವೆಂಬರ್ 25, 2019

ರೋಗ ಪತ್ತೆಗೆ ಮನೆಮನೆಗೆ ಭೇಟಿ ನೀಡಲಿರುವ ಆಶಾ ಮತ್ತು ಪುರುಷ ವಾಲೆಂಟೀರ್
ಕುಷ್ಠ, ಕ್ಷಯರೋಗ ಪತ್ತೆಗೆ ಸಾರ್ವಜನಿಕರ ಸಹಕಾರ ಅಗತ್ಯ
-ಸಿಇಓ ಶಿಲ್ಪಾ ಶರ್ಮಾ
ಯಾದಗಿರಿ, ನವೆಂಬರ್ ೨೫ (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಕುಷ್ಠರೋಗ ಮತ್ತು ಕ್ಷಯರೋಗ ಪತ್ತೆ ಹಚ್ಚುವ ಹಾಗೂ ಚಿಕಿತ್ಸೆ ಆಂದೋಲನವನ್ನು ನವೆಂಬರ್ ೨೫ರಿಂದ ಡಿಸೆಂಬರ್ ೧೦ರ ವರೆಗೆ ಹಮ್ಮಿಕೊಳ್ಳಲಾಗಿದೆ. ಈ ಆಂದೋಲನದಲ್ಲಿ ಆಶಾ ಕಾರ್ಯಕರ್ತೆ ಮತ್ತು ಪುರುಷ ವಾಲೆಂಟೀರ್ ಮನೆಮನೆಗೆ ಭೇಟಿ ನೀಡಲಿದ್ದು, ಸಾರ್ವಜನಿಕರು ರೋಗ ಪತ್ತೆಗೆ ಅಗತ್ಯ ಸಹಕಾರ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮನವಿ ಮಾಡಿದರು.
ನಗರದ ಮೈಲಾಪುರ ಅಗಸಿ ಹತ್ತಿರದ ಸವಿತಾ ಸಮಾಜ ಸಮುದಾಯ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಸಂಘ (ಕುಷ್ಠ ಮತ್ತು ಕ್ಷಯರೋಗ) ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಕುಷ್ಠರೋಗ ಮತ್ತು ಕ್ಷಯರೋಗ ಪತ್ತೆ ಹಚ್ಚುವ ಹಾಗೂ ಚಿಕಿತ್ಸೆ ಆಂದೋಲನಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಕುಷ್ಠರೋಗ ಒಂದು ಶಾಪವಲ್ಲ. ಜನರು ಈ ಮೂಢನಂಬಿಕೆಯಿAದ ಹೊರಬರಬೇಕು. ಕುಷ್ಠ ಮತ್ತು ಕ್ಷಯರೋಗ ಪತ್ತೆಗೆ ಒಟ್ಟು ೮೪೭ ತಂಡಗಳನ್ನು ರಚಿಸಲಾಗಿದೆ. ಒಂದು ತಂಡದಲ್ಲಿ ಓರ್ವ ಆಶಾ ಕಾರ್ಯಕರ್ತೆ ಮತ್ತು ಒಬ್ಬ ಪುರುಷ ವಾಲೆಂಟೀರ್ ಇರುತ್ತಾರೆ. ಐದು ತಂಡಗಳಿಗೆ ಒಬ್ಬರಂತೆ ೧೬೮ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಪ್ರತಿಯೊಂದು ತಂಡ ದಿನಕ್ಕೆ ೨೦ ಮನೆಗಳಿಗೆ ಭೇಟಿ ನೀಡಲಿದೆ. ಆಂದೋಲನ ಯಶಸ್ವಿಗೆ ಆರೋಗ್ಯ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಅವರು ಕೋರಿದರು.
ಪ್ರಭಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹಾಗೂ ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ಕುಷ್ಠರೋಗವು ನೋವು ರಹಿತವಾಗಿರುವ ಕಾಯಿಲೆಯಾಗಿದ್ದು “ಮೈಕೊಬ್ಯಾಕ್ಟೀರಿಯಂ ಲೆಪ್ರೆ” ಎಂಬ ರೋಗಾಣುವಿನಿಂದ ಬರುತ್ತದೆ. ಈ ರೋಗ ಕಾಣಿಸಿಕೊಳ್ಳಲು ೨ ವಾರದಿಂದ ೨೫ ವರ್ಷ ಬೇಕು. ವಂಶಪಾರAಪರಿಕವಾಗಿ ಹರಡುವುದಿಲ್ಲ. ಆದರೆ, ಚಿಕಿತ್ಸೆ ಹೊಂದದ ಕುಷ್ಠರೋಗಿ ಸೀನಿದಾಗ ಅಥವಾ ಕೆಮ್ಮಿದಾಗ ಹೊರಬರುವ ಬ್ಯಾಕ್ಟೀರಿಯಾದಿಂದ ಕುಟುಂಬದಲ್ಲಿ ಅಥವಾ ಯಾರಿಗೆ ಬೇಕಾದರೂ ಈ ರೋಗ ಹರಡಬಹುದು ಎಂದು ತಿಳಿಸಿದರು.
ಯಾವುದೇ ವ್ಯಕ್ತಿಯ ಚರ್ಮದ ಬಣ್ಣ ಬದಲಾಗುವುದು, ದಪ್ಪವಾಗುವುದು, ಮಿಂಚುವುದು, ಎಣ್ಣೆ ಚರ್ಮ, ಗಂಟುಗಳಾಗುವುದು, ಕಣ್ಣುಗಳನ್ನು ಮುಚ್ಚಲು ಸಾಧ್ಯವಾಗದಿರುವುದು, ಕೈಯಲ್ಲಿ ಹುಣ್ಣು, ಪಾದ ಮತ್ತು ಕೈಬೆರಳುಗಳು ಮಡಿಚಿರುವುದು, ಕೈಗಳಲ್ಲಿ ಮತ್ತು ಪಾದಗಳಲ್ಲಿ ಸಂವೇದನೆಯ ನಷ್ಟ ಕುಷ್ಠರೋಗದ ಲಕ್ಷಣಗಳಾಗಿವೆ. ಆಂದೋಲನದಲ್ಲಿ ಕುಟುಂಬದ ಎಲ್ಲಾ ಸದಸ್ಯರಿಗೆ ದೇಹದ ಯಾವುದೇ ಭಾಗದಲ್ಲಿ ಮಚ್ಚೆ ಇದೆ ಅಥವಾ ಇಲ್ಲ ಎಂಬುದನ್ನು ಆಶಾ ಕಾರ್ಯಕರ್ತೆ ಮತ್ತು ಪುರುಷ ವಾಲೆಂಟೀರ್ ಪರೀಕ್ಷೆ ಮಾಡುತ್ತಾರೆ ಎಂದು ಮಾಹಿತಿ ನೀಡಿದರು.
ಶೇ.೧೦೦ರಷ್ಟು ಗುಣಮುಖ: ಕುಷ್ಠರೋಗವನ್ನು ಬಹುವಿಧ ಔಷಧಿ ಚಿಕಿತ್ಸೆಯಿಂದ ಗುಣಪಡಿಸಬಹುದಾಗಿದ್ದು, ಭಯ ಪಡುವ ಅಗತ್ಯವಿಲ್ಲ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧಿ ದೊರೆಯುತ್ತದೆ. ಚಿಕಿತ್ಸೆಯ ಅವಧಿ ೬ರಿಂದ ೧೨ ತಿಂಗಳು ಇದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದಾಗಿದೆ. ಕಾಯಿಲೆ ಹೊಂದಿದವರನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಶೇ.೧೦೦ರಷ್ಟು ಗುಣಮುಖವಾಗುತ್ತಾರೆ. ಆದರೆ, ಮೈಕೊಬ್ಯಾಕ್ಟೀರಿಯಂ ಲೆಪ್ರೆ ರೋಗಾಣು ಹರಡಿದ ವ್ಯಕ್ತಿಯು ಪ್ರಾರಂಭಿಕ ಹಂತ (ಪಿಬಿ-ಪಾಸಿಬೆಸಿಲ್ಲರಿ ಹಂತ)ದಲ್ಲಿ ಚಿಕಿತ್ಸೆ ಪಡೆಯದಿದ್ದರೆ ೧೮ ತಿಂಗಳ ನಂತರ ಅದು ಕುಷ್ಠರೋಗ (ಎಂಬಿ-ಮಲ್ಟಿಬೆಸಿಲ್ಲರಿ)ವಾಗಿ ಪರಿವರ್ತನೆಗೊಳ್ಳುತ್ತದೆ. ತದನಂತರ ವ್ಯಕ್ತಿಯಲ್ಲಿ ೧೫ ದಿನದಿಂದ ೧ ತಿಂಗಳಲ್ಲಿ ಅಂಗವಿಕಲತೆ ಉಂಟಾಗಬಹುದು ಎಂದು ಡಾ.ಭಗವಂತ ಅನವಾರ ಅವರು ವಿವರಿಸಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಗುರುರಾಜ ಹಿರೇಗೌಡ್ರು ಅವರು ಮಾತನಾಡಿ, ಕ್ಷಯರೋಗ (ಟಿ.ಬಿ)ವು ಗಾಳಿ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಇದನ್ನು ಬೇಗ ಪತ್ತೆ ಮಾಡಿದರೆ ಶೇ.೧೦೦ರಷ್ಟು ಗುಣಪಡಿಸಬಹುದು. ಕ್ಷಯ ರೋಗಿಗಳು ವೈದ್ಯರು ಸಲಹೆ ನೀಡಿದಂತೆ ಅವಧಿ (೬ ತಿಂಗಳು, ೮ ತಿಂಗಳು, ೨ ವರ್ಷ ಕೋರ್ಸ್) ಪೂರ್ಣ ಕಡ್ಡಾಯವಾಗಿ ಔಷಧಿ ತೆಗೆದುಕೊಳ್ಳಬೇಕು. ಈ ಕೋರ್ಸ್ ಮಧ್ಯದಲ್ಲಿ ಆರೋಗ್ಯ ಸುಧಾರಣೆ ಕಂಡುಬAದರೂ ಯಾವುದೇ ಕಾರಣಕ್ಕೂ ಔಷಧಿ ತೆಗೆದುಕೊಳ್ಳುವುದನ್ನು ಬಿಡಬಾರದು ಎಂದು ಸಲಹೆ ನೀಡಿದರು.
ಎರಡು ವಾರ ಕೆಮ್ಮಿದರೆ ಆಸ್ಪತ್ರೆಗೆ ಭೇಟಿ ನೀಡಿ: ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕೆಲವು ವೇಳೆ ಕಫದ ಜೊತೆಗೆ ರಕ್ತ ಕಾಣಿಸುವುದು, ಜ್ವರ ವಿಶೇಷವಾಗಿ ರಾತ್ರಿ ವೇಳೆ ಬರುವುದು, ತೂಕ ಇಳಿಕೆ, ರಾತ್ರಿ ವೇಳೆ ಬೆವರುವುದು, ಹಸಿವಾಗದಿರುವುದು ಕ್ಷಯರೋಗದ ಲಕ್ಷಣಗಳಾಗಿವೆ. ಆಂದೋಲನದಲ್ಲಿ ಈ ಲಕ್ಷಣಗಳಿರುವ ಜನರ ಕಫ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡಲಾಗುವುದು. ಕ್ಷಯರೋಗ ಶ್ವಾಸಕೋಶಗಳಿಗಷ್ಟೇ ಅಲ್ಲದೆ, ದೇಹದ ಇತರೆ ಭಾಗಗಳಿಗೂ ಹರಡಬಹುದು. ಎರಡು ವಾರಕ್ಕಿಂತ ಹೆಚ್ಚು ಕೆಮ್ಮಿದರೆ ಸಾರ್ವಜನಿಕರು ನಿರ್ಲಕ್ಷö್ಯ ವಹಿಸದೆ ಹತ್ತಿರದ ಆಸ್ಪತ್ರೆಗೆ ಭೇಟಿ ನೀಡಬೇಕು ಎಂದು ಅವರು ತಿಳಿಸಿದರು.
ಪ್ರತಿ ಕ್ಷಯರೋಗಿಗೆ ಪೌಷ್ಟಿಕ ಆಹಾರದ ಸಲುವಾಗಿ ನಿಕ್ಷಯ ಪೋಷಣ ಯೋಜನೆ ಅಡಿಯಲ್ಲಿ ಮಾಸಿಕ ೫೦೦ ರೂ. ಗೌರವಧನವನ್ನು ಪೂರ್ಣ ಚಿಕಿತ್ಸೆ ಆಗುವವರೆಗೂ ನೀಡಲಾಗುವುದು. ಕ್ಷಯರೋಗಿಯ ಅಧಿಸೂಚನೆ ಮಾಡಿದ ಮಾಹಿತಿದಾರರಿಗೆ ೫೦೦ ರೂ. ಗೌರವಧನ ನೀಡಲಾಗುವುದು ಎಂದು ಹೇಳಿದರು.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಹಣಮಂತರೆಡ್ಡಿ, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಿರಿಯ ಆರೋಗ್ಯ ಸಹಾಯಕ ಮಹಿಪಾಲರೆಡ್ಡಿ ಅವರು ನಿರೂಪಿಸಿದರು. ಹಿರಿಯ ಆರೋಗ್ಯ ಸಹಾಯಕ ಶರಣಬಸಪ್ಪ ಹೊಸಮನಿ ವಂದಿಸಿದರು.

ಶುಕ್ರವಾರ, ನವೆಂಬರ್ 22, 2019

ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಮುಂದೂಡಿಕೆ
ಯಾದಗಿರಿ, ನವೆಂಬರ್ ೨೨ (ಕರ್ನಾಟಕ ವಾರ್ತೆ): ಯಾದಗಿರಿ ಜಿಲ್ಲಾ ಪಂಚಾಯಿತಿಯ ಮೂರನೇಯ ಅವಧಿಗೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರನ್ನು ಆಯ್ಕೆ ಮಾಡಲು ನವೆಂಬರ್ ೨೫ರಂದು ನಿಗದಿಪಡಿಸಿದ್ದ ಚುನಾವಣೆ ಸಭೆಯನ್ನು ಮುಂದೂಡಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಯಚೂರು ಮತ್ತು ಕಲಬುರಗಿ ಲೋಕಸಭಾ ಸದಸ್ಯರು ತಾವು ಲೋಕಸಭಾ ಅಧಿವೇಶನಕ್ಕೆ ಹಾಜರಾಗುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನ ಇಲ್ಲದ ದಿನಾಂಕದAದು ಸದರಿ ಚುನಾವಣೆಯನ್ನು ನಿಗದಿಪಡಿಸಲು ಪತ್ರ ಸಲ್ಲಿಸಿರುತ್ತಾರೆ. ಆದ್ದರಿಂದ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಚುನಾವಣೆಯ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು  ಅವರು ತಿಳಿಸಿದ್ದಾರೆ.
ನ.೨೫ರಂದು ವಿಕಲಚೇತನರ ಕ್ರೀಡಾಕೂಟ
ಯಾದಗಿರಿ, ನವೆಂಬರ್ ೨೨ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನ ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ನವೆಂಬರ್ ೨೫ರಂದು ಬೆಳಿಗ್ಗೆ ೧೧ ಗಂಟೆಗೆ ವಿಕಲಚೇತನರಿಗೆ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಜಿಲ್ಲಾ ಕ್ರೀಡಾಂಗಣದಲ್ಲ್ಲಿ ಹಮ್ಮಿಕೊಳ್ಳಲಾಗಿದೆ.
ಆಸಕ್ತಿವುಳ್ಳ ವಿಕಲಚೇತನರು ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಚುಟುವಟಿಕೆಯಲ್ಲಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ದೂ:೦೮೪೭೩-೨೫೩೫೩೧ ಸಂಪರ್ಕಿಸಲು ಪ್ರಕಟಣೆಯಲ್ಲಿ ಕೋರಲಾಗಿದೆ.
ಗೋಶಾಲೆಗೆ ಬಿಡಾಡಿದನಗಳ ಸಾಗಣೆ
ಯಾದಗಿರಿ, ನವೆಂಬರ್ ೨೨ (ಕರ್ನಾಟಕ ವಾರ್ತೆ): ಯಾದಗಿರಿ ನಗರಸಭೆ ವ್ಯಾಪ್ತಿಯ ರಸ್ತೆಗಳ ಮೇಲೆ ಬಿಡಾಡಿ ದನಗಳು ಎಲ್ಲೆಂದರಲ್ಲಿ ಮಲಗುತ್ತಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಮತ್ತು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದೆ. ಬಹಳಷ್ಟು ದೂರು ಬಂದಿರುವ ಕಾರಣ ನ.೧೭ರಂದು ರಾತ್ರಿ ವೇಳೆಯಲ್ಲಿ ಕಾರ್ಯಾಚರಣೆ ನಡೆಸಿ, ರಸ್ತೆ ಮೇಲೆ ಕಂಡುಬAದ ಬಿಡಾಡಿ ದನಗಳನ್ನು ಗೋಶಾಲೆಗೆ ಸಾಗಿಸಲಾಗಿದೆ ಎಂದು ಪೌರಾಯುಕ್ತರಾದ ರಮೇಶ ಸುಣಗಾರ ಅವರು ತಿಳಿಸಿದ್ದಾರೆ.
ಬಿಡಾಡಿ ದನಗಳ ಮಾಲೀಕರು ತಮ್ಮ ದನಗಳನ್ನು ರಸ್ತೆಯ ಮೇಲೆ ಬಿಡಬಾರದು. ಇಲ್ಲವಾದಲ್ಲಿ ಯಾವುದೇ ಮುನ್ಸೂಚನೆಯನ್ನು ನೀಡದೆ ಬಿಡಾಡಿ ದನಗಳಗಳನ್ನು ವಶಕ್ಕೆ ಪಡೆದುಕೊಳ್ಳುವ ಕಾರ್ಯಾಚರಣೆ ಮುಂದುವರೆಯುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
೪೮ ಸಹಕಾರ ಸಂಘ ಸಮಾಪನೆ: ಆಕ್ಷೇಪಣೆ ಆಹ್ವಾನ
ಯಾದಗಿರಿ, ನವೆಂಬರ್ ೨೨ (ಕರ್ನಾಟಕ ವಾರ್ತೆ): ಸುರಪುರ ಹಾಗೂ ಹುಣಸಗಿ ತಾಲ್ಲೂಕಿನ ವಿವಿಧ ಪ್ರಕಾರದ ಒಟ್ಟು ೪೮ ಸಹಕಾರ ಸಂಘಗಳು ಕಾರ್ಯನಿರತವಾಗಿರದೆ ಸುಮಾರು ವರ್ಷಗಳಿಂದ ಸ್ಥಗಿತಗೊಂಡಿವೆ. ಸಹಕಾರ ಅಭಿವೃದ್ಧಿ ಅಧಿಕಾರಿ ಕಾರ್ಯಾಲಯಕ್ಕೆ ಯಾವುದೇ ವರದಿ ಹಾಗೂ ಶಾಸನಬದ್ಧ ಲೆಕ್ಕ ಪರಿಶೋಧನಾ ವರದಿಗಳನ್ನು ಸಲ್ಲಿಸದೇ ಇರುವುದರಿಂದ ಸದರಿ ೪೮ ಸಹಕಾರ ಸಂಘಗಳನ್ನು ಸಮಾಪನೆಗೊಳಿಸಲು ತೀರ್ಮಾನಿಸಲಾಗಿದೆ.
ಈ ಸಂಬ0ಧ ಆಕ್ಷೇಪಣೆ ಸಲ್ಲಿಸಬಯಸುವವರು ಪ್ರಕಟಣೆ ಹೊರಡಿಸಿದ ೭ ದಿನಗಳೊಳಗಾಗಿ ಸಹಕಾರ ಅಭಿವೃದ್ಧಿ ಅಧಿಕಾರಿಗಳಿಗೆ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಯನ್ನು ಸಲ್ಲಿಸಬಹುದು. ಒಂದು ವೇಳೆ ನಿಗದಿತ ಅವಧಿಯೊಳಗಾಗಿ ಆಕ್ಷೇಪಣೆಗಳು ಸ್ವೀಕೃತವಾಗದಿದ್ದಲ್ಲಿ ಯಾವುದೇ ಆಕ್ಷೇಪಣೆಗಳಿರುವುದಿಲ್ಲ ಎಂದು ಪರಿಗಣಿಸಿ ಸಮಾಪನೆಗೆ ಕ್ರಮವಿಡಲಾಗುವುದು. ೪೮ ಸಹಕಾರ ಸಂಘಗಳ ವಿವಿರವಾದ ಪಟ್ಟಿಯನ್ನು ಹುಣಸಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಕಚೇರಿ ಹಾಗೂ ಯಾದಗಿರಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಮತ್ತು ಯಾದಗಿರಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ಸೂಚನಾ ಫಲಕಗಳಲ್ಲಿ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಹುಣಸಗಿ ಸಹಕಾರ ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಷ್ಠರೋಗವು ದೇವರ ಶಾಪ ಅಥವಾ ಪಾಪದ ಫಲವಲ್ಲ
ನ.೨೫ರಿಂದ ಕುಷ್ಠ, ಕ್ಷಯರೋಗ ಪತ್ತೆ ಆಂದೋಲನ
-:ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ
ಯಾದಗಿರಿ, ನವೆಂಬರ್ ೨೨ (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಕುಷ್ಠರೋಗ ಮತ್ತು ಕ್ಷಯರೋಗ ಪತ್ತೆ ಹಚ್ಚುವ ಆಂದೋಲನವನ್ನು ನವೆಂಬರ್ ೨೫ರಿಂದ ಡಿಸೆಂಬರ್ ೧೦ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರತಿಕಾಗೋಷ್ಠಿನಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನಸಂಖ್ಯೆ ೧೪,೧೫,೫೫೨ ಇದ್ದು, ಒಟ್ಟು ೨,೩೨,೬೦೫ ಮನೆಗಳಿವೆ. ಕುಷ್ಠ ಮತ್ತು ಕ್ಷಯರೋಗ ಪತ್ತೆಗೆ ಒಟ್ಟು ೮೪೭ ತಂಡಗಳನ್ನು ರಚಿಸಲಾಗಿದೆ. ಒಂದು ತಂಡದಲ್ಲಿ ಓರ್ವ ಆಶಾ ಕಾರ್ಯಕರ್ತೆ ಮತ್ತು ಒಬ್ಬ ಪುರುಷ ವಾಲೆಂಟೀರ್ ಇರುತ್ತಾರೆ. ಐದು ತಂಡಗಳಿಗೆ ಒಬ್ಬರಂತೆ ೧೬೮ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಆಂದೋಲನದಲ್ಲಿ ಪ್ರತಿಯೊಂದು ತಂಡ ದಿನಕ್ಕೆ ೨೦ ಮನೆಗಳಿಗೆ ಭೇಟಿ ನೀಡುತ್ತದೆ. ಕುಟುಂಬದ ಎಲ್ಲಾ ಸದಸ್ಯರಿಗೆ ದೇಹದ ಯಾವುದೇ ಭಾಗದಲ್ಲಿ ಮಚ್ಚೆ ಇದೆ ಅಥವಾ ಇಲ್ಲ ಎಂಬುದನ್ನು ಪರೀಕ್ಷೆ ಮಾಡಲಾಗುತ್ತದೆ. ಮಹಿಳೆಯರಿಗೆ ಆಶಾ ಕಾರ್ಯಕರ್ತೆ, ಪುರುಷರಿಗೆ ಪುರುಷ ವಾ ಸ್ಪಂದಿಸುವ ಮೂಲಕ ಜಿಲ್ಲೆಯನ್ನು ಕುಷ್ಠ ಮತ್ತು ಕ್ಷಯರೋಗ ಮುಕ್ತ ಮಾಡಲು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಜಿಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಮ್.ಎಸ್.ಪಾಟೀಲ್ ಅವರು ಮಾತನಾಡಿ, ಕುಷ್ಠರೋಗ ಆಂದೋಲನ ಜೊತೆಗೆ ಕ್ಷಲೆಂಟೀರ್ ತಪಾಸಣೆ ಮಾಡುತ್ತಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಸಾರ್ವಜನಿಕರ ಮನೆಗೆ ಭೇಟಿ ನೀಡಿದಾಗ ಅವರಿಗೆಯರೋಗ ಪತ್ತೆ ಆಂದೋಲನ ಕೂಡ ನಡೆಸಲಾಗುತ್ತಿದ್ದು, ನವೆಂಬರ್ ೨೫ರಂದು ಆಂದೋಲನಕ್ಕೆ ಚಾಲನೆ ನೀಡಲಾಗುವುದು. ಯಾದಗಿರಿ ನಗರದ ಸವಿತಾ ಸಮಾಜದ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕುಷ್ಠರೋಗವನ್ನು ಬಹುವಿಧ ಔಷಧಿ ಚಿಕಿತ್ಸೆಯಿಂದ ಗುಣಪಡಿಸಬಹುದಾಗಿದ್ದು, ಭಯ ಪಡುವ ಅಗತ್ಯವಿಲ್ಲ. ಚಿಕಿತ್ಸೆಯ ಅವಧಿ ೬ರಿಂದ ೧೨ ತಿಂಗಳು ಇದ್ದು, ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದಾಗಿದೆ. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧಿ ದೊರೆಯುತ್ತದೆ. ಪ್ರತಿ ಕ್ಷಯರೋಗಿಗೆ ಪೌಷ್ಟಿಕ ಆಹಾರದ ಸಲುವಾಗಿ ನಿಕ್ಷಯ ಪೋಷಣ ಯೋಜನೆ ಅಡಿಯಲ್ಲಿ ಮಾಸಿಕ ೫೦೦ ರೂ. ಗೌರವಧನವನ್ನು ಪೂರ್ಣ ಚಿಕಿತ್ಸೆ ಆಗುವವರೆಗೂ ನೀಡಲಾಗುವುದು. ಕ್ಷಯರೋಗಿಯ ಅಧಿಸೂಚನೆ ಮಾಡಿದ ಮಾಹಿತಿದಾರರಿಗೆ ೫೦೦ ರೂ. ಗೌರವಧನ ನೀಡಲಾಗುವುದು ಎಂದು ಹೇಳಿದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮ ಅಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ಕುಷ್ಠರೋಗವು ದೇವರು ನೀಡುವ ಶಾಪ ಅಥವಾ ಪಾಪದ ಫಲವಲ್ಲ. ದೇವರ ಶಾಪದಿಂದ ಬರುತ್ತದೆ ಎಂಬುದು ಜನರಲ್ಲಿ ಮೂಢನಂಬಿಕೆ ಇದೆ. ನೋವು ರಹಿತವಾಗಿರುವ ಈ ಕಾಯಿಲೆಯು “ಮೈಕೊಬ್ಯಾಕ್ಟೀರಿಯಂ ಲೆಪ್ರೆ” ಎಂಬ ರೋಗಾಣುವಿನಿಂದ ಬರುತ್ತದೆ. ಈ ರೋಗ ಕಾಣಿಸಿಕೊಳ್ಳಲು ೨ ವಾರದಿಂದ ೨೫ ವರ್ಷ ಬೇಕು. ಕುಷ್ಠರೋಗವು ವಂಶಪಾರAಪರಿಕವಾಗಿ ಹರಡುವುದಿಲ್ಲ. ಆದರೆ, ಚಿಕಿತ್ಸೆ ಹೊಂದದ ಕುಷ್ಠರೋಗಿ ಸೀನಿದಾಗ ಅಥವಾ ಕೆಮ್ಮಿದಾಗ ಹೊರಬರುವ ಬ್ಯಾಕ್ಟೀರಿಯಾದಿಂದ ಕುಟುಂಬದಲ್ಲಿ ಅಥವಾ ಯಾರಿಗೆ ಬೇಕಾದರೂ ಈ ರೋಗ ಹರಡಬಹುದು ಎಂದು ತಿಳಿಸಿದರು.
ಯಾವುದೇ ವ್ಯಕ್ತಿಯ ಚರ್ಮದ ಬಣ್ಣ ಬದಲಾಗುವುದು, ದಪ್ಪವಾಗುವುದು, ಮಿಂಚುವುದು, ಎಣ್ಣೆ ಚರ್ಮ, ಗಂಟುಗಳಾಗುವುದು, ಕಣ್ಣುಗಳನ್ನು ಮುಚ್ಚಲು ಸಾಧ್ಯವಾಗದಿರುವುದು, ಕೈಯಲ್ಲಿ ಹುಣ್ಣು, ಪಾದ ಮತ್ತು ಕೈಬೆರಳುಗಳು ಮಡಿಚಿರುವುದು, ಪಾದ ಬಿದ್ದಿರುವುದು, ಜುಮ್ಮೆನಿಸುವಿಕೆ, ಮರುಗಟ್ಟುವಿಕೆ, ಕೈಗಳಲ್ಲಿ ಮತ್ತು ಪಾದಗಳಲ್ಲಿ ಸಂವೇದನೆಯ ನಷ್ಟ, ಹಸ್ತಗಳಲ್ಲಿ, ಅಂಗಾಲುಗಳಲ್ಲಿ, ತಣ್ಣನೆ ಮತ್ತು ಬೆಚ್ಚನೆ ವಸ್ತುವಿನ ಸ್ಪರ್ಶದ ಬಗ್ಗೆ ಅಸಮರ್ಥತೆ ಮತ್ತು ಕೈಗಳಲ್ಲಿ, ಪಾದಗಳಲ್ಲಿ ವಸ್ತುವಿನ ಗ್ರಹಿಸುವುಕೆ, ಹಿಡಿದುಕೂಳ್ಳುವಿಕೆಯಲ್ಲಿ ಅಶಕ್ತತೆ ಕುಷ್ಠರೋಗದ ಲಕ್ಷಣಗಳಾಗಿವೆ ಎಂದು ಅವರು ವಿವರಿಸಿದರು.
ಕಾಯಿಲೆ ಹೊಂದಿದವರನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಶೇ.೧೦೦ರಷ್ಟು ಗುಣಮುಖವಾಗುತ್ತಾರೆ. ಆದರೆ, ಮೈಕೊಬ್ಯಾಕ್ಟೀರಿಯಂ ಲೆಪ್ರೆ ರೋಗಾಣು ಹರಡಿದ ವ್ಯಕ್ತಿಯು ಪ್ರಾರಂಭಿಕ ಹಂತ (ಪಿಬಿ-ಪಾಸಿಬೆಸಿಲ್ಲರಿ ಹಂತ)ದಲ್ಲಿ ಚಿಕಿತ್ಸೆ ಪಡೆಯದಿದ್ದರೆ ೧೮ ತಿಂಗಳ ನಂತರ ಅದು ಕುಷ್ಠರೋಗ (ಎಂಬಿ-ಮಲ್ಟಿಬೆಸಿಲ್ಲರಿ)ವಾಗಿ ಪರಿವರ್ತನೆಗೊಳ್ಳುತ್ತದೆ. ತದನಂತರ ವ್ಯಕ್ತಿಯಲ್ಲಿ ೧೫ ದಿನದಿಂದ ೧ ತಿಂಗಳಲ್ಲಿ ಅಂಗವಿಕಲತೆ ಉಂಟಾಗಬಹುದು. ಜಿಲ್ಲೆಯಲ್ಲಿ ೧೬ ಪಿಬಿ, ೪೦ ಎಂಬಿ ಪ್ರಕರಣಗಳಿವೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಗುರುರಾಜ ಹಿರೇಗೌಡ್ರು ಅವರು ಮಾತನಾಡಿ, ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕೆಲವು ವೇಳೆ ಕಫದ ಜೊತೆಗೆ ರಕ್ತ ಕಾಣಿಸುವುದು, ಜ್ವರ ವಿಶೇಷವಾಗಿ ರಾತ್ರಿ ವೇಳೆ ಬರುವುದು, ತೂಕ ಇಳಿಕೆ, ರಾತ್ರಿ ವೇಳೆ ಬೆವರುವುದು, ಹಸಿವಾಗದಿರುವುದು ಕ್ಷಯರೋಗದ ಲಕ್ಷಣಗಳಾಗಿವೆ. ಈ ಲಕ್ಷಣಗಳಿರುವ ಜನರ ಕಫ ಪರೀಕ್ಷೆ ನಡೆಸಿ, ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದರು.
ಆಂದೋಲನದ ಅಂಗವಾಗಿ ಕುಷ್ಠರೋಗ ಮತ್ತು ಕ್ಷಯರೋಗದ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.
ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಬಿ.ಪಾಟೀಲ್, ಆರೋಗ್ಯ ಇಲಾಖೆಯ ಸಹಾಯಕ ಆಡಳಿತ ಅಧಿಕಾರಿ ತಿಮ್ಮಯ್ಯ, ಡಿ.ಎಚ್.ಓ ಕಚೇರಿಯ ಅಧೀಕ್ಷಕರಾದ ಸಾಹೇಬಗೌಡ ಮಾನೇಗಾರ, ಹಿರಿಯ ಆರೋಗ್ಯ ಸಹಾಯಕ ಶರಣಬಸಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಗುರುವಾರ, ನವೆಂಬರ್ 21, 2019

ಸ್ವಸಹಾಯ ಸಂಘಗಳ ಸದಸ್ಯರ ಜೊತೆಗೆ ಅಧಿಕಾರಿಗಳ ಸಂವಾದ
ಮಹಿಳೆಯರಲ್ಲಿ ಆಸಕ್ತಿ ಇದ್ದರೆ ಉದ್ದಿಮೆ ಆರಂಭಿಸಲು ಸಾಧ್ಯ

-ಡಾ.ಗಿರಿಯಪ್ಪ ಕೊಳ್ಳನ್ನವರ
ಯಾದಗಿರಿ, ನವೆಂಬರ್ ೨೧ (ಕರ್ನಾಟಕ ವಾರ್ತೆ): ಸ್ವಸಹಾಯ ಸಂಘಗಳ ಸದಸ್ಯರಲ್ಲಿ ಉತ್ಸುಕತೆ, ಆಸಕ್ತಿ ಇದ್ದರೆ ಉದ್ದಿಮೆ ಆರಂಭಿಸಲು ಸಾಧ್ಯ. ಇದರ ಜೊತೆಗೆ ಮಾರ್ಕೇಟಿಂಗ್ ಆಲೋಚನೆ ಮತ್ತು ಕಲ್ಪನೆಗಳಿರಬೇಕು ಎಂದು ಮೈಸೂರಿನ ಕೇಂದ್ರ ಆಹಾರ ಸಂಶೋಧನಾ ಸಂಸ್ಥೆಯ ಮಹಿಳಾ ಸಬಲೀಕರಣ ಕಾರ್ಯ ಯೋಜನಾಧಿಕಾರಿ ಡಾ.ಗಿರಿಯಪ್ಪ ಕೊಳ್ಳನ್ನವರ ಅವರು ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಸಿಎಸ್‌ಐಆರ್- ಕೇಂದ್ರ ಆಹಾರ ಸಂಶೋಧನಾ ಸಂಸ್ಥೆ ಮೈಸೂರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಭಾಗಿತ್ವದಲ್ಲಿ ಮಹಿಳಾ ಸಬಲೀಕರಣ ಪೂರಕವಾಗಿ ಜಿಲ್ಲೆಯ ಸ್ವಸಹಾಯ ಸಂಘಗಳ ಸದಸ್ಯರ ಜೊತೆಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮೈಸೂರಿನ ಆಹಾರ ಸಂಶೋಧನಾ ಸಂಸ್ಥೆಯು ಆಹಾರ ಕ್ಷೇತ್ರದಲ್ಲಿ ಹಲವಾರು ತಂತ್ರಜ್ಞಾನಗಳನ್ನು ಅಭಿವೃದ್ಧಿ ಪಡಿಸಿದ್ದು, ಇವುಗಳಲ್ಲಿ ಕೆಲವನ್ನು ಗ್ರಾಮೀಣ ಮಹಿಳೆಯರ ತರಬೇತಿ ಮತ್ತು ಸಬಲೀಕರಣ ಕಾರ್ಯಯೋಜನೆಯಲ್ಲಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಕಲಬೆರಕೆ ಇಲ್ಲದ ರೀತಿಯಲ್ಲಿ ಉತ್ಪನ್ನಗಳನ್ನು ತಯಾರಿಸಲು ಸಂಸ್ಥೆಯಲ್ಲಿ ತರಬೇತಿ ನೀಡಲಾಗುತ್ತಿದೆ. ರಾಯಚೂರು ಮತ್ತು ಯಾದಗಿರಿ ಮಹತ್ವಾಕಾಂಕ್ಷೆ ಜಿಲ್ಲೆಗಳಾಗಿರುವುದರಿಂದ ಈ ಜಿಲ್ಲೆಗಳ ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಿಸಲಾಗುತ್ತಿದೆ. ಸಿಎಫ್‌ಟಿಆರ್‌ಐ ಸಂಸ್ಥೆಯ ನಿರ್ದೇಶಕರಾದ ಡಾ.ರಾಘವರಾವ್ ಅವರು ಈ ಯೋಜನೆಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ತಿಳಿಸಿದರು.
ತರಬೇತಿ ಪಡೆಯುವವರಿಗೆ ಪ್ರಯಾಣ ವೆಚ್ಚ, ಉಚಿತ ಊಟ ಮತ್ತು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಮೊದಲನೇ ಹಂತದಲ್ಲಿ ಮೈಸೂರಿನ ಸಂಸ್ಥೆಯಯಲ್ಲಿ ಯಾದಗಿರಿ ಜಿಲ್ಲೆಯ ಅಭ್ಯರ್ಥಿಗಳಿಗೆ ಹಣ್ಣಿನ ಪಾನೀಯಗಳು, ಹಣ್ಣಿನ ಜಾಮ್ ಮತ್ತು ಜೆಲ್ಲಿ, ಉಪ್ಪಿನಕಾಯಿ ಮತ್ತು ಚಟ್ನಿ ಮುಂತಾದ ಗೃಹೋಪಯೋಗಿ ವಸ್ತುಗಳ ತಯಾರಿಕೆಯನ್ನು ತಿಳಿಸಿಕೊಡಲಾಗಿದೆ. ೨ನೇ ಹಂತದಲ್ಲಿ ಯಾದಗಿರಿ ಜಿಲ್ಲೆಯಲ್ಲಿಯೇ ಮಸಾಲ ಪದಾರ್ಥಗಳ ಕುರಿತು ತರಬೇತಿ ನೀಡಲಾಗಿದ್ದು, ಬರುವ ಜನವರಿ ತಿಂಗಳಲ್ಲಿ ಸಿರಿಧಾನ್ಯಗಳ ಕುರಿತಂತೆ ೩ ದಿನಗಳ ತರಬೇತಿ ನೀಡಲಾಗುತ್ತಿದೆ. ಮಹಿಳೆಯರು ಹೆಸರು ನೋಂದಾಯಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೋರಿದರು.
ಜಂಟಿ ಕೃಷಿ ನಿರ್ದೇಶಕರಾದ ದೇವಿಕಾ ಆರ್. ಅವರು ಮಾತನಾಡಿ, ಮಹಿಳೆಯರು ಸ್ಥಳೀಯವಾಗಿ ಸಿಗುವಂತಹ ಕಚ್ಚಾ ಆಹಾರ ಪದಾರ್ಥಗಳನ್ನು ಬಳಸಿಕೊಂಡು ಉದ್ಯಮ ಆರಂಭಿಸಬೇಕು. ಇದಕ್ಕಾಗಿ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಕೃಷಿ ಸಂಸ್ಕರಣೆಯ ಯೋಜನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಶೇ.೯೦ರಷ್ಟು ಹಾಗೂ ಇತರೆ ಫಲಾನುಭವಿಗಳಿಗೆ ಶೇ.೫೦ರಷ್ಟು ಸಹಾಯಧನ ನೀಡಲಾಗುತ್ತಿದೆ ಎಂದು ಹೇಳಿದರು.
ಇತ್ತೀಚೆಗೆ ರೈತರು ನವಣೆ, ಸಾಮೆ ಸಿರಿಧಾನ್ಯಗಳನ್ನು ಬೆಳೆಯುತ್ತಿಲ್ಲ. ಈ ಬೆಳೆಗಳ ಬಗ್ಗೆ ರೈತರು ಒಲವು ತೋರಿ ಬೆಳೆಯುವ ನಿಟ್ಟಿನಲ್ಲಿ ಕೃಷಿ ಇಲಾಖೆ ವತಿಯಿಂದ ಹೆಕ್ಟೇರ್‌ಗೆ ೧೦ ಸಾವಿರ ರೂ. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಸಿರಿಧಾನ್ಯಗಳನ್ನು ಆಹಾರದಲ್ಲಿ ಉಪಯೋಗ ಮಾಡುವುದು ಆರೋಗ್ಯಕ್ಕೆ ಒಳ್ಳೆಯದು. ಇವುಗಳಿಂದ ಹೆಚ್ಚಿನ ಪೌಷ್ಟಿಕಾಂಶ ದೊರೆಯುವುದರಿಂದ ಮಾರುಕಟ್ಟೆ ಕೂಡ ಇದೆ. ಮಹಿಳೆಯರು ಕೌಶಲ ತರಬೇತಿ ಪಡೆದು ಆರ್ಥಿಕವಾಗಿ ಸಬಲರಾಗಬೇಕು ಎಂದು ಕರೆ ನೀಡಿದರು.
ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ರಾಜ್ಯ ಕಾರ್ಯಕ್ರಮ ವ್ಯವಸ್ಥಾಪಕರಾದ ಬೆಳ್ಳೇಗೌಡ ಅವರು ಮಾತನಾಡಿ, ಮಹಿಳೆಯರು ಗ್ರಾಮ ಸಭೆಗಳಲ್ಲಿ ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಸಲ್ಲಿಸಬೇಕು. ಅಧಿಕಾರಿಗಳು ಈ ಬೇಡಿಕೆಗಳಿಗನುಗುಣವಾಗಿ ಇಲಾಖೆಗಳ ಯೋಜನೆಗಳನ್ನು ಹೊಂದಾಣಿಕೆ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸ್ವಸಹಾಯ ಸಂಘಗಳಿಗೆ ನೀಡಿದ ಸಾಲ ಮರುಪಾವತಿ ಇಡೀ ದೇಶದಲ್ಲಿಯೇ ರಾಜ್ಯವು ಪ್ರಥಮ ಸ್ಥಾನದಲ್ಲಿದೆ. ಆದರೂ ಮಹಿಳೆಯರ ಸಬಲೀಕರಣ ಆಗುತ್ತಿಲ್ಲ. ಇದಕ್ಕೆ ಕಾರಣಗಳನ್ನು ಅರಿತುಕೊಂಡು ಎಲ್ಲಾ ಇಲಾಖೆ ಅಧಿಕಾರಿಗಳು ಒಟ್ಟುಗೂಡಿ ಅರ್ಹರಿಗೆ ಯೋಜನೆಗಳನ್ನು ತಲುಪಿಸಬೇಕಿದೆ. ಸ್ವಸಹಾಯ ಸಂಘಗಳು ಕೂಡ ಯೋಜನೆಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಆರ್.ಗೋಪಾಲ ಅವರು ಮಾತನಾಡಿ, ಮಹಿಳಾ ಸ್ವಸಹಾಯ ಸಂಘ ಅಥವಾ ವೈಯಕ್ತಿಕ ಸಾಲ ಸೌಲಭ್ಯಗಳನ್ನು ನೀಡಲು ಬ್ಯಾಂಕ್ ಅಧಿಕಾರಿಗಳು ನಿರಾಕರಿಸುವಂತಿಲ್ಲ. ಒಂದು ವೇಳೆ ವಿಳಂಬ ಅಥವಾ ನಿರಾಕರಿಸಿದರೆ ಲೀಡ್ ಬ್ಯಾಂಕ್ ಗಮನಕ್ಕೆ ತಂದು ಪರಿಹರಿಸಿಕೊಳ್ಳಬಹುದು ಎಂದು ಭರವಸೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಗುರುನಾಥ ಎನ್.ಗೌಡಪ್ಪನವರ್, ವಿಜ್ಞಾನಿಗಳಾದ ವಿಜಯಲಕ್ಷಿ, ಡಾ.ಮಾಧವನಾಯ್ಡು ಅವರು ಮಾತನಾಡಿದರು.
ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗಾಧಿಕಾರಿ ಗೋಪಾಲರಾವ್, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕರಾದ ರೇಖಾ ಎನ್.ಮ್ಯಾಗೇರಿ, ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕರಾದ ಶಿವಮಂಗಳಾ, ಸ್ತಿ ಶಕ್ತಿ ಯೋಜನೆಯ ಉಷಾ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ಧಿ ನಿಗಮದ ಹಣಮಂತ್ರಾಯ ಅವರು ತಮ್ಮ ಇಲಾಖೆಗಳಿಂದ ಮಹಿಳೆಯರಿಗಾಗಿ ಇರುವ ಯೋಜನೆಗಳು ಮತ್ತು ಸಹಾಯಧನದ ಕುರಿತಂತೆ ವಿವರಿಸಿದರು.
ಆಯುಷ್ಮಾನ್ ಕಾರ್ಡ್ ಪಡೆಯಿರಿ: ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ.ಭಗವಂತ ಅನವಾರ ಅವರು ಮಾತನಾಡಿ, ಈ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದವರು ವರ್ಷದಲ್ಲಿ ೫ ಲಕ್ಷ ರೂ.ವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಎಪಿಎಲ್ ಪಡಿತರ ಚೀಟಿ ಹೊಂದಿರುವ ಮತ್ತು ಹೊಂದಿರದ ಕುಟುಂಬಗಳು ೧.೫೦ ಲಕ್ಷ ರೂ.ವರೆಗೂ ಸಹಪಾವತಿ (ಶೆ.೭೦ರಷ್ಟು ಫಲಾನುಭವಿ ಭರಿಸತಕ್ಕದ್ದು, ಶೆ.೩೦ರಷ್ಟು ಸರ್ಕಾರ ಭರಿಸುತ್ತದೆ)ಯೊಂದಿಗೆ ಚಿಕಿತ್ಸೆಯನ್ನು ಪಡೆಯಬಹುದಾಗಿದೆ. ಪ್ರತಿಯೊಬ್ಬರು ನೋಂದಾಯಿಸಿ ಯೋಜನೆಯ ಲಾಭ ಪಡೆಯಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸ್ವಸಹಾಯ ಸಂಘಗಳ ಮಹಿಳೆಯರಿಂದ ಪಡಿತರ ಚೀಟಿ ಹಾಗೂ ಆಧಾರ್‌ಕಾರ್ಡ್ ಸಂಖ್ಯೆಗಳೊ0ದಿಗೆ ೧೦ ರೂ. ಶುಲ್ಕ ಪಡೆದು ಆಯುಷ್ಮಾನ್ ಕಾರ್ಡ್ ವಿತರಿಸಲಾಯಿತು. ವಿಜಯಕುಮಾರ ಪಾಟೀಲ್ ಅವರು ಕಾರ್ಯಕ್ರಮ ನಿರೂಪಿಸಿದರು.

ಹುಂಡೇಕಲ್ ಗ್ರಾಮಕ್ಕೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ
ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ಶಹಾಪುರ ತಾಲ್ಲೂಕಿನ ಹುಂಡೇಕಲ್ ಗ್ರಾಮದ ಶಾಲೆ ಹಾಗೂ ನ್ಯಾಯಬೆಲೆ ಅಂಗಡಿಗಳಿಗೆ ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಬುಧವಾರ ಅನಿರೀಕ್ಷಿತ ಭೇಟಿ ನೀಡಿದರು.

ಶಾಲೆಯಲ್ಲಿನ ಮಕ್ಕಳ ಹಾಜರಾತಿ ಹಾಗೂ ಶಿಕ್ಷಕರ ವಿವರ ಪಡೆದ ಜಿಲ್ಲಾಧಿಕಾರಿಗಳು, ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಶ್ರಮಿಸಬೇಕು. ಓದಿನಲ್ಲಿ ಹಿಂದುಳಿದ ಮಕ್ಕಳ ಬಗ್ಗೆ ವಿಶೇಷ ಗಮನಹರಿಸಿ ಬೋಧನೆ ಮಾಡಬೇಕು. ಮಕ್ಕಳಲ್ಲಿನ ಕಲಿಕಾ ಮಟ್ಟವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ನಂತರ ಹುಂಡೇಕಲ್ ಗ್ರಾಮದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬುಧವಾರ, ನವೆಂಬರ್ 20, 2019

ಉದ್ಯೋಗ ವಾಹಿನಿ ಜಾಗೃತಿ ರಥಕ್ಕೆ ಚಾಲನೆ
ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ಯಾದಗಿರಿ ತಾಲ್ಲೂಕಿನಲ್ಲಿ ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕುರಿತು ಗ್ರಾಮೀಣ ಕೂಲಿಕಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ “ಉದ್ಯೋಗ ವಾಹಿನಿ ಜಾಗೃತಿ ರಥ”ಕ್ಕೆ ಶಾಸಕರಾದ ನಾಗನಗೌಡ ಕಂದಕೂರ ಅವರು ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಬುಧವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಶಾಸಕರು, ಜಿಲ್ಲೆಯ ಜನ ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ನೆರವಾಗುತ್ತದೆ. ಗಂಡು ಹೆಣ್ಣಿಗೆ ಪ್ರತಿದಿನ ೨೪೯ ರೂ. ಸರಿಸಮಾನ ಕೂಲಿ ನೀಡಲಾಗುವುದು. ಒಂದು ಆರ್ಥಿಕ ವರ್ಷದಲ್ಲಿ ಪ್ರತಿ ಕುಟುಂಬಕ್ಕೆ ನೂರು ದಿನಗಳ ಕೂಲಿ ಕೆಲಸ ನೀಡಬೇಕು. ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಪ್ರಚಾರ ಕೊಡುವ ಜೊತೆಗೆ ಜನರಿಗೆ ಕೆಲಸ ನೀಡಬೇಕು. ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ ಅವರು ಮಾತನಾಡಿ, ಉದ್ಯೋಗ ವಾಹಿನಿ ಪ್ರಚಾರ ರಥವು ಯಾದಗಿರಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಿಗೆ ಸಂಚರಿಸಿ ಯೋಜನೆಯ ಬಗ್ಗೆ ಮಾಹಿತಿ ನೀಡಲಿದೆ. ಕೂಲಿಕಾರ್ಮಿಕರಿಗೆ ಅವರ ಗ್ರಾಮದಲ್ಲಿ ಉದ್ಯೋಗ ನೀಡುವ ಸಲುವಾಗಿ ಜಾಗೃತಿ ಮೂಡಿಸಲಾಗುತ್ತಿದೆ. ಕೂಲಿಕಾರ್ಮಿಕರು ಬೇರೆ ಕಡೆಗೆ ವಲಸೆ ಹೋಗದಂತೆ ಅವರ ಮನವೊಲಿಸಿ ಉದ್ಯೋಗವನ್ನು ನೀಡುವ ಈ ಯೋಜನೆ ಬಗ್ಗೆ ತಿಳಿಸುವ ಸಲುವಾಗಿ ಉದ್ಯೋಗ ವಾಹಿನಿ ಮೂಲಕ ಪ್ರಚಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ, ಉಪಾಧ್ಯಕ್ಷರಾದ ರಾಮಲಿಂಗಮ್ಮ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ, ಸಹಾಯಕ ನಿರ್ದೇಶಕ ಚಂದ್ರಶೇಖರ ಪವಾರ್, ಎಡಿಪಿಸಿ ಬನ್ನಪ್ಪ, ಡಿಐಇಸಿ ಪರಶುರಾಮ ಜಿನಿಕೇರಾ ಅವರು ಉಪಸ್ಥಿತರಿದ್ದರು.

ನ.೨೭ರಂದು ದಾಳಿಂಬೆ ಬೆಳೆ ವಿಚಾರ ಸಂಕಿರಣ
ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ಜಿಲ್ಲೆಯ ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ನವೆಂಬರ್ ೨೭ರಂದು ಒಂದು ದಿನದ ದಾಳಿಂಬೆ ಬೆಳೆ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ.
ಯಾದಗಿರಿ ಜಿಲ್ಲೆ ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದ ದಾಳಿಂಬೆ ಬೆಳೆಯುವ ಜಿಲ್ಲೆಗಳಲ್ಲೊಂದಾಗಿದ್ದು, ಬೆಳೆಗೆ ಸೂಕ್ತವಾದ ವಾತಾವರಣವಿರುತ್ತದೆ. ಸುರಪುರ ಮತ್ತು ಶಹಾಪುರ ತಾಲ್ಲೂಕುಗಳಲ್ಲಿ ಹಲವಾರು ರೈತರು ದಾಳಿಂಬೆಯನ್ನು ಬೆಳೆಯುತ್ತಿದ್ದು, ಪ್ರತಿ ವರ್ಷ ದಾಳಿಂಬೆ ಬೆಳೆಯ ವಿಸ್ತೀರ್ಣ ಹೆಚ್ಚುತ್ತಿದೆ. ಸರಕಾರದ ಹಲವು ಯೋಜನೆಗಳ ಮೂಲಕ ಸೌಲಭ್ಯಗಳಲ್ಲಿ ರೈತರಿಗೆ ಸೂಕ್ತ ಸೌಕರ್ಯಗಳು ದೊರೆಯುತ್ತಿದ್ದು, ರೈತರು ಈ ಬೆಳೆಯತ್ತ ಆಕರ್ಷಿತರಾಗುತ್ತಿದ್ದಾರೆ. ಆದರೆ, ದಾಳಿಂಬೆ ಬೆಳೆಯಲ್ಲಿ ಸೂಕ್ತ ನಿರ್ವಹಣೆ ಮಾಹಿತಿಯ ಕೊರತೆಯಿಂದಾಗಿ ಕೆಲವು ಬಾರಿ ಬೆಳೆಯಲ್ಲಿ ರೈತರು ಹಲವು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದ್ದು, ಈ ವಿಚಾರ ಸಂಕಿರಣದಲ್ಲಿ ಸೊಲ್ಲಾಪುರ ರಾಷ್ಟಿçÃಯ ದಾಳಿಂಬೆ ಸಂಶೋಧನಾ ಸಂಸ್ಥೆ, ರಾಯಚೂರು ಕೃಷಿ ವಿಶ್ವವಿದ್ಯಾಲಯ ವಿಜ್ಞಾನಿಗಳು ಭಾಗವಹಿಸಿ ರೈತರಿಗೆ ದಾಳಿಂಬೆ ಬೆಳೆಯ ಬಗ್ಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಲಿದ್ದಾರೆ.
ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಆಸಕ್ತ ರೈತರು ಕೃಷಿ ವಿಜ್ಞಾನ ಕೇಂದ್ರ ಅಥವಾ ಭೀಮರಾಯನಗುಡಿ ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದಲ್ಲಿ ಖುದ್ದಾಗಿ ತಮ್ಮ ಹೆಸರನ್ನು ನವೆಂಬರ್ ೨೬ರ ಒಳಗಾಗಿ ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡಾ.ಮಲ್ಲಿಕಾರ್ಜುನ ಕೆಂಗನಾಳ ಮೊ:೯೮೪೫೩೬೪೭೦೮, ಸತೀಶ ಕಾಳೆ ಮೊ:೯೪೪೮೫೩೪೮೨೬, ಡಾ.ಉಮೇಶ ಬಾರಿಕರ ಮೊ:೯೯೪೮೩೧೩೫೨೫ ಮತ್ತು ಡಾ.ಶಿವಾನಂದ ಹೊನ್ನಳ್ಳಿ ಮೊ:೯೪೪೮೪೩೭೩೧೩ ಇವರನ್ನು ಸಂಪರ್ಕಿಸಲು ಕೋರಲಾಗಿದೆ.

ಕೃಷ್ಣಾಪುರ: ಆರೋಗ್ಯ ಶಿಕ್ಷಣ ಕಾರ್ಯಕ್ರಮ

ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಸುರಪುರ ತಾಲ್ಲೂಕಿನ ಕೃಷ್ಣಾಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಆರೋಗ್ಯ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. 
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದರ ಶಂಕರ ಮಾತನಾಡಿ, ಸಾಮೂಹಿಕ ಔಷಧ ನುಂಗಿಸುವ (ಎಂ.ಡಿ.ಎ ಮತ್ತು ಏ.ಡಿ.ಎ) ಕಾರ್ಯಕ್ರಮ ಜಿಲ್ಲೆಯಾದ್ಯಂತ ನಡೆಯುತ್ತಿದ್ದು, ವರ್ಷದಲ್ಲಿ ೧ ಬಾರಿ ತಪ್ಪದೇ ಈ ಮಾತ್ರೆಗಳನ್ನು ಸೇವಿಸಬೇಕು. ಮನೆ ಸುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡಬೇಕು. ಸೊಳ್ಳೆಯಿಂದ ರಕ್ಷಣೆ ಪಡೆಯಲು ಸೊಳ್ಳೆ ಪರದೆ ಉಪಯೋಗಿಸಬೇಕು ಎಂದು ಸಲಹೆ ನೀಡಿದರು. 
ಕ್ಷಯರೋಗ ಪತ್ತೆ ಹಚ್ಚುವ ಆಂದೋಲನ (ಎ.ಸಿ.ಎಫ್) ಹಾಗೂ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ (ಎಲ್.ಸಿ.ಡಿ.ಸಿ) ನವೆಂಬರ್ ೨೫ರಿಂದ ಡಿಸೆಂಬರ್ ೧೦ರವರೆಗೆ ಜಿಲ್ಲೆಯಾದ್ಯಂತ ನಡೆಯಲಿದ್ದು, ಇದಕ್ಕಾಗಿ ಶಾಲಾ ವತಿಯಿಂದ ಜಾಗೃತಿ ಜಾಥಾ ಕಾರ್ಯಕ್ರಮಗಳನ್ನು ನಡೆಸಬೇಕು ಎಂದು ತಿಳಿಸಿದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ್ ಅವರು ಮಾತನಾಡಿ, ತೀವ್ರತರ ಮಿಷನ್ ಇಂದ್ರಧನುಷ್ ಲಸಿಕಾ ಕಾರ್ಯಕ್ರಮವು ಡಿಸೆಂಬರ್ ೧೧ರಿಂದ ೩೧ರವರೆಗೆ ನಡೆಯಲಿದೆ. ೧ನೇ ತರಗತಿಯ ಮಕ್ಕಳಿಗೆ ಡಿ.ಪಿ.ಟಿ ಲಸಿಕೆ ಮಾರಕ ಖಾಯಿಲೆಯಾದ ಗಂಟಲುಮಾರಿ, ನಾಯಿಕೆಮ್ಮು, ಧನುರ್ವಾಯು ಆಗದಂತೆ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಲಸಿಕೆ ನೀಡಲಾಗುವುದು. ೨ರಿಂದ ೧೦ನೇ ತರಗತಿಯ ಮಕ್ಕಳಿಗೆ ಸಹ ಮಾರಕ ರೋಗಗಳನ್ನು ತಡೆಗಟ್ಟಲು ತಪ್ಪದೇ ಟಿ.ಡಿ. ಲಸಿಕೆ ಹಾಕಿಸಲು ತಿಳಿಸಿದರು.
ಎಲ್ಲರೂ ಕೈಜೋಡಿಸಿ ಯಾದಗಿರಿ ಜಿಲ್ಲೆಯನ್ನು ಡಿಪ್ತೀರಿಯಾ ರೋಗಮುಕ್ತ ಜಿಲ್ಲೆಯನ್ನಾಗಿ ಮಾಡಬೇಕು. ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿಯೊಬ್ಬ ಮಗುವಿನ ಜನ್ಮಸಿದ್ದ ಹಕ್ಕು ಹಾಗೂ ಲಸಿಕೆಗಳನ್ನು ಕೊಡುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯ ಎಂಬ ಘೋಷಣೆಯೊಂದಿಗೆ ತಿಳಿಸಿಕೊಟ್ಟರು.
ಶಾಲೆಯ ಮುಖ್ಯಗುರುಗಳಾದ ದೇವಿಂದ್ರಮ್ಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಸಿಬ್ಬಂದಿಗಳಾದ ರಾಘುಬಾಯಿ ಕುಲಕರ್ಣಿ, ಸುಮಲತಾ, ಪ್ರೇಮಾ, ರಾಜಶ್ರೀ, ವೀರೇಶ, ರಜನಿ, ಭೀಮಬಾಯಿ, ರೇಣುಕಾ, ಲಕ್ಷಿö್ಮÃ, ಇಮಾಮ್‌ಬಿ, ಶಿವುಕುಮಾರ, ಆಶಾ ಕಾರ್ಯಕರ್ತೆ ಪಾರ್ವತಿ, ಅಂಗನವಾಡಿ ಕಾರ್ಯಕರ್ತೆ ಜಯಶ್ರೀ, ಆರೋಗ್ಯ ಇಲಾಖೆಯ ಸಿಬ್ಬಂದಿ ಹಬಿಮುಲ್ಲ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನವೆಂಬರ್ ತಿಂಗಳ ಪಡಿತರ ಧಾನ್ಯ ಬಿಡುಗಡೆ
ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಿಗೆ ನವೆಂಬರ್ ತಿಂಗಳ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತ್ಯೋದಯ ಅನ್ನ ಯೋಜನೆಯ ೨೬,೫೭೮ ಪಡಿತರ ಚೀಟಿಗಳಿಗೆ ತಲಾ ೩೫ ಕೆ.ಜಿ ಅಕ್ಕಿ, ೨,೨೯,೦೮೩ ಬಿಪಿಎಲ್ ಪಡಿತರ ಚೀಟಿಗಳ ೮,೧೧,೬೪೮ ಸದಸ್ಯರಿಗೆ ತಲಾ ೭ ಕೆ.ಜಿ ಅಕ್ಕಿಯನ್ನು ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ವಿತರಿಸಲು ಹಂಚಿಕೆ ನೀಡಲಾಗಿದೆ. ಪಡಿತರ ಚೀಟಿದಾರರು ತಮ್ಮ ಹಕ್ಕಿನಲ್ಲಿರುವ ಅಕ್ಕಿಯನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ತಪ್ಪದೇ ಪಡೆದುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
ಜಿಲ್ಲೆಯ ೩೯೯ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು (Point of Sale – POS Shop Module) ವ್ಯವಸ್ಥೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯನ್ವಯ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್, ಜಿಲ್ಲೆಯ ಉಪ ನಿರ್ದೇಶಕರ ಕಚೇರಿ ಅಥವಾ ಸಹಾಯವಾಣಿ ೧೯೬೭ ಸಂಖ್ಯೆಗೆ ದೂರನ್ನು ದಾಖಲಿಸಬಹುದು. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರು ಪಡಿತರ ಪಡೆಯುವ ವೇಳೆಯಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಸಂಖ್ಯೆಯೊದಿಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಕಾನೂನು ಪದವಿಧರರಿಂದ ಅರ್ಜಿ ಆಹ್ವಾನ
ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿಗಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಾನೂನು ಪದವಿಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಸಹಾಯ ಧನ ಮಂಜೂರಿಸಲು ಕಾನೂನು ಪದವಿಧರರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕಾನೂನು ಪಧವಿಧರರು ಜಾತಿ ಪ್ರಮಾಣಪತ್ರ ಆರ್.ಡಿ ಸಂಖ್ಯೆಯನ್ನು ಹೊಂದಿರತಕ್ಕದ್ದು. ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯಗಳಲ್ಲಿ ಕಾನೂನು ಪದವಿ ಪಡೆದಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ೨ ಲಕ್ಷ ರೂ. ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ ೨೩ಕ್ಕೆ ೪೦ ವರ್ಷ ಮೀರಿರಬಾರದು. ಆಧಾರ್ ಕಾರ್ಡ್ ಹೊಂದಿರತಕ್ಕದ್ದು. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ www.swd.kar.nic ಗೆ ಭೇಟಿ ನೀಡಿ Social Empowerment Schemes link lick ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ದೂ:೦೮೪೭೩-೨೫೩೭೪೧ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ನಾಳೆ ಹರಾಜು ಪ್ರಕ್ರಿಯೆ
ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ (ಅಮಲಾಪುರ) ಗ್ರಾಮದ ಶ್ರೀ ಬಲಭೀಮೇಶ್ವರ ದೇವಸ್ಥಾನದ ಸ್ಥಳ ಹಾಗೂ ತೆಂಗಿನಕಾಯಿ ಮಾರಾಟ ಹರಾಜು ಪ್ರಕ್ರಿಯೆ ನವೆಂಬರ್ ೨೨ರಂದು ಬೆಳಿಗ್ಗೆ ೧೧ ಗಂಟೆಗೆ ಶಹಾಪುರ ತಹಸೀಲ್ ಕಾರ್ಯಾಲಯದಲ್ಲಿ ನಡೆಯಲಿದೆ.
ಹರಾಜಿನಲ್ಲಿ ಭಾಗವಹಿಸುವವರು ೨೫,೦೦೦ ರೂ. ಠೇವಣಿ ಇಟ್ಟು ಸರಿಯಾದ ಸಮಯಕ್ಕೆ ಹಾಜರಾಗಬೇಕು. ಹರಾಜಿನ ನಂತರ ೭ ದಿನಗಳ ಒಳಗಾಗಿ ಹರಾಜಿನ ಪೂರ್ತಿ ಹಣವನ್ನು ತುಂಬಬೇಕು. ತಪ್ಪಿದಲ್ಲಿ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಂಡು ಪುನಃ ಹರಾಜು ನಡೆಸಲಾಗುವುದು ಎಂದು ದೇವಸ್ಥಾನದ ಕಾರ್ಯದರ್ಶಿಗಳೂ ಆದ ಶಹಾಪುರ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪುಸ್ತಕ ಬಹುಮಾನಕ್ಕಾಗಿ ಅರ್ಜಿ ಆಹ್ವಾನ
ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ಕರ್ನಾಟಕ ನಾಟಕ ಅಕಾಡೆಮಿಯು ೨೦೧೮ನೇ ಸಾಲಿನಲ್ಲಿ ಪ್ರಕಟವಾಗಿರುವ ರಂಗಭೂಮಿಗೆ ಸಂಬಧಿಸಿದ ಕೃತಿಗಳಿಗೆ ಪುಸ್ತಕ ಬಹುಮಾನ ನೀಡಲು ಸ್ವವಿವರಗಳೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೃತಿಗಳು ಜನವರಿ ೨೦೧೮ರಿಂದ ಡಿಸೆಂಬರ್ ೨೦೧೮ರೊಳಗೆ ಮುದ್ರಣವಾದ ಮೊದಲ ಪ್ರಕಟಣೆಯಾಗಿರಬೇಕು. ಲೇಖಕರು ತಮ್ಮ ಹೆಸರು, ವಿಳಾಸ, ಪ್ರಕಟಣೆಯ ವರ್ಷ ನೀಡಿ, ಪುಸ್ತಕದ ಐದು ಪ್ರತಿಗಳೊಂದಿಗೆ ರಿಜಿಸ್ಟಾರ್, ಕರ್ನಾಟಕ ನಾಟಕ ಅಕಾಡೆಮಿ, ಚಾಲುಕ್ಯ ವಿಭಾಗ, ಕನ್ನಡಭವನ ಜೆ.ಸಿ ರಸ್ತೆ ಬೆಂಗಳೂರು-೫೬೦೦೦೨ ಇವರಿಗೆ ಡಿಸೆಂಬರ್ ೧೫ರೊಳಗಾಗಿ ಸಲ್ಲಿಸಬೇಕು. ಷರತ್ತು ಮತ್ತು ಹೆಚ್ಚಿನ ಮಾಹಿತಿಗಾಗಿ ದೂ:೦೮೦-೨೨೨೩೭೪೮೪ ಅಥವಾ ಅಕಾಡೆಮಿಯ ವೆಬ್‌ಸೈಟ್: www.karnatakanatakaacademy.com ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ಯಾದಗಿರಿ, ನವೆಂಬರ್ ೨೦ (ಕರ್ನಾಟಕ ವಾರ್ತೆ): ೨೦೧೯-೨೦ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್(ಎಸ್.ಎಸ್.ಪಿ) ನಲ್ಲಿ ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಂ ಮೀನ್ಸ್ ವಿದ್ಯಾರ್ಥಿ ವೇತನಕ್ಕಾಗಿ ಅಲ್ಪ ಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಲಾಗಿದೆ.
ವಿದ್ಯಾರ್ಥಿ ವೇತನದ ವೆಬ್‌ಸೈಟ್ http://ssp.postmatric.karnataka.gov.in ನಲ್ಲಿ ಇ-ಅಟೆಸ್ಟೇಶನ್ ಮಾಡಿ ಖಾತೆ ಸೃಜಿಸಿ, ಅರ್ಜಿ ಸಲ್ಲಿಸಬೇಕು. ನ್ಯಾಷನಲ್ ಸ್ಕಾಲರ್‌ಶಿಪ್ ಪೋರ್ಟಲ್ (ಎನ್‌ಎಸ್‌ಪಿ)ನಲ್ಲಿ ಅರ್ಜಿ ಸಲ್ಲಿಸಿರುವ ಅಲ್ಪಸಂಖ್ಯಾತರ ಸಮುದಾಯದ ಎಲ್ಲಾ ವಿದ್ಯಾರ್ಥಿಗಳು ಎಸ್.ಎಸ್.ಪಿಯಲ್ಲಿಯೂ ಸಹ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ. ಸಾಮಾನ್ಯ ಪದವಿಯ ಎಲ್ಲಾ ಕೋರ್ಸ್ಗಳು, ಸ್ನಾತಕೋತ್ತರ ಪದವಿಯ ಎಲ್ಲಾ ಕೋರ್ಸ್ಗಳಲ್ಲಿ, ಇಂಜಿನಿಯರಿAಗ್ ಹಾಗೂ ವೈದ್ಯಕೀಯ ಶಿಕ್ಷಣದ ಎಲ್ಲಾ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಇ- ಅಟೆಸ್ಟೇಶನ್ ಮಾಡುವುದು ಕಡ್ಡಾಯವಾಗಿರುತ್ತದೆ.
ಇ-ಅಟೆಸ್ಟೇಶನ್ ಮಾಡಿಸಿ ಅಲ್ಲಿ ಸಿಗುವ ಐಡಿ ಸಂಖ್ಯೆಯಿ0ದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಪಿಯುಸಿ, ಐಟಿಐ, ನರ್ಸಿಂಗ್ (ಜೆಎಎನ್‌ಎಮ್), ಪ್ಯಾರಾಮೆಡಿಕಲ್, ಡಿಪ್ಲೋಮಾ ಕೋರ್ಸ್ಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಇ-ಅಟೆಸ್ಟೇಶನ್ ಮಾಡುವ ಅಗತ್ಯ ಇರುವುದಿಲ್ಲ. ನೇರವಾಗಿ ತಮ್ಮ ಎಸ್‌ಎಟಿಎಸ್ ಐಡಿ ಸಂಖ್ಯೆಯಿ0ದ ನೇರವಾಗಿ ವಿದ್ಯಾರ್ಥಿವೇತನ ಖಾತೆ ಸೃಜಿಸಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಇಲಾಖೆ ವೆಬ್‌ಸೈಟ್ www.gokdom.kar.nic.in ವಿದ್ಯಾರ್ಥಿ ವೇತನದ ವೆಬ್‌ಸೈಟ್ http://ssp.postmatric.karnataka.gov.in ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ದೂ:೦೮೪೭೩-೨೫೩೨೩೫ ಸಂಪರ್ಕಿಸುವ0ತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...