ಮಂಗಳವಾರ, ನವೆಂಬರ್ 26, 2019

ಡಿ.೭ಕ್ಕೆ ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಸಭೆ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಮೂರನೇಯ ಅವಧಿಗೆ ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆ ಸಭೆಯನ್ನು ಡಿಸೆಂಬರ್ ೭ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕರೆಯಲಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಯುಷ್ಮಾನ್ ಕಾರ್ಡ್ ಪಡೆಯಲು ಮನವಿ
ಯಾದಗಿರಿ, ನವೆಂಬರ್ ೨೬ (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ– ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಬಿಪಿಎಲ್ ಕುಟುಂಬಗಳಿಗೆ ಒಂದು ವರ್ಷಕ್ಕೆ ೫ ಲಕ್ಷ ರೂಪಾಯಿಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ. ಸಾರ್ವಜನಿಕರು ಈ ಯೋಜನೆಯಡಿ ನೋಂದಾಯಿಸಿ ಲಾಭ ಪಡೆಯಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಮನವಿ ಮಾಡಿದ್ದಾರೆ.
ಎಪಿಎಲ್ ಕುಟುಂಬಗಳಿಗೆ ಸರ್ಕಾರಿ ಪ್ಯಾಕೇಜ್ ದರದ ಶೇ.೩೦ರಷ್ಟು ವೆಚ್ಚ ಲಭ್ಯವಿದ್ದು, ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ೧.೫೦ ಲಕ್ಷ ರೂಪಾಯಿ ಇರುತ್ತದೆ. ಈ ಯೋಜನೆಯಲ್ಲಿ ೧೬೫೦ ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸೆ ಲಭ್ಯವಿದೆ. ಹತ್ತಿರದÀ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ನಿಮ್ಮ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿ ಹಾಜರುಪಡಿಸಿ ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಕಾರ್ಡ್ನ್ನು ಪಡೆಯಬಹುದು. ಈ ಕಾರ್ಡ್ನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆ, ಶಹಾಪೂರ ಮತ್ತು ಸುರಪೂರ ತಾಲ್ಲೂಕು ಆಸ್ಪತ್ರೆಗಳು ಹಾಗೂ ವಡಿಗೇರಾ, ಸೈದಾಪೂರ, ಗುರುಮಠಕಲ್, ಅರಕೇರಾ ಬಿ., ಹುಣಸಗಿ, ದೋರನಹಳ್ಳಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಯಾದಗಿರಿ, ಶಹಾಪೂರ, ಸುರಪೂರ ನಗರ ಆರೋಗ್ಯ ಕೇಂದ್ರಗಳಲ್ಲಿ ೧೦ ರೂಪಾಯಿ ಶುಲ್ಕ ನೀಡಿ ಪಡೆಯಬಹುದು.
ಅಲ್ಲದೆ, ನಿಮ್ಮ ಹತ್ತಿರದಲ್ಲಿರುವ ಸೇವಾಸಿಂಧು ಕೇಂದ್ರಗಳಲ್ಲಿ ಕಾಗದದ ಕಾರ್ಡ್ಗೆ ೧೦ ರೂಪಾಯಿ ಹಾಗೂ ಪ್ಲಾಸ್ಟಿಕ್ ಕಾರ್ಡ್ಗೆ ೩೫ ರೂಪಾಯಿ ನೀಡಿ ಪಡೆದುಕೊಳ್ಳಬಹುದು. ಯಾದಗಿರಿ ತಹಸೀಲ್ ಕಚೇರಿ ಆವರಣದಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಕೂಡ ಆರೋಗ್ಯ ಕಾರ್ಡ್ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...