ಮಂಗಳವಾರ, ಡಿಸೆಂಬರ್ 31, 2019

ಹಿಂದುಳಿದ ವರ್ಗ ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಕೇವಲ ಲಿಂಕ್ ಇದ್ದಂತೆ
ಯಾದಗಿರಿ, ಡಿಸೆಂಬರ್ ೩೧ (ಕರ್ನಾಟಕ ವಾರ್ತೆ): ಐಎಎಸ್, ಕೆಎಎಸ್, ಬ್ಯಾಂಕಿ0ಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನವೆಂಬುದು ಪುಸ್ತಕದ ಮುಖಪುಟ ಅಥವಾ ವೆಬ್‌ಸೈಟ್ ಲಿಂಕ್ ಇದ್ದಂತೆ. ಅಭ್ಯರ್ಥಿಗಳೇ ಸ್ವತಃ ಲಿಂಕ್ ಕ್ಲಿಕ್ ಮಾಡಿ ಅಭ್ಯಾಸ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಎಎಸ್, ಕೆಎಎಸ್, ಬ್ಯಾಂಕಿAಗ್ ಇತ್ಯಾದಿ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ನೀಡುವ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾಸ್ ಮಾಡಲು ಅಭ್ಯರ್ಥಿಗಳು ಕೆಲವು ಅಭ್ಯಾಸಗಳನ್ನು ಮಾಡಿಕೊಳ್ಳಲೇಬೇಕು. ಇಂದಿನ ತಾಂತ್ರಿಕ ಯುಗದಲ್ಲಿ ವಿದ್ಯಾರ್ಥಿಗಳ ಅಂಗೈನಲ್ಲಿ ಜಗತ್ತು ಇದೆ. ಅಂತರ್ಜಾಲದಲ್ಲಿ ಎಲ್ಲಾ ವಿಷಯಗಳು ಸಿಗುತ್ತವೆ. ಆದರೆ, ಅದನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದರ ಬಗ್ಗೆ ಅರಿವಿರಬೇಕು. ಅಂತರ್ಜಾಲ ಮತ್ತು ಸಾಮಾಜಿಕ ಮಾಧ್ಯಮವನ್ನು ಒಳ್ಳೆಯದಕ್ಕೆ ಮಾತ್ರ ಬಳಸಿಕೊಳ್ಳಿ. ಪರೀಕ್ಷೆಗಳ ತಯಾರಿಗೆ ಆಸಕ್ತಿ ಮತ್ತು ಸಾಮರ್ಥ್ಯ ಇರುವ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುವಂತೆ ಅವರು ಸಲಹೆ ನೀಡಿದರು.
ವಿದ್ಯಾರ್ಥಿಗಳು ದಿನಪತ್ರಿಕೆಗಳನ್ನು ಓದುವುದನ್ನು ರೂಢಿಸಿಕೊಳ್ಳಬೇಕು. ಅದರಲ್ಲಿ ಮುಖ್ಯವಾಗಿ ಶಿಕ್ಷಣಕ್ಕೆ ಸಂಬAಧಿಸಿದ ವಿಷಯಗಳಿಗೆ ಆದ್ಯತೆ ನೀಡಬೇಕು. ಎಲ್ಲಾ ಪುಸ್ತಕಗಳನ್ನು ಖರೀದಿಸಲು ಸಾಧ್ಯವಿಲ್ಲ. ಹಾಗಾಗಿ, ಗ್ರಂಥಾಲಯಗಳಿಗೆ ಹೋಗಿ ಅಭ್ಯಾಸ ಮಾಡಬೇಕು. ಪಠ್ಯದ ಜೊತೆಗೆ ಮಹಾತ್ಮ ಗಾಂಧಿ, ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಸೇರಿದಂತೆ ಮಹನೀಯರ ಜೀವನ ಚರಿತ್ರೆ ಓದಬೇಕು ಎಂದು ಕಿವಿಮಾತು ಹೇಳಿದರು.
ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯದ ಅಪರ ಆಯುಕ್ತರಾದ ನಳಿನ್ ಅತುಲ್ ಅವರು ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರು ಕಡ್ಡಾಯವಾಗಿ ಭಾರತ ಸಂವಿಧಾನದ ಪ್ರಸ್ತಾವನೆ ಓದಬೇಕು. ಪ್ರಸ್ತಾವನೆಯಲ್ಲಿ ಸಂವಿಧಾನದ ಇಡೀ ಮೌಲ್ಯವನ್ನು ತಿಳಿಸಿಕೊಡಲಾಗಿದೆ. ಇದನ್ನು ಪರೀಕ್ಷೆಗಾಗಿ ಓದದೇ ಅರ್ಥೈಸಿಕೊಳ್ಳಬೇಕು. ಇದರ ಪ್ರತಿ ಶಬ್ದವನ್ನು ಬಾಯಿಪಾಠ ಮಾಡಿದರೂ ಒಳ್ಳೆಯದು ಎಂದು ಸಲಹೆ ನೀಡಿದರು.
ಪರೀಕ್ಷೆಗೆ ತಯಾರಿ ನಡೆಸುವವರು ಗುಂಪು ಚರ್ಚೆ ಮಾಡಬೇಕು. ಅಭ್ಯರ್ಥಿಗಳಲ್ಲಿ ಸತತ ಪ್ರಯತ್ನವಿದ್ದರೆ ಜಾತಿ, ಸಮುದಾಯ, ಶ್ರೀಮಂತ, ಬಡವ ಎಂಬ ಅಂಶಗಳು ಅಡ್ಡಿ ಬರುವುದಿಲ್ಲ. ಪ್ರಯತ್ನದಂತೆ ಫಲ ಸಿಗುತ್ತದೆ. ಸರಿಯಾಗಿ ತಯಾರಿ ಮಾಡಿಕೊಂಡರೆ ಯಾವುದೇ ಪರೀಕ್ಷೆಯನ್ನು ಕೂಡ ಎದುರಿಸಬಹುದು. ರ‍್ಯಾಂಕ್ ಬಗ್ಗೆ ವಿಚಾರ ಮಾಡಬಾರದು. ನಾನು ಐಎಎಸ್ ಪ್ರಾಥಮಿಕ ಪರೀಕ್ಷೆಯನ್ನು ಎರಡು ಸಲ ಬರೆದರೂ ಪಾಸ್ ಮಾಡಲಿಲ್ಲ. ಅಗತ್ಯ ತಯಾರಿ ಮಾಡದಿರುವುದು ಇದಕ್ಕೆ ಕಾರಣವಾಗಿತ್ತು. ಮೂರನೇ ಬಾರಿಗೆ ಸರಿಯಾಗಿ ತಯಾರಿ ಮಾಡಿಕೊಂಡು ಐಎಎಸ್ ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆಯನ್ನು ಪಾಸ್ ಮಾಡಿದೆ ಎಂದು ತಮ್ಮ ಅನುಭವವನ್ನು ಹಂಚಿಕೊAಡರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ ಅವರು ಮಾತನಾಡಿ, ಕುಟುಂಬ ಅಥವಾ ಸಂಬAಧಿಕರಲ್ಲಿ ಯಾರೊ ಸ್ಪರ್ಧಾತ್ಮಕ ಪರೀಕ್ಷೆ ಪಾಸ್ ಮಾಡಿದ್ದಾರೆ ಎನ್ನುವ ಕಾರಣಕ್ಕೆ ಐಎಎಸ್, ಕೆಎಎಸ್, ಇನ್ನಿತರೆ ಪರೀಕ್ಷೆಗಳನ್ನು ಬರೆಯಬಾರದು. ಸ್ಪರ್ಧಾತ್ಮಕ ಬರೆಯುವ ಅಭ್ಯರ್ಥಿಗಳು ಮೊದಲು ಮನಸ್ಸಿನಿಂದ ಸಿದ್ಧವಾಗಬೇಕು. ಕಲಿಯುವ ಛಲವಿದ್ದರೆ ಪರೀಕ್ಷೆಯಲ್ಲಿ ಭಾಷೆ ಅಡ್ಡಿಯಾಗುವುದಿಲ್ಲ. ಮಾತೃಭಾಷೆಯಲ್ಲಿಯೇ ಓದಿ ಅತ್ಯುನ್ನತ ಪರೀಕ್ಷೆಗಳನ್ನು ಬರೆದು ಯಶಸ್ವಿಯಾಗಿದ್ದಾರೆ. ನಿತ್ಯ ಇಂಗ್ಲಿಷ್ ದಿನಪತ್ರಿಕೆ, ಶಬ್ದಕೋಶ ಓದಬೇಕು. ಆತ್ಮವಿಶ್ವಾಸ, ದೃಢಸಂಕಲ್ಪ ಮಾಡಿದರೆ ಯಾವುದೇ ಭಾಷೆಯನ್ನು ಕಲಿಯಬಹುದು ಎಂದು ಸಲಹೆ ನೀಡಿದರು.
ಪ್ರತಿಯೊಂದು ಪರೀಕ್ಷೆಗೆ ಪಠ್ಯಕ್ರಮ ಇರುತ್ತದೆ. ಅದರಂತೆ ಪ್ರತಿದಿನ ಅಭ್ಯಾಸ ಮಾಡಿ ಪರೀಕ್ಷೆಗೆ ತಯಾರಿ ನಡೆಸಬೇಕು. ಸಾಮಾನ್ಯ ಜ್ಞಾನ ಮತ್ತು ಪ್ರಚಲಿತ ವಿದ್ಯಮಾನಗಳನ್ನು ತಿಳಿದುಕೊಳ್ಳುವುದು ಅತ್ಯವಶ್ಯ. ಸ್ಪರ್ಧಾತ್ಮಕ ಪರೀಕ್ಷೆಗಳು ಮ್ಯಾರಾಥಾನ್ ಓಟ ಇದ್ದಂತೆ. ಯಾರು ಚೆನ್ನಾಗಿ ಓಡುತ್ತಾರೊ ಅವರು ಗೆಲ್ಲುತ್ತಾರೆ ಎಂದು ಉದಾಹರಣೆಸಹಿತ ವಿದ್ಯಾರ್ಥಿಗಳಿಗೆ ತಿಳಿಸಿದರು.
ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಲೆಕ್ಕಾಧಿಕಾರಿ ವೆಂಕಟೇಶ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿ.ರೇವಣ್ಣ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿ ವ್ಯವಸ್ಥಾಪಕರಾದ ಸಾಬಯ್ಯ ಗುತ್ತೇದಾರ ಹಾಗೂ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.

ಮಕ್ಕಳ ಸಾಕ್ಷರತೆ ಹೆಚ್ಚಳದಿಂದ ಮೂಢನಂಬಿಕೆ ನಿರ್ಮೂಲನೆ
-:ಮುಕ್ಕಣ್ಣ ಕರಿಗಾರ
ಯಾದಗಿರಿ, ಡಿಸೆಂಬರ್ ೩೧ (ಕರ್ನಾಟಕ ವಾರ್ತೆ): ಮಕ್ಕಳ ಸಾಕ್ಷರತೆಯನ್ನು ಹೆಚ್ಚಿಸಿದರೆ ಮೂಢನಂಬಿಕೆಗಳನ್ನು ಹೋಗಲಾಡಿಸಬಹುದು. ಈ ಮೂಲಕ ಮಕ್ಕಳ ಸಂರಕ್ಷಣೆ ಮಾಡಬೇಕಾಗಿದೆ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೆ.ಎಸ್.ಆರ್.ಡಿ.ಪಿ.ಆರ್.ಯು- ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ಯುನಿಸೆಫ್ ಹೈದರಾಬಾದ್ ಸಂಯುಕ್ತಾಶ್ರಯದಲ್ಲಿ “ಕರ್ನಾಟಕ ಗ್ರಾಮ ಸ್ವರಾಜ್ ಅಧಿನಿಯಮ ಹಾಗೂ ಮಕ್ಕಳ ಸಂರಕ್ಷಣೆಯ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಹಾಗೂ ನಾಗರಿಕ ಸಂಸ್ಥೆಗಳ ಸಹಭಾಗಿತ್ವ” ಕುರಿತು ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳ ಗ್ರಾಮ ಸಭೆಗಳನ್ನು ನಡೆಸುವ ಮೂಲಕ ಅವರಿಗೆ ತಮ್ಮ ಅಭಿಪ್ರಾಯಗಳನ್ನು, ಸಮಸ್ಯೆಗಳನ್ನು ಮುಕ್ತವಾಗಿ ವ್ಯಕ್ತಪಡಿಸುವ ವಾತಾವರಣವನ್ನು ಕಲ್ಪಿಸಿ ಅವರಿಗೆಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸಬೇಕಾಗಿದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ತಿದ್ದುಪಡಿ ಹಿನ್ನಲೆಯಲ್ಲಿ ಮಕ್ಕಳ ಸಂರಕ್ಷಣೆಯ ಕಾರ್ಯ ವಿಧಾನಗಳ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಮತ್ತು ನಾಗರಿಕ ಸಂಘ- ಸಂಸ್ಥೆಗಳ ಸಹಭಾಗಿತ್ವ, ಸಮನ್ವಯತೆ, ಸಹಕಾರ ಮತ್ತು ಭಾಗವಹಿಸುವಿಕೆಯ ಮಂಡನೆ ಹಾಗೂ ಮಕ್ಕಳಿಗೆÀ ಸಂಬAಧಿಸಿದ ವಿವಿಧ ಕಾನೂನುಗಳ ಬಗ್ಗೆ ಸಂಕ್ಷಿಪ್ತ ಪರಿಚಯ ಮತ್ತು ಅದರ ಅನುಷ್ಠಾನದಲ್ಲಿ ವಿವಿಧ ಇಲಾಖೆಗಳ ಮತ್ತು ಅಧಿಕಾರಿಗಳ ಜವಾಬ್ದಾರಿ ಮತ್ತು ಪಾತ್ರಗಳ ಕುರಿತು ಮಂಡನೆ, ವಿಪತ್ತು ನಿರ್ವಹಣೆಯ ಕುರಿತು ಉಪನ್ಯಾಸ ಕಾರ್ಯಕ್ರಮ ಹಾಗೂ ಚರ್ಚೆಗಳು ನಡೆದವು.
ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆ ಕೊಪ್ಪಳ ಪ್ರಾದೇಶಿಕ ಸಂಯೋಜಕರಾದ ರಾಘವೇಂದ್ರ ಭಟ್, ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೇಂದ್ರದ ಯುನಿಸೆಫ್ ಸಂಯೋಜಕರಾದ ಡಾ.ಕೆ.ಲೆನಿನ್ ಬಾಬು ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಡಾ.ಹಣಮಂತರಾಯ ಕರಡಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದ್ಯಸರಾದ ಮಳಪ್ಪ ಎಸ್.ವಂಟೂರ್, ಬಾಲ ನ್ಯಾಯ ಮಂಡಳಿ ಸದಸ್ಯರಾದ ನಿರ್ಮಲಾದೇವಿ ಹೂಗಾರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ನಾಗರಿಕ ಸಂಘ- ಸಂಸ್ಥೆಗಳ ನಿರ್ದೇಶಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕೆ.ಎಸ್.ಆರ್.ಡಿ.ಪಿ.ಆರ್.ಯು.-ಮಕ್ಕಳ ಹಕ್ಕುಗಳು ಮತ್ತು ಆಡಳಿತ ಕೋಶ ಗದಗ ಸಂಯೋಜಕರಾದ ಮುತ್ತುರಾಜ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ಸೋಮವಾರ, ಡಿಸೆಂಬರ್ 30, 2019

ಕರಡು ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳ ಮುಖಂಡರೊAದಿಗೆ ಸಭೆ
ಜ.೧೫ರ ವರೆಗೆ ಮತದಾರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಡಿಸೆಂಬರ್ ೩೦ (ಕರ್ನಾಟಕ ವಾರ್ತೆ): ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಜಿಲ್ಲೆಯ ೩೬-ಸುರಪೂರ, ೩೭-ಶಹಾಪೂರ, ೩೮-ಯಾದಗಿರಿ ಹಾಗೂ ೩೯-ಗುರುಮಿಠಕಲ್ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಅರ್ಹತಾ ದಿನಾಂಕ: ೦೧-೦೧-೨೦೨೦ರಂತೆ ಪ್ರಕಟಿಸಿದ್ದು, ಕರಡು ಮತದಾರರ ಪಟ್ಟಿಯ ಬಗ್ಗೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ಜನವರಿ ೧೫ರ ವರೆಗೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕರಡು ಮತದಾರರ ಪಟ್ಟಿಯ ಕುರಿತು ರಾಜಕೀಯ ಪಕ್ಷಗಳ ಮುಖಂಡರೊAದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ಯಾದಗಿರಿ ಸಹಾಯಕ ಆಯುಕ್ತರ ಕಾರ್ಯಾಲಯ, ಸುರಪುರ, ಶಹಾಪುರ, ಯಾದಗಿರಿ ತಹಶೀಲ್ದಾರರ ಕಾರ್ಯಾಲಯಗಳು ಹಾಗೂ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ ಕಾರ್ಯಾಲಯಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಅಲ್ಲದೇ, ಕರಡು ಮತದಾರರ ಪಟ್ಟಿಯನ್ನು http://ceokarnataka.kar.nic.in ಹಾಗೂ ಜಿಲ್ಲೆಯ yadgir.nic.in  ಅಂತರ್ಜಾಲದಲ್ಲಿಯು ಸಹ ಪರಿಶೀಲಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಕರಡು ಮತದಾರರ ಪಟ್ಟಿಯಲ್ಲಿ ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪ್ರಕಟವಾದ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅರ್ಹತಾ ದಿನಾಂಕದAತೆ ಯುವಕರು, ಯುವತಿಯರು ಅಥವಾ ಸಾರ್ವಜನಿಕರು ಹೊಸದಾಗಿ ಹೆಸರು ಸೇರ್ಪಡೆಗಾಗಿ ನಮೂನೆ-೬ರಲ್ಲಿ ಅರ್ಜಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು ಅವರು ಸ್ಥಳಾಂತರ ಹೊಂದಿದಲ್ಲಿ, ಮೃತ ಹೊಂದಿದಲ್ಲಿ, ಹೆಸರು ಪುನರಾವರ್ತನೆಯಾಗಿದ್ದಲ್ಲಿ ಹೆಸರನ್ನು ತೆಗೆದು ಹಾಕಲು ನಮೂನೆ-೭ರಲ್ಲಿ, ಹೆಸರು ಇತ್ಯಾದಿ ತಿದ್ದುಪಡಿ ಬಯಸಿದಲ್ಲಿ ನಮೂನೆ-೮ರಲ್ಲಿ ಮತ್ತು ಹೆಸರು ವರ್ಗಾವಣೆ ಮಾಡಬೇಕಾದಲ್ಲಿ ನಮೂನೆ-೮ಎ ರಲ್ಲಿ ಸೂಕ್ತ ದಾಖಲೆಯೊಂದಿಗೆ ಅರ್ಜಿಗಳನ್ನು ಸಂಬAಧಪಟ್ಟ ಮತಗಟ್ಟೆ ಮಟ್ಟ ಅಧಿಕಾರಿ (ಬಿ.ಎಲ್.ಓ)ರವರಿಗೆ ಜನವರಿ ೧೫ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಸ್ವೀಕರಿಸಿದ ಹಕ್ಕು ಮತ್ತು ಆಕ್ಷೇಪಣೆಯ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ೨೦೨೦ರ ಜನವರಿ ೨೭ರಂದು ಕಾಲೋಚಿತಗೊಳಿಸಲಾಗುವುದು. ನಂತರ ಪುರವಣಿ ಪಟ್ಟಿಯನ್ನು ೨೦೨೦ರ ಫೆಬ್ರುವರಿ ೪ರಂದು ತಯಾರಿಸಿ, ಅಂತಿಮ ಮತದಾರರ ಪಟ್ಟಿಯನ್ನು ೨೦೨೦ರ ಫೆಬ್ರುವರಿ ೭ರಂದು ಪ್ರಕಟಿಸಲಾಗುವುದು ಎಂದು ಅವರು ವಿವರಿಸಿದರು.

ಲೋಕಸಭಾ, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯೇ ಅನ್ವಯವಾಗುತ್ತದೆ. ಮತದಾರರ ಪಟ್ಟಿ ದೋಷರಹಿತವಾಗಿದ್ದಷ್ಟು ಚುನಾವಣೆಗಳು ಸುಸೂತ್ರವಾಗಿ ನಡೆಯುತ್ತವೆ. ಹಾಗಾಗಿ, ನಕಲಿ ಮತದಾರರು ಸೇರಿದಂತೆ ಯಾವುದೇ ದೂರು, ಆಕ್ಷೇಪಣೆಗಳಿದ್ದಲ್ಲಿ ನಿಗದಿತ ಅವಧಿಯೊಳಗೆ ಸಂಬಧಿಸಿದ ಮತದಾರರ ನೋಂದಣಾಧಿಕಾರಿ/ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಸಲ್ಲಿಸುವಂತೆ ರಾಜಕೀಯ ಪಕ್ಷಗಳ ಮುಖಂಡರನ್ನು ಅವರು ಕೋರಿದರು.
೯.೮೫ ಲಕ್ಷ ಮತದಾರರು: ಕರಡು ಮತದಾರರ ಪಟ್ಟಿಯಲ್ಲಿ ಜಿಲ್ಲೆಯಲ್ಲಿ ಒಟ್ಟು ೯,೮೫,೨೭೧ ಮತದಾರರಿದ್ದು, ಈ ಪೈಕಿ ೪,೯೨,೪೦೧ ಪುರುಷ ಮತದಾರರು ಮತ್ತು ೪,೯೨,೮೭೦ ಮಹಿಳಾ ಮತದಾರರಿದ್ದಾರೆ. ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೭೦,೫೫೫, ಶಹಾಪುರ ೨,೩೦,೨೮೨, ಯಾದಗಿರಿ ೨,೩೯,೩೯೫ ಮತದಾರರಿದ್ದು, ಈ ಪಟ್ಟಿಯು ಶೇ.೧೦೦ರಷ್ಟು ಮತದಾರರ ಭಾವಚಿತ್ರ ಒಳಗೊಂಡಿದೆ. ಗುರುಮಠಕಲ್ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ೨,೪೫,೦೩೯ ಮತದಾರರಿದ್ದು, ಈ ಪಟ್ಟಿಯಲ್ಲಿ ಭಾವಚಿತ್ರವಿಲ್ಲದ ೧೩ ಜನ ಮತದಾರರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಸುರಪುರ ಕ್ಷೇತ್ರದಲ್ಲಿ ೫೪, ಶಹಾಪುರ ೨೮, ಯಾದಗಿರಿ ೧೦, ಗುರುಮಠಕಲ್ ೧೧ ಸೇರಿ ಒಟ್ಟು ೧೦೩ ಜನ ಸೇವಾ ಮತದಾರರಿದ್ದಾರೆ. ಈ ನಾಲ್ಕೂ ವಿಧಾನಸಭಾ ಕ್ಷೇತ್ರಗಳ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು ೭,೧೪೧ ಯುವ ಮತದಾರು ಸೇರ್ಪಡೆಯಾಗಿದ್ದಾರೆ. ಹೊಸದಾಗಿ ನೋಂದಣಿಯಾದ ಯುವ ಮತದಾರರು ಜನವರಿ ೨೫ರಂದು ನಡೆಯುವ ರಾಷ್ಟಿçÃಯ ಮತದಾರರ ದಿನಾಚರಣೆಯಂದು ಚುನಾವಣಾ ಗುರುತಿನ ಚೀಟಿ (ಎಪಿಕ್ ಕಾರ್ಡ್) ಪಡೆದುಕೊಳ್ಳಲು ಅವರು ತಿಳಿಸಿದರು.
ಮೂರು ದಿನ ಮಿಂಚಿನ  ನೋಂದಣಿ: ಜಿಲ್ಲೆಯ ಎಲ್ಲಾ ಮತಗಟ್ಟೆ ಕೇಂದ್ರಗಳಲ್ಲಿ ಜನವರಿ ೬, ೭ ಮತ್ತು ೮ರಂದು ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇರುವ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ನಮೂನೆ-೬ರಲ್ಲಿ ಸಂಬAಧಪಟ್ಟ ಬಿ.ಎಲ್.ಒ ರವರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳÄವಂತೆ ಅವರು ಕೋರಿದರು.
ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಮತದಾರರ ವಿವರ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಮತದಾರರ ಕರಡು ಪಟ್ಟಿಯನ್ನು ಡಿಸೆಂಬರ್ ೭ರಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ತಹಶೀಲ್ದಾರರ ಕಚೇರಿ ಮತ್ತು ಸಂಬAಧಿಸಿದ ಮತಗಟ್ಟೆ ಕೇಂದ್ರಗಳಲ್ಲಿ ಪ್ರಚುರಪಡಿಸಲಾಗಿತ್ತು. ಜಿಲ್ಲೆಯಲ್ಲಿ ಒಟ್ಟು ೧,೩೯೪ ಮತದಾರರು ತಮ್ಮ ಹೆಸರು ಸೇರ್ಪಡೆ ಮಾಡಿಕೊಂಡಿದ್ದರು. ಹಕ್ಕು ಮತ್ತು ಆಕ್ಷೇಪಣೆ ಸಂದರ್ಭದಲ್ಲಿ ಡಿಸೆಂಬರ್ ೭ರಿಂದ ೨೩ರವರೆಗೆ ಹೆಸರು ಸೇರ್ಪಡೆಗಾಗಿ ೨೫೦ ಅರ್ಜಿಗಳು ಸ್ವೀಕೃತವಾಗಿವೆ. ಇವುಗಳಲ್ಲಿ ೨೪೧ ಅರ್ಜಿಗಳು ಕ್ರಮಬದ್ಧವಾಗಿದ್ದು, ೯ ಅರ್ಜಿಗಳು ತಿರಸ್ಕೃತವಾಗಿವೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಡಿಸೆಂಬರ್ ೧೬ರಂದು ಪ್ರಕಟಿಸಿರುವ ಜಿಲ್ಲೆಯ ಕರಡು ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿಗಳು ರಾಜಕೀಯ ಪಕ್ಷಗಳ ಮುಖಂಡರಿಗೆ ವಿತರಿಸಿದರು.
ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ತಹಶೀಲ್ದಾರರಾದ ಜಗನ್ನಾಥರೆಡ್ಡಿ, ನಿಂಗಣ್ಣ ಎಸ್.ಬಿರಾದಾರ, ಚುನಾವಣೆ ಶಾಖೆಯ ಶಿರಸ್ತೇದಾರ್ ಪರಶುರಾಮ, ಖಲೀಲ್‌ಸಾಬ್, ಬಹುಜನ ಸಮಾಜ ಪಾರ್ಟಿ ಜಿಲ್ಲಾಧ್ಯಕ್ಷರಾದ ತಜಮುಲ್ ಹುಸೇನ್, ಜೆಡಿಎಸ್ ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷರಾದ ಶಾಂತಪ್ಪ ಡಿ.ಜಾಧವ್, ಬಿಜೆಪಿ ಯುವ ಘಟಕದ ಅಧ್ಯಕ್ಷ ಸೂಗೂರೇಶ ಮಾಲಿಪಾಟೀಲ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶಿವರಾಜ ದಾಸನಕೇರಿ ಅವರು ಸಭೆಯಲ್ಲಿ ಉಪಸ್ಥಿತರಿದ್ದರು.

ಶ್ರಮಯೋಗಿ ಪಿಂಚಣಿ ಪಡೆಯಲು ಹೆಸರು ನೋಂದಾಯಿಸಿ
-ರಘುವೀರ ಸಿಂಗ್ ಠಾಕೂರ್
ಯಾದಗಿರಿ, ಡಿಸೆಂಬರ್ ೩೦ (ಕರ್ನಾಟಕ ವಾರ್ತೆ): ಅಸಂಘಟಿತ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಭಾರತ ಸರ್ಕಾರವು “ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್” ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಈ ಯೋಜನೆಯಡಿ ಹೆಸರು ನೋಂದಾಯಿಸಿಕೊAಡು ಸದುಪಯೋಗ ಪಡೆಯಬೇಕು ಎಂದು ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಹೇಳಿದರು.
ಜಿಲ್ಲೆಯ ಮುದ್ನಾಳ ಗ್ರಾಮದಲ್ಲಿ ಇತ್ತೀಚೆಗೆ ಕಾರ್ಮಿಕ ಇಲಾಖೆ, ಕೇಂದ್ರಿಯ ಸರ್ಕಾರಿ ಬೀಡಿ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ.ಎಸ್.ವೈ.ಎ0)ಯೋಜನೆಯಡಿ ಅಸಂಘಟಿತ ವಲಯ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಮಾಹಿತಿ ನೀಡುವ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಅವರ ಮುಖಾಂತರ ಅಸಂಘಟಿತ ವಲಯದಲ್ಲಿ ಬರುವ ಇತರೆ ಕಾರ್ಮಿಕರನ್ನು ಈ ಯೋಜನೆಯಡಿ ಪಿಂಚಣಿ ಪಡೆಯುವಂತೆ ತಿಳಿವಳಿಕೆ ಮೂಡಿಸುವ ಉದ್ದೇಶದಿಂದ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಾದ್ಯಂತ ಇಲ್ಲಿಯವರೆಗೆ ೧,೬೪೧ಕ್ಕಿಂತ ಹೆಚ್ಚಿನ ಫಲಾನುಭವಿಗಳು ಈ ಯೋಜನೆಯಡಿ ನೋಂದÀಣಿಯಾಗಿರುತ್ತಾರೆ. ಗ್ರಾಮೀಣ ಪ್ರದೇಶದಲ್ಲಿ ವಿವಿಧ ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡಲು ಹೆಚ್ಚಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದರು.ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ಬಿ.ತಳವಾರ ಅವರು ಮಾತನಾಡಿ, ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ ೪೨ ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಗೃಹ ಆಧಾರಿತ ಕಾರ್ಮಿಕರು, ಬೀದಿಬದಿ ವ್ಯಾಪಾರಿಗಳು, ಬಿಸಿಯೂಟ ಸಿದ್ಧಪಡಿಸುವವರು, ಹಮಾಲಿಗಳು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಚಮ್ಮಾರರು, ಚಿಂದಿ ಆಯುವವರು, ಮನೆ ಕೆಲಸದವರು, ಅಗಸರು, ರಿಕ್ಷಾ
 ಚಾಲಕರು, ಭೂರಹಿತ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಕೃಷಿ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಚರ್ಮೋದ್ಯಮದ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಮತ್ತು ಇದೇ ರೀತಿ ಇತರೆ ವಿವಿಧ ವಲಯಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಅವರ ವಯೋವೃದ್ಧದ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಎಂಬ ಮಹತ್ವಾಕಾಂಕ್ಷಿ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಕೂಡಲೇ ಸಂಬAಧಿಸಿದ ವಲಯಗಳ ಕಾರ್ಮಿಕರು ತಪ್ಪದೇ ನೋಂದಾಯಿಸಿಕೊಳ್ಳಬೇಕು ಎಂದು ತಿಳಿಸಿದರು.
೬ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಅಪಾಯಕಾರಿ, ಅಪಾಯಕಾರಿ ಅಲ್ಲದ ಉದ್ದಿಮೆಗಳಲ್ಲಿ ತೊಡಗಿಸಿಕೊಳ್ಳದೆ ಅವರಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಕೇಂದ್ರಿಯ ಬೀಡಿ ಆಸ್ಪತ್ರೆಯ ಆರೋಗ್ಯಧಿಕಾರಿ ಡಾ.ಕೆ.ವಿಕ್ರಾಂತ್ ಮತ್ತು ವೆಂಕಟೇಶ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶಾರದಾ ಸಜ್ಜನ ಮತ್ತು ಪ್ರೀಯಾ ಸಜ್ಜನ, ಅಂಗನವಾಡಿ ಮೇಲ್ವಿಚಾರಕಿ ಶರಣಮ್ಮ, ಮುದ್ನಾಳ ಗ್ರಾಮದ ಅಂಗನವಾಡಿ ಮೇಲ್ವಿಚಾರಕಿ ರುಸೀಯಾ ಖಾಸಿಂ, ಕಾರ್ಮಿಕ ಇಲಾಖೆ ಚಂದ್ರಶೇಖರ ಬಂದಳ್ಳಿ, ಅಮೃತರಾವ್ ಕೊತ್ವಾಲ್,  ಕಾರ್ಮಿಕ ಇಲಾಖೆ ವಿವಿಧ ವಲಯಗಳ ಕಾರ್ಮಿಕರು ಕಾರ್ಯಕ್ರಮದಲ್ಲಿ ಇದ್ದರು.

ಭಾನುವಾರ, ಡಿಸೆಂಬರ್ 29, 2019

ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮ
ರಾಷ್ಟ್ರಕವಿ ಕುವೆಂಪು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ


ಯಾದಗಿರಿ, ಡಿಸೆಂಬರ್ 29 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಕವಿ ಕುವೆಂಪು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ. ರಜಪೂತ ಅವರು ವಿಶ್ವ ಮಾನವ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥರ ಅಸ್ತಂಗತರಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಮೂರು ದಿನಗಳ ಕಾಲ ಶೋಕಾರಣೆ ಆಚರಿಸಲು ಘೋಷಿಸಿದ ಪ್ರಯುಕ್ತ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು. ಇದಕ್ಕೂ ಮೊದಲು ಒಂದು ನಿಮಿಷ ಮೌನಾಚರಣೆಯನ್ನು ಮಾಡಲಾಯಿತು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಕಡ್ಡಿ, ಲಿಂಗೇರಿ ಕೊನಪ್ಪ ಪದವಿ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ಜ್ಯೋತಿಲತಾ ತಡಿಬಿಡಿ ಮಠ ಹಾಗೂ ಶುಭಂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಗುರುಪ್ರಸಾದ ವೈದ್ಯ. ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಆರ್. ವಿ. ಪ್ರೌಢಶಾಲೆಯ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ಶುಕ್ರವಾರ, ಡಿಸೆಂಬರ್ 27, 2019

ನಾಳೆ ವಿದ್ಯುತ್ ವ್ಯತ್ಯಯ
ಯಾದಗಿರಿ, ಡಿಸೆಂಬರ್ ೨೭ (ಕರ್ನಾಟಕ ವಾರ್ತೆ): ೧೧ ಕೆವಿ ವಿದ್ಯುತ್ ಮಾರ್ಗಗಳ ಐ.ಪಿ.ಡಿ.ಎಸ್ ಕಾಮಗಾರಿ ಕೆಲಸ ಕೈಗೊಳ್ಳುತ್ತಿರುವುದರಿಂದ ಯಾದಗಿರಿ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಡಿಸೆಂಬರ್ ೨೯ರಂದು ಬೆಳಿಗ್ಗೆ ೯ರಿಂದ ಸಂಜೆ ೫ ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇAಡಸ್ಟಿçÃಯಲ್ ಏರಿಯಾ (ಎಫ್-೪) ವ್ಯಾಪ್ತಿಯ ಮುಂಡರಗಿ ಇಂಡಸ್ಟಿçÃಯಲ್ ಏರಿಯಾ ಮತ್ತು ವರ್ಕನಹಳ್ಳಿ ಇಂಡಸ್ಟಿçÃಯಲ್ ಏರಿಯಾ ಹಾಗೂ ಮಾತಾ ಮಾಣಿಕೇಶ್ವರಿ ನಗರ (ಎಫ್-೧) ವ್ಯಾಪ್ತಿಯ ಶಹಜೀವನ್ ಶಾ ದರ್ಗಾ, ಅನಪೂರ ಮೌಲಾಲಿ ಲೇಔಟ್, ಆದರ್ಶ ನಗರ, ಹೊಸಳ್ಳಿ ಕ್ರಾಸ್ ಮತ್ತು ರಾಘವೇಂದ್ರ ಸ್ವಾಮಿ ದೇವಸ್ಥಾನ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಗ್ರಾಹಕರು ಜೆಸ್ಕಾಂನೊAದಿಗೆ ಸಹಕರಿಸಬೇಕಾಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಡಿ.೩೦ರಂದು ಉದ್ಘಾಟನಾ ಸಮಾರಂಭ
ಯಾದಗಿರಿ, ಡಿಸೆಂಬರ್ ೨೭ (ಕರ್ನಾಟಕ ವಾರ್ತೆ): ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ವತಿಯಿಂದ ೨೦೧೮-೧೯ನೇ ಸಾಲಿನ ಕೆಕೆಆರ್‌ಡಿಬಿ ಯೋಜನೆಯಡಿಯಲ್ಲಿ ಯಾದಗಿರಿ ತಾಲ್ಲೂಕಿನ ಹೆಡಗಿಮದ್ರಾ ಗ್ರಾಮದಲ್ಲಿ ೩೨ ಲಕ್ಷ ರೂ. ವೆಚ್ಚದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮೂರು ಕೋಣೆಗಳು ಮತ್ತು ಕಂಪೌAಡ್ ಗೋಡೆ ನಿರ್ಮಾಣದ ಹಾಗೂ ರಾಷ್ಟಿçÃಯ ಹೆದ್ದಾರಿಗಳ ೨೦೧೬-೧೭ನೇ ಸಾಲಿನ ಕೇಂದ್ರ ರಸ್ತೆ ನಿಧಿ ಯೋಜನೆಯಡಿಯಲ್ಲಿ ಯಾದಗಿರಿ ತಾಲ್ಲೂಕಿನ ಮುದ್ನಾಳ-ಹೆಡಗಿಮದ್ರಾ ವಾಯಾ ತಳಕ್ ತಾಲ್ಲೂಕು ಗಡಿಯವರೆಗಿನ (೮ ಕಿ.ಮೀ ದಿಂದ ೨೦ ಕಿ.ಮೀ ವರೆಗೆ) ೫೦೦ ಲಕ್ಷ ರೂ. ವೆಚ್ಚದ ರಸ್ತೆ ಸುಧಾರಣೆಯ ಉದ್ಘಾಟನಾ ಸಮಾರಂಭವನ್ನು ಡಿಸೆಂಬರ್ ೩೦ರಂದು ಹೆಡಗಿಮದ್ರಾ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಬಿ.ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ, ಠಾಣಗುಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾರದಾ ರಾಚಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅನೀತಾಬಾಯಿ ಸುರೇಶ ಹಾಗೂ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಲಲಿತಮ್ಮ ಮರೆಪ್ಪ ಅವರು ಅತಿಥಿಗಳಾಗಿ ಪಾಲ್ಗೊಳ್ಳುವರು.
ದರಪಟ್ಟಿ ಆಹ್ವಾನ
ಯಾದಗಿರಿ, ಡಿಸೆಂಬರ್ ೨೭ (ಕರ್ನಾಟಕ ವಾರ್ತೆ): ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕಚೇರಿಗೆ ಅವಶ್ಯಕತೆ ಇರುವ ಪೀಠೋಪಕರಣಗಳನ್ನು ಖರೀದಿಸಲು ಅರ್ಹ ಸರಬರಾಜು ಸಂಸ್ಥೆಗಳಿAದ ದರಪಟ್ಟಿ ಆಹ್ವಾನಿಸಲಾಗಿದೆ.
ಆಸಕ್ತ ಸಂಸ್ಥೆಯವರು ಜನವರಿ ೨ರಂದು ಸಂಜೆ ೪ ಗಂಟೆಯೊಳಗಾಗಿ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಾರ್ಯಾಲಯಕ್ಕೆ ದರಪಟ್ಟಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ಕಚೇರಿಯಿಂದ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಜಿಲ್ಲಾ ಮಟ್ಟದ “ಮಕ್ಕಳ ಸಂಸತ್” ಕಾರ್ಯಕ್ರಮ
ಯಾದಗಿರಿ, ಡಿಸೆಂಬರ್ ೨೭ (ಕರ್ನಾಟಕ ವಾರ್ತೆ): ಮಕ್ಕಳು ಸ್ವತಃ ತಮ್ಮನ್ನು ಕಾಡುತ್ತಿರುವ ಸಮಸ್ಯೆಗಳನ್ನು ಗುರುತಿಸಿ ಮಾಡಿದ ಪಟ್ಟಿಯನ್ನು ಜನಪ್ರತಿನಿಧಿಗಳಿಗೆ ತಲುಪಿಸಿ, ಆ ಸಮಸ್ಯೆಗಳು ವಿಧಾನಸಭೆಯನ್ನು ಪ್ರತಿಧ್ವನಿಸುವಂತೆ ಮಾಡುವ ಉದ್ಧೇಶದಿಂದ ಮಕ್ಕಳ ಸಂಸತ್ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಹೇಳಿದರು.
ತಾಲ್ಲೂಕಿನ ಕಂದಕೂರÀ ಗ್ರಾಮದ ಎಸ್.ಎಲ್.ವಿ ಮೆಮೋರಿಯಲ್ ಶಾಲೆಯಲ್ಲಿ ಇತ್ತೀಚೆಗೆ ಕರ್ನಾಟಕ ಮಕ್ಕಳ ಹಕ್ಕುಗಳ ನಿಗಾ ಕೇಂದ್ರ, ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ಹಾಗೂ ಅನಂತ ಸೇವಾ ಟ್ರಸ್ಟ್ ಸಂಯುಕ್ತಾಶ್ರದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ “ಮಕ್ಕಳ ಸಂಸತ್” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ರಾಜ್ಯದ ವಿವಿಧ ಭಾಗಗಳಲ್ಲಿನ ಮಕ್ಕಳ ಯಾವ ಸಮಸ್ಯೆ, ಬೇಡಿಕೆಗಳನ್ನು ವಿಧಾನ ಪರಿಷತ್ತು ಮತ್ತು ವಿಧಾನ ಸಭೆಯಲ್ಲಿ ಚರ್ಚೆಗೆ ಜನಪ್ರತಿನಿಧಿಗಳು ತೆಗೆದುಕೊಳ್ಳಬೇಕು? ಬಾಲ್ಯ ವಿವಾಹ, ಬಾಲ ಕಾರ್ಮಿಕ, ಜೀತ ಪದ್ಧತಿ, ಮಕ್ಕಳ ಮೇಲೆ ಆಗುವ ಲೈಂಗಿಕ ದೌರ್ಜನ್ಯಗಳು, ಕಾಣೆಯಾದ ಮಕ್ಕಳ ಇಂತಹ ಹಲವಾರು ವಿಚಾರವಾಗಿ ಮಕ್ಕಳೊಡನೆ ಸಮಾಲೋಚನೆ ನಡೆಸಲಾಗುತ್ತಿದೆ. ಜಿಲ್ಲಾ ಮಟ್ಟದಲ್ಲಿ ಮಕ್ಕಳೇ ಗುರುತಿಸುವ ಸಮಸ್ಯೆಗಳನ್ನು ರಾಜ್ಯ ಮಟ್ಟದ ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಜೊತೆ ಮಕ್ಕಳೆ ಚರ್ಚಿಸುವ ಅವಕಾಶವನ್ನು ಕಲ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮಿಕೊಳ್ಳಲಾಗಿದೆ. ಮಕ್ಕಳು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. 
ದೇಶದಲ್ಲಿ ೨೦೧೧ರ ಜನಗಣತಿಯಂತೆ ಸುಮಾರು ೪೭ ಕೋಟಿಯಷ್ಟು ಮಕ್ಕಳಿದ್ದು, ಅವರಲ್ಲಿ ಹದಿವಯಸ್ಕರ (೧೦ ರಿಂದ ೧೮ ವರ್ಷದವರು) ಪ್ರಮಾಣ ಸುಮಾರು ಶೇ.೪೯ರಷ್ಟು. ಈ ಗುಂಪಿನ ಮಕ್ಕಳಲ್ಲಿ ಅದರಲ್ಲೂ ಹೆಣ್ಣು ಮಕ್ಕಳಲ್ಲಿ ಅಪೌಷ್ಟಿಕತೆ, ರಕ್ತಹೀನತೆ ಈಗಲೂ ಅಪಾಯಕಾರಿ ಮಟ್ಟದಲಿಯೇ ಇದೆ. ಜೊತೆಗೆ ಹದಿವಯಸ್ಕರನ್ನು ಬಲವಂತವಾಗಿ ಬಾಲ್ಯವಿವಾಹಕ್ಕೀಡು ಮಾಡುವುದು, ಸಾಗಣೆ, ಮಾರಾಟಕ್ಕೆ ಗುರಿಯಾಗಿಸುವುದು, ದುಡಿಮೆಗೆ ದೂಡುವುದು, ಸಮಾಜ ವಿರೋಧಿ ಕೃತ್ಯಗಳಿಗೆ ಸೆಳೆಯುವುದು ಮೊದಲಾದವು ಜರುಗುತ್ತಿವೆ. ಈ ದೇಶದ ಮಾನವ ಸಂಪನ್ಮೂಲವನ್ನು ರಕ್ಷಿಸಿ, ಅವರನ್ನು ಉತ್ತಮ ಮಾರ್ಗದಲ್ಲಿ ನಡೆಸಿದಲ್ಲಿ ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ಬಿ.ತಳವಾರ ಅವರು ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆ ಭವಿಷ್ಯದಲ್ಲಿ ನೆರವಾಗಲಿದೆ. ಆದ್ದರಿಂದ ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರು ಈ ಯೋಜನೆಯಡಿ ನೋಂದಾಯಿಸಿಕೊAಡು ಕಾರ್ಮಿಕ ಇಲಾಖೆಯಿಂದ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ಮಹಾಲಕ್ಷಿö್ಮÃ ಸಜ್ಜನ್ ಅವರು ಮಾತನಾಡಿ, ಕೋಟ್ಪಾ-೨೦೦೩ ಕಾಯ್ದೆಯಡಿಯಲ್ಲಿ ಸೆಕ್ಷನ್ ೪, ೫, ೬, ೬ಎ, ೬ಬಿ ಮತ್ತು ೭ರ ಪ್ರಕಾರ ಸಂಬAಧಿಸಿದ ಕಾಯ್ದೆಗಳನುಸಾರ ಹೋಟೆಲ್, ರೆಸ್ಟೊರೆಂಟ್, ಬಾರ್, ಧಾಬಾ, ಅಂಗಡಿಗಳಲ್ಲಿ ಮತ್ತು ಶಾಲಾ-ಕಾಲೇಜು ಪ್ರದೇಶದ ೧೦೦ ಮೀಟರ್ ಅಂತರದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕಿಗೆ ಸಂಬAಧಿಸಿದ ಉತ್ಪನ್ನಗಳನ್ನು ಬಹಿರಂಗವಾಗಿ ಮಕ್ಕಳಿಂದ ಮಾರುವುದಕ್ಕೆ ಪ್ರಚೋದನೆ ನೀಡುವುದು, ದುಡಿಸಿಕೊಳ್ಳುವುದು ಮತ್ತು ಸೇದುವುದು ಕಾನೂನಿನ ಪ್ರಕಾರ ನಿಷೇಧಿಸಲಾಗಿರುತ್ತದೆ. ನಿಯಮಗಳನ್ನು ಉಲ್ಲಂಘಿಸಿದಲ್ಲಿ ದಂಡ ವಿಧಿಸುವುದರ ಜೊತೆಗೆ ಶಿಕ್ಷೆಗೆ ಒಳಪಡಬೇಕಾಗುತ್ತದೆ ಎಂದು ತಿಳಿವಳಿಕೆ ನೀಡಿದರು.
ಅನಂತ ಸೇವಾ ಟ್ರಸ್ಟ್ ಅಧ್ಯಕ್ಷರಾದ ಶರಣಪ್ಪ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಶಿಕ್ಷಕರಾದ ಎಸ್.ಎಮ್.ಬೋಥಾಲ್ ಉಪಸ್ಥಿತರಿದ್ದರು.

ಗುರುವಾರ, ಡಿಸೆಂಬರ್ 26, 2019

ಜಿಲ್ಲಾ ಮಟ್ಟದ ಯುವಜನೋತ್ಸವ
ಯುವಜನರಲ್ಲಿರುವ ಕಲಾಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ
-:ರಾಜಶೇಖರಗೌಡ ಪಾಟೀಲ್ ವಜ್ಜಲ್
ಯಾದಗಿರಿ, ಡಿಸೆಂಬರ್ 26 (ಕರ್ನಾಟಕ ವಾರ್ತೆ): ಗ್ರಾಮೀಣ ಕ್ರೀಡೆಗಳು ಹಾಗೂ ವಿವಿಧ ಕಲಾ ಚಟುವಟಿಕೆಗಳು ದೇಶದ ಸಂಸ್ಕøತಿಯ ಪ್ರತೀಕವಾಗಿವೆ. ಯುವ ಜನರಲ್ಲಿ ಸುಪ್ತವಾಗಿರುವ ಇಂತಹ ಕಲಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವಲ್ಲಿ ಯುವಜನೋತ್ಸವದಂತಹ ಕಾರ್ಯಕ್ರಮಗಳು ಪೂರಕವಾಗುತ್ತವೆ ಎಂದು ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಹೇಳಿದರು.
  ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಇತ್ತೀಚೆಗೆ ಗ್ರಾಮೀಣ ಕ್ರೀಡೆಗಳು ಮತ್ತು ಕಲೆಗಳು ಮರೆಯಾಗುತ್ತಿವೆ. ಇವುಗಳನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಯುವಜನೋತ್ಸವ ಕಾರ್ಯಕ್ರಮಗಳಿಂದ ಯುವಕರಲ್ಲಿನ ಪ್ರತಿಭೆಗಳು ಹೊರಬರಲಿ ಎಂದು ಆಶಯ ವ್ಯಕ್ತಪಡಿಸಿದ ಅವರು, ಯುವಜನೋತ್ಸವದಂತಹ ಕಾರ್ಯಕ್ರಮಗಳು ನೆಪ ಮಾತ್ರಕ್ಕೆ ಆಯೋಜಿಸದೆ ಯುವ ಜನರ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯಕ್ರಮವಾಗಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮಲ್ಲಿರುವ ಪ್ರತಿಭೆಯನ್ನು ಪ್ರದರ್ಶಿಸಿ, ರಾಜ್ಯಮಟ್ಟದಲ್ಲಿ ಜಿಲ್ಲೆಯ ಹೆಸರು ತರುವ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.
ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಟಿ.ಎನ್.ಭೀಮುನಾಯಕ್ ಮಾತನಾಡಿ, ರಾಜ್ಯದಲ್ಲಿ ಯಾದಗಿರಿ ಜಿಲ್ಲೆಯು ಹಿಂದುಳಿದ ಜಿಲ್ಲೆಯೆಂದು ಬಿಂಬಿಸಿಕೊಂಡಿದೆ. ಯುವ ಜನೋತ್ಸವದಂತಹ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯ ಯುವ ಜನರ ಕಲಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಬೇಕು. ಈ ದೇಶದ ಭವಿಷ್ಯ ಯುವಜನರ ಮೇಲಿದೆ. ಅಂತಹ ಯುವಕರಲ್ಲಿರುವ ಪ್ರತಿಭೆಗಳನ್ನು ಗುರುತಿಸುವ ಕಾರ್ಯವಾಗಬೇಕು ಎಂದು ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಚನ್ನಬಸಪ್ಪ ಕುಳಗೇರಿ ಮಾತನಾಡಿ, ಯುವಜನೋತ್ಸವದಲ್ಲಿ ಶಾಸ್ತ್ರೀಯ ನೃತ್ಯ, ಶಾಸ್ತ್ರೀಯ ವಾದ್ಯ, ಶಾಸ್ತ್ರೀಯ ಗಾಯನ, ಆಶುಭಾಷಣ, ಏಕಾಂಕ ನಾಟಕ, ಜಾನಪದ ಗೀತೆ, ಜಾನಪದ ನೃತ್ಯ, ಭರತನಾಟ್ಯ, ತಬಲಾ, ಸಿತಾರ್, ಕೊಳಲು, ವೀಣೆ, ಹಾರ್ಮೋನಿಯಂ, ಗಿಟಾರ್, ಮೃದಂಗಮ್ ಹಾಗೂ ಕರ್ನಾಟಕ ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ಮನೋಹರ್, ತಾಲ್ಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಹಣಮಂತ, ಕ್ರೀಡಾ ಇಲಾಖೆಯ ಅಧೀಕ್ಷಕ ಗೋವಿಂದಪ್ಪ ಜಿ. ಅವರು ಉಪಸ್ಥಿತರಿದ್ದರು.

ಸರಕಾರ ಹಾಗೂ ಆಯೋಗದ ಲಾಂಛನ, ಹೆಸರು ಬಳಸಿದರೆ ಕ್ರಮ
ಯಾದಗಿರಿ, ಡಿಸೆಂಬರ್ 26 (ಕರ್ನಾಟಕ ವಾರ್ತೆ): ರಾಜ್ಯ ಮತ್ತು ಕೇಂದ್ರ ಸರಕಾರಗಳ ಸಂಸ್ಥೆಗಳು, ಅರೆ ನ್ಯಾಯಿಕ ಸಂಸ್ಥೆಗಳಾದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೋಲುವಂತಹ ಲಾಂಛನ ಹಾಗೂ ಹೆಸರುಗಳನ್ನು ಖಾಸಗಿ ಸಂಘಟನೆ, ಸಂಘ-ಸಂಸ್ಥೆ, ಕಂಪನಿ, ವ್ಯಕ್ತಿಗಳು ಉಪಯೋಗಿಸಿದರೆ ಕಲಂ 3, 4, ಮತ್ತು 6 ರ Emblems and Names (prevention of improper use) Act  1950 ಪ್ರಕಾರ ಅಪರಾಧವಾಗುತ್ತದೆ. ಒಂದು ವೇಳೆ ಲಾಂಛನ ಮತ್ತು ಹೆಸರುಗಳನ್ನು ಉಪಯೋಗಿಸಿದರೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾರಿಶಕ್ತಿ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ
ಯಾದಗಿರಿ, ಡಿಸೆಂಬರ್ 26 (ಕರ್ನಾಟಕ ವಾರ್ತೆ): ಭಾರತ ಸರ್ಕಾರವು 2019-20ನೇ ಸಾಲಿನಲ್ಲಿ “ನಾರಿಶಕ್ತಿ ಪುರಸ್ಕಾರ” ಪ್ರಶಸ್ತಿಗಳನ್ನು ನೀಡಲು ಅರ್ಹ ಮಹಿಳೆ, ಸಂಘ- ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ವೆಬ್‍ಸೈಟ್: www.narishaktipuraskar.wcd.gov.in ನಲ್ಲಿ ಜನವರಿ 7ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜನವರಿ 7ರಂದು ಯುವಜನ ಮೇಳ: ನೋಂದಣಿಗೆ ಸೂಚನೆ
ಯಾದಗಿರಿ, ಡಿಸೆಂಬರ್ 26 (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ 2019-20ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜನವರಿ 7ರಂದು ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, 15ರಿಂದ 35 ವರ್ಷದೊಳಗಿನ ಯುವಕ- ಯುವತಿಯರು ಭಾಗವಹಿಸಬಹುದು.
ಸ್ಪರ್ಧೆಗಳ ವಿವರ: ಕೋಲಾಟ (12 ಜನ ಗುಂಪು ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ), ಡೊಳ್ಳು ಕುಣಿತ (10 ಜನರಿಗೆ) ದೊಡ್ಡಾಟ (10 ಜನರ ಗುಂಪು), ಜಾನಪದ ನೃತ್ಯ (12 ಜನರ ಗುಂಪು), ಜನಪದ ಗೀತೆ (ವೈಯಕ್ತಿಕ ಮತ್ತು ಗುಂಪು), ಭಜನೆ ಪದ (12 ಜನ), ಭಾವಗೀತೆ (2), ತಬಲಾ ವಾದ್ಯ (ವೈಯಕ್ತಿಕ), ಹಾರ್ಮೋನಿಯಂ (ವೈಯಕ್ತಿಕ), ಸಣ್ಣಾಟ (12 ಜನ), ವೀರಗಾಸೆ (12 ಜನ), ಗೀಗೀಪದ (10 ಜನ) ಜೋಳ ಬೀಸುವ/ಕುಟ್ಟುವ ಪದ (5 ಜನ), ಸೋಬಾನ ಪದ (12 ಜನ), ಶಾಸ್ತ್ರೀಯ ಸಂಗೀತ (6 ಜನ), ಚರ್ಮವಾದ್ಯ ಮೇಳ, ಏಕ ಪಾತ್ರಾಭಿನಯ.
ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಕಲಾ ತಂಡಗಳು, ಯುವಕ ಸಂಘಗಳ ಸದಸ್ಯರುಗಳು ಕೂಡ ಭಾಗವಹಿಸಬಹುದು. ವಯಸ್ಸಿನ ಬಗ್ಗೆ ದೃಢೀಕರಣ ಪ್ರಮಾಣ ಪತ್ರ ತರತಕ್ಕದ್ದು. ಯುವಜನ ಮೇಳದಲ್ಲಿ ಭಾಗವಹಿಸುವ ಕಲಾವಿದರಿಗೆ ದಿನಭತ್ಯೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯವಿದ್ದು, ಬ್ಯಾಂಕ್ ಪಾಸ್‍ಬುಕ್ ಮತ್ತು ಆಧಾರ್ ಕಾರ್ಡ್ ಜಿರಾಕ್ಸ್ ಪ್ರತಿ ಕಡ್ಡಾಯವಾಗಿ ತರತಕ್ಕದ್ದು. ಜಿಲ್ಲಾ ಮಟ್ಟದಲ್ಲಿ ಯುವಜನ ಮೇಳದಲ್ಲಿ ವೈಯಕ್ತಿಕ ಪ್ರಥಮ ಸ್ಥಾನ ಮತ್ತು ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಬಂದವರಿಗೆ ರಾಜ್ಯ ಮಟ್ಟದ ಯುವಜನ ಮೇಳಕ್ಕೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ:9945626104, 9886675263 ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಚನಬಸಪ್ಪ ಕುಳಗೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಭತ್ತ ಖರೀದಿ ಕೇಂದ್ರಗಳ ಸ್ಥಾಪನೆ
ಯಾದಗಿರಿ, ಡಿಸೆಂಬರ್ 26 (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 2019-20ನೇ ಸಾಲಿನಲ್ಲಿ ಭತ್ತ ಖರೀದಿಸಲು ಜಿಲ್ಲೆಯಲ್ಲಿ ಮೂರು ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ತಿಳಿಸಿದ್ದಾರೆ.
ಪ್ರತಿ ಕ್ವಿಂಟಲ್ ಭತ್ತ  (ಸಾಮಾನ್ಯ)ಕ್ಕೆ 1815 ರೂ. ಮತ್ತು ಭತ್ತ  (ಗ್ರೇಡ್ ಎ) 1835 ರೂ. ದರ ನಿಗದಿಪಡಿಸಿದೆ. ಜಿಲ್ಲೆಗೆ ಕರ್ನಾಟಕ ಆಹಾರ ನಾಗರಿಕ ಸರಬರಾಜು ನಿಗಮ ನಿಯಮಿತ, ಯಾದಗಿರಿ (ಕೆಎಫ್‍ಸಿಎಸ್‍ಸಿ) ಸಂಗ್ರಹಣಾ ಮೂಲಕ ರೈತರಿಂದ ಭತ್ತ ಖರೀದಿಸಲು ನಿಯೋಜಿಸಲಾಗಿದೆ. ಯಾದಗಿರಿ ನಗರದ ಎಪಿಎಂಸಿ ಪ್ರದೇಶದಲ್ಲಿರುವ ಕೆಎಫ್‍ಸಿಎಸ್‍ಸಿ ಸಗಟು ಗೋದಾಮು, ಶಹಾಪೂರ ನಗರದ ಯಾದಗಿರಿ ರಸ್ತೆಯಲ್ಲಿರುವ ಟಿಎಪಿಸಿಎಂಎಸ್ ಸಗಟು ಗೋದಾಮು ಮತ್ತು ಸುರಪುರ ನಗರದ ಮಹ್ಮದ್ ಮುಸಾ ಸಾಬ ದಖನಿ ವೆಂಕಟಪೂರ ಕೆಎಫ್‍ಸಿಎಸ್‍ಸಿ ಸಗಟು ಗೋದಾಮುಗಳಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ.
ಈ ಖರೀದಿ ಕೇಂದ್ರಗಳಲ್ಲಿ ಆಯಾ ತಾಲ್ಲೂಕಿನ ರೈತರು ಡಿಸೆಂಬರ್ 30ರಿಂದ ಜನವರಿ 10ರವರೆಗೆ ಹೆಸರು ನೋಂದಾಯಿಸಬಹುದಾಗಿದೆ. ರೈತರ ನೋಂದಣಿ ಕಾರ್ಯ ಮುಗಿದ ನಂತರ ಜಿಲ್ಲೆಯಲ್ಲಿ ಲಭ್ಯವಿರುವ ರೈಸ್ ಮಿಲ್‍ಗಳಲ್ಲಿ ರೈತರ ನೋಂದಣಿಗೆ ಅನುಗುಣವಾಗಿ ಜಿಲ್ಲೆಯಾದ್ಯಂತ ಖರೀದಿಸಲು ಕ್ರಮ ವಹಿಸಲಾಗುವುದು. ರೈತರು ಕಡ್ಡಾಯವಾಗಿ ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿರುವ ನೋಂದಣಿ ಸಂಖ್ಯೆ ಮತ್ತು ತಮ್ಮ ಐಎಫ್‍ಎಸ್‍ಸಿ ಕೋಡ್ ಹೊಂದಿರುವ ಬ್ಯಾಂಕ್ ಪಾಸ್‍ಬುಕ್ ಪ್ರತಿ ನೀಡಿ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಮಂಗಳವಾರ, ಡಿಸೆಂಬರ್ 24, 2019

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತು ಕಾನೂನು ಜಾಗೃತಿ
ಅಪರಿಚಿತ ಮೊಬೈಲ್ ಕರೆ, ಸಂದೇಶಗಳ ಬಗ್ಗೆ ಎಚ್ಚರವಿರಲಿ
-ನ್ಯಾಯಾಧೀಶರಾದ ನಾಮದೇವ ಕೆ. ಸಾಲಮಂಟಪಿ
ಯಾದಗಿರಿ, ಡಿಸೆಂಬರ್ ೨೪ (ಕರ್ನಾಟಕ ವಾರ್ತೆ): ಮೊಬೈಲ್ ಕರೆ, ಚಾಟಿಂಗ್, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯ ಮಾಡಿಕೊಳ್ಳುವ ಅಪರಿಚಿತ ವ್ಯಕ್ತಿಗಳ ಬಗ್ಗೆ ಮಹಿಳೆಯರು ಎಚ್ಚರವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿಗಳಾದ ಗೌರವಾನ್ವಿತ ಶ್ರೀ ನಾಮದೇವ ಕೆ.ಸಾಲಮಂಟ ಅವರು ಹೇಳಿದರು.
ನಗರದ ಲಿಂಗೇರಿ ಕೋನಪ್ಪ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಲಿಂಗೇರಿ ಕೋನಪ್ಪ ಶಿಕ್ಷಣ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆಗಟ್ಟುವ ಕುರಿತು ಹಮ್ಮಿಕೊಂಡಿದ್ದ ಕಾನೂನು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಇಂದಿನ ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಅವಶ್ಯವಿದೆ. ಆದರೆ, ವಿದ್ಯಾಭ್ಯಾಸಕ್ಕೆ ಬೇಕಾಗುವ ಮಾಹಿತಿಯನ್ನು ಮಾತ್ರ ಪಡೆಯಬೇಕು. ಇದರಿಂದ ಸ್ತಿಯರ ಮೇಲೆ ನಡೆಯುವ ದೌರ್ಜನ್ಯ ತಡೆಯುವಲ್ಲಿ ಒಂದು ಪ್ರಯತ್ನವಾಗುತ್ತದೆ. ತಾಯಿಯೇ ಮೊದಲು ಗುರು. ಹಾಗಾಗಿ, ಮಕ್ಕಳು ತಾಯಿಯ ಜೊತೆಗೆ ಯಾವುದೇ ವಿಷಯವನ್ನು ಮುಕ್ತವಾಗಿ ಹಂಚಿಕೊಳ್ಳುವುದರಿAದ ಪರಿಹಾರ ಸಿಗುತ್ತದೆ. ಮಕ್ಕಳು ಯಾವುದೇ ಘಟನೆ ಸಂಭವಿಸಿದರೂ ಮೊದಲು ಪೋಷಕರಿಗೆ ತಿಳಿಸಬೇಕು. ಪೋಷಕರೊಂದಿಗೆ ಮಾಹಿತಿ ಹಂಚಿಕೊಳ್ಳುವುದರಿ0ದ ಪರೋಕ್ಷವಾಗಿ ತಮ್ಮನ್ನು ತಾವು ರಕ್ಷಣೆ ಮಾಡಿಕೊಂಡ0ತಾಗುತ್ತದೆ ಎಂದು ಅವರು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ೧೮ ವರ್ಷದೊಳಗಿನ ಮಕ್ಕಳ ಮೇಲೆ ಶಿಕ್ಷಕರು, ಶಾಲಾ ಮುಖ್ಯಸ್ಥರು, ಸಿಬ್ಬಂದಿಗಳು, ವಾಹನ ಚಾಲಕರು, ಸಾರ್ವಜನಿಕರಿಂದ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿರುವುದು ಕಳವಳಕಾರಿ ಸಂಗತಿ. ದೌರ್ಜನ್ಯಕ್ಕೊಳಗಾದ ಮಕ್ಕಳು ಯಾವುದೇ ಸಂಕೋಚವಿಲ್ಲದೆ ಪೊಲೀಸ್ ಇಲಾಖೆ, ಸಂಬ0ಧಿಸಿದ ಇಲಾಖೆಗೆ ಮಾಹಿತಿ ನೀಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಸಲಹೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಪ್ರಕಾಶ ಅರ್ಜುನ ಬನಸೊಡೆ ಅವರು ಮಾತನಾಡಿ, ದೇಶದಲ್ಲಿ ಕಠಿಣವಾದ ಶಿಕ್ಷೆಗಳಿದ್ದರೂ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರದಂತಹ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಅಹಿತಕರ ಘಟನೆ ಸಂಭವಿಸಿದರೆ ತಕ್ಷಣ ಮಕ್ಕಳ ಸಹಾಯವಾಣಿ-೧೦೯೮ ಅಥವಾ ೧೦೦ ಸಹಾಯವಾಣಿ ಸಂಖ್ಯೆಗಳಿಗೆ ಕರೆ ಮಾಡಿ ನೆರವು ಪಡೆಯಬಹುದು ಎಂದು ಹೇಳಿದರು.
೨೦೦೫ರ ಮಹಿಳಾ ಕುಟುಂಬ ದೌರ್ಜನ್ಯ ಕಾಯ್ದೆಯಡಿ ಮಹಿಳೆಯು ಗಂಡನಿ0ದ ರಕ್ಷಣೆ, ಜೀವನಾಂಶ ಪಡೆಯುವ ಹಕ್ಕು ಹೊಂದಿರುತ್ತಾಳೆ. ಕುಟುಂಬದಲ್ಲಿ ಮಹಿಳೆಗೆ ಹಿಂಸೆ ನೀಡಿದರೆ ಕಲಂ ೩೫ರಡಿ ೨ ವರ್ಷ ಜೈಲು, ೨೦ ಸಾವಿರ ರೂ. ದಂಡ ವಿಧಿಸಲಾಗುತ್ತದೆ. ೨೦೧೨ರ ಫೋಕ್ಸೋ ಕಾಯ್ದೆಯು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಯುವಲ್ಲಿ ಪ್ರಮುಖವಾಗಿದೆ. ಇದರಡಿ ಅಪರಾಧಿಗೆ ಜೀವಾವಧಿ ಶಿಕ್ಷೆ, ಮರಣದಂಡನೆ ನೀಡುವ ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದರು.
ಲಿಂಗ ತಾರತಮ್ಯವಿಲ್ಲದೆ ಹೆಣ್ಣುಮಗು ತಂದೆ ಆಸ್ತಿಯಲ್ಲಿ ಸಮಾನ ಪಾಲು ಪಡೆಯುವ ಹಕ್ಕು ಇದೆ. ವರದಕ್ಷಿಣೆ ಪಡೆದುಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಪ್ರತಿಯೊಬ್ಬರು ಕಾನೂನು ಬಗ್ಗೆ ತಿಳಿವಳಿಕೆ ಹಾಗೂ ಸಂವಿಧಾನದ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿತುಕೊಳ್ಳುವುದು ಅವಶ್ಯವಿದೆ ಎಂದು ಅವರು ತಿಳಿಸಿದರು.
ವಕೀಲರಾದ ಆರ್.ಎಸ್ ಪಾಟೀಲ್ ಅವರು ಮಾತನಾಡಿ, ಲೈಂಗಿಕ ದೌರ್ಜನ್ಯ ಅಪರಾಧ ಕೃತ್ಯವಾಗಿದೆ. ೨೦೧೨ರಲ್ಲಿ ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯ ತಡೆ ಕಾಯ್ದೆಯನ್ನು ತಂದು ಮಕ್ಕಳ ಮೇಲೆ ನಡೆಯುವ ಯಾವುದೇ ದೌರ್ಜನ್ಯವನ್ನು ಐಪಿಸಿ ೩೭೫ರಡಿ ಅಪರಾಧಿಗೆ ಕಠಿಣ ಶಿಕ್ಷೆ ವಿಧಿಸಬಹುದಾಗಿದೆ. ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿ ಮತ್ತು ಅದಕ್ಕೆ ಬಾಹ್ಯವಾಗಿ ಪ್ರಚೋದಿತ ವ್ಯಕ್ತಿಯನ್ನು ಸಹ ಮರಣ ದಂಡನೆಗೆ ಗುರಿಪಡಿಸಬಹುದು ಎಂದು ಹೇಳಿದರು.
ನಗ್ನ ದೇಹದ ಪ್ರದರ್ಶನ, ಅಶ್ಲೀಲ ಚಿತ್ರ, ವೀಡಿಯೊ, ಪೋಸ್ಟರ್ ತೋರಿಸುವ ಮೂಲಕ ಮಗುವಿನ ಮೇಲೆ ಯಾವುದೇ ರೀತಿಯ ದೌರ್ಜನ್ಯ ಎಸಗಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ದೌರ್ಜನ್ಯಕ್ಕೊಳ್ಳಗಾದ ಸಂತ್ರಸ್ತೆಗೆ ಸಮಾಜಮುಖಿಯಾಗಿ ಬದುಕಲು ಪರಿಹಾರವಾಗಿ ೫ ಲಕ್ಷ ರೂ. ವರೆಗೆ ಹಣಕಾಸಿನ ನೆರವು ನೀಡಲಾಗುವುದು. ದೌರ್ಜನ್ಯಕ್ಕೊಳಗಾದ ಮಗುವಿನ ವೈದ್ಯಕೀಯ ಪರೀಕ್ಷೆಯನ್ನು ಮಗುವಿನ ಇಚ್ಛೆಯ ಮೇರೆಗೆ ಮಗುವಿನ ಪೋಷಕರ ಎದುರು ನಡೆಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಲಿಂಗೇರಿ ಕೋನಪ್ಪ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಜಿ.ಎಮ್.ವಿಶ್ವಕರ್ಮ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಕೀಲರ ಸಂಘದ ಉಪಾಧ್ಯಕ್ಷರಾದ ನಾಗಯ್ಯ ಗುತ್ತೆದಾರ್, ಕಾರ್ಯದರ್ಶಿಗಳಾದ ವಿನಯಕುಮಾರ ಕುಲಕರ್ಣಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿದ್ಯಾರ್ಥಿನಿ ಗೀತಾ ಪ್ರಾರ್ಥನಾ ಗೀತೆ ಹಾಡಿದರು. ಉಪನ್ಯಾಸಕರಾದ ಸತೀಶಕುಮಾರ ಹವಾಲ್ದಾರ್ ನಿರೂಪಿಸಿದರು.

ಠಾಣಗುಂದಿ: ಕರುಗಳ ಪ್ರದರ್ಶನ
ಯಾದಗಿರಿ, ಡಿಸೆಂಬರ್ ೨೪ (ಕರ್ನಾಟಕ ವಾರ್ತೆ): ಯಾದಗಿರಿ ತಾಲ್ಲೂಕಿನ ಠಾಣಗುಂದಿ ಗ್ರಾಮದಲ್ಲಿ ಸೋಮವಾರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ
ವತಿಯಿಂದ “ಕರುಗಳ ಪ್ರದರ್ಶನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
೧೧೦ ಕರುಗಳು ಪ್ರದರ್ಶನ ಮಾಡಲಾಯಿತು. ಆರೋಗ್ಯಕರ, ಒಳ್ಳೆಯ ಆರೈಕೆ, ಉತ್ತಮ ಬೆಳವಣಿಗೆಯಿಂದ ಕೂಡಿದ ಮೂರು ಕರುಗಳ ಮಾಲೀಕರಿಗೆ ಬಹುಮಾನ ನೀಡಲಾಯಿತು. ಉಳಿದ ಕರುಗಳ ಮಾಲೀಕರಿಗೆ ಸಮಾಧಾನಕರ ಬಹುಮಾನ ನೀಡಲಾಯಿತು.
ಶಹಾಪೂರ ಪಶುಆಸ್ಪತ್ರೆ ಸಹಾಯಕ ನಿರ್ದೇಶಕರಾದ ಡಾ.ಷಣ್ಮುಖ ಅವರು ಮಾತನಾಡಿ, ಕರುಗಳ ಪಾಲನೆ, ಪೋಷಣೆ, ಅವುಗಳ ಪ್ರಾತ್ಯಕ್ಷತೆಯನ್ನು ತಿಳಿಸಿದರು.
ತಾಲ್ಲೂಕು ಪಂಚಾಯಿತಿ ಸದಸ್ಯರಾದ ಲಲಿತಾ ಮಾರೆಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಾರದಾ ರಾಚಯ್ಯ ಸ್ವಾಮಿ, ಪಶುವೈಧಿಕಾರಿಗಳಾದ ಡಾ.ಶುಶೃತ್, ಡಾ.ಸಂಗೀತಾ, ಡಾ.ವಿವೇಕ, ಡಾ.ಶಿವಮಂಗಲಾ, ಡಾ.ಜಯಶ್ರೀ, ಡಾ.ಗೀತಾ ಹಾಗೂ ಸಂಜೀವದ್ಯಾರೆಡ್ಡಿ, ಶರಣಪ್ಪ, ವೀರಭದ್ರ ಕೋರಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


ನಾಳೆ ಜಿಲ್ಲಾ ಮಟ್ಟದ ಯುವಜನೋತ್ಸವ
ಯಾದಗಿರಿ, ಡಿಸೆಂಬರ್ ೨೪ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಯುವಜನೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ ೨೬ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್, ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ ದರ್ಶನಾಪೂರ, ನರಸಿಂಹ ನಾಯಕ (ರಾಜುಗೌಡ), ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶರಣಪ್ಪ ಮಟ್ಟೂರ, ಡಾ.ಚಂದ್ರಶೇಖರ ಪಾಟೀಲ್, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊಟ್ನಡಗಿ, ಜಿಲ್ಲಾ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು.
ಸರ್ಕಾರದ ಸಾಧನೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ
ರಾಜ್ಯ ಸರ್ಕಾರದಿಂದ ಜನಪರ ಯೋಜನೆಗಳ ಅನುಷ್ಠಾನ
-ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ
ಯಾದಗಿರಿ, ಡಿಸೆಂಬರ್ ೨೪ (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರವು ಹಲವಾರು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಬಡ ಹಾಗೂ ಮಧ್ಯಮ ವರ್ಗದವರು ಸೇರಿದಂತೆ ಸರ್ವರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ ಎಂದು ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಹೇಳಿದರು.
ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮಂಗಳವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಸರಕಾರವು ನೂರು ದಿನಗಳ ಅವಧಿಯಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಕ್ರಮಗಳು ಹಾಗೂ ನೆರೆ ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಕುರಿತು ಡಿ.೨೪ರಿಂದ ಮೂರು ದಿನಗಳ ವರೆಗೆ ಆಯೋಜಿಸಿರುವ ಛಾಯಾಚಿತ್ರ ಪ್ರದರ್ಶನಕ್ಕೆ ಚಾಲನೆ ನೀಡಿ, ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಸಂಭವಿಸಿದ ಪ್ರವಾಹ ಸಂದರ್ಭದಲ್ಲಿ ಸಂತ್ರಸ್ತರ ನರೆವಿಗೆ ಸರ್ಕಾರ ಕೂಡಲೇ ಧಾವಿಸಿ, ಅವರಿಗೆ ಸಹಾಯ ಹಸ್ತ ನೀಡಿದೆ. ಅದೇ ರೀತಿ ರಾಜ್ಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಾ, ಜನರ ಸರ್ವತೋಮುಖ ಅಭಿವೃದ್ಧಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕದ ಸಮಗ್ರ ಕಲ್ಯಾಣವೇ ಸರ್ಕಾರದ ಧ್ಯೇಯ ಮತ್ತು ಪ್ರಾದೇಶಿಕ ಅಸಮತೋಲನವನ್ನು ನಿವಾರಣೆ ಮಾಡಬೇಕೆನ್ನುವುದು ಗುರಿಯಾಗಿದ್ದು, ಈ ಭಾಗದಲ್ಲಿ ಅಪೌಷ್ಟಿಕತೆ ನಿವಾರಣೆ ಮತ್ತು ಶಿಕ್ಷಣ ಫಲಿತಾಂಶ ಉತ್ತಮಗೊಳಿಸಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಪ್ರಧಾನಮಂತ್ರಿಯವರು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ೫ ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ ನೀಡಲು ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಜಾರಿಗೊಳಿಸಿದ್ದಾರೆ. ಸಾರ್ವಜನಿಕರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.

ಛಾಯಾಚಿತ್ರ ಪ್ರದರ್ಶನದಲ್ಲಿರುವ ವಿವರ: ಪ್ರವಾಹದಲ್ಲಿ ತೊಂದರೆಗೊಳಗಾದ ಕುಟುಂಬಗಳಿಗೂ ತಲಾ ೧೦,೦೦೦ ರೂ. ಪರಿಹಾರ ನೀಡಲಾಗಿದ್ದು, ೧೦೪ ಜನರ ಜೀವಹಾನಿಯಾಗಿರುವುದರಿಂದ ತಲಾ ೫ ಲಕ್ಷ ರೂ. ಮತ್ತು ಅಸುನೀಗಿದ ಜಾನುವಾರುಗಳಿಗೆ ೧೬ ರಿಂದ ೩೦ ಸಾವಿರ ರೂ. ಪರಿಹಾರ ನೀಡಲಾಗಿರುವ ಛಾಯಾಚಿತ್ರ. ಸಂಪರ್ಕ ಕಳೆದುಕೊಂಡಿದ್ದ ೧೭೮ ರಸ್ತೆ, ಸೇತುವೆಗಳ ಪೈಕಿ ೧೪೨ ರಸ್ತೆ, ಸೇತುವೆ ಸಂಪರ್ಕಗಳ ಪುನರ್ ಸ್ಥಾಪನೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಕಾಮಗಾರಿ ಕೈಗೊಳ್ಳಲು ೧೫೦೦ ಕೋಟಿ ರೂ. ಬಿಡುಗಡೆ ಮಾಡಿರುವ ಕುರಿತ ಮಾಹಿತಿ ಪ್ರದರ್ಶನದಲ್ಲಿದೆ.
ಪ್ರವಾಹ ಸಂತ್ರಸ್ಥರ ನೋವಿಗೆ ಮಿಡಿದ ಸರ್ಕಾರ ೨೨ ಜಿಲ್ಲೆಗಳ ೧೦೩ ತಾಲೂಕು ಪ್ರವಾಹ ಪೀಡಿತ ಪ್ರದೇಶಗಳೆಂದು ಘೋಷಿಸಿ ಕೆಂದ್ರ ಸರ್ಕಾರದಿಂದ ೧೨೦೦ ಕೋಟಿ ರೂ. ಮಧ್ಯಂತರ ಪರಿಹಾರ ಬಿಡುಗಡೆಗೊಳಿಸಿ, ರಾಜ್ಯ ಸರ್ಕಾರದಿಂದ ಪರಿಹಾರ ಕಾರ್ಯಗಳಿಗೆ ೬.೪೫೦ ಕೋಟಿ ರೂ. ಮಂಜೂರು ಮಾಡಿರುವ ಬಗ್ಗೆ.
ಅನ್ನದಾತ ರೈತನ ಹಿತರಕ್ಷಣೆ ಸರಕಾರದ ಮೊದಲ ಆದ್ಯತೆಯಾಗಿದ್ದು, ಪ್ರಧಾನಮಂತ್ರಿ ಕಿಸಾನ ಸಮ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರದ ವಾರ್ಷಿಕ ೬,೦೦೦ ರೂ. ನೆರವಿನೊಂದಿಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ೪,೦೦೦ ರೂ.ಗಳ ನೆರವು. ಎರಡು ಕಂತುಗಳಲ್ಲಿ ಹಣ ಬಿಡುಗಡೆ ಮಾಡಲಾಗಿದ್ದು, ಮೊದಲ ಕಂತಿನ ತಲಾ ೨,೦೦೦ ರೂ.ಗಳನ್ನು ಅರ್ಹ ಫಲಾನುಭವಿಗಳ ಖಾತೆಗೆ ನೇರ ವರ್ಗಾವಣೆ ಮಾಡಲಾಗುವ ಬಗ್ಗೆ.
ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಹೊಸ ಆವಿಷ್ಕಾರಗಳಿಗೆ ಉತ್ತೇಜನ ನೀಡಲು ಕರ್ನಾಟಕ ಆವಿಷ್ಕಾರ ಪ್ರಾಧಿಕಾರ ರಚನೆ ಮಾಡಲಾಗಿದೆ. ವಿಶೇಷ ಅಭಿವೃದ್ಧಿ ಯೋಜನೆಯಡಿ ೨೦೭ ಅಂಗನವಾಡಿ ಕಟ್ಟಡಗಳ ನಿರ್ಮಾಣ ಮತ್ತು ೧೦೦೦ ಅಂಗನವಾಡಿ ಕಟ್ಟಡಗಳ ದುರಸ್ತಿಗೆ ೧೦ ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಪ್ರಧಾನಮಂತ್ರಿಗಳ ಮಾತೃವಂದನಾ ಯೋಜನೆಯಡಿ ೩ ಕಂತುಗಳಲ್ಲಿ ೫೦೦೦ ರೂ. ಸಹಾಯಧನ, ೯೭೨೪೬ ಫಲಾನುಭವಿಗಳೀಗೆ ಪ್ರಯೋಜನ ೪೪.೬೫ ಕೋಟಿ ರೂ. ನೆರವು ನೀಡಲಾಗಿದೆ. ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕಾಗಿ ವಿವಿಧ ಕಾರ್ಯಕ್ರಮಗಳ ಅನುಷ್ಠಾನಕ್ಕೆ ೪೨೭ ಕೋಟಿ ರೂ. ವೆಚ್ಚ, ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳಿಗೆ ೨೫೧ ಕೋಟಿ ರೂ. ವೆಚ್ಚ ಮಾಡಲಾಗಿದೆ. ದುಡಿಯುವ ಕೈಗಳಿಗೆ ಉದ್ಯೋಗ ನೀಡುವುದು ಈ ಸರ್ಕಾರದ ಆದ್ಯತೆಗಳಲ್ಲಿ ಒಂದಾಗಿದೆ. ಹೂಡಿಕೆದಾರರನ್ನು ಆಕರ್ಷಿಸಲು ಪೂರಕ ವಾತಾವರಣ ಸೃಷ್ಟಿ ಮಾಡಲಾಗುವುದೆನ್ನುವ ಛಾಯಾಚಿತ್ರ.
ರಾಜ್ಯದಲ್ಲಿನ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇನ್‌ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾ ಮೂರ್ತಿಯವರ ಅಧ್ಯಕ್ಷತೆಯಲ್ಲಿ ಪ್ರವಾಸೋದ್ಯಮ ಕಾರ್ಯಪಡೆ. ಸುಸ್ಥಿರ ಹಾಗೂ ರಚನಾತ್ಮಕ ಪ್ರವಾಸೋದ್ಯಮ ಅಭಿವೃದ್ಧಿಗೆ ಸರ್ಕಾರದ ಆದ್ಯತೆ ಆಗಿದೆ. ಹೈದ್ರಾಬಾದ್ ಕರ್ನಾಟಕ ಭಾಗವನ್ನು “ಕಲ್ಯಾಣ ಕರ್ನಾಟಕ”ವೆಂದು ಮರು ನಾಮಕರಣ. ಇದರಿಂದ ಈ ಭಾಗದ ಸಮಗ್ರ ಅಭಿವೃದ್ಧಿ ಮತ್ತು ಜನ ಕಲ್ಯಾಣದ ಪರ್ವಕ್ಕೆ ಚಾಲನೆ. ಕಲ್ಯಾಣ ಕರ್ನಾಟಕ ಭಾಗದ ೨೧ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಕಲಬುರಗಿಗೆ ವಿಮಾನ ಸೇವೆ ಪ್ರಾರಂಭ ಮತ್ತು ಪ್ರವಾಸೋದ್ಯಮ, ವಾಣಿಜೋದ್ಯಮ, ರಫ್ತು ಉದ್ಯಮಗಳ ಬೆಳವಣಿಗೆಗೆ ಪ್ರಯೋಜನವಾಗಲಿ ಎನ್ನುವ ಛಾಯಾಚಿತ್ರಗಳಿವೆ.
ಶಿಕ್ಷಕರ ವೃತ್ತಿಪರ ಕೌಶಲ್ಯಗಳನ್ನು ಹೆಚ್ಚಿಸಲು ಗುರುಚೇತನ ತರಬೇತಿ ನೀಡಿದೆ. ಪ್ರಥಮ ಬಾರಿಗೆ ೧೫೫ ವಿಕಲಚೇತನರ ಶಾಲೆಯ ೧೦ ಸಾವಿರಕ್ಕೂ ಹೆಚ್ಚು ಮಕ್ಕಳಿಗೆ ಕ್ಷೀರಭಾಗ್ಯ ಯೋಜನೆಯಡಿ ಪೌಷ್ಟಿಕಾಂಶಯುಕ್ತ ಹಾಲು ಪೂರೈಕೆ ಮಾಡಿರುವ ಕುರಿತು.
ಸಂಕಷ್ಟಕ್ಕೆ ಒಳಗಾಗಿರುವ ನೇಕಾರರ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ಒಟ್ಟು ೯೮.೨೯ ಕೋಟಿ ರೂ. ಸಾಲ ಮನ್ನಾ ಮಾಡಿದೆ. ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಿAದ ಮೀನುಗಾರರು ಪಡೆದಿರುವ ೫೦ ಸಾವಿರ ರೂ. ವರೆಗಿನ ಸಾಲ ಮನ್ನಾ. ರಾಜ್ಯದಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ರಾಜ್ಯದಲ್ಲಿ ೨೩ ಲಕ್ಷ ಆರೋಗ್ಯ ಕಾರ್ಡ ವಿತರಣೆ ಮಾಡಿರುವ ಕುರಿತ ಮಾಹಿತಿಯ ಜೊತೆಗೆ ಸರ್ಕಾರ ಅನೇಕ ಜನಪರ ಯೋಜನೆಗಳ ವಿವರ ಛಾಯಾಚಿತ್ರ ಪ್ರದರ್ಶನದಲ್ಲಿದೆ.
೨೬ರ ವರೆಗೆ ಉಚಿತ ಪ್ರದರ್ಶನ: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿರುವ ಸರ್ಕಾರದ ಸಾಧನೆ ಬಿಂಬಿಸುವ ಛಾಯಾಚಿತ್ರ ಪ್ರದರ್ಶನವು ಡಿ.೨೬ರ ಗುರುವಾರ ಸಂಜೆ ೫.೩೦ರ ವರೆಗೆ ಇರುತ್ತದೆ. ಪ್ರವೇಶ ಉಚಿತವಿದ್ದು, ಜಿಲ್ಲೆಯ ನಾಗರಿಕರೆಲ್ಲರೂ ವೀಕ್ಷಿಸಬಹುದಾಗಿದೆ.
ಜಿಲ್ಲಾ ಸರಕಾರಿ ನೌಕರರ ಸಂಘದ ಗೌರವ ಅಧ್ಯಕ್ಷರಾದ ಪರಮರೆಡ್ಡಿ ಕಂದಕೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಸಹಾಯಕರಾದ ಡಿ.ಕೆ.ರಾಜರತ್ನ, ವಾರ್ತಾ ಇಲಾಖೆಯ ಬೆರಳಚ್ಚುಗಾರ ವಿಶ್ವರಾಧ್ಯ ಎಸ್.ಹಂಗನಳ್ಳಿ, ಸಾರಿಗೆ ಸಂಸ್ಥೆಯ ಸಿಬ್ಬಂದಿ, ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಸ್ಪೆಕ್ಟçಂ ಸಂಸ್ಥೆಯ ಸಿಬ್ಬಂದಿ ಉಪಸ್ಥಿತರಿದ್ದರು.

ಸೋಮವಾರ, ಡಿಸೆಂಬರ್ 23, 2019

ಇಂದು ಬಜೆಟ್ ಸಿದ್ಧತಾ ಸಭೆ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಶಹಾಪುರ ನಗರಸಭೆಯ ೨೦೨೦-೨೧ನೇ ಸಾಲಿನ ಮುಂಗಡ ಪತ್ರ (ಬಜೆಟ್) ತಯಾರಿಸಲು ಸಾರ್ವಜನಿಕರು, ರಿಜಿಸ್ರ‍್ಡ್ ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್, ಟ್ರೇಡ್ ಆ್ಯಂಡ್ ಇಂಡಸ್ಟಿçÃಯಲ್ ಅಸೋಸಿಯೇಷನ್, ಇತರೆ ಸಂಸ್ಥೆಗಳು, ಸರ್ಕಾರೇತರ ಸಂಸ್ಥೆಗಳು, ಪ್ರೋಮಿನೆಂಟ್ ಸಿಟಿಜನ್‌ಗಳಿಗೆ ೨ನೇ ಸಿದ್ಧತಾ ಸಭೆಯನ್ನು ಡಿಸೆಂಬರ್ ೨೪ರಂದು ಮಧ್ಯಾಹ್ನ ೩ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಕರೆಯಲಾಗಿದೆ. ಈ ಸಭೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಲು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.೩೧ರಂದು ತಾ.ಪಂ ಕೆಡಿಪಿ ಸಭೆ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಯಾದಗಿರಿ ಮತಕ್ಷೇತ್ರದ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ(ಕೆಡಿಪಿ)ಗಳ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಡಿಸೆಂಬರ್ ೩೧ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಿ.೨೬ರಿಂದ ವಿಕಲಚೇತನರ ಬಸ್ ಪಾಸ್ ನವೀಕರಣ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ೨೦೨೦ನೇ ಸಾಲಿನ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್‌ಗಳನ್ನು ಡಿಸೆಂಬರ್ ೨೬ರಿಂದ ನವೀಕರಿಸಲಾಗುತ್ತಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
೨೦೧೯ನೇ ಸಾಲಿನಲ್ಲಿ ತೆಗೆದುಕೊಂಡ ಪಾಸಿನ ನಕಲು ಪ್ರತಿ, ಇತ್ತೀಚಿನ ೨ ಭಾವಚಿತ್ರ, ಅಂಗವಿಕಲರ ಗುರುತಿನ ಚೀಟಿ, ಆಧಾರ್ ಕಾರ್ಡ್, ಮಾಸಾಶನ ನಕಲು ಪ್ರತಿಗಳು ಹಾಗೂ ಅನುಬಂಧ-೧ ರೊಂದಿಗೆ ೬೬೦ ರೂ. ನಗದು ಶುಲ್ಕ ಸಲ್ಲಿಸಬೇಕು. ಈ ಎಲ್ಲಾ ದಾಖಲಾತಿಗಳನ್ನು ಆಯಾ ತಾಲ್ಲೂಕಿನ ಬಸ್ ನಿಲ್ದಾಣಗಳಲ್ಲಿ ೨೦೨೦ರ ಫೆಬ್ರುವರಿ ೨೯ರೊಳಗಾಗಿ ಸಲ್ಲಿಸಿ, ನವೀಕರಣಗೊಳಿಸಿಕೊಳ್ಳಬೇಕು. ಪ್ರಸ್ತುತ ೨೦೧೯ನೇ ಸಾಲಿನ ಪಾಸ್ ೨೦೨೦ರ ಫೆಬ್ರುವರಿ ೨೯ರ ವರೆಗೆ ಮಾನ್ಯತೆ ಹೊಂದಿರುತ್ತದೆ. ಕೊನೆಯ ದಿನಾಂಕದ ನಂತರ ಬಸ್ ಪಾಸ್ ನವೀಕರಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಅಸಂಘಟಿತ ಕಾರ್ಮಿಕರು ನೋಂದಣಿಗೆ ಸೂಚನೆ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಯೋಜನೆಯಾದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಲ್ಲಿ ಅಸಂಘಟಿತ ವಲಯದ ಕಾರ್ಮಿಕರು ನೋಂದಣಿ ಮಾಡಿಕೊಳ್ಳಲು ಯಾದಗಿರಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಗಳು ಕೋರಿದ್ದಾರೆ.
ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿದ್ದು, ೧೮ ರಿಂದ ೪೦ ವರ್ಷದೊಳಗಿರಬೇಕು. ಮಾಸಿಕ ಆದಾಯ ೧೫,೦೦೦ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಆದಾಯ ತೆರಿಗೆ ಇಎಸ್‌ಐ/ಪಿಎಫ್/ಎನ್‌ಪಿಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು. ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವಿಸ್ ಸೆಂಟರ್(ಸಿಎಸ್‌ಸಿ) ಗಳಲ್ಲಿ ನೋಂದಾಯಿಸಬಹುದು.
ಯಾರು ಅರ್ಹರು?: ಆಟೋ ಚಾಲಕರು, ವಾಣಿಜ್ಯ ವಾಹನ ಚಾಲಕರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು, ಹಮಾಲರು, ಟೇಲರ್‌ಗಳು, ಚಿಂದಿ ಆಯುವವರು, ಗೃಹ ಕಾರ್ಮಿಕರು, ಮೆಕ್ಯಾನಿಕ್‌ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಇಟ್ಟಿಗೆ ಭಟ್ಟಿ ಕಾರ್ಮಿಕರು, ಬಿಸಿಯೂಟ ಸಿದ್ಧಪಡಿಸುವ ಅಡುಗೆ ಸಹಾಯಕರು, ಬೀದಿ ಬದಿ ವ್ಯಾಪಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತರು, ಕೃಷಿ ಕಾರ್ಮಿಕರು, ಸ್ವಯಂ ಉದ್ಯೋಗಿಗಳು, ಬೀಡಿ ಕಾರ್ಮಿಕರು, ಕೈಮಗ್ಗ ಕಾರ್ಮಿಕರು, ಧ್ವನಿ ಮತ್ತು ದೃಶ್ಯ ಕಾರ್ಮಿಕರು, ಗೃಹ ಆಧಾರಿತ ಕಾರ್ಮಿಕರು ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ನೋಂದಣಿ ಮಾಡಬಹುದು.
ಕಾಮನ್ ಸರ್ವಿಸ್ ಸೆಂಟರ್‌ಗಳ ವಿವರಗಳನ್ನು ಹತ್ತಿರದ ಎಲ್‌ಐಸಿ ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇಎಸ್‌ಐ ಕಾರ್ಪೋರೇಷನ್ ಮತ್ತು ಭವಿಷ್ಯನಿಧಿ ಸಂಘಟನೆಯ ಕಚೇರಿಗಳು ಹಾಗೂ ಇಲಾಖೆಯ ವೆಬ್ ವಿಳಾಸ http//locator.csccloud.in  ಮತ್ತು maandan.in  ನಲ್ಲಿ ಪಡೆಯಬಹುದು. ಟೋಲ್ ಫ್ರೀ ಸಂಖ್ಯೆ ೧೮೮೦೦-೨೭೬-೬೮೮೮ ಗೆ ಕರೆ ಮಾಡಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರ ಪ್ರವಾಸ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖಾ ಸಚಿವರಾದ ಶಶಿಕಲಾ ಅ. ಜೊಲ್ಲೆ ಅವರು ಕಲಬುರಗಿ ಜಿಲ್ಲೆಯಿಂದ ರಸ್ತೆ ಮಾರ್ಗವಾಗಿ ಡಿಸೆಂಬರ್ 24 ರಂದು ಮಧ್ಯಾಹ್ನ 3 ಗಂಟೆಗೆ ಯಾದಗಿರಿಗೆ ಆಗಮಿಸುವರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ ೫.೩೦ ಗಂಟೆಗೆ ಯಾದಗಿರಿ ನಗರದ ಡಾ.ಸಿ.ಎಂ.ಪಾಟೀಲ್ ಆಸ್ಪತ್ರೆ ಹಿಂಭಾಗದಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡುವರು. ನಂತರ ೬.೩೦ ಗಂಟೆಗೆ ಆರ್‌ಎಸ್‌ಎಸ್ ಕಚೇರಿಗೆ ಭೇಟಿ ನೀಡುವರು. ರಾತ್ರಿ ೮ ಗಂಟೆಗೆ ರಸ್ತೆ ಮೂಲಕ ಯಕ್ಸಂಬಾಗೆ ಪ್ರಯಾಣ ಬೆಳೆಸುವರು.
ಎಸಿಬಿ ಅಧಿಕಾರಿಗಳಿಂದ ಅಹವಾಲು ಸ್ವೀಕಾರ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಯಾದಗಿರಿ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು ಶಹಾಪೂರ ತಾಲ್ಲೂಕಿನ ದೋರನಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಡಿಸೆಂಬರ್ ೨೪ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಸಿ ಅರ್ಜಿ ಅಹವಾಲು ಸ್ವೀಕಾರ ಮಾಡಲಿದ್ದು, ಸಾರ್ವಜನಿಕರು ಭ್ರಷ್ಟಾಚಾರಕ್ಕೆ ಸಂಬAಧಿಸಿದ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ.
ಭ್ರಷ್ಟಾಚಾರ ನಿಗ್ರಹ ದಳದ ಡಿ.ಎಸ್.ಪಿ ಸಂತೋಷ ಕೆ.ಎಂ (ಮೊ:೯೪೮೦೮೦೬೨೪೨), ಪೊಲೀಸ್ ಇನ್‌ಸ್ಪೆಕ್ಟರ್ ಬಾಬಾಸಾಹೇಬ ಪಾಟೀಲ್ (ಮೊ:೯೪೮೦೮೦೬೩೧೩), ಪೊಲೀಸ್ ಇನ್‌ಸ್ಪೆಕ್ಟರ್ ಗುರುಪಾದ ಎಸ್.ಬಿರಾದಾರ (ಮೊ:೯೪೮೦೮೦೬೩೧೪) ಅವರು ಅಹವಾಲು ಸ್ವೀಕರಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಂದಿನಿAದ ಸರ್ಕಾರದ ಸಾಧನೆಗಳ ಛಾಯಾಚಿತ್ರ ಪ್ರದರ್ಶನ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಪ್ರಸಕ್ತ ರಾಜ್ಯ ಸರಕಾರವು ನೂರು ದಿನಗಳನ್ನು ಪೂರೈಸಿ ಮುನ್ನೆಡೆದಿದ್ದು, ಈ ಅವಧಿಯಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಕ್ರಮಗಳು ಹಾಗೂ ನೆರೆ ಪ್ರವಾಹದ ಸಂದರ್ಭದಲ್ಲಿ ಕೈಗೊಂಡ ಪರಿಹಾರ ಕಾರ್ಯಗಳ ಛಾಯಾಚಿತ್ರ ಪ್ರದರ್ಶನವನ್ನು ಬೆಂಗಳೂರಿನ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ.
ಈ ದಿಸೆಯಲ್ಲಿ ಯಾದಗಿರಿ ಜಿಲ್ಲೆಯಲ್ಲಿ ಛಾಯಾಚಿತ್ರ ಪ್ರದರ್ಶನವನ್ನು ಡಿಸೆಂಬರ್ ೨೪ ಮಂಗಳವಾರದಿAದ ೨೬ರ ಗುರುವಾರದ ವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಯೋಜಿಸಲಾಗಿದೆ. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಈ ಛಾಯಾಚಿತ್ರ ಪ್ರದರ್ಶನವನ್ನು ಡಿ.೨೪ರಂದು ಬೆಳಿಗ್ಗೆ ೧೦ ಗಂಟೆಗೆ ಉದ್ಘಾಟಿಸುವರು.
ರಾಜ್ಯದಲ್ಲಿ ಇತ್ತೀಚಿಗೆ ಸಂಭವಿಸಿದ್ದ ನೆರೆಹಾವಳಿ ಸಂದರ್ಭದಲ್ಲಿ ಸರ್ಕಾರ ಕೈಗೊಂಡ ಹಲವು ಕ್ರಮಗಳು ಸೇರಿದಂತೆ ಸಾಧನೆಗಳ ಅನಾವರಣಗೊಳಿಸುವ ಈ ಛಾಯಾಚಿತ್ರ ಪ್ರದರ್ಶನವನ್ನು ಇಂದಿನಿAದ ಡಿ.೨೬ ರವರೆಗೆ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಉಚಿತವಾಗಿ ವೀಕ್ಷಿಸಬಹುದು ಎಂದು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.
ಡಿ.೨೯ರಂದು ರಾಷ್ಟçಕವಿ ಕುವೆಂಪು ಜಯಂತಿ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟçಕವಿ ಕುವೆಂಪು ರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಕಾರ್ಯಕ್ರಮವನ್ನು ಡಿಸೆಂಬರ್ ೨೯ರಂದು ಬೆಳಿಗ್ಗೆ ೧೧ ಗಂಟೆಗೆ ಯಾದಗಿರಿ ನಗರದ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ.
ಪಶುಸಂಗೋಪನೆ, ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಬಿ.ಚವ್ಹಾಣ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ, ಡಾ.ಉಮೇಶ ಜಿ.ಜಾಧವ್ ಅವರು ಅತಿಥಿಗಳಾಗಿ ಭಾಗವಹಿಸುವರು. ವಿಧಾನಸಭಾ ಸದಸ್ಯರಾದ ಶರಣಬಸಪ್ಪಗೌಡ , ನರಸಿಂಹ ನಾಯಕ(ರಾಜುಗೌಡ), ನಾಗನಗೌಡ ಕಂದಕೂರ, ವಿಧಾನಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ್, ಶರಣಪ್ಪ ಮಟ್ಟೂರ, ಬಿ.ಜಿ.ಪಾಟೀಲ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಗಿರಿಜಮ್ಮ ಸದಾಶಿವಪ್ಪಗೌಡ ರೊದರ್ಶನಾಪೂರಟ್ನಡಗಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಭೀಮವ್ವ ಮಲ್ಲೇಶಪ್ಪ ಅಚ್ಚೋಲಾ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು. ಲಿಂಗೇರಿ ಕೋನಪ್ಪ ಮಹಿಳಾ ವಿಶ್ವವಿದ್ಯಾಲಯದ ಡಾ.ಜ್ಯೋತಿಲತಾ ತಡಬಿಡಿಮಠ ಅವರು ವಿಶೇಷ ಉಪನ್ಯಾಸ ನೀಡುವರು.
ವಾಹನ ಫಲಕಗಳ ಮೇಲಿನ ಹೆಸರು, ಚಿಹ್ನೆಗಳ ತೆರವಿಗೆ ಸೂಚನೆ
ಯಾದಗಿರಿ, ಡಿಸೆಂಬರ್ ೨೩ (ಕರ್ನಾಟಕ ವಾರ್ತೆ): ವಾಹನಗಳ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆಗಳನ್ನು ಹಾಕಿಸುವುದು ಅಪರಾಧವಾಗಿದ್ದು, ವಾಹನಗಳ ಮಾಲೀಕರು ೭ ದಿನಗಳಲ್ಲಿ ತೆರವುಗೊಳಿಸದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಸಂತ ಚವ್ಹಾಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಷ್ಟಿçÃಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗ ಹೆಸರನ್ನು ಹೋಲುವಂತಹ ರಾಷ್ಟಿçÃಯ, ರಾಜ್ಯ ಮಾನವ ಹಕ್ಕುಗಳ ಸಂಸ್ಥೆ, ಒಕ್ಕೂಟ ಇತ್ಯಾದಿ ಹೆಸರುಗಳನ್ನು ಚಿಹ್ನೆ, ಲಾಂಛನಗಳನ್ನು ಹಾಗೂ ಇತರೆ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಸಿಕೊಳ್ಳುವುದು ಕೇಂದ್ರ ಮೋಟಾರು ವಾಹನ ನಿಯಮಗಳ ೧೯೮೯ ರ ನಿಯಮ ೫೦ ಮತ್ತು ೫೧ ರ ಹಾಗೂ ೧೯೫೦ ಕಲಂ ೩, ೪ ಮತ್ತು ೫ ರಲ್ಲಿ ಉಲ್ಲಂಘನೆಯಾಗುತ್ತದೆ. ಅಂತಹ ವಾಹನ ಮಾಲೀಕರು ಈ ಕಾಯ್ದೆಗಳ ಹಾಗೂ ನಿಯಮಗಳನ್ವಯ ದಂಡನೆಗೆ ಒಳಗಾಗಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಶನಿವಾರ, ಡಿಸೆಂಬರ್ 21, 2019

ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಪ್ರಗತಿ ಪರಿಶೀಲನಾ ಸಭೆ
ನೆರೆ ಪರಿಹಾರ ಕಾಮಗಾರಿಗಳಿಗೆ ಅಲ್ಪಾವಧಿ ಟೆಂಡರ್‌ಗೆ ಸೂಚನೆ
ಯಾದಗಿರಿ, ಡಿಸೆಂಬರ್ ೨೧ (ಕರ್ನಾಟಕ ವಾರ್ತೆ): ಜಿಲ್ಲೆಯ ಕೃಷ್ಣಾ ಮತ್ತು ಭೀಮಾ ನದಿಗಳ ಪ್ರವಾಹದಿಂದ ಉಂಟಾದ ರಸ್ತೆ ಮತ್ತು ಬ್ರಿಡ್ಜ್ಗಳ ದುರಸ್ತಿಯನ್ನು ತ್ವರಿತವಾಗಿ ಕೈಗೊಳ್ಳಲು ಅಲ್ಪಾವಧಿ ಟೆಂಡರ್ ಕರೆದು ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ತ.ಮ. ವಿಜಯ್ ಭಾಸ್ಕರ್ ಅವರು ಸಂಬ0ಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಅವರು ಡಿ.೨೧ರ ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ನೈಸರ್ಗಿಕ ವಿಕೋಪದಿಂದ ಹಾನಿಗೊಳಗಾದ ಕಾಮಗಾರಿಗಳಿಗಾಗಿ ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗಕ್ಕೆ  ಅಂದಾಜು ೨೯ ಕೋಟಿ ರೂ.ಗಳ ಅನುದಾನ ಹಂಚಿಕೆಯಾಗಿದ್ದು, ಇದರಲ್ಲಿ ಒಟ್ಟು ೨೨೦ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅದರಂತೆ ಲೋಕೋಪಯೋಗಿ ಇಲಾಖೆಗೆ ೯.೬೦ ಕೋಟಿ ರೂ.ಗಳ ಅನುದಾನ ಹಂಚಿಕೆಯಾಗಿದ್ದು, ೧೭ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇವುಗಳಲ್ಲಿ ೫ ರಿಂದ ೫೦ ಲಕ್ಷ ರೂ.ವರೆಗಿನ ಕಾಮಗಾರಿಗಳಿಗೆ ಅಲ್ಪಾವಧಿ ಟೆಂಡರ್ ಕರೆದು, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕೆಂದು ಅವರು ತಾಕೀತು ಮಾಡಿದರು.
ಜಿಲ್ಲಾಧಿಕಾರಿಗಳಾದ ಎಂ. ಕೂರ್ಮಾ ರಾವ್ ಅವರು ಮಾತನಾಡಿ, ಆಗಸ್ಟ್ ಮಾಹೆಯಲ್ಲಿ ಪ್ರವಾಹದಿಂದ ಹಾನಿಯಾದ ಗ್ರೂಪ್ ಸಿ ಯ ಎಲ್ಲಾ ೮೮ ಮನೆಗಳ ಮಾಲೀಕರಿಗೆ ಸರ್ಕಾರದ ನಿರ್ದೇಶನದಂತೆ ಪರಿಹಾರ ಹಣ ನೀಡಲಾಗಿದೆ. ಉಳಿದ ಬಿ ಗ್ರೂಪ್‌ನ ೧೨ ಮನೆಗಳಲ್ಲಿ ೩ ಮನೆಗಳ ಮಾಲೀಕರು ಮಾತ್ರ ಮನೆ ನಿರ್ಮಿಸಿಕೊಳ್ಳಲು ಮುಂದೆ ಬಂದಿದ್ದಾರೆ. ಸುರಪುರ ತಾಲ್ಲೂಕಿನ ಹೇಮನೂರ ಮತ್ತು ತಿಂಥಣಿ ಗ್ರಾಮಗಳ ೨ ಶಾಲೆಗಳಿಗೆ ಹಾನಿಯಾಗಿದೆ. ಈ ಶಾಲೆಗಳ ದುರಸ್ಥಿಗೆ ನೈಸರ್ಗಿಕ ಪ್ರಕೃತಿ ವಿಕೋಪದ ನಿಧಿಯಿಂದ ತಲಾ ೧ ಲಕ್ಷ ರೂ.ಗಳಂತೆ ಅನುದಾನ ನೀಡಲಾಗಿದ್ದು, ದುರಸ್ಥಿ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಮಾತನಾಡಿ, ಮಹಾತ್ಮ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ೨೬.೬೧ ಲಕ್ಷ ಮಾನವ ದಿನಗಳ ಗುರಿಯನ್ನು ನಿಗದಿಪಡಿಸಲಾಗಿದೆ. ೧೬.೭೬ ಲಕ್ಷ ಮಾನವ ದಿನಗಳ ಗುರಿಯನ್ನು ತಲುಪಿದ್ದು, ಶೇ.೬೨.೯೯ ರಷ್ಟು ಸಾಧಿಸಲಾಗಿದೆ ಎಂದು ತಿಳಿಸಿದರು. ಆಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಾತನಾಡಿ, ಸುರಪುರ ತಾಲ್ಲೂಕಿನಲ್ಲಿ ಶೇ.೭೦.೫೦ರಷ್ಟು ಸಾಧನೆಯಾಗಿದೆ. ಆದರೆ, ಶಹಾಪುರ ತಾಲ್ಲೂಕಿನಲ್ಲಿ ಶೇ.೫೭.೭೫ರಷ್ಟು ಹಾಗೂ ಯಾದಗಿರಿ ತಾಲ್ಲೂಕಿನಲ್ಲಿ ಶೇ.೬೦.೪೨ರಷ್ಟು ಪ್ರಗತಿ ಸಾಧಿಸಲಾಗಿದೆ. ವೈಯಕ್ತಿಕ ಮತ್ತು ಸಾಮೂಹಿಕ ಕಾಮಗಾರಿಗಳನ್ನು ಕೈಗೊಂಡು ಗುರಿ ಸಾಧಿಸುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಗುಳೆ ತಪ್ಪಿಸಲು ಕೂಲಿ ಕೊಡಿ: ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಜನ ಗುಳೆ ಹೋಗುತ್ತಾರೆ. ಕೂಲಿಗೆ ಇಲ್ಲಿ ಬಹಳಷ್ಟು ಬೇಡಿಕೆ ಇದೆ. ಜನ ಗುಳೆ ಹೋಗುವುದನ್ನು ತಪ್ಪಿಸಲು ಅವರಿಗೆ ಮನರೇಗಾ ಯೋಜನೆಯಡಿ ಕೂಲಿ ಕೊಡಬೇಕು. ಈ ಯೋಜನೆಯ ಅನುಷ್ಠಾನದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿರಲು ಕ್ರಮ ವಹಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಹಾಜರಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮಾತನಾಡಿ,  ಮನರೇಗಾ ಯೋಜನೆಯಡಿ ಚೆಕ್‌ಡ್ಯಾಮ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮಾತನಾಡಿ, ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿ ಕಳೆದ ಸಾಲಿನಲ್ಲಿ ಕೈಗೊಂಡಿದ್ದ ಕೆರೆಗಳ ಹೂಳೆತ್ತುವ ಯೋಜನೆಗೆ ರೈತರಿಂದ ಹೆಚ್ಚಿನ ಬೇಡಿಕೆ ಇದೆ. ಹಾಗಾಗಿ, ಪ್ರಸಕ್ತ ಸಾಲಿನಲ್ಲಿ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಶೀಘ್ರದಲ್ಲಿಯೆ ಚಾಲನೆ ನೀಡಲಾಗುವುದು. ಕೆರೆಗಳ ಹೂಳೆತ್ತುವ ಜೊತೆಗೆ ನಾಲೆಗಳ ಹೂಳನ್ನು ಕೂಡ ತೆಗೆದು ಕೆರೆಗಳಿಗೆ ಮಳೆಯ ನೀರು ಸುಗಮವಾಗಿ ಹರಿದುಬರುವಂತೆ ಮಾಡುವ ಕಾಮಗಾರಿಯನ್ನು ಸಹ ಸೇರ್ಪಡೆ ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕುಡಿಯುವ ನೀರಿಗೆ ಆದ್ಯತೆ: ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಬೇಕು. ಕುಡಿಯುವ ನೀರು ಪೂರೈಸುವುದಕ್ಕೆ ಯಾವುದೇ ರೀತಿಯ ತೊಂದರೆ ಉಂಟಾಗದAತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಹೆಚ್ಚಿನ ಶುದ್ಧ ಕುಡಿಯುವ ನೀರಿನ ಘಟಕಗಳು ಮತ್ತು ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ ಕುರಿತಂತೆ ಸಾಕಷ್ಟು ದೂರುಗಳಿರುವುದಾಗಿ ಸಭೆಯಲ್ಲಿ ಪ್ರಸ್ತಾಪಿಸಿದ ಸರ್ಕಾರದ ಮುಖ್ಯಕಾರ್ಯದರ್ಶಿಗಳು, ಸಂಬAಧಪಟ್ಟ ಇಂಜಿನಿಯರ್‌ಗಳಿAದ ಕಾರಣ ಕೇಳಿದರು.
ಜಿಲ್ಲೆಯಲ್ಲಿ ೪೨೨ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ೨೪೧ ಚಾಲ್ತಿಯಲ್ಲಿವೆ. ೧೪೫ ಘಟಕಗಳು ಕಾರ್ಯನಿರ್ವಹಿಸುತ್ತಿಲ್ಲ. ಇನ್ನು ಜಿಲ್ಲೆಯಲ್ಲಿರುವ ೯ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳಲ್ಲಿ ೪ ಚಾಲ್ತಿಯಲ್ಲಿಲ್ಲ ಎಂದು ಸಂಬAಧಿಸಿದ ಎಂಜಿನಿಯರುಗಳು ಉತ್ತರಿಸಿದರು.
ಯಾದಗಿರಿ ತಾಲ್ಲೂಕಿನ ಆನೂರು ಕೆ., ಗೊಂದಡಗಿ, ಕೌಳೂರು ಯೋಜನೆಗಳು ೨೦೧೩ರಲ್ಲಿ ಪೂರ್ಣಗೊಂಡಿದ್ದು, ೨೦೧೬ರವರೆಗೆ ಎಕ್ಸ್ಪ್ರೆಸ್ ಫೀಡರ್ ಲೈನ್ ಕಾಮಗಾರಿ ಪೂರ್ಣಗೊಳ್ಳದ ಕಾರಣ ನೀರು ಸರಬರಾಜು ಮಾಡಲಾಗಿಲ್ಲ. ತದನಂತರ ನೀರು ಸರಬರಾಜು ಮಾಡಲು ಹೋದಾಗ ರೈತರು ತಮ್ಮ ಹೊಲಗಳನ್ನು ನೀರಾವರಿ, ಗದ್ದೆ ಮಾಡುವಾಗ ಪೈಪ್‌ಲೈನ್ ಒಡೆದಿದ್ದ ಕಾರಣ ನೀರು ಸರಬರಾಜು ಮಾಡಲಾಗಲಿಲ್ಲ. ೨೦೧೮-೧೯ನೇ ಸಾಲಿನ ಯೋಜನೆಯಡಿಯಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ಅನುದಾನ ಮಂಜೂರಾಗಿದ್ದು, ಸದರಿ ಕಾಮಗಾರಿಯ ಅಂದಾಜು ಪತ್ರಿಕೆಯನ್ನು ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಅದೇ ರೀತಿ ಯರಗೋಳ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ೨೦೧೬ರಲ್ಲಿ ನೀರು ಸರಬರಾಜು ಮಾಡಲಾಗಿತ್ತು. ಆದರೆ, ರಾಷ್ಟಿçÃಯ ಹೆದ್ದಾರಿ ಕಾಮಗಾರಿ ಪ್ರಯುಕ್ತ ಸದರಿ ಪೈಪ್‌ಲೈನ್ ಸ್ಥಳಾಂತರವನ್ನು ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದಿಂದ ಪ್ರಗತಿಯಲ್ಲಿದೆ. ಇದರಿಂದಾಗಿ ನೀರು ಸರಬರಾಜು ಸ್ಥಗಿತಗೊಂಡಿರುತ್ತದೆ ಎಂದು ಸಭೆಗೆ ವರದಿ ನೀಡಿದರು. ಆಗ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಮಾತನಾಡಿ, ಪೈಪ್‌ಲೈನ್ ಸ್ಥಳಾಂತರಿಸುವ ಮೊದಲು ಹೊಸ ಪೈಪ್‌ಲೈನ್ ಹಾಕಬೇಕಿತ್ತು ಎಂಬುದಾಗಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಪ್ರಾದೇಶಿಕ ಆಯುಕ್ತರು ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ಸುಬೋಧ್ ಯಾದವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ ಭಗವಾನ್ ಸೋನವಣೆ, ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತಾಲಯದ ಅಪರ ಆಯುಕ್ತರಾದ ನಳಿನ್ ಅತುಲ್, ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಮುಕ್ಕಣ್ಣ ಕರಿಗಾರ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಇಂದು ಅಭಿರಂಗ ಮಕ್ಕಳ ನಾಟಕೋತ್ಸವ
ಯಾದಗಿರಿ, ಡಿಸೆಂಬರ್ ೨೧ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ರಾಜ್ಯ ಬಾಲ ಭವನ ಸೂಸೈಟಿ ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಬಾಲ ಭವನ ಸೂಸೈಟಿಯ ಸಂಯುಕ್ತಾಶ್ರಯದಲ್ಲಿ “ಅಭಿರಂಗ” ಮಕ್ಕಳ ನಾಟಕೋತ್ಸವವನ್ನು ಡಿಸೆಂಬರ್ ೨೨ರಂದು ಯಾದಗಿರಿ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಬೀದಿ ನಾಟಕ: ಸ್ವಚ್ಛ ಭಾರತ ಅಭಿಯಾನ, ಪರಿಸರ ಮಾಲಿನ್ಯ, ಹಾಗೂ ಬಾಲ್ಯ ವಿವಾಹದ ಕುರಿತು ಬೀದಿ ನಾಟಕ ಪ್ರದರ್ಶನವನ್ನು ಬೆಳಿಗ್ಗೆ ೧೧ರಿಂದ ಮಧ್ಯಾಹ ೧ ಗಂಟೆಗೆಯವರೆಗೆ ಯಾದಗಿರಿ ನಗರದ ಹೊಸ ಬಸ್‌ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ್ ಉದ್ಘಾಟಿಸುವರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಪ್ಪ ಪಾಟೀಲ್, ಜಿಲ್ಲಾ ಬಾಲ ಭವನ ಸೂಸೈಟಿಯ ಸದಸ್ಯರಾದ ಚನ್ನಬಸಪ್ಪ ಕುಳಗೇರಿ ಅವರು ಮುಖ್ಯ ಅಥಿತಿಗಳಾಗಿ ಆಗಮಿಸುವರು.
ರಂಗ ಪ್ರದರ್ಶನ: ಅಯ್ಯಪ್ಪ ದೊರೆ ಅವರ ನಿರ್ದೇಶನದ “ಭಕ್ತ ಪ್ರಹ್ಲಾದ” ಹಾಗೂ ಶ್ರೀನಿವಾಸ ಕಶೆಟ್ಟಿ ಅವರ ನಿರ್ದೇಶನದ “ನಂದಾ ದೀಪ” ರಂಗಪ್ರರ್ದಶನವನ್ನು ಸಂಜೆ ೫.೩೦ ರಿಂದ ೭ ಗಂಟೆಯವರೆಗೆ ಯಾದಗಿರಿ ನಗರದ ಲುಂಬಿನಿ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪ್ರಕಾಶ್ ಅರ್ಜುನ ಬನಸೋಡೆ ಅವರು ಉದ್ಘಾಟಿಸುವರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಭಾಕರ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಡಾ.ಹಣಮಂತ್ರಾಯ ಕರಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ದೊಡ್ಡಪ್ಪ ಹೊಸಮನಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯ ಬಿ.ಜಿ. ಪಾಟೀಲ್, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಬಸಪ್ಪ ಕುಳಗೇರಿ, ಕನ್ನಡ ಮತ್ತು ಸಂಸ್ಕçತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶರಣಪ್ಪ ಪಾಟೀಲ್ ಹಾಗೂ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕ ರಘುವೀರ ಸಿಂಗ್ ಠಾಕೂರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಡಿಸೆಂಬರ್ ತಿಂಗಳ ಪಡಿತರ ಧಾನ್ಯ ಬಿಡುಗಡೆ
ಯಾದಗಿರಿ, ಡಿಸೆಂಬರ್ ೨೧ (ಕರ್ನಾಟಕ ವಾರ್ತೆ): ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಿಗೆ ಡಿಸೆಂಬರ್ ತಿಂಗಳ ಪಡಿತರ ಧಾನ್ಯ ಬಿಡುಗಡೆ ಮಾಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂತ್ಯೋದಯ ಅನ್ನ ಯೋಜನೆಯ ೨೬,೫೩೪ ಪಡಿತರ ಚೀಟಿಗಳಿಗೆ ತಲಾ ೩೫ ಕೆ.ಜಿ ಅಕ್ಕಿ, ೨,೨೯,೪೨೨ ಬಿಪಿಎಲ್ ಪಡಿತರ ಚೀಟಿಗಳ ೮,೧೪,೮೫೭ ಸದಸ್ಯರಿಗೆ ತಲಾ ೭ ಕೆ.ಜಿ ಅಕ್ಕಿಯನ್ನು ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ವಿತರಿಸಲು ಹಂಚಿಕೆ ನೀಡಲಾಗಿದೆ. ಪಡಿತರ ಚೀಟಿದಾರರು ತಮ್ಮ ಹಕ್ಕಿನಲ್ಲಿರುವ ಅಕ್ಕಿಯನ್ನು ಆಯಾ ನ್ಯಾಯಬೆಲೆ ಅಂಗಡಿಗಳಲ್ಲಿ ತಪ್ಪದೇ ಪಡೆದುಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
ಜಿಲ್ಲೆಯ ೩೯೯ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು (Poiಟಿಣ oಜಿ Sಚಿಟe – PಔS Shoಠಿ ಒoಜuಟe) ವ್ಯವಸ್ಥೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯನ್ವಯ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಆಯಾ ತಾಲ್ಲೂಕಿನ ತಹಶೀಲ್ದಾರ್, ಜಿಲ್ಲೆಯ ಉಪ ನಿರ್ದೇಶಕರ ಕಚೇರಿ ಅಥವಾ ಸಹಾಯವಾಣಿ ೧೯೬೭ ಸಂಖ್ಯೆಗೆ ದೂರನ್ನು ದಾಖಲಿಸಬಹುದು. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರು ಪಡಿತರ ಪಡೆಯುವ ವೇಳೆಯಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ಆಧಾರ್ ಸಂಖ್ಯೆಯೊAದಿಗೆ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಂದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ
ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳು ತ್ವರಿತಗೊಳಿಸಲು ಕ್ರಮ
-:ತ.ಮ. ವಿಜಯ್ ಭಾಸ್ಕರ್
ಯಾದಗಿರಿ, ಡಿಸೆಂಬರ್ ೨೧ (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಸಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ರಾಜ್ಯ ಮಟ್ಟದಲ್ಲಿ ಚರ್ಚಿಸಿ ತ್ವರಿತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ತ.ಮ. ವಿಜಯ್ ಭಾಸ್ಕರ್ ಅವರು ತಿಳಿಸಿದರು.
ಅವರು ಡಿ.೨೧ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ನಡೆಸಿ ನೂತನ ಜಿಲ್ಲಾಸ್ಪತ್ರೆ (ಮೆಡಿಕಲ್ ಕಾಲೇಜು) ಕಟ್ಟಡವನ್ನು ಪರಿಶೀಲಿಸಿದ ನಂತರ ವರದಿಗಾರರೊಂದಿಗೆ ಮಾತನಾಡಿದರು.
ಜಿಲ್ಲೆಯಲ್ಲಿ ೩೦೦ ಹಾಸಿಗೆಗಳ ಸುಸಜ್ಜಿತ ನೂತನ ಜಿಲ್ಲಾಸ್ಪತ್ರೆ ಕಟ್ಟಡ ಸಿದ್ಧವಾಗಿದೆ. ಈ ಆಸ್ಪತ್ರೆಗೆ ರಾಷ್ಟಿçÃಯ ಹೆದ್ದಾರಿ(ಮುಖ್ಯರಸ್ತೆ)ಯಿಂದ ಸಂಪರ್ಕ ಕಲ್ಪಿಸುವ ರಸ್ತೆ ಜನವರಿ ಅಂತ್ಯಕ್ಕೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಆಸ್ಪತ್ರೆಗೆ ಮಾನವ ಸಂಪನ್ಮೂಲ ವಾರ್ಷಿಕ ವೆಚ್ಚ ೫೦ ಕೋಟಿ ರೂ. ಆಗಲಿದ್ದು, ವೈದ್ಯರು ಮತ್ತು ಸಿಬ್ಬಂದಿಗಳ ನೇಮಕಾತಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪೀಠೋಪಕರಣ ಮತ್ತು ವೈದ್ಯಕೀಯ ಸಾಮಗ್ರಿಗಳನ್ನು ಒದಗಿಸಲು ಟೆಂಡರ್ ಕರೆಯಲಾಗಿದೆ. ನೂತನ ಜಿಲ್ಲಾಸ್ಪತ್ರೆ ಕಾರ್ಯರೂಪಕ್ಕೆ ಬಂದಲ್ಲಿ ಜಿಲ್ಲೆಗೆ ಮಂಜೂರಾಗಿರುವ ವೈದ್ಯಕೀಯ ಕಾಲೇಜು ಕೂಡ ಆರಂಭಿಸಲು ಅನುಕೂಲವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಮಳೆ ನೀರು ಸಂಗ್ರಹಕ್ಕೆ ಕ್ರಮ ಕೈಗೊಳ್ಳಬೇಕು. ಜಲ ಮರುಪೂರಣಕ್ಕಿಂತ ಮಳೆನೀರು ಮರುಬಳಕೆ ಮಾಡಲು ವ್ಯವಸ್ಥೆ ಮಾಡಬೇಕು ಎಂದು ಅವರು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಇದಕ್ಕೂ ಮುನ್ನ ಅವರು ಯಾದಗಿರಿ ತಾಲ್ಲೂಕಿನ ಬಂದಳ್ಳಿ ಗ್ರಾಮದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಅನುಷ್ಠಾನಗೊಳಿಸುತ್ತಿರುವ ಏಕಲವ್ಯ ಮಾದರಿಯ ವಸತಿ ಶಾಲೆಯ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ಪ್ರಾಂಶುಪಾಲರನ್ನು ನೇಮಕ ಮಾಡಿ ಬರುವ ಜೂನ್ ೧ರಿಂದ ವಸತಿ ಶಾಲೆ ಕಾರ್ಯಾರಂಭ ಮಾಡಬೇಕು. ನೇಮಕ ವಿಳಂಬವಾದಲ್ಲಿ ಪ್ರಾಂಶುಪಾಲರ ನಿಯೋಜನೆ ಮಾಡುವಂತೆ ಅವರು ನಿರ್ದೇಶಿಸಿದರು. 
ನಂತರ ವಸತಿ ಶಾಲೆಯ ಹತ್ತಿರ ನಿರ್ಮಾಣವಾಗುತ್ತಿರುವ ಹೈಟೆಕ್ ಜವಳಿ ತರಬೇತಿ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದರು. ತರಬೇತಿ ಕೇಂದ್ರವನ್ನು ಮಾರ್ಚ್ ಅಂತ್ಯದೊಳಗೆ ಆರಂಭಿಸಬೇಕು. ತರಬೇತಿಗಾಗಿ ಮಷೀನ್‌ಗಳು ಬಂದ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ, ವಿದ್ಯುತ್ ಸಂಪರ್ಕ ಇಲ್ಲವೆಂದು ನೆಪ ಹೇಳುವಂತಿಲ್ಲ ಎಂದು ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶೌಚಾಲಯ ಬಳಸದಿದ್ದರೆ ಅನುದಾನ ವಾಪಸ್: ಬಂದಳ್ಳಿ ಗ್ರಾಮದಲ್ಲಿ ವೈಯಕ್ತಿಕ ಶೌಚಾಲಯಗಳ ಬಳಕೆ ಕುರಿತು ಪರಿಶೀಲಿಸಿದರು. ಕೆಲವರು ಕೋಳಿಗೂಡು
ಮತ್ತು ಇನ್ನಿತರ ವಸ್ತುಗಳನ್ನು ಇಟ್ಟಿರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ವೈಯಕ್ತಿಕ ಶೌಚಾಲಯಗಳನ್ನು ಬಳಸದ ಸಂಬAಧಿಸಿದ ಸಾರ್ವಜನಿಕರಿಗೆ ಶೌಚಾಲಯ ನಿರ್ಮಾಣಕ್ಕಾಗಿ ಸರ್ಕಾರ ನೀಡಿದ ಅನುದಾನವನ್ನು ವಾಪಸ್ ಪಡೆಯುವುದಾಗಿ ಎಚ್ಚರಿಕೆಯ ನೋಟಿಸ್ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.
ಪ್ರತಿ ತಿಂಗಳು ಪಡಿತರ ಧಾನ್ಯವನ್ನು ಸರಿಯಾಗಿ ವಿತರಿಸುತ್ತಿರುವ ಬಗ್ಗೆ ಹಾಗೂ ಪಡಿತರ ಚೀಟಿಗೆ ಆಧಾರ್ ದೃಢೀಕರಣ (ಇ-ಕೆವೈಸಿ), ಶಿಕ್ಷಕರು ಸರಿಯಾದ ಸಮಯಕ್ಕೆ ಶಾಲೆಗೆ ಹಾಜರಾಗುತ್ತಿರುವ ಬಗ್ಗೆ ಗ್ರಾಮಸ್ಥರಿಂದ ಈ ಸಂದರ್ಭದಲ್ಲಿ ಮಾಹಿತಿ ಪಡೆದರು.
ಅನುದಾನ ಬಿಡುಗಡೆಗೆ ಸೂಚನೆ: ಯಾದಗಿರಿ ತಾಲ್ಲೂಕಿನ ಎಂ.ಹೊಸಳ್ಳಿ ತಾಂಡಾದಲ್ಲಿ ಅಲೆಮಾರಿ ಸಮುದಾಯದ ವಸತಿ ಕಾಲೊನಿಯಲ್ಲಿ ನಿರ್ಮಿಸುತ್ತಿರುವ ಮನೆಗಳ ಕಾಮಗಾರಿಯನ್ನು ಪರಿಶೀಲಿಸಿದ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಪ್ರತಿ ಮನೆಗೆ ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತದಿಂದ ೧.೫ ಲಕ್ಷ ರೂ. ಹಾಗೂ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ೩.೫ ಲಕ್ಷ ರೂ. ಫಲಾನುಭವಿಗಳಿಗೆ ಸಂದಾಯವಾಗುತ್ತದೆ. ೩.೫ ಲಕ್ಷ ರೂ.ಗಳ ಪೈಕಿ ೧.೭೫ ಲಕ್ಷ . ಮಾರೂತ್ರ ಬಂದಿದೆ ಎಂಬುದಾಗಿ ಅಧಿಕಾರಿಗಳಿಂದ ವರದಿ ಪಡೆದರು. ಸ್ಥಳದಲ್ಲಿಯೇ ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಕರೆ ಮಾಡಿ, ಜಿಲ್ಲಾಧಿಕಾರಿಗಳಿಂದ ಅನುದಾನ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಸಿ ೬ ತಿಂಗಳಾಗಿದೆ. ಸೋಮವಾರದೊಳಗೆ ಅನುದಾನ ಬಿಡುಗಡೆ ಮಾಡಬೇಕು. ಅದೇ ರೀತಿ ವಸತಿ ನಿಗಮದಿಂದಲೂ ತಕ್ಷಣ ಅನುದಾನ ಬಿಡುಗಡೆ ಮಾಡುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿ ಸೂಚಿಸಿದರು.
ಯಾದಗಿರಿ ನಗರದ ಬಾಲಕಿಯರ ಬಾಲ ಮಂದಿರ, ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿ ಯಾದಗಿರಿಯ ನಾಲಾ ಹೂಳೆತ್ತಿರುವ ಕಾಮಗಾರಿಯನ್ನೂ ಕೂಡ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪರಿಶೀಲಿಸಿದರು. ನಂತರ ನಾಗರಬಂಡ ಅಂಗನವಾಡಿ ಕೇಂದ್ರ, ಸೈದಾಪುರದ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದ ಮುಖ್ಯ ಕಾರ್ಯದರ್ಶಿಗಳು ಅಲ್ಲಿ ಭೋಜನ ಸವಿದರು. ತದನಂತರ ಕಡೇಚೂರು ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಸೇರಿದಂತೆ ಸಂಬAಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ಶುಕ್ರವಾರ, ಡಿಸೆಂಬರ್ 20, 2019

ಇಂದು ಜಿಲ್ಲೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಭೇಟಿ
ಯಾದಗಿರಿ, ಡಿಸೆಂಬರ್ ೨೦ (ಕರ್ನಾಟಕ ವಾರ್ತೆ): ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ತ.ಮ. ವಿಜಯ್ ಭಾಸ್ಕರ್ ಅವರು ಡಿಸೆಂಬರ್ ೨೧ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಶನಿವಾರ ಬೆಳಿಗ್ಗೆ ೯ರಿಂದ ಸಂಜೆ ೪ ಗಂಟೆಯವರೆಗೆ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿವೀಕ್ಷಣೆ ನಡೆಸುವರು. ಸಂಜೆ ೪.೩೦ ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ರಾತ್ರಿ ೧೦.೩೦ ಗಂಟೆಗೆ ರೈಲು ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಸರಕು ವಾಹನಗಳಲ್ಲಿ ಜನರ ಸಾಗಣೆ: ೪ ವಾಹನಗಳ ಜಪ್ತಿ
ಹತ್ತಿ ಬಿಡಿಸಲು ಹೊರಟಿದ್ದ ೭ ಮಕ್ಕಳು ಮರಳಿ ಶಾಲೆಗೆ
ಯಾದಗಿರಿ, ಡಿಸೆಂಬರ್ ೨೦ (ಕರ್ನಾಟಕ ವಾರ್ತೆ): ಸುರಪುರ ತಾಲ್ಲೂಕಿನ ದೇವಾಪುರ ಮತ್ತು ಇತರೆ ಗ್ರಾಮಗಳಲ್ಲಿ ಶುಕ್ರವಾರ ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಶಾಲೆಬಿಟ್ಟ ಮಕ್ಕಳ ತಪಾಸಣೆ ನಡೆಸಿದರು. ಹತ್ತಿ ಬಿಡಿಸಲು ಹೊರಟಿದ್ದ ೬ರಿಂದ ೧೮ ವರ್ಷದೊಳಗಿನ ಮಕ್ಕಳನ್ನು ತನಿಖೆ ನಡೆಸಿ ೭ ಮಕ್ಕಳ ವರದಿಯನ್ನು ಪಡೆದು ಶಾಲೆಗೆ ದಾಖಲಿಸಿದ್ದಾರೆ.
ಪತ್ತೆಯಾದ ೭ ಮಕ್ಕಳಲ್ಲಿ ೯ನೇ ತರಗತಿಗೆ ಸಂಬ0ಧಿಸಿದ ೨ ಹೆಣ್ಣುಮಕ್ಕಳನ್ನು ದೇವಾಪೂರ ಪ್ರೌಢ ಶಾಲೆಗೆ ದಾಖಲಿಸಲಾಗಿರುತ್ತದೆ. ೧ ಗಂಡು ಮತ್ತು ೨ ಹೆಣ್ಣು ಮಕ್ಕಳನ್ನು ಆಲ್ದಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಹಾಗೂ ಉಳಿದ ೨ ಹೆಣ್ಣು ಮಕ್ಕಳನ್ನು ಸುರಪುರ ತಾಲ್ಲೂಕಿನ ಪ್ರಿಯದರ್ಶಿನಿ ಅನುದಾನಿತ ಎಚ್.ಎಸ್ ಶಾಲೆಗೆ ದಾಖಲಿಸಲಾಗಿರುತ್ತದೆ.
ಅನಿರೀಕ್ಷಿತ ದಾಳಿ ಮಾಡಿದಾಗ ಟಂಟA ಮತ್ತು ಜೀಪ್‌ಗಳಲ್ಲಿ ಜನರನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬAದಿದೆ. ಈ ವಾಹನಗಳನ್ನು ತಡೆಹಿಡಿದು ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳ ತಂಡ ವಾಹನ ಚಾಲಕರ ಮತ್ತು ಮಕ್ಕಳ ಮಾಹಿತಿಯನ್ನು ಪಡೆಯಿತು. ಪೊಲೀಸರು ಒಟ್ಟು ೪ ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದು ವಾಹನಕ್ಕೆ ದಂಡ ವಿಧಿಸುವುದರ ಜೊತೆಗೆ ೧೯೮೮ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಬ0ಧಿಸಿದ ವಾಹನ ಚಾಲಕರಿಗೆ ಚಾಲನೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಂಡಿದ್ದಾರೆ.
ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಮಾತನಾಡಿ, ಜಿಲ್ಲೆ ಮತ್ತು ತಾಲ್ಲೂಕಿನಾದ್ಯಂತ ೧೯೮೬ರ ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಕಲಂ ೧೭ ರಡಿ ನಿರೀಕ್ಷಕರುಗಳಾಗಿ ನೇಮಕಗೊಂಡಿರುವ ಮತ್ತು ೧೯೬೧ರ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯ ಕಲಂ ೨೬ (೨)ರಡಿ ಹೆಚ್ಚುವರಿ ನಿರೀಕ್ಷಕರಾಗಿ ನೇಮಕಗೊಂಡಿರುವ ಅಧಿಕಾರಿಗಳೊಂದಿಗೆ ತನಿಖಾ ತಂಡಗಳನ್ನು ರಚಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ತನಿಖಾ ತಂಡಗಳ ಜೊತೆಯಲ್ಲಿ ಸೂಚಿಸಿರುವ ಎಲ್ಲಾ ಇಲಾಖೆಗಳು ಸೇರಿಕೊಂಡು ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಗ್ಯಾರೇಜ್, ಬಾರ್‌ಅಂಗಡಿ ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಅಪಾಯಕಾರಿ ಮತ್ತು ಅಪಾಯಕಾರಿ ಅಲ್ಲದ ಬಾಲಕಾರ್ಮಿಕ ಮಕ್ಕಳು ಮತ್ತು ಶಾಲೆಬಿಟ್ಟ ಮಕ್ಕಳನ್ನು ಪತ್ತೆ ಹಚ್ಚಬೇಕಿದೆ. ಅದರಂತೆ ೧೯೮೬ರ ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಕಲಂ ೧೭ ರಡಿ ನಿರೀಕ್ಷಕರುಗಳಾಗಿ ನೇಮಕಗೊಂಡಿರುವ ಅಧಿಕಾರಿಗಳಿಂದ ಇನ್ನಿತರೆ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಿ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಶಾಲೆಬಿಟ್ಟ ಮಕ್ಕಳನ್ನು ನೇರವಾಗಿ ಕಡ್ಡಾಯ ಶಿಕ್ಷಣ ಕಾಯ್ದೆ-೨೦೦೯ರ ಅನ್ವಯ ಶಿಕ್ಷಣ ಇಲಾಖೆ ವತಿಯಿಂದ ಸರ್ವಶಿಕ್ಷಣ ಅಭಿಯಾನಡಿ ಸಂಬ0ಧಿಸಿದ ಶಾಲಾ ಮುಖ್ಯಗುರುಗಳ ಮೂಲಕ ಹತ್ತಿರದ ಸರ್ಕಾರಿ, ಖಾಸಗಿ ಶಾಲೆಗಳಿಗೆ ಕಡ್ಡಾಯವಾಗಿ ದಾಖಲಿಸಲಾಗುತ್ತಿದೆ ಎಂದು ತಿಳಿಸಿದರು.
ಪತ್ತೆಯಾದ ಬಾಲಕಾರ್ಮಿಕರಿಗೆ ವಸತಿಯ ಅವಶ್ಯಕತೆ ಇದ್ದಲ್ಲಿ ಅಂತಹ ಮಕ್ಕಳನ್ನು ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆಯಿಂದ ಹಾಗೂ ಸರಕಾರದಿಂದ ನಡೆಯುವ ವಸತಿಶಾಲೆಗಳಲ್ಲಿ ಶಿಕ್ಷಣದ ಜೊತೆ ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಜಿಲ್ಲೆ, ತಾಲ್ಲೂಕಿನಾದ್ಯಂತ ಅನಿರೀಕ್ಷಿತ ತಪಾಸಣೆ, ದಾಳಿಗಳನ್ನು ಕೈಗೊಂಡು ಪತ್ತೆ ಹಚ್ಚಲಾದ ಮಕ್ಕಳನ್ನು ನೇರವಾಗಿ ಶಾಲೆಗೆ ದಾಖಲಿಸಲು ಸೂಚಿಸಿರುತ್ತಾರೆ ಎಂದು ಅವರು ವಿವರಿಸಿದರು.
ಸರಕು ಸಾಗಾಣೆ ವಾಹನಗಳಲ್ಲಿ ಹೊಲಗದ್ದೆ, ಕೂಲಿ, ಕೃಷಿ ಆಧಾರಿತ ಕೆಲಸಗಳಿಗಾಗಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬAದಿರುವ ಪ್ರಯುಕ್ತ ಯಾವುದೇ ರೀತಿಯ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಮೋಟರ್ ವಾಹನ ಕಾಯ್ದೆಯಡಿಯಲ್ಲಿ ಆರ್.ಟಿ.ಓ ಮತ್ತು ಪೊಲೀಸ್ ಇಲಾಖೆಗಳು ಜಂಟಿಯಾಗಿ ತಪಾಸಣೆ ಕೈಗೊಂಡು ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ದಾಳಿಯಲ್ಲಿ ಉಪ ತಹಶೀಲ್ದಾರ್ ರೇವಪ್ಪ ತೆಗ್ಗಿನಮನಿ, ಕಂದಾಯ ನಿರೀಕ್ಷಕರಾದ ವಿಠ್ಠಲ್ ಬನ್ಸಾಲ್, ಗುರುಬಸಯ್ಯ, ಗ್ರಾಮ ಲೆಕ್ಕಿಗರಾದ ಪ್ರತಾಪ್, ಬಸವರಾಜ ಶೆಟ್ಟಿ, ಅಂಗನವಾಡಿ ಮೇಲ್ವಿಚಾರಕಿ ಸರೋಜಿನಿ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ನಾಳೆ ವಿದ್ಯುತ್ ವ್ಯತ್ಯಯ
ಯಾದಗಿರಿ, ಡಿಸೆಂಬರ್ ೨೦ (ಕರ್ನಾಟಕ ವಾರ್ತೆ): ೧೧ ಕೆವಿ ವಿದ್ಯುತ್ ಮಾರ್ಗಗಳ ಐ.ಪಿ.ಡಿ.ಎಸ್ ಕಾಮಗಾರಿ ಕೆಲಸ ಕೈಗೊಳ್ಳುತ್ತಿರುವುದರಿಂದ ಯಾದಗಿರಿ ನಗರದ ಈ ಕೆಳಕಂಡ ಪ್ರದೇಶಗಳಲ್ಲಿ ಡಿಸೆಂಬರ್ ೨೨ರಂದು ಬೆಳಿಗ್ಗೆ ೯ರಿಂದ ಸಂಜೆ ೫ ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇAಡಸ್ಟಿçÃಯಲ್ ಏರಿಯಾ (ಎಫ್-೪) ವ್ಯಾಪ್ತಿಯ ಮುಂಡರಗಿ ಇಂಡಸ್ಟಿçÃಯಲ್ ಏರಿಯಾ ಮತ್ತು ವರ್ಕನಹಳ್ಳಿ ಇಂಡಸ್ಟಿçÃಯಲ್ ಏರಿಯಾ ಹಾಗೂ ಮಾತಾ ಮಾಣಿಕೇಶ್ವರಿ ನಗರ (ಎಫ್-೧) ವ್ಯಾಪ್ತಿಯ ಶಹಜೀವನ್ ಶಾ ದರ್ಗಾ, ಅನಪೂರ ಮೌಲಾಲಿ ಲೇಔಟ್, ಆದರ್ಶ ನಗರ, ಹೊಸಳ್ಳಿ ಕ್ರಾಸ್ ಮತ್ತು ರಾಘವೇಂದ್ರ ಸ್ವಾಮಿ ದೇವಸ್ಥಾನ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಗ್ರಾಹಕರು ಜೆಸ್ಕಾಂನೊAದಿಗೆ ಸಹಕರಿಸಬೇಕಾಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಡಿ.೨೩ರಂದು ವಿದ್ಯುತ್ ಗ್ರಾಹಕರ ಸಭೆ
ಯಾದಗಿರಿ, ಡಿಸೆಂಬರ್ ೨೦ (ಕರ್ನಾಟಕ ವಾರ್ತೆ): ಯಾದಗಿರಿ ಉಪ ವಿಭಾಗದ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಕಾರ್ಯನಿರ್ವಾಹಕ ಇಂಜಿನಿಯರ್ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ ೨೩ರಂದು ಬೆಳಿಗ್ಗೆ ೧೧ರಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜೆಸ್ಕಾಂ ಯಾದಗಿರಿ ಉಪ ವಿಭಾಗ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಕೋರಲಾಗಿದೆ.
ಡಿ.೨೭ರಂದು ಸ್ಥಾಯಿ ಸಮಿತಿ ಸಭೆ
ಯಾದಗಿರಿ, ಡಿಸೆಂಬರ್ ೨೦ (ಕರ್ನಾಟಕ ವಾರ್ತೆ): ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಸಭೆಯನ್ನು ಸಮಿತಿಯ ಅಧ್ಯಕ್ಷರಾದ ಭೀಮರೆಡ್ಡಿ ಗೌಡ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ ೨೭ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯುವಜನ ಮೇಳದಲ್ಲಿ ಭಾಗವಹಿಸಲು ಸೂಚನೆ
ಯಾದಗಿರಿ, ಡಿಸೆಂಬರ್ ೨೦ (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ೨೦೧೯-೨೦ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜನವರಿ ೪ರಂದು ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ೧೫ರಿಂದ ೩೫ ವರ್ಷದೊಳಗಿನ ಯುವಕ- ಯುವತಿಯರು ಭಾಗವಹಿಸಬಹುದು.
ಸ್ಪರ್ಧೆಗಳ ವಿವರ: ಕೋಲಾಟ (೧೨ ಜನ ಗುಂಪು ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ), ಡೊಳ್ಳು ಕುಣಿತ (೧೦ ಜನರಿಗೆ) ದೊಡ್ಡಾಟ (೧೦ ಜನರ ಗುಂಪು), ಜಾನಪದ ನೃತ್ಯ (೧೨ ಜನ ಗುಂಪು), ಜನಪದ ಗೀತೆ (ವೈಯಕ್ತಿಕ ಮತ್ತು ಗುಂಪು), ಭಜನೆ ಪದ (೧೨ ಜನ), ಭಾವಗೀತೆ (೨), ತಬಲಾ ವಾದ್ಯ (ವೈಯಕ್ತಿಕ), ಹಾರ್ಮೋನಿಯಂ (ವೈಯಕ್ತಿಕ), ಸಣ್ಣಾಟ (೧೨ ಜನ), ವೀರಗಾಸೆ (೧೨ ಜನ), ಗೀಗೀಪದ (೧೦ ಜನ) ಜೋಳ ಬೀಸುವ/ಕುಟ್ಟುವ ಪದ (೫ ಜನ), ಸೋಬಾನ ಪದ (೧೨ ಜನ), ಶಾಸ್ತಿçÃಯ ಸಂಗೀತ (೬ ಜನ), ಚರ್ಮವಾದ್ಯ ಮೇಳ, ಏಕ ಪಾತ್ರಾಭಿನಯ.
ವಿದ್ಯಾರ್ಥಿ- ವಿದ್ಯಾರ್ಥಿನಿಯರು, ಕಲಾ ತಂಡಗಳು, ಯುವಕ ಸಂಘಗಳ ಸದಸ್ಯರುಗಳು ಕೂಡ ಭಾಗವಹಿಸಬಹುದು. ವಯಸ್ಸಿನ ಬಗ್ಗೆ ದೃಢೀಕರಣ ಪ್ರಮಾಣ ಪತ್ರ ತರತಕ್ಕದ್ದು. ಯುವಜನ ಮೇಳದಲ್ಲಿ ಭಾಗವಹಿಸುವ ಕಲಾವಿದರಿಗೆ ದಿನಭತ್ಯೆ ಮತ್ತು ಪ್ರಯಾಣ ಭತ್ಯೆ ಸೌಲಭ್ಯವಿದ್ದು, ಬ್ಯಾಂಕ್ ಪಾಸ್‌ಬುಕ್ ಮತ್ತು ಆಧಾರ್ ಕಾರ್ಡ್ ಜಿರಾಕ್ಸ್ ಪ್ರತಿ ಕಡ್ಡಾಯವಾಗಿ ತರತಕ್ಕದ್ದು. ಜಿಲ್ಲಾ ಮಟ್ಟದಲ್ಲಿ ಯುವಜನ ಮೇಳದಲ್ಲಿ ವೈಯಕ್ತಿಕ ಪ್ರಥಮ ಸ್ಥಾನ ಮತ್ತು ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಬಂದವರಿಗೆ ರಾಜ್ಯ ಮಟ್ಟದ ಯುವಜನ ಮೇಳಕ್ಕೆ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ:೯೯೪೫೬೨೬೧೦೪, ೯೮೮೬೬೭೫೨೬೩ ಸಂಪರ್ಕಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಚನಬಸಪ್ಪ ಕುಳಗೇರಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಗುರುವಾರ, ಡಿಸೆಂಬರ್ 19, 2019

ಡಿ.೨೧ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ
ಯಾದಗಿರಿ, ಡಿಸೆಂಬರ್ ೧೯ (ಕರ್ನಾಟಕ ವಾರ್ತೆ): ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ತಿದ್ದುಪಡಿ ಜಾರಿಗೆ ತಂದಿರುವುದನ್ನು ವಿರೋಧಿಸಿ ಹಾಗೂ ನಾಗರಿಕ ರಾಷ್ಟಿçಯ ನೋಂದಣಿ ಜಾರಿ ಮಾಡಿದ್ದನ್ನು ವಿರೋಧಿಸುವ ಹಿನ್ನೆಲೆಯಲ್ಲಿ ಕೆಲವು ಸಂಘ-ಸ0ಸ್ಥೆಗಳು “ಬಂದ್” ಪ್ರತಿಭಟನೆಗೆ ರಾಷ್ಟಿçಯ ಕರೆ ನೀಡಿರುವ ಪ್ರಯುಕ್ತ ಯಾದಗಿರಿ ಜಿಲ್ಲೆಯಾದ್ಯಂತ ಡಿಸೆಂಬರ್ ೧೮ರ ರಾತ್ರಿ ೯ ಗಂಟೆಯಿ0ದ ಡಿ.೨೧ರ ರಾತ್ರಿ ೧೧.೫೯ ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯೆ ಸಂಹಿತೆ ೧೯೭೩ರ ಕಲಂ ೧೪೪ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ ಐದು ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಮಾಡಬಾರದು. ಮೆರವಣಿಗೆ, ಸಭೆ, ಸಮಾರಂಭ, ರ‍್ಯಾಲಿ ನಡೆಸಬಾರದು. ಬಹಿರಂಗ ಘೋಷಣೆ ಅಥವಾ ಪ್ರಚೋದನಕಾರಿ ಘೋಷಣೆಗಳನ್ನು ಕೂಗುವುದನ್ನು ಮಾಡಬಾರದು. ಬಂದೂಕು, ಭರ್ಚಿ, ಕತ್ತಿ, ಚಾಕು, ಕುಡುಗೋಲು, ಕೊಡಲಿ, ಬಡಿಗೆ ಸೇರಿದಂತೆ ಯಾವುದೇ ಮಾರಕಾಸ್ತç ಮತ್ತು ಸ್ಫೋಟಕ ವಸ್ತುಗಳನ್ನು ಜೊತೆಗೆ ಕೊಂಡೊಯ್ಯಬಾರದು. ಜೀವಂತ ಅಥವಾ ಮೃತ ವ್ಯಕ್ತಿಯ ಭಾವಚಿತ್ರ ಅಥವಾ ಪ್ರತಿರೂಪವನ್ನು ಪ್ರದರ್ಶಿಸುವ ಇಲ್ಲವೇ ಇತರೆ ಕಾರ್ಯವನ್ನು ನಿಷೇಧಿಸಲಾಗಿದೆ. ಶವ ಸಂಸ್ಕಾರ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಶಾಲಾ-ಕಾಲೇಜು, ಶಿಕ್ಷಣ ಸಂಸ್ಥೆಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...