ಸೋಮವಾರ, ಡಿಸೆಂಬರ್ 9, 2019

ಸರಕು ಸಾಗಾಣೆ ವಾಹನಗಳಲ್ಲಿ ಮಕ್ಕಳ ಸಾಗಣೆ: ೬ ಟಂಟಂ ಜಪ್ತಿ
೧೮ ವರ್ಷದೊಳಗಿನ ೨೫ ಮಕ್ಕಳು ಶಾಲೆಗೆ ದಾಖಲು
ಯಾದಗಿರಿ, ಡಿಸೆಂಬರ್ ೦೭ (ಕರ್ನಾಟಕ ವಾರ್ತೆ): ಯಾದಗಿರಿ ತಾಲ್ಲೂಕಿನ ರಾಮಸಮುದ್ರ ಗ್ರಾಮದಲ್ಲಿ ಶುಕ್ರವಾರ ವಿವಿಧ ಇಲಾಖೆಗಳ ಅಧಿಕಾರಿಗಳು ದಾಳಿ ನಡೆಸಿ, ಶಾಲೆಬಿಟ್ಟ ಮಕ್ಕಳ ತಪಾಸಣೆ ನಡೆಸಿದರು. ಪತ್ತೆಯಾದ ಒಟ್ಟು ೫೪ ಜನ ಮಕ್ಕಳಲ್ಲಿ ತನಿಖೆ ನಡೆಸಿ ೬ರಿಂದ ೧೮ ವರ್ಷದೊಳಗಿನ ೨೫ ಮಕ್ಕಳ ವರದಿಯನ್ನು ಪಡೆದು ಶಾಲೆಗೆ ದಾಖಲಿಸಿದರು. ಉಳಿದ ೨೯ ಮಕ್ಕಳನ್ನು ತಕ್ಷಣ ಬಿಡುಗಡೆಗೊಳಿಸಲಾಗಿರುತ್ತದೆ.
ದಾಳಿಯಲ್ಲಿ ಪೊಲೀಸ್ ಇಲಾಖೆಯವರು ಸುಮಾರು ೬ ಟಂಟ0 ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದು ವಾಹನಕ್ಕೆ ೨೦೦೦ ರೂ.ಗಳಂತೆ ಒಟ್ಟು ೧೨೦೦೦ ರೂ.ಗಳನ್ನು ದಂಡ ವಿಧಿಸಿದ್ದಾರೆ. ಜೊತೆಗೆ ೧೯೮೮ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಬAಧಿಸಿದ ವಾಹನ ಚಾಲಕರಿಗೆ ಚಾಲನೆ ಪರವಾನಿಗೆಯನ್ನು ರದ್ದುಪಡಿಸಲು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಮಾತನಾಡಿ, ಜಿಲ್ಲೆ ಮತ್ತು ತಾಲ್ಲೂಕಿನಾದ್ಯಂತ ೧೯೮೬ರ ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಕಲಂ ೧೭ ರಡಿ ನಿರೀಕ್ಷಕರುಗಳಾಗಿ ನೇಮಕಗೊಂಡಿರುವ ಮತ್ತು ೧೯೬೧ರ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯ ಕಲಂ ೨೬ (೨) ರಡಿ ಹೆಚ್ಚುವರಿ ನಿರೀಕ್ಷಕರಾಗಿ ನೇಮಕಗೊಂಡಿರುವ ಅಧಿಕಾರಿಗಳೊಂದಿಗೆ ತನಿಖಾ ತಂಡಗಳನ್ನು ರಚಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ತಿಳಿಸಿದರು.
೬ರಿಂದ ೧೮ ವರ್ಷದೊಳಗೆ ಬರುವ ಮಕ್ಕಳನ್ನು ಸರಕು ಸಾಗಾಣೆ ವಾಹನಗಳಲ್ಲಿ ಹೊಲಗದ್ದೆ, ಕೂಲಿ, ಕೃಷಿ ಆಧಾರಿತ, ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಗ್ಯಾರೇಜ್, ಬಾರ್‌ಅಂಗಡಿ ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಅಪಾಯಕಾರಿ ಮತ್ತು ಅಪಾಯಕಾರಿ ಅಲ್ಲದ ಬಾಲಕಾರ್ಮಿಕ ಮಕ್ಕಳು ಮತ್ತು ಶಾಲೆಬಿಟ್ಟ ಮಕ್ಕಳನ್ನು ರಚಿಸಿರುವ ತನಿಖಾ ತಂಡಗಳ ಜೊತೆಯಲ್ಲಿ ಸೂಚಿಸಿರುವ ಎಲ್ಲಾ ಇಲಾಖೆಗಳು ಸೇರಿ ಪತ್ತೆ ಹಚ್ಚಬೇಕಿದೆ. ಅದರಂತೆ ಸರಕು ಸಾಗಾಣೆ ವಾಹನಗಳಲ್ಲಿ ಹೊಲಗದ್ದೆ, ಕೂಲಿ, ಕೃಷಿ ಆಧಾರಿತ ಕೆಲಸಗಳಿಗಾಗಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬAದಿರುವ ಪ್ರಯುಕ್ತ ಯಾವುದೇ ರೀತಿಯ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ವಾಹನ ಮಾಲೀಕರಿಗೆ ಮೋಟರ್ ವಾಹನ ಕಾಯ್ದೆಯಡಿಯಲ್ಲಿ ಆರ್.ಟಿ.ಓ ಮತ್ತು ಪೋಲಿಸ್ ಇಲಾಖೆಯವರು ಜಂಟಿಯಾಗಿ ತಪಾಸಣೆ ಮೂಲಕ ದಂಡ ವಿಧಿಸಲಾಗಿದೆ. ೧೯೮೬ ರ ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಕಲಂ ೧೭ ರಡಿ ನಿರೀಕ್ಷಕರುಗಳಾಗಿ ನೇಮಕಗೊಂಡಿರುವ ಅಧಿಕಾರಿಗಳಿಂದ ಇನ್ನಿತರೆ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಿ ಅಂಗಡಿ ಮಾಲೀಕರ ಮೇಲೆ ಕೇಸು ದಾಖಲಿಸಿ ಶಾಲೆಬಿಟ್ಟ ಮಕ್ಕಳನ್ನು ನೇರವಾಗಿ ಕಡ್ಡಾಯ ಶಿಕ್ಷಣ ಕಾಯ್ದೆ-೨೦೦೯ ರ ಅನ್ವಯ “ಸರ್ವಶಿಕ್ಷಣ ಅಭಿಯಾನ (ಶಿಕ್ಷಣ ಇಲಾಖೆ)” ವತಿಯಿಂದ ಮಕ್ಕಳನ್ನು ಸಂಬAಧಿಸಿದ ಶಾಲಾ ಮುಖ್ಯಗುರುಗಳಿಂದ ಹತ್ತಿರದ ಸರ್ಕಾರಿ, ಖಾಸಗಿ ಶಾಲೆಗಳಿಗೆ ಕಡ್ಡಾಯವಾಗಿ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಮಿಕ ನಿರೀಕ್ಷಕರಾದ ಶಿವಶಂಕರ ಬಿ.ತಳವಾರ ಅವರು ಮಾತನಾಡಿ, ಪತ್ತೆಯಾದ ಬಾಲಕಾರ್ಮಿಕರಿಗೆ ವಸತಿಯ ಅವಶ್ಯಕತೆ ಇದ್ದಲ್ಲಿ ಅಂತಹ ಮಕ್ಕಳನ್ನು ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆಯಿಂದ ಹಾಗೂ ಸರಕಾರದಿಂದ ನಡೆಯುವ ಇತರೆ ಇಲಾಖೆಯ ವಸತಿಶಾಲೆ ಕೇಂದ್ರಗಳಲ್ಲಿ ಶಿಕ್ಷಣದ ಜೊತೆ ವಸತಿ ಕಲ್ಪಿಸಿ ಕ್ರಮ ಕೈಗೊಳ್ಳಬೇಕು. ಹಾಗೂ ಕಾರ್ಮಿಕ ಆಯುಕ್ತರು ಬೆಂಗಳೂರು ರವರು ನೀಡಿರುವ ಪತ್ರದ ನಿರ್ದೇಶನದಂತೆ ಜಿಲ್ಲೆ, ತಾಲ್ಲೂಕಿನಾದ್ಯಂತ ಅನಿರೀಕ್ಷಿತ ತಪಾಸಣೆ, ದಾಳಿಗಳನ್ನು ಕೈಗೊಂಡು ಪತ್ತೆ ಹಚ್ಚಲಾದ ಮಕ್ಕಳನ್ನು ನೇರವಾಗಿ ಶಾಲೆಗೆ ದಾಖಲಿಸಲು ಸೂಚಿಸಿರುತ್ತಾರೆ. ಅದರಂತೆ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಈ ಅನಿರೀಕ್ಷಿತ ತಪಾಸಣೆ, ದಾಳಿ ಸಂದರ್ಭದಲ್ಲಿ ಡಿಸಿಪಿಯು ರಾಜೇಂದ್ರ ಯಾದವ, ಡಿಸಿಪಿಯು ಸಾಬಯ್ಯ, ಗ್ರಾಮೀಣ ಠಾಣೆ ಎಎಸ್‌ಐ ವಿಠ್ಠಲ್, ಗುರುನಾಥ ರಡ್ಡಿ, ಕಾರ್ಮಿಕ ಇಲಾಖೆ ಚಂದ್ರಶೇಖರ ಬಂದಳ್ಳಿ, ಮಕ್ಕಳ ಸಹಾಯವಾಣಿ ನಾಗಪ್ಪ, ಕಾರ್ಮಿಕ ಇಲಾಖೆಯ ಅಮೃತ ಮತ್ತು ಇತರರು ದಾಳಿಯಲ್ಲಿ ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...