ಸೋಮವಾರ, ಡಿಸೆಂಬರ್ 16, 2019

ಡಿ.೩೧ರವರೆಗೆ ವಿಶೇಷ ಶಾಲಾ ಲಸಿಕಾ ಅಭಿಯಾನ
ಮಕ್ಕಳಿಗೆ ಶಾಲೆಗಳಲ್ಲಿ ತಪ್ಪದೇ ಲಸಿಕೆ ಕೊಡಿಸಿ
-:ಬಿರಾದಾರ ಶಂಕರ
ಯಾದಗಿರಿ, ಡಿಸೆಂಬರ್ ೧೬ (ಕರ್ನಾಟಕ ವಾರ್ತೆ): ಜಿಲ್ಲೆಯಾದ್ಯಂತ ಡಿಸೆಂಬರ್ ೧೧ರಿಂದ ಡಿ.೩೧ರವರೆಗೆ ಹಮ್ಮಿಕೊಂಡಿರುವ ವಿಶೇಷ ಶಾಲಾ ಲಸಿಕಾ ಅಭಿಯಾನದಲ್ಲಿ ೧ರಿಂದ ೧೦ನೇ ತರಗತಿಯ ಎಲ್ಲಾ ಮಕ್ಕಳಿಗೆ ಅವರ ಶಾಲೆಗಳಲ್ಲಿ ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ಪ್ರತಿ ಮಕ್ಕಳಿಗೆ ಲಸಿಕೆ ಕೊಡಿಸಬೇಕು ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿರಾದಾರ ಶಂಕರ ಅವರು ಹೇಳಿದರು.
ಜಿಲ್ಲೆಯ ಬಳಿಚಕ್ರ ಗ್ರಾಮದ ಭಕ್ತಿಲಿಂಗೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮತ್ತು ಬಳಿಚಕ್ರ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶೇಷ ಶಾಲಾ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಭಾರತ ಸರ್ಕಾರವು ಟಿ.ಟಿ ಲಸಿಕೆ ಬದಲಾಗಿ ಟಿ.ಡಿ. ಲಸಿಕೆಯನ್ನು ಏಪ್ರಿಲ್ -೨೦೧೯ರಿಂದ ರಾಜ್ಯದಲ್ಲಿ ಪ್ರಾರಂಭಿಸಿದೆ. ರೋಗ ನಿರೋಧಕ ರಕ್ಷಣೆಯನ್ನು ಮುಂದುವರೆಸಲು ಡಿಪಿಟಿ- ವರ್ಧಕ ಲಸಿಕೆ ನೀಡುವುದು ಅತ್ಯಗತ್ಯ. ಈ ಲಸಿಕೆಯು ವಿಶ್ವ ಆರೋಗ್ಯ ಸಂಸ್ಥೆಯಿAದ ಪೂರ್ವ ಅರ್ಹತೆ ಪಡೆದಿದ್ದು ಸುರಕ್ಷಿತವಾಗಿದೆ. ಈ ಲಸಿಕೆಯಿಂದ ಗಂಭೀರ, ಪ್ರತಿಕೂಲ ಪರಿಣಾಮಗಳು ಅಪರೂಪ. ಚುಚ್ಚು ಮದ್ದು ನೀಡಿದ ಸ್ಥಳದಲ್ಲಿ ಸ್ವಲ್ಪ ನೋವು ಮತ್ತು ಊತ ಉಂಟಾಗುತ್ತದೆ. ಕೆಲವು ಮಕ್ಕಳಲ್ಲಿ ಸ್ವಲ್ಪ ಮಟ್ಟಿನ ಜ್ವರ ಕಾಣಿಸಬಹುದು. ಜ್ವರ ಕಾಣಿಸಿದಲ್ಲಿ ವೈದ್ಯರ ಸಲಹೆ ಮೇರೆಗೆ ಪ್ಯಾರಾಸಿಟಮುಲ್ ಮಾತ್ರೆಯನ್ನು ನೀಡಬಹುದು. ಚುಚ್ಚು ಮದ್ದು ನೀಡಿದ ಸ್ಥಳದಲ್ಲಿ ಏನನ್ನು ಹಚ್ಚಬಾರದು ಎಂದು ಸಲಹೆ ನೀಡಿದರು.
 ರಾಜ್ಯದಲ್ಲಿ ಡಿಪ್ತೀರಿಯಾ (ಗಂಟಲುಮಾರಿ) ಪ್ರಕರಣಗಳು ಹೆಚ್ಚಾಗಿ ಕಂಡುಬAದಿದ್ದು, ಇದರಿಂದ ಮಕ್ಕಳನ್ನು ರಕ್ಷಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ೧ನೇ ತರಗತಿ ಮಕ್ಕಳಿಗೆ ಡಿ.ಪಿ.ಟಿ ಲಸಿಕೆ ಹಾಗೂ ೨ರಿಂದ ೧೦ನೇ ತರಗತಿ ಮಕ್ಕಳಿಗೆ (ಸರ್ಕಾರಿ, ಖಾಸಗಿ ಶಾಲೆಗಳು) ಟಿ.ಡಿ ಲಸಿಕೆ ನೀಡಲಾಗುತ್ತಿದೆ. ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯ ಕೇಂದ್ರ ಹತ್ತಿರದ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕೆಯನ್ನು ನೀಡಲಾಗುವುದು. ವಸತಿ ಶಿಕ್ಷಣ ಸಂಸ್ಥೆಗಳು ಹಾಸ್ಟೆಲ್ ಮತ್ತು ಇನ್ನಿತರ ಶಾಲಾ ಮಕ್ಕಳಿಗೂ ಲಸಿಕೆಯನ್ನು ನೀಡಲಾಗುವುದು ಎಂದು ವಿವರಿಸಿದರು.
ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ನಂದಣ್ಣ ಪಾಟೀಲ್ ಅವರು ಮಾತನಾಡಿ, ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ದ ಹಕ್ಕು ಹಾಗೂ ಲಸಿಕೆಗಳನ್ನು ಕೊಡಿಸುವುದು ಪೋಷಕರ ಕರ್ತವ್ಯ. ಜಿಲ್ಲೆಯನ್ನು ದಿಪ್ತೀರಿಯಾ (ಗಂಟಲು ಮಾರಿ) ರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಕೈ ಜೋಡಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೈದ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿ, ಶಾಲಾ ಶಿಕ್ಷಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಬಹುದು. ಅಥವಾ ೨೪ * ೭ ಉಚಿತ ಆರೋಗ್ಯ ಸಹಾಯವಾಣಿ ೧೦೪ ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ೧೫೦ ಮಕ್ಕಳಿಗೆ ಲಸಿಕೆ ನೀಡಲಾಯಿತು. ಶಾಲಾ ಶಿಕ್ಷಕರಾದ ನಿಜಗುಣ ಆಚಾರ್ಯ, ಉಮಾದೇವಿ, ಸ್ವಾಮಿಗೌಡ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಲಕ್ಷಿö್ಮÃ, ಸುಜಾತ, ರಾಜೇಂದ್ರ, ಅಣವೀರಪ್ಪ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...