ಗುರುವಾರ, ಡಿಸೆಂಬರ್ 12, 2019

ಟ್ರಾö್ಯಕ್ಟರ್, ಟಂಟ0ಗಳಲ್ಲಿ ಜನರ ಸಾಗಣೆ: ೩ ವಾಹನ ಜಪ್ತಿ
ಯರಗೋಳ: ೨೦ ಮಕ್ಕಳು ಶಾಲೆಗೆ ದಾಖಲು
ಯಾದಗಿರಿ, ಡಿಸೆಂಬರ್ ೧೨ (ಕರ್ನಾಟಕ ವಾರ್ತೆ): ಯಾದಗಿರಿ ತಾಲ್ಲೂಕಿನ ಯರಗೋಳ ಗ್ರಾಮದಲ್ಲಿ ಬುಧವಾರ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳು, ಬಾಲ ಕಾರ್ಮಿಕ ಇಲಾಖೆ, ಕಾರ್ಮಿಕ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಮಕ್ಕಳ ಸಹಾಯವಾಣಿ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಶಾಲೆಬಿಟ್ಟ ಮಕ್ಕಳ ತಪಾಸಣೆ ನಡೆಸಿದರು. ಈ ಸಂದರ್ಭದಲ್ಲಿ ಪತ್ತೆಯಾದ ೬ರಿಂದ ೧೮ ವರ್ಷದೊಳಗಿನ ಮಕ್ಕಳಲ್ಲಿ ತನಿಖೆ ನಡೆಸಿ ೨೦ ಮಕ್ಕಳ ವರದಿಯನ್ನು ಪಡೆದು ಶಾಲೆಗೆ ದಾಖಲಿಸಿದ್ದಾರೆ.
 ಅನಿರೀಕ್ಷಿತ ದಾಳಿ ಮಾಡಿದಾಗ ೧ ಟ್ರಾö್ಯಕ್ಟರ್, ೨ ಟಂಟA ವಾಹನಗಳಲ್ಲಿ ಸುಮಾರು ೮೦ಕ್ಕೂ ಹೆಚ್ಚು ಜನರನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬAದಿದೆ. ಈ ವಾಹನಗಳನ್ನು ತಡೆಹಿಡಿದು ವಿಚಾರಣೆಗೆ ಒಳಪಡಿಸಿದ ಅಧಿಕಾರಿಗಳ ತಂಡ ವಾಹನ ಚಾಲಕರ ಮತ್ತು ಮಕ್ಕಳ ಮಾಹಿತಿಯನ್ನು ಪಡೆಯಿತು. ಪೊಲೀಸ್ ಇಲಾಖೆಯವರು ವಾಹನಗಳನ್ನು ಜಪ್ತಿ ಮಾಡಿ ಪ್ರತಿಯೊಂದು ವಾಹನಕ್ಕೆ ದಂಡ ವಿಧಿಸುವುದರ ಜೊತೆಗೆ ೧೯೮೮ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಸಂಬAಧಿಸಿದ ವಾಹನ ಚಾಲಕರಿಗೆ ಚಾಲನೆ ಪರವಾನಿಗೆಯನ್ನು ರದ್ದುಪಡಿಸಲು ಕ್ರಮ ಕೈಗೊಂಡಿದ್ದಾರೆ.
ಕಾರ್ಮಿಕ ಇಲಾಖೆಯ ನಿರೀಕ್ಷಕರಾದ ಶಿವಶಂಕರ ಬಿ.ತಳವಾರ ಅವರು ಮಾತನಾಡಿ, ಜಿಲ್ಲೆ ಮತ್ತು ತಾಲ್ಲೂಕಿನಾದ್ಯಂತ ೧೯೮೬ರ ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಕಲಂ ೧೭ ರಡಿ ನಿರೀಕ್ಷಕರುಗಳಾಗಿ ನೇಮಕಗೊಂಡಿರುವ ಮತ್ತು ೧೯೬೧ರ ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಯ ಕಲಂ ೨೬ (೨)ರಡಿ ಹೆಚ್ಚುವರಿ ನಿರೀಕ್ಷಕರಾಗಿ ನೇಮಕಗೊಂಡಿರುವ ಅಧಿಕಾರಿಗಳೊಂದಿಗೆ ತನಿಖಾ ತಂಡಗಳನ್ನು ರಚಿಸಿಕೊಂಡು ದಾಳಿ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಬಾಲಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ ಸಿಂಗ್ ಠಾಕೂರ್ ಅವರು ಮಾತನಾಡಿ, ತನಿಖಾ ತಂಡಗಳ ಜೊತೆಯಲ್ಲಿ ಸೂಚಿಸಿರುವ ಎಲ್ಲಾ ಇಲಾಖೆಗಳು ಸೇರಿಕೊಂಡು ಅಂಗಡಿ, ಹೋಟೆಲ್, ರೆಸ್ಟೋರೆಂಟ್, ಗ್ಯಾರೇಜ್, ಬಾರ್‌ಅಂಗಡಿ ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಅಪಾಯಕಾರಿ ಮತ್ತು ಅಪಾಯಕಾರಿ ಅಲ್ಲದ ಬಾಲಕಾರ್ಮಿಕ ಮಕ್ಕಳು ಮತ್ತು ಶಾಲೆಬಿಟ್ಟ ಮಕ್ಕಳನ್ನು ಪತ್ತೆ ಹಚ್ಚಬೇಕಿದೆ. ಅದರಂತೆ ೧೯೮೬ರ ಬಾಲ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆಯ ಕಲಂ ೧೭ ರಡಿ ನಿರೀಕ್ಷಕರುಗಳಾಗಿ ನೇಮಕಗೊಂಡಿರುವ ಅಧಿಕಾರಿಗಳಿಂದ ಇನ್ನಿತರೆ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕ ಮಕ್ಕಳನ್ನು ಪತ್ತೆ ಹಚ್ಚಿ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿ ಶಾಲೆಬಿಟ್ಟ ಮಕ್ಕಳನ್ನು ನೇರವಾಗಿ ಕಡ್ಡಾಯ ಶಿಕ್ಷಣ ಕಾಯ್ದೆ-೨೦೦೯ರ ಅನ್ವಯ ಶಿಕ್ಷಣ ಇಲಾಖೆ ವತಿಯಿಂದ ಸರ್ವಶಿಕ್ಷಣ ಅಭಿಯಾನಡಿ ಸಂಬAಧಿಸಿದ ಶಾಲಾ ಮುಖ್ಯಗುರುಗಳ ಮೂಲಕ ಹತ್ತಿರದ ಸರ್ಕಾರಿ, ಖಾಸಗಿ ಶಾಲೆಗಳಿಗೆ ಕಡ್ಡಾಯವಾಗಿ ದಾಖಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಪತ್ತೆಯಾದ ಬಾಲಕಾರ್ಮಿಕರಿಗೆ ವಸತಿಯ ಅವಶ್ಯಕತೆ ಇದ್ದಲ್ಲಿ ಅಂತಹ ಮಕ್ಕಳನ್ನು ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆಯಿಂದ ಹಾಗೂ ಸರಕಾರದಿಂದ ನಡೆಯುವ ವಸತಿಶಾಲೆಗಳಲ್ಲಿ ಶಿಕ್ಷಣದ ಜೊತೆ ವಸತಿ ಕಲ್ಪಿಸಲು ಕ್ರಮ ಕೈಗೊಳ್ಳಬೇಕು. ಹಾಗೂ ಕಾರ್ಮಿಕ ಆಯುಕ್ತರ ನಿರ್ದೇಶನದಂತೆ ಜಿಲ್ಲೆ, ತಾಲ್ಲೂಕಿನಾದ್ಯಂತ ಅನಿರೀಕ್ಷಿತ ತಪಾಸಣೆ, ದಾಳಿಗಳನ್ನು ಕೈಗೊಂಡು ಪತ್ತೆ ಹಚ್ಚಲಾದ ಮಕ್ಕಳನ್ನು ನೇರವಾಗಿ ಶಾಲೆಗೆ ದಾಖಲಿಸಲು ಸೂಚಿಸಿರುತ್ತಾರೆ ಎಂದು ಅವರು ವಿವರಿಸಿದರು.
ಎಎಸ್‌ಐ ವಿಠ್ಠಲ್ ಅವರು ಮಾತನಾಡಿ, ಸರಕು ಸಾಗಾಣೆ ವಾಹನಗಳಲ್ಲಿ ಹೊಲಗದ್ದೆ, ಕೂಲಿ, ಕೃಷಿ ಆಧಾರಿತ ಕೆಲಸಗಳಿಗಾಗಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡುಬAದಿರುವ ಪ್ರಯುಕ್ತ ಯಾವುದೇ ರೀತಿಯ ಅನಾಹುತಗಳಾಗದಂತೆ ಮುನ್ನೆಚ್ಚರಿಕೆ ಕ್ರಮಕ್ಕಾಗಿ ಮೋಟರ್ ವಾಹನ ಕಾಯ್ದೆಯಡಿಯಲ್ಲಿ ಆರ್.ಟಿ.ಓ ಮತ್ತು ಪೊಲೀಸ್ ಇಲಾಖೆಗಳು ಜಂಟಿಯಾಗಿ ತಪಾಸಣೆ ಕೈಗೊಂಡು ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತಿದೆ ಎಂದು ತಿಳಿಸಿದರು.
ದಾಳಿಯಲ್ಲಿ ಹೆಡ್‌ಕಾನ್‌ಸ್ಟೆಬಲ್ ಗುರುನಾಥ ರೆಡ್ಡಿ, ಮಕ್ಕಳ ಸಹಾಯವಾಣಿಯ ನಾಗಪ್ಪ, ಡಿಸಿಪಿಯು ಘಟಕದ ಸಿಬ್ಬಂದಿ ದೇವಪ್ಪ, ಕಾರ್ಮಿಕ ಇಲಾಖೆಯ ಚಂದ್ರಶೇಖರ ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...