ಭಾನುವಾರ, ಜನವರಿ 12, 2020

ಸ್ವಾಮಿ ವಿವೇಕಾನಂದರ ಜಯಂತ್ಯೋತ್ಸವ: ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಣೆ
ಮನಸ್ಸಿನಲ್ಲಿ ದೃಢಸಂಕಲ್ಪ ಮಾಡಿದರೆ ಗುರಿ ಸಾಧನೆ ಸಾಧ್ಯ
-ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್
ಯಾದಗಿರಿ, ಜನವರಿ ೧೨ (ಕರ್ನಾಟಕ ವಾರ್ತೆ): ಪ್ರತಿಯೊಬ್ಬರಲ್ಲೂ ಸಾಮರ್ಥ್ಯ ಇರುತ್ತದೆ. ನಮ್ಮಲ್ಲಿರುವ ದುರ್ಬಲತೆಯನ್ನು ವಿಶ್ಲೇಷಣೆ ಮಾಡಿಕೊಂಡು ಕ್ರಿಯಾಶೀಲತೆಯಿಂದ ಸಾಮರ್ಥ್ಯವನ್ನು ಪ್ರದರ್ಶಿಸಬೇಕು. ಮನಸ್ಸಿನಲ್ಲಿ ದೃಢಸಂಕಲ್ಪ ಮಾಡಿದರೆ ಗುರಿ ಸಾಧನೆ ಸಾಧ್ಯ. ಏಳಿ ಎದ್ದೇಳಿ ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಸ್ವಾಮಿ ವಿವೇಕಾನಂದರ ವಾಣಿಯಂತೆ ಯುವ ಸಮೂಹ ತಮ್ಮ ಜೀವನದಲ್ಲಿ ಗುರಿ ಮುಟ್ಟುತನಕ ನಿಲ್ಲಬಾರದು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಸಲಹೆ ನೀಡಿದರು.
ನಗರದ ಸರಕಾರಿ ಪದವಿ ಮಹಾವಿದ್ಯಾಲಯದ ಆವರಣದಲ್ಲಿ ಭಾನುವಾರ ಜಿಲ್ಲಾಡಳಿತ, ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ೧೫೮ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿ, ಅವರು ಮಾತನಾಡಿದರು.
ಸಾಧಕರಿಗೆ ಸ್ವಾಮಿ ವಿವೇಕಾನಂದರು ಪ್ರೇರಣೆಯಾಗಿದ್ದಾರೆ. ಐಎಎಸ್, ಐಪಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಅಥವಾ ಇನ್ನಿತರ ಮಹತ್ವದ ಸಾಧನೆ ಮಾಡುವಾಗ ಅವರ ಭಾಷಣ, ಹೇಳಿಕೆಗಳು ಹುಮ್ಮಸ್ಸು ನೀಡುತ್ತವೆ. ವಿವೇಕಾನಂದರ ತತ್ವಗಳನ್ನು ಪಾಲಿಸುತ್ತಾ ಸಾಮಾಜಿಕ ಕಳಕಳಿ, ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಈ ನಿಟ್ಟಿನಲ್ಲಿ ಸ್ವಚ್ಛತೆ ಕಾಪಾಡುವುದು ಅಗತ್ಯವಾಗಿದೆ. ನಿಷೇಧಿತ ಪ್ಲಾಸ್ಟಿಕ್ ಬಳಸುವುದಿಲ್ಲ ಎಂಬುದಾಗಿ ಪ್ರತಿಯೊಬ್ಬರೂ ಪ್ರತಿಜ್ಞೆ ಮಾಡಬೇಕಿದೆ. ಸಂಚಾರ ನಿಮಯಗಳನ್ನು ಪಾಲಿಸುವುದು ಯುವಕರ ಕರ್ತವ್ಯ ಮತ್ತು ೧೮ ವರ್ಷ ಪೂರೈಸಿದ ಯುವಕ-ಯುವತಿಯರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವAತೆ ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಸಲಹೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಮಾತನಾಡಿ, ಓದಿನಲ್ಲಿ ಉನ್ನತ ಸಾಧನೆ ಮಾಡಲು ಮೊಬೈಲ್, ಲ್ಯಾಪ್‌ಟಾಪ್, ಟ್ಯಾಬ್ ಸೇರಿದಂತೆ ಸಾಕಷ್ಟು ಸಾಧನಗಳಿವೆ. ಈ ಸಾಧನಗಳನ್ನು ಸದ್ಬಳಕೆ ಮಾಡಿಕೊಂಡರೆ ಅಂದುಕೊAಡಿರುವುದನ್ನು ಸಾಧಿಸಬಹುದು. ಮನಸ್ಸಿನ ದುರ್ಬಲತೆ ಮೆಟ್ಟಿ ನಿಂತಾಗ ಮಾತ್ರ ಗುರಿ ಮುಟ್ಟಲು ಸಾಧ್ಯ ಎಂದು ಹೇಳಿದರು.
ಇಂಗ್ಲಿಷ್ ಮತ್ತು ಗಣಿತ ಪರೀಕ್ಷೆಗಳನ್ನು ನಕಲು ಮಾಡದೆ ವಿದ್ಯಾರ್ಥಿಗಳು ಉತ್ತೀರ್ಣರಾಗುವುದಿಲ್ಲ ಎಂದು ಕೆಲವರು ಹೇಳುತ್ತಾರೆ. ಇದು ಶುದ್ಧ ಸುಳ್ಳು. ವಿದ್ಯಾರ್ಥಿಗಳಿಗೆ ಓದುವುದೇ ಒಂದು ಕೆಲಸ. ಈ ಸಮಯವನ್ನು ಹಾಳು ಮಾಡಿಕೊಳ್ಳಬಾರದು. ಸತತ ಪ್ರಯತ್ನ ಇದ್ದರೆ ಏನನ್ನಾದರೂ ಕಲಿಯಬಹುದು ಮತ್ತು ಸಾಧಿಸಬಹುದು. ಭಾಷೆ ಕಲಿಕೆಗೆ ಸಾಮಾನ್ಯ ಜ್ಞಾನ ಇರಬೇಕು. ನನ್ನದು ಮರಾಠಿ ಮಾತೃಭಾಷೆಯಾಗಿದ್ದರೂ ಕರ್ನಾಟಕಕ್ಕೆ ಬಂದ ಮೇಲೆ ಕನ್ನಡವನ್ನು ಓದಲು ಮತ್ತು ಬರೆಯಲು ಕಲಿತಿರುವೆ ಎಂಬುದಾಗಿ ತಿಳಿಸಿದರು.
ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಸಂಚಾಲಕರಾದ ಪಿ.ವೇಣುಗೋಪಾಲ ಸ್ವಾಮಿ ಅವರು ವಿಶೇಷ ಉಪನ್ಯಾಸ ನೀಡಿ, ರಾಮಕೃಷ್ಣ ಪರಮಹಂಸ ಗುರುಗಳಿಂದ ಪ್ರಭಾವಿತರಾದ ಸ್ವಾಮಿ ವಿವೇಕಾನಂದರು ದೇಶದ ಉದ್ದಗಲಕ್ಕೂ ಸಂಚರಿಸಿ ಭಾರತವನ್ನು ಸಮಗ್ರ ಅಧ್ಯಯನ ಮಾಡಿದ್ದಾರೆ. ಚೈತನ್ಯ ಯೋಗಿಯಾದ ವಿವೇಕಾನಂದರ ಪುಸ್ತಕ ಓದಿದವರು ಯೋಧರಾಗುತ್ತಾರೆ. ಚಿಕಾಗೊದಲ್ಲಿ ಭಾಷಣದ ಮೂಲಕ ವಿಶ್ವದ ಗಮನ ಸೆಳೆದ ವಿವೇಕಾನಂದರು, ಶ್ರೀಲಂಕಾದ ಕೊಲಂಬೊದಿAದ ಭಾರತದ ಆಲ್ಮೋರದವರೆಗೆ ಯುವ ಜನಾಂಗವನ್ನು ಬಡಿದೆಬ್ಬಿಸಿದ ಏಕೈಕ ವ್ಯಕ್ತಿ ಎಂದು ಬಣ್ಣಿಸಿದರು.
ಜಾಗತಿಕ ಯುಗದಲ್ಲಿ ಇಂಗ್ಲಿಷ್ ಕಲಿಕೆ ಅಗತ್ಯವಾಗಿದೆ. ಯುವಸಮುದಾಯ ವಿದ್ಯಾವಂತರಾಗಿ ವಿವೇಕಾನಂದರ ತತ್ವಾದರ್ಶಗಳನ್ನು ಪಾಲಿಸಿದರೆ ಹಿಂದುಳಿದ ಜಿಲ್ಲೆಯನ್ನು ಮುಂದೆ ತೆಗೆದುಕೊಂಡು ಹೋಗಬಹುದು ಎಂದು ಸಲಹೆ ನೀಡಿದರು.
ಲೀಡ್ ಕಾಲೇಜು ಪ್ರಾಂಶುಪಾಲರಾದ ಡಾ.ಸುಭಾಶ್ಚಂದ್ರ ಕೌಲಗಿ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತವಾಗಿ ನೀಡಿದ ಲ್ಯಾಪ್‌ಟಾಪ್‌ಗಳನ್ನು ಶೈಕ್ಷಣಿಕ ಪ್ರಗತಿಗೆ ಮಾತ್ರ ಬಳಕೆ ಮಾಡಿಕೊಳ್ಳÄವಂತೆ ಸಲಹೆ ನೀಡಿದರು.
 ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಹಾಗೂ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಇದಕ್ಕೂ ಮೊದಲು ಯುವ ಸಬಲೀಕರಣ ಕೇಂದ್ರವನ್ನು ಜಿಲ್ಲಾಧಿಕಾರಿಗಳು ಉದ್ಘಾಟಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಚನ್ನಬಸಪ್ಪ ಕುಳಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ದತ್ತಪ್ಪ ಸಾಗನೂರ, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರಾದ ಅಯ್ಯಣ್ಣ ಹುಂಡೇಕಾರ್, ಸಿ.ಎಂ.ಪಟ್ಟೇದಾರ, ಸ್ನೇಹಾ ರಸಾಳಕರ್, ಪ್ರಾಂಶುಪಾಲರಾದ ಡಾ.ಅಶೋಕಕುಮಾರ ಮಟ್ಟಿ, ಡಾ.ಶ್ರೀನಿವಾಸರಾವ್ ದೊಡ್ಡಮನಿ, ಅಶೋಕ ವಾಟ್ಕರ್ ಅವರು ಉಪಸ್ಥಿತರಿದ್ದರು.ಪ್ರಾಧ್ಯಾಪಕರಾದ ಡಾ.ಸರ್ವೋದಯ ಶಿವಪುತ್ರ, ಶರಣಬಸಪ್ಪ ರಾಯಕೋಟಿ, ಡಾ.ದೇವಿಂದ್ರಪ್ಪ ಹಳಿಮನಿ, ಉಮೇಶ ತೇಜಪ್ಪ, ಡಾ.ಬಿ.ಎಸ್.ಸಿಂಗೆ, ಡಾ.ಭೀಮರಾಯ ಲಿಂಗೇರಿ, ಚನ್ನಬಸಪ್ಪ ವೋಡ್ಕರ್, ಡಾ.ಜಟ್ಟೆಪ್ಪ, ಗುಂಡುರಾವ್, ಡಾ.ಮೋನಯ್ಯ ಕಲಾಲ್, ಈರಮ್ಮ ಭಾವಿಕಟ್ಟಿ, ಶಹನಾಜ್ ಬೇಗಂ, ಸಂತೋಷ ಹಾಗೂ ವಿದ್ಯಾರ್ಥಿಗಳ ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಲಿAಗೇರಿ ಸ್ಟೇಷನ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಮತ್ತು ತಂಡದವರು ಪ್ರಾರ್ಥನಾ ಗೀತೆ ಹಾಗೂ ನಾಡಗೀತೆ ಹಾಡಿದರು. ಉಪನ್ಯಾಸಕಿ ಡಾ.ಜ್ಯೋತಿಲತಾ ತಡಿಬಿಡಿಮಠ ಅವರು ಕಾರ್ಯಕ್ರಮ ನಿರೂಪಿಸಿದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...