ಬುಧವಾರ, ಜನವರಿ 22, 2020

ಜಿಲ್ಲಾಧಿಕಾರಿ ಎಂ.ಕೂರ್ಮಾ ರಾವ್ ಅಧ್ಯಕ್ಷತೆಯಲ್ಲಿ ಪೂರ್ವಸಿದ್ಧತಾ ಸಭೆ

ತಿಂಥಣಿ ಶ್ರೀ ಮೌನೇಶ್ವರ ಜಾತ್ರೆಯ ಅಗತ್ಯ ಸಿದ್ಧತೆಗೆ ಸೂಚನೆ

ಯಾದಗಿರಿ, ಜನವರಿ ೨೨ (ಕರ್ನಾಟಕ ವಾರ್ತೆ): ಜಿಲ್ಲೆಯ ಸುರಪುರ ತಾಲ್ಲೂಕಿನ ತಿಂಥಣಿ ಗ್ರಾಮದಲ್ಲಿ ಫೆಬ್ರುವರಿ ೩ರಿಂದ ೮ರವರೆಗೆ ಜರುಗಲಿರುವ ಶ್ರೀ ಮೌನೇಶ್ವರ ದೇವಸ್ಥಾನದ ಜಾತ್ರೆಗೆ ಅಗತ್ಯ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಸಂಜೆ ನಡೆದ ತಿಂಥಣಿ ಶ್ರೀ ಮೌನೇಶ್ವರ ದೇವಸ್ಥಾನದ ಜಾತ್ರೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಾತ್ರೆಗೆ ರಾಜ್ಯದ ಹಲವು ಜಿಲ್ಲೆಗಳು ಹಾಗೂ ಅಂತರರಾಜ್ಯಗಳಿAದ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ದೇವಸ್ಥಾನದ ಸುತ್ತಲಿನ ಪ್ರದೇಶದಲ್ಲಿ ಚರಂಡಿ ಮತ್ತು ಇನ್ನಿತರ ಸ್ಥಳಗಳಲ್ಲಿ ಬ್ಲೀಚಿಂಗ್ ಪೌಡರ್ ಹಾಕಿ ಸ್ವಚ್ಛತೆ ಕಾಪಾಡಬೇಕು. ಸಾರಿಗೆ ಬಸ್‌ಗಳ ನಿಲುಗಡೆಗೆ ಸೂಕ್ತ ವ್ಯವಸ್ಥೆ, ವಿದ್ಯುತ್, ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು. ಈ ಬಗ್ಗೆ ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆ ಕರೆದು ನಿರ್ಣಯ ಕೈಗೊಳ್ಳಿ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಎನ್.ಹಳ್ಳಿ ಅವರಿಗೆ ನಿರ್ದೇಶಿಸಿದರು.
ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಜಾತ್ರೆಯಲ್ಲಿ ಸ್ಥಾಪಿಸುವ ವಿವಿಧ ಅಂಗಡಿಗಳ ಮಾಲೀಕರು ತಮ್ಮ ಅಂಗಡಿಗಳ ಪಕ್ಕದಲ್ಲಿ ಕಸದ ಬುಟ್ಟಿಗಳನ್ನು ಇಟ್ಟುಕೊಳ್ಳಬೇಕು. ಯಾವುದೇ ತರಹದ ತ್ಯಾಜ್ಯಗಳನ್ನು ಅದರಲ್ಲಿ ಹಾಕಿಸುವ ವ್ಯವಸ್ಥೆ ಮಾಡಬೇಕು. ಅಂಗಡಿಗಳ ಮಾಲೀಕರು ಸ್ವಚ್ಛತೆ ಕಾಪಾಡದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.
ಜಾತ್ರೆ ಸಮಯದಲ್ಲಿ ದೇವಸ್ಥಾನದ ಆವರಣದಲ್ಲಿ ಕೌಂಟರ್ ನಿರ್ಮಿಸಿ, ಗಣಕಯಂತ್ರದ ಮೂಲಕ ಭಕ್ತರಿಗೆ ರಸೀದಿ ನೀಡಲು ಒಬ್ಬ ಸಿಬ್ಬಂದಿಯನ್ನು ನೇಮಿಸಲಾಗುವುದು. ಇದಕ್ಕಾಗಿ ದೇವಸ್ಥಾನದ ನಿಧಿಯಿಂದ ಗೌರವ ಧನ ಪಾವತಿಸಲು ಕ್ರಮ ಕೈಗೊಳ್ಳಬೇಕು. ಭಕ್ತರು ಹೊಸದಾಗಿ ವಸತಿಗೃಹಗಳನ್ನು ಕಟ್ಟಿಸಲು ಮುಂದೆ ಬರುತ್ತಿರುವುದಾಗಿ ದೇವಸ್ಥಾನ ಸಮಿತಿಯವರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಒಂದು ಕೋಣೆ ನಿರ್ಮಾಣಕ್ಕೆ ತಗುಲುವ ವೆಚ್ಚವನ್ನು ವಿವಿಧ ತಾಂತ್ರಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ೨ ಲಕ್ಷ ರೂ. ನಿಗದಿಪಡಿಸಿದರು.
ಜಾತ್ರೆಯ ಸಮಯದಲ್ಲಿ ಮಾಂಸ, ಮದ್ಯ ಮಾರಾಟ ನಿಷೇಧಿಸಬೇಕು. ದೇವಸ್ಥಾನ ಮತ್ತು ಭಕ್ತರ ಸುರಕ್ಷತೆ ದೃಷ್ಟಿಯಿಂದ ಈಗಾಗಲೇ ಅಳವಡಿಸಿರುವ ಸಿ.ಸಿ ಟಿವಿ ಕ್ಯಾಮರಾಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿ. ಜಾತ್ರೆ ನಿಮಿತ್ತ ಅಗತ್ಯ ಸ್ಥಳಗಳಲ್ಲಿ ಹೆಚ್ಚಿನ ಸಿ.ಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಬೇಕು. ದೇವಸ್ಥಾನದಲ್ಲಿ ಜರುಗುವ ಪೂಜೆಯನ್ನು ಭಕ್ತಾದಿಗಳಿಗೆ ವೀಕ್ಷಿಸುವಂತಾಗಲು ದೇವಸ್ಥಾನದ ಹೊರಗಡೆ ಎರಡು ಎಲ್‌ಇಡಿ ಸ್ಕಿçÃನ್‌ಗಳನ್ನು ಅಳವಡಿಸುವಂತೆ ಅವರು ಸೂಚಿಸಿದರು.
ಯಾವುದೇ ಅಹಿತಕರ ಘಟನೆ ಸಂಭವಿಸದAತೆ ಪೊಲೀಸ್ ಇಲಾಖೆ ಅಗತ್ಯ ಮುಂಜಾಗ್ರತೆ ವಹಿಸಬೇಕು. ದೇವಸ್ಥಾನ ಆವರಣ, ನದಿಯ ದಂಡೆ ಹಾಗೂ ಬಸ್ ನಿಲುಗಡೆ ಸ್ಥಳದಲ್ಲಿ ಜನದಟ್ಟಣೆ ಹೆಚ್ಚಾಗಿರುತ್ತದೆ. ಜನದಟ್ಟಣೆಯನ್ನು ನಿಯಂತ್ರಿಸಲು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಜಾತ್ರೆಯಲ್ಲಿ ಮಕ್ಕಳು ತಪ್ಪಿಸಿಕೊಂಡಲ್ಲಿ ಅವರನ್ನು ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಿ, ಪೋಷಕರಿಗೆ ಒಪ್ಪಿಸುವ ಜವಾಬ್ದಾರಿಯನ್ನು ಪೊಲೀಸ್ ಮತ್ತು ಶಿಶು ಅಭಿವೃದ್ಧಿ ಅಧಿಕಾರಿಗಳಿಗೆ ವಹಿಸಿದರು.
ಜಾತ್ರೆ ಮುಗಿಯುವವರೆಗೆ ತುರ್ತು ಆರೋಗ್ಯ ಸೇವೆಗಳಿಗಾಗಿ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು. ಉಚಿತ ಆರೋಗ್ಯ ತಪಾಸಣೆ ಶಿಬಿರ, ರಕ್ತದಾನ ಶಿಬಿರ ಆಯೋಜಿಸಲು ಸೂಚಿಸಿದ ಜಿಲ್ಲಾಧಿಕಾರಿಗಳು, ೧೦೮ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳದ ವಾಹನ ಸ್ಥಳದಲ್ಲಿರಬೇಕು ಎಂದು ಸೂಚಿಸಿದರು.
ದೇವಸ್ಥಾನದ ನದಿ ತೀರದಲ್ಲಿ ಹಟ್ಟಿ ಚಿನ್ನದ ಗಣಿ ಕಂಪನಿ ವತಿಯಿಂದ ನಿರ್ಮಿಸಿದ ಸ್ನಾನ ಘಟ್ಟ ಉತ್ತಮವಾಗಿದೆ. ಇದು ಶಾಶ್ವತವಾಗಿ ಉಳಿಯುವಂತೆ ನೋಡಿಕೊಳ್ಳಲು ಇದರ ಮೇಲೆ ಕಾಂಕ್ರೀಟ್ ಮಾಡಿಸಲು ಟೆಂಡರ್ ಕರೆಯಲಾಗಿದೆ. ಭಕ್ತರಿಗೆ ಕುಡಿಯುವ ನೀರಿನ ತೊಂದರೆ ಆಗಬಾರದು. ಈ ನಿಟ್ಟಿನಲ್ಲಿ ವಿವಿಧ ಸ್ಥಳಗಳಲ್ಲಿ ನೀರಿನ ಟ್ಯಾಂಕರ್‌ಗಳನ್ನು ನಿಲ್ಲಿಸಿ, ಭಕ್ತರಿಗೆ ಕುಡಿಯುವ ನೀರು ಕಲ್ಪಿಸಬೇಕು. ಜೊತೆಗೆ ನಾರಾಯಣಪುರ ಜಲಾಶಯದ ಮೂಲಕ ನದಿಗೆ ೧೦೦ ಕ್ಯೂಸೆಕ್ ನೀರು ಬಿಡುಗಡೆಗೆ ಕೃಷ್ಣ ಭಾಗ್ಯ ಜಲ ನಿಗಮಕ್ಕೆ ಪತ್ರ ಬರೆಯಬೇಕು. ಜಾತ್ರೆಯ ಸಮಯ ನದಿಯಲ್ಲಿ ನೀರಿನ ರಭಸ ಹೆಚ್ಚಾಗಿರುವುದರಿಂದ ತೆಪ್ಪಗಳ ಮೂಲಕ ನದಿ ದಾಟಿಸುವುದನ್ನು ನಿಷೇಧಿಸಲು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಅಶ್ಲೀಲ ನೃತ್ಯ ಪ್ರದರ್ಶಿಸಿದರೆ ಕ್ರಮ: ಜಾತ್ರೆಯ ಸಮಯದಲ್ಲಿ ನಡೆಯುವ ನಾಟಕ ಮತ್ತು ಇತರೆ ಪ್ರದರ್ಶನದಲ್ಲಿ ಅಶ್ಲೀಲ ನೃತ್ಯ ಪ್ರದರ್ಶನ ಮಾಡತಕ್ಕದಲ್ಲ. ಒಂದು ವೇಳೆ ಅಶ್ಲೀಲ ಪ್ರದರ್ಶನ ಕಂಡುಬAದಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು. ಪ್ರದರ್ಶನಕ್ಕೆ ಪರವಾನಗಿ ನೀಡುವ ಪೂರ್ವದಲ್ಲಿ ಷರತ್ತು ವಿಧಿಸುವಂತೆ ತಹಶೀಲ್ದಾರ್ ಅವರಿಗೆ ನಿರ್ದೇಶಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಣೆ ಅವರು ಮಾತನಾಡಿ, ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು. ಜಾತ್ರೆ ನಡೆಯುವ ಸ್ಥಳ, ದೇವಸ್ಥಾನ ಆವರಣ, ಬಸ್ ನಿಲುಗಡೆ ಸ್ಥಳ, ನದಿ ದಂಡೆ ಹಾಗೂ ಇತರೆ ಪ್ರದೇಶಗಳಲ್ಲಿ ಜನದಟ್ಟಣೆ ನಿಯಂತ್ರಿಸಲು ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು. ಜಾತ್ರೆಯ ಆವರಣದವರೆಗೆ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿದರೆ ಭಕ್ತರಿಗೆ ತೊಂದರೆಯುAಟಾಗುತ್ತದೆ. ಹಾಗಾಗಿ, ದೇವಸ್ಥಾನದಿಂದ ೧ ಕಿ.ಮೀ ದೂರದಲ್ಲಿ ಖಾಸಗಿ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಬಾಲ ಕಾರ್ಮಿಕ ಇಲಾಖೆಯ ಯೋಜನಾ ನಿರ್ದೇಶಕರಾದ ರಘುವೀರ್‌ಸಿಂಗ್ ಠಾಕೂರ್ ಅವರು ಸಭೆಯ ನಡಾವಳಿಗಳನ್ನು ಓದಿದರು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಸಂತೋಷ ಗೋಗೇರಿ, ತಾಲ್ಲೂಕು ಪಂಚಾಯಿತಿ ಇಒ ಅಮರೇಶ, ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಎಇಇ ಹಣಮಂತಪ್ಪ, ಜೆಸ್ಕಾಂ ಎಇಇ ಈರಣ್ಣ, ದೇವಸ್ಥಾನ ಸಮಿತಿ ಸದಸ್ಯರಾದ ಸಣ್ಣಮಾನಯ್ಯ ಬಂಡೊಳ್ಳಿ, ಗಂಗಾಧರ ನಾಯಕ, ಹಣಮಂತ ತಿಂಥಣಿ, ಬಸವರಾಜ ದೊಡ್ಡಮನಿ, ಚಿನ್ನಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...