ಮಂಗಳವಾರ, ಫೆಬ್ರವರಿ 18, 2020

ನಾಳೆ ಬಹಿರಂಗ ಹರಾಜು
ಯಾದಗಿರಿ, ಫೆಬ್ರುವರಿ 18 (ಕರ್ನಾಟಕ ವಾರ್ತೆ): ಶಹಾಪುರ ನಗರಸಭೆಯ ನಿರುಪಯುಕ್ತವಾದ ನಗರಸಭೆ ಆವರಣದಲ್ಲಿರುವ ನೀರು ಸರಬರಾಜು ಮತ್ತು ವಿದ್ಯುತ್ ನೈರ್ಮಲ್ಯ ಶಾಖೆಯ ಸಾಮಗ್ರಿಗಳ ಹರಾಜು ಪ್ರಕ್ರಿಯೆಯನ್ನು ಫೆಬ್ರುವರಿ 20ರಂದು ಮಧ್ಯಾಹ್ನ 12 ಗಂಟೆಗೆ ನಗರಸಭೆ ಆವರಣದಲ್ಲಿ ನಡೆಸಲಾಗುವುದು.
ಆಸಕ್ತ ಏಜೆನ್ಸಿಯವರು 10,000 ರೂ. ಮುಂಗಡ ಠೇವಣಿಯನ್ನು ಫೆ.19ರೊಳಗೆ ನೈರ್ಮಲ್ಯ ಶಾಖೆಯ ಮುಖ್ಯಸ್ಥರಲ್ಲಿ ಜಮಾ ಮಾಡತಕ್ಕದ್ದು. ಹರಾಜು ಪ್ರಕ್ರಿಯೆ ಮುಗಿದ ಮೇಲೆ ಯಶಸ್ವಿ ಭಾಗಿದಾರರು ಅಂದೇ ಸಂಪೂರ್ಣ ಹಣವನ್ನು ನಗರಸಭೆಗೆ ಭರಿಸಬೇಕು ಮತ್ತು 2 ದಿನಗಳಲ್ಲಿ ಸಂಪೂರ್ಣ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗತಕ್ಕದ್ದು ಎಂದು ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ಪ್ರವೇಶಕ್ಕೆ ಅರ್ಜಿ ಆಹ್ವಾನ
ಯಾದಗಿರಿ, ಫೆಬ್ರುವರಿ 18 (ಕರ್ನಾಟಕ ವಾರ್ತೆ): ಮೈಸೂರಿನಲ್ಲಿರುವ ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಿಪೆಟ್ ಸಂಸ್ಥೆಯು ಭಾರತದ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡುತ್ತಿದ್ದು, 2020-21ನೇ ಸಾಲಿನ ಡಿಪ್ಲೋಮಾ ಮತ್ತು ಪೋಸ್ಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 22 ಕೊನೆಯ ದಿನ. ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ (ಡಿಪಿಟಿ)-3 ವರ್ಷ, ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ (ಡಿಪಿಎಂಟಿ)- 3 ವರ್ಷ, ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ಇನ್ ಪ್ಲಾಸ್ಟಿಕ್ ಪ್ರೊಸೆಸಿಂಗ್ ಆಂಡ್ ಟೆಸ್ಟಿಂಗ್ (ಪಿಜಿಡಿ- ಪಿಪಿಟಿ)- 2 ವರ್ಷಗಳ ಕೋರ್ಸ್‍ಗಳಿದ್ದು, ಎಸ್‍ಎಸ್‍ಎಲ್‍ಸಿ, ಪಿಯುಸಿ (ವಿಜ್ಞಾನ) ಮತ್ತು ಬಿ.ಎಸ್.ಸ್ಸಿ (ರಾಸಾಯನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು /ಹಾಜರಾದವರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ http://eadmission.cipet.gov.in ಅಥವಾ ದೂ:0821-2510618, 9480253024, 9141075968 ಸಂಪರ್ಕಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕರು ಮತ್ತು ಮುಖ್ಯಸ್ಥರಾದ ಆರ್.ಟಿ. ನಾಗರಳ್ಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...