ಬುಧವಾರ, ಫೆಬ್ರವರಿ 19, 2020

ಉಪಮುಖ್ಯಮಂತ್ರಿಗಳ ಪ್ರವಾಸ
ಯಾದಗಿರಿ, ಫೆಬ್ರುವರಿ 19 (ಕರ್ನಾಟಕ ವಾರ್ತೆ): ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಫೆಬ್ರುವರಿ 23 ಮತ್ತು 24ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆಬ್ರುವರಿ 23ರಂದು ಸಂಜೆ 5 ಗಂಟೆಗೆ ಯಾದಗಿರಿ ಜಿಲ್ಲೆಗೆ ಆಗಮಿಸಿ, ವಾಸ್ತವ್ಯ ಮಾಡುವರು. ಫೆ.24ರಂದು ಬೆಳಿಗ್ಗೆ 11 ಗಂಟೆಗೆ ಯಾದಗಿರಿ-ಸುರಪುರ ಸ್ಥಳೀಯ ಶಾಸಕರು ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ರಾಯಚೂರು ಜಿಲ್ಲೆಗೆ ಪ್ರಯಾಣ ಬೆಳೆಸುವರು.

ಉಚಿತ ಸಾಮೂಹಿಕ ವಿವಾಹ: ನೋಂದಣಿಗೆ ಸೂಚನೆ
ಯಾದಗಿರಿ, ಫೆಬ್ರುವರಿ 19 (ಕರ್ನಾಟಕ ವಾರ್ತೆ): ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಸುತ್ತೋಲೆಯಂತೆ ಯಾದಗಿರಿ ತಾಲ್ಲೂಕಿನ ಮೈಲಾಪೂರದ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 26ರಂದು ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದ್ದು, ಆಸಕ್ತ ವಧು-ವರರ ಹೆಸರು ನೋಂದಾಯಿಸಲು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ್ ಜಿ.ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಸರು ನೋಂದಾಯಿಸಿಕೊಳ್ಳಲು ಮಾರ್ಚ್ 27ರಂದು ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ವಿವರಗಳಿಗೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ (ಯಾದಗಿರಿ ತಹಶೀಲ್ದಾರರ ಕಾರ್ಯಾಲಯ) ಹಾಗೂ ದೂ:08473-252370 ಸಂಪರ್ಕಿಸಬಹುದು ಎಂದು ಅವರು ಕೋರಿದ್ದಾರೆ.

ಫೆ.24ರಿಂದ ಏರ್‍ಮನ್ ಹುದ್ದೆಗಳ ನೇಮಕಾತಿ ರ್ಯಾಲಿ
ಯಾದಗಿರಿ, ಫೆಬ್ರುವರಿ 19 (ಕರ್ನಾಟಕ ವಾರ್ತೆ): ಭಾರತೀಯ ವಾಯುಪಡೆಯ ಏರ್‍ಮನ್ ಗ್ರೂಪ್ “ಎಕ್ಸ್” ಹಾಗೂ ಗ್ರೂಪ್ “ವೈ” ಹುದ್ದೆಗಳ ನೇಮಕಾತಿಗಾಗಿ ಫೆಬ್ರುವರಿ 24ರಿಂದ 27ರ ವರೆಗೆ ಬೆಂಗಳೂರಿನ ಕಬ್ಬನ್ ರಸ್ತೆಯಲ್ಲಿರುವ ಮಾಣಿಕ ಷಾ ಪರೇಡ್ ಮೈದಾನದಲ್ಲಿ ಬೃಹತ್ ನೇಮಕಾತಿ ರ್ಯಾಲಿ ನಡೆಯಲಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆಬ್ರುವರಿ 24 ಹಾಗೂ 25ರಂದು ಗ್ರೂಪ್ “ವೈ” ಮೆಡಿಕಲ್ ಅಸಿಸ್ಟಂಟ್ ಹುದ್ದೆ ಭರ್ತಿಗೆ ರ್ಯಾಲಿ ನಡೆಯಲಿದ್ದು, ಅಭ್ಯರ್ಥಿಗಳು 2000ರ ಜನವರಿ 17ರಿಂದ 2003ರ ಡಿಸೆಂಬರ್ 30ರ ಅವಧಿಯಲ್ಲಿ ಜನಿಸಿರಬೇಕು. 152.5 ಸೆಂ.ಮೀ. ಎತ್ತರ ಹೊಂದಿರಬೇಕು.
ಫೆಬ್ರುವರಿ 26 ಹಾಗೂ 27 ರಂದು ಗ್ರೂಪ್ “ಎಕ್ಸ್” ಎಜ್ಯುಕೇಶನ್ ಇನ್‍ಸ್ಟ್ರಕ್ಟರ್ ಹುದ್ದೆಗಳ ಭರ್ತಿಗೆ ರ್ಯಾಲಿ ನಡೆಯಲಿದ್ದು,  ಪದವೀಧರ ಅಭ್ಯರ್ಥಿಗಳು 1996ರ ಜನವರಿ 17 ರಿಂದ 2000ರ ಡಿಸೆಂಬರ್ 30ರ ಅವಧಿಯಲ್ಲಿ ಜನಿಸಿರಬೇಕು. ಸ್ನಾತಕೋತ್ತರ ಅಭ್ಯರ್ಥಿಗಳು 1993ರ ಜನವರಿ 17 ರಿಂದ 2000 ರ ಡಿಸೆಂಬರ್ 30 ರ ಅವಧಿಯಲ್ಲಿ ಜನಿಸಿರಬೇಕು. ಈ ಹುದ್ದೆಗಳಿಗೆ ಅಭ್ಯರ್ಥಿಗಳು 152.5 ಸೆಂ.ಮೀ. ಎತ್ತರ ಹೊಂದಿರಬೇಕು. ರ್ಯಾಲಿಯಲ್ಲಿ ಕರ್ನಾಟಕದ ಎಲ್ಲ ಜಿಲ್ಲೆಗಳ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.
ಅಭ್ಯರ್ಥಿಗಳು ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ, ರ್ಯಾಲಿ ಸಂದರ್ಭದಲ್ಲಿ ತರಬೇಕಾದ ದಾಖಲೆಗಳು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಾಯುಪಡೆಯ www.airmenselection.cdac.in  ವೆಬ್‍ಸೈಟ್ ಅಥವಾ 7 ಏರಮೆನ್ ಸೆಲೆಕ್ಷನ್ ಸೆಂಟರ್, ನಂ.1, ಕಬ್ಬನ್ ರಸ್ತೆ, ಬೆಂಗಳೂರು-560001. ದೂರವಾಣಿ ಸಂಖ್ಯೆ 080-25592199 (ಪ್ರತಿದಿನ ಬೆಳಿಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆಯವರೆಗೆ) ಸಂಪರ್ಕಿಸಲು ಕೋರಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...