ಭಾನುವಾರ, ಫೆಬ್ರವರಿ 23, 2020

ಕಡಲೆಕಾಳು ಖರೀದಿ ಕೇಂದ್ರಗಳ ಸ್ಥಾಪನೆ
ಯಾದಗಿರಿ, ಫೆಬ್ರುವರಿ 20 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ 2019-20ನೇ ಸಾಲಿನ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹಿಂಗಾರು ಹಂಗಾಮಿನ ಕಡಲೆಕಾಳನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಎಫ್.ಪಿ.ಓ.ಗಳ ಮುಖಾಂತರ ಖರೀದಿಗೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಡಲೆಕಾಳು ಪ್ರತಿ ಕ್ವಿಂಟಲ್‍ಗೆ ಸರ್ಕಾರದ ಬೆಂಬಲ ಬೆಲೆ 4875 ರೂ. ಇದ್ದು, ಪ್ರತಿಯೊಬ್ಬ ರೈತರಿಂದ ಎಕರೆಗೆ 3 ಕ್ವಿಂಟಲ್‍ನಂತೆ ಗರಿಷ್ಠ 10 ಕ್ವಿಂಟಲ್ ಖರೀದಿಸಲಾಗುವುದು. ಈ ಸಂಬಂಧ ಜಿಲ್ಲೆಯಲ್ಲಿ ಚಪೇಟ್ಲಾ, ಸೈದಾಪೂರ, ಬೆಂಡಬೆಂಬಳಿ, ಗಂಗನಾಳ, ಮಾಲಗತ್ತಿ, ಕಕ್ಕೇರಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ನೋಂದಣಿಗೆ ಮಾರ್ಚ್ 13 ಕೊನೆಯ ದಿನಾಂಕವಾಗಿದ್ದು, ನೋಂದಾಯಿತ ರೈತರಿಂದ ಕಡಲೆ ಖರೀದಿ ಮಾಡಲು ಮಾರ್ಚ್ 23 ಕೊನೆಯ ದಿನಾಂಕವಾಗಿರುತ್ತದೆ. ಪ್ರಯುಕ್ತ, ರೈತರು ಕೃಷಿ ಇಲಾಖೆಯು ನೀಡುವ ಫ್ರೂಟ್ಸ್ ಐಡಿ (FRUITES ID) ಮತ್ತು ಆಧಾರ್ ಕಾರ್ಡ್ ನಕಲು ಪ್ರತಿಯನ್ನು ಖರೀದಿ ಕೇಂದ್ರದಲ್ಲಿ ನೀಡಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ಒಬ್ಬ ರೈತನು ಒಂದೇ ಅರ್ಜಿಯನ್ನು ಖರೀದಿ ಕೇಂದ್ರಕ್ಕೆ ತರಬೇಕು. ಸರತಿ ಸಾಲಿನಲ್ಲಿ ಬಂದು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ಜಿಲ್ಲಾಧಿಕಾರಿಗಳು ಕೋರಿದ್ದಾರೆ.

ಯೋಗ ತರಬೇತುದಾರ, ಆರೋಗ್ಯ ಕಾರ್ಯಕರ್ತರ ಹುದ್ದೆಗೆ ಅರ್ಜಿ
ಯಾದಗಿರಿ, ಫೆಬ್ರುವರಿ 20 (ಕರ್ನಾಟಕ ವಾರ್ತೆ): ಆಯುಷ್ಮಾನ್ ಭಾರತ್ ಯೋಜನೆಯಡಿ ಜಿಲ್ಲಾ ಆಯುಷ್ ಕಚೇರಿ ಅಧೀನದಲ್ಲಿ ಕಾರ್ಯನಿರ್ವಹಿಸುವ ಸರಕಾರಿ ಆಯುರ್ವೇದ ಚಿಕಿತ್ಸಾಲಯ ಹೊನಗೇರಾ ಮತ್ತು ಮಾಧ್ವಾರ ಇವುಗಳನ್ನು ಆಯುಷ್ ಕ್ಷೇಮ ಕೇಂದ್ರಗಳಾಗಿ ಮೇಲ್ದರ್ಜೇಗೇರಿಸಿದ್ದು, ಈ ಚಿಕಿತ್ಸಾಲಯಗಳಲ್ಲಿ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರೆಕಾಲಿಕ ಯೋಗ ತರಬೇತುದಾರರು-2 ಹುದ್ದೆ ಮತ್ತು ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತರ- 2 ಹುದ್ದೆಗಳನ್ನು ನೇಮಕ ಮಾಡಲು ವಯೋಮಿತಿ ದಿನಾಂಕ: 20-02-2020 ರಂದು ಎಲ್ಲಾ ವರ್ಗದವರು ಕನಿಷ್ಠ 18 ವರ್ಷ ಪೂರ್ಣಗೊಂಡಿರತಕ್ಕದ್ದು. ವಯೋಮಿತಿ ಗರಿಷ್ಠ ಪ.ಜಾ ಮತ್ತು ಪ.ಪಂ 40 ವರ್ಷ, ಪ್ರವರ್ಗ-1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಪ್ರಕ್ರಿಯೆಯನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಮಾರ್ಚ್ 6ರಂದು ಸಂಜೆ 5 ಗಂಟೆಯೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಆಯುಷ್ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಮಾರ್ಚ್ 10ರಂದು ಬೆಳಿಗ್ಗೆ 10.30 ಗಂಟೆಗೆ ನೇರವಾಗಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನೇರ ಸಂದರ್ಶನದಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು. ಆಯುಷ್ ನಿರ್ದೇಶನಾಲಯದ ಷರತ್ತು ಮತ್ತು ನಿಬಂಧನೆಗಳು ಅನ್ವಯಿಸುತ್ತವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...