ಏಕ್ ಭಾರತ-ಶ್ರೇಷ್ಠ ಭಾರತ ಕಾರ್ಯಕ್ರಮ
ಶಾಲಾ ಮಕ್ಕಳಲ್ಲಿ ದೇಶಪ್ರೇಮ ಬೆಳೆಸಲು ಸಲಹೆ
ಯಾದಗಿರಿ ತಾಲ್ಲೂಕಿನ ಕಂದಕೂರ ಗ್ರಾಮದಲ್ಲಿ ಮಂಗಳವಾರ ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಕಲಬುರಗಿ ವಿಭಾಗ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ಯಾದಗಿರಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆ, ಕಂದಕೂರ ಗ್ರಾಮ ಪಂಚಾಯಿತಿ, ಸರಕಾರಿ ಪ್ರೌಢಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ “ಏಕ್ ಭಾರತ-ಶ್ರೇಷ್ಠ ಭಾರತ” ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ರಾಜಶೇಖರಗೌಡ ಪಾಟೀಲ್ ವಜ್ಜಲ್ ಅವರು ಮಾತನಾಡಿ, ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಖಂಡನೀಯವಾಗಿದೆ. ಇಂತಹ ವಿಚಾರಗಳನ್ನು ವಿದ್ಯಾರ್ಥಿಗಳಲ್ಲಿ ಮೂಡದ ಹಾಗೆ ಮತ್ತು ನಮ್ಮ ದೇಶಪ್ರೇಮವನ್ನು ಬೆಳೆಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಅವಶ್ಯವಾಗಿದೆ ಎಂದು ಹೇಳಿದರು.
ಸರಕಾರಿ ಪ್ರೌಢಶಾಲೆ ಸಹಶಿಕ್ಷಕರಾದ ಮಧುಮತಿ ಮತ್ತು ಗಂಗಾಧರ ಅವರು ಉಪನ್ಯಾಸ ನೀಡಿದರು. ಭಾಷಣ, ಚಿತ್ರಕಲಾ, ದೇಶಭಕ್ತಿ ಗೀತೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು. ಏಕ್ ಭಾರತ-ಶ್ರೇಷ್ಠ ಭಾರತ ಕಾರ್ಯಕ್ರಮ ಅಂಗವಾಗಿ ಚಲನಚಿತ್ರ ಮತ್ತು ಛಾಯಾಚಿತ್ರ ಪ್ರದರ್ಶನ ಹಾಗೂ ಗ್ರಾಮದಲ್ಲಿ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ