ಗುರುವಾರ, ಫೆಬ್ರವರಿ 27, 2020

 ಮುಕ್ತ ವಿವಿಯಿಂದ ಸಂಪರ್ಕ ಕಾರ್ಯಕ್ರಮ
ಯಾದಗಿರಿ, ಫೆಬ್ರುವರಿ 27 (ಕರ್ನಾಟಕ ವಾರ್ತೆ): 2019-20ನೇ ಸಾಲಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ ಕಲಬುರಗಿ. ಇದರ ವ್ಯಾಪ್ತಿಯಲ್ಲಿ ಪ್ರವೇಶಾತಿ ಪಡೆದಿರುವ ಎಂ.ಎ/ ಎಂ.ಕಾಂ ಪ್ರಥಮ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಫೆಬ್ರವರಿ 29 ರಿಂದ ಮಾರ್ಚ್ 4ರವೆರೆಗೆ ಸಂಪರ್ಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಲಬುರಗಿಯ ದರ್ಗಾ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಇಂಗ್ಲೀಷ್, ಕನ್ನಡ, ಹಿಂದಿ ಹಾಗೂ ಎಂ.ಕಾಂ ವಿಷಯಗಳ ಬಗ್ಗೆ ಸಂಪರ್ಕ ಕಾರ್ಯಕ್ರಮ ನಡೆಯಲಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಾದೇಶಿಕ ನಿರ್ದೇಶಕರಾದ ಡಾ. ಸಂಗಮೇಶ ಹಿರೇಮಠ ಅವರು ಪತ್ರಿಕಾ ಪ್ರಕಟೆಯಲ್ಲಿ ತಿಳಿಸಿದ್ದಾರೆ. ಹಾಗೂ ಹೆಚ್ಚಿನ ಮಾಹಿತಿಗಾಗಿ 9916783555 ಈ ನಂಬರ್‍ಗೆ ಸಂಪರ್ಕಿಸಿ.
ಟಿಇಟಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ
ಯಾದಗಿರಿ, ಫೆಬ್ರುವರಿ 27 (ಕರ್ನಾಟಕ ವಾರ್ತೆ): ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಿದೇಶಕರ ಆದೇಶದಂತೆ 2019-20ನೇ ಸಾಲಿನಲ್ಲಿ ಉರ್ದು ಶಾಲಾ ಶಿಕ್ಷಕರ ಹುದ್ದೆಗೆ ನೇಮಕಾತಿ ಬಯಸಿ ಟಿಇಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಜಿಲ್ಲಾ ಹಂತದಲ್ಲಿ ಡಯಟ್‍ಗಳ ಮೂಲಕ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
 ಟಿಇಟಿ ಪರೀಕ್ಷೆಯನ್ನು ಮಾರ್ಚ್ 15ರಂದು ಏರ್ಪಡಿಸಲಾಗಿದ್ದು, ಆದ್ದರಿಂದ ತರಬೇತಿಗೆ ಹಾಜರಾಗುವ ವಿದ್ಯಾರ್ಥಿಗಳು ಫೆಬ್ರವರಿ 10ರ ನಂತರÀ ತಮ್ಮ ನೋಂದಣಿ ಮಾಡಿಕೊಳ್ಳಬೇಕೆಂದು ಈಗಾಗಲೇ ಪ್ರಕಟಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ನಿರೀಕ್ಷಿತ ಸಂಖ್ಯೆಯಲ್ಲಿ ಹೆಸರು ನೋಂದಣಿ ಮಾಡಿಕೊಳ್ಳದೇ ಇರುವುದರಿಂದ ಉರ್ದು ಶಾಲಾ ಶಿಕ್ಷಕರ ಹುದ್ದೆಗೆ ನೇಮಕಾತಿ ಬಯಸಿ ಟಿಇಟಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಹೆಸರನ್ನು ಆಯಾ ಬ್ಲಾಕಿನ ಬಿಆರ್‍ಸಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಬೇಕು.
 ಹೆಚ್ಚಿನ ಮಾಹಿತಿಗಾಗಿ ಯಾದಗಿರಿ ಡಯಟ್‍ನ ಉಪನ್ಯಾಸಕರಾದ ಶಿವಪ್ಪ ಅವರ ಮೊ.9900845087 ಹಾಗೂ ಜಿಲ್ಲಾ ಉರ್ದು ಶಿಕ್ಷಣ ಸಂಯೋಜಕರಾದ ನುಸರತ್ ಜಾಹಾ ಉಪ ನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಯಾದಗಿರಿ ಮೊ.7337812159 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ಪ್ರಾಂಶುಪಾಲರು ಹಾಗೂ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 ಪಿಯುಸಿ ಪರೀಕ್ಷೆಗೆ ‘ತ್ರಿ ಸದಸ್ಯ ಸಮಿತಿ ರಚನೆ’
ಯಾದಗಿರಿ, ಫೆಬ್ರುವರಿ 27 (ಕರ್ನಾಟಕ ವಾರ್ತೆ): ಮಾರ್ಚ್ 4 ರಿಂದ 23ರವರೆಗೆ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಜಿಲ್ಲೆಯಾದ್ಯಂತ ನಡೆಯಲಿವೆ. ಪರೀಕ್ಷಾ ಸಮಯದಲ್ಲಿ ಯಾವುದೇ ಲೋಪದೋಷಗಳು, ನ್ಯೂನ್ಯತೆಗಳು ಕಂಡು ಬರದಂತೆ ಎಚ್ಚರವಹಿಸಲು ‘ತ್ರಿ ಸದಸ್ಯ ಸಮಿತಿ’ ರಚಿಸಲಾಗಿದೆ. ಅಲ್ಲದೇ ಪರೀಕ್ಷಾ ಸಾಮಾಗ್ರಿಗಳನ್ನು ಜಿಲ್ಲಾ ಖಜಾನೆಯಲ್ಲಿ ಸಂರಕ್ಷಿಸಿಡಲು ಹಾಗೂ ಪರೀಕ್ಷೆಗಳು ಸೂಸತ್ರವಾಗಿ ನಡೆಸಲು ಅಪರ ಜಿಲ್ಲಾಧಿಕಾರಿಗಳಾಧ ಪ್ರಕಾಶ ಜಿ. ರಜಪೂತ ಅವರÀ ನೇತೃತ್ವದಲ್ಲಿ ‘ತ್ರಿ ಸದಸ್ಯ ಸಮಿತಿ’ಯನ್ನು ರಚಿಸಿ, ಸಮಿತಿ ಸದಸ್ಯರಾದ ಜಿಲ್ಲಾ ಖಜಾನೆ ಉಪನಿರ್ದೇಶಕರಾದ ಮಹಾಲಿಂಗರಾಯ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಕರಾದ ಚಂದ್ರಕಾಂತ ಜೆ.ಹಿಳ್ಳಿ ಅವರಿಗೆ ವಹಿಸಿದ ಕೆಲಸ ಕಾರ್ಯವನ್ನು ಅಚ್ಚುಕಟ್ಟಾಗಿ ಯಾವುದೇ ಲೋಪವಾಗದಂತೆ ಎಚ್ಚರಿಕೆವಹಿಸಬೇಕೆಂದು ಜಿಲ್ಲಾಧಿಕಾರಿಗಳಾದ ಎಂ. ಕೂರ್ಮಾರಾವ್ ಅವರು ಆದೇಶ ಹೊರಡಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...