ಮಂಗಳವಾರ, ಫೆಬ್ರವರಿ 11, 2020

ಶ್ರೀ ಸವಿತಾ ಮಹರ್ಷಿ ರವರ ಜಯಂತ್ಯೋತ್ಸವ
ಶರಣರ ತತ್ವಾದರ್ಶಗಳು ಇಂದಿಗೂ ಪ್ರಸ್ತುತ
-ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ

ಯಾದಗಿರಿ, ಫೆಬ್ರುವರಿ ೧೧ (ಕರ್ನಾಟಕ ವಾರ್ತೆ): ಶರಣರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅವುಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಪ್ರಕಾಶ ಜಿ.ರಜಪೂತ ಅವರು ಹೇಳಿದರು. ನಗರದ ಜಿಲ್ಲಾಡಳಿತ ಭವನದ ಅಡಿಟೋರಿಯಂನಲ್ಲಿ ಮಂಗಳವಾರ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶ್ರೀ ಸವಿತಾ ಮಹರ್ಷಿ ಜಯಂತ್ಯೋತ್ಸವ ಸಮಿತಿಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಶ್ರೀ ಸವಿತಾ ಮರ್ಹಷಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಯು ಸುಂದರವಾಗಿ ಕಾಣಲು ಸವಿತಾ ಸಮಾಜದ ಬಂಧುಗಳು ನಿರ್ವಹಿಸುವ ಕಾಯಕ ಅತಿ ಶ್ರೇಷ್ಠ. ಸವಿತಾ ಸಮಾಜವು ಕ್ಷೌರಿಕ ವೃತ್ತಿ ಮಾಡುವಲ್ಲಿ ಯಾವುದೇ ಮೇಲು-ಕೀಳು ಎಂಬ ಭಾವನೆ ತಾಳದೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತದೆ. ಸಮಾಜದಲ್ಲಿ ವ್ಯಕ್ತಿಯ ನಡೆ-ನುಡಿ, ವ್ಯಕ್ತಿತ್ವದ ಆಧಾರದ ಮೇಲೆ ಆತನನ್ನು ಗುರುತಿಸಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ತಮ್ಮ ಕುಟುಂಬದಲ್ಲಿ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡುವ ಮೂಲಕ ಒಳ್ಳೆಯ ನಾಗರಿಕರನ್ನಾಗಿ ಮಾಡಬೇಕು. ಮಹಿಳೆಯರು ಕೂಡ ಸಮಾಜದಲ್ಲಿ ನಡೆಯುವ ಪ್ರತಿಯೊಂದು ಆಗು-ಹೋಗುಗಳ ಕುರಿತು ತಿಳಿದುಕೊಳ್ಳುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು. ಹುಣಸಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಭಾರಿ ಪ್ರಾಂಶುಪಾಲರಾದ ಅಶೋಕ ಅವರು ಉಪನ್ಯಾಸ ನೀಡಿ, ಹಿಂದೂ ಧರ್ಮದ ಉಳಿವಿಗೆ ಅನೇಕ ಋಷಿಮುನಿಗಳು ಕಾರಣವಾಗಿದ್ದು, ಅಂತಹ ಋಷಿಗಳಲ್ಲಿ ಸವಿತಾ ಮಹರ್ಷಿಗಳು ಕೂಡ ಒಬ್ಬರು. ಬ್ರಹ್ಮ, ವಿಷ್ಣು, ಮಹೇಶ್ವರರು ಯಜ್ಞ-ಯಾಗ ಮಾಡುತ್ತಿರುವ ಸಂದರ್ಭದಲ್ಲಿ ಬೆಂಕಿಯ ಕಿಡಿ ಶಿವನ ಮುಖಕ್ಕೆ ತಗುಲಿದಾಗ, ಪಾರ್ವತಿಯು ಮುಖ ವಿಕಾರವಾಗಿ ಕಾಣುತ್ತಿದೆ ಎಂದು ತಿಳಿಸುತ್ತಾಳೆ. ಆಗ ಶಿವನು ತನ್ನ ಮುಖವನ್ನು ಸುಂದರವನ್ನಾಗಿಸಲು ಬಲಗಣ್ಣಿನಿಂದ ಸೃಷ್ಟಿಸಿದ ವ್ಯಕ್ತಿಯೇ ಸವಿತಾ ಮಹರ್ಷಿ ಎಂದು ಪುರಾಣ ಪುಣ್ಯ ಕಥೆಗಳಿಂದ ತಿಳಿದುಬರುತ್ತದೆ ಎಂದು ಹೇಳಿದರು. ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಅಪ್ಪಣ್ಣ ಚಿನ್ನಾಕಾರ ಅವರು ಮಾತನಾಡಿ, ಸವಿತಾ ಸಮಾಜ ರಾಜಕೀಯ, ಸಾಮಾಜಿಕ ಹಾಗೂ ಆರ್ಥಿಕವಾಗಿ ಮುಂದೆ ಬರಬೇಕಾದರೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದರು. ಸವಿತಾ ಸಮಾಜದ ಜಿಲ್ಲಾ ಪ್ರತಿನಿಧಿ ಮಲ್ಲಣ್ಣ ವಡಿಗೇರಿ, ಜಯಂತ್ಸೊö್ಯÃವ ಸಮಿತಿ ಅಧ್ಯಕ್ಷರಾದ ಗೋಪಾಲ ಕಿಲ್ಲದ್, ನಾಗಪ್ಪ ಹತ್ತಿಕುಣಿ, ಸವಿತಾ ಸಮಾಜದ ಮಾಜಿ ರಾಜ್ಯ ಉಪಾಧ್ಯಕ್ಷರಾದ ರಮೇಶ್ ಪಿ.ಚಿನ್ನಾಕರ್, ರಾಜ್ಯ ಸಮಿತಿ ಸದಸ್ಯರಾದ ಸೂರ್ಯಕಾಂತ್ ಚಿನ್ನಾಕರ್ ಹಾಗೂ ಸಮಾಜದ ಮುಖಂಡರು, ಮಹಿಳೆಯರು ಭಾಗವಹಿಸಿದ್ದರು. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಂಗೀತ ಶಿಕ್ಷಕ ಚಂದ್ರಶೇಖರ ಗೋಗಿ ಹಾಗೂ ಕಲಾ ತಂಡದವರು ನಾಡಗೀತೆ ಹಾಡಿದರು. ಕನ್ನಡ ಮತ್ತು ಸಂಸ್ಕೃತ ಇಲಾಖೆ ಸಹಾಯಕ ನಿರ್ದೆಶಕರಾದ ದತ್ತಪ್ಪ ಸಾಗನೂರ ಸ್ವಾಗತಿಸಿದರು. ಸುಬಮ ಪದವಿ ಕಾಲೇಜಿನ ಉಪನ್ಯಾಸಕ ಗುರುಪ್ರಸಾದ ವೈದ್ಯ ನಿರೂಪಿಸಿದರು. ಕಾರ್ಯಕ್ರಮಕ್ಕೂ ಮೊದಲು ನಗರದಲ್ಲಿ ಕಲಾತಂಡಗಳೊAದಿಗೆ ಸವಿತಾ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ನಡೆಯಿತು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...