ಬುಧವಾರ, ಮಾರ್ಚ್ 4, 2020

ಅಕ್ರಮ ಪಡಿತರ ಚೀಟಿ ಹಿಂದಿರುಗಿಸಲು ಕೊನೆ ಅವಕಾಶ
ಯಾದಗಿರಿ, ಮಾರ್ಚ್ 04 (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ತಪ್ಪು ಮಾಹಿತಿ ನೀಡಿ ಅಂತ್ಯೋದಯ, ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದಿರುವುದು ಕಂಡು ಬಂದಿದ್ದು, ಇಂಥ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಾದ ಎಂ. ಕೂರ್ಮಾ ರಾವ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರದ ಮಾನದಂಡಗಳನ್ನು ಉಲ್ಲಂಘಿಸಿ ಪಡಿತರ ಚೀಟಿಗಳನ್ನು ಪಡೆದಿದ್ದಲ್ಲಿ ಅಂತಹ ಪಡಿತರ ಚೀಟಿದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ ಪಡಿತರ ಚೀಟಿದಾರರು ಸ್ವಯಂ ಪ್ರೇರಿತವಾಗಿ ಮಾಹಿತಿಯನ್ನು ತಮ್ಮ ತಾಲ್ಲೂಕಿನ ತಹಸೀಲ್ದಾರ ಕಾರ್ಯಾಲಯದಲ್ಲಿ ಅಥವಾ ಉಪ ನಿರ್ದೇೀಶಕರ ಕಾರ್ಯಾಲಯದಲ್ಲಿ ನೀಡಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ. ಮಾನದಂಡಗಳು : ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಸರ್ಕಾರದ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು. ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು,  ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿ ಕ್ಯಾಬ್, ಟ್ಯಾಕ್ಸಿ, ಇತ್ಯಾದಿಗಳನ್ನು ಹೊಂದಿರುವ ಕುಟುಂಬಗಳನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಎಲ್ಲಾ ಕುಟುಂಬಗಳು. ಕುಟುಂಬದ ವಾರ್ಷಿಕ ಆದಾಯವು ರೂ. 1.20 ಲಕ್ಷಗಳಿಗಿಂತಲು ಹೆಚ್ಚು ಇರುವ ಕುಟುಂಬಗಳು, ಈ ಎಲ್ಲಾ ಮಾನದಂಡಗಳನ್ನು ಹೊಂದಿರುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವುದು ಕಾನೂನು ಬಾಹಿರ ಕ್ರಮವಾಗಿರುತ್ತದೆ ಎಂದು ಹೇಳಿದರು. ಅಕ್ರಮವಾಗಿ ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಸರ್ಕಾರಕ್ಕೆ ಹಿಂತಿರುಗಿಸುವುದು ಸರ್ಕಾರವು ಏಪ್ರಿಲ್-2020ರ ಅಂತ್ಯದವರೆಗೆ ಮತ್ತೊಂದು ಅವಕಾಶವನ್ನು ನೀಡಿರುತ್ತದೆ. ಅನರ್ಹರು ನಿಗಧಿತ ದಿನಾಂಕದೊಳಗೆ ತಾವು ಹೊಂದಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ತಾಲ್ಲೂಕು ಕಚೇರಿಯಲ್ಲಿರುವ ತಹಶೀಲ್ದಾರರು, ಆಹಾರ ಶಿರಸ್ತೇದಾರರು, ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ ತಾವು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಹಿಂತಿರುಗಿಸಲು ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ ತಾವೇ ಸ್ವತಃ ಪಡಿತರ ಚೀಟಿಗಳನ್ನು ಹಿಂತಿರುಗಿಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. 
ಈ ಅವಧಿ ಮುಗಿದ ನಂತರ ಇಲಾಖೆಯೇ ಕಾರ್ಯಚರಣೆ ನಡೆಸಿ ಅನರ್ಹರು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿದಾಗ ಅಂತಹ ಕುಟುಂಬಗಳು ತಾವು ಪಡಿತರ ಚೀಟಿಗಳನ್ನು ಹೊಂದಿದ ದಿನಾಂಕದಿಂದ ಪತ್ತೆ ಹಚ್ಚಿದ ದಿನಾಂಕದವರೆಗೆ ತಾವು ಪಡೆದ ಪಡಿತರ ಪದಾರ್ಥಗಳವಾರು ಪ್ರತಿ ಕೆಜಿಗೆ ಮುಕ್ತ ಮಾರುಕಟ್ಟೆಯ ಬೆಲೆಯ ಅನುಸಾರ ಹಣವನ್ನು ವಸೂಲಿ ಮಾಡಲಾಗುವುದು ಜೊತೆಗೆ (The Karnataka (Previntion Of  Unauthorized Possession Of Ration Cards) Order-1977ರ ರಿತ್ಯ ಕ್ರಮ ವಹಿಸಲಾಗುವುದು ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು. ಆದ್ದರಿಂದ ಅನರ್ಹರು ತಾವು ಹೊಂದಿರುವ ಬಿಪಿಎಲ್ ವರ್ಗದ ಪಡಿತರ ಚೀಟಿಗಳನ್ನು ಸರ್ಕಾರಕ್ಕೆ ವಾಪಸ್ಸು ನೀಡಿ ಕಾನೂನು ಕ್ರಮದಿಂದ ವಿಮುಕ್ತಿ ಹೊಂದಬೇಕು ಎಂದು ತಿಳಿಸಿದ್ದಾರೆ. 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...