ಸೋಮವಾರ, ಜನವರಿ 4, 2021

 ಅಭಿವೃದ್ದಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ

6 ರಂದು ಜಿಲ್ಲೆಗೆ ಮುಖ್ಯಮಂತ್ರಿಗಳ ಆಗಮನ: ಅಗತ್ಯ ಸಿದ್ದತೆಗೆ 

ಜಿಲ್ಲಾಧಿಕಾರಿಯವರ ಸೂಚನೆ

ಯಾದಗಿರಿ,ಜ 04, (ಕ.ವಾ)- ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇದೇ ಜನವರಿ 06ರ ಬುಧವಾರ ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರೆ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲನ್ಯಾಸ ಕಾರ್ಯಕ್ರಮಗಳನ್ನು ನೆರವೇರಿಸಲು ಆಗಮಿಸುತ್ತಿದ್ದು, ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ  ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯ ಆರ್ ಅವರು ನಿರ್ದೇಶನ ನೀಡಿದ್ದರು.


 ಅವರು ಜ.4ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.


 ಜನವರಿ 06 ರ ಬುಧವಾರ ಮಧ್ಯಾಹ್ನ 2.30ಕ್ಕೆ ಯಾದಗಿರಿ ತಾಲ್ಲೂಕಿನ ಮುದ್ನಾಳ್ ಗ್ರಾಮದಲ್ಲಿರುವ ನೂತನ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಮಾನ್ಯ ಮುಖ್ಯಮಂತ್ರಿಯವರು 56 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ 300 ಹಾಸಿಗೆಗಳ ನೂತನ ಜಿಲ್ಲಾಸ್ಪತ್ರೆ, 17.66 ಕೋಟಿ ರೂ.ಗಳ ವೆಚ್ಚದಲ್ಲಿ ವರ್ಕನಳ್ಳಿಯಲ್ಲಿ ನಿರ್ಮಾಣಗೊಂಡಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, 3.80ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಯಾದಗಿರಿ ನಗರದಲ್ಲಿ ನೂತನ ನಗರ ಸಾರಿಗೆ ಬಸ್ ನಿಲ್ದಾಣ್ ಹಾಗೂ ವಿಭಾಗೀಯ ಕಚೇರಿ, 1.35 ಕೋಟಿ ರೂ.ಗಳ ವೆಚ್ಚದ ಶಹಾಪುರ ತಾಲ್ಲೂಕಿನ ಬೆಂಡೆಬೆAಬಳ್ಳಿ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು, 1.25 ಕೋಟಿ ರೂ.ಗಳ ವೆಚ್ಚದಲ್ಲಿ ವಡಗೇರಾ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಗೆ ಹೆಚ್ಚವರಿ 10 ಕೋಣೆಗಳ ನಿರ್ಮಾಣ, 1 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗಿರುವ ಯಾದಗಿರಿ ತಾಲ್ಲೂಕಿನ ಮುಂಡರಗಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಕಟ್ಟಡ, 50 ಲಕ್ಷ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದ ಮುರುಘೇಂದ್ರ ಮಠದ ಹತ್ತಿರ ಯಾತ್ರಿಕ ನಿವಾಸ ಕಟ್ಟಡ ಹಾಗೂ 50ಲಕ್ಷ ರೂ ಗಳ ವಡಗೇರಾ ತಾಲ್ಲೂಕಿನ ಸಂಗಮನಾಥ ದೇವಸ್ಥಾನದ ಹತ್ತಿರ ಯಾತ್ರಿ ನಿವಾಸ ಕಟ್ಟಡವನ್ನು ಮಾನ್ಯ ಮುಖ್ಯಮಂತ್ರಿಯವರು ಉದ್ಘಾಟಿಸುವರು ಎಂದು ಹೇಳಿದರು. 

 ಅದರಂತೆ 325 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗುವ ಯಾದಗಿರಿ ವೈದ್ಯಕೀಯ ಶಿಕ್ಷಣ ಸಂಸ್ಥೆ, 63.31 ಕೋಟಿ ರೂ.ಗಳ ವೆಚ್ಚದಲ್ಲಿ ರಾಮಸಮುದ್ರದಲ್ಲಿ 220/110/11 ಕೆ.ವಿ ವಿದ್ಯುತ್ ಸ್ವೀಕರಣ ಕೇಂದ್ರದ ಸ್ಥಾಪನೆ, 24.75 ಕೋಟಿ ರೂ.ಗಳ ವೆಚ್ಚದಲ್ಲಿ ಕಾಡಂಗೇರಾದಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ (ಪರಿಶಿಷ್ಟ ಜಾತಿ), 19.90 ಕೋಟಿ ರೂ.ಗಳ ವೆಚ್ಚದಲ್ಲಿ ಯದಗಿರಿ ನಗರದಲ್ಲಿ ಭೀಮಾ ನದಿ ಹತ್ತಿರ ಜ್ಯಾಕ್‌ವೆಲ್ ನಿರ್ಮಾಣ, 6 ಕೋಟಿ ರೂ.ಗಳ ವೆಚ್ಚದಲ್ಲಿ  ಕೊಳ್ಳರು (ಎಮ್) ಗ್ರಾಮದಲ್ಲಿ 110/11 ಕೆ.ವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ 4.80 ಕೋಟಿ ರೂ.ಗಳ ವೆಚ್ಚದಲ್ಲಿ ಶಹಾಪುರ ತಾಲ್ಲೂಕಿನ ವಡಗೇರಾ- ತುಮಕೂರು ಸಂಗಮ್ ರಸ್ತೆಯ ಅಭಿವೃದ್ಧಿ (ಕಿ.ಮೀ27ರಿಂದ 33ರವರೆಗೆ), 4 ಕೋಟಿ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದ ವಿವಿಧ ವಾರ್ಡ್ಗಳಲ್ಲಿ ಸಿ.ಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ, 2.08 ಕೋಟಿ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದ ಶಾಸ್ತಿç ವೃತ್ತದ ಸೌಂದರೀಕರಣ ಮತ್ತು ಶಾಸ್ತಿç ವೃತ್ತದಿಂದ ದೊಡ್ಡ ಹಳ್ಳದವರೆಗೆ ಚರಂಡಿ ನಿರ್ಮಾಣ, 2 ಕೋಟಿ ರೂ.ಗಳ ವೆಚ್ಚದಲ್ಲಿ ಶಹಾಪುರ ತಾಲ್ಲೂಕಿನ ವಡಗೇರಾ- ತುಮಕೂರು ಸಂಗಮ್ ರಸ್ತೆ(ಕಿ.ಮೀ 18.80 ರಿಂದ 21.30 ರವರೆಗೆ ಸುಧಾರಣೆ),  2 ಕೋಟಿ ರೂ.ಗಳ ವೆಚ್ಚದಲ್ಲಿ ಶಹಾಪುರ ತಾಲ್ಲೂಕಿನ ವಡಗೇರಾ- ತುಮಕೂರು ಸಂಗಮ್ ರಸ್ತೆ(ಕಿ.ಮೀ 21.30 ರಿಂದ 23.80 ರವರೆಗೆ ಸುಧಾರಣೆ) ಹಾಗೂ 1 ಕೋಟಿ ರೂ.ಗಳ ವೆಚ್ಚದಲ್ಲಿ ಯಾದಗಿರಿ ನಗರದಲ್ಲಿ ಮೀನು ಮಾರುಕಟ್ಟೆ ಸ್ಥಾಪನೆ ಸೇರಿದಂತೆ ಒಟ್ಟಾರೆ ಅಂದಾಜು 536.91 ರೂ.ಗಳ ವೆಚ್ಚದ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳನ್ನು ನೆರವೇರಿಸುವರು ಎಂದು ಹೇಳಿದರು.

 ವಿವಿಧ ಕಾರ್ಯಕ್ರಮಗಳ ಶಂಕುಸ್ಥಾಪನೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಯಾವುದೇ ಲೋಪದೋಷಗಳಾಂಗದAತೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅವರು ತಿಳಿಸಿದರು.


 ಕಾರ್ಯಕ್ರಮ ನಡೆಯಲಿರುವ ಮುದ್ನಾಳ್ ಗ್ರಾಮದ ನೂತನ ಜಿಲ್ಲಾಸ್ಪತ್ರೆ ಆವರಣದಲ್ಲಿ ವೇದಿಕೆ ತಯಾರಿ, ಜನಪ್ರತಿನಿಧಿಗಳು, ಗಣ್ಯರು ಸೇರಿದಂತೆ ಕಾರ್ಯಕ್ರಮದಲ್ಲಿ ಭಾಗವಹಿಸುವರಿಗೆ ಉತ್ತಮ ಆಸನಗಳ ವ್ಯವಸ್ಥೆ ಕಲ್ಪಿಸಬೇಕು, ಪೊಲೀಸ್ ಕಾನ್ವಾಯ್, ಬಂದೋಬಸ್ತ್, ಜಿಲ್ಲಾ ಕ್ರೀಡಾಗಂಣದಲ್ಲಿ ಹೆಲಿಪ್ಯಾಡ್ ನಿರ್ಮಾಣ, ಆಹಾರ ಮತ್ತು ಉಪಹಾರ ಪೂರೈಕೆ, ಕುಡಿಯುವ ನೀರು, ಸ್ಯಾನಿಟೈಜರ್, ಶೌಚಾಲಯ, ಆಂಬುಲೆನ್ಸ್, ವೈದ್ಯರು ಹಾಗೂ ಅಗ್ನಿ ಶಾಮಕ ವಾಹನಗಳ ವ್ಯವಸ್ಥೆಗಳನ್ನು ಸಂಬAಧಿಸಿದ ಇಲಾಖೆ ಮುಖ್ಯಸ್ಥರು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.


 ಕಾರ್ಯಕ್ರಮ ನಡೆಯವ ಸ್ಥಳದಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳಬೇಕು, ಮುಖ್ಯವಾಗಿ ಕಾರ್ಯಕ್ರಮ ನಡೆಯುವ ದಿನದಂದು ಆಗಮಿಸುವರನ್ನು ಥರ್ಮಲ್ ಸ್ಕಿçÃನಿಂಗ್‌ಗೆ ಒಳಪಡಿಸಬೇಕು, ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣೆಗೆ ಆಶಾ ಕಾರ್ಯಕರ್ತೆಯರನ್ನು ನಿಯೋಜಿಸಬೇಕು, ಅದರಂತೆ ಪರಸ್ಪರ ಸಾಮಜಿಕ ಅಂತರ ಕಾಯ್ದುಕೊಳ್ಳಲು ಸಲಹೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು.


 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದುಮತಿ ಪಾಟೀಲ್, ಯಾದಗಿರಿ ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೇರಿದಂತೆ ಸಂಬAಧಿಸಿದ ಅಧಿಕಾರಿಗಳು ಸಭೆಯಲಿದ್ದರು. 




ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...