ಸೋಮವಾರ, ಜನವರಿ 25, 2021

 


ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಸಾರ್ವಜನಿಕರ ಕಷ್ಟಗಳಿಗೆ ಪ್ರಮಾಣಿಕವಾಗಿ ಸ್ಪಂದಿಸಿ ಅಧಿಕಾರಿಗಳಿಗೆ ಕಿವಿಮಾತು




ಯಾದಗಿರಿ.ಜ.26 (ಕ.ವಾ):-  ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ 72ನೆ ಗಣರಾಜ್ಯೋತ್ಸವದ ನಿಮಿತ್ಯ ಜಿಲ್ಲಾಧಿಕಾರಿಗಳಾದ ಡಾ .ರಾಗಪ್ರಿಯಾ ಆರ್ ಅವರು ಜ.26ರ ಮಂಗಳವಾರ ದಂದು ಧ್ವಜಾರೋಹಣ ನೆರವೇರಿಸಿದರು.


ನಂತರ ಮಾತನಾಡಿದ ಅವರು , ಜ.26 1950ರಂದು ಭಾರತ ದೇಶ ಗಣರಾಜ್ಯವಾಯಿತು ಅದರ ಸವಿನೆನಪಿಗಾಗಿ ನಾವು ಇಂದು ಗಣರಾಜ್ಯೋತ್ಸವ ದಿನಾಚರಣೆಯಾಗಿ ಬಹಳ ಅರ್ಥಪೂರ್ಣವಾಗಿ ಆಚರಿಸಿತ್ತಾ ಬಂದಿದ್ದೇವೆ ಎಂದರು. ಸಾರ್ವಜನಿಕರ ಕಷ್ಟಗಳಿಗೆ ನಾವು (ಅಧಿಕಾರಿಗಳು) ಪ್ರಮಾಣಿಕವಾಗಿ ಸ್ಪಂದಿಸದರೆ ಮಾತ್ರ ನಮ್ಮ ಮೇಲೆ ಜನರಿಗೂ ಗೌರವ ಬರುತ್ತದೆ ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.


ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಭಾರತ ದೇಶದ ಲಿಖಿತ ಸಂವಿದಾನವನ್ನು ರಚಿಸಿ 1949ರ ನ.26ರಂದು ಅಂಗೀಕರಿಸಲಾಗಿದೆ ಎಂದು ಅವರು ತಿಳಿಸಿದರು. ಇದೇ ಸಂದರ್ಭದಲ್ಲಿ ಕಳೆದ ತಿಂಗಳು ಜರುಗಿದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಕಂದಾಯ ಇಲಾಖೆ, ಚುನಾವಣಾ ಆಯೋಗ ಸೇರಿದಂತೆ ಇತರ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.


ಸಾರ್ವಜನಿಕರ ಕಷ್ಟಗಳಿಗೆ ನಾವು (ಅಧಿಕಾರಿಗಳು) ಪ್ರಮಾಣಿಕವಾಗಿ ಸ್ಪಂದಿಸದರೆ ಮಾತ್ರ ನಮ್ಮ ಮೇಲೆ ಜನರಿಗೂ ಗೌರವ ಬರುತ್ತದೆ ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಒ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿಯಾದ ಪ್ರಕಾಶ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಜಿ.ಪಂ ಉಪಕಾರ್ಯದರ್ಶಿಯಾದ ಮುಕ್ಕಣ್ಣ ಕರಿಗಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...