ಮಂಗಳವಾರ, ಫೆಬ್ರವರಿ 2, 2021

 9 ರಂದು ತಾಲೂಕ್ ಪಂಚಾಯತ್ ಸಾಮಾನ್ಯ ಸಭೆ

ಯಾದಗಿರಿ,ಫೆ. 02 (ಕ.ವಾ):- ಯಾದಗಿರಿ ತಾಲೂಕ ಪಂಚಾಯತಿಯ ಸಾಮಾನ್ಯ ಸಭೆಯನ್ನು ಇದೇ ಫೆ.9 ರ ಬೆಳಗ್ಗೆ 11 ಗಂಟೆಗೆ ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. 

 ತಾಲೂಕು ಪಂಚಾಯತ್ ಅಧ್ಯಕ್ಷರಾದ ಭೀಮವ್ವ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ತಾ.ಪಂ ಕಾರ್ಯನಿರ್ವಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


                   ನಾರಿಶಕ್ತಿ ಪುರಸ್ಕಾರ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

ಯಾದಗಿರಿ,ಫೆ. 02 (ಕ.ವಾ):- 2020-21ನೇ ಸಾಲಿನಲ್ಲಿ ಮಹಿಳೆಯರಿಗೆ ನೀಡಲಾಗುವ ನಾರಿಶಕ್ತಿ ಪುರಸ್ಕಾರ ಪ್ರಶಸ್ತಿಗಳಿಗೆ ಅರ್ಹ  ಮಹಿಳೆ, ಸಂಘ-ಸAಸ್ಥೆಗಳಿAದ  ಅರ್ಜಿ ಆಹ್ವಾನಿಸಲಾಗಿದೆ. 

ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಅರ್ಹ ಆಸಕ್ತರು ವೆಬ್‌ಸೈಟ್ ತಿತಿತಿ.ಟಿಚಿಡಿishಚಿಞಣiಠಿuಡಿಚಿsಞಚಿಡಿ.ತಿಛಿಜ.gov.iಟಿ ನ ಮೂಲಕ ಅರ್ಜಿ ಸಲ್ಲಿಸಬೇಕು.

 ಅರ್ಜಿಯನ್ನು ಫೆಬ್ರವರಿ 6 ರೊಳಗೆ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅರ್ಜಿ ಆಹ್ವಾನ

ಯಾದಗಿರಿ,ಫೆ. 02 (ಕ.ವಾ):- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಅಖಿಲ ಭಾರತ ಕನ್ನಡ ಕಾವ್ಯ ಕಮ್ಮಟ ಎಂಬ ರಾಜ್ಯ ಮಟ್ಟದ ಮೂರು ದಿನದ ಕಮ್ಮಟವನ್ನು ಮುಂಬರುವ ಮಾರ್ಚ್ನಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿದೆ. 

20 ರಿಂದ 40 ವರ್ಷದೊಳಗಿನ ಆಸಕ್ತರು ಅರ್ಜಿ ಸಲ್ಲಿಸಬಹುದು. 2021ರ ಫೆ.15 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg ನಿಂದ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆಯಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಡೆಮಿಯ ರಿಜಿಸ್ಟಾçರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


 


 


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...