ಶುಕ್ರವಾರ, ಮಾರ್ಚ್ 26, 2021

 ಕೋವಿಡ್ 2ನೇ ಅಲೆ ಹಿನ್ನೆಲೆ: ಜಿಲ್ಲೆಯಲ್ಲಿ ಜಾತ್ರೆ ಮತ್ತು ಹಬ್ಬಗಳ ಆಚರಣೆಗೆ ನಿಷೇಧ

                                                         :ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ,ಮಾ.26 (ಕ.ವಾ);- ಕೋವಿಡ್ 2ನೇ ಅಲೆ ಆರಂಭವಾಗಿರುವ ಹಿನ್ನೆಲೆಯಲ್ಲಿ  ಮುನ್ನೆಚ್ಚರಿಕೆ ಕ್ರಮವಾಗಿ ಯಾದಗಿರಿ ಜಿಲ್ಲೆಯಲ್ಲಿ ಹೋಳಿ ಹಬ್ಬ ಸೇರಿದಂತೆ ಇತರೆ ಹಬ್ಬಗಳು, ಜಾತ್ರೆಗಳು ಹಾಗೂ ಉರುಸ್‌ಗಳ ಆಚರಣೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ. 


ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯದಲ್ಲಿ ಕೋವಿಡ್ 2ನೇ ಅಲೆಯಿಂದಾಗಿ ಹಲವೆಡೆ ಹೆಚ್ಚಿನ ಪ್ರಕರಣ ಕಂಡು ಬಂದಿದೆ.ಯಾದಗಿರಿ ಜಿಲ್ಲೆಯು ಮಹಾರಾಷ್ಟ್ರ ರಾಜ್ಯಕ್ಕೆ ಹತ್ತಿರವಿದ್ದು, ಜಿಲ್ಲೆಯಲ್ಲೂ ಕಳೆದ ಕೆಲವು ದಿನಗಳಿಂದ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕೋವಿಡ್ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು ತಿಳಿಸಿದರು.


 ಜಿಲ್ಲೆಯಲ್ಲಿ ವಿವಿಧ ಸಾರ್ವಜನಿಕ ಸಭೆ/ಸಮಾರಂಭ ಹಾಗೂ ಆಚರಣೆಗಳಲ್ಲಿ ಸಾರ್ವಜನಿಕರು ಗುಂಪು, ಗುಂಪಾಗಿ ಸೇರುವ ಸಾಧ್ಯತೆ ಇದೆ. ಹೀಗಾಗಿ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲೆಯ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಯುಗಾದಿ, ಹೋಳಿ ಹಬ್ಬ, ಷಬ್-ಎ-ಬರಾತ್, ಗುಡ್ ಫ್ರೆöÊ ಡೇ, ಜಾತ್ರೆಗಳು ಇತ್ಯಾದಿ ಹಬ್ಬಗಳ ಆಚರಣೆ ಅಸಾಧ್ಯ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ ಎಂದರು.


ಸಾAಕ್ರಾಮಿಕ ರೋಗ ಕಾಯ್ದೆ 1897 ಹಾಗೂ ವಿಪತ್ತು ನಿರ್ವಹಣ ಕಾಯ್ದೆ 2005 ರ ಅನ್ವಯ ಹೋಳಿ ಹಬ್ಬವನ್ನು ನಿಷೇಧಿಸಿ ಈ ಆದೇಶ ಹೊರಡಿಸಲಾಗಿದೆ. ಈ ಆದೇಶ ತಕ್ಷಣದಿಂದಲೇ ಜಾರಿಗೆ ಬಂದಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.


 ಒಂದು ವೇಳೆ ಯಾವುದೇ ವ್ಯಕ್ತಿಗಳು ಈ ನಿಯಮವನ್ನು  ಉಲ್ಲಂಘನೆ ಮಾಡಿದ್ದಲ್ಲಿ, ಅಂತಹ ವ್ಯಕ್ತಿ/ವ್ಯಕ್ತಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ/2005 ರ ವಿಭಾಗ 51 ರಿಂದ 60ರ ಅನ್ವಯ ಐಪಿಸಿ ಸೆಕ್ಷನ್ 188 ರಂತೆ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ/2020ರ ವಿಭಾಗ 4,5 ಹಾಗೂ 10 ರಂತೆ ಕ್ರಮಗಳನ್ನು ಜರುಗಿಸಲಾಗುವುದೆಂದು ಅವರು ಎಚ್ಚರಿಸಿದ್ದಾರೆ.


ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.   



“ಗ್ರಾಮ ಕಾಯಕ ಮಿತ್ರ” ರನ್ನು ನಿಯೋಜನೆಗೆ ಅರ್ಜಿ ಆಹ್ವಾನ

ಯಾದಗಿರಿ,ಮಾ26.(ಕ.ವಾ):- ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಡಿ 2020-21 ನೇ ಸಾಲಿನಲ್ಲಿ ್ಲ “ಗ್ರಾಮ ಕಾಯಕಮಿತ್ರ”ರನ್ನು ಗೌರವಧನದ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲು ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯ ಒಟ್ಟು 79 ಗ್ರಾಮ ಪಂಚಾಯತಿಗಳಲ್ಲಿ “ಗ್ರಾಮ ಕಾಯಕ ಮಿತ್ರ” ರನ್ನು ಆಯ್ಕೆ ಮಾಡಿಕೊಳ್ಳಲು ಅರ್ಹ ಮಹಿಳೆಯಿರಿಂದ ನಿರ್ಧರಿಸಿದ್ದು, ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಕನಿಷ್ಠ 10 ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಕಳೆದ ಜನವೆರಿ 1 ರಿಂದ ಅನ್ವಯಿಸುವಂತೆ  ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮನರೆಗಾ ಯೋಜನೆಯಡಿ ಕ್ರಿಯಾಶೀಲ ಉದ್ಯೋಗ (ಜಾಬ್) ಕಾರ್ಡ್ ಹೊಂದಿರುವಬೇಕು.

ಕಳೆದ ಮೂರು ವರ್ಷಗಳಲ್ಲಿ ಕನಿಷ್ಠ 2 ವರ್ಷಯೋಜನೆಯಡಿ ಅಕುಶಲ ಕೆಲಸಗಾರರಾಗಿ ಕೆಲಸ ನಿರ್ವಹಿಸಿರಬೇಕು ಹಾಗೂ ಆಯಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ವಾಸಿಸುವ 45 ವರ್ಷದೊಳಗಿನ ಅರ್ಹ ಅರ್ಜಿಯನ್ನು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ 2021ರ ಏಪ್ರೀಲ್ 10 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ . 

ಆಯ್ಕೆಯಾದ ಕಾಯಕ ಮಿತ್ರರಿಗೆ ಮಾಸಿಕ 6,000 ರೂ ಮತ್ತು  ಕಾರ್ಯನಿರ್ವಹಣಾಧಾರದ ಮೇಲೆ 5,000 ಪ್ರೋತ್ಸಾಹಧನ ನೀಡಲಾಗುವದು. ಹೆಚ್ಚಿನ ಮಾಹಿತಿಗೆ ಆಯಾ ಗ್ರಾಮ ಪಂಚಾಯತ ಕಚೇರಿ ಸಂಪರ್ಕಿವAತೆ ಅವರು ತಿಳಿಸಿದ್ದಾರೆ.

     


 




ವಿವಿಧ ಜಯಂತಿಗಳನ್ನು ಸರಳವಾಗಿ ಆಚರಣೆಗೆ ನಿರ್ಧಾರ

                                                         :ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ,ಮಾ.26 (ಕ.ವಾ);- ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಡಾ.ಬಾಬು ಜಗಜೀವನರಾಮ್  ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.  


ಶುಕ್ರವಾರ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಏಪ್ರಿಲ್ 05 ರಂದು ಡಾ.ಜಗಜೀವನರಾಮ್ ಹಾಗೂ ಏಪ್ರಿಲ್ 14 ರಂದು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿಗಳ ಆಚರಣೆಯ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

   

 ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಅವರು,  ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿವಿಧ ಜಯಂತಿಗಳನ್ನು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುವುದು, ಅಂದು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಣೆ ಮಾಡಿ, ಗೌರವ ಸಲ್ಲಿಸಲಾಗುತ್ತದೆ ಎಂದರು.  

 

 ಜಯಂತಿಯಲ್ಲಿ ಮೆರವಣಿಗೆಗೆ ಅವಕಾಶ ಇರುವುದಿಲ್ಲ. ಸಮಾಜದ ಮುಖಂಡರ ಸಮ್ಮುಖದಲ್ಲಿ ಕೋವಿಡ್-19 ಸುರಕ್ಷತಾ ಕ್ರಮಗಳೊಂದಿಗೆ ಸರಳವಾಗಿ ಆಚರಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ಸ್ಯಾನಿಟೈಜರ್ ಉಪಯೋಗಿಸಬೇಕೆಂದು ಹೇಳಿದರು.


ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿವಲಿಂಗಪ್ಪ ಪುಟಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನಾವಣೆ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚನ್ನಬಸವ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭು ದೊರೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕೋಟ್ರೇಶ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಭಾವಿಕಟ್ಟಿ ಹಾಗೂ ವಿವಿಧ ಸಮಾಜದ ಮುಖಂಡರಾದ ಖಂಡಪ್ಪ ದಾಸನ್, ಮರೆಪ್ಪ ಚಟ್ರೆ ಕರ್, ಮಲ್ಲಣ್ಣ ದಾಸನಕೇರಿ, ಮಲ್ಲಿಕಾರ್ಜುನ ಈಟಿ, ಲಿಂಗಪ್ಪ ಹತ್ತಿಮನಿ, ಗೋಪಾಲ್ ತಳಗೇರಿ, ಶಾಂತರಾಜು ಮೋಟ್ನಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.        


 ಅಂಗವಿಕಲರಿಗೆ 31 ಯಂತ್ರ ಚಾಲಿತ ತ್ರಿಚಕ್ರ ವಾಹನ ವಿತರಣೆ

  

ಯಾದಗಿರಿ,ಮಾ.26 (ಕ.ವಾ);-ಜಿಲ್ಲಾ ಪಂಚಾಯತ್ ಮೀಸಲಿಟ್ಟ 36 ಲಕ್ಷ ರೂ ಅನುದಾನದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ ಅಂಗವಿಕಲರಿಗೆ 31 ಯಂತ್ರ ಚಾಲಿತ ತ್ರಿಚಕ್ರ ವಾಹನಗಳನ್ನು ಜಿ.ಪಂ ಅಧ್ಯಕ್ಷ ಬಸನಗೌಡ ಯಡಿಯಾಪೂರ ಅವರು ಶುಕ್ರವಾರ ವಿತರಿಸಿದರು. ಈ ಸಂದರ್ಭದಲ್ಲಿ ಜಿ.ಪಂ  ಉಪಾಧ್ಯಕ್ಷೆ ಗಿರಿಜಮ್ಮಗೌಡ ರೋಟ್ನಡಗಿ, ಸದಸ್ಯರಾದ ರಾಜಶೇಖರಗೌಡ ಪಾಟೀಲ ವಜ್ಜಲ್, ಚಂದ್ರಕಲಾ ಹೊಸಮನಿ,ಶಶಿಕಲಾ ಪಾಟೀಲ್, ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಭಾಕರ ಕವಿತಾಳ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸೇರಿದಂತೆ ಇನ್ನಿತರರಿದ್ದರು. (ಚಿತ್ರ ಶೀರ್ಷಿಕೆ)


ಟೆಲಿವಿಷನ್ ಜರ್ನಲಿಸಂ ಹಾಗೂ ಕ್ಯಾಮರಾಮೆನ್ ತರಬೇತಿಗೆ ಅರ್ಜಿ ಆಹ್ವಾನ   

                                                        

ಯಾದಗಿರಿ,ಮಾ.26 (ಕ.ವಾ);- ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ವಿಶೇಷ ಕೇಂದ್ರೀಯ ನೆರವಿನಿಂದ ಕೌಶಲ್ಯ ಟೆಲಿವಿಷನ್ ಜರ್ನಲಿಸಂ ಹಾಗೂ ಕ್ಯಾಮರಾಮೆನ್ ತರಬೇತಿ ನೀಡಲು ಜಿಲ್ಲೆಯ ಪರಿಶಿಷ್ಟ ಜಾತಿಯ ವಿದ್ಯಾವಂತ ನಿರುದ್ಯೋಗಿ ಯುವತಿ-ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಮೆ. ಅನನ್ಯ ಕ್ರಿಯೇಷನ್ ಮಂಡ್ಯ ಜಿಲ್ಲೆಯಲ್ಲಿ 3 ತಿಂಗಳ ಅವಧಿಗೆ ತರಬೇತಿ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ  ದಾಖಲೆಗಳೊಂದಿಗೆ ಕಲಬುರಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಇದೇ ಮಾರ್ಚ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಯಾದಗಿರಿ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

 


  





ಗುರುವಾರ, ಮಾರ್ಚ್ 25, 2021

  ನಾಳೆ ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಣೆ

ಯಾದಗಿರಿ ಮಾರ್ಚ್25(ಕ.ವಾ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಯೋಜನೆಯ ಜಿಲ್ಲಾ ಪಂಚಾಯತ ಮೀಸಲಿಟ್ಟ ಅನುದಾನದಲ್ಲಿ ಅಂಗವಿಕಲರಿಗೆ 31 ಯಂತ್ರಚಾಲಿತ ತ್ರಿಚಕ್ರ ವಾಹನಗಳ ವಿತರಣಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ ಅಧ್ಯಕ್ಷ ಬಸನಗೌಡ ಪಾಟೀಲ್ ಯಡಿಯಾಪೂರ ಅವರ ಅಧ್ಯಕ್ಷತೆಯಲ್ಲಿ ಇದೇ ಮಾರ್ಚ್ 26ರ ಬೆಳಿಗ್ಗೆ 11 ಗಂಟೆಗೆ ಯಾದಗಿರಿ ಮಿನಿ ವಿಧಾನಸೌಧ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು  ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  

   

 ಹೋಳಿ ಹಬ್ಬದಲ್ಲಿ ಸಂಭ್ರಮಾಚರಣೆ ಬೇಡ: ಸಚಿವ ಪ್ರಭು ಚವ್ಹಾಣ್ 

ಯಾದಗಿರಿ.ಮಾ.24.(ಕ.ವಾ)-: ಕೊರೊನಾ ಎರಡನೇ ಅಲೆಯಿಂದ ಜನ ಆತಂಕಕ್ಕೆ ಒಳಗಾಗಿದ್ದು, ಈ ವರ್ಷ ಹೋಳಿ ಹಬ್ಬದಲ್ಲಿ ಸಂಭ್ರಮಾಚರಣೆ ಬೇಡ ಎಂದು ಪಶು ಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಹೇಳಿದ್ದಾರೆ.


ಹೋಳಿ ಹಬ್ಬದಲ್ಲಿ ಗುಂಪು ಸೇರಿ ಅತಿ ಹೆಚ್ಚು ಶಬ್ಧ ಮಾಡುವ ದ್ವನಿ ವರ್ಧಕಗಳನ್ನು ಬಳಸಿ ಸಂಭ್ರಮಿಸುವುದು ಬೇಡ. ಆರೋಗ್ಯ ಇದ್ದರೆ ಬದುಕಿನ ಬಣ್ಣ ಮತ್ತಷ್ಟು ಚೆಂದ. ನೂರಾರು ಜನ ಸೇರಿ ಸಂಭ್ರಮಾಚರಣೆ ಮಾಡದಿರಲು ಅವರು ಕೋರಿದ್ದಾರೆ. 

ಹೋಳಿ ದಹನಕ್ಕೆ ಗುಂಪು ಗುಂಪಾಗಿ ಸೇರಿ ಕೊರೊನಾ ಹಬ್ಬಲು ಅವಕಾಶ ನೀಡಬೇಡಿ. ಸಾಧ್ಯವಾದಷ್ಟು ದಟ್ಟಣೆ ಪ್ರದೇಶದಿಂದ ದೂರವಿದ್ದು, ಇತಿಮಿತಿಯಲ್ಲಿ ಬಣ್ಣದ ಹಬ್ಬವನ್ನು ಆಚರಿಸಿ ಎಂದು ಸಚಿವರು ಸಲಹೆ ನೀಡಿದ್ದಾರೆ. 


ಯಾದಗಿರಿ ಜಿಲ್ಲೆಯ ಜನತೆಗೆ ಕಳಕಳಿಯ ವಿನಂತಿ ಮಾಡಿದ ಸಚಿವರು, ಗುಂಪು ಸೇರುವುದು, ಮಾಸ್ಕ್ ಧರಿಸದೇ ಹೊರಗಡೆ ಓಡಾಡುವುದು ಬೇಡ ಎಂದಿದ್ದು, ನಿಮ್ಮ ಜೀವ ನಿಮ್ಮ ಕುಟುಂಬಕ್ಕೆ ಬಹುಮುಖ್ಯ. ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ ಕೊರೊನಾ ಹಿಮ್ಮೆಟ್ಟಿಸುವಲ್ಲಿ ಜಿಲ್ಲಾಡಳಿತಕ್ಕೆ ಸಹಕರಿಸಿ ಎಂದು ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.


ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕೆ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುತ್ತಿದೆ. ಆದರೆ ಸಾರ್ವಜನಿಕರು ಜವಾಬ್ದಾರಿಯಿಂದ ವರ್ತಿಸದಿದ್ದರೆ ಕೊರೊನಾ ಉಲ್ಬಣ ಆಗುವುದರಲ್ಲಿ ಯಾವ ಸಂಶಯವೂ ಇಲ್ಲ ಎಂದು ಸಚಿವರು ಸಾರ್ವಜನಿಕರನ್ನು ಎಚ್ಚರಿಸಿದ್ದಾರೆ. ಕಳೆದ ವರ್ಷ ಇದೇ ಸಮಯದಲ್ಲಿ ಏರುಗತಿಯಲ್ಲಿದ್ದ ಕೊರೊನಾ ನಿಯಂತ್ರಣ ತಪ್ಪಿ ಜನಜೀವನ ಅಸ್ತವ್ಯಸ್ತ ಆದ ನೆನಪು ಮಾಸುವ ಮುನ್ನವೇ ಮತ್ತೆ ಎರಡನೇ ಅಲೆ ಶರವೇಗದಲ್ಲಿ ಹಬ್ಬುತ್ತಿದೆ.


 ಮನವಿ : ಯಾದಗಿರಿ ಜಿಲ್ಲೆಯನ್ನು ಕೊರೊನಾ ಮುಕ್ತ ಮಾಡಲು ಎಲ್ಲರೂ ಪಣ ತೊಡೋಣ. ಸರ್ಕಾರ ಜಾರಿಗೊಳಿಸುವ ಎಲ್ಲಾ ನಿಯಮಗಳನ್ನು ಪಾಲಿಸಿ ಕೊರೊನಾ ಹರಡುವುದನ್ನು ತಡೆಗಟ್ಟೋಣ. ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಇಲ್ಲದೇ ಓಡಾಡಬೇಡಿ. ಮಾಸ್ಕ್ ಧರಿಸುವ ಬಗ್ಗೆ ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಲು ಸಾರ್ವಜನಿಕರಲ್ಲಿ ಸಚಿವರು ಮನವಿ ಮಾಡಿದ್ದಾರೆ 







 


 ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸಿ

                                           ;ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.                                                           

ಯಾದಗಿರಿ,ಮಾ.25 (ಕ.ವಾ);- ಕೌಶಲ್ಯ ಆಧಾರಿತ ತರಬೇತಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಯಾದಗಿರಿ ಜಿಲ್ಲೆಯಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಸ್ಥಳೀಯ ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಹೇಳಿದರು.


ನಗರದ ಜಿಲ್ಲಾಧಿಕಾರಿ ಕಚೇಯ ಸಭಾಂಗಣದಲ್ಲಿ ಜಿಲ್ಲಾಡಳಿ, ಯೋಜನೆ ಕಾರ್ಯಕ್ರಮ ಸಂಯೋಜನೆ & ಸಾಂಖ್ಯಿಕ ಇಲಾಖೆ, ಯು.ಎನ್.ಡಿ.ಪಿ ಬೆಂಗಳೂರು, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಕಾರ್ಮಿಕ ಇಲಾಖೆ, ಹಾಗೂ ಜಿಲ್ಲಾ ಉದ್ಯೋಗ ಮತ್ತು ತರಬೇತಿ ಇಲಾಖೆಗಳ ಸಹಯೋಗದಲ್ಲಿ ಎನ್.ಎ.ಪಿ.ಎಸ್ ಯೋಜನೆಯಡಿ ಶಿಶಿಕ್ಷÄ (ಂಠಿಠಿಡಿeಟಿಣiಛಿeshiಠಿ) ತರಬೇತಿ ಕುರಿತು ಒಂದು ದಿನದ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 


ಜಿಲ್ಲೆಯಲ್ಲಿ ಕೈಗಾರಿಕೆ ಪ್ರಧಾನವಾಗಿದೆ, ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಸಬೇಕಾದರೆ ವೃತ್ತಿ ಕೌಶಲಕ್ಕೆ ಪ್ರಥಮ ಆದ್ಯತೆ ನೀಡಬೇಕು. ಅಲ್ಲದೆ ಕೈಗಾರಿಕಾ ಉದ್ಯಮ ಸ್ಥಾಪನೆಯಿಂದ ದೇಶದ ಆರ್ಥಿಕತೆ ಹೆಚ್ಚಳಕ್ಕೆ ಸಹಕಾರಿಯಾಗಲಿದ್ದು, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಹತೆಗೆ ತಕ್ಕಂತೆ ಕೌಶಲ್ಯ ತರಬೇತಿ ಪಡೆಯಬೇಕು ಎಂದರು.


ಇAದಿನ ದಿನಮಾನಗಳಲ್ಲಿ ಉದ್ಯೋಗಾವಕಾಶದ ಕೊರತೆ ಇಲ್ಲ. ಬದಲಾಗಿ ವಿದ್ಯಾರ್ಥಿಗಳಲ್ಲಿ ಕೌಶಲ್ಯ ಹಾಗೂ ಉದ್ದಿಮೆಗಳಿಗೆ ಪೂರಕವಾದ ವಿದ್ಯಾಭ್ಯಾಸದ ಕೊರತೆ ಕಾಡುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಕೌಶಲ್ಯವನ್ನು ವೃದ್ಧಿಸಿಕೊಳ್ಳಲು ಅಗತ್ಯ ತರಬೇತಿ ಪಡೆದುಕೊಂಡರೆ ಉದ್ಯೋಗ ಸಿಗುತ್ತದೆ ಎಂದು ಹೇಳಿದರು.


ಜಿಲ್ಲೆಗೆ 80 ಕ್ಕೂ ಹೆಚ್ಚು ಕಂಪನಿಯ ವಿವಿಧ ಉದ್ಯೋಗಿಗಳು ಭಾಗವಹಿಸುತ್ತಿದ್ದು, ಮುಂದಿನ ದಿನಗಳಲ್ಲಿ 3000 ಕ್ಕೂ ಹೆಚ್ಚು ಯುವ ಜನರಿಗೆ ಅಪ್ರಂಟಿಸ್‌ಶಿಪ್ ತರಬೇತಿ ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಸಿದರು.


ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ ವಿದ್ಯಾರ್ಥಿ ಸಮೂಹವು ಶಿಕ್ಷಣದ ಜೊತೆಜೊತೆಗೆ ಕೌಶಲ್ಯ ತರಬೇತಿ ಪಡೆದು ತಮ್ಮ ಉನ್ನತ ಮಟ್ಟದ ಗುರಿಯನ್ನು ಸಾಧಿಸಬೇಕೆಂದು ಸಲಹೆ ನೀಡಿದರು.

ಕೈಗಾರಿಕೋದ್ಯಮಗಳಿಗೆ ಬ್ಯಾಂಕ್‌ಗಳು ಸಾಲ ಸೌಲಭ್ಯ ನೀಡುತ್ತಿವೆ. ಅಪ್ರಂಟಿಶಿಪ್ ಕಾಯ್ದೆ-1961ರ ಪ್ರಕಾರ 4 ಮಂದಿಗಿತಲೂ ಹೆಚ್ಚು ಉದ್ಯೋಗಿಗಳಿರುವ ಕಾರ್ಖಾನೆಗಳು ಅಪ್ರೆಂಟಿಸ್ ತರಬೇತಿ ನೀಡಲು ಅರ್ಹತೆ ಪಡೆದಿವೆ, 8 ಮಂದಿಗಿAತಲೂ ಹೆಚ್ಚು ಕೆಲಸ ಮಾಡುವ ಕೈಗಾರಿಕಾ ಸಂಸ್ಥೆಗಳು ಕಡ್ಡಾಯವಾಗಿ ಅಪ್ರಂಟಿಸ್ ತರಬೇತಿ ನೀಡಬೇಕಿದೆ ಎಂದು ಕಾಯ್ದೆಯಲ್ಲಿ ತಿಳಿಸಲಾಗಿದೆ. ಅದರಂತೆ ಜಿಲ್ಲೆಯ ಕೈಗಾರಿಕಾ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಅಪ್ರೇಂಟಿಸ್ ತರಬೇತಿ ನೀಡಬೇಕು. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಜಿಲ್ಲೆಯಲ್ಲಿ ವೃತ್ತಿ ಕೌಶಲ್ಯ ತರಬೇತಿಗೆ ಹೆಚ್ಚಿನ ಒತ್ತು ನೀಡುವಂತೆ ಸೂಚಿಸಿದ್ದಾರೆ ಎಂದರು.


ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಕೈಗಾರಿಕಾ ತರಬೇತಿ ಜಂಟಿ ನಿರ್ದೇಶಕ ರವೀಂದ್ರನಾಥ ಬಾಳಿ, ಕಲಬುರಗಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಸಹಾಯಕ ನಿರ್ದೇಶಕ ಶರಣಪ್ಪ ಸಡ್ಡು, ಎಸ್.ಡಿ.ಜಿ.ಸಿ.ಸಿ, ಯು.ಎನ್.ಡಿ.ಪಿ ಯೋಜನಾ ಮುಖ್ಯಸ್ಥ ಡಾ.ಮುಕುಂದರಾಜ, ರೈಸ್ ಮಿಲ್ ಅಸೋಸಿಯೇಶನ್ ಜಿಲ್ಲಾ ಗೌರವಧ್ಯಕ್ಷರಾದ ಮೌಲಾಲಿ ಅನಪೂರ, ಕಲಿಕಾ ಟಾಟಾ ಟ್ರಸ್ಟ್ ಸಹಾಯಕ ಕಾರ್ಯಕ್ರಮ ಅಧಿಕಾರಿ ಸಾಯಿಬಾಬಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಎನ್.ಮ್ಯಾಗೇರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ವೇತಾ, ಜಿಲ್ಲಾ ಕೌಶಲ್ಯ ಮಿಷನ್ ಅಭಿಯಾನ ವ್ಯವಸ್ಥಾಪಕ ವಿಜಯ ಕುಮಾರ್ ಪಾಟೀಲ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.      


  

 




ಬುಧವಾರ, ಮಾರ್ಚ್ 24, 2021

  

                                ವಿಶ್ವ ಕ್ಷಯರೋಗ ಮುಕ್ತ ದಿನಾಚರಣೆಗೆ ಜಿಲ್ಲಾಧಿಕಾರಿ ಚಾಲನೆ

                                ಸೂಕ್ತ ಚಿಕಿತ್ಸೆ ಪಡೆದು, ಕಾಯಿಲೆ ದೂರ ಮಾಡಿ



                                                                                ;ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ.ಮಾ.24 (ಕ.ವಾ):- ಸಕಾಲದಲ್ಲಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದರೆ ಯಾವುದೇ ಕಾಯಿಲೆ ದೂರಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಹೇಳಿದರು. 


ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಕ್ಷಯರೋಗ ಮುಕ್ತ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 


ಎದೆ ನೋವು, ತೂಕ ಕಡಿಮೆಯಾಗುವುದು, ಕಫದಲ್ಲಿ ರಕ್ತ ಬೀಳುವುದು, ಹಲವಾರು ದಿನಗಳಿಂದ ಕೆಮ್ಮು, ಜ್ವರದ ಬಾಧೆಯಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ನಿಯಮಿತ ಅವಧಿಯವರೆಗೆ ಚಿಕಿತ್ಸೆ ಪಡೆದರೆ ಕ್ಷಯರೋಗ ಸಂಪೂರ್ಣ ಗುಣಪಡಿಸಬಹುದು ಎಂದರು. 


ಕ್ಷಯರೋಗ ಮುಕ್ತ ಮಾಡಲು ಆರೋಗ್ಯ ಇಲಾಖೆಯ ಅಧಿಕಾರಿಗಳು ಶ್ರಮಿಸುತ್ತಿರುವ ಕಾರಣ ಜಿಲ್ಲೆ 27 ನೇ ಸ್ಥಾನ ದಿಂದ 19 ನೇ ಸ್ಥಾನಕ್ಕೆ ಬರಲು ಕಾರಣವಾಗಿದೆ. ಅಲ್ಲದೆ  ಕೊರೊನಾ ಲಸಿಕೆ ನೀಡಿಕೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಶ್ರಮ ಮೆಚ್ಚುವಂತದ್ದು ಎಂದು ಪ್ರಶಂಸೆ ವ್ಯಕ್ತಪಡಿಸಿದರು.


ದೇಶದಲ್ಲಿ ಕ್ಷಯರೋಗ ನಿರ್ಮೂಲನೆ ಮಾಡಲು ಸರ್ಕಾರ ಈಗಾಗಲೇ ಕ್ರಮ ತೆಗೆದುಕೊಂಡಿದ್ದು, ರೋಗ ನಿರ್ಮೂಲನೆಗಾಗಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ರೋಗಿಗಳಲ್ಲಿ ತಾರತಮ್ಯ ತೋರದೆ ಕೈ ಜೋಡಿಸಿ ಕೆಲಸ ಮಾಡುವುದು ಅವಶಕ್ಯವಾಗಿದೆ ಎಂದು ತಿಳಿಸಿದರು.


ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ ಕ್ಷಯರೋಗ ನಿರ್ಮೂಲನೆಗೆ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಇತರೆ ಸ್ಥಳಗಳಲ್ಲಿ ಜಾಗೃತಿ ಅವಶ್ಯಕತೆ ಇದ್ದು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರು ಕ್ಷಯರೋಗ ನಿರ್ಮೂಲನೆ ಶ್ರಮಿಸಬೇಕೆಂದು ಹೇಳಿದರು.


ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕ್ಷಯರೋಗ ಬಗ್ಗೆ ಅತ್ಯುತ್ತಮ ಸೇವೆ ಸಲ್ಲಿಸಿದ ಆರೋಗ್ಯ ಸಿಬ್ಬಂದಿಗಳಿಗೆ, ಕಿರಿಯ ಆರೋಗ್ಯ ಸಹಾಯಕರಿಗೆ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಕ್ಷಯರೋಗ ಕುರಿತು ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಲಾಯಿತು. 

ಅರಿವು ಜಾಥಾ:  ಇದ್ದಕ್ಕೂ ಮುನ್ನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆವರಣದಲ್ಲಿ ಜಾಗೃತಿ ಜಾಥಾಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಚಾಲನೆ ನೀಡಿದರು.

ಕ್ಷಯರೋಗ ಗುಣಪಡಿಸಬಹುದಾದ ಕಾಯಿಲೆ, ಧೂಮಪಾನದಿಂದ ಆರೋಗ್ಯಕ್ಕೆ ಹಾನಿಕಾರಕ, ಕೆಮ್ಮುವಾಗ ಬಾಯಿಗೆ ಕರವಸ್ತ್ರ ಅಡ್ಡವಿಟ್ಟುಕೊಳ್ಳಬೇಕು, ಕ್ಷಯ ರೋಗ ಪರೀಕ್ಷೆ ಮತ್ತು ಚಿಕಿತ್ಸೆ ಉಚಿತ, ಇವೇ ಮೊದಲಾದ ಭಿತ್ತಿಫಲಕ ಗಳನ್ನು ಹಿಡಿದು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತರು ಮೆರವಣಿಗೆಯಲ್ಲಿ ಸಾಗಿದರು. ಜಾಥಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಿಂದ ನಗರಸಭೆ ರಸ್ತೆಯ ಮೂಲಕ ಗಾಂಧಿ ವೃತ್ತದವರೆಗೂ ತಲುಪಿತು.


ಇದೇ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶಟ್ಟಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಲಕ್ಷ್ಮೀಕಾಂತ್, ಜಿಲ್ಲಾ ಕುಷ್ಠರೋಗ ನಿರ್ಮೂನಾಧಿಕಾರಿ ಡಾ.ಭಗವಂತ ಅನ್ವರ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ನಾಗರಾಜ ಬಿ.ಪಾಟೀಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮುಬಷೀರ ಅಹಮ್ಮದ್ ಸಾಜೀದ್, ಐ.ಎಮ್.ಎ ಅಧ್ಯಕ್ಷ ಸಿ.ಎಂ ಪಾಟೀಲ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.  

 ವಿಧಾನಸಭೆ ಉಪಚುನಾವಣೆ: ಮಾದರಿ ನೀತಿ ಸಂಹಿತೆ 

ಉಲ್ಲಂಘನೆಯಾಗದAತೆ ನೋಡಿಕೊಳ್ಳಲು ನೋಡಲ್ ಅಧಿಕಾರಿ ನೇಮಕ

ಯಾದಗಿರಿ.ಮಾ.24.(ಕ.ವಾ)-ರಾಯಚೂರು ಜಿಲ್ಲೆಯ ಮಸ್ಕಿ-59 (ಎಸ್.ಟಿ.) ಹಾಗೂ ಬೀದರ ಜಿಲ್ಲೆಯ ಬಸವಕಲ್ಯಾಣ-47 ವಿಧಾನಸಭೆಯ ಉಪ ಚುನಾವಣೆ ಸಂದರ್ಭದಲ್ಲಿ (ವಾಣಿಜ್ಯ ತೆರಿಗೆ ಇಲಾಖೆಗೆ ಸಂಬAಧಿಸಿದAತೆ) ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ನೋಡಿಕೊಳ್ಳಲು ಕಲಬುರಗಿ ಪೂರ್ವ ವಲಯ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ (ಜಾರಿ) ಕಚೇರಿಯಲ್ಲಿ ನಿಯಂತ್ರಣ ಕೊಠಡಿ ಸ್ಥಾಪಿಸಲಾಗಿದೆ ಎಂದು ಕಲಬುರಗಿ ಪೂರ್ವ ವಲಯ (ಜಾರಿ) ವಾಣಿಜ್ಯ ತೆರಿಗೆಗಳ ಜಂಟಿ ಆಯುಕ್ತರು ತಿಳಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಗೆ ಸಂಬAಧಿಸಿದAತೆ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಬೀದರ-ರಾಯಚೂರ ಹಾಗೂ ನೆರೆಯ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ ಇವರ ಕಚೇರಿಯ ಸಮನ್ವಯದೊಂದಿಗೆ ಮಾಹಿತಿ ವಿನಿಮಯ ಹಾಗೂ ಮಾಹಿತಿ ಸಲ್ಲಿಕೆಗೆ ಸಂಬAಧಿಸಿದAತೆ ಮೇಲ್ಕಂಡ ಕಚೇರಿಯಲ್ಲಿ ನಿಯಂತ್ರಣಾ ಕೊಠಡಿ ಸ್ಥಾಪಿಸಲಾಗಿದೆ. 

ಕಲಬುರಗಿ ಪೂರ್ವ ವಲಯ ವಾಣಿಜ್ಯ ತೆರಿಗೆಗಳ ಉಪ ಆಯುಕ್ತ (ಜಾರಿ) ಲಕ್ಷಾಪತಿ ಎನ್.ನಾಯ್ಕ್ ಇವರನ್ನು (ಮೊಬೈಲ್ ಸಂಖ್ಯೆ 9448811330) ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಸರಕು ಸಾಗಾಣಿಕೆಗೆ ಮಾಡುವ ಕುರಿತು ಮಾಹಿತಿಯಿದ್ದಲ್ಲಿ ಸಾರ್ವಜನಿಕರು ನೋಡಲ್ ಅಧಿಕಾರಿಗಳು ಹಾಗೂ ನಿಯಂತ್ರಣಾ ಕೊಠಡಿಗೆ ಸಂಪರ್ಕಿಸಿ ಮಾಹಿತಿ ನೀಡಬಹುದಾಗಿದೆ. 

ನಿಯಂತ್ರಣಾ ಕೊಠಡಿ ವಿವರ ಇಂತಿದೆ: ಕಲಬುರಗಿ ಪ.ವ್ಯ. (ಜಾರಿ) ವಾಣಿಜ್ಯ ತೆರಿಗೆ ಅಧಿಕಾರಿ ಮಹೇಶ್ವರ ಸೋನಾರಕರ್ (ಮೊಬೈಲ್ ಸಂಖ್ಯೆ 9482150039) ಹಾಗೂ ವಾಣಿಜ್ಯ ತೆರಿಗೆ ಪರಿವೀಕ್ಷಕ ಅಶೋಕ ಕುಮಾರ ಅಡಿಕಿಕರ್ (ಮೊಬೈಲ್ ಸಂಖ್ಯೆ: 9448890946) ಇರುತ್ತದೆ. 

ಮಂಗಳವಾರ, ಮಾರ್ಚ್ 23, 2021

 ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ದಿನ ವಿಸ್ತರಣೆ

ಯಾದಗಿರಿ, ಮಾ.23 (ಕ.ವಾ):-  2020-21ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ರಾಜ್ಯ ಸರಕಾರದ ಅಧಿಕಾರಿ/ನೌಕರರರಿಂದ  ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಏಪ್ರಿಲ್ 21 ರಂದು ನಾಗರೀಕ ಸೇವಾ ದಿನವನ್ನು ರಾಜ್ಯ ಸರಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲು ನಿರ್ಧರಿಸಿರುವದರಿಂದ ಅದೇ ದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈ ಹಿನ್ನೆಲೆಯಲ್ಲಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಇದೀಗ ಮಾರ್ಚ್ 31ರ ವರೆಗೆ  ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಅವರು ತಿಳಿಸಿದ್ದಾರೆ.


ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ 

ಯಾದಗಿರಿ, ಮಾ.23 (ಕ.ವಾ):-  2020-21ನೇ ಸಾಲಿಗಾಗಿ ಯಾದಗಿರಿ ಜಿಲ್ಲೆಯ ರೈತರ ಮಕ್ಕಳಿಗೆ ಪುರುಷ ಅಭ್ಯರ್ಥಿಗಳಿಗೆ ಚಿಂಚೋಳಿ ತಾಲೂಕಿನ ಚಂದ್ರಪಳ್ಳಿ ತರಬೇತಿ ಕೇಂದ್ರದಲ್ಲಿ  ಮತ್ತು  ಮಹಿಳಾ ಅಭ್ಯರ್ಥಿಗಳಿಗೆ ಕೊಪ್ಪಳ ಜಿಲ್ಲೆಯ ಮುನಿರಬಾದ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.


ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಯ ತಂದೆ, ತಾಯಿ, ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಹಾಗೂ  ಸ್ವಂತ ಸಾಗುವಳಿ   ಮಾಡುತ್ತಿರಬೇಕು. ಅಭ್ಯರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ ಪಾಸಾಗಿರಬೇಕು,  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ರಿಂದ 33 ವರ್ಷ, ಇತರರಿಗೆ 18 ರಿಂದ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ಅರ್ಜಿಯನ್ನು ಇಲಾಖೆಯ ವೆಬ್‌ಸೈಟ್ hಣಣಠಿs://hoಡಿಣiಛಿuಟಣuಡಿeಜiಡಿ.ಞಚಿಡಿಟಿಚಿಣಚಿಞಚಿ.gov.iಟಿ ನ ಮೂಲಕ ಅರ್ಜಿ ನಮೂನೆಯನ್ನು ಪಡೆದು ಅಥವಾ ಯಾದಗಿರಿಯ ಎಲ್ಲಾ ತಾಲೂಕಿನ ತೋಟಗಾರಿಕೆ ಕಚೇರಿಯಲ್ಲಿ ಪಡೆದುಕೊಂಡು ಮಾರ್ಚ್ 24 ರಿಂದ ಏಪ್ರಿಲ್ 17 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. 


ಹೆಚ್ಚಿನ ಮಾಹಿತಿಗಾಗಿ ಇಲಾಖೆ ದೂ.08473-253747 ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





ಏಪ್ರಿಲ್ 1 ರಿಂದ ಪರಿಷ್ಕೃತ ಆಸ್ತಿ ತೆರಿಗೆ ಜಾರಿ

ಯಾದಗಿರಿ, ಮಾ.23 (ಕ.ವಾ):-  ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳಿಗೆ 2021-22ನೇ ಸಾಲಿಗೆ ಪರಿಷ್ಕೃತ ಆಸ್ತಿ ತೆರಿಗೆಯನ್ನ ಏಪ್ರಿಲ್ 1 ರಿಂದ ಜಾರಿಗೆ  ಬರುತ್ತದೆ ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ವಾಸ ಹಾಗೂ ವಾಣಿಜ್ಯೇತರ ಉಪಯೋಗದ ಕಟ್ಟಡಗಳಿಗೆ ಶೇಕಡ 0.8 ಪ್ರತಿಶತ, ವಾಣಿಜ್ಯ ಉಪಯೋಗದ ಕಟ್ಟಡಗಳಿಗೆ ಶೇಕಡ 2.5 ಪ್ರತಿಶತ ಹಾಗೂ ಖಾಲಿ ನಿವೇಶನಗಳಿಗೆ ಶೇಕಡ 0.2 ಪ್ರತಿಶತ ಆಸ್ತಿ ತೆರಿಗೆ ಇರಲಿದೆ ಎಂದು ಅವರು ತಿಳಿಸಿದ್ದಾರೆ.



 ರಾಷ್ಟಿçÃಯ ಪೋಷಣ್ ಪಕ್ವಾಡ ಯೋಜನೆಯ ಸವಲತ್ತು ಸದುಪಯೋಗಪಡಿಸಿಕೊಳ್ಳಿರಿ

: ಜಿ.ಪಂ. ಸಿಇಓ ಶಿಲ್ಪಾ ಶರ್ಮಾ

ಯಾದಗಿರಿ ಮಾ,23 (ಕ:ವಾ):- ಮಹಿಳೆಯರು ಮತ್ತು ಮಕ್ಕಳು ರಾಷ್ಟಿçÃಯ ಪೋಷಣ್ ಪಕ್ವಾಡ ಯೋಜನೆಯಡಿ ಸಿಗುವ ಸವಲತ್ತುಗಳನ್ನು  ಸದುಪಯೋಗ ಪಡೆದುಕೊಳ್ಳಬೇಕು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯಾನಿರ್ವಾಹಕ ಅಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಕರೆ ನೀಡಿದರು.



ನಗರದ ಜಿಲ್ಲಾ ಬಾಲಭವನ ಸೊಸೈಟಿಯಲ್ಲಿ ಇಂದು ರಾಷ್ಟಿçÃಯ ಪೋಷಣ್ ಅಭಿಯಾನ ಯೋಜನೆಯಡಿ 2020-21 ನೇ ಸಾಲಿನ ಜಿಲ್ಲಾ ಮಟ್ಟದ ಪೋಷಣ್ ಪಕ್ವಾಡ ಯೋಜನಾ ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಹಿಳೆ ಮತ್ತು ಮಕ್ಕಳಿಗೆ ಪೌಷ್ಠ್ಠಿಕಾಂಶ ಆಹಾರ ಮತ್ತು ಹಸಿರು ತರಕಾರಿ ಸೇವನೆ ಹಾಗೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಅನಾರೋಗ್ಯಗಳಿಗೆ ಈಡುಮಾಡದೆ, ರಕ್ತಹೀನತೆಯನ್ನು ತಡೆಗಟ್ಟಬೇಕು. ಗರ್ಭಿಣಿಯರಿಗೆ ಮಾತ್ರೆಗಳನ್ನು ಕೊಡಬೇಕು ಎಂದು ಅವರು ಹೇಳಿದರು. 

ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಡಾ. ಭಗವಂತ ಅನ್ವರ್ ಅವರು ಮಾತನಾಡಿ, ಕಬ್ಬಿಣ ಅಂಶವಿರುವ ಮತ್ತು ಪ್ರೋಟಿನ್, ವಿಟಾಮಿನ್ ಸಹಿತವಿರುವ ಪೌಷ್ಠಿಕ ಆಹಾರವನ್ನು ಸೇವಿಸಬೇಕು. ಹಸಿರು ತರಕಾರಿ ಸೇವಿಸುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಸ್ವಸ್ಥವಾಗಿರುತ್ತದೆ ಎಂದು ಅವರು ಹೇಳಿದರು.

ಜನನಿ ಶಿಶು ಸುರಕ್ಷಾ ಕಾರ್ಯಕ್ರಮದಡಿ ಉಚಿತ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು, ನೈರ್ಮಲ್ಯತೆಯನ್ನು ಕಾಪಾಡಿ ಆರೋಗ್ಯದಿಂದ ಇರಬೇಕು ಎಂದು ಸಲಹೆ ನೀಡಿದರು. 

ಆಯುಷ್ ಜಿಲ್ಲಾಧಿಕಾರಿಯಾದ ಡಾ: ವಂದನಾ ಗಾಳಿ, ಮಹಿಳಾ ಮತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಪ್ರಭಾಕರ್ ಕವಿತಾಳ, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ರಾಧ ಜಿ ಮಣ್ಣೂರ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ ಜಿಲ್ಲಾ ಸಂಯೋಜಕರಾದ ಯಲ್ಲಪ್ಪ ಕೆ., ವೈದ್ಯಾಧಿಕಾರಿಗಳಾದ ವಿನುತಾ, ಯೋಗಾ ಗುರೂಜಿ ಅನಿಲ್ ಗುರೂಜಿ ಮತ್ತಿತರರು ಕಾರ್ಯಾಕ್ರಮದಲ್ಲಿ ಉಪಸ್ಥಿತರಿದ್ದರು. 






 ಏ.17 ರಂದು ದೇವತ್ಕಲ್‌ನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ: ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ.ಆರ್         
      

ಯಾದಗಿರಿ.ಮಾ.23 (ಕ.ವಾ):- ಜನರ ಮನೆ ಬಾಗಿಲಿಗೆ ಜಿಲ್ಲಾಡಳಿತ ಎಂಬ ಘೋಷ ವಾಕ್ಯದಡಿ ಆಯೋಜಿಸಿರುವ “ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ” ಕಾರ್ಯಕ್ರಮದಲ್ಲಿ ಏಪ್ರಿಲ್ 17 ರಂದು ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದರು. 


ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದ ಗ್ರಾಮ ಪಂಚಾಯತಿ ಕಚೇರಿಯ ಸಭಾಂಗಣದಲ್ಲಿ ಕಂದಾಯ ಸಚಿವರ ಗ್ರಾಮವಾಸ್ತವ್ಯ ಕಾರ್ಯಕ್ರಮ ಕುರಿತು ಇಂದು ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ,  ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. 


ಏಪ್ರಿಲ್ 17 ರ ರಂದು ದೇವತ್ಕಲ್ ಗ್ರಾಮದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಗ್ರಾಮ ವಾಸ್ತವ್ಯ ಮಾಡಲಿದ್ದು, ಕೂಡಲೇ ದೇವತ್ಕಲ್ ಗ್ರಾಮದ  ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಬೇಕೆಂದು ಅವರು ಜಿಲ್ಲಾ ಮಟ್ಟದ ಅಧಿಕಾರಿಗಳು ನಿರ್ದೇಶನ ನೀಡಿದರು. 


ಅಂದು ದೇವತ್ಕಲ್ ಗ್ರಾಮ ವಾಸ್ತವ್ಯದಲ್ಲಿ ವಿವಿಧ ಇಲಾಖೆಗಳು ತಮ್ಮ-ತಮ್ಮ ಯೋಜನೆಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಮಳಿಗೆಗಳನ್ನು ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. 

ಗ್ರಾಮ ವಾಸ್ತವ್ಯದಲ್ಲಿನ ಕಾರ್ಯಗಳು: ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರರು ಭೇಟಿ ನೀಡಿ, ಗ್ರಾಮದ ಪಹಣಿಗಳಲ್ಲಿರುವ ಲೋಪದೋಷಗಳನ್ನು ಸರಿಪಡಿಸಲು ಕ್ರಮ ಕೈಗೊಳ್ಳುವುದು. ಗ್ರಾಮದಲ್ಲಿ ಪೌತಿ ಹೊಂದಿದ ಖಾತೆದಾರರ ಹೆಸರನ್ನು ಪಹಣಿಯ ಕಾಲಂ 9 ರಿಂದ ತೆಗೆದು ನೈಜ ವಾರಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮವಹಿಸುವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಪರಿಶೀಲಿಸುವುದು ಮತ್ತು ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು. ಗ್ರಾಮದಲ್ಲಿ ಸ್ಮಶಾನ ಲಭ್ಯತೆಯ ಬಗ್ಗೆ ಪರಿಶೀಲಿಸುವುದು ಹಾಗೂ ಸ್ಮಶಾನವಿಲ್ಲದಿದ್ದಲ್ಲಿ ಸರ್ಕಾರದ ಆದೇಶದಂತೆ ಕ್ರಮವಹಿಸುವುದು. ಗ್ರಾಮದಲ್ಲಿ ಆಶ್ರಯ ಯೋಜನೆಗೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನನ್ನು ಕಾಯ್ದಿರಿಸಲು ಕ್ರಮ ವಹಿಸುವುದು. ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವುಗೊಳಿಸಲು ಕ್ರಮ ಕೈಗೊಳ್ಳುವುದು. ಆಧಾರ್ ಕಾರ್ಡ್ನ ಅನೂಕೂಲತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು. ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯಬಹುದಾದ ಸವಲತ್ತುಗಳ ಬಗ್ಗೆ ಅರಿವು ಮೂಡಿಸುವುದು. ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಇದ್ದಲ್ಲಿ ಪರಿಹಾರ ಒದಗಿಸಲು ಕ್ರಮ, ಪ್ರವಾಹದ ಹಾನಿ ತಡೆಗಟ್ಟಲು ಕ್ರಮ, ಅತಿವೃಷ್ಠಿ, ಅನಾವೃಷ್ಠಿ ಎದುರಿಸಲು ಮುಂಜಾಗ್ರತೆ ಕ್ರಮವಹಿಸುವುದರ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ತಿಳಿಸಿದರು.


ಹದ್ದು ಬಸ್ತು, ಕಂದಾಯ ಗ್ರಾಮಗಳ ರಚನೆ, ಗ್ರಾಮದಲ್ಲಿ ಎಸ್.ಸಿ., ಎಸ್.ಟಿ., ಬಿ.ಸಿ.ಎಂ. ವಸತಿ ನಿಲಯಗಳಿದ್ದಲ್ಲಿ ಭೇಟಿ ನೀಡಿ ಸುಸ್ಥಿಯಲ್ಲಿರುವ ಬಗ್ಗೆ ಕ್ರಮ ವಹಿಸುವರು. ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ ಆಹಾರ, ಕಲಿಕಾ ಕ್ರಮ ಇತ್ಯಾದಿ ಬಗ್ಗೆ ಪರಿಶೀಲನೆ ನಡೆಸಲಾಗುತ್ತದೆ ಎಂದು ಹೇಳಿದರು.


ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ದೊರೆತಿರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಆದೇಶಿಸುವುದು, ಗುಡಿಸಲು ರಹಿತ ವಾಸದ ನಿರ್ಮಾಣ ಗ್ರಾಮಗಳಿಗೆ ಭೇಟಿ ನೀಡಿದ ಸಮಯದಲ್ಲಿ ಗುಡಿಸಲುಗಳು ಇರುವ ವಾಸದ ಮನೆಗಳನ್ನು ಪತ್ತೆಹಚ್ಚಿ ಲಭ್ಯವಿರುವ ಸರ್ಕಾರದ ವಿವಿಧ ಯೋಜನೆಗಳಡಿ ಮನೆಕಟ್ಟಲು ಅನುದಾನ ನೀಡುವಂತೆ ಸಂಬAಧಪಟ್ಟ ಜಿಲ್ಲಾ ಮಟ್ಟದ ಅಧಿಕಾರಿಗೆ ನಿರ್ದೇಶನ ನೀಡಲಾಗುತ್ತದೆ ಎಂದು ತಿಳಿಸಿದರು.


ಗ್ರಾಮೀಣ ಭಾಗದ ಜನರ ಸಮಸ್ಯೆಗಳಿಗೆ ಉನ್ನತ ಅಧಿಕಾರಿಗಳು ಖುದ್ದಾಗಿ ಸ್ಪಂಧಿಸಲು ಹಾಗೂ ಸಾಧ್ಯವಾದಷ್ಟು ಸ್ಥಳದಲ್ಲಿಯೇ ಅವರ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರವು ನೀಡಿರುವ ಮಾರ್ಗಸೂಚಿಗಳನ್ನು ಗ್ರಾಮ ವಾಸ್ತವ್ಯದಲ್ಲಿ ಅನುಸರಿಸಲು ಎಂದು ಜಿಲ್ಲಾಧಿಕಾರಿಗಳು ಹೇಳಿದರು.


ದೇವತ್ಕಲ್ ಗ್ರಾಮದ ವಿವಿಧ ಕಾಲೋನಿಗಳು ವೀಕ್ಷಣೆ:

ಎಪ್ರಿಲ್ 17 ರಂದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಕಂದಾಯ ಸಚಿವ ಆರ್.ಅಶೋಕ ಅವರು ಗ್ರಾಮ ವಾಸ್ತವ್ಯ ಮಾಡಲಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ದೇವತ್ಕಲ್ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಮಾಡಿ ನಂತರ ವಿವಿಧ ಕಾಲೋನಿಗಳನ್ನು ವೀಕ್ಷಣೆ ಮಾಡಿದರು.

ನಂತರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ವಿವಿಧ ತರಗತಿಗಳು ಹಾಗೂ ಕಂಪ್ಯೂಟರ್ ಕೊಠಡಿ ವೀಕ್ಷಿಸಿ ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದರು.


ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಸುರಪುರ ತಾಲೂಕಿನ ತಹಶಿಲ್ದಾರ್ ಸುಬ್ಬಣ್ಣ ಜಮಖಂಡಿ, ಹುಣಸಗಿ ತಹಶಿಲ್ದಾರ್ ವಿನಯ್ ಪಾಟೀಲ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಶೋಕ ಭಜಂತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚನ್ನಬಸವ, ಆಹಾರ ನಾಗರಿಕ ಸರಬರಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ನಾಯಕ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಭಾವಿಕಟ್ಟಿ  ಸೇರಿದಂತೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯ ಇದ್ದರು.


ಶನಿವಾರ, ಮಾರ್ಚ್ 20, 2021

 ಆಪ್‌ನಲ್ಲಿ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆ ದಾಖಲಿಸಲು ಕೋರಿಕೆ                         

ಯಾದಗಿರಿ ಮಾರ್ಚ್20(ಕ.ವಾ): 2020-21ನೇ ಸಾಲಿನ ಬೇಸಿಗೆ ಹಂಗಾಮಿನ ಬೆಳೆ ಸಮೀಕ್ಷೆಯನ್ನು ರೈತ ಆಪ್ ಮೂಲಕ ಅಪಲೋಡ ಮಾಡಲು ಸರ್ಕಾರ ಆದೇಶಿಸಿದೆ. ಪ್ರಕೃತಿ ವಿಕೋಪ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ವರದಿ ಸಿದ್ಧಪಡಿಸುವಲ್ಲಿ, ಹಾನಿಗೊಳಗಾದ ಬೆಳೆ ವಿಸ್ತೀರ್ಣದ ಮಾಹಿತಿ ಸಿದ್ಧಪಡಿಸುವಲ್ಲಿ ಮತ್ತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭಗಳಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನೇ ಆಧಾರವಾಗಿಟ್ಟುಕೊಂಡು ಸಿದ್ಧಪಡಿಸುವುದರಿಂದ ರೈತರು ತಪ್ಪದೇ ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ರೈತರ ಬೆಳೆ ಸಮೀಕ್ಷೆ ಆಪ್ ನಲ್ಲಿ ನಮೂದಿಬೇಕು.

 

ಬೆಳೆ ಸಮೀಕ್ಷೆಯ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣವನ್ನು ಲೆಕ್ಕ ಹಾಕುವ ಕಾರ್ಯದಲ್ಲಿ, ಬೆಳೆ ವಿಮೆ ಯೋಜನೆಯ ಸರ್ವೇ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೇ ನಂಬರ್ ಆಯ್ಕೆ ಮಾಡಲು, ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಆರ್.ಟಿ.ಸಿಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಎನ್.ಡಿ.ಆರ್.ಎಫ್,ನಡಿ ಸಹಾಯಧನ ನೀಡಲಾಗುವುದು.


ಹೆಚ್ಚಿನ ಮಾಹಿತಿಗಾಗಿ ಕೃಷಿ/ ಕಂದಾಯ/ ತೋಟಗಾರಿಕೆ/ ರೇಷ್ಮೆ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಯಾದಗಿರಿಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 


 ಸಶಸ್ತç ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಫಲಿತಾಂಶ ಪ್ರಕಟ

ಯಾದಗಿರಿ, ಮಾರ್ಚ್ 20(ಕ.ವಾ): ಪರೀಕ್ಷೆಗೆ ಗೈರುಹಾಜರಾದ ಮತ್ತು ಅನರ್ಹರಾದ ಅಭ್ಯರ್ಥಿಗಳ ಬದಲಿಗೆ ಬೇರೊಬ್ಬ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು  ಸಶಸ್ತç ಪೊಲೀಸ್ ಕಾನ್ಸ್ ಟೇಬಲ್(ಪುರುಷ) (ಕೆಕೆ) ಹುದ್ದೆಗಳಿಗೆ ಸಂಬAಧಿಸಿದAತೆ 2ನೇ ಪರಿಷ್ಕೃತ ಅಂತಿಮ ಆಯ್ಕೆ ಪಟ್ಟಿಯನ್ನು ಯಾದಗಿರಿ ಜಿಲ್ಲಾ ಪೊಲೀಸ್ ಕಛೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಯಾದಗಿರಿ  ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಯಾದಗಿರಿ ಜಿಲ್ಲೆಯಲ್ಲಿ ಸ್ಥಳೀಯ ವೃಂದದಲ್ಲಿ ಖಾಲಿ ಇರುವ 46 ಸಶಸ್ತç ಪೊಲೀಸ್ ಕಾನ್ಸ್ಟೇಬಲ್(ಪುರುಷ) (ಕೆಕೆ) ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅಧಿಸೂಚನೆಯನ್ವಯ ಪಿಎಸ್‌ಟಿ ಮತ್ತು ಇಟಿ ಪರೀಕ್ಷೆಗಳಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಯನ್ನು ಜಿಲ್ಲೆಯಲ್ಲಿ ನಡೆಸಲಾಗಿತ್ತು ಎಂದು ಅವರು ತಿಳಿಸಿದ್ದಾರೆ. 

ತರಬೇತಿ ಕಾರ್ಯಾಗಾರ

ಯಾದಗಿರಿ ಮಾರ್ಚ್ 20(ಕ.ವಾ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಯಾದಗಿರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯಾದಗಿರಿ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಮಹಿಳಾ ಶಕ್ತಿ ಕೇಂದ್ರ ಯೋಜನೆಯಡಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಯಾದಗಿರಿ ಹಾಗೂ ಗುರುಮಠಕಲ್ ಇವರ ಸಂಯುಕ್ತಾಶ್ರಯದಲ್ಲಿ ಯಾದಗಿರಿ ಮತ್ತು ಗುರುಮಠಕಲ್ ತಾಲ್ಲೂಕಿನ 40 ಗ್ರಾಮ ಪಂಚಾಯತ್‌ಗಳ 412 ಜನ ಮಹಿಳಾ ಚುನಾಯಿತ ಪ್ರತಿನಿಧಿಗಳಿಗೆ “ಮಹಿಳಾ ಸಬಲೀಕರಣ ಹಾಗೂ ಲಿಂಗ ಸೂಕ್ಷö್ಮತೆ ಮತ್ತು ಲಿಂಗ ಸಮಾನತೆ ವಿಷಯ” ಕುರಿತು ತರಬೇತಿಯನ್ನು ಮಾರ್ಚ್ 22 ರಿಂದ 28ರ ವರೆಗೆ ಎನ್‌ವಿಎಂ ಟ್ರೆöÊನಿಂಗ್ ಹಾಲ್ (ರೆಸ್ಟೋರೆಂಟ್)ನ ಮೊದಲ ಮಹಡಿಯಲ್ಲಿ ಆಯೋಜಿಸಲಾಗಿರುತ್ತದೆ.   


ಜಿಲ್ಲಾಧಿಕಾರಿಗಳು ಹಾಗೂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಉದ್ಘಾಟನೆ ಮಾಡುವುದರ ಮೂಲಕ ಈ ತರಬೇತಿ ಕಾರ್ಯಾಗಾರಕ್ಕೆ ಚಾಲನೆಯನ್ನು ನೀಡಲಿದ್ದಾರೆ.  


ತರಬೇತಿಯನ್ನು 7 ತಂಡಗಳ ಮೂಲಕ ಹಮ್ಮಿಕೊಳ್ಳಲಾಗಿದ್ದು, ಆಯಾ ದಿನಾಂಕಗಳAದು ಸಂಬAಧಪಟ್ಟ ಗ್ರಾಮ ಪಂಚಾಯತಿಗಳ ಮಹಿಳಾ ಚುನಾಯಿತ ಪ್ರತಿನಿಧಿಗಳು ಆಗಮಿಸಿ ತರಬೇತಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕೆಂದು  ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.   




ಶಹಾಪುರ ತಾಲೂಕಿನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಯಾದಗಿರಿ ಮಾರ್ಚ್ 20(ಕ.ವಾ): ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿಯಲ್ಲಿ ಶಹಾಪುರ ತಾಲೂಕಿನಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ ವಸತಿ ಕಾರ್ಯಕರ್ತರ ಹುದ್ದೆಯನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.


ತಾಲೂಕ ಪಂಚಾಯತ ಕಾರ್ಯಾಲಯದಲ್ಲಿ ಅರ್ಜಿಯನ್ನು ಪಡೆದು ಎಮ್.ಆರ್.ಬ್ಲೂ ಗಳ ಮುಖಾಂತರವಾಗಿ ಏಪ್ರಿಲ್ 1 ರಂದು ಸಲ್ಲಿಸಬೇಕೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಗರಸಭೆ ನಿಧಿ ಅನುದಾನದ ಅಡಿಯಲ್ಲಿನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ ಮಾರ್ಚ್ 20 (ಕ.ವಾ): 2020-21ನೇ ಸಾಲಿನ ನಗರಸಭೆ ನಿಧಿ ಅನುದಾನ ಅಡಿಯಲ್ಲಿ  24.10%, 7.25%&5% ಯೋಜನೆಯ ವಿವಿಧ ಸೌಲಭ್ಯಗಳಿಗಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 20-3-21 ರಿಂದ ದಿನಾಂಕ 03-04-21 ರವರೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ ಮುಗಿದ ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲವೆಂದು ಶಹಾಪುರ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ವಾಜಪೇಯಿ ನಗರ ನಿವೇಶನ ಯೋಜನೆಯಡಿ ವಸತಿ ನಿರ್ಮಾಣ


ಯಾದಗಿರಿ.ಮಾ20(ಕ.ವಾ): ವಾಜಪೇಯಿ ನಗರ ನಿವೇಶನ ಯೋಜನೆಯಡಿ ವಸತಿ ನಿರ್ಮಾಣಕ್ಕಾಗಿ ನಗರ ಪ್ರದೇಶದ 5 ಕಿ.ಮೀ ವ್ಯಾಪ್ತಿಯಲ್ಲಿ  25 ಎಕರೆ ಖಾಸಗಿ ಜಮೀನು ಬೇಕಿದ್ದು ಅಸಕ್ತರು ಪೂರಕ ದಾಖಲೆಗಳೊಂದಿಗೆ ಜಮೀನು ನೀಡಬೇಕೆಂದು ಯಾದಗಿರಿ ನಗರಸಭೆ ಪೌರಾಯುಕ್ತರಾದ ಭೀಮಣ್ಣ ಟಿ ನಾಯಕ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮುಖ್ಯಮಂತ್ರಿಗಳ ಒಂದು ಲಕ್ಷ ವಸತಿ ಮತ್ತು ಪ್ರಧಾನ ಮಂತ್ರಿ ಆವಾಸ ಯೋಜನೆಗಳಡಿ ಯಾದಗಿರಿ ನಗರದ ವಸತಿ ಮತ್ತು ನಿವೇಶನ ರಹಿತರಿಗೆ ಜಿ+2 ಮಾದರಿಯಲ್ಲಿ (ಬಹುಮಹಡಿ ಮನೆಗಳು) ನಿರ್ಮಾಣಕ್ಕಾಗಿ ವಾಜಪೇಯಿ ನಗರ ನಿವೇಶನ ಯೋಜನೆಯಡಿ ನಗರ ಪ್ರದೇಶನದಿಂದ 5 ಕೀ.ಮೀ.ಅಂತರದಲ್ಲಿ ಸರ್ಕಾರಿ ಜಮೀನು ಲಭ್ಯವಿಲ್ಲದ ಪ್ರಯುಕ್ತ 25 ಎಕರೆ ಖಾಸಗಿ ಜಮೀನು ಬೇಕಾಗಿರುತ್ತದೆ. ಆಸಕ್ತಿಯಳ್ಳ ಜಮೀನು ಮಾಲಿಕರು ಏಪ್ರಿಲ್ 5ರ ಒಳಗಾಗಿ ನಗರಸಭೆ ಕಾರ್ಯಾಲಯಕ್ಕೆ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬೇಕು.  ಜಮೀನು ಖರೀದಿಯು ಸರ್ಕಾರದ ಮಾನದಂಡಗಳ ಮತ್ತು ಇತರ ಪೂರಕ ಅಂಶಗಳ ಆಧಾರದ ಮೇಲೆ ಜಮೀನು ದರವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದ್ದಾರೆ. 

                         


ಬುಧವಾರ, ಮಾರ್ಚ್ 17, 2021



 ಆರ್ಥಿಕ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರದ ಯೋಜನೆಗಳು ಸಹಕಾರಿ

                                        ;ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ, ಮಾ17 (ಕ.ವಾ):-  ಮಹಿಳೆಯರ ಅಭಿವೃದ್ಧಿಗಾಗಿಯೇ ಸರ್ಕಾರವು ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕೆಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಕರೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಸಮಾಖ್ಯಾ ಕರ್ನಾಟಕ ಜಿಲ್ಲಾ ಘಟಕ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಅಂತರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಮಹಿಳೆಯರ ಸಮಗ್ರ ಅಭಿವೃದ್ಧಿಗಾಗಿ ಜಿಲ್ಲಾಡಳಿತದಿಂದ ಸಂಪೂರ್ಣ ಬೆಂಬಲವಿದ್ದು, ಅಗತ್ಯ ನೆರವನ್ನು ಕಾಲ Áಲಕ್ಕೆ ನೀಡಲಾಗುವುದುದೆಂದು ಹೇಳಿದರು.

ಸಮಾಜದಲ್ಲಿ ಮಹಿಳೆಯರು ಸಮಾನತೆ ಸಾಧಿಸಲು ವಿದ್ಯಾವಂತರಾಗಬೇಕು. ಮಹಿಳೆಯರು ಶಿಕ್ಷಣ ಶಕ್ತಿಯಿಂದ ಮಾತ್ರ ಸಮಾನತೆ ಸಾಧಿಸಲು ಸಾಧ್ಯ ಎಂದು ಹೇಳಿದರು.

ಅನಾದಿ ಕಾಲದಿಂದಲೂ ಸೂಚಿಸಿರುವಂತೆ ದೇಶದ ಪ್ರಗತಿಯಾಗಬೇಕಾದರೆ ಮಹಿಳೆಯರ ಪಾತ್ರ ಮತ್ತು ಸಾಧನೆ ಅಪಾರವಾಗಿದೆ. ಕ್ಷೇತ್ರವಾರು ಸಮೀಕ್ಷೆ ಪ್ರಕಾರ ಪರಿಗಣಿಸುವುದಾದರೇ ದೇಶ-ವಿದೇಶಗಳಲ್ಲಿ ಮಿಲಿಟರಿ, ಪೈಲಟ್, ಡ್ರೈವರ್ ಹೀಗೆ ಎಲ್ಲಾ ವೃತ್ತಿಗಳಲ್ಲಿ ಮಹಿಳೆಯ ಪ್ರಗತಿ ಸಾಧನೆಯತ್ತಾ ಮುನ್ನುಗ್ಗುತ್ತಾ ಇದ್ದಾರೆ. ಮಹಿಳೆಯರ ಸಾಧನೆ, ಸಂಕಲ್ಪ ಮತ್ತು ಗುರಿ ಎಲ್ಲದಕ್ಕೂ ಮಿಗಿಲಾದದ್ದು’ ಎಂದು ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪ ಶರ್ಮಾ ಅವರು ಮಾತನಾಡಿ, ಜಿಲ್ಲೆಯ ಯಾವುದೇ ಊರಿನಲ್ಲಿ ಹೆಣ್ಣುಮಕ್ಕಳು ಶಾಲೆ ಬಿಟ್ಟಿದ್ದರೆ, ಪುನಃ ಅವರನ್ನು ಶಾಲೆಗೆ ಕರೆತರುವ ಕೆಲಸ ಮಾಡಬೇಕು ಎಂದರು.  ಗರ್ಭಿಣಿ ಮಹಿಳೆಯರಿಗೆ ಕಬ್ಬಿಣ ಅಂಶದ ಮಾತ್ರೆಗಳನ್ನು ಸೇವನೆ ಕುರಿತು ಅವರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಭಾಕರ ಕವಿತಾಳ, ಯುವಜನ  ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜು ಬಾವಿಹಳ್ಳಿ, ಮಹಿಳಾ ಸಮಾಖ್ಯಾ ಕಾರ್ಯಕ್ರಮದ ನಿರ್ದೇಶಕಿ ಮಂಜುಳಾ.ವಿ, ಮಹಿಳಾ ಸಮಾಖ್ಯಾ ಕಾರ್ಯಕ್ರಮದ ಕಿರಿಯ ಸಂಪನ್ಮೂಲ ವ್ಯಕ್ತಿ ಕರುಣಾ ಕುಲಕರ್ಣಿ, ವಿಮಲಾಕ್ಷಿ ಆರ್. ಹಿರೇಮಠ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.

ಮಂಗಳವಾರ, ಮಾರ್ಚ್ 16, 2021

 ಕೌಶಲ್ಯ ವಿಕಾಸ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಸೂಚನೆ                                                                                                                 ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.


ಯಾದಗಿರಿ, ಮಾ16 (ಕ.ವಾ):-  ಜಿಲ್ಲಾ ಮಟ್ಟದಲ್ಲಿ ಈಗಾಗಲೇ ಸೃಜಿಸಲಾಗಿರುವ ಜಿಲ್ಲಾ ಕೌಶಲ್ಯ ಮಿಷನ್‌ಗೆ ಪೂರಕವಾಗಿ ಹಾಗೂ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ 3.0ನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 



ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ 3.0 ಅನುಷ್ಠಾನ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


 

ಅರ್ಹ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ದೊರೆಕಿಸಿಕೊಡುವ ನಿಟ್ಟಿನಲ್ಲಿ ವಿವಿಧ ಸಮಿತಿ ರಚಿಸಲಾಗಿದೆ. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಬೇಕೆಂದರು.


 


ಉದ್ಯೋಗಿಗಳ ಬೇಡಿಕೆಯಂತೆ ತರಬೇತಿ ನೀಡಿ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಸಬೇಕು. ಇದರಿಂದ ನಿರುದ್ಯೋಗ ಸಮಸ್ಯೆ ಬಗೆಹರಿಯುವುದರ ಜೊತೆಗೆ ಆರ್ಥಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು.


 


ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಮ್ಯಾಗೇರಿ ಮಾತನಾಡಿ, ಜಿಲ್ಲಾ ಕೌಶಲ್ಯ ಮಿಷನ್ ಗೆ ಪೂರಕವಾಗಿ ಹಾಗೂ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ (ಪಿಎಂಕೆವಿವೈ) 3.0 ಜಾರಿಯಾಗಿದೆ. ಜಿಲ್ಲಾ ಮಟ್ಟದಲ್ಲಿ ಕಾರ್ಯದಕ್ಷತೆ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು, ಅಭ್ಯರ್ಥಿಗಳನ್ನು ಗುರುತಿಸುವಿಕೆ ಮತ್ತು ಸಮಾಲೋಚನೆ ಉಪಸಮಿತಿ, ತರಬೇತಿ ಗುಣಮಟ್ಟ, ಕೈಗಾರಿಕಾ ಸಂಪರ್ಕ ಉಪಸಮಿತಿ, ಸ್ವಯಂ ಉದ್ಯೋಗ, ಗ್ರಾಮ ಪಂಚಾಯತ್ ಸಮನ್ವಯ, ಕೃಷಿ ಉಪ ಸಮಿತಿ, ಸಾಮರ್ಥ್ಯ ವೃದ್ಧಿ ಹಾಗೂ ಮೇಲ್ವಿಚಾರಣೆ ಉಪಸಮಿತಿಗಳಿಗೆ ಕಾರ್ಯಭಾರ ಹಾಗೂ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.


ಜಿಲ್ಲೆಯ ನಿರುದ್ಯೋಗ ಯುವಕ ಮತ್ತು ಯುವತಿಯರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗ ದೊರೆಕಿಸಿಕೊಡುವ ನಿಟ್ಟಿನಲ್ಲಿ ಯೋಜನೆಯ ಅನುಷ್ಠಾನದ ಗುಣಮಟ್ಟ ತರಬೇತಿ, ಮೂಲಸೌಕರ್ಯ, ಅಭ್ಯರ್ಥಿಗಳಿಗೆ ಉದ್ಯೋಗ ನಿಯುಕ್ತಿ ಇತ್ಯಾದಿ ವಿಷಯಗಳ ಕುರಿತು ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆ ಕಾರ್ಯನಿರ್ವಹಿಸಲಿದೆ ಎಂದರು.


ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಮಾಣಿಕ ವಿ.ರಘೋಜಿ,  ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಸಿಕಾಡ್ ಜಂಟಿ ನಿರ್ದೇಶಕ ಜಿ.ಯು. ಹುಡೆದ್ ಸೇರಿದಂತೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ, ವಿವಿಧ ಕಾಲೇಜು ಪ್ರಾಂಶುಪಾಲರು ಸಭೆಯಲ್ಲಿ ಇದ್ದರು.

 


 ಯುವಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

ಯಾದಗಿರಿ,ಮಾ16(ಕ.ವಾ):-ಯುವಜನರ ಮಾನಸಿಕ ಆರೋಗ್ಯದ ಸರ್ವತೋಮುಖ ಬೆಳವಣೆಗೆ ಪೂರಕ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಗುರುಮಠಕಲ್ ಮತ್ತು ಸುರಪೂರ ತಾಲೂಕಿನಲ್ಲಿ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲಿರುವ ಯುವಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಯುವ ಸ್ಪಂದನ ಯುವಜನ ಮಾನಸಿಕ ಆರೋಗ್ಯ ಪೂರಕ ಸೇವೆಗಳನ್ನು ಒದಗಿಸಿ ಕೊಡುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಮತ್ತು ಅನುಷ್ಠಾನ ಯೋಜನೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ  ಯುವಜನರನ್ನು ತಲುಪಿ ಯುವಜನರಿಂದಲೇ ನಡೆಸಿ, ಯುವಜನರನ್ನು ಸಬಲೀಕರಣಗೊಳಿಸಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕಗೊಳಿಸುವುದು ಈ ಯೋಜನೆಯ ಉದ್ಧೇಶವಾಗಿದೆ. 

ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಪದವೀಧರರಾಗಿರಬೇಕು. ಹಾಗೂ 21ರಿಂದ 35 ವರ್ಷದೊಳಗಿನವರಾಗಿರಬೇಕು. ಮತ್ತು ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡುವುದು, ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯಗಳನ್ನು ಹೊಂದಿರಬೇಕು. ಸಮುದಾಯದಲ್ಲಿ ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು ಮತ್ತು ಕಂಪ್ಯೂಟರ್ ಬಳಕೆ ಜ್ಞಾನವನ್ನು ಹೊಂದಿರುವುರವರಿಗೆ ಆದ್ಯತೆ ನೀಡಲಾಗುವುದು. 

ಅಭ್ಯರ್ಥಿಗಳು ತಮ್ಮ ಸ್ವ- ವಿವರಗಳೊಂದಿಗೆ ಯುವಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಡಾನ್ ಬಾಸ್ಕೋ ಶಾಲೆ ಎದುರು ಯಾದಗಿರಿ ಇಲ್ಲಿ ದಿನಾಂಕ 23-03-2021ರೊಳಗಾಗಿ ಅರ್ಜಿಗಳನ್ನು ಸಲ್ಲಿಸುವುದು ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ_8618549355 ಹಾಗೂ 8867323635 ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಯಾದಗಿರಿ ಸಂಪರ್ಕಿಸಬಹುದಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸೋಮವಾರ, ಮಾರ್ಚ್ 15, 2021

 ಖಾಲಿಯಿರುವ ಗ್ರಾಮ ಪಂಚಾಯತಿ ಕ್ಷೇತ್ರಗಳಿಗೆ ಮಾ 29 ಕ್ಕೆ ಉಪ ಚುನಾವಣೆ

ಯಾದಗಿರಿ,ಮಾ15(ಕ.ವಾ):- ಯಾದಗಿರಿ ಜಿಲ್ಲೆಯ ಶಹಾಪೂರ ಹಾಗೂ ಹುಣಸಗಿ ತಾಲೂಕುಗಳಲ್ಲಿನ ವಿವಿಧ ಕಾರಣಗಳಿಂದ ಖಾಲಿಯಿರುವ ಗ್ರಾಮ ಪಂಚಾಯತಿ ಕ್ಷೇತ್ರಗಳಿಗೆ ಮಾರ್ಚ್ 29 ಕ್ಕೆ ಉಪ ಚುನಾವಣೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.

ಶಹಾಪೂರ ತಾಲೂಕಿನ 7-ಮುಡಬೂಳ ಗ್ರಾಮ ಪಂಚಾಯಿತಿಯ 4-ಮುಡಬೂಳ ಕ್ಷೇತ್ರ ಮತ್ತು 10-ಗೋಗಿಪೇಠ ಗ್ರಾಮ ಪಂಚಾಯಿತಿಯ 1ರಿಂದ7 ಕ್ಷೇತ್ರಗಳು ಹಾಗೂ ಹುಣಸಗಿ ತಾಲ್ಲೂಕಿನ 3-ಗೆದ್ದಲಮರಿ ಗ್ರಾಮ ಪಂಚಾಯಿತಿಯ 6-ಧರ್ಮಾಪುರ ಕ್ಷೇತ್ರಗಳಲ್ಲಿ ಚುನಾವಣೆಯನ್ನು ನಡೆಸಲಾಗುವುದು. ಚುನಾವಣಾ ನೀತಿ ಸಂಹಿತೆಯು ಮಾರ್ಚ್ 15 ರಿಂದ 31 ರ ವರೆಗೆ ಜಾರಿಯಲ್ಲಿರುತ್ತದೆ ಎಂದು  ಅವರು ತಿಳಿಸಿದ್ದಾರೆ.

ನಾಮಪತ್ರಗಳನ್ನು ಸಲ್ಲಿಸಲು ಮಾರ್ಚ್ 19 ಕೊನೆಯ ದಿನವಾಗಿದೆ, ನಾಮಪತ್ರಗಳನ್ನು ಮಾರ್ಚ್ 20 ರಂದು ಪರಿಶೀಲಿಸಲಾಗುವುದು. ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು  ಮಾರ್ಚ್ 22 ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ, ಮತದಾನವನ್ನು ನಡೆಸಬೇಕಾದ ಮಾರ್ಚ್ 29 ರಂದು ಬೆಳಿಗ್ಗೆ 7 ಗಂಟೆಯಿAದ ಸಾಯಂಕಾಲ 5 ಗಂಟೆವರೆಗೆ, ಮರು ಮತದಾನ ಇದ್ದಲ್ಲಿ ಮತದಾನ ನಡೆಸಲು  ಮಾರ್ಚ್ 30 ರಂದು ಬೆಳಿಗ್ಗೆ 7ಗಂಟೆಯಿAದ ಸಾಯಂಕಾಲ 5 ಗಂಟೆವರೆಗೆ,  ಮತಗಳ ಎಣಿಕೆಯು ಮಾರ್ಚ್ 31 ರ ಬೆಳಿಗ್ಗೆ 8 ಗಂಟೆಯಿAದ ಪ್ರಾರಂಭ (ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ)ವಾಗಲಿದೆ  ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  


 ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಿರಿ 

                                                  : ಮಕ್ಕಳ ರಕ್ಷಣಾಧಿಕಾರಿ  ಮಲ್ಲಣ್ಣ ದೇಸಾಯಿ


ಯಾದಗಿರಿ, ಮಾ15 (ಕ.ವಾ):- ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡಾಗ ಮಾತ್ರ ಯೋಜನೆಗಳು ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ  ಮಲ್ಲಣ್ಣ ದೇಸಾಯಿ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಯಾದಗಿರಿ. ತಾಲೂಕಾ ಪಂಚಾಯತ, ಸುರಪುರ ರವರ ಸಹಯೋಗದೊಂದಿಗೆ,ಬಾಲ ನ್ಯಾಯ ಕಾಯ್ದೆ-2015 (ಮಕ್ಕಳ ಪಾಲನೆ ಮತ್ತು ರಕ್ಷಣೆ) ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಪೋಕ್ಸೊ ಕಾಯ್ದೆ -2012” ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಒಂದು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯಲ್ಲಿ ಈಗಾಗಲೇ ಸಾಕಷ್ಟು ಅನಾಥ, ನಿರ್ಗತಿಕ ಮಕ್ಕಳಿಗಾಗಿಯೇ ಸರಕಾರದ ಬಾಲಕಿಯರ ಬಾಲಮಂದಿರಗಳು ಇದ್ದು, ಇದರ ಸಂಪೂರ್ಣ ಸದ್ಭಳಕೆ ಮಾಡಿಕೊಳ್ಳುವ ಅಗತ್ಯ ಎಂದರು. ಈ ವರ್ಷ ಬಾಲಕರ ಬಾಲಮಂದಿರ ಕೂಡ ನಮ್ಮ ಜಿಲ್ಲೆಗೆ ಮಂಜೂರಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಿದರು.

 ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಡಾ:ಹಣಮಂತ್ರಾಯ ಕರಡ್ಡಿ ಕಾರ್ಯಕ್ರಮ ಉದ್ಘಾಟಿಸಿ ಮಕ್ಕಳ ಕಲ್ಯಾಣ ಸಮಿತಿಯ ಕಾರ್ಯವೈಖರಿ ಕುರಿತು ಮಾಹಿತಿ ನೀಡಿದರು. ಬಾಲ್ಯ ವಿವಾಹ ಮತ್ತು ಇದರ ದುಷ್ಟರಿಣಾಮಗಳು, ಮಕ್ಕಳ ಜವಾಬ್ದಾರಿ ಕುರಿತಾಗಿ ವಿವರಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ತಾಲೂಕು ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಅಮರೇಶ ಇವರು ಅಧ್ಯಕ್ಷ/ಉಪಾಧ್ಯಕ್ಷರುಗಳಿಗೆ ಪಂಚಾಯತ್ ಮಟ್ಟದಲ್ಲಿ ಅವರ ಜವಾಬ್ದಾರಿಗಳ ಕುರಿತಾಗಿ ಮಾಹಿತಿ ನೀಡಿದರು.  

ಪಂಚಾಯತ್ ಅಭಿವೃದ್ದಿ ಅಧಿಕಾರಿಗಳೊಂದಿಗೆ ಸಹಕಾರದಿಂದ ಕಾರ್ಯ ನಿರ್ವಹಿಸಬೇಕು ಮತ್ತು ದುಡಿಯೋಣ ಬಾ ಅಭಿಯಾನದ ಕುರಿತು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರತಿ ಕುಟುಂಬಕ್ಕೆ 100 ದಿನಗಳ ಕೆಲಸವನ್ನು ಮಾಡಿಸಬೇಕು  ಮತ್ತು ಜೆಸಿಬಿ/ ಇತರ ಯಂತ್ರಗಳಿAದ ಕೆಲಸ ಮಾಡಿಸಬಾರದು ಎಂದು ಅವರು ಸಲಹೆ ನೀಡಿದರು.

 ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಾಗಿ ಆಗಮಿಸಿದ್ದ ರಾಯಚೂರಿನ ಮಕ್ಕಳ ಸಹಾಯವಾಣಿ ಸಂಯೋಜಕರಾದ ಸುದರ್ಶನ ಇವರು ಗ್ರಾಮ ಪಂಚಾಯತಿಯ ಅಧ್ಯಕ್ಷ/ಉಪಾಧ್ಯಕ್ಷರುಗಳಿಗೆ ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ,  ಬಾಲ ನ್ಯಾಯ ಕಾಯ್ದೆ-2015, ಮಕ್ಕಳ ಹಕ್ಕುಗಳು, ಪೋಕ್ಸೊ ಕಾಯ್ದೆ-2012 ಕುರಿತಾಗಿ ಸಂಪೂರ್ಣವಾಗಿ ತಿಳಿಸಿದರು. 

ಈ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಚಂದ್ರಶೇಖರ ಪೋಲಿಸ್ ಇನ್ಸಪೆಕ್ಟರ್ ಸುರಪುರ ಠಾಣೆ, ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರಾದ ಶ್ರೀ ಮಾಳಪ್ಪ ವಂಟೂರು, ಸುರಪುರ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ಲಾಲಸಾಬ ಪೀರಾಪೂರ, ಪೋಲಿಸ್ ಇಲಾಖೆಯ ದಯಾನಂದ ಜಮಾದಾರ ಮುಂತಾದವರು ಇದ್ದರು.  ಈ ಕಾರ್ಯಕ್ರಮವನ್ನು ರಾಜೇಂದ್ರಕುಮಾರ ಯಾದವ ಅವರು ನಿರೂಪಿಸಿದರೆ,  ದಶರಥ ನಾಯಕ ಅವರು ವಂದಿಸಿದರು.

ಶುಕ್ರವಾರ, ಮಾರ್ಚ್ 12, 2021




 ಪರೀಕ್ಷಾರ್ಥಿಗಳಲ್ಲಿ ಕೀಳರಿಮೆ ಬೇಡ

                                              ಜಿಲ್ಲಾಧಿಕಾರಿ: ಡಾ ರಾಗಪ್ರಿಯಾ ಆರ್

ಯಾದಗಿರಿ,ಫೆ. 12 (ಕ.ವಾ):- ಪರೀಕ್ಷಾರ್ಥಿಗಳು ಕೀಳರಿಮೆ ಬಿಟ್ಟು ಸ್ವ ಪ್ರಯತ್ನ, ಸಾಮರ್ಥ್ಯ ಪರಿಶ್ರಮದಿಂದ ಅಗಾಧ ಸಾಧನೆ ಮಾಡಬೇಕು. ಅನಗತ್ಯ ಸಂಗತಿಗಳ ಬಗ್ಗೆ ಗಮನ ಹರಿಸಬಾರದು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.   


ಅವರು ನಗರದ ಜಿಲ್ಲಾಧಿಕಾರಿ ಕಚೇರಿಯ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ, ಜಿಲ್ಲಾ ಉದ್ಯೋಗ  ಮತ್ತು ತರಬೇತಿ ಇಲಾಖೆ ಹಾಗೂ ಎಒನ್ ಆಫೀರ‍್ಸ್ ಅಕಾಡೆಮಿ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಕೆ.ಎ.ಎಸ್ ಹಾಗೂ ಐ.ಎ.ಎಸ್ ಪರೀಕ್ಷಾರ್ಥಿಗಳಿಗೆ ಸಂಕಲ್ಪ ಹಾಗೂ ಮಹತ್ವಾಕಾಂಕ್ಷಿ ಯೋಜನೆಗಳಡಿ ಒಂದು ದಿನದ ಕಾರ್ಯಾಗಾರದಲ್ಲಿ ಅವರು ಹೇಳಿದರು. 


ನಾಗರಿಕ ಸೇವಾ ಪರೀಕ್ಷೆಗಳಿಗೆ ಪೂರ್ವ ಯೋಜಿತವಾಗಿ ಸಿದ್ಧತೆ ಮಾಡಿಕೊಳ್ಳಬೇಕು. ಅಧ್ಯಯನದ ಮೇಲೆ ಏಕಾಗ್ರತೆ ಇರಬೇಕು. ಆತ್ಮಸ್ಥೈರ್ಯ ದಿಂದ ನಿಮ್ಮಲ್ಲಿ ಅಂತರ್ಗತವಾಗಿರುವ ವಿದ್ವತ್ತಿನ ಮೇಲೆ ನಂಬಿಕೆಯಿಟ್ಟು ಮುನ್ನಡೆದರೆ ಸಾಧನೆ ಮಾಡಬಹುದೆಂದರು.


ಸಾಧಕರ ಸಾಧನೆಗಳು, ಅನುಭವಗಳು ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ನೆರವಾಗಬೇಕು ಎಂದು ಹೇಳಿದರು.


ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ವಿದ್ಯಾರ್ಥಿ ಸಮುದಾಯ ಉನ್ನತ ಹುದ್ದೆಗಳನ್ನು ಹೊಂದಿ ಉಜ್ವಲ ಬದುಕು ನಿರ್ಮಿಸಿಕೊಂಡು ಸಮಾಜಕ್ಕೆ ಬೆಳಕು ನೀಡುವ ಶಕ್ತಿಯಾಗಬೇಕಾದರೆ ನಿರಂತರವಾಗಿ ಅಧ್ಯಯನಶೀಲರಾಗುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.


ವಿದ್ಯಾರ್ಥಿಗಳ ಜೀವನ ಬಿಳಿ ಕಾಗದವಿದ್ದಂತೆ. ಬದುಕು ನಿರ್ಮಿಸಿಕೊಳ್ಳಲು ವಿದ್ಯಾರ್ಥಿ ಜೀವನ ಒಂದು ಸುವರ್ಣಾವಕಾಶ. ಅದನ್ನು ಸದುಪಯೋಗಪಡಿಸಿಕೊಂಡು ವಿದ್ಯೆಯ ಜತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಕ್ರಿಯಾಶೀಲತೆ ಹೊಂದಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಉನ್ನತ ದರ್ಜೆಯಲ್ಲಿ ಉತ್ತಿರ್ಣರಾದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ ಎಂದರು. 

 

ಕೆ.ಎ.ಎಸ್ ಹಾಗೂ ಐ.ಎ.ಎಸ್  ಕಾರ್ಯಾಗಾರದಲ್ಲಿ ಸುಮಾರು 620 ಪರೀಕ್ಷಾರ್ಥಿಗಳು ಭಾಗಹಿಸಿದರು. 

ಇದೇ ಸಂದರ್ಭದಲ್ಲಿ  ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ್, ಐ.ಎ.ಎಸ್ ಪ್ರೊಬೇಷನರಿಗಳಾದ ಅಶ್ವಿಜ, ಡಾ.ಆಕಾಶ ಹಾಗೂ ರಾಹುಲ್, ಸಹಾಯಕ ಆಯುಕ್ತರಾದ ಶಂಕರಗೌಡ ಸೋಮನಾಳ, ಕೆ.ಎ.ಎಸ್ ಕಿರಿಯ ಶ್ರೇಣಿ ಪ್ರೊಬೇಷನರಿ ಸವಿತಾ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ರೇಖಾ ಮ್ಯಾಗೇರಿ, ಎಒನ್ ಆಫೀರ‍್ಸ್ ಆಕಾಡೆಮಿ ಮುಖ್ಯಸ್ಥರಾದ ಶಿವಕುಮಾರ್ ದೇಶಮಾನೆ, ಅಶ್ವಿನಿ, ಬನ್ನಮ್ಮ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು. 




 ಕೋವಿಡ್ ಸುರಕ್ಷತಾ ನಿಯಮವನ್ನು ಕಡ್ಡಾಯವಾಗಿ ಪಾಲಿಸಿ

                                             ಶಾಸಕ; ವೆಂಕಟರಡ್ಡಿ ಗೌಡ ಮುದ್ನಾಳ                      

ಯಾದಗಿರಿ,ಮಾ. 12 (ಕ.ವಾ):- ಕೋವಿಡ್ ವಿರುದ್ಧ ಗೆಲುವು ಸಾಧಿಸಲು ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು. ಸಂಪೂರ್ಣವಾಗಿ ಕೋವಿಡ್ ಮುಕ್ತವಾಗುವವರೆಗೂ ಸುರಕ್ಷತಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಯಾದಗಿರಿ ಮತಕ್ಷೇತ್ರದ ಶಾಸಕ ವೆಂಕಟರಡ್ಡಿ ಗೌಡ ಮುದ್ನಾಳ ಅವರು ಹೇಳಿದರು.


ನಗರಕ್ಕೆ  ಸಮೀಪವಿರುವ ಮುದ್ನಾಳ ಗ್ರಾಮದಲ್ಲಿ ಶುಕ್ರವಾರ ಪಂಚಾಯತ್ ಮಟ್ಟದಲ್ಲಿ ಹಿರಿಯ ನಾಗರಿಕರಿಗೆ ಕೋವಿಡ್- 19 ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಕೊರೊನಾ ಲಸಿಕೆ ಪಡೆಯುವ ಸಂದರ್ಭದಲ್ಲಿ ಯಾವುದೇ ತಪ್ಪು ಗ್ರಹಿಕೆ ಬೇಡ, ಎಲ್ಲಾ ಹಿರಿಯ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆಯಬೇಕೆಂದು ಹೇಳಿದರು.


ಮಹಾಮರಿ ಕೊರೊನಾ ಲಸಿಕೆಯನ್ನು ಸರ್ಕಾರವು ಉಚಿತವಾಗಿ ನೀಡುತ್ತಿದ್ದು, ತಪ್ಪದೆ ಎಲ್ಲಾ ಹಿರಿಯ ನಾಗರಿಕರು ಕೊರೊನಾ ಲಸಿಕೆಯನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಆರಂಭಿಸಿರುವ ಲಸಿಕಾ ಕೇಂದ್ರ ಹಾಗೂ ನಿಗಾ ಘಟಕದ ಪ್ರಯೋಜನ ಪಡೆಯುವಂತೆ ತಿಳಿಸಿದರು. 


ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಮಾತನಾಡಿ,  ಜಿಲ್ಲೆಯಲ್ಲಿ ಎಂಬತ್ತೆöÊದು ಸಾವಿರ ಮಂದಿ ಹಿರಿಯ ನಾಗರಿಕರಿಗೆ ಕೊರೊನಾ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.


ಜಿಲ್ಲೆಯಲ್ಲಿ ಕೊರೊನಾ ಲಸಿಕೆ ನೀಡುವ ಅಭಿಯಾನ ಮೊದಲ ಹಂತದಲ್ಲಿ ಶೇ.90ರಷ್ಟು ಹಾಗೂ ಎರಡನೇ ಹಂತದಲ್ಲಿ ಶೇ.57.97 ರಷ್ಟು ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಎರಡನೇ ಹಂತದಲ್ಲಿ ಮುಂಚೂಣಿ ಕಾರ್ಯಕರ್ತಯರಿಗೆ ಲಸಿಕೆ ನೀಡಲಾಗಿದೆ ಎಂದರು.


ಮೂರನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಲಸಿಕೆ ನೀಡಲಾಗುತ್ತಿದೆ.  ಮೊದಲ ಲಸಿಕೆ ಪಡೆದ 28 ದಿನಗಳ ಬಳಿಕ 2ನೇ ಲಸಿಕೆಯನ್ನು ತಪ್ಪದೇ ಪಡೆಯಬೇಕು.  ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯದವರು ಈಗ ಲಸಿಕೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.


ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು ನೋಂದಾಯಿತ 56 ಆಸ್ಪತ್ರೆಗಳಲ್ಲಿ ಆನ್‌ಲೈನ್ ಮೂಲಕ ನೋಂದಣಿ ಮಾಡಬಹುದು. ಇಲ್ಲವೇ ನೇರವಾಗಿ ಆಸ್ಪತ್ರೆಗೆ ಭೇಟಿ ನೀಡಿ ಫೋಟೋ ಐಡಿಯೊಂದಿಗೆ ನೋಂದಣಿ ಮಾಡಿಕೊಂಡು ಲಸಿಕೆ ಪಡೆಯಬಹುದು. ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಸಿಕೆ ಪಡೆಯಬಹುದು. ಖಾಸಗಿ ಆಸ್ಪತ್ರೆಯಲ್ಲಿ ಒಂದು ಡೋಸ್‌ಗೆ 250 ರೂ. ಹಣ ನೀಡಿ ಲಸಿಕೆ ತೆಗೆದುಕೊಳ್ಳಬಹುದು ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ಮುದ್ನಾಳ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿಜಯಲಕ್ಷಿö್ಮÃ ಗಂ/ ಶರಣಪ್ಪ, ತಾ.ಪಂ ಸದಸ್ಯೆ ಗೊರಿಬಾಯಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಆರ್.ಸಿ.ಎಚ್ ಅಧಿಕಾರಿ ಡಾ.ಸೂರ್ಯಪ್ರಕಾಶ ಕಂದಕೂರ, ಟಿ.ಎಚ್.ಒ ಡಾ.ಹಣಮಂತ, ಡಾ.ನಾಗೇಶ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು.  


ಮಂಗಳವಾರ, ಮಾರ್ಚ್ 9, 2021

 ಹನಿ ನೀರಾವರಿ ಘಟಕಕ್ಕೆ ಅರ್ಜಿ ಆಹ್ವಾನ 

ಯಾದಗಿರಿ.ಮಾ.09 (ಕ.ವಾ):- 2020-21 ನೇ ಸಾಲಿನ ಪ್ರಧಾನ ಮಂತ್ರಿಗಳ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಮತ್ತು ಹನಿ ನೀರಾವರಿ ಘಟಕ ಅಳವಡಿಕೆಗೆ ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಆಸಕ್ತ ರೈತರು ಸಂಬAಧಿಸಿದ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಂಟಿ ಕೃಷಿನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


 ಎಸ್‌ಸಿಪಿ ಮತ್ತು ಟಿಎಸ್‌ಪಿ ಮಾಸಿಕ ಪ್ರಗತಿ ಪರಿಶೀಲನಾ ಸಭೆ

ಅನುದಾನ ಬಳಸಿ ನಿಗದಿತ ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ

                                              :ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.  




ಯಾದಗಿರಿ.ಮಾ.09 (ಕ.ವಾ):- ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯ ಅನುದಾನ ಬಳಕೆಯಲ್ಲಿ ಶೇ.100ರಷ್ಟು ಗುರಿ ಸಾಧಿಸಬೇಕು. ಅನುದಾನ ಬಳಸಲು ಮಾರ್ಚ್ 31 ರವರೆಗೆ ಕಾಯದೇ ಕೂಡಲೇ ಗುರಿಯನ್ನು ಸಾಧಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. 

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪ ಯೋಜನೆ (ಟಿಎಸ್‌ಪಿ) ಮಾಸಿಕ, ದೌರ್ಜನ್ಯ ನಿಯಂತ್ರಣ, ಅಲೆಮಾರಿ ಕೋಶ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಅನುದಾನ ಬಿಡುಗಡೆಯಾಗಿದೆ. ಫಲಾನುಭವಿಗಳ ಪಟ್ಟಿ ಸಿದ್ಧವಿರುವುದರಿಂದ ಅನುದಾನ ಬಳಸಬೇಕು. ಅಡಚಣೆ ಇದ್ದರೆ ನೇರವಾಗಿ ತಮ್ಮ ಗಮನಕ್ಕೆ ತರಬೇಕು. ಸಂಬAಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು.

ಎಲ್ಲಾ ಇಲಾಖೆಯವರು ಕಟ್ಟುನಿಟ್ಟಾಗಿ ವಿಶೇಷ ಘಟಕ ಹಾಗೂ ಗಿರಿಜನ ಉಪ ಯೋಜನೆಯ ಕಾಮಗಾರಿಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅನುದಾನ ಕೈತಪ್ಪಿ ಹೋಗಬಾರದು. ವರ್ಷದ ಕೊನೆಯವರೆಗೆ ಅನುದಾನ ವೆಚ್ಚ ಮಾಡಲು ಕಾಯದೆ ಅನುದಾನ ಬಂದ ನಂತರ ಅಥವಾ ಆಡಳಿತಾತ್ಮಕ ಮಂಜೂರಾತಿ ಸಿಕ್ಕ ತಕ್ಷಣ ಅನುಷ್ಠಾನಕ್ಕಾಗಿ ಕ್ರಮ ಕೈಗೊಂಡು ಸರ್ಕಾರದ ಆಶಯದಂತೆ ಅಭಿವೃದ್ಧಿಗೆ ಶ್ರಮಿಸಬೇಕೆಂದು ತಿಳಿಸಿದರು.

ಎಸ್‌ಸಿಪಿ ಹಾಗೂ ಟಿಎಸ್‌ಪಿಯ ಯೋಜನೆಯಡಿ ನೀಡಲಾದ ಕ್ರಿಯಾ ಯೋಜನೆಯಂತೆ ಆಯಾ ಇಲಾಖೆಯವರು ಅನುಷ್ಟಾನಕ್ಕೆ ಕ್ರಮ ಕೈಗೊಂಡು ಪ್ರಗತಿ ವರದಿಯನ್ನು ಪ್ರತಿ ತಿಂಗಳು ಸಮಾಜಕಲ್ಯಾಣ ಇಲಾಖೆಗೆ ಕಳುಹಿಸಬೇಕೆಂದು ಸೂಚನೆ ನೀಡಿದರು.

ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ನಿಯಂತ್ರಣ ಸಮಿತಿ ಸಭೆ

ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡದ ದೌರ್ಜನ್ಯ ತಡೆ ಕಾಯ್ದೆಯ ಜಿಲ್ಲಾ ಜಾಗೃತಿ ಹಾಗೂ ಉಸ್ತುವಾರಿ ಸಮಿತಿ ಸಭೆಯ ನಡೆಸಲಾಯಿತು.

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂತ್ರಸ್ತರ ಸಮಸ್ಯೆ, ಅವರಿಗೆ ನೀಡಿರುವ ಪರಿಹಾರ, ನ್ಯಾಯಾಲಯ ಪ್ರಕರಣಗಳ ಕುರಿತಂತೆ ಅವರಿಗಿರುವ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. 

ದೌರ್ಜನ್ಯ ತಡೆ ಕಾಯ್ದೆ ಪ್ರಕರಣಗಳಲ್ಲಿ ಸಂತ್ರಸ್ತರು ಕೋರ್ಟಿಗೆ ಬಂದಿದ್ದಾಗ ಸರ್ಕಾರಿ ಅಭಿಯೋಜಕರು ನೀಡುವ ಹಾಜರಾತಿ ಪ್ರತಿಯನ್ನು ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ವಾರಕ್ಕೊಮ್ಮೆ ಸಂಗ್ರಹಿಸಿ ಸಂಬAಧಿತರಿಗೆ ಪ್ರಯಾಣಭತ್ಯೆ  ಮೊತ್ತವನ್ನು ವಿತರಿಸಲು ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು. 

ಅಲೆಮಾರಿ ಕೋಶ ಸಭೆ:ಜಿಲ್ಲೆಯಲ್ಲಿ ಒಟ್ಟು 42,581 ಜನ ಅಲೆಮಾರಿ ಜನಸಂಖ್ಯೆ ಇದ್ದು, ಇವರಿಗೆ ನಿವೇಶನ ಹಂಚಿಕೆಗಾಗಿ ಜಿಲ್ಲೆಯ ಹಂಚಿನಾಳ, ಮುಡಬೂಳ, ಖಾನಪೂರ ಹಾಗೂ ಬೇವಿನಹಳ್ಳಿ ಗ್ರಾಮಗಳಲ್ಲಿ ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ನಿವೇಶನಕ್ಕಾಗಿ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದರು.

ಜಿಲ್ಲೆಯಲ್ಲಿ ಗೊಲ್ಲ, ಹೆಳವ, ಜೋಗಿ, ಬೈಲತರ್, ಶಿಕ್ಕಲಿಗರ್, ಘಿಸಾಡಿ, ಗೊಂದಳಿ, ದುರ್ಗಮುರ್ಗ, ಕಟಬು, ದರ್ವೆಶ್, ಬುಡ್ಬುಕಿ ಜನಾಂಗದವರು ವಾಸವಾಗಿದ್ದಾರೆ ಎಂದು ಅವರು ವಿವರಿಸಿದರು. 

ಅಲೆಮಾರಿ ವಿದ್ಯಾರ್ಥಿಗಳಿಗಾಗಿ 2 ರಿಂದ 10 ನೇ ತರಗತಿ ವರೆಗಿನ ಸುಮಾರು 1,563 ವಿದ್ಯಾರ್ಥಿಗಳಿಗೆ 33.26 ಲಕ್ಷ ರೂ. ಪ್ರೋತ್ಸಾಹಧನ ಜಮಾ ಮಾಡಲಾಗಿದೆ ಎಂದು ಜಿಲ್ಲಾ ಸಮಾಜದ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಾಗವಾನ ಸೋನಾವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಚನ್ನಬಸವ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭು ದೊರೆ, ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತೆ ಶ್ವೇತಾ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್. ಸೇರಿದಂತೆ ದೌರ್ಜನ್ಯ ಸಮಿತಿಯ ನಾಮನಿರ್ದೇಶನ ಸದಸ್ಯರಾದ ಖಂಡಪ್ಪ ದಾಸನ್, ನಾಗಣ್ಣ ಬಡಿಗೇರ, ರಮೇಶ ದೊರೆ, ರಮಾದೇವಿ ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.    

ಸೋಮವಾರ, ಮಾರ್ಚ್ 8, 2021



ಚಂದನ ವಾಹಿನಿಯಲ್ಲಿ ಸರಕಾರದ ವಿವಿಧ ಕಾರ್ಯಕ್ರಮಗಳ ಪ್ರಸಾರ

ಯಾದಗಿರಿ,ಮಾ8 (ಕ.ವಾ):- ಸಮಾಜ ಕಲ್ಯಾಣ ಇಲಾಖೆ ಮತ್ತು ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ವರ್ಗಗಳ ಸಮಗ್ರ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸುತ್ತಿರುವ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಕುರಿತು ಕಾರ್ಯಕ್ರಮಗಳ ದೂರದರ್ಶನ ಚಂದನವಾಹಿನಿಯಲ್ಲಿ ಮಾರ್ಚ್ 8 ರಿಂದ ಆರಂಭವಾಗಲಿದ್ದು,  ಸಂಜೆ 7.30 ರಿಂದ 8.30 ವರೆಗೆ ಪ್ರತಿ ಸೋಮವಾರ ದಿಂದ ಗುರುವಾರದ ವರೆಗೆ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶ ಹೊಂದಿದು. ಸಮಾಜ ಕಲ್ಯಾಣ ಇಲಾಖೆಯ ನಿಗಮಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ನಡೆಸಿಕೊಡಲಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಾಳೆ ವಾಲ್ಮೀಕಿ ಮುಖಂಡರ ಸಭೆ

ಯಾದಗಿರಿ,ಮಾ8 (ಕ.ವಾ):- ಜಿಲ್ಲಾ  ಮಟ್ಟದ ವಾಲ್ಮೀಕಿ ಭವನ ನಿರ್ವಹಣೆಗೆ ಮತ್ತು ಜಿಲ್ಲಾ ಮಟ್ಟದ ನಾಮನಿರ್ದೇಶಿತ ಸದಸ್ಯರ ಆಯ್ಕೆಗಾಗಿ ಇದೇ ಮಾರ್ಚ್ ರಂದು 9 ರಂದು ಬೆಳ್ಳಿಗೆ: 10.30 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ಕರೆಯಲಾಗಿದ್ದು ವಾಲ್ಮೀಕಿ ಸಮಾಜ ಮತ್ತು ಸಂಘಟನೆಯ ಮುಖಂಡರು ಜಿಲ್ಲಾ ಮಟ್ಟದ ಸಭೆಗೆ ಹಾಜರಾಗಲು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಭು ದೊರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


 ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ ಸಚಿವ ಪ್ರಭು ಚವ್ಹಾಣ್

 

ಯಾದಗಿರಿ,ಮಾ8 (ಕ.ವಾ):- ಕೋವಿಡ್ ಸಂಕಷ್ಟದ ಸಮಯದಲ್ಲೂ ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಜನರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹರ್ಷವ್ಯಕ್ತಪಡಿಸಿದ್ದಾರೆ. ಬೀದರ್ ಮತ್ತು ಯಾದಗಿರಿ ಜಿಲ್ಲೆಯ ಜನರು ಉದ್ಯೋಗ ಅರಸಿ ದೂರದ ಬೆಂಗಳೂರು, ಮುಂಬೈ, ಹೈದ್ರಾಬಾದಗೆ ತೆರಳುತ್ತಿದ್ದರು. ಬೀದರ್ ನಲ್ಲಿ ಕೃಷಿ ಉಪಕರಣಗಳ ತಯಾರಿಕಾ ಕ್ಲಸ್ಟರ್ ನಲ್ಲಿ ಬರುವ ಕೈಗಾರಿಕೆಗಳಿಗೆ ಪ್ರೋತ್ಸಾಹ ಪ್ಯಾಕೇಜ್ ಘೋಷಣೆ ಮಾಡಿದ್ದು ಬೀದರ್ ಜಿಲ್ಲೆಯ ಅಭಿವೃದ್ಧಿಗೆ ನಾಂದಿ ಹಾಡಿದಂತಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

 

ನಮ್ಮ ಜನರು ನಮ್ಮಲ್ಲಿಯೇ ಉದ್ಯೋಗ ಕಂಡುಕೊಳ್ಳುವ ಉದ್ದೇಶದಿಂದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ಹಾಗೂ ಕೈಗಾರಿಕಾ ಸಚಿವರಾದ ಜಗದಿಶ್ ಶೆಟ್ಟರ್ ಅವರೊಂದಿಗೆ ಹಲವುಬಾರಿ ಚರ್ಚೆ ನಡೆಸಿದ್ದೆ.  ಬಜೆಟ್ ನಲ್ಲಿ ಯಾದಗಿರಿ ಜಿಲ್ಲೆಯ ಕಡೆಚೂರಿನಲ್ಲಿ ರೂ.1,478 ಕೋಟಿ ವೆಚ್ಚದಲ್ಲಿ "ಬಲ್ಕ್ ಡ್ರಗ್ ಪಾರ್ಕ" ಅಭಿವೃಧಿ ಆಗುತ್ತಿದ್ದು ಈ ಭಾಗದ ಸಾವಿರಾರು ಜನರಿಗೆ ಉದ್ಯೋಗಾವಕಾಶ ದೊರೆಯಲಿದೆ. ಬೇರೆ ಬೇರೆ ಜಿಲ್ಲೆಗಳಿಗೆ ಹೋಗಿ ಬದುಕು ಕಟ್ಟಿಕೊಳ್ಳಲು ನಮ್ಮ ಭಾಗದ ಯುವಜನೆತೆ ಸಾಕಷ್ಟು ಶ್ರಮ ಪಡುತ್ತಿದ್ದರು. ಈ ಹೊಸ ಯೋಜನೆಗಳ ಅನುಷ್ಟಾನದಿಂದ ಜಿಲ್ಲೆಯ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

 

ನಂಜುಡಪ್ಪ ವರದಿ ಅನ್ವಯ ಹಿಂದುಳಿದ ತಾಲೂಕುಗಳಲ್ಲಿ ಪ್ರಾದೇಶಿಕ ಅಸಮಾನತೆ ನಿವಾರಿಸಲು 2021-22 ಸಾಲಿಗೆ ರೂ. 3000 ಕೋಟಿ ನೀಡಲಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರೂ.1,500 ಕೋಟಿಗಳನ್ನು ನೀಡಿದ್ದು ಈ ಭಾಗಕ್ಕೆ ಅಭಿವೃದ್ಧಿಯ ಹೊಸ ಪರ್ವ ಆರಂಭವಾದAತಾಗಿದೆ. ಅಲ್ಲದೇ ಕಲಬುರಗಿ ಜಿಲ್ಲೆಯ ಫಿರೋಜಾಬಾದನಲ್ಲಿ 500 ಮೆಗಾವ್ಯಾಟ್ ಸಾಮರ್ಥದ ಸೌರಶಕ್ತಿ ಪಾರ್ಕ್ ಸ್ಥಾಪನೆ ಆಗಲಿದ್ದು ಕಲ್ಯಾಣ ಕರ್ನಾಟಕ ಮತ್ತಷ್ಟು ಬೆಳಗಲಿದೆ.

 

ಬಸವ ಕಲ್ಯಾಣದಲ್ಲಿ ರೂ.500 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪದ ಕೆಲಸಕ್ಕೆ ಈಗಾಗಲೇ ರೂ.200 ಕೋಟಿ ಬಿಡುಗಡೆ ಮಾಡಿದ್ದು ಅನುಭವ ಮಂಟಪದ ಕಾಮಗಾರಿಗೆ ವೇಗ ದೊರೆಯಲಿದೆ. ಇದೇ ಸಂದರ್ಭದಲ್ಲಿ ಜಗಜ್ಯೋತಿ ಬಸವಣ್ಣನವರ ಜನ್ಮಸ್ಥಳ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದ ಅಭಿವೃದ್ಧಿಗೆ ವಿಶೇಷವಾಗಿ ರೂ.5 ಕೋಟಿ ನೀಡಲಾಗಿದೆ ಎಂದು ಸಚಿವರು ಹೇಳಿದರು.

 

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬಜೆಟ್ ನಲ್ಲಿ ಒತ್ತು ನೀಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಕಲ್ಯಾಣ ಕರ್ನಾಟಕದ ಜನತೆಯ ಪರವಾಗಿ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

 

 





ವಿಶ್ವ ಗ್ಲಾಕೋಮಾ ಸಪ್ತಾಹ

ದೃಷ್ಠಿ ಬಗ್ಗೆ ಕಾಳಜಿ ವಹಿಸಲು ಡಾ.ಇಂದುಮತಿ ಸಲಹೆ

ಯಾದಗಿರಿ,ಮಾ8 (ಕ.ವಾ):- ಜಗತ್ತು ಪ್ರಕಾಶಿಸುತ್ತಿದೆ ಅದನ್ನು ನೋಡುವ ನಮ್ಮ ಕಣ್ಣುಗಳ ಬಗ್ಗೆ ಕಾಳಜಿ ವಹಿಸಿವುದು ಅತಿ ಮಖ್ಯವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ ಸಲಹೆ ನೀಡಿದರು.  

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ) ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಕಚೇರಿಯಲ್ಲಿ ಸೋಮವಾರ ನಡೆದ ರಾಷ್ಟಿçÃಯ ಅಂಧತ್ವ ಕಾರ್ಯಕ್ರಮದಡಿಯಲ್ಲಿ  ಮಾರ್ಚ್ 7 ರಿಂದ 13 ರವರೆಗೆ ನಡೆಯುತ್ತಿರುವ ವಿಶ್ವ ಗ್ಲಾಕೋಮಾ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಪ್ತಾಹದ ಘೋಷ ವಾಕ್ಯವಾದ ಜಗತ್ತು ಪ್ರಕಾಶಿಸುತ್ತಿದೆ ನಿಮ್ಮ ದೃಷ್ಟಿಯನ್ನು ಉಳಿಸಿ ಎಂಬAತೆ ನಡೆದುಕೊಳ್ಳಬೇಕಾದರೆ ಕಲಿಕೆ ಬಹಳ ಮುಖ್ಯ. ಕಣ್ಣು ನೋಡಲು ಅಷ್ಟೇ ಆದರೆ ನೋಡುವಂತೆ ಪ್ರೇರೆಪಿಸುವುದು ಬುದ್ಧಿ ಹಾಗಾಗಿ ಸಮಾಜದ ಪ್ರತಿಯೋಬ್ಬರು ಶಿಕ್ಷಿತರಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ಭಗವಂತ ಅನ್ವರ, ಅಂಧತ್ವ ನಿಯಂತ್ರಣಕ್ಕೆ ಸರಕಾರ ದೃಷ್ಠಿ ದಿನಾಚರಣೆ, ನೇತ್ರದಾನ ಕುರಿತು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ  ಎಂದು ತಿಳಿಸಿದರು.

ಗ್ಲಾಕೋಮಾ ಎಂಬುವುದು ನಮ್ಮ ಕಣ್ಣುಗಳನ್ನು ನಮ್ಮಗೆ ಗೊತ್ತಾಗದಂತೆ ಕದಿಯುತ್ತದೆ. ಇದಕ್ಕೆ ನಾವು ನಮ್ಮ ಕಣ್ಣಗಳ ಕುರಿತು ಸಂರಕ್ಷಸಿವುದು ಅತಿ ಅಗತ್ಯವಾಗಿದೆ ಎಂದರು. 

ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಶಸ್ತçಚಿಕಿತ್ಸಕರು ಡಾ.ಬಸವಸ್ವಾಮಿ ಹಿರೇಮಠ, ರಘು ಮಮೋರಿಯಲ್ ಆಸ್ಪತ್ರೆಯ ನೇತ್ರ  ತಜ್ಞರಾದ ಡಾ.ಅಪರ್ಣಾ ರಾಜೇಂದ್ರ, ಜಿಲ್ಲಾ ರೋಗವಾಹಕ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಲಕ್ಷಿö್ಮÃಕಾಂತ, ಜಿಲ್ಲಾ ಆರ್.ಸಿ.ಹೆಚ್‌ಅಧಿಕಾರಿ ಡಾ. ಸೂರ್ಯಪ್ರಕಾಶ.ಎಮ್.ಕಂದಕೂರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮುಬಷಿರ ಅಹ್ಮದ ಸಾಜೀದ, ಜಿಲ್ಲಾ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ರಾಧಿಕಾ ಬೂಬ್, ಯಾದಗಿರಿ ತಾಲ್ಲೂಕ ಆರೋಗ್ಯ ಅಧಿಕಾರಿ ಡಾ. ಹಣಮಂತ ರಡ್ಡಿ,ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿ ಉಪನ್ಯಾಸಕರಾದ ರೆಹಿತಾ ಉನ್ನಿಸ್,ಅಶೋಕ ಮಡಿವಾಳ ಹಾಗೂ ವಿದ್ಯಾರ್ಥಿನಿಯರು ಸೇರಿದಂತೆ ಇತರರು ಇದ್ದರು.





ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಅಪಾರ                                                

                                             ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ.ಫೆ.08 (ಕ.ವಾ):- ಸದೃಢ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಕೊಡುಗೆ ಅಪಾರ. ಸ್ತ್ರೀಯರು ಪ್ರತಿಯೊಂದು ರಂಗದಲ್ಲೂ ಬೆಳವಣಿಗೆ ಹೊಂದಿ ಸಮಾಜದ ಕೈಗನ್ನಡಿಯಾಗಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಹೇಳಿದರು. 

ನಗರದ ಬಾಲಾಜಿ ಕಲ್ಯಾಣ ಮಂಟದಲ್ಲಿ ಸೋಮವಾರ ತೋಟಗಾರಿಕೆ, ಕೃಷಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಫಲ - ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಹಾಗೂ ಅಂತರ ರಾಷ್ಟಿçÃಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮತನಾಡಿದರು.


ಇಂದಿನ ದಿನಗಳಲ್ಲಿ ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಛಾಪು ಮೂಡಿಸುತ್ತಿದ್ದಾರೆ. ಪುರುಷರಿಗೆ ಸರಿ ಸಮಾನಾಗಿ ಹೆಜ್ಜೆ ಹಾಕುತ್ತಿರುವ ಮಹಿಳೆಯರು, ಕುಟುಂಬ ನಿರ್ವಹಣೆಯಲ್ಲಿ ಅತ್ಯಂತ ಮಹತ್ವದ ಜವಾಬ್ದಾರಿ ಹೊರುತ್ತಿದ್ದಾರೆ ಎಂದರು. 


ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುವುದನ್ನು ರೂಢಿಸಿಕೊಂಡು ಕುಟುಂಬಗಳ ನಿರ್ವಹಣೆಯನ್ನು ಸಮರ್ಥವಾಗಿ ಮಾಡುವವರಾಗಬೇಕು ಹಾಗೂ ಮಹಿಳೆಯರು ವೃತ್ತಿ- ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಆಗ ಯಾವುದೇ ಉದ್ಯಮ ಆರಂಭಿಸಿದರೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಮಹಿಳೆಯರಿಗೆ ಕಿವಿ ಮಾತು ಹೇಳಿದರು.


ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಮಾತನಾಡಿ, ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಅವರಂತಹ ವೀರ ಮಹಿಳೆಯರ ಆದರ್ಶವನ್ನು ಮಹಿಳೆಯರು ಮೈಗೂಡಿಸಿಕೊಳ್ಳಬೇಕು ಹಾಗೂ ಮಹಿಳೆಯರು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾದಾಗ ಮಾತ್ರ ಸಮಗ್ರ ಸಮಾಜದ ಅಭಿವೃದ್ಧಿ ಸಾಧ್ಯ ಎಂದು ಅವರು ಹೇಳಿದರು.


ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಎಸ್ ಪಾಟೀಲ್ ಯಡಿಯಾಪೂರ ಅವರು ಮಾತನಾಡಿ, ಕೊರೋನಾ ಸಮಯದಲ್ಲಿ ಜಿಲ್ಲೆಯ ವೈದ್ಯರು, ನರ್ಸ ಹಾಗೂ ಆಶಾ ಕಾರ್ಯಕರ್ತೆಯ, ಅಂಗನವಾಡಿ ಕಾರ್ಯಕರ್ತೆಯರ ಸೇವೆಯನ್ನು ಜಿಲ್ಲೆಯ ಜನರು ಮರೆಯುವಂತಿಲ್ಲ ಎಂದು ಹೇಳಿದರು.


ಇದೇ ಸಂದರ್ಭದಲ್ಲಿ ನಗರದ ಕನಕದಾಸ ವೃತ್ತದಿಂದ ಬಾಲಾಜಿ ಕಲ್ಯಾಣ ಮಂಟಪದವರೆಗೆ ಫಲ - ಪುಷ್ಪ ಪ್ರದರ್ಶನ ಮತ್ತು ಸಾವಯವ ಸಿರಿಧಾನ್ಯ ಮೇಳ ಜಾಥವನ್ನು ನಡೆಸಲಾಯಿತು. 

ಈ ಸಂದರ್ಭದಲ್ಲಿ ಕರಕುಶಲ  ಮತ್ತು ಸಾವಯವ ಸಿರಿಧಾನ್ಯಗಳ ಮೇಳಗಳನ್ನು ಸಹ ಆಯೋಜಿಸಲಾಗಿತ್ತು.


ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ:

ರಾಧ ಮುಣ್ಣೂರ, ಶಹಾಪುರ ಅಂಗನವಾಡಿ ಮೇಲ್ವಿಚಾರಕಿ ಮುತ್ತವ್ವ, ಗುರುದೇವಿ ಹಿರೇಮಠ, ಅನಿತಾ, ರೇಣುಕಾ, ದೀಲಿಪ್ ಕುಮಾರ್ ತಂ/ ರವಿ ಕುಮಾರ್, ವಿವೇಕನಂದ ತಂ/ ವಿಜಯಕುಮಾರ್, ಪ್ರೇರಣ ತಂ/ ಶಿವಾನಂದ ಬಸವೇಶ್ವರ, ಪ್ರದೀಪ್ ತಂ/ ರವಿಕುಮಾರ್, ಅಮರನಾಥ ತಂ/ ದುರ್ಗಾಪ್ಪ, ಮನೀಷ್ ತಂ/ ಅಶೋಕ, ಸುವರ್ಣ ತಂ/ ಜುಮ್ಮಣ್ಣ, ಪಲ್ಲವಿ ತಂ/ಶಿವಲಿAಗಪ್ಪ  ಸೇರಿದಂತೆ ಇತರರಿಗೆ ಕಾರ್ಯಕ್ರಮದಲ್ಲಿ ಸನ್ಮಾನ ಮಾಡಲಾಯಿತು.


ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಗಿರಿಜಮ್ಮ ರೋಟ್ನಡಗಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶಿವಲಿಂಗಪ್ಪ ಪುಟಗಿ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಮರದೀಪ್ ಎಮ್, ಜಿಲ್ಲಾ ಪಂಚಾಯತ್ ಸದಸ್ಯರಾದ ಅನಿತಾ ಬಾಯಿ ರಾಠೋಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ದೇವಿಕಾ ಆರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪ್ರಭಾಕರ್ ಕವಿತಾಳ, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ದತ್ತಾತ್ರೇಯ ಪಾಟೀಲ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಶ್ವೇತಾ ತಾಳೆಮರದ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು. 


ಶುಕ್ರವಾರ, ಮಾರ್ಚ್ 5, 2021

     




ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಕುರಿತು ಕಾರ್ಯಾಗಾರ

ಕ್ಷಯರೋಗಕ್ಕೆ 6 ತಿಂಗಳ ಚಿಕಿತ್ಸಾ ವಿಧಾನ ಪೂರ್ಣಗೊಳಿಸಿದರೆ ಸಂಪೂರ್ಣ ಗುಣಮುಖ                                                            

ಯಾದಗಿರಿ,ಮಾ 05 (ಕ.ವಾ):- ಕ್ಷಯರೋಗಕ್ಕೆ 6ತಿಂಗಳ ಚಿಕಿತ್ಸಾ ವಿಧಾನ ಪೂರ್ಣಗೊಳಿಸಿದರೆ ಕ್ಷಯರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಲಕ್ಷಿö್ಮÃಕಾಂತ ಅವರು ತಿಳಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಕಚೇರಿಯಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಾದಗಿರಿ ಇವರ ಸಹಯೋಗದಲ್ಲಿ ಗುರುವಾರ ನಡೆದ ಖಾಸಗಿ ಔಷಧ ವಿತರಕರಿಗೆ ಕ್ಷಯರೋಗ ಕುರಿತು ಮಾತ್ರೆಗಳನ್ನು ವಿತರಿಸುವ, ರಾಷ್ಟಿçÃಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮದ ಕಾರ್ಯಾಗಾರದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಒಬ್ಬ ಕ್ಷಯರೋಗಿಯು ಸಂಪೂರ್ಣವಾಗಿ ಗುಣಮುಖರಾಗಲು ನಿರಂತರ 6 ತಿಂಗಳು ಚಿಕಿತ್ಸೆ ಪಡೆದುಕೊಳ್ಳಬೇಕು, ಕ್ಷಯರೋಗವು ಒಂದು ಸಾಂಕ್ರಾಮಿಕ ರೋಗವಾಗಿರುವದರಿಂದ ಇದರ ಬಗ್ಗೆ ಎಲ್ಲರೂ ಜಾಗೃತರಾಗಿ ಕಾಳಜಿಯನ್ನು ವಹಿಸಬೇಕು ಎಂದು ಹೇಳಿದರು. 

ಕ್ಷಯರೋಗಕ್ಕೆ ಸಂಬAಧಪಟ್ಟAತೆ ಬಹಳಷ್ಟು ಜನರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪೆಡೆಯುತ್ತಿದ್ದು, ಅವರು ಖಾಸಗಿ ಔಷಧಿ ಅಂಗಡಿಗಳ ಮಾತ್ರೆಗಳನ್ನು ತೆಗೆದುಕೊಳ್ಳುವವರ ಮಾಹಿತಿ ಸಂಗ್ರಹಣೆ ಮಾಡಿಕೊಂಡು ಪ್ರತಿ ತಿಂಗಳು ಜಿಲ್ಲಾ ಕ್ಷಯರೋಗ ನಿರ್ಮೂಲನಾ ಘಟಕಕ್ಕೆ ನೀಡಬೇಕೆಂದು ವಿತರಕರಿಗೆ ತಿಳಿಸಿದರು.

ಒಬ್ಬ ಕ್ಷಯರೋಗಿಯನ್ನು ಕಂಡು ಹಿಡಿದು ಮಾಹಿತಿ ನೀಡಿದರೆ ಅಂತಹವರಿಗೆ ಸರ್ಕಾರದಿಂದ 500 ರೂ. ಮತ್ತು ಕ್ಷಯರೋಗಿಗೆ 6 ತಿಂಗಳ ಚಿಕಿತ್ಸೆ ನೀಡಿರುವಂತಹ ವ್ಯಕ್ತಿಗೆ 1000 ರೂ. ಸಹಾಯಧನವನ್ನು ನಿಕ್ಷಯ ಪೋಷಣ ಯೋಜನೆಯಡಿ ನೀಡಲಾಗುವುದು ಎಂದು ಅವರು ಘೋಷಿಸಿದರು.

ಕಾರ್ಯಾಗಾರವನ್ನು ಸಹಾಯಕ ಔಷಧ ನಿಯಂತ್ರಣಾಧಿಕಾರಿ ಪುಷ್ಪಪ್ರಿಯಾ ಉದ್ಘಾಟಿಸಿದರು, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಭಗವಂತ ಅನ್ವಾರ ಸೇರಿದಂತೆ ಇತರರು ಇದ್ದರು.





ಮೊಬೈಲ್ ಮೂಲಕ ಗುರುತಿನ ಚೀಟಿ ಡೋನ್‌ಲೋಡ್ ಮಾಡಿಕೊಳ್ಳಲು ಅವಕಾಶ

ಯಾದಗಿರಿ,ಮಾ 05 (ಕ.ವಾ):- ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (2020ರ ನವೆಂಬರ್ 18 ರಿಂದ ಡಿಸೆಂಬರ್ 17ರವರೆಗೆ) ಸಂದರ್ಭದಲ್ಲಿ ಹೊಸದಾಗಿ ಮತದಾರರ ಯಾದಿಯಲ್ಲಿ ನೋಂದಣಿಯಾದ 18-19 ವರ್ಷದ ಯುವ ಮತದಾರರಿಗೆ ತಮ್ಮ ಮತದಾರರ ಗುರುತಿನ ಚೀಟಿಯನ್ನು ಆಂಡ್ರಾಯ್ಡ್ ಮೊಬೈಲ್ (ಂಟಿಜಡಿoiಜ ಒobiಟe) ನಲ್ಲಿ ಡೌನ್‌ಲೋಡ್  ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಅರ್ಹ ಮತದಾರರು ಇದರ ಸದುಪಯೋಗ ಪಡೆಯಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಇದಲ್ಲದೇ ತಿತಿತಿ.ಟಿvsಠಿ.iಟಿ ಸಹ ತಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತದಾರರ ಗುರುತಿನ ಚೀಟಿಯನ್ನು ಡೌನ್‌ಲೋಡ್  ಮಾಡಿಕೊಳ್ಳಬಹುದಾಗಿದೆ. 

 ಮತದಾರರ ಗುರುತಿನ ಚೀಟಿಯನ್ನು ಡೌನ್‌ಲೋಡ್  ಮಾಡುವ ಕುರಿತು ತಮ್ಮ ಮತಗಟ್ಟೆ ವ್ಯಾಪ್ತಿಯ ಯುವ ಮತದಾರರಿಗೆ ಮತಗಟ್ಟೆ ಹಂತದ ಅಧಿಕಾರಿಗಳು (ಃಐಔ) ಇದೇ ಮಾರ್ಚ್ 6 ಹಾಗೂ 7 ರಂದು ಎಲ್ಲಾ ಮತಗಟ್ಟೆಗಳಲ್ಲಿ   ಮಾಹಿತಿ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.  

      

ಸಾಲ ಮರುಪಾವತಿಗೆ ಸೂಚನೆ

ಯಾದಗಿರಿ,ಮಾ 05 (ಕ.ವಾ):- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಎನ್.ಎಮ್.ಡಿ.ಎಫ್.ಸಿ ನೇರಸಾಲ, ಶ್ರಮಶಕ್ತಿ, ಸ್ವಾವಲಂಬನಾ, ಪಶುಸಂಗೋಪನೆ, ಮಹಿಳಾ ಸ್ವ-ಸಹಾಯ ಸಂಘಗಳು, ಭೂ-ಖರೀದಿ ಯೋಜನೆ ಹಾಗೂ ಅರಿವು ವಿದ್ಯಾಭ್ಯಾಸ ಸಾಲದ ಯೋಜನೆಯಡಿ ಸಾಲ ಪಡೆದ ಫಲಾನುಭವಿಗಳು ಇದೇ ಮಾರ್ಚ್ 31ರೊಳಗಾಗಿ  ಮರುಪಾವತಿಸುವಂತೆ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾರ್ಚ್ 4 ರಿಂದ 31ರ ವರೆಗೆ  ಸಾಲ ವಸೂಲಾತಿ/ಮರುಪಾವತಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವಿವಿಧ ಯೋಜನಗಳಡಿಯಲ್ಲಿ ಸಾಲ ಪಡೆದ ಪಲಾನುಭವಿಗಳು ತಮ್ಮ ಸಾಲದ ಬಾಕಿ ಮೊತ್ತವನ್ನು ಜಿಲ್ಲಾ ಕಚೇರಿಯಲ್ಲಿ ಮರುಪಾವತಿಸಿ ಸಾಲ ವಸೂಲಾತಿ ಅಧಿಕಾರಿಗಳಿಂದ ರಸೀದಿಯನ್ನು ಪಡೆದುಕೊಳ್ಳಲು ಸೂಚಿಸಿದ್ದಾರೆ. 



ಬಸ್ ಪಾಸ್ ಪಡೆಯಲು ಮಾರ್ಚ್ 31 ಕಡೆಯ ದಿನ

ಯಾದಗಿರಿ,ಮಾ 05 (ಕ.ವಾ):-2021 ಸಾಲಿನಲ್ಲಿ ವಿದ್ಯಾರ್ಥಿ ಉಚಿತ ರಿಯಾಯಿತಿ ಬಸ್ ಪಾಸ್ ಪಡೆದುಕೊಳ್ಳವ ವಿದ್ಯಾರ್ಥಿಗಳು ಇದೇ ಮಾರ್ಚ್ 31ರಒಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಖುದ್ದಾಗಿ ಆನ್‌ಲೈನನಲ್ಲಿ ಸರ್ಕಾರ ನಿಗದಿಪಡಿಸಿರುವ ಸೇವಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಉಚಿತ ರಿಯಾಯಿತಿ ಬಸ್ ಪಾಸ್ ಪಡೆದುಕೊಳ್ಳುವ ವಿದ್ಯಾರ್ಥಿಗಳು ಆನ್‌ಲೈನ್ ಸೇವಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ 07 ದಿನಗಳೊಳಗಾಗಿ ಸಂಬAಧಪಟ್ಟ ಬಸ್ ನಿಲ್ದಾಣದ ಪಾಸ್ ಕೌಂಟರನಲ್ಲಿ ಖುದ್ದು ಹಾಜರಾಗಿ ಬಸ್ ಪಾಸ್‌ನ್ನು ಪಡೆದುಕೊಳ್ಳಬೇಕು. ಒಂದು ವೇಳೆ ಸೇವಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿದ 07 ದಿನಗಳೊಳಗಾಗಿ ಬಸ್ ನಿಲ್ದಾಣದ ಪಾಸ್ ಕೌಂಟರನಲ್ಲಿ ಸಲ್ಲಿಸದ್ದಿದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುವುದೆಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಯಾದಗಿರಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಪಿ. ಶ್ರೀಹರಿಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ನಾಳೆ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ

ಯಾದಗಿರಿ ಮಾ.05(ಕ.ವಾ): ಪಶುಸಂಗೋಪನೆ,ಅಲ್ಪ ಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಅಧ್ಯಕ್ಷತೆಯಲ್ಲಿ ಇದೇ ಮಾರ್ಚ್ 6ರಂದು ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದ್ದು, ಸಂಬAಧಿಸಿದ ಅಧಿಕಾರಿಗಳು ಸಭೆಗೆ ಹಾಜರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










ಗುರುವಾರ, ಮಾರ್ಚ್ 4, 2021

 ಮಾರ್ಚ್ 6 ರಂದು ನಮ್ಮ ನಡಿಗೆ -ತ್ಯಾಜ್ಯ ಮುಕ್ತ ಕಡೆಗೆ ಕಾರ್ಯಕ್ರಮ

 ಯಾದಗಿರಿ ಮಾ 04.(ಕ.ವಾ):- ಸ್ವಚ್ಛ ಭಾರತ ಮಿಷನ್ (ಗ್ರಾಮೀಣ) ಯೊಜನೆಯಡಿಯಲ್ಲಿ ನಮ್ಮನಡಿಗೆ –ತ್ಯಾಜ್ಯ ಮುಕ್ತ ಕಡೆಗೆ ಎಂಬ ಜಿಲ್ಲಾ ಮಟ್ಟದ ಕಾರ್ಯಕ್ರರ್ಮವನ್ನು ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ, ಯಾದಗಿರಿ, ಗ್ರಾಮ ಪಂಚಾಯತ ಮುದ್ನಾಳ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ಮಾರ್ಚ್ 6 ರಂದು ಬೆಳಿಗ್ಗೆ 10 ಗಂಟೆಗೆ ಮುದ್ನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.

ಪಶು ಸಂಗೋಪನಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭುಚವ್ಹಾಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಸ್ಥಳೀಯ ಶಾಸಕರಾದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಸನಗೌಡ ಪಾಟೀಲ್ ಯಡಿಯಾಪೂರ, ಸುರಪುರ ಶಾಸಕ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ನರಸಿಂಹ ನಾಯಕ (ರಾಜುಗೌಡ), ಸಂಸದರಾದ ರಾಜಾ ಅಮರೇಶ್ವರ ನಾಯಕ್, ಉಮೇಶ್ ಜಾಧವ, ರಾಜ್ಯಸಭಾ ಸದಸ್ಯರಾದ ಡಾ.ಮಲ್ಲಿಕಾರ್ಜುನ ಖರ್ಗೆ, ಶಹಾಪೂರ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪೂರ, ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ, ಕೃಷ್ಣಾ ಕಾಡಾದ ಅಧ್ಯಕ್ಷರಾದ ಶರಣಪ್ಪ ತಳವಾರ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ ಹಾಗೂ ಇತರೆ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 





                


ಶಿಷ್ಯವೇತನ ಸೌಲಭ್ಯಕ್ಕೆ ಅರ್ಜಿ ಅವಧಿ ವಿಸ್ತರಣೆ

ಯಾದಗಿರಿ ಮಾ 04.(ಕ.ವಾ):- 2020-21ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಇದೇ ಮಾರ್ಚ್ 20 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ತಿತಿತಿ.ssಠಿ.ಠಿosಣmಚಿಣಡಿiಛಿ.ಞಚಿಡಿಟಿಚಿಣಚಿಞಚಿ.gov.iಟಿ ನ್ನು  ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿ ಸಂಪರ್ಕಿಸುವAತೆ ಜಿಲ್ಲಾ ಹಿಂದುಳಿದ ವರ್ಗಗಳ  ಕಲ್ಯಾಣಾಧಿಕಾರಿ ಪ್ರಭುದೊರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ತಾಂಡಾ ರೋಜ್‌ಗಾರ್ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಯಾದಗಿರಿ,ಮಾ 4 (ಕ.ವಾ):- ಯಾದಗಿರಿ ಹಾಗೂ ಗುರುಮಿಟಕಲ್ ತಾಲ್ಲೂಕಿನ ಆಯ್ದ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ 14 ತಾಂಡಾಗಳಲ್ಲಿನ ಜನರಿಗೆ ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಹಾಗೂ ವೈಯಕ್ತಿಕ ಸೌಲಭ್ಯಗಳನ್ನು ಒದಗಿಸಲು ತಾಂಡಾ ರೋಜ್‌ಗಾರ್ ಮಿತ್ರ ಹುದ್ದೆಯ ಆರು ತಿಂಗಳ ಅವಧಿಗೆ  ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ತಾಂಡಾ ನಿವಾಸಿ ಆಗಿರುವ ಕನಿಷ್ಟ 10ನೇ ತರಗತಿ ಪಾಸಾಗಿದ್ದು, 45 ವರ್ಷದೊಳಗಿರಬೇಕು, ಕನ್ನಡ ಹಾಗೂ ಲಂಬಾಣಿ ಭಾಷೆ ತಿಳಿದಿರಬೇಕು, ಮಹಿಳೆಯರಿಗೆ, ನರೇಗಾ ಕಾಮಗಾರಿಗಳಲ್ಲಿ ಕೆಲಸ ಮಾಡಿದವರಿಗೆ ಮೊದಲ ಆದ್ಯತೆ ನೀಡುವುದು, ಮಹಿಳೆಯರು ಲಭ್ಯವಿಲ್ಲದಿದ್ದರೆ ಪುರುಷರನ್ನು ಆಯ್ಕೆಗೆ ಪರಿಗಣಿಸಲಾಗುವುದು. ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣ ಹೊಂದಿರವವರು ತಾಂಡಾಗಳ ಸಂಬAಧಪಟ್ಟ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸೂಕ್ತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ 15 ರೊಳಗೆ ಗ್ರಾಮ ಪಂಚಾಯತಿಗಳಿಗೆ ಸಲ್ಲಿಸಬೇಕು.

 ಈ ಹುದ್ದೆಗೆ ಆಯ್ಕೆಯಾದವರಿಗೆ ತಾಂಡಾ ಅಭಿವೃದ್ಧಿ ನಿಗಮದಿಂದ 3 ಸಾವಿರ ರೂ.ಗಳು ಹಾಗೂ ಮಹಾತ್ಮಾ ಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 3 ಸಾವಿರ ರೂ.ಗಳು ವರೆಗೂ ಮಾಸಿಕ ಪ್ರೋತ್ಸಾಹ ಧನ ನೀಡಲಾಗುವುದು ತಾಲ್ಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


  


     ಕರ್ತವ್ಯಕ್ಕೆ ಹಾಜರಾಗಲು ಶಿಕ್ಷಕಿಗೆ ಸೂಚನೆ

ಯಾದಗಿರಿ,ಮಾ.4 (ಕ.ವಾ):- ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ಮದ್ದರಕಿ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ(ನೃತ್ಯ)ಯೊಬ್ಬರು ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿದ್ದು, ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಸೇವೆಯಿಂದ ವಜಾಗೊಳಿಸಲಾಗುತ್ತದೆ ಎಂದು ಯಾದಗಿರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರು ತಿಳಿಸಿದ್ದಾರೆ.  

ಪ್ರೌಢಶಾಲೆಯ ನೃತ್ಯ ಶಿಕ್ಷಕಿ ಶೈಲಾ ಎನ್.ಕೆ  ಇವರು 2019 ರ ಸಪ್ಟೆಂಬರ್ 1 ರಿಂದ ಈ ವರೆಗೆ ಶಾಲಾ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ. ಈಗಾಗಲೇ ಕಚೇರಿಯಿಂದ 3 ನೋಟಿಸ್ ಪತ್ರ ನೀಡಿದರೂ ಸಹ ಕರ್ತವ್ಯಕ್ಕೆ ಹಾಜರಾಗದೇ ಅನಧಿಕೃತವಾಗಿ ಗೈರು ಹಾಜರಾಗಿರುತ್ತಾರೆ. ಆದ್ದರಿಂದ   ಈ ಪತ್ರಿಕಾ ಪ್ರಕಟಣೆಗೊಂಡ 15 ದಿನದೊಳಗಾಗಿ ಕಚೇರಿಯಿಂದ ಅನುಮತಿ ಪಡೆದು ಕರ್ತವ್ಯಕ್ಕೆ ಹಾಜರಾಗಬೇಕು, ಒಂದು ವೇಳೆ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ವಯ (ವರ್ಗೀಕರಣ ನಿಯಂತ್ರಣ ಮತ್ತ ಮೇಲ್ಮನವಿ) 1957 ರ ಪ್ರಕಾರ ಸೇವೆಯಿಂದ ವಜಾಗೊಳಿಸಲಾಗುತ್ತದೆ ಎಂದು ಅವರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕೆಡಿಪಿ ಸಭೆ ಮಾರ್ಚ್ 15ಕ್ಕೆ ಮುಂದೂಡಿಕೆ

ಯಾದಗಿರಿ ಮಾ.04 (ಕ.ವಾ):- ಪಶುಸಂಗೋಪನೆ,ಅಲ್ಪ ಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಅವರ ಅಧ್ಯಕ್ಷತೆಯಲ್ಲಿ ಇದೇ ಮಾರ್ಚ್ 6ರಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಬೇಕಿದ್ದ  ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆ(ಕೆಡಿಪಿ) ಯನ್ನು  ಕಾರಣಾಂತರಗಳಿAದ ಮಾರ್ಚ್ 15ಕ್ಕೆ ಮುಂದೂಡಲಾಗಿದೆ. 

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾರ್ಚ್ 6 ರಂದು ಬೆಳಿಗ್ಗೆ 10 ಗಂಟೆಗೆ ಸಭೆ ಆರಂಭವಾಗಲಿದೆ. ಸಭೆಯಲ್ಲಿ 2021ರ ಜನವರಿ ತಿಂಗಳ ಅಂತ್ಯದವರೆಗೆ ಇಲಾಖೆವಾರು ಸಾಧಿಸಿರುವ ಪ್ರಗತಿ ಸೇರಿದಂತೆ ಇನ್ನುಳಿದ ವಿಷಯಗಳ ಕುರಿತು ಚರ್ಚೆ ನಡೆಯಲಿದ್ದು, ಇದಕ್ಕೆ ಸಂಬAಧಿಸಿದ ಅಧಿಕಾರಿಗಳು ಸಭೆಗೆ ಹಾಜರಾಗುವಂತೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬುಧವಾರ, ಮಾರ್ಚ್ 3, 2021

 


ಸುರಪುರ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ

                                    :ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. 

ಯಾದಗಿರಿ, ಮಾ.03 (ಕ.ವಾ):- ಬೇಸಿಗೆ ಕಾಲ ಆರಂಭವಾಗುತ್ತಿದ್ದು, ನಗರದ ಯಾವುದೇ ವಾರ್ಡ್ಗಳಲ್ಲಿ ನೀರಿನ ಸಮಸ್ಯೆ ಉಂಟಾಗದAತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಅಧಿಕಾರಿಗಳಿಗೆ ಸೂಚಿಸಿದರು.




ಜಿಲ್ಲೆಯ ಸುರಪುರ ನಗರಸಭೆ ಕಚೇರಿಯ ಸಭಾಂಗಣದಲ್ಲಿ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಪಿ.ಎಮ್.ಸ್ವನಿಧಿ ಯೋಜನೆಯಡಿಯಲ್ಲಿ ಸುಮಾರು 655 ಸಾಲದ ಅರ್ಜಿಗಳು ಬಂದಿದ್ದು, ಈ ಪೈಕಿ ಇನ್ನೂ 27 ಅರ್ಜಿಗಳಿಗೆ ಸಾಲ ದೊರೆತ್ತಿಲ್ಲ. ಈ ಬಗ್ಗೆ ಲೀಡ್ ಬ್ಯಾಂಕ್ ಮ್ಯಾನೇಜರ್ ಗಮನಹರಿಸಿ ಅರ್ಹ ಫಲಾನುಭವಿಗಳಿಗೆ ಸಾಲ ವಿತರಣೆ ವ್ಯವಸ್ಥೆ ಮಾಡಬೇಕೆಂದು ಸೂಚನೆ ನೀಡಿದರು.


ನಗರೋತ್ಥಾನ ಯೋಜನೆ ಅಡಿಯಲ್ಲಿ ನಗರದಲ್ಲಿ ಒಟ್ಟು 13 ಕಾಮಗಾರಿಗಳು ಮಂಜೂರಾಗಿದ್ದು, 11 ಕಾಮಗಾರಿಗಳು  ಪೂರ್ಣಗೊಂಡಿವೆ. ಒಂದು ಕಾಮಗಾರಿ ಪ್ರಗತಿಯಲ್ಲಿದ್ದು, ಇನ್ನೊಂದು ಕಾಮಗಾರಿ ಆದಷ್ಟು ಬೇಗನೆ ಪ್ರಾರಂಭಿಸಲಾಗುತ್ತದೆ ಎಂದು ನಗರಸಭೆಯ ಪೌರಯುಕ್ತರು ಸಭೆಗೆ ಮಾಹಿತಿ ನೀಡಿದರು.


14 ನೇ ಹಣಕಾಸಿನ ಯೋಜನೆಯಲ್ಲಿ ಕೈಗೊಂಡ ಕಾಮಗಾರಿಗಳು ಕೂಡಲೇ ಮುಗಿಸಬೇಕು ಹಾಗೂ 15 ನೇ ಹಣಕಾಸಿನಲ್ಲಿ ಪ್ರಾರಂಭಗೊAಡ ಕಾಮಗಾರಿಗಳು ನಿಗಧಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿಗಳಾಗಿ ಮುಗಿಸುವಂತೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು. 

 

ಎಸ್.ಸಿ.ಪಿ ಹಾಗೂ ಟಿ.ಎಸ್.ಪಿ. ಯೋಜನೆಯಲ್ಲಿ ಬಂದ ಅನುದಾನವನ್ನು ಸರಿಯಾಗಿ ಬಳಕೆ ಮಾಡಿ ಜನ ಸಾಮಾನ್ಯರಿಗೆ ಅನುಕೂಲವಾಗುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು ಹಾಗೂ ಸುರಪುರ ನಗರದ ಪ್ರತಿಯೊಂದು ಅಂಗಡಿ - ಮುಂಗಟ್ಟುಗಳಿAದ ತೆರಿಗೆಯನ್ನು ಕಡ್ಡಾಯವಾಗಿ ಶೇಕಡ 100% ರಷ್ಟು ಸಂಗ್ರಹಣೆ ಮಾಡುವ ನಿಟ್ಟಿನಲ್ಲಿ  ಗಮನಹಿಸಬೇಕೆಂದು ಹೇಳಿದರು. 

ವಿವಿಧ ವಸತಿ ಯೋಜನೆಗಳಲ್ಲಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಉತ್ತಮ ಗುಣಮಟ್ಟದ ಮನೆಗಳನ್ನು ನಿರ್ಮಿಸಿ ಫಲಾನುಭವಿಗಳಿಗೆ ವಿತರಣೆ ಮಾಡಬೇಕು.   


ರಸ್ತೆ ಸೇರಿದಂತೆ ವಿವಿಧ ಕಾಮಗಾರಿ ವೀಕ್ಷಣೆ ಮಾಡಿದ ಜಿಲ್ಲಾಧಿಕಾರಿಗಳು

ಸುರಪುರ ನಗರದಲ್ಲಿ ನಗರೋತ್ಥಾನ ಯೋಜನೆ ಹಾಗೂ ಕೆ.ಕೆ.ಆರ್.ಡಿ.ಬಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಮಂಗಳವಾರ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ವೀಕ್ಷಿಸಿದರು.

ಮಂಡಲ ಬಟ್ಟಿ ಆಟೋ ಸ್ಟಾö್ಯಂಡ್‌ಯಿAದ ಮರಿಗೆಮ್ಮ ದೇವಸ್ಥಾನವರೆಗೆ ಹಾಗೂ ಮರಿಗೆಮ್ಮ ದೇವಸ್ಥಾನದಿಂದ ತಿಮ್ಮಾಪೂರ ಬಸ್ ನಿಲ್ದಾಣದವರಿಗೆ ನಡೆಯುತ್ತಿರುವ ರಸ್ತೆ  ಅಗಲೀಕರಣ ಕಾಮಗಾರಿ , ಕೆ.ಕೆ.ಆರ್.ಡಿ.ಬಿ ಯೋಜನೆಯಡಿಯಲ್ಲಿ ಸುಮಾರು 3ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶುದ್ಧ ಕುಡಿಯುವ ನೀರಿನ ಘಟಕ , ಪೈಪ್‌ಲೈನ್ ವಿಸ್ತೀರ್ಣ ಕಾಮಗಾರಿ ಹಾಗೂ ನಗರೋತ್ಥಾನ 3ನೇ ಹಂತದಡಿ ನಗರದಲ್ಲಿ ನಿರ್ಮಾಣಗೊಳ್ಳುತ್ತಿರುವ ತರಾಕಾರಿ ಮಳಿಗೆಗಳನ್ನು ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಲ್ಲಾ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಉತ್ತಮ ಗುಣಮಟ್ಟದಲ್ಲಿ ಕಾಮಗಾರಿಗಳಾಗಿ ಮುಗಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. 


ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು ಹಾಗೂ ಪ್ರಭಾರಿ ಯೋಜನೆ ನಿರ್ದೇಶಕರಾದ ಪ್ರಕಾಶ ಜಿ.ರಜಪೂತ್, ಜಿಲ್ಲಾ ನಗರಾಭಿವೃದ್ಧಿ ಕೋಶ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಬಕ್ಕಪ್ಪ, ಸುರಪುರ ನಗರಸಭೆಯ ಪೌರಯುಕ್ತ ಜೀವನ್ ಕುಮಾರ್ ಸೇರಿದಂತೆ ಇತರರು ಸಭೆಯಲ್ಲಿ ಭಾಗಿಯಾಗಿದ್ದರು.

 


 ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ

ಯಾದಗಿರಿ, ಮಾ.03 (ಕ.ವಾ):- ಯಾದಗಿರಿ ನಗರದ ಚಾಮಾ ಲೇಔಟ್ ನಿವಾಸಿಯೊಬ್ಬರು  ನಾಪತ್ತೆಯಾಗಿದ್ದಾರೆ.

 ಮಹ್ಮದ್ ಶಕೀಬ್ ಅಹ್ಮದ್ ಎಂಬಾತನು 2021 ರ ಫೆಬ್ರವರಿ 28 ರಂದು ರಾತ್ರಿ ಪ್ರಾರ್ಥನೆಗೆ ಹೋಗಿ ಬರುತ್ತೇನೆ ಎಂದು ಹೋದವರು ಇನ್ನೂ ವಾಪಸ್ ಮರಳಿ ಮನೆಗೆ ಬಾರದೆ ಕಾಣೆಯಾಗಿದ್ದಾರೆ. 

ಕಾಣೆಯಾದ ವ್ಯಕ್ತಿಯು ಶಕೀಬ್ ಅಹ್ಮದ್ 20 ವರ್ಷದವರಾಗಿದ್ದು, ಸಾದಾಗೆಂಪು ಬಣ್ಣ, ಕೋಲು ಮುಖ, ತೆಳುವಾದ ಮೈಕಟ್ಟು, 5 ಅಡಿ 4ಇಂಚು ಎತ್ತರವಾಗಿದ್ದಾರೆ.

 ತಿಳಿ ನೀಲಿ ಕಪ್ಪು ಬಣ್ಣದ ಜರ್ಕಿನ್ ಶರ್ಟ್ ಮತ್ತು ನೀಲಿ ಬಣ್ಣದ ಜೀನ್ಸ್ ಪ್ಯಾಂಟ್‌ನ್ನು ಧರಿಸಿದ್ದು,. ಹಿಂದಿ,ಇAಗ್ಲೀಷ್ ಹಾಗೂ ಕನ್ನಡ ಭಾಷೆ ಮಾತನಾಡುತ್ತಾರೆ. ಈ ವ್ಯಕ್ತಿಯ ಕುರಿತು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಈತನ ಸುಳಿವು ಸಿಕ್ಕಲ್ಲಿ ಯಾದಗಿರಿ ನಗರ ಪೊಲೀಸ್ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸೋಮವಾರ, ಮಾರ್ಚ್ 1, 2021




 ಕೋವಿಡ್ ಎರಡನೇ ಅಲೆ ಭೀತಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಸೂಚನೆ

ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ, ಮಾ.1 (ಕ.ವಾ):- ಮಹಾರಾಷ್ಟ್ರದಲ್ಲಿ ಕೋವಿಡ್-19 ಎರಡನೇ ಅಲೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಅಗತ್ಯ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸೋಮವಾರ ದಂದು ಜಿಲ್ಲಾ ಕೋವಿಡ್-19 ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಾರಾಷ್ಟ್ರ ದಿಂದ ಜಿಲ್ಲೆಗೆ ಬರುವ ಪ್ರಯಾಣಿಕರು, ಸಾರ್ವಜನಿಕರು ಆಗಮಿಸುವವರಿಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟುವುದು ಮತ್ತು ಕೋವಿಡ್ 2ನೇ ಅಲೆಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರ ಸೂಚನೆಗಳನ್ನು ನೀಡಿದೆ. ಅವುಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕೆಂದು ಹೇಳಿದರು.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಕೋವಿಡ್-19 ರ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಜಿಲ್ಲೆಯ ಪಕ್ಕದ ರಾಜ್ಯವಾದ ಮಹಾರಾಷ್ಟ್ರದಲ್ಲಿ ಕೋವಿಡ್-19 ರ ಎರಡನೇಯ ಅಲೆ ಪ್ರಾರಂಭವಾಗಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದು ತಿಳಿದು ಬಂದಿರುತ್ತದೆ.
ಜಿಲ್ಲೆಯ ಗಡಿಭಾಗದಲ್ಲಿ ಸ್ಥಾಪಿಸಲಾದ ಚೆಕ್‌ಪೋಸ್ಟ್ಗಳಲ್ಲಿ ಮಹಾರಾಷ್ಟ್ರ ರಾಜ್ಯದಿಂದ ಆಗಮಿಸುವವರು ಕಡ್ಡಾಯವಾಗಿ 72 ಗಂಟೆಗಳ ಮುಂಚೆ ಪಡೆಯಲಾದ ಆರ್.ಟಿ.ಪಿ.ಸಿ.ಆರ್. ನೆಗೆಟಿವ್ ವರದಿಯನ್ನು ತೋರಿಸಬೇಕು. ಈ ಬಗ್ಗೆ ಬಸ್ಸುಗಳ ನಿರ್ವಾಹಕರು ಖಚಿತಪಡಿಸಿಕೊಂಡು ಪ್ರಯಾಣಿಸಲು ಅನುಮತಿ ನೀಡಬೇಕೆಂದರು.

ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳಾದ ಮಾಸ್ಕ್ ಧರಿಸುವುದು, ದೈಹಿಕ ಅಂತರದ ಪಾಲನೆ ಮತ್ತು ಹ್ಯಾಂಡ್ ಸ್ಯಾನಿಟೈಜರ್‌ನ್ನು ಕಡ್ಡಾಯವಾಗಿ ಬಳಕೆ ಮಾಡಿ ಕೊರೋನಾ ದಿಂದ ಜಾಗೃತಿ ವಹಿಸಿಬೇಕೆಂದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಾಗವಾನ್ ಸೋನಾವಣೆ, ಐ.ಎ.ಎಸ್. ಪ್ರೊಬೇಷನರಿ ಆಶ್ವೀಜಾ, ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ಬಸವಸ್ವಾಮಿ ಹಿರೇಮಠ, ಆರ್.ಸಿ.ಹೆಚ್ ಅಧಿಕಾರಿ ಡಾ.ಸೂರ್ಯಪ್ರಕಾಶ್, ಡಿ.ಎಲ್.ಒ ಡಾ. ಭಗವಂತ ಅನವಾರ್, ಡಾ.ಸಾಜೀದ್, ಡಾ.ಅನೀಲ್ ತಾಳಿಕೋಟಿ, ಶಹಾಪುರ ಟಿ.ಹೆಚ್.ಒ ಡಾ.ರಮೇಶ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದರು.

ಮೂರನೇ ಹಂತದ ಕೋವಿಡ್ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಯಾದಗಿರಿ, ಮಾ.1 (ಕ.ವಾ):- ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮೂರನೇ ಹಂತದ ಕೋವಿಡ್ ಲಸಿಕಾ ಅಭಿಯಾನಕ್ಕೆ ಇಂದು ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಅವರು 60 ವರ್ಷ ಮೇಲ್ಪಟ್ಟವರು ಹಾಗೂ ಗಂಭೀರ ಆರೋಗ್ಯ ಸಮಸ್ಯೆ ಹೊಂದಿರುವ 45 ರಿಂದ 59 ವರ್ಷದೊಳಗಿನ ನಾಗರಿಕರಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ಪಡೆಯಬಹುದು. ಖಾಸಗಿ ಆಸ್ಪತ್ರೆಯಲ್ಲಿ 250 ರೂ. ಪಾವತಿಸಿ ಲಸಿಕೆ ಪಡೆಯಬಹುದು ಎಂದು ತಿಳಿಸಿದರು.

ಲಸಿಕೆ ಪಡೆಯಲು ಆಸ್ಪತ್ರೆಗೆ ಬರುವ ವೇಳೆ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಚುನಾವಣಾ ಮತದಾರರ ಗುರುತಿನ ಚೀಟಿ ತರಬೇಕು. ಆನ್‌ಲೈನ್‌ನಲ್ಲಿ ನೋಂದಾಯಿಸುವಾಗ ಕೇಳಲಾದ ಗುರುತಿನ ಚೀಟಿ ತರಬೇಕು. 45 ರಿಂದ 59 ರ ವರ್ಷದೊಳಗಿನ ಗಂಭೀರ ಕಾಯಿಲೆಯಿಂದ ಬಳಲುತ್ತಿರುವವರು ವೈದ್ಯರಿಂದ ಆರೋಗ್ಯ ಸಮಸ್ಯೆ ಇರುವ ಕುರಿತು ದೃಢೀಕರಣ ಪತ್ರ ಹಾಜರುಪಡಿಸಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ, ಜಿಲ್ಲಾ ಶಸ್ತç ಚಿಕಿತ್ಸಕರಾದ ಡಾ.ಬಸವಸ್ವಾಮಿ ಹಿರೇಮಠ, ಆರ್.ಸಿ.ಹೆಚ್ ಅಧಿಕಾರಿ ಡಾ.ಸೂರ್ಯಪ್ರಕಾಶ್, ಆರ್.ಎಮ್.ಒ ಡಾ.ನೀಲಮ್ಮ, ಕೊರೋನಾ ಲಸಿಕೆ ಅಧಿಕಾರಿ ಡಾ.ಪ್ರೇಮ, ಸಿಸ್ಟರ್ ಶಾರದ ಸೇರಿದಂತೆ ಇತರರು ಇದ್ದರು.


ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...