ಸೋಮವಾರ, ಏಪ್ರಿಲ್ 12, 2021

 ಸರಕಾರಿ ಕಚೇರಿಗಳ ಕೆಲಸದ ಸಮಯ ಬದಲಾವಣೆ

                               ;ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್.

ಯಾದಗಿರಿ,ಏ.12.(ಕ.ವಾ):-  ಈ ವರ್ಷದ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಹೆಚ್ಚಾಗುವ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಕಲಬುರಗಿ ವಿಭಾಗದ ಏಳು ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು ಜಿಲ್ಲೆಗಳು ಸೇರಿದಂತೆ ಯಾದಗಿರಿ ಜಿಲ್ಲೆಯಲ್ಲಿ ಏ.12 ರಿಂದ ರಾಜ್ಯ ಸರಕಾರಿ ಕಚೇರಿಗಳ ಕೆಲಸದ ಕಾರ್ಯನಿರ್ವಹಣಾ ಸಮಯವನ್ನು ಬೆಳಿಗ್ಗೆ 8ರಿಂದ ಮಧ್ಯಾಹ್ನ 1:30ರವರೆಗೆ ಬದಲಾವಣೆ ಮಾಡಿ ಸರಕಾರ ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ.ರಾಗಪ್ರಿಯಾ ಆರ್. ಅವರು ತಿಳಿಸಿದ್ದಾರೆ.


ರಾಜ್ಯ ಸರಕಾರಿ ನೌಕರರ ಸಂಘದ ಕೋರಿಕೆಯ ಮೇರೆಗೆ ಸರಕಾರ ಈ ಆದೇಶ ಹೊರಡಿಸಲಾಗಿದ್ದು, ಜಿಲ್ಲೆಯ ಸರ್ಕಾರಿ ನೌಕರರು ಬದಲಾದ ಕಚೇರಿ ಸಮಯದಲ್ಲಿ ತಮ್ಮ ಕರ್ತವ್ಯಗಳನ್ನು ಸಾರ್ವಜನಿಕರಿಗೆ ತೊಂದರೆ ಉಂಟಾಗದAತೆ ನಿರ್ವಹಿಸತಕ್ಕದ್ದು, ತುರ್ತು ಕೆಲಸ ನಿರ್ವಹಿಸಲು ಸೂಚಿಸಿದ ಸಂದರ್ಭದಲ್ಲಿ (ವಿಶೇಷವಾಗಿ ಕೋವಿಡ್-19) ಕಚೇರಿ ಸಮಯ ಬದಲಾವಣೆ ಅನ್ವಯಿಸುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...