ಬುಧವಾರ, ಏಪ್ರಿಲ್ 14, 2021

 ಬ್ರಿಟೀಷರ ವಿರುದ್ಧ ಹೋರಾಡಿದ ಮಹನೀಯರನ್ನು ಸ್ಮರಿಸಬೇಕು

;ಶಿಲ್ಪಾ ಶರ್ಮಾ
ಯಾದಗಿರಿ,ಏ.14.(ಕ.ವಾ):- ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು. ಹೋರಾಟವನ್ನೇ ಉಸಿರಾಗಿಸಿಕೊಂಡು ಬ್ರಿಟೀಷರ ವಿರುದ್ಧ ಜೀವದ ಹಂಗು ತೊರೆದು ಹೋರಾಡಿದ ಮಹನೀಯರನ್ನು ಸ್ಮರಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಶರ್ಮಾ ಅವರು ಹೇಳಿದರು
ನಗರದ ಚಟಾಣ ಏರಿಯಾದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ನಗರಸಭೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾತ್ಮ ಗಾಂಧೀಜಿ, ಸರ್ದಾರ್ ವಲ್ಲಭಬಾಯಿ ಪಟೇಲ್, ಜವಾಹರಲಾಲ್ ನೆಹರೂ ಸೇರಿದಂತೆ ಅನೇಕ ಮಹನೀಯರು ಸ್ವಾತಂತ್ರ್ಯ ಹೋರಾಟದಲ್ಲಿ ನಿರ್ಣಾಯಕ ಪಾತ್ರ ವಹಿಸಿದರು’ ಎಂದು ಸ್ಮರಿಸಿದರು.
ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ್ ಅವರು ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ಶ್ರಮದಿಂದ ದೇಶವು ಬ್ರಿಟೀಷರ ದಾಸ್ಯದಿಂದ ಮುಕ್ತಿ ಪಡೆಯಿತು. ಸ್ವಾತಂತ್ರ್ಯ ಅಮೃತ ಮಹೋತ್ಸವವು ಯುವ ಜನರಿಗೆ ದೇಶದ ಇತಿಹಾಸ ನೆನಪಿಸುವ ಕಾರ್ಯವಾಗಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್ ದೇಶಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ ಎಂದರು.
ದೇಶ ಕಟ್ಟಲು ಹಿರಿಯರು ಮಾಡಿದ ಶ್ರಮ ಸಾರ್ಥಕವಾಗಿದ್ದು, ಅದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ದೇಶಾಭಿಮಾನ ಹೃದಯಂತರಾಳದಲ್ಲಿ ಮೂಡಬೇಕು’ ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ನಗರಸಭೆಯ ಸಿಬ್ಬಂದಿಗಳೊAದಿಗೆ ಸೇರಿ ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ಸ್ವಚ್ಚತಾ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
ನಗರಸಭೆಯ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜು ಬಾವಿಕಟ್ಟಿ, ನಗರಸಭೆಯ ಪೌರಯುಕ್ತರಾದ ಬಿ.ಟಿ.ನಾಯಕ, ಯಾದಗಿರಿ ತಹಶಿಲ್ದಾರ್ ಚನ್ನಮಲ್ಲಪ್ಪ ಘಂಟಿ, ಉಪನ್ಯಾಸಕ ಗುರು ಪ್ರಸಾದ್ ಸೇರಿದಂತೆ ಇತರರು ಇದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...