ಶುಕ್ರವಾರ, ಏಪ್ರಿಲ್ 16, 2021

 ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ

ಯಾದಗಿರಿ,ಏಪ್ರಿಲ್.16(ಕ.ವಾ):- 2020-21ನೇ ಸಾಲಿನಲ್ಲಿ ಡಾ: ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿ ಉಪಯೋಜನೆಯ ವಿಶೇಷ ಕೇಂದ್ರೀಯ ನೆರವಿನಿಂದ ಯಾದಗಿರಿ ಜಿಲ್ಲೆಯ ಪರಿಶಿಷ್ಟ ಜಾತಿಯ ಜನಾಂಗದ ಫಲಾಪೇಕ್ಷಿಗಳಿಗೆ  ಡಿಜಿಟಲ್ ಮಾರ್ಕೆಟಿಂಗ್ (ಆigiಣಚಿಟ ಒಚಿಡಿಞeಣiಟಿg) ಸೈಬರ್ ಸೇಕ್ಯೂರಿ (ಅಥಿbeಡಿ Seಛಿuಡಿiಣಥಿ) ಅಂರ‍್ಡೆöÊ ಟ್ರೇನಿಂಗ್ (ಸ್ಮಾರ್ಟ್ ಫೋನ್ ) ಂಟಿಜoಡಿiಜ ಖಿಡಿಚಿiಟಿig (Smಚಿಡಿಣ Phoಟಿe) ವಿವಿಧ ಕೋರ್ಸ್ಗಳಿಗೆ ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. 

 ಆಸಕ್ತರು ಜಾತಿ, ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ ಪ್ರತಿ, ಪಡಿತರ ಚೀಟಿ, ವಿದ್ಯಾಭ್ಯಾಸ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ಇದೇ ಏಪ್ರಿಲ್ 30 ರೊಳಗೆ ಜಿಲ್ಲಾ ವ್ಯವಸ್ಥಾಪಕರ ಕಾರ್ಯಾಲಯ, ಡಾ:ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ ಭವನ 02ನೇ ಮಹಡಿ ಕೋಠಡಿ ಸಂಖ್ಯೆ ಸಿ-10 ಯಾದಗಿರಿ ಜಿಲ್ಲೆಗೆ ಅರ್ಜಿಯನ್ನು ಸಲ್ಲಿಸಬೇಕು. 

ಹೆಚ್ಚಿನ ಮಾಹಿತಿಗಾಗಿ ದೂ. 08473-253743ಗೆ ಸಂಪರ್ಕಿಸಬಹುದಾಗಿದೆ ಎಂದು ಡಾ: ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ,ಏಪ್ರಿಲ್16(ಕ.ವಾ):- ಯಾದಗಿರಿ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆಯ ನೇಕಾರರ ವಿಶೇಷ ಪ್ಯಾಕೇಜ್ ಯೋಜನೆಯ ನಿಧಿ ಯೋಜನೆಯಡಿ ಇಲಾಖೆಯಿಂದ ನೂತನ ಜವಳಿ ನೀತಿ ಯೋಜನೆಯಡಿ ಸೀವಿಂಗ್ ಮಷಿನ್ ಆಪರೇಟರ್ ತರಬೇತಿ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮಹಿಳಾ ಅಭ್ಯರ್ಥಿಗಳಿಗೆ ಸಹಾಯಧನಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ಸೀವಿಂಗ್ ಮಷಿನ್ ಆಪರೇಟರ್ ತರಬೇತಿ ಪಡೆದ ಬಹುತೇಕ ಮಹಿಳೆಯರಿಗೆ ತಮ್ಮ ಸ್ವಗ್ರಾಮ ಅಥವಾ ವಾಸಿಸು ಊರುಗಳಲ್ಲಿ ಇರುವ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡಲಾಗದ ಗ್ರಾಮೀಣ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವ ಅವಶ್ಯಕತೆ ಇರುತ್ತದೆ. ಒಂದು ಇಂಡಸ್ಟಿçÃಯಲ್ ಹೈ ಸ್ಪೀಡ್ ಸೀವಿಂಗ್ ಮಷಿನ್ ಖರೀದಿಗೆ 30,000 ರೂ. ಶೇಕಡಾ 50% ರಷ್ಟು ಸಹಾಯಧನ ಒದಗಿಸಲಾಗುವದು.

ಹೆಚ್ಚಿನ ಮಾಹಿತಿಗೆ ದೂ. 08473-253387, ಜವಳಿ ತನಿಖಾಧಿಕಾರಿ ಶಶಿಕಾಂತ ಆರ್. ಮೊ.ನಂ. 9066627296, ಸಹಾಯಕ ನಿರ್ದೇಶಕ ಅಜೀತ್ ಜಿ. ನಾಯಕ್ ಮೊ.ನಂ.9845906227 ಗೆ ಸಂಪರ್ಕಿಸುವAತೆ  ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



ಮಾಧ್ಯಮ ಪ್ರವೇಶಿಕೆ ಬರಹ ಮತ್ತು ಸಂವಹನ ಕೌಶಲ ಕಮ್ಮಟಕ್ಕೆ ಅರ್ಜಿ ಆಹ್ವಾನ

ಯಾದಗಿರಿ,ಏಪ್ರಿಲ್16(ಕ.ವಾ):-  ಕರ್ನಾಟಕ ಸಾಹಿತ್ಯ ಅಕಾಡೆಮಿಯು 2021 ಜೂನ್ ತಿಂಗಳಿನಲ್ಲಿ ವಿಶೇಷ ಘಟಕ ಯೋಜನೆಯಡಿ ರಾಜ್ಯಮಟ್ಟದ ಐದು ದಿನಗಳ ಮಾಧ್ಯಮ ಪ್ರವೇಶಿಕೆ ಬರಹ ಮತ್ತು ಸಂವಹನ ಕೌಶಲ ಕಮ್ಮಟಕ್ಕೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 20 ರಿಂದ 50 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ವೆಬ್‌ಸೈಟ್ hಣಣಠಿ://ಞಚಿಡಿಟಿಚಿಣಚಿಞಚಿsಚಿhiಣhಥಿಚಿಚಿಛಿಚಿಜemಥಿ.oಡಿg  ನ ನಮೂನೆ ಹಾಗೂ ವಿವರಗಳನ್ನು ಪಡೆದುಕೊಂಡು ಏಪ್ರಿಲ್ 30 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟಾçರ್ ಕರಿಯಪ್ಪ ಎನ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...