ಶನಿವಾರ, ಏಪ್ರಿಲ್ 17, 2021

 ಖಾಸಗಿ ವಾಹನಗಳು ಹೆಚ್ಚಿನ ದರವನ್ನು ವಸೂಲಿ ಮಾಡಿದರೆ ಸೂಕ್ತ ಕ್ರಮ

: ಆರ್‌ಟಿಓ ಕೆ. ದಾಮೋದರ

ಯಾದಗಿರಿ, ಏಪ್ರಿಲ್.17(ಕ.ವಾ):- ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಯವರು ಅನಿರ್ದಿಷ್ಠಾವಧಿರೆಗೆ ಮುಷ್ಕರವನ್ನು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಉಂಟಾಗುವ ತೊಂದರೆಗಳನ್ನು ತಪ್ಪಿಸುವ ಸಲುವಾಗಿ ಸಾರ್ವಜನಿಕರಿಗೆ ಸುಗಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸಿದ್ದು, ಪ್ರಯಾಣಿಕರಿಂದ ಖಾಸಗಿ ವಾಹನಗಳು ಹೆಚ್ಚಿನ ದರವನ್ನು ವಸೂಲಿ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಕೆ. ದಾಮೋದರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 

ಮ್ಯಾಕ್ಸಿ ಕ್ಯಾಬ್, ಕಾಂಟ್ಯಾçಕ್ಟ ಕ್ಯಾರೇಜ್ ಬಸ್, ಶಾಲಾ ಬಸ್ ಮತ್ತು ಪಿಎಸ್‌ವಿ ಬಸ್‌ಗಳು ಪ್ರಯಾಣಿಕರಿಂದ ನಿಗದಿತ ಪ್ರಯಾಣ ದರಕ್ಕಿಂತ ಅತಿ ಹೆಚ್ಚಿನ ದರವನ್ನು ವಸೂಲಿ ಮಾಡುತ್ತಿದ್ದಾರೆಂದು ಸಾರ್ವಜನಿಕರು ದೂರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತಿಳಿಯಪಡಿಸುವುದೆನೆಂದರೆ, ಯಾವುದಾದರೂ ಪ್ರಯಾಣಿಕ ವಾಹನವು ನಿಗದಿತ ಪ್ರಯಾಣ ದರಕ್ಕಿಂತ ಅತಿ ಹೆಚ್ಚಿನ ಪ್ರಯಾಣ ದರವನ್ನು ವಸೂಲಿ ಮಾಡಿದ್ದನ್ನು ತಮ್ಮ ಗಮನಕ್ಕೆ ತಂದಲ್ಲಿ ವಾಹನ ಸಂಖ್ಯೆಯ ಸಮೇತ ತಾವುಗಳು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಛೇರಿಗೆ ದೂರು ನೀಡಿದಲ್ಲಿ ವಾಹನ ಮಾಲೀಕರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...