ಸೋಮವಾರ, ಏಪ್ರಿಲ್ 26, 2021

 ಪ.ಜಾ. ಪದವೀಧರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಯಾದಗಿರಿ,ಏಪ್ರಿಲ್.26(ಕ.ವಾ)-:  2021-22 ನೇ ಸಾಲಿಗಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಯೋಗಿಕ ತರಬೇತಿಗೆ  ಸಹಾಯಧನ ಪಡೆಯಲು ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.


ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಕೇಂದ್ರ ಅಥವಾ ರಾಜ್ಯ ಸರ್ಕಾರದ ಅಂಗೀಕೃತ ವಿಶ್ವವಿದ್ಯಾಲಯಗಳಲ್ಲಿ ಕಾನೂನು ಪದವಿ ಪಡೆದಿರಬೇಕು. ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2ಲಕ್ಷ ರೂ. ಮೀರಿರಬಾರದು, ಅರ್ಜಿ ಸಲ್ಲಿಸುವವರು 40 ವರ್ಷ ದೊಳಗಿನವರಾಗಿರಬೇಕು. 


ಅರ್ಜಿಯನ್ನು ವೈಬ್ ಸೈಟ್ ತಿತಿತಿ.sತಿ.ಞಚಿಡಿ.iಟಿಛಿ ನ ಮೂಲಕ ಮೇ 1 ರಿಂದ ಮೇ 30ರೊಳಗೆ ಸಲ್ಲಿಸಬೇಕು, ಅರ್ಜಿ ಮತ್ತು ಅಗತ್ಯ ದಾಖಲಾತಿಗಳನ್ನು ಯಾದಗಿರಿ, ಶಹಾಪೂರ ಹಾಗೂ ಸುರಪೂರ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...