ಮಂಗಳವಾರ, ಜೂನ್ 15, 2021

 ಅಸಂಘಟಿತ ವಲಯದ ಕಾರ್ಮಿಕರ ಪರಿಹಾರ ಧನ ಪಡೆಯಲು ಅರ್ಜಿ ಆಹ್ವಾನ

ಯಾದಗಿರಿ ಜೂನ್15(ಕ.ವಾ): ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ  ಬರುವ ಅಸಂಘಟಿತ ಕಾರ್ಮಿಕರಿಗೆ ಕೊವಿಡ್-19 ಪ್ರಯುಕ್ತ ಸರಕಾರ ಘೋಷಿಸಿರುವ ರೂ.2000/-ಗಳ ಪರಿಹಾರ ಧನ ಪಡೆಯಲು ಜುಲೈ 20ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಯಾದಗಿರಿ ಉಪವಿಭಾಗದ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅಸಂಘಟಿತ ವಲಯದ ಕಾರ್ಮಿಕರಾದ ಕ್ಷೌರಿಕರು, ಅಗಸರು, ಟೈಲರಗಳು, ಹಮಾಲರು, ಚಿಂದಿ ಆಯುವರು, ಕುಂಬಾರರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್‌ರು, ಕಮ್ಮಾರರು ಮತ್ತು ಗೃಹಕಾರ್ಮಿಕರು ಈ ವರ್ಗದ ಅರ್ಹ ಫಲಾನುಭವಿಗಳು ಪರಿಹಾರ ಧನ ಪಡೆಯಲು  ಸೇವಾ ಸಿಂಧು ಪೋರ್ಟಲ್(ಛಿsಛಿ) ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. 


ಬಿ.ಪಿ.ಎಲ್ ಕಾರ್ಡ ಹೊಂದಿರುವ ಒಂದು ಕುಟುಂಬಕ್ಕೆ ಒಬ್ಬರೆ ಅರ್ಜಿ ಸಲ್ಲಿಸಬೇಕು.

ಬೇರೆ ರಾಜ್ಯದವರು ಈ ವೃತ್ತಿಗಳು ನಿರ್ವಹಿಸುತ್ತಿದ್ದರೆ, ಸಂಭAದಪಟ್ಟ ಅಧಿಕಾರಿಗಳಿಂದ ದೃಡೀಕರಣ ಪ್ರಮಾಣ ಪತ್ರ ಪಡೆದಿರಬೇಕು,ಆಧಾರ ಕಾರ್ಡ ಜೋಡಣೆಯಾಗಿರುವ ಬ್ಯಾಂಕ ಖಾತೆ ಹೊಂದಿರುವುದು ಕಡ್ಡಾಯವಾಗಿದೆ. 


ಹೆಚ್ಚಿನ ಮಾಹಿತಿಗಾಗಿ ನೇರವಾಗಿ ಕಾರ್ಮಿಕ ಸಹಾಯವಾಣಿ 155214 ಗೆ ಅಥವಾ ಮತ್ತು ಕಾರ್ಮಿಕ ಅಧಿಕಾರಿಯವರ ಕಚೇರಿ ಯಾದಗಿರಿ ಜಿಲ್ಲೆ ಯಾದಗಿರಿ ಸಂಪರ್ಕಿಸಿಲು ಅವರು ಕೋರಿದ್ದಾರೆ.



ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಉತ್ಪಾದಿಸಿದ ಕಸಿ/ಸಸಿಗಳು ಮಾರಾಟಕ್ಕೆ ಲಭ್ಯ

ಯಾದಗಿರಿ ಜೂನ್15(ಕ.ವಾ): ಜಿಲ್ಲೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ಉತ್ಪಾದಿಸಿದ ಕಸಿ/ಸಸಿಗಳು ಮಾರಾಟಕ್ಕೆ ಲಭ್ಯವಿದ್ದು ತೋಟಗಾರಿಕಾ ಬೆಳೆ ಬೆಳೆಯುವ ರೈತಬಾಂಧವರಿಗಾಗಿ, ಸಾರ್ವಜನಿಕರಿಗೆ ಇಲಾಖೆ ನಿಗಧಿಪಡಿಸಿದ, ದರದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಆಸಕ್ತ ರೈತಬಾಂಧವರು ಮತ್ತು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು  ಪ್ರಕಟಣೆಯಲ್ಲಿ ಕೋರಿದ್ದಾರೆ


ನಾರಾಯಣಪೂರ ತೋಟಗಾರಿಕೆ ಕ್ಷೇತ್ರದಲ್ಲಿಈ ಕೆಳಗಿನಂತೆ ಕಸಿ/ಸಸಿಗಳ ಲಭ್ಯತೆ ಇರುತ್ತದೆ, ಮಾವು, ನಿಂಬೆ, ಕರಿಬೇವು, ಮತ್ತು ತೆಂಗು. ಸಂಪರ್ಕಿಸಬೇಕಾದ ಅಧಿಕಾರಿಗಳು : ಶ್ರೀ. ಬಸನಗೌಡ ಪಾಟೀಲ್, ಸಹಾಯಕ ತೋಟಗಾರಿಕೆ ನಿರ್ದೇಶಕರು 9620578551, ಶ್ರೀ. ಶ್ರೀಧರ್, ಸಹಾಯಕ ತೋಟಗಾರಿಕೆ ಅಧಿಕಾರಿ 9611001067, ಶಿವರಾಮ್, ತೋಟಗಾರಿಕೆ ಸಹಾಯಕರು 9880139467.

ಹತ್ತಿಕುಣಿ ತೋಟಗಾರಿಕೆ ಕ್ಷೇತ್ರದಲ್ಲಿ ಈ ಕೆಳಗಿನಂತೆ ಕಸಿ/ಸಸಿಗಳ ಲಭ್ಯತೆ ಇರುತ್ತದೆ, ಮಾವು, ನಿಂಬೆ, ಕರಿಬೇವು ಮತ್ತು ತೆಂಗು. ಸಂಪರ್ಕಿಸಬೇಕಾದ ಅಧಿಕಾರಿಗಳು .ಎಂ.ಡಿ. ಸಮಿಯೂದ್ದೀನ್ ಸಹಾಯಕ ತೋಟಗಾರಿಕೆ ನಿರ್ದೇಶಕರು, 9986516251, ನಿಸಾರ್ ಅಹ್ಮದ್ ಸಹಾಯಕ ತೋಟಗಾರಿಕೆ ಅಧಿಕಾರಿ, 9738416930, ಗೀತಾ ತೋಟಗಾರಿಕೆ ಸಹಾಯಕರು 9110484899.


ಯಾದಗಿರಿ ಜಿಲ್ಲಾ ನರ್ಸರಿಯಲ್ಲಿ ಈ ಕೆಳಗಿನಂತೆ ಕಸಿ/ಸಸಿಗಳ ಲಭ್ಯತೆ ಇರುತ್ತದೆ, ನಿಂಬೆ, ಕರಿಬೇವು ಮತ್ತು ಅಲಂಕಾರಿಕ ಸಸಿಗಳು ಮತ್ತು ಅಲಂಕಾರಿಕ ಕುಂಡಗಳು ಸಂಪರ್ಕಿಸಬೇಕಾದದ್ದು : ಕುಮಾರಿ.ಕುಶಲತಾ ತೋಟಗಾರಿಕೆ ಸಹಾಯಕರು, 9731625405.


ಸುರಪುರ ಕಛೇರಿ ನರ್ಸರಿಯಲ್ಲಿ ಈ ಕೆಳಗಿನಂತೆ ಕಸಿ/ಸಸಿಗಳ ಲಭ್ಯತೆ ಇರುತ್ತದೆ, ನಿಂಬೆ, ಕರಿಬೇವು ಮತ್ತು ಅಲಂಕಾರಿಕ ಸಸಿಗಳು, ಸಂಪರ್ಕಿಸಬೇಕಾದದ್ದು : ಕುಮಾರಿ.ಬಸ್ಸಮ್ಮ ತೋಟಗಾರಿಕೆ ಸಹಾಯಕರು, 9900393447.


  ಈ ಮೇಲಿನ ಸಂಖ್ಯೆಗಳಿಗೆ ಕರೆ ಮಾಡಿ ಸಸಿ/ಕಸಿಗಳನ್ನು ಪಡೆದುಕೊಳ್ಳಬಹುದಾಗಿದೆ.



ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಯಾದಗಿರಿ ಜೂನ್15(ಕ.ವಾ):ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಿಂದ 2024-25ನೇ ಸಾಲಿನವರಗೆ ಪ್ರಧಾನಮಂತ್ರಿ ಮತ್ಸö್ಯಸಂಪದ ಯೋಜನೆಯಡಿಯಲ್ಲಿ  2021-22ನೇ ಸಾಲಿಗೆ  ಒಳನಾಡು ಮೀನುಗಾರಿಕೆಗೆ ಸಂಬAದಿಸಿದ ಯೋಜನೆಗಳಾದ ಮೀನುಕೃಷಿ ಕೊಳಗಳ ನಿರ್ಮಾಣ, ಬಯೋಫ್ಲಾಕ್ ಕೊಳ ನಿರ್ಮಾಣ, ಮೀನುಮರಿ ಉತ್ಪಾದನೆ ಹಾಗೂ ಪಾಲನಾ ಕೇಂದ್ರಗಳ ಸ್ಥಾಪನೆ, ಶೈತೀಕರಿಸಿದ ಶಾಖ ನಿರೋಧಕ ವಾಹನ ಖರೀದಿ, ಶೈತ್ಯಾಗಾರ/ಮಂಜುಗಡೆ ಸ್ಥಾವರ ನಿರ್ಮಾಣ ಮತ್ತು ಇತರೆ ಯೋಜನೆಗಳನ್ನು ಅನುಷ್ಟಾನಗೊಳಿಸಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 40ರಷ್ಟು ಸಹಾಯಧನ ಮತ್ತು ಪರಿಶಿಷ್ಟಜಾತಿ/ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ 60ರಷ್ಟು ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


ಪ್ರಧಾನ ಮಂತ್ರಿ ಮತ್ಸö್ಯ ಸಂಪದ ಯೋಜನೆಯಲ್ಲಿ ಮೇಲಿನ ಯೋಜನೆಗಳ ಪ್ರಯೋಜನ ಪಡೆಯಲಿಚ್ಚಿಸುವ ಅರ್ಹರು 2021ರ ಜುಲೈ  15 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.


ಅಲ್ಲದೇ ಮೀನುಗಾರಿಕೆ ಇಲಾಖೆಯ ಕೇಂದ್ರವಲಯ/ರಾಜ್ಯವಲಯ/ಜಿಲ್ಲಾ ವಲಯದ ವಿವಿಧ ಯೋಜನೆಗಳಲ್ಲಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ಖರೀದಿ, ಮೀನುಮರಿ ಖರೀದಿಗೆ ಸಹಾಯ ಹಾಗೂ ಇತ್ಯಾದಿ ಯೋಜನೆಗಳಿಗೆ ಸಹಾಯಧನ ಪಡೆಯಲು ಆಸಕ್ತ ಮೀನುಗಾರರು, ಮೀನುಕೃಷಿಕ ಫಲಾನುಭವಿಗಳು ಸಂಬAದಪಟ್ಟ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಿ ಅರ್ಜಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬAದಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು  ಸಂಪರ್ಕಿಸಬಹುದಾಗಿದೆ.



ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...