ಶನಿವಾರ, ಜುಲೈ 31, 2021

 ಕಾಣೆಯಾದ  ವ್ಯಕ್ತಿ ಪತ್ತೆಗೆ ಮನವಿ


ಯಾದಗಿರಿ: ಜುಲೈ,31 (ಕರ್ನಾಟಕ ವಾರ್ತಾ): ಯಾದಗಿರಿ ನಗರದ ಮಾತಾಮಾಣೀಕೇಶ್ವರಿ ನಗರ ನಿವಾಸಿ ನಗರದ ಶುಭಂ ಪೆಟ್ರೋಲ್ ಪಂಪ್ ಮೆನೇಜರ್  ಭರತಕುಮಾರ ಜೈನ (58) ಎಂಬವರು ಪೆಟೋಲ್ ಬಂಕ್ ಕೆಲಸಕ್ಕೆ ಹೋಗಿ ಬರುತ್ತೇನೆ ಎಂದು ಜುಲೈ 28 ರಂದು ಬೆಳಗ್ಗೆ ಹೋದವರು ಇಲ್ಲಿಯವರೆಗೆ ಮರಳಿ ಮನೆಗೆ ಬಾರದೆ ಕಾಣೆಯಾಗಿರುತ್ತಾರೆ ಎಂದು ಮಗ ನೀಡಿದ ದೂರಿನ್ವಯ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಲಾಗಿದೆ.

ಕಾಣೆಯಾದ ವ್ಯಕ್ತಿ ಸದೃಡ ಮೈಕಟ್ಟು, ಸಾದಾಗೆಂಪು ಮೈ ಬಣ್ಣ, ದುಂಡನೆಯ ಮುಖ, ಅಂದಾಜು 5 ಫೀಟ್ 6 ಇಂಚ್ ಎತ್ತರ ಇದ್ದು, ನೀಲಿ ಬಣ್ಣದ ಟೀ ಶರ್ಟ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ ಧರಿಸಿರುತ್ತಾರೆ.

ಕಾಣೆಯಾದ ವ್ಯಕ್ತಿ ಕುರಿತು ಮಾಹಿತಿ ಅಥವಾ ಸುಳಿವು ಸಿಕ್ಕಲಿ ಯಾದಗಿರಿ ನಗರ ಪೊಲೀಸ್ ಠಾಣೆಗೆ ಅಥವಾ ಯಾದಗಿರಿ ಕಂಟ್ರೋಲ್ ರೂಂ  ದೂ.ಸಂ: 08473-253736, 251778 ಗೆ ಕರೆ ಸಂಪರ್ಕಿಸಲು ಪ್ರಕಟಣೆ ಕೋರಿದೆ.


ಶುಕ್ರವಾರ, ಜುಲೈ 23, 2021

 ವಿಶ್ವ ಕೌಶಲ್ಯ ದಿನ ಆಚರಣೆ

ಕೌಶಲ್ಯ ವೃದ್ಧಿಸಿಕೊಂಡು ಉದ್ಯೋಗ ಪಡೆದುಕೊಳ್ಳಲು ಯುವಜನತೆಗೆ ಕರೆ

ಯಾದಗಿರಿ:ಜುಲೈ 23(ಕ.ವಾ): ಯುವ ಜನತೆಯ ನಿರುದ್ಯೋಗ ಪರಿಹಾರಕ್ಕಾಗಿ ಉದ್ಯೋಗ ಅವಕಾಶಗಳನ್ನು ಹೆಚ್ಚಿಸಲು ಸರಕಾರವು ಕೌಶಲ್ಯಾಭಿವೃದ್ಧಿ, ಉಧ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ ಹಾಗೂ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ನಿರುದ್ಯೋಗ ಯುವಕ ಯುವತಿಯರಿಗೆ ಮಾರುಕಟ್ಟೆ/ಉದ್ಯೋಗ ಆಧಾರಿತ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತಿದ್ದು ಯುವಜನತೆ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಅವರು ತಿಳಿಸಿದರು.


ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ 01 ತರಬೇತಿ ಕೇಂದ್ರದ ವತಿಯಿಂದ 05 ವಿವಿಧ ವಿಷಯಗಳಲ್ಲಿ 150 ಅಭ್ಯರ್ಥಿಗಳಿಗೆ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ 09 ವಿವಿಧ ವಿಷಯಗಳಲ್ಲಿ 840 ಅಭ್ಯರ್ಥಿಗಳಿಗೆ ಹಾಗೂ ದಿನ ದಯಾಳ್ ಅಂತ್ಯೋದಯ-ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ 07 ವಿವಿಧ ವಿಷಯಗಳಲ್ಲಿ 872 ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ಒದಗಿಸಲಾಗಿರುತ್ತದೆ.

 ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ತರಬೇತಿ ಪಡೆದುಕೊಂಡ ಅಭ್ಯರ್ಥಿಗಳು ಬೆಂಗಳೂರು ಹಾಗೂ ಹೈದರಾಬಾದ್ ನಂತಹ ನಗರಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಕ್ಕೆ ಸೇರಿಕೊಂಡು ಕೌಟುಂಬಿಕ ಜೀವನ ಸಾಗಿಸುತ್ತಿರುವುದು ರಾಷ್ಟç ಮಟ್ಟದಲ್ಲಿ ಪ್ರಶಂಸನೀಯವಾಗಿದೆ. ದೀನ ದಯಾಳ್ ಅಂತ್ಯೋದಯ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಲ್ಲಿ ತರಬೇತಿ ಪಡೆದುಕೊಂಡ ಹಲವಾರು ಅಭ್ಯರ್ಥಿಗಳು ಜಿಲ್ಲೆಯ ವಿವಿಧ ಬ್ಯಾಂಕುಗಳಲ್ಲಿ ಸಾಲ ಪಡೆದುಕೊಂಡು ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಿರುತ್ತಾರೆ.

ಪ್ರಸ್ತುತ ಕೋವಿಡ್-19ರ ಸಾಂಕ್ರಾಮಿಕ ರೋಗದ ನಿರ್ವಹಣೆಗಾಗಿ ಮಾನವ ಸಂಪನ್ಮೂಲದ ಸಿದ್ದತೆಗಾಗಿ ಆರೋಗ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಜಿಲ್ಲೆಯಲ್ಲಿನ ನಿರುದ್ಯೋಗ ಯುವಕ ಯುವತಿಯರಿಗೆ 06 ವಿವಿಧ ವಿಷಯಗಳಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಯೋಜನೆಯನ್ನು ರೂಪಿಸಲಾಗಿರುತ್ತದೆ. 

 ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ  ಸುಮಾರು 4000 ಕ್ಕಿಂತ ಹೆಚ್ಚಿನ ನಿರುದ್ಯೋಗ ಯುವಕ ಯುವತಿಯರಿಗೆ ವಿವಿಧ ವಿಷಯಗಳಲ್ಲಿ ಕೌಶಲ್ಯ ತರಬೇತಿಗಳನ್ನು ನೀಡಲು ಶಾಸಕರ ಪ್ರಯತ್ನದಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಸುಮಾರು ರೂ. 4 ಕೋಟಿಯಷ್ಟು ಅನುದಾನವನ್ನು ಕಾಯ್ದಿರಿಸಲಾಗಿದೆ. ಈ ವಿಷಯವು ರಾಜ್ಯದಲ್ಲಿಯೇ ಪ್ರಥಮ ಪ್ರಯತ್ನವಾಗಿರುತ್ತದೆ. ಇದರಿಂದಾಗಿ ಯುವಜನತೆಗೆ ವಿವಿಧ ಕೈಗಾರಿಕೆ, ಉದ್ಯಮಸಂಸ್ಥೆಗಳಲ್ಲಿ ವೇತನಾಧಾರಿತ ಉದ್ಯೋಗ ಹಾಗೂ ಸ್ವಯಂ ಉದ್ಯೋಗ ಪಡೆಯುವಲ್ಲಿ ಸಹಕಾರಿಯಾಗುವುದು ಎಂದರು.                                                            


ಜಿಲ್ಲೆಯಲ್ಲಿನ ನಿರುದ್ಯೋಗ ಯುವಕ-ಯುವತಿಯರು ಹಾಗೂ ಉದ್ಯೋಗಕಾಂಕ್ಷಿಗಳು ಸರಕಾರದ ಕೌಶಲ್ಯ ಯೋಜನೆಗಳ ಸೌಲಭ್ಯ ಪಡೆದುಕೊಂಡು ವಿವಿಧ ವಲಯಗಳಲ್ಲಿ ಉದ್ಯೋಗವಕಾಶಗಳನ್ನು ಹೊಂದುವAತಾಗಲಿ, ಕೌಶಲ್ಯವಿಲ್ಲದೆ ಭವಿಷ್ಯವಿಲ್ಲ-ಕೌಶಲ್ಯ ಭಾರತ ನಿರ್ಮಾಣಕ್ಕೆ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಭು ದೊರೆ, ಸಹಾಯಕ ನಿರ್ದೇಶಕರಾದ ಬಸಪ್ಪ ತಳವಡಿ ಇದ್ದರು.


ಸ್ವಚ್ಛತೆಯಿಂದ ಡೆಂಗ್ಯೂ ನಿಯಂತ್ರಿಸಲು ಸಾಧ್ಯ:  ಡಾ.ಲಕ್ಷಿö್ಮÃಕಾಂತ 

ಯಾದಗಿರಿ,ಜುಲೈ-23,(ಕ.ವಾ): ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದರ ಮೂಲಕ ಡೆಂಗ್ಯೂ ಜ್ವರ ನಿಯಂತ್ರಣ ಮಾಡಲು ಸಾಧ್ಯ. ಡೆಂಗಿಗೆ ಯಾವುದೇ ಲಸಿಕೆ ಅಥವಾ ವ್ಯಾಕ್ಸಿನ್ ಇಲ್ಲ ಆದ್ದುದರಿಂದಾಗಿ ನಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದರಿಂದಾಗಿ ಡೆಂಗ್ಯೂ ರೋಗದಂತಹ ಸಾಂಕ್ರಾಮಿಕ ರೋಗಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಲಕ್ಷಿö್ಮÃಕಾಂತ ಅಭಿಪ್ರಾಯ ವ್ಯಕ್ತಪಡಿಸಿದರು.    

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿಗಳ ಸಭಾಂಗಣದಲ್ಲಿ ಡೆಂಗಿ ವಿರೋಧಿ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅವರು “ಡೆಂಗೀ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ” ಎಂಬ ಘೋಷವಾಕ್ಯದೊಂದಿಗೆ ಮಾತನಾಡಿದರು.  

ಮಳೆಗಾಲ ಆರಂಭವಾದರೆ ಡೆಂಗ್ಯೂ, ಕಾಮಾಲೆ, ಮಲೇರಿಯಾ ಮತ್ತು ಚಿಕ್ಕನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಉಲ್ಬಣವಾಗುತ್ತದೆ.  ಮಳೆ ನೀರು, ಚರಂಡಿ ನೀರು, ಗ್ಯಾರೇಜ್ ಹಾಗೂ ಬಸ್ ಡಿಪೋಗಳಲ್ಲಿನ ಬಳಕೆಗೆಬಾರದ ಟಯರ್ ಗಳಲ್ಲಿ ನೀರು ಶೇಖರಣೆಗೊಳ್ಳುವುದರಿಂದಾಗಿ ಲಾರ್ವೆಗಳ ಉತ್ಪತ್ತಿಗೆ ಕಾರಣವಾಗುತ್ತದೆ. ಲಾರ್ವೆಗಳನ್ನು ನಾಶಪಡಿಸುವ ಸಲುವಾಗಿ ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ 70% ರಷ್ಟು ಕಪ್ಪೆಮೀನುಗಳನ್ನು ಬಿಡಲಾಗಿದೆ ಎಂದು ಹೇಳಿದರು. 

ಡೆಂಗಿ ಜ್ವರ ವೈರಸಿನಿಂದ ಉಂಟಾಗುವ ಕಾಯಿಲೆಯಾಗಿದ್ದು, ಈಡಿಸ್ ಇಜಿಪ್ಟೆöÊ ಸೊಳ್ಳೆಯ ಕಚ್ಚುವಿಕೆಯಿಂದಾಗಿ ಒಬ್ಬರಿಂದ ಒಬ್ಬರಿಗೆ ಹರಡುತ್ತಾ ಹೋಗುತ್ತದೆ. ಪ್ರಾರಂಭದ ಹಂತದಲ್ಲಿ ತೀವ್ರ ಜ್ವರ,ವಿಪರೀತ ತಲೆನೋವು, ಬಾಯಿ,ಮೂಗು ಮತ್ತು ಒಸಡುಗಳಲ್ಲಿ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳೇ ಡೆಂಗಿನ ಲಕ್ಷಣಗಳಾಗಿವೆ ಮತ್ತು ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು. 

ಸಾರ್ವಜನಿಕರು ಯಾವುದೇ ಜ್ವರವಿರಲಿ ರಕ್ತಪರೀಕ್ಷೆ ಮಾಡಿಸಿಕೊಂಡು ಸೊಳ್ಳೆ ಪರದೆ ಉಪಯೋಗಿಸುವುದರ ಮುಖಾಂತರವಾಗಿ ಸಾಂಕ್ರಾಮಿಕ ರೋಗದಿಂದ ಮುಕ್ತರಾಗಲು ಸಾಧ್ಯವಾಗುತ್ತದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸುವುದು ಮುಖ್ಯವಾಗಿದೆ. ಆರೋಗ್ಯ ಕಾರ್ಯಕರ್ತರು ಮನೆಭೇಟಿಗೆ ಬಂದಾಗ ಎಲ್ಲರೂ ಸಹಕರಿಸಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. 

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ ಮಾತನಾಡಿ, ಡೆಂಗ್ಯೂ ನಿವಾರಣೆಗಾಗಿ ಸೊಳ್ಳೆಗಳ ಉತ್ಪತ್ತಿಯಾಗದಂತೆ ಮಾಡುವುದರಿಂದಾಗಿ ಡೆಂಗ್ಯೂನ್ನು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಈ ಸೊಳ್ಳೆಗಳು ನೀರನ್ನು ಸಂಗ್ರಹಿಸಿಡುವ ಸಿಮೆಂಟ್ ತೊಟ್ಟಿ,ಕಲ್ಲುಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ಮು,ಬ್ಯಾರೆಲ್, ಮಣ್ಣಿನ ಮಡಿಕೆ ಮತ್ತು ಉಪಯೋಗಿಸಿದ ಒರಳುಕಲ್ಲು ಮುಂತಾದ ಕಡೆ ಶೇಖರಿಸಿರುವ ನೀರುಗಳಲ್ಲಿ ಲಾರ್ವೆಗಳ ಉತ್ಪತ್ತಿಯಾಗದಂತೆ ವಾರಕ್ಕೊಮ್ಮೆ ಶುಚಿಗೊಳಿಸಬೇಕು ಎಂದು ಅವರು ತಿಳಿಸಿದರು.  

ಬಯಲಿನಲ್ಲಿ ಘನತ್ಯಾಜ್ಯ ವಸ್ತುಗಳಾದ ಟಯರ್,ಎಳನೀರು ಚಿಪ್ಪು,ಒಡೆದ ಬಾಟಲಿ, ಮುಂತಾದವುಗಳಲ್ಲಿ ಮನೆ ನೀರು ಸಂಗ್ರಹವಾಗದAತೆ ಎಚ್ಚರ ವಹಿಸಬೇಕು.  ಸೂಕ್ತ ವಿಲೇವಾರಿ ಮಾಡುವುದರ ಜೊತೆಗೆ ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳ ಕಚ್ಚುವಿಕೆಯಿಂದ ದೂರವಿರಬೇಕು. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುದಕ್ಕಿಂತ ರೋಗಬಾರದಂತೆ ಮುಂಜಾಗೃತೆಕ್ರಮ ತೆಗೆದುಕೊಳ್ಳುವುದು ಅತ್ತುö್ಯತ್ತಮ ಎಂದರು.  

ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ ಕಾಂತ ನಿರೂಪಿಸಿ,ವಂದಿಸಿದರು. 






ಬೆಳೆ ನಿರ್ವಹಣೆ ಕುರಿತು ರೈತರಿಗೆ ಸಲಹೆಗಳು 

ಯಾದಗಿರಿ:ಜುಲೈ 23(ಕ.ವಾ):  ಜಿಲ್ಲೆಯಲ್ಲಿ ಸುಮಾರು 15326 ಹೇಕ್ಟರ್ ರಷ್ಟು ಹೆಸರು ಬೀತ್ತನೇಯಾಗಿದ್ದು ಕಳೆದ ವಾರದರಿಂದ ಸುರಿಯುತ್ತಿರುವ ಮಳೆ ಮತ್ತು ಮೊಡ ಕವಿದ ವಾತವರಣದಿಂದ ಸಮೃದ್ದವಾಗಿ ಬೆಳೆದ ಬೆಳೆಯು ಹೂ ಮತ್ತು ಕಾಯಿ ಕಟ್ಟುವ ಹಂತದಲ್ಲಿದ್ದು ಬೆಳೆಗೆ ಅನೇಕ ಕೀಟ ಮತ್ತು ರೋಗಗಳ ಭಾದೆ ಅಲ್ಲಲಿ ಕಂಡುಬರುತ್ತಿದೆ. 

ಮುಖ್ಯವಾಗಿ ಸಸ್ಯ ಹೇನು, ನುಸಿಗಳು, ಥ್ರೀಪ್ಸ, ಮತ್ತು ಹಳದಿ ನಂಜಾಣು ರೋಗ ಕಂಡುಬAದಿದ್ದು ಇವುಗಳ ನಿಯಂತ್ರಣ ಕ್ರಮಗಳು ಈ ಕೆಳಗಿನಂತಿವೆ.

1. ಸಸ್ಯ ಹೇನು ಹಾಗೂ ಥ್ರೀಪ್ಸ್ ಕೀಟದಲಕ್ಷಣ:-

ಚಿಗುರೆಲೆ ಮತ್ತು ಕಾಯಿಗಳಿಂದ ರಸ ಹೀರುವುದರಿಂದ ಇಳುವರಿ ಕಡಿಮೆಯಾಗುತ್ತದೆ.

ನಿಯಂತ್ರಣ: ಪ್ರತಿ ಲೀಟರ್ ನೀರಿಗೆ 1 ಮೀ.ಲೀ ಮಿಥೈಲ್ ಪ್ಯಾರಾಥಿಯಾನ್ 50 ಇ.ಸಿ ಅಥವಾ 1 ಮಿ.ಲೀ ಮನೋಕ್ರೋಟೊಫಾಸ್ 36 ಎಸ್.ಎಲ್‌ಅಥವಾ 1.7 ಮಿ.ಲಿ ಡೈಮಿಥೋಯೆಟ್ 30 ಇ.ಸಿ ಬೆರಸಿ ಸಿಂಪಡಿಸಬೇಕು.

2. ಹಳದಿ ನಂಜಾಣು ರೋಗ ರೋಗದ ಲಕ್ಷಣ:-

ಈ ರೋಗ ಭಾದೆಯಿಂದ ಗಿಡಗಳು ಕುಳ್ಳಗಾಗುತ್ತವೆ. ಎಲೆಗಳ ಮೇಲೆ ಹಳದಿ ಬಣ್ಣ ಕಾಣಿಸಿಕೊಂಡು ಎಲೆಗಳು ಉದುರುತ್ತವೆ. 

ನಿಯಂತ್ರಣ: ರೋಗಗ್ರಸ್ತ ಗಿಡಗಳು ಕಂಡುಬAದಲ್ಲಿತಕ್ಷuವೆಕಿತ್ತಿ ಮಣ್ಣಿನಲ್ಲಿ ಮುಚ್ಚಿ ಹಾಕುವುದು. ಮೋನೋಕ್ರೊಟೋಫಾಸ್ 2.0 ಮೀ ಲೀ/ಲೀ ನೀರಿಗೆ ಬೇರಸಿ ಸಿಂಪಡಿಸಿರಿ ಅಥವಾಇಮಿಡಾಕ್ಲೊಪ್ರಿಡ್ 0.5 ಮಿ.ಲಿ/ಲೀ ನೀರಿಗೆ ಬೆರಸಿ ಸಿಂಪಡಿಸಿರಿ 

3. ಕಾಯಿ ಕೊರೆಯುವ ಹುಳು ಹಾನಿ ಕೀಟದಲಕ್ಷಣ :-

ಈ ಕೀಟಗಳು ಎಲೆ ಮತ್ತು ಕಾಯಿ ಕೊರೆದು ತಿನ್ನುವುದರಿಂದ ಬೆಳೆಯಲ್ಲಿ ಹೆಚ್ಚು ಹಾನಿಯಾಗುತ್ತದೆ. 

ನಿಯಂತ್ರಣ: ಪ್ರತಿ ಲೀಟರ್ ನೀರಿಗೆ 1 ಮಿ.ಲೀ ಮನೋಕ್ರೋಟೊಫಾಸ್ 36 ಎಸ್.ಎಲ್‌ಅಥವಾ 0.5 ಮಿ.ಲಿ ಫೆನವಲರೇಟ್ 20 ಇ.ಸಿ ಅಥವಾ 2 ಮಿ.ಲೀ. ಕ್ವಿನಾಲ್‌ಫಾಸ್ 25 ಇ.ಸಿ ಬೆರೆಸಿ ಸಿಂಪರಿಸಬೇಕು. 


ಸೂಚನೆ: ಹೂವಾಡುವ ಮತ್ತು ಕಾಳು ಕಟ್ಟುವ ಸಮಯದಲ್ಲಿ ಶೇ.1ರ 19:19:19 (10ಗ್ರಾಂ/ಲೀಟರ್ ನೀರಿಗೆ) ಅಥವಾ ಶೇ.2ರ 

ಡಿ.ಎ.ಪಿ. (20ಗ್ರಾಂ ಡಿ.ಎ.ಪಿ. ಪ್ರತಿ ಲೀಟರ್ ನೀರಿಗೆ) ಬೆರಿಸಿ ಸಿಂಪರಣೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜುಲೈ 26 ರಂದು ಐ.ಟಿ.ಐ ಕಾಲೇಜುನಲ್ಲಿ ಕೋವಿಡ್-19 ರ ಲಸಿಕೆ ಅಭಿಯಾನ

ಯಾದಗಿರಿ:ಜುಲೈ 23(ಕ.ವಾ): ಯಾದಗಿರಿ ತಾಲೂಕಿನ ಸರಕಾರಿ ಅನುದಾನಿತ ಹಾಗೂ ಖಾಸಗಿ ಐ.ಟಿ.ಐ ಕಾಲೇಜುಗಳ ಸಹಭಾಗಿತ್ವದಲ್ಲಿ ಸುಮಾರು 400 ಮಮದಿ ತರಬೇತಿ ಪಡೆಯುತ್ತಿರುವ ಕೌಶಲ್ಯ ಅಭಿವೃದ್ಧಿ ವಿದ್ಯಾರ್ಥಿಗಳಿದ್ದು, ವಿದ್ಯಾರ್ಥಿಗಳಿಗೆ ಜುಲೈ 26 ರಂದು ಐ.ಟಿ.ಐ ಕಾಲೇಜಿನಲ್ಲಿ ಕೋವಿಡ್-19 ರ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಯಾದಗಿರಿ ಜವಾಹರ ಐ.ಟಿ.ಐ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ಸರಕಾರಿ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ. 










ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಕಿರುಚಿತ್ರ ಸ್ಪರ್ಧೆ

ಯಾದಗಿರಿ:ಜುಲೈ 23(ಕ.ವಾ): ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ ಯೋಜನೆಯು(ನಗರ) ಪ್ರಾರಂಭವಾಗಿ 2021ರ ಜೂನ್ 25ಕ್ಕೆ 6 ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನಗರ ಪ್ರದೇಶದ ಜನರಿಗೆ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಮತ್ತು ಯಶೋಗಾಥೆಗಳನ್ನು ಸಮಾಜಕ್ಕೆ ತಿಳಿಸಲು, ಸಮುದಾಯಾದರಿತ ಸಂಘ/ಸAಸ್ಥೆಗಳು ಮತ್ತು  ಯುವ ಜನಾಂಗವನ್ನು ಉತ್ತೇಜಿಸಲು ಮತ್ತು ಅವರಲ್ಲಿ ಉತ್ತಮ ಸ್ಪರ್ಧಾಭಾವನೆಯನ್ನು ತರುವ ನಿಟ್ಟನಲ್ಲಿ ಪಿ.ಎಂ.ಎ.ವೈ.ಯೋಜನೆಯ ಫಲಾನುಭವಿಗಳ ಯಶೋಗಾಥೆಗಳ ಕಿರುಚಿತ್ರಗಳನ್ನು ತಯಾರಿಸಲು 18 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯರಿಗೆ ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸುವಲು ಅರ್ಜಿ ಆಹ್ವಾನಿಸಲಾಗಿದೆ.

ಸ್ಪರ್ಧೆಯ ವಿಷಯ ಕುಶೀಯೋನ್ ಕಾ ಆಶಿಯಾನ “ಸಂತಸ ತಂದ ಮನೆ” ಸ್ಪರ್ಧೆಗೆ ಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ತಮ್ಮ ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಬೇಕು. ಸ್ಪರ್ಧೆಯು 1ನೇ ಜುಲೈ-2021 ರಿಂದ ಪ್ರಾರಂಭವಾಗಿ 2021  ಸೆಪ್ಟಂಬರ್ 15 ರ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ.

ಫಲಾನುಭವಿಗಳ ಪಟ್ಟಿಯನ್ನು ಸಂಬAದಿಸಿದ ನಗರ ಸ್ಥಳೀಯ ಸಂಸ್ಥೆಗಳು ನೊಂದಾಯಿಸಿಕೊAಡ ಅರ್ಹ ಸ್ಪರ್ಧಿದಾರರಿಗೆ ನೀಡಲಾಗುವುದು. ಸ್ಫರ್ಧಿಗಳಿಗೆ ಸಹಾಯಕವಾಗಿ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂಧಿ ಮತ್ತು ಜಿಲ್ಲಾ ನಗರ ತಾಂತ್ರಿಕ ಕೋಶದ ತಜ್ಞರುಗಳ ಸೇವೆ ಲಭ್ಯವಿರುತ್ತದೆ. 

ಸ್ಪರ್ಧಿಗಳು ಉತ್ತಮ ಸಂದೇಶ ಮತ್ತು ಉತ್ತಮ ಮೊಬೈಲ್(ಊigh-ಡಿಚಿಜiಚಿಣioಟಿ) ಅಥವಾ ಕ್ಯಾಮರಾಗಳಿಂದ ಚಿತ್ರಿಕರಣ ಮಾಡುವುದು. ಚಿತ್ರಿಕರಿಸಿದ ಕಿರುಚಿತ್ರವನ್ನು ಆನ್‌ಲೈನ್ ಮೂಲಕ ಅಪ್ಲೋಡ್ ಮಾಡುವುದು. ಆನ್‌ಲೈನ್ ಮೂಲಕ ಅಪ್ಲೋಡ್ ಮಾಡಿದ ಕಿರುಚಿತ್ರವನ್ನು ರಾಜ್ಯ ಮಟ್ಟದ ನೋಡಲ್ ಏಜೆನ್ಸಿ ಪರಿಶೀಲಿಸಿ, ಆಯ್ಕೆಯಾದ ಕಿರುಚಿತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಸ್ಪರ್ಧೇಯಲ್ಲಿ ವಿಜೇತರಾಗುವ ಕ್ರಮವಾಗಿ 25 ಫಲಾನುಭವಿಗಳಿಗೆ ಪ್ರಥಮ ಬಹುಮಾನವಾಗಿ ರೂ. 25,000/-ದ್ವಿತೀಯ ಬಹುಮಾನವಾಗಿ ರೂ.20,000/- ಮತ್ತು ತೃತೀಯ ಬಹುಮಾನವಾಗಿ ರೂ.15,000/- ಗಳ ನಗದು  ಮತ್ತು ಪ್ರಶಸ್ತಿ ಪತ್ರಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು.

ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಪಿ.ಎಮ.ಎ.ವೈ.(ನ) ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ವಸತಿ ವಿಷಯ ನಿರ್ವಾಹಕರು, ಜಿಲ್ಲಾ ನಗರಾಭಿವೃದ್ಧಿ ಕೋಶದ ನಗರ ಮಟ್ಟದ ತಾಂತ್ರಿಕ ಕೋಶದ ತಜ್ಞರುಗಳನ್ನು ಸಂಪರ್ಕಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

                  

ನಿರುದ್ಯೋಗಿಗಳಿಗೆ ಸಾಲ: ಡೇ-ನಲ್ಮ್ ಯೋಜನೆಯಡಿ ಅರ್ಜಿ ಆಹ್ವಾನ

ಯಾದಗಿರಿ:ಜುಲೈ 23(ಕ.ವಾ): ಜಿಲ್ಲೆಯ ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿನ  ನಿರುದ್ಯೋಗ ಯುವಕ-ಯುವತಿಯರಿಗೆ ದೀನದಯಾಳ್ ಅಂತ್ಯೋದಯ (ಡೇ-ನಲ್ಮ್) ಯೋಜನೆಯಡಿ 2021-22ನೇ ಸಾಲಿಗೆ ಬ್ಯಾಂಕಿನಿAದ ಬಡ್ಡಿ ಸಹಾಯಧನ ಸಾಲ ಪಡೆದು ಸ್ವ-ಉದ್ಯೋಗ ಮಾಡಲಿಚ್ಚಿಸುವವರಿಗೆ ಹಾಗೂ ಮಹಿಳೆಯರಿಗೆ ಸ್ವ-ಸಹಾಯ ಸಂಘ ರಚಿಸುವ ಕುರಿತು ಮತ್ತು ಸ್ವ-ಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ಪಡೆದುಕೊಳ್ಳುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳವರು ಆಯಾ ನಗರಸ್ಥಳೀಯ ಸಂಸ್ಥೆಗಳಲ್ಲಿರುವ ಸಮುದಾಯ ಸಂಘಟನಾಧಿಕಾರಿಗಳು/ಸಮುದಾಯ ಸಂಘಟಕರನ್ನು ಭೇಟಿ ಮಾಡಿ, ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ಅವಧಿಯೊಳಗಾಗಿ ಅರ್ಜಿಗಳನ್ನು ಆಯಾ ನಗರಸಭೆಯ ಪೌರಾಯುಕ್ತರು ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆ ತಿಳಿಸದೆ.









ಪ್ರಧಾನ ಮಂತ್ರಿ ಆವಾಸ ಯೋಜನೆ ತರಬೇತಿ ಮತ್ತು ಕಾರ್ಯಾಗಾರ

ಯಾದಗಿರಿ:ಜುಲೈ 23(ಕ.ವಾ): ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ ಯೋಜನೆಯು(ನಗರ) ಪ್ರಾರಂಭವಾಗಿ 2021ರ ಜೂನ್ 25ಕ್ಕೆ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನಗರ ಪ್ರದೇಶದ ಜನರಿಗೆ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು “ಆವಾಸ್ ಪರ ಸಂವಾದ” ಎಂಬ ಶೀರ್ಷಿಕೆಯಡಿಯಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ, ಹಣಕಾಸು ಸಂಸ್ಥೆಗಳು, ಸಮುದಾಯ ಆದಾರಿತ ಸಂಘಸAಸ್ಥೆಗಳ ಪದಾಧಿಕಾರಿಗಳಿಗೆ ಮತ್ತು ಯುವಕರಿಗೆ ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಕಾರ್ಯಾಗಾರ ಮತ್ತು ತರಬೇತಿಗಳನ್ನು ಏರ್ಪಡಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳು. ಶಿಕ್ಷಣ ಸಂಸ್ಥೆಗಳು ಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕ್‌ಗಳಿAದ ಅರ್ಜಿ ಆಹ್ವಾನಿಸಲಾಗಿದೆ. 

ತರಬೇತಿ ಮತ್ತು ಕಾರ್ಯಗಾರ ಹಮ್ಮಿಕೊಳ್ಳಲು ಆಸಕ್ತ ಇರುವ ಸಂಸ್ಥೆಗಳು ಪಿ.ಎಂ.ಎ.ವೈ. ವೆಬ್‌ಸೈಟ್ ನಲ್ಲಿ (hಣಣಠಿ://ಠಿmಚಿಥಿ-uಡಿbಚಿಟಿ.gov.iಟಿ/) ಕಡ್ಡಾಯವಾಗಿ ನೊಂದಾಯಿಸಿಕೊಳ್ಳಬೇಕು. ಆಯ್ಕೆಯಾಗುವ ಅರ್ಹ ಸಂಸ್ಥೆಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಾಹಿತಿ ನೀಡಲಾಗುವುದು. ನೊಂದಣಿ ಮಾಡಿಸಿಕೊಳ್ಳಲು ಜುಲೈ 28 ಕೊನೆಯ ದಿನವಾಗಿದ್ದು, ತರಬೇತಿ ಮತ್ತು ಕಾರ್ಯಾಗಾರಗಳನ್ನು 2021 ರ ಸೆಪ್ಟಂಬರ್ 30 ರೊಳಗೆ ಆಯೋಜಿಸುವುದು. 

ತರಬೇತಿಯ ಪೋಟೋ, ವಿಡಿಯೋ, ಮತ್ತಿತರ ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು. ತರಬೇತಿಯಲ್ಲಿ ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರವನ್ನು, ಪ್ರತಿ ಆನ್‌ಲೈನ್ ತರಬೇತಿಗೆ ರೂ.7000/- ಮತ್ತು ಆಫ್‌ಲೈನ್ ತರಬೇತಿಗೆ ರೂ.35,000/-ಗಳ ಅನುದಾನವನ್ನು ನೀಡಲಾಗುವುದು. 

ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ವಸತಿ ವಿಷಯ ನಿರ್ವಾಹಕರು ಮತ್ತು ಯಾದಗಿರಿ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ನಗರ ಮಟ್ಟದ ತಾಂತ್ರಿಕ ಕೋಶದ ತಜ್ಞರುಗಳನ್ನು ಸಂಪರ್ಕಿಸಲು ಕೊರಲಾಗಿದೆ.


ಅಲ್ಪ ಸಂಖ್ಯಾತರ ಆಯೋಗ ಪ್ರವಾಸ ರದ್ದು

ಯಾದಗಿರಿ.ಜುಲೈ.23(ಕ.ವಾ): ಕರ್ನಾಟಕ ಅಲ್ಪ ಸಂಖ್ಯಾತರ ಆಯೋಗವು ಜುಲೈ 28 ರಂದು ನಿಗದಿಪಡಿಸಿದ್ದ ಯಾದಗಿರಿ ಜಿಲ್ಲಾ ಪ್ರವಾಸವನ್ನು ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಕಾರಣ ರದ್ದು ಪಡಿಸಲಾಗಿದೆ ಎಂದು ಅಲ್ಪ ಸಂಖ್ಯಾತೆರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.



ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ.ಜುಲೈ.23(ಕ.ವಾ): ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ  ಇಲಾಖೆ  ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳು  18 ರಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿಗಳನ್ನು ಜಂಟಿ ನಿರ್ದೇಶಕರು, ಯಾದಗಿರ ಜಿಲ್ಲಾಡಳಿತ ಭವನ, ಸಿಡಾಕ್-ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ 1ನೇ ಮಹಡಿ, ಎ ಬ್ಲಾಕ್, ರೋ. ನಂ. ಎ11, ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದ್ದು, ಜುಲೈ 28ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ. ಸಂ: 8147307003, 9901914945 ಸಂಪರ್ಕಿಸಬಹುದು.






28ರAದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೋನ್-ಇನ್ ಕಾರ್ಯಕ್ರಮ

ಯಾದಗಿರಿ:ಜುಲೈ-23(ಕ.ವಾ): ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಮತ್ತು ಉತ್ತಮ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಜುಲೈ 28 ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಪೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

   ಜಿಲ್ಲೆಯ ಎಲ್ಲಾ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಂಬAಧಿಸಿದAತೆ ಯಾವುದಾದರೂ ದೂರು ಮತ್ತು ಜಿಲ್ಲೆಯ ಸಂಚಾರ ವ್ಯವಸ್ಥೆ ಸೇರಿದಂತೆ ಇನ್ನಿತರ ಸುಧಾರಣೆಗಳ ಬಗ್ಗೆ ಸಲಹೆ ಅಥವಾ ಸಮಸ್ಯೆಗಳಿದ್ದರೆ ನೇರವಾಗಿ ದೂ.ಸಂ:08473-253730 ಕರೆ ಮಾಡಿ ಪರಿಹಾರ ಕಂಡುಕೊಳ್ಳುವAತೆ ಪ್ರಕಟಣೆ ತಿಳಿಸಿದೆ.


ಗುರುವಾರ, ಜುಲೈ 22, 2021

 ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ

ಯಾದಗಿರಿ,ಜು.22(ಕರ್ನಾಟಕ ವಾರ್ತೆ): 2021-22ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಪದವಿ ಪೂರ್ವ ಶಿಕ್ಷಣ ನಿಯಮಗಳು 2006ರ ನಿಯಮದ ಅನ್ವಯ ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳಿAದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

       ಅರ್ಜಿ ಸಲ್ಲಿಸುವ ಸಂಸ್ಥೆಗಳು/ಟ್ರಸ್ಟ್ಗಳು ಇದೇ ಜುಲೈ 26ರ ಸಂಜೆ ಒಳಗಾಗಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬಹುದಾಗಿದೆ. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ  ವೆಬ್‌ಸೈಟ್ ತಿತಿತಿ.ಠಿue.ಞಚಿಡಿ.ಟಿiಛಿ.iಟಿ ಮೂಲಕ ಪಡೆಯಬಹುದು.


ಜು.26ರಂದು ಲಸಿಕಾ ಅಭಿಯಾನ

ಯಾದಗಿರಿ,ಜು.22(ಕರ್ನಾಟಕ ವಾರ್ತೆ): ಯಾದಗಿರಿ ತಾಲೂಕು ಸರಕಾರಿ ಅನುದಾನಿತ ಹಾಗೂ ಖಾಸಗಿ ಐ.ಟಿ.ಐ ಕಾಲೇಜುಗಳ ಸಹಭಾಗಿತ್ವದಲ್ಲಿ ಜುಲೈ 26ರಂದು ಬೆಳಿಗ್ಗೆ 10 ಗಂಟೆಗೆ ಜವಾಹರ ಐ.ಟಿ.ಐ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ರೈತರಿಗೆ ಬೆಳೆ ವಿಮೆ ಮಾಡಿಸಲು  ಮನವಿ

ಯಾದಗಿರಿ,ಜು.22(ಕರ್ನಾಟಕ ವಾರ್ತೆ): 2021-22 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಬೆಳೆಗಳಾದ ಹೆಸರು (ಮಳೆಯಾಶ್ರಿತ), ತೊಗರಿ (ನೀರಾವರಿ), ಹತ್ತಿ (ಮಳೆಯಾಶ್ರಿತ & ನೀರಾವರಿ), ಉದ್ದು (ಮಳೆಯಾಶ್ರಿತ), ಬೆಳೆಗಳಿಗೆ ವಿಮೆ ಮಾಡಿಸಲು ಜುಲೈ 31 ಮತ್ತು ತೊಗರಿ (ಮಳೆಯಾಶ್ರಿತ) ಭತ್ತ (ನೀರಾವರಿ) ಬೆಳೆಗಳಿಗೆ ಆಗಸ್ಟ್ 16 ಹಾಗೂ ಭತ್ತ ನೀರಾವರಿ ಬೆಳೆಗೆಳಿಗೆ  ಆಗಸ್ಟ್ 31 ಕೊನೆಯ ದಿನವಾಗಿದೆ.    

         ವಿಮಾ ಯೋಜನೆಯನ್ನು ಅನುಷ್ಠಾನಗೊಳಿಸಲು ಬೆಂಗಳೂರಿನ ಯುನಿವರ್ಸಲ್ ಸೊಂಪೊ ಜನರಲ್ ಇನ್ಸುರೆನ್ಸ್ ಕಂಪನಿಯನ್ನು ನಿಗದಿಪಡಿಸಲಾಗಿದ್ದು, ಬೆಳೆ ವಿಮೆ ಮಾಡಿಸುವಂತೆ ಯಾದಗಿರಿ ಸಹಾಯಕ ಕೃಷಿ ನಿರ್ದೇಶಕರಾದ ಶ್ವೇತಾ ತಾಳೆಮರದ ಅವರು ರೈತರಲ್ಲಿ ಮನವಿ ಮಾಡಿದ್ದಾರೆ. 

      ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿ ಹಾಗೂ ಅನಾವೃಷ್ಠಿ ಸಂಭವಿಸಿದ ಸಂದರ್ಭದಲ್ಲಿ ಮತ್ತು ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ, ಭೂಕುಸಿತ, ಬೆಳೆ ಮುಳುಗಡೆ ಹಾಗೂ ಗುಡುಗು ಮಿಂಚಿನಿAದ ಬೆಳೆಗಳು ನಷ್ಟವಾದಲ್ಲಿ ಬೆಳೆ ವಿಮೆಯು ನೆರವಿಗೆ ಬರಲಿದೆ. ಆದ್ದರಿಂದ ಬೆಳೆ ವಿಮೆ ಮಾಡಿಸಿ ರೈತರು ಬೆಳೆ ವಿಮೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಕಟಣೆ ತಿಳಿಸಿದ್ದಾರೆ. 


ಮಂಗಳವಾರ, ಜುಲೈ 20, 2021

 ಜು.28ರಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ, ಕಾರ್ಯದರ್ಶಿಗಳ ಜಿಲ್ಲಾ ಪ್ರವಾಸ

ಯಾದಗಿರಿ,ಜು.20(ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಮತ್ತು ಕಾರ್ಯದರ್ಶಿಗಳಾದ ಮಹಮ್ಮದ್ ನಜೀರ್ ಅವರು ಜು.28ರಂದು ಯಾದಗಿರಿ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಅವರು ಜುಲೈ 28ರಂದು ಬೆಳಗ್ಗೆ 9 ಗಂಟೆಗೆ ಕಲಬುರ್ಗಿಯಿಂದ ಯಾದಗಿರಿ ನಗರಕ್ಕೆ ಆಗಮಿಸುವರು. ನಂತರ 10 ಗಂಟೆಗೆ ತಹಸೀಲ್ದಾರ್ ಮತ್ತು ಮುಖ್ಯಾಧಿಕಾರಿಗಳೊಂದಿಗೆ ಅಲ್ಪಸಂಖ್ಯಾತರ ಮೊಹಲ್ಲಾಗಳು ಪರಿವೀಕ್ಷಣೆ ಹಾಗೂ  ಜಿಲ್ಲೆಯ ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವರು. 

 

  ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಮುದಾಯದ ಮುಖಂಡರು ಮತ್ತು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವರು. ಮಧ್ಯಾಹ್ನ 3.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಸೇರಿದಂತೆ ಇನ್ನಿತರ ವಿಷಯದ ಕುರಿತು ನಡೆಯುವ ಸಭೆಯಲ್ಲಿ ಭಾಗವಹಿಸುವರು. ಸಾಯಂಕಾಲ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು. ನಂತರ ಸಾಯಂಕಾಲ 6 ಗಂಟೆಗೆ ನಗರದ ಸರಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡಿ ಜುಲೈ 29ರ ಬೆಳಿಗ್ಗೆ 8 ಗಂಟೆಗೆ ರಾಯಚೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



 ಹತ್ತಿಕುಣಿ ಆಣೆಕಟ್ಟಿನಿಂದ ನದಿಗೆ ನೀರು: ಮುಂಜಾಗ್ರತೆ ವಹಿಸಲು ಸೂಚನೆ

ಯಾದಗಿರಿ,ಜು.20(ಕರ್ನಾಟಕ ವಾರ್ತೆ): ಹತ್ತಿಕುಣಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವದರಿಂದ ಜಲಾಶಯಕ್ಕೆ ನಿರಂತರವಾಗಿ ಒಳಹರಿವು ಹೆಚ್ಚಾಗುತ್ತಿದ್ದು, ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗುವ ಹಂತದಲ್ಲಿದೆ. ಗರಿಷ್ಠ ಮಟ್ಟದ ನಂತರ ಬಂದ ಒಳಹರಿವಿನ ನೀರನ್ನು ಆಣೆಕಟ್ಟೆ ಮೂಲಕ ನದಿಗೆ ಹರಿಬಿಡಲಾಗುವುದು ಎಂದು ನೀರಾವರಿ ನಿಗಮ ನಿಯಮಿತ ಬೆಣ್ಣೆತೋರ ಯೋಜನೆ ವಿಭಾಗದ ನಂ.4 ಹೆಬ್ಬಾಳ, ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

 

ಆದ್ದರಿಂದ ಹತ್ತಿಕುಣಿ ನದಿಯ ಸುತ್ತ ಮುತ್ತಲಿನ ಗ್ರಾಮಗಳಿಗೆ ನದಿ ಪ್ರವಾಹದಿಂದ ತೊಂದರೆ ಉಂಟಾಗಬಹುದಾಗಿದೆ. ನದಿಯ ಅಕ್ಕಪಕ್ಕದ ಜನರು, ನದಿಯಲ್ಲಿ ಈಜುವುದಾಗಲಿ,ಬಟ್ಟೆ ಒಗೆಯುವುದಾಗಲಿ, ದನಕರುಗಳಿಗೆ ನೀರು ಕುಡಿಸುವುದಾಗಲಿ ಹಾಗೂ ಇನ್ನಿತರ ಕಾರಣಗಳಿಗಾಗಿ ನದಿಗೆ ಇಳಿಯಬಾರದು.ನದಿಯ ಪಾತ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆ ಸೇರಿದಂತೆ ಇನ್ನಿತರ ಯಾವುದೇ ಇಲಾಖೆಗಳಿಗೆ ಸಂಬAಧಪಟ್ಟ ಆಸ್ತಿಗಳಿದ್ದಲ್ಲಿ, ಮುಂಜಾಗ್ರತೆಯಾಗಿ ಸುರಕ್ಷಿತ ಕ್ರಮ ಕೈಗೊಳ್ಳಬೇಕೆಂದು ಪ್ರಕಟಣೆ ತಿಳಿಸಿದೆ.







ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ,ಜು.20(ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ  ಇಲಾಖೆ  ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ  ಜುಲೈ 22ರಂದು ಶಹಾಪೂರ ನಗರಸಭೆ ಸಭಾಂಗಣದಲ್ಲಿ 1 ದಿನದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲೆಯ  ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

     

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತಿದ್ದು, ನಿರಿದ್ಯೋಗವಂತರು ಇದರ ಲಾಭ ಪಡೆದುಕೊಳ್ಳುವಂತೆ  ಅವರು ತಿಳಿಸಿದ್ದಾರೆ.

18 ರಿಂದ 40 ವರ್ಷ ವಯಸ್ಸಿನೊಳಗಿನ ಎಸ್.ಎಸ್.ಎಲ್.ಸಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸಿಡಾಕ್- ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ, ಜಿಲ್ಲಾಡಳಿತ ಭವನ ಯಾದಗಿರಿ ಈ ವಿಳಾಸದಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸ: 9901914945/8147307003 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.



ಶುಕ್ರವಾರ, ಜುಲೈ 16, 2021




 ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಪ್ರಗತಿ ಪರಿಶೀಲನಾ ಸಭೆ

ಜಲಧಾರೆ: ನಿರಂತರ ನೀರು ಸಿಗುವಂತಾಗಲಿ

         : ಸಂಸದ ಅಮರೇಶ್ವರ ನಾಯಕ

ಯಾದಗಿರಿ,ಜುಲೈ16,(ಕ.ವಾ): ಜಲಧಾರೆ ಯೋಜನೆಯಡಿಯಲ್ಲಿ ಎಲ್ಲರಿಗೂ ವರ್ಷದ 12 ತಿಂಗಳು ನೀರು ಸಿಗುವಂತಾಗಬೇಕು ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ರಾಯಚೂರು ಲೋಕಸಭಾ ಸದ್ಯಸರಾದ ಅಮರೇಶ್ವರ ನಾಯಕ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

    ಕೇಂದ್ರ ಸರಕಾರದ ಜನಪ್ರಿಯ ಯೋಜನೆಗಳಲೊಂದಾದ ಜಲಧಾರೆ ಯೋಜನೆಯ ಮುಖ್ಯ ಉದ್ದೇಶವೆಂದರೆ ದೇಶದ ಜನರಿಗೆ ನದಿಗಳಿಂದ ನದಿಗಳಿಗೆ ಜೋಡಸಿ ವರ್ಷದ 12 ತಿಂಗಳು ನೀರು ಸಿಗುವಂತಾಗಬೇಕು. ಈಗಾಗಲೇ ಈ ಕಾರ್ಯಕ್ಕೆ  ರಾಯಚೂರು ಜಿಲ್ಲೆಯಲ್ಲಿ ಅನುಮೋದನೆ ದೊರೆತಿದ್ದು, ಈ ಜಿಲ್ಲೆಯಿಂದಲೂ ಪ್ರಸ್ತಾವನೆ ಸಲ್ಲಿಸುವಂತೆ ಅವರು ತಿಳಿಸಿದರು.

    ಯಾದಗಿರಿ ಮತ್ತು ರಾಯಚೂರು ಜಿಲ್ಲೆಯಲ್ಲಿ 75ಸಾವಿರ ಕಾರ್ಮಿಕರಿಗೆ ಕಿಟ್‌ಗಳನ್ನು ವಿತರಿಸಿದ್ದು,ಅದರಲ್ಲಿ 30ಸಾವಿರ ಕಿಟ್‌ಗಳನ್ನು ಕಾರ್ಮಿಕರಿಗೆ ವ್ಯವಸ್ಥಿತವಾಗಿ ತಲುಪಿಸಲಾಗಿದೆ.ಮತ್ತು ಹೆಚ್ಚಿನ ಕಿಟ್‌ಗಳಿಗೆ ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರಿಗೆ ಮನವಿ ಮಾಡಲಾಗಿದೆ ಎಂದರು.

    ಕೇಂದ್ರ ಸರಕಾರದ ಯೋಜನೆಗಳ ಕುರಿತು ಸಾರ್ವಜನಿಕರಿಗೆ ತಿಳಿಸಿ ಇದರ ಸದುಪಯೋಗಪಡಿಸಿಕೊಳ್ಳಲು ಅಧಿಕಾರಿಗಳು ನೆರವಾಗಬೇಕು. ಅಲ್ಲದೇ ಅಧಿಕಾರಿಗಳು ಮಾಹಿತಿಯನ್ನು ಸಮರ್ಪಕವಾಗಿ ನೀಡಬೇಕು ಎಂದು ಅವರು ಸೂಚಿಸಿದರು.  

  ಶಹಾಪೂರ ಶಾಸಕ ಶರಣಬಸಪ್ಪಗೌಡ ದರ್ಶನಾಪೂರ ಮಾತನಾಡಿ,  ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುಟುಂಬಗಳಿಗೆ ತ್ವರಿತವಾಗಿ ನೀಡಬೇಕು ಎಂದರು. ಇದಕ್ಕೆ ದ್ವನಿಗೂಡಿಸಿದ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಕುಂಟುನೆಪಗಳನ್ನು ಹೇಳದೆ ನೊಂದವರ ಕಷ್ಟಕ್ಕೆ ಸ್ಪಂದಿಸಬೇಕೆAದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಮಾತನಾಡಿ, ಪರಿಹಾರ ನೀಡಲು ಯಾವುದೇ ವಿಳಂಬ ಮಾಡುವುದಿಲ್ಲ ಎಂದು ಸಮಜಾಯಿಸಿ ನೀಡಿದರು.

    ಗ್ರಾ.ಪಂ ವ್ಯಾಪ್ತಿಯಲ್ಲಿನ ಕೆರೆಗಳನ್ನು ಹೂಳೆತ್ತುವ ಕಾರ್ಯವನ್ನು ಆರಂಭಿಸುವAತೆ ಮತ್ತು ದುರಸ್ತಿಯಲ್ಲಿರುವ ಶುದ್ಧ ನೀರಿನ ಘಟಕಗಳನ್ನು ರಿಪೇರಿಗೊಳಿಸಿ ಅನುವು ಮಾಡಿಕೊಂಡಬೇಕೆAದು ಅಧಿಕಾರಿಗಳಿಗೆ ಸಂಸದರು ಸೂಚಿಸಿದರು.

        ಜಿ.ಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ ಈ ಬಗ್ಗೆ ಗಮನಹರಿಸಿ 15 ದಿನಗೊಳಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. 

       ಶಾಸಕ ವೆಂಕಟರೆಡ್ಡಿ ಮುದ್ನಾಳ ಮಾತನಾಡಿ, ಪ್ರಾಕೃತಿಕ ಅನಾಹುತ ಸಂದರ್ಭದಲ್ಲಿ ಹೆಚ್ಚಿನ ಕಾಳಜಿ ವಹಿಸಿ ಜನರ ನೆರವಿಗೆ ದಾವಿಸಬೇಕು. ಸಣ್ಣ ಚೆಕ್ ಡ್ಯಾಂಗಳ ನಿರ್ಮಾಣಕ್ಕೆ  ನರೇಗಾ ಯೋಜನೆಯಲ್ಲಿ ಒತ್ತು ನೀಡಬೇಕೆಂದು ಹೇಳಿದರು.

    ಸಂಸದ ಅಮರೇಶ್ವರ ನಾಯಕ ಮಾತನಾಡಿ, ಕಾಲುವೆ ಗೇಟ್‌ಗಳ ರಿಪೇರಿ ಸೇರಿದಂತೆ ಇನ್ನಿತರ ಕಾರ್ಯಗಳನ್ನು ಕಾಲುವೆಗಳಿಗೆ ನೀರು ಬಿಡುಗಡೆಗೆ ಮುನ್ನ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಕೃಷಿ ಇಲಾಖೆ, ಆಹಾರ ಇಲಾಖೆ ಸೇರಿದಂತೆ ಉಳಿದ ಇಲಾಖೆಗಳಲ್ಲಿನ ಪ್ರಗತಿಯನ್ನು ಅವರು ಪರಿಶೀಲನೆ ನಡೆಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ,ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.





 ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜನ ಜಾಗೃತಿ ಜಾಥಾಕ್ಕೆ ಚಾಲನೆ

ಯಾದಗಿರಿ,ಜುಲೈ16,(ಕ.ವಾ): “ವಿಪತ್ತಿನಲ್ಲಿಯೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟç ಮತ್ತು ಕುಟುಂಬಕ್ಕೆ ನಾಂದಿ” ಎಂಬ ಘೋಷ ವಾಕ್ಯದೊಂದಿಗೆ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜನ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ರಾಯಚೂರ ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರನಾಯಕ ಅವರು ಚಾಲನೆ ನೀಡಿದರು. 


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಯಾದಗಿರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಾಲಾ ಕಾಲೇಜು ಹಾಗೂ ಸಂಘ-ಸAಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಜನ ಜಾಗೃತಿ ಜಾಥಾಕ್ಕೆ  ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ಶಹಾಪೂರ ಶಾಸಕ ಶರಣಬಸಪ್ಪಗೌಡ ದರ್ಶನಾಪೂರ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ,  ಜಿ.ಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದುಮತಿ ಕಾಮಶೆಟ್ಟಿ, ಆರ್.ಸಿ.ಹೆಚ್.ಒ ಡಾ.ಲಕ್ಷಿö್ಮÃಕಾಂತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣಾಧಿಕಾರಿ ಪ್ರಭಾಕರ್ ಕವಿತಾಳ, ಕಾರ್ಯಕ್ರಮ ಅಧಿಕಾರಿ ಡಾ.ಭಗವಂತ ಅನ್ವಾರ್ ಮತ್ತು ವಿವಿಧ ಅಧಿಕಾರಿಗಳು ಇದ್ದರು.

  ತಂಬಾಕು ಉತ್ಪನ್ನ ಮಾರಾಟ ದಾಳಿ: ದಂಡ ವಸೂಲಿ

ಯಾದಗಿರಿ,ಜುಲೈ16,(ಕ.ವಾ): ಜಿಲ್ಲೆಯ ಸೈದಾಪುರ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣಕೋಶ ಅಧಿಕಾರಿಗಳು ದಾಳಿ ನಡೆಸಿ ತಂಬಾಕು ಉತ್ಪನ್ನಗಳ ಮಾರಾಟಗಾರರಿಗೆ ಎಚ್ಚರಿಕೆ ನೀಡಿ, ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳಿಗೆ  ಸೆಕ್ಸನ್ 4 ಮತ್ತು 6 ಎ ನಾಮಫಲಕಗಳನ್ನು ವಿತರಿಸಲಾಯಿತು.

ಜಿಲ್ಲೆಯನ್ನು ಕೋಟ್ಪಾ 2003 ರ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಒಂದು ವಾರಗಳ ಕಾಲ ತಂಬಾಕು ದಾಳಿಯನ್ನು ಹಮ್ಮಿಕೊಂಡಿದ್ದು, ಜುಲೈ 15ರಂದು ಸೈದಾಪೂರ, ಪಟ್ಟಣದಲ್ಲಿ ಕೋಟ್ಪಾ 2003 ರ ದಾಳಿಯನ್ನು ಕೈಗೊಂಡು ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ತಂಬಾಕು ಮುಕ್ತ ಯುವ ಪೀಳಿಗೆ ಕುರಿತು ಮಾಹಿತಿ ನೀಡಲಾಯಿತು.


ಕೋಟ್ಪಾ 2003 ರ ಸೆಕ್ಷನ್ 4 ಉಲ್ಲಂಘಿಸಿದವರ ವಿರುದ್ಧ 76 ಪ್ರಕರಣಗಳನ್ನು ದಾಖಲಿಸಿ ರೂ.5500/- ದಂಡ ವಸೂಲಿ ಮಾಡಲಾಯಿತು. ಹಾಗೂ ಸೆಕ್ಸನ್ 6ಎ ಅಡಿಯಲ್ಲಿ 25 ಪ್ರಕರಣಗಳನ್ನು ದಾಖಲಿಸಿ ರೂ 2450 /- ದಂಡ ವಸೂಲಿ ಮಾಡಲಾಯಿತು. ಹಾಗೂ ಸೆಕ್ಷನ್ ಬಿ ಅಡಿಯಲ್ಲಿ 22 ಪ್ರಕರಣ ದಾಖಲಿಸಿ ರೂ 2450/- ದಂಡ ವಸೂಲಿ ಮಾಡಲಾಯಿತ್ತು. ಒಟ್ಟಾರೆಯಾಗಿ 123 ಪ್ರಕರಣ ದಾಖಲಿಸಿ ರೂ 10400/- ದಂಡ ವಸೂಲಿ ಮಾಡಿಲಾಗಿದೆ ಎಂದು ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗಿಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ ತಿಳಿಸಿದ್ದಾರೆ.


ಜಿಲ್ಲಾ ಸಲಹೆಗಾರಾರದ ಮಹಾಲಕ್ಷಿö್ಮÃ ಸಜ್ಜನ್ ಸೇರಿದಂತೆ ಕಂದಾಯ ಇಲಾಖೆ, ಆರೊಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.  


ಗುರುವಾರ, ಜುಲೈ 15, 2021

 ಎಸ್.ಎಸ್.ಎಲ್.ಸಿ ಪರೀಕ್ಷೆ : ಜಿಲ್ಲೆಯಲ್ಲಿ 17749 ವಿದ್ಯಾರ್ಥಿಗಳು

ಯಾದಗಿರಿ.ಜುಲೈ.15(ಕ.ವಾ): 2021 ರ ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ಬರುವ ಜುಲೈ 19 ಹಾಗೂ 22 ರಂದು ನಡೆಯಲಿವೆ. ಕೋವಿಡ್ ಸುರಕ್ಷತಾ ಕ್ರಮಗಳ ಪಾಲನೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಜಿಲ್ಲೆಯಲ್ಲಿ 92 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು 17749 ಮಕ್ಕಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಪ್ರತಿಯೊಂದು ಪರೀಕ್ಷಾ ಬ್ಲಾಕಿನಲ್ಲಿ 12 ವಿದ್ಯಾರ್ಥಿಗಳನ್ನು ಪರಸ್ಪರ 6 ಅಡಿ ಅಂತರದೊAದಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.


122 ಸರ್ಕಾರಿ ಪ್ರೌಢ ಶಾಲೆ, 16 ಸರಕಾರಿ ವಸತಿ ಪ್ರೌಢ ಶಾಲೆ,  17 ಅನುದಾನಿತ ಹಾಗೂ 76 ಖಾಸಗಿ ಪ್ರೌಢ ಶಾಲೆಗಳು ಸೇರಿ ಒಟ್ಟು 231 ಶಾಲೆಗಳಿಂದ 14060 ವಿದ್ಯಾರ್ಥಿಗಳು ಮತ್ತು 812 ಖಾಸಗಿ ಅಭ್ಯರ್ಥಿಗಳು, 2549 ಪುನಾರವರ್ತಿತ ಅಭ್ಯರ್ಥಿಗಳು, 327 ಖಾಸಗಿ ಪುನಾರವರ್ತಿತ ಅಭ್ಯರ್ಥಿಗಳು ಸೇರಿ 17749 ವಿದ್ಯಾರ್ಥಿಗಳು  ಪರೀಕ್ಷೆಗೆ ಹಾಜರಾಗಲಿದ್ದಾರೆ. ನಗರ ಪ್ರದೇಶಗಳಲ್ಲಿ 51 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 41 ಸೇರಿ ಒಟ್ಟು 92 ಪರೀಕ್ಷಾ ಕೇಂದ್ರಗಳಲ್ಲಿ  ಪರೀಕ್ಷಾ ಕಾರ್ಯಕ್ಕೆ 2400 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ.


ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಹಾಯ ಕೇಂದ್ರ (ಹೆಲ್ಪ್ ಡೆಸ್ಕ್) ಸ್ಥಾಪಿಸಲಾಗುವುದು ಅಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ದೈಹಿಕ ಶಿಕ್ಷಣ ಶಿಕ್ಷಕರು, ಎನ್.ಸಿ.ಸಿ., ಸ್ಕೌಟ್ಸ್, ಗೈಡ್ಸ್ ಸ್ವಯಂ ಸೇವಕರು ಥರ್ಮಲ್ ಸ್ಕ್ಯಾನರ್, ಪಲ್ಸ್ ಆಕ್ಸಿಮೀರ‍್ಗಳೊಂದಿಗೆ ಮಕ್ಕಳ ಆರೋಗ್ಯ ತಪಾಸಣೆ ಮಾಡಿ ಎಲ್ಲರಿಗೂ ಪ್ರತ್ಯೇಕವಾಗಿ ಸ್ಯಾನಿಟೈಸರ್ ಹಾಗೂ ಮಾಸ್ಕ್ ನೀಡಲಾಗುವುದು.


ಬೆಳಿಗ್ಗೆ 9 ಗಂಟೆಗೆ ಹಾಜರಿರಲು ಸೂಚನೆ:  ಜುಲೈ 19, ಸೋಮವಾರ ಕೋರ್ ವಿಷಯಗಳಾದ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಹಾಗೂ ಸಂಗೀತ ವಿಷಯಗಳ ಪರೀಕ್ಷೆಗಳು,  ಜುಲೈ 22 ರಂದು ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿದೆ ಪರೀಕ್ಷೆಗಳು ಬೆಳಿಗ್ಗೆ 10-30 ರಿಂದ ಮಧ್ಯಾಹ್ನ 1-30 ರ ವರೆಗೆ ನಡೆಯಲಿವೆ ಆದರೆ ಆರೋಗ್ಯ ತಪಾಸಣೆ, ನೂಕು ನುಗ್ಗಲು ತಡೆಯುವ ಉದ್ದೇಶದಿಂದ ಬೆಳಿಗ್ಗೆ 8.30 ಗಂಟೆಗೆ ಪರೀಕ್ಷಾ ಕೇಂದ್ರ ತೆರೆಯಲಿದೆ.


ವಲಸೆ ವಿದ್ಯಾರ್ಥಿಗಳು:  ಈ ಬಾರಿ ಜಿಲ್ಲೆಯಲ್ಲಿ 369 ವಲಸೆ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ  ಬೇರೆ ಜಿಲ್ಲೆಯಿಂದ ಯಾದಗಿರಿ ಜಿಲ್ಲೆಗೆ ವಲಸೆ ಬಂದಿರುವ 369 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. 

   

ವಿವಿಧ ರೋಗಗಳ ಲಕ್ಷಣವಿರುವ  ವಿದ್ಯಾರ್ಥಿಗಳಿಗೆ  ಪರೀಕ್ಷೆ ಬರೆಯಲು ಪ್ರತಿ ಪರೀಕ್ಷಾ ಕೇಂದ್ರದಲ್ಲಿ 2 ಹೆಚ್ಚುವರಿ ಕೊಠಡಿಗಳನ್ನು ಸಿದ್ದಪಡಿಸಲಾಗಿದೆ.ಕೋವಿಡ್ ಪಾಸಿಟಿವ್ ಹೊಂದಿರುವ ವಿದ್ಯಾರ್ಥಿಗಳಿಗಾಗಿ ಪ್ರತಿ ತಾಲೂಕಿನಲ್ಲಿ ಒಂದು ಪರೀಕ್ಷಾ ಕೇಂದ್ರ ಸಿದ್ದಗೊಳಿಸಲಾಗಿದ್ದು,ಅಂತಹ ವಿದ್ಯಾಥಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬರಲು ತಾಲೂಕಿಗೊಂದು ಆಂಬ್ಯುಲೆನ್ಸ್  ಸಜ್ಜುಗೊಳಿಸಲಾಗಿದೆ. ತಾಲೂಕಿಗೊಂದು ಜಿಲ್ಲಾ ಜಾಗೃತ ತಂಡ ರಚಿಸಲಾಗಿದೆ. ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ 2400 ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ 1ನೇ ಡೋಸ್ ನೀಡಲಾಗಿದೆ.



 ಆನ್‌ಲೈನ್ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ:ಜುಲೈ-15(ಕ.ವಾ) ಅಕಾಂಕ್ಷಾ ಸಿ.ಎಸ್.ಆರ್ ಕಾರ್ಯಕ್ರಮದಡಿಯಲ್ಲಿ ಅಪೊಲೊ ಮೆಡ್ ಸ್ಕಿಲ್ಸ್ ಸಂಸ್ಥೆಯ ವತಿಯಿಂದ ಆರೋಗ್ಯ ವಲಯದಲ್ಲಿ 12 ಸಾವಿರ ಅಭ್ಯರ್ಥಿಗಳಿಗೆ 10 ರಿಂದ 20 ದಿನದ ಆನ್ ಲೈನ್ ಕೌಶಲ್ಯ ತರಬೇತಿ ನೀಡುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

10 ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾದ ಅಥವಾ ಶಾಲೆ ಬಿಟ್ಟಿರುವ ಮಕ್ಕಳು ಈ ತರಬೇತಿಗೆ ಅರ್ಹರಿರುತ್ತಾರೆ. ಯುವ ಸಂಘಗಳು ಮತ್ತು ರಾಷ್ಟಿçÃಯ ಸೇವಾ ಸಂಸ್ಥೆಯ ಸ್ವಯಂ ಸೇವಕರುಗಳು ಸಹ ಅರ್ಜಿ ಸಲ್ಲಸಬಹುದಾಗಿದ್ದು, ವೆಬ್ ಸೈಟ್ hಣಣಠಿs://ಜಿoಡಿms.gಟe/6ಥಿ ಃಒಙeಚಿmಞಛಿಖಠಿg4ಜಿಛಿಡಿ ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ. 

ತರಬೇತಿ ಪಡೆದ ಅಭ್ಯರ್ಥಿಗಳಿಗೆ ಖಾಸಗಿ ವಲಯದಲ್ಲಿ ಉದ್ಯೋಗಾವಕಾಶ ನೀಡಿ ತಿಂಗಳಿಗೆ ರೂ, 13000-25000ರವರೆಗೆ ಹಾಗೂ ಇತರ ಭತ್ಯಗಳ ಸಮೇತ ನೀಡಲಿದ್ದಾರೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಅಲ್ಪಸಂಖ್ಯಾತರ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಯಾದಗಿರಿ.ಜುಲೈ.15(ಕ.ವಾ): 2021-22ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಯಾದಗಿರಿ ಜಿಲ್ಲೆ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮಾದರಿ ವಸತಿ ಶಾಲೆ (ನವೋದಯ) ಮತ್ತು ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಶಾಲೆಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ವಸತಿ, ಊಟ, ಸಮವಸ್ತç, ಶೂ, ಸಾಕ್ಸ್, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಹಾಸಿಗೆ ಹೊದಿಕೆ, ಸೋಪು ಸೇರಿದಂತೆ  ಇತರೆ ಅವಶ್ಯಕ ಸೌಲಭ್ಯವನ್ನು ಕಲ್ಪಿಸುವುದರ ಜೊತೆಗೆ ನುರಿತ ಶಿಕ್ಷಕರಿಂದ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತದೆ. ವಸತಿ ಶಾಲೆಗಳಲ್ಲಿ ಶೇ. 50% ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತವೆ. ಒಂದು ಸಲ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಪ್ರವೇಶ ಪಡೆದರೆ, 10ನೇ ತರಗತಿ ವರೆಗೆ ಉಚಿತ ಶಿಕ್ಷಣ ಹಾಗೂ ಮಾದರಿ ವಸತಿ ಶಾಲೆಗೆ ಪ್ರವೇಶ ಪಡೆದರೆ ದ್ವೀತಿಯ ಪಿ.ಯು.ಸಿ ವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದಾಗಿದೆ.

ಅಲ್ಪಸಂಖ್ಯಾತರ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಈ ಶಾಲೆಗಳಲ್ಲಿ ಪ್ರವೇಶ ಲಭ್ಯವಿದ್ದು, ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಅಲ್ಪಸಂಖ್ಯಾತರ ಶೇ. 75% ರಷ್ಟು ಸ್ಥಾನಗಳನ್ನು (ಮುಸ್ಲಿಂ-77%, ಕ್ರಿಶ್ಚಿಯನ್-14%, ಜೈನ್-6%, ಬೌದ್ಧ-2%, ಸಿಖ್-1%) ಕಲ್ಪಿಸಲಾಗಿರುತ್ತದೆ. ಶೇ. 25% ರಷ್ಟು ಸ್ಥಾನಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಿಡಲಾಗಿರುತ್ತದೆ. 

ಪ್ರಸ್ತುತ ಕರ್ನಾಟಕ ಸರ್ಕಾರದ/ ಅಂಗೀಕೃತ ಶಾಲೆಗಳಲ್ಲಿ 5ನೇ ತರಗತಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸ್ವೀಕೃತವಾದ ಅರ್ಹ ಅರ್ಜಿಗಳಲ್ಲಿ ಪೋಷಕರ ವಾರ್ಷಿಕ ವರಮಾನ ಹಾಗು ಇನ್ನಿತರಗಳನ್ನು ಪರಿಗಣಿಸಿ ಅನುಪಾತವಾರು ಜಿಲ್ಲಾ ಮಟ್ಟದಲ್ಲಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಪಡೆದ ಶೇಕಡವಾರು ಅಂಕಗಳಿಗೆ ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಿ 6ನೇ ತರಗತಿಗೆ ಅಗತ್ಯ ದಾಖಲೆಗಳನ್ನು ಪಡೆದು ಪ್ರವೇಶ ನೀಡಲಾಗುವುದು. 

ಪ್ರವೇಶಕ್ಕೆ ಬೇಕಾದ ಅರ್ಜಿಗಳನ್ನು  ಈ ಮೇಲಿನ ವಸತಿ ಶಾಲೆಗಳಲ್ಲಿ, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಯಾದಗಿರಿ, ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಶಹಾಪುರ ಮತ್ತು ಸುರಪುರಗಳಿಂದ ಉಚಿತವಾಗಿ ಪಡೆದು ಜುಲೈ 30ರೊಳಗೆ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಯಾದಗಿರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳ ಕಚೇರಿಗೆ ದೂ. 08473-253235 ಸಂಪರ್ಕಿಸಬಹುದಾಗಿದೆ.





ತAಬಾಕು ಉತ್ಪನ್ನ ಮಾರಾಟ ದಾಳಿ: ದಂಡ ವಸೂಲಿ

ಯಾದಗಿರಿ.ಜುಲೈ.15(ಕ.ವಾ): ಜಿಲ್ಲೆಯ ಶಹಾಪೂರ, ಸುರಪುರ, ಕೆಂಭಾವಿ ಸೇರಿದಂತೆ ವಿವಿಧ ಕಡೆಯ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣಕೋಶ ಅಧಿಕಾರಿಗಳು ದಾಳಿ ನಡೆಸಿ ತಂಬಾಕು ಉತ್ಪನ್ನಗಳ ಮಾರಾಟಗಾರರಿಗೆ ಎಚ್ಚರಿಕೆ ನೀಡಿ, ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳಿಗೆ  ಸೆಕ್ಸನ್ 4 ಮತ್ತು 6 ಎ ನಾಮಫಲಕಗಳನ್ನು ವಿತರಿಸಲಾಯಿತು.

ಯಾದಗಿರಿ  ಜಿಲ್ಲೆಯನ್ನು ಕೋಟ್ಪಾ 2003 ರ ಕಾಯ್ದೆಯ ಉನ್ನತ ಅನುಷ್ಠಾನ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಒಂದು ವಾರಗಳ ಕಾಲ ತಂಬಾಕು ದಾಳಿಯನ್ನು ಹಮ್ಮಿಕೊಂಡಿದ್ದು ಅದರಂತೆ  ಜುಲೈ 12, 13, 14 ರಂದು ಕ್ರಮವಾಗಿ ಶಹಾಪೂರ, ಸುರಪೂರ, ಕೆಂಭಾವಿ ಪಟ್ಟಣಗಳಲ್ಲಿ ಕೋಟ್ಪಾ 2003 ರ ದಾಳಿಯನ್ನು ಕೈಗೊಂಡು ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ತಂಬಾಕು ಮುಕ್ತ ಯುವ ಪೀಳಿಗೆ ಕುರಿತು ಮಾಹಿತಿ ನೀಡಲಾಯಿತು. 

  ಕೋಟ್ಪಾ 2003 ರ ಸೆಕ್ಷನ್ 4 ಉಲ್ಲಂಘಸಿದವರ ವಿರುದ್ಧ 197 ಪ್ರಕರಣಗಳನ್ನು ದಾಖಲಿಸಿ ರೂ.14600/- ದಂಡ ವಸೂಲಿ ಮಾಡಲಾಯಿತು. ಹಾಗೂ ಸೆಕ್ಸನ್ 6ಎ ಅಡಿಯಲ್ಲಿ 81 ಪ್ರಕರಣಗಳನ್ನು ದಾಖಲಿಸಿ ರೂ 7950/- ದಂಡ ವಸೂಲಿ ಮಾಡಲಾಯಿತು. ಹಾಗೂ ಸೆಕ್ಷನ್ ಬಿ ಅಡಿಯಲ್ಲಿ 30 ಪ್ರಕರಣ ದಾಖಲಿಸಿ ರೂ 3000/- ದಂಡ ವಸೂಲಿ ಮಾಡಲಾಯಿತ್ತು. ಒಟ್ಟಾರೆಯಾಗಿ 308 ಪ್ರಕರಣ ದಾಖಲಿಸಿ ರೂ 25550/- ದಂಡ ವಸೂಲಿ ಮಾಡಿಲಾಗಿದೆ ಎಂದು ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗಿಯ ಸಂಯೋಜಕರಾದ ಮಹಾಂತೇಶ ಉಳ್ಳಾಗಡ್ಡಿ ತಿಳಿಸಿದ್ದಾರೆ.

  ಜಿಲ್ಲಾ ಸಲಹೆಗಾರಾರದ ಮಹಾಲಕ್ಷಿö್ಮÃ ಸಜ್ಜನ್ ಸೇರಿದಂತೆ ಕಂದಾಯ ಇಲಾಖೆ, ಆರೊಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಇದ್ದರು.  

 ಕೃತಕ ಅಂಗಾಗಳ ಜೋಡಣೆಗೆ ಅರ್ಜಿ ಆಹ್ವಾನ

ಯಾದಗಿರಿ.ಜುಲೈ.15(ಕ.ವಾ): 2020-21ನೇ ಸಾಲಿನ ಶೇ.24.10%, 7.25% ಮತ್ತು 5%ರ ಯೋಜನೆಯಡಿಯಲ್ಲಿ ಎಸ್.ಎಫ್.ಸಿ ಹಾಗೂ ನಗರಸಭೆ ಅನುದಾನದ ಅಡಿಯಲ್ಲಿ ವಿಕಲಚೇತನ ಹೊಂದಿರುವ ಫಲಾನುಭವಿಗಳಿಗೆ ಕೃತಕ ಅಂಗಾಗಳ ಜೋಡಣೆ ಸಲುವಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಸಲಾಗಿದೆ.

ಅರ್ಜಿ ಸಲ್ಲಿಸುವ ಫಲಾನುಭವಿಗಳು ಸ್ಥಳೀಯ ನಿವಾಸಿಯಾಗಿರಬೇಕು, ಅಂಗವಿಕಲರ ಪ್ರಮಾಣ ಪತ್ರ, ಜಾತಿ & ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ, ಬಿ.ಪಿ.ಎಲ್ ಕಾರ್ಡ & ಐಡಿ ಕಾರ್ಡ,  2 ಫೋಟೋ ಅರ್ಜಿಯನ್ನು  ಜುಲೈ 13 ರಿಂದ ಜುಲೈ 31ರೊಳಗೆ ನಗರಸಭೆ ಕಾರ್ಯಲಯಕ್ಕೆ ಸಲ್ಲಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾನೂನು ಬಾಹಿರವಾಗಿ ಪ್ರಾಣಿ ವಧೆ ಮಾಡಿದರೆ ಕಠಿಣ ಕ್ರಮ

ಯಾದಗಿರಿ.ಜುಲೈ.15(ಕ.ವಾ): ಬಕ್ರೀದ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಜಾನುವಾರುಗಳಾದ ಎಲ್ಲ ವಯಸ್ಸಿನ ಆಕಳು, ಆಕಳ ಕರು, ಹೋರಿ, ಎತ್ತು, ಒಂಟೆ, ಅಲ್ಲದೆ 13 ವರ್ಷದೊಳಗಿನ ಎಮ್ಮೆ, ಕೋಣಗಳ ಹತ್ಯೆಮಾಡುವಂತಿಲ್ಲ, ಈ ಕುರಿತು ಸಂಬAದಿಸಿದ ತಂಡಗಳು ಸೂಕ್ತ ನಿಗಾವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

 ನಗರದ ಜಿಲ್ಲಾಧಿಕಾರಿಗಳ ಕಛೇರಿಯ ಸಂಭಾAಗಣದಲ್ಲಿ ಬುಧವಾರ ನಡೆದ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ಹತ್ಯೆ ಹಾಗೂ ಜಾನುವಾರುಗಳ ಸಾಗಾಣಿಕೆ ತಡೆಗಟ್ಟುವ  ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು 

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರAಕ್ಷಣಾ ಖಾಯ್ದೆ 2020 ರನ್ವಯ ಯಾವುದೇ ರೀತಿಯ ಜಾನುವಾರುಗಳ ಹತ್ಯೆ ಮಾಡುವಂತಿಲ್ಲ. ಈ ನಿಟ್ಟಿನಲ್ಲಿ ಜುಲೈ-21 ರಂದು ಜರಗುವ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯ ಕಾಯ್ದೆ ಉಲ್ಲಂಘನೆ ಯಾಗದಂತೆ ನೋಡಿಕೊಳ್ಳುವ ಅವಶ್ಯಕತೆ ಇದೆ ಎಂದು ತಿಳಿಸಿದರು.

ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವು ಹಾಗೂ ಒಂಟೆಗಳ ಅಕ್ರಮ ಸಾಗಾಣಿಕೆ ಹಾಗೂ ವಧೆಯ ಜಾನುವಾರು ಸಾಗಾಣಿಕೆ ಮಾಡುವಾಗ ದಾಖಲಾತಿ ಇಲ್ಲದೆ ಸಾಗಾಣಿಕೆ ಮಾಡುವುದು ಕಾನೂನು ಬಾಹಿರವಾಗಿರುತ್ತದೆ.  ಈ ಬಗ್ಗೆ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ಅಥವಾ ಹತ್ತಿರದ ಪೊಲೀಸ್ ಠಾಣೆಗಳಲ್ಲಿ ದೂರುಗಳನ್ನು ದಾಖಲಿಸುವಂತೆ ಅರಿವು ಮೂಡಿಸುವ ಹಾಗೂ ಪೊಲೀಸ್ ಇಲಾಖೆಯಿಂದ ಚಕ್-ಪೋಸ್ಟ್ ಸ್ಥಾಪಿಸಿ ಅಕ್ರಮ ಸಾಗಾಣಿಕೆ ಯಾಗದಂತೆ ಕ್ರಮ ಕೈಗೊಳ್ಳಲು ತಿಳಿಸಿದರು.

 


ಶುಕ್ರವಾರ, ಜುಲೈ 9, 2021

 ಮುಕ್ತ ವಿವಿ ಸಿಇಟಿ ತರಬೇತಿ

ಯಾದಗಿರಿ,ಜುಲೈ09(ಕ.ವಾ):- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಪಿಯುಸಿ ನಂತರದ ವೃತ್ತಿಪರ ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕ ಸರ್ಕಾರ ನಡೆಸಲಿರುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಕೆ-ಸಿಇಟಿ) 30 ದಿನಗಳ ಆನ್‌ಲೈನ್ ತರಬೇತಿಯನ್ನು ನೀಡಲು ನಿರ್ಧರಿಸಲಾಗಿದ್ದು, ಇದಕ್ಕಾಗಿ ಆಸಕ್ತರು ಹೆಸರು ನೊಂದಾಯಿಸುವAತೆ  ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಆರ್. ರಾಜಣ್ಣ ತಿಳಿಸಿದ್ದಾರೆ.

ಅಭ್ಯರ್ಥಿಗಳು ಜುಲೈ 17 ರೊಳಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿAದ ಸಂಜೆ 4 ಗಂಟೆಯೊಳಗಾಗಿ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 0821-2515944 ಗೆ  ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



ಜುಲೈ 16ರಂದು ದಿಶಾ ಸಭೆ

ಯಾದಗಿರಿ,ಜುಲೈ09(ಕ.ವಾ):- ರಾಯಚೂರ ಲೋಕಸಭಾ ಸದಸ್ಯರಾದ ರಾಜಾ ಅಮರೇಶ್ವರ ನಾಯಕ ಅಧ್ಯಕ್ಷತೆಯಲ್ಲಿ ಜುಲೈ 16ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆ ನಡೆಯಲಿದ್ದು, 2021 ರ ಜೂನ್ ತಿಂಗಳ ಅಂತ್ಯದವರೆಗಿನ ಪ್ರಗತಿ ಪರಿಶೀಲನೆ ಹಾಗೂ ಕೋವಿಡ್ ವಿಷಯಕ್ಕೆ ಸಂಬAಧಿಸಿದAತೆ ಸಭೆ ಚರ್ಚಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.


12 ರಿಂದ ವಿದ್ಯುತ್ ಗ್ರಾಹಕರ ಸಂವಾದ ಸಭೆ

ಯಾದಗಿರಿ,ಜುಲೈ09(ಕ.ವಾ):- ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ನಿಯಮಿತದ ವತಿಯಿಂದ ಜುಲೈ 12 ರಿಂದ 19 ರವರೆಗೆ ಜಿಲ್ಲೆಯ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಗ್ರಾಹಕರ ಸಂವಾದ ಸಭೆ ಆಯೋಜಿಸಲಾಗಿದು,್ದ ಗ್ರಾಹಕರು ತಮ್ಮ ವಿದ್ಯುತ್ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಯಾದಗಿರಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

 ಜುಲೈ 12 ರಂದು ಬೆಳಗ್ಗೆ 11 ರಿಂದ 1 ಗಂಟೆಯ ವರೆಗೆ üಗುರುಮಠಕಲ್‌ನ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ನಡೆಯಲಿದ್ದು, ಜುಲೈ 13 ರಂದು ಬೆಳಗ್ಗೆ 11 ರಿಂದ 1 ಗಂಟೆಯ ವರೆಗೆ ಯಾದಗಿರಿಯ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

 ಜುಲೈ 14 ರಂದು ಬೆಳಗ್ಗೆ 11 ರಿಂದ 1 ಗಂಟೆಯ ವರೆಗೆ ಶಹಾಪೂರದ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ನಡೆಯಲಿದ್ದು, ಜುಲೈ 19 ರಂದು ಬೆಳಗ್ಗೆ 11 ರಿಂದ 1 ಗಂಟೆಯ ವರೆಗೆ ಸುರಪುರದ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಮತ್ತು ಅಂದು ಮಧ್ಯಾಹ್ನ 2.30 ರಿಂದ 5 ಗಂಟೆಯ ವರೆಗೆ ಹುಣಸಿಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ ವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಸಭೆಗೆ ಹಾಜರಾಗಿ ವಿದ್ಯುತ್ ಸಮಸ್ಯೆಗಳಿಗೆ ಸಂಬAಧಿಸಿದ ಕುಂದು ಕೊರೆತೆಗಳನ್ನು ಪರಿಹರಿಸಿಕೊಳ್ಳಲು ಪ್ರಕಟಣೆ ತಿಳಿಸಿದೆ.


ಗುರುವಾರ, ಜುಲೈ 8, 2021

 ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ 

ಯಾದಗಿರಿ:ಜುಲೈ-08(ಕ.ವಾ): ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ  ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಛಿಸುವವರಿಗಾಗಿ 1 ದಿನದ ಉದ್ಯಮಶೀಲತಾ ಅಭಿವೃದ್ಧಿ ತಿಳಿವಳಿಕೆ ಶಿಬಿರ ಹಾಗೂ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜುಲೈ/ಆಗಷ್ಟ್ ತಿಂಗಳಲ್ಲಿ ಹಮ್ಮಿಕೊಂಡಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. 

   

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು. 

    

ಜಿಲ್ಲೆಯ 18 ವರ್ಷದಿಂದ 40 ವರ್ಷ ವಯಸ್ಸಿನ ಹಾಗೂ ಎಸ್.ಎಸ್.ಎಲ್.ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುತ್ತಿದೆ. ಅರ್ಜಿಯನ್ನು ಜುಲೈ 13ರೊಳಗಾಗಿ ಸಿಡಾಕ್-ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ 1ನೇ ಮಹಡಿ, ಎ ಬ್ಲಾಕ್.ನಂ.ಎ11 ಜಿಲ್ಲಾಡಳಿತ ಭವನ ಯಾದಗಿರಿ-585102 ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:9901914945/8147307003 ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಯಾದಗಿರಿಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



14ರಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೋನ್-ಇನ್ ಕಾರ್ಯಕ್ರಮ

ಯಾದಗಿರಿ:ಜುಲೈ-08(ಕ.ವಾ): ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಮತ್ತು ಉತ್ತಮ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಜುಲೈ 14 ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಪೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

   ಜಿಲ್ಲೆಯ ಎಲ್ಲಾ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಂಬAಧಿಸಿದAತೆ ಯಾವುದಾದರೂ ದೂರು ಮತ್ತು ಜಿಲ್ಲೆಯ ಸಂಚಾರ ವ್ಯವಸ್ಥೆ ಸೇರಿದಂತೆ ಇನ್ನಿತರ ಸುಧಾರಣೆಗಳ ಬಗ್ಗೆ ಸಲಹೆ ಅಥವಾ ಸಮಸ್ಯೆಗಳಿದ್ದರೆ ನೇರವಾಗಿ ದೂ.ಸಂ:08473-253730 ಕರೆ ಮಾಡಿ ಪರಿಹಾರ ಕಂಡುಕೊಳ್ಳುವAತೆ ಪ್ರಕಟಣೆ ತಿಳಿಸಿದೆ.


ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ:ಜುಲೈ-08(ಕ.ವಾ): ಜಿಲ್ಲೆಯ 04-ಶಿಶು ಅಭಿವೃದ್ಧಿ ಯೋಜನೆಗಳ  ವ್ಯಾಪ್ತಿಯಲ್ಲಿ ವಿವಿಧ ಗ್ರಾಮ ಪಂಚಾಯತ್ ಪಟ್ಟಣ ಪಂಚಾಯತ್, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 07-ಅಂಗನವಾಡಿ ಕಾರ್ಯಕರ್ತೆಯರ   ಹಾಗೂ   30-ಅಂಗನವಾಡಿ   ಸಹಾಯಕಿಯರ  ಗೌರವಸೇವೆ  ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜುಲೈ9 ರಿಂದ ಆರಂಭವಾಗಲಿದ್ದು, ಆಗಷ್ಟ್ 07 ಕೊನೆಯ ದಿನವಾಗಿರುತ್ತದೆ. ಹುದ್ದೆಗಳು ಖಾಲಿ ಇರುವ ವಿವರ ಹಾಗೂ ಅರ್ಜಿ ಸಲ್ಲಿಸಲು ವೆಬ್‌ಸೈಟ್: ತಿತಿತಿ.ಚಿಟಿgಚಿಟಿತಿಚಿಜiಡಿeಛಿಡಿuiಣ.ಞಚಿಡಿ.ಟಿiಛಿ.iಟಿ ಭೇಟಿ ನೀಡಬಹುದಾಗಿದೆ. 


ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ, ಗಂಜ್ ಏರಿಯಾ, ಶಹಾಪೂರ-585214 ದೂ.ಸಂ : 08479-243254/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ,  ಹಳೆ ಕೋರ್ಟ ಕಟ್ಟಡ, ಜೈಲ್ ಹತ್ತಿರ, ಸುರಪುರ ದೂ.ಸಂ : 08443-256808. ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ ಸ್ತಿçà ಶಕ್ತಿ ಭವನ, ಜಿಲ್ಲಾ ಆಸ್ಪತ್ರೆ ರಸ್ತೆ, ಯಾದಗಿರಿ ದೂ.ಸಂ : 08473-252265/ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, 1ನೇ ಮಹಡಿ, ಗುಮಡಲ ಕಾಂಪ್ಲೇಕ್ಸ, ಮೂತೂಟ್ ಫೈನಾನ್ಸ್ ಹಿಂದುಗಡೆ, ಗುರುಮಠಕಲ್ ದೂ.ಸಂ : 08473-225035 ಇವರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.


 


ಸೋಮವಾರ, ಜುಲೈ 5, 2021

 ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ: 

ಪುರುಷ/ಮಹಿಳೆರಿಗೆ ಸಮಾನ ಕೂಲಿ ದರ

ಯಾದಗಿರಿ;ಜುಲೈ-5(ಕ.ವಾ):ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಾರ್ಬ್ ಕಾರ್ಡ್ ಇಲ್ಲದಿದ್ದರೆ ಕೂಡಲೇ ಪಡೆದುಕೊಳ್ಳಬೇಕಿದೆ. ಗ್ರಾಮ ಪಂಚಾಯತಿನಲ್ಲಿ, ನಮೂನೆ 6ನ್ನು ತುಂಬಿ ಕೆಲಸಕ್ಕೆ ಬೇಡಿಕೆ ಸಲ್ಲಿಸಬೇಕು. ಮಹಿಳೆಯರಿಗೆ ಮತ್ತು ಪುರುಷರಿಗೆ ಸಮಾನ ಕೂಲಿ ದರ ರೂ.289/- ಸಲಕರಣೆ ವೆಚ್ಚ 10 ರೂ. ಒಟ್ಟಾರೆ 299/- ರೂ.ಗಳನ್ನು ವಾಸವಾಗಿರುವ ಊರಿನಲ್ಲೇ ಕೆಲಸ ನೀಡಲಾಗುವುದು. ನೊಂದಾಯಿತ ಪ್ರತಿ ಅರ್ಹ ಕುಟುಂಬದ ವಯಸ್ಕ ಆ ವರ್ಷದಲ್ಲಿ 100 ದಿನಗಳ ಅಕುಶಲ ಕೂಲಿ ಕೆಲಸವನ್ನು ಒದಗಿಸುವ ಜವಜ್ದಾರಿ ಗ್ರಾಮ ಪಂಚಾಯತಿಯದ್ದಾಗಿರುತ್ತದೆ.

ಕೂಲಿ ಕೆಲಸಕ್ಕೆ ಅರ್ಜಿ ನೀಡಿದ 15 ದಿನಗಳ ಒಳಗೆ ಗ್ರಾಮ ಪಂಚಾಯತಿಯವರು ಕೂಲಿ ಕೆಲಸ ನೀಡದಿದ್ದ ಪಕ್ಷದಲ್ಲಿ ನಿರುದ್ಯೋಗ ಭತ್ಯೆಯನ್ನುನೀಡಲಾಗುವುದು,(100 ದಿನಗಳಿಗೆ ಪಡೆಯಬಹುದಾದ ದಿನಗೂಲಿ ಹಣದ ಮೊತ್ತಕ್ಕೆ ಸಮನಾಗಿ 28900/-ರೂಪಾಯಿಗಳು) ಮತ್ತೇ ಅರ್ಜಿ ಸಲ್ಲಿಸಿದರೆ ಕೆಲಸ ಕೊಡಬೇಕು.

ವೈಯಕ್ತಿಕ ಕಾಮಗಾರಿಗಳು , ರೈತರು ತಮ್ಮ ಜಮೀನುಗಳಲ್ಲಿ ಅನುಷ್ಠಾನಿಸಿಕೊಳ್ಳುವ ಪ್ರಮುಖ ಕಾಮಗಾರಿಗಳು: ತೋಟಗಾರಿಕೆ,ರೇಷ್ಮೆ,ಜಲಾಯನಭಿಧ್ಧಿ(ಕೃಷಿ ಹೊಂಡಾ,ಕAದಕ ಬದು),ಕೃಷಿ ಅರಣ್ಯ,ಜಾನುವಾರು ಶೆಡ್ಡು ನಿರ್ಮಾಣ ಮತ್ತು ಅಜೋಲಾ ತೋಟಿ ನಿರ್ಮಾಣ ಇತ್ಯಾದಿ ಕೂಲಿ ನೀಡಲಾಗುವುದು.

 ಸಮುದಾಯ ಕಾಮಗಾರಿಗಳು:ಸಮಗ್ರ ಕೆರೆ ಅಭಿವೃದ್ಧಿ,ಕಂದಕ ಬಂದಗಳು, ನಾಲಾ ಹೂಳೆತ್ತವುದು, ರಸ್ತೆ ಬದಿ ನಡೆತೋಪು,ಬಹು ಕಮಾನ ತಡೆ ಗೋಡೆ ಇತ್ಯಾಧಿ ಕಾಮಗಾರಿಗಳು ಸೇರಿರುತ್ತವೆ.

ಮನರೇಗಾ ಯೋಜನೆಯಡಿಯಲ್ಲಿ ಪ್ರತಿ ಕುಟುಂಬಕ್ಕೆ ಫಲಾನುಭವಿಗಳಿಗೆ 2.50/- ಲಕ್ಷ ಸಹಾಯಧನವನ್ನು ಪಡೆಯಬಹುದಾಗಿದೆ.

ಕೂಲಿ ಕಾರ್ಮಿಕರಿಗೆ ಉದ್ಯೋಗ ಚೀಟಿ ವಿತರಣೆ, ಬಂಚ್ಚಲಗುAಡಿ ಕಾಮಗಾರಿ, ಕ್ಷೇತ್ರ ಬದು ಕಾಮಗಾರಿ ಒಳಗೊಂಡಿರುತ್ತವೆ.

ಮಹಾತ್ಮಗಾAಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಯನ್ನು ಫಲಾನುಭವಿ ಪಡೆಯಲು ಗ್ರಾಮ ಪಂಚಾಯತಿಗೆ ಅರ್ಜಿ ಮೂಲಕ ಸಲ್ಲಿಸಬಹುದು, ಗ್ರಾಮ ಪಂಚಾಯತಿ ಕಚೇರಿಯಲ್ಲಿರುವ ಕಾಮಗಾರಿ ಬೇಡಿಕೆ ಪೆಟ್ಟಿಗೆಯಲ್ಲಿ ಅರ್ಜಿ ಸಲ್ಲಿಸಬಹುದು,ಕೂಲಿ ಮತ್ತು ಕಾಮಗಾರಿ ಬೇಡಿಕೆಯನ್ನು ಕಾಯಕ ಮಿತ್ರ ಮೊಬೈಲ್ ಆಫ್ ಮೂಲಕ ಸಲ್ಲಿಸಬಹುದು ಉಚಿತ ಸಹಾಯವಾಣಿ ಸಂಖ್ಯೆ:1800-42588666 ಮೂಲಕ ಬೇಡಿಕೆ ಸಲ್ಲಿಸಬಹುದು ಎಂದು ಯಾದಗಿರಿ  ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.


 ಕಾನೂನು ಪದವೀಧರರ ವೃತ್ತಿ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ;ಜುಲೈ-5(ಕ.ವಾ): 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಹಿಂದೂಳಿದ ವರ್ಗಗಳ ಕಾನೂನು ಪದವೀಧರರಿಗೆ ಸರ್ಕಾರಿ ವಕೀಲರ  ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲು  ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.  

   

 ಕಾನೂನು ಪದವಿ ಪಡೆದ ಹಿಂದುಳಿದ ವರ್ಗಕ್ಕೆ ಸೇರಿರುವ ಅಭ್ಯರ್ಥಿಗಳು 30ವರ್ಷದೊಳಗಿನವಾರಗಿರಬೇಕು ಮತ್ತು ಅರ್ಜಿ ಸಲ್ಲಿಸಲು  ನಿಗದಿ ಪಡಿಸಿದ ಕಡೆಯ ದಿನಾಂಕಕ್ಕೆ ಅಭ್ಯರ್ಥಿಯು 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಾಯಿಸಿರಬೇಕು. 

   

  ಹಿಂದುಳಿದ ವರ್ಗಗಳ ಪ್ರವರ್ಗ-1ರಲ್ಲಿ ಬರುವ ಸಮುದಾಯದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3.50ಲಕ್ಷರೂ ಮೀರಿರಬಾರದು, ಪ್ರವರ್ಗ-2ಎ, 3ಎ, 3ಬಿ ಅಭ್ಯರ್ಥಿಗಳಿಗೆ 2.50 ಲಕ್ಷ ರೂ ನಿಗದಿಪಡಿಸಲಾಗಿದ್ದು,ಅಭ್ಯರ್ಥಿಗಳು ನಿಗದಿತ ನಮೂನೆ  ಅರ್ಜಿಯನ್ನು ಭರ್ತಿಮಾಡಿ ಜುಲೈ 19ರೊಳಗೆಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. 

    

 ಆಯ್ಕೆಯಾದ ಅಭ್ಯರ್ಥಿಗಳಿಗೆ ನಾಲ್ಕು ವರ್ಷಗಳ ಕಾಲ ತರಬೇತಿಯೊಂದಿಗೆ ಪ್ರತಿ ತಿಂಗಳಿಗೆ 4000ರೂ ತರಬೇತಿ ಭತ್ಯೆ ನೀಡಲಾಗುವುದು.ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂಖ್ಯೆ: 08473-253742ಗೆ ಸಂಪರ್ಕಿಸಲು ಕೋರಿದೆ.


ಅಸಂಘಟಿತ ವಲಯದ ಕಾರ್ಮಿಕರ ಪರಿಹಾರ ಧನ ಪಡೆಯಲು ಅರ್ಜಿ ಆಹ್ವಾನ

ಯಾದಗಿರಿ;ಜುಲೈ-5(ಕ.ವಾ): ಕಾರ್ಮಿಕ ಇಲಾಖೆ ವ್ಯಾಪ್ತಿಯಲ್ಲಿ  ಬರುವ ಅಸಂಘಟಿತ ಕಾರ್ಮಿಕರಿಗೆ ಕೊವಿಡ್-19 ಪ್ರಯುಕ್ತ ಸರಕಾರ ಘೋಷಿಸಿರುವ ರೂ.2,000/-ಗಳ ಪರಿಹಾರ ಧನ ಪಡೆಯಲು ಜುಲೈ 31 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ಯಾದಗಿರಿ ಉಪ ವಿಭಾಗದ ಕಾರ್ಮಿಕ ಅಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಅಸಂಘಟಿತ ವಲಯದ ಕಾರ್ಮಿಕರಾದ ಕ್ಷೌರಿಕರು, ಅಗಸರು, ಟೈಲರಗಳು, ಹಮಾಲರು,ಚಿಂದಿ ಆಯುವರು,ಕುಂಬಾರರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಅಕ್ಕಸಾಲಿಗರು, ಮೆಕ್ಯಾನಿಕ್ರು, ಕಮ್ಮಾರರು ಮತ್ತು ಗೃಹಕಾರ್ಮಿಕರು ಈ ವರ್ಗದ ಅರ್ಹ ಫಲಾನುಭವಿಗಳು ಪರಿಹಾರ ಧನ ಪಡೆಯಲು ಸೇವಾ ಸಿಂಧು ಪೋರ್ಟಲ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. 

   

ಅರ್ಜಿಯೊಂದಿಗೆ ಸಲ್ಲಿಸಬೇಕಾದ ಉದ್ಯೊಗ ದೃಡೀಕರಣ ಪತ್ರದಲ್ಲಿ ಮನೆ ಕಾರ್ಮಿಕರಿಗೆ ಸಂಬAದಿಸಿದAತೆ ಮಾತ್ರ ನಿಗದಿಪಡಿಸಿದ ಅಧಿಕಾರಿಗಳಿಂದ ಅಥವಾ ಅವರು ಕಾರ್ಯನಿರ್ವಹಿಸುತ್ತಿರುವ ಮಾಲೀಕರಿಂದ ಸಹ ಸಹಿ ಮಾಡಿಸಿ ಅಪ್ಲೋಡ್ ಮಾಡಲು ಅವಕಾಶ ಕಲ್ಪಿಸಲಾಗಿರುತ್ತದೆ. ಇದಕ್ಕಾಗಿ ಪ್ರತ್ಯೇಕ ನಮೂನೆಯ ಉದ್ಯೋಗ ಪ್ರಮಾಣ ಪತ್ರವನ್ನು ಹೊರಡಿಸಲಾಗಿದ್ದು, ಮೊಬೈಲ್ ಸಂಖ್ಯೆ ನಮೂದಿಸುವುದನ್ನು ಐಚ್ಚಿಕಗೊಳಿಸಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214ಗೆ ಅಥವಾ ಕಾರ್ಮಿಕ ಅಧಿಕಾರಿಯವರ ಕಚೇರಿ ಯಾದಗಿರಿ ದೂರವಾಣಿ: 08473-253727 ಸಂಪರ್ಕಿಸಲು ತಿಳಿಸಿದೆ.


ಶನಿವಾರ, ಜುಲೈ 3, 2021

 8ರಂದು ಯಾದಗಿರಿ ನಗರಸಭೆಯ ಸಾಮಾನ್ಯಸಭೆ

ಯಾದಗಿರಿ,ಜುಲೈ03(ಕ.ವಾ):-ಇಲ್ಲಿನ ನಗರಸಭೆಯ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇದೇ ಜುಲೈ 8 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷರಾದ ವಿಲಾಸ ಪಾಟೀಲ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಟಿ.ನಾಯಕ ಅವರು ತಿಳಿಸಿದ್ದಾರೆ.


 ಯಾದಗಿರಿ ನಗರಸಭೆ ಸ್ಥಿರಾಸ್ತಿಗಳ ತೆರಿಗೆ ಪಾವತಿಸಲು ಸೂಚನೆ

ಯಾದಗಿರಿ,ಜುಲೈ03(ಕ.ವಾ):- ಯಾದಗಿರಿ ನಗರಸಭೆ ವ್ಯಾಪ್ತಿಯಲ್ಲಿನ ಸ್ಥಿರಾಸ್ತಿ ಮಾಲೀಕರು ಹಾಗೂ ಅನುಭೋಗದಾರರಿಗೆ 2021-22ನೇ ಸಾಲಿನ ಆರ್ಥಿಕ ವರ್ಷದ ಆಸ್ತಿ ತೆರಿಗೆ ಪಾವತಿಗೆ ನೀಡಲಾಗುತ್ತಿರುವ ಶೇಕಡ 5ರ ರಿಯಾಯತಿಯ ಕಾಲಾವಧಿಯನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದ್ದು, ಆಗಸ್ಟ್ 1ರ ನಂತರ ಪಾವತಿಸಲಾಗುವ ಆಸ್ತಿ ತೆರಿಗೆಯ ಮೇಲೆ ಪ್ರತಿ ತಿಂಗಳಿಗೆ ಶೇಕಡ 2ರಂತೆ ದಂಡ ವಿಧಿಸಲಾಗುವುದದು ಎಂದು ನಗರಸಭೆ ಪೌರಾಯುಕ್ತ ಬಿ.ಟಿ.ನಾಯಕ ಅವರು ತಿಳಿಸಿದ್ದಾರೆ.


 ನಗರಸಭೆಗೆ ಬಾಕಿ ಇರುವ ಅಥವಾ ಚಾಲ್ತಿ ಸಾಲಿಗೆ ಪಾವತಿಸಬೇಕಾಗಿರುವ ಆಸ್ತಿ ತೆರಿಗೆ, ನೀರಿನ ಬಳಕೆದಾರರ ಶುಲ್ಕ, ಉದ್ದಿಮೆ ಪರವಾನಿಗೆ, ಮಳಿಗೆ ಬಾಡಿಗೆ, ಜಾಹೀರಾತು ಶುಲ್ಕ ಹಾಗೂ ಇತರ ಶುಲ್ಕಗಳನ್ನು ನಿಗಧಿತ ಅವಧಿಯ ಒಳಗಾಗಿ ಪಾವತಿಸಿ ಯಾದಗಿರಿ ನಗರದ ಅಭಿವೃದ್ಧಿಗೆ ಸಹಕರಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


 ರೈತರ ಅಂಗೈನಲ್ಲಿಯೇ ಬೆಳೆ ಸಮೀಕ್ಷೆ ಮಾಹಿತಿ 

ಯಾದಗಿರಿ,ಜುಲೈ03(ಕ.ವಾ):- 2021-22ನೇ  ರೈತರಿಗೆ ನೇರವಾಗಲೆಂದು ಅಭಿವೃದ್ದಿ ಪಡಿಸಿರುವ ಬೆಳೆ ಸಮೀಕ್ಷೆ ಆ್ಯಪ್ ರೈತರಿಗೆ ಸಾಕಷ್ಟು ಸಹಕಾರಿಯಾಗಿದ್ದು, ಕೃಷಿ ಇಲಾಖೆಯೂ ರೈತರಿಗೆ ಸಮಗ್ರ ಮಾಹಿತಿ ಒದಗಿಸಿದ ಪರಿಣಾಮ ಸಾಕಷ್ಟು ರೈತರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..

ರೈತರೆ ಸ್ವತಃ ಬೆಳೆ ಸಮೀಕ್ಷೆ ನಡೆಸಿ ತಾವೇ ಪ್ರಮಾಣ ಪತ್ರ ನೀಡುವ ರೈತ ಬೆಳೆ ಸಮೀಕ್ಷೆ ಆ್ಯಪ್ ಇದಾಗಿದ್ದು,  ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಯ ಮಾಹಿತಿಯನ್ನು ಛಾಯ ಚಿತ್ರ ಸಹಿತ 2021ರ ಮುಂಗಾರು ಬೆಳೆ ಸಮೀಕ್ಷೆ ಮೋಬೈಲ್ ಆ್ಯಪ್ ಮೂಲಕ ಸ್ವತಃ, ರೈತರ ಬೆಳೆ ಸಮೀಕ್ಷೆಗಾಗಿ ಸಿದ್ದಪಡಿಸಿರುವ ಆ್ಯಪ್ ನಿಂದ ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ಮಾಹಿತಿಯನ್ನು ರೈತರೇ ನಿಖರವಾಗಿ ದಾಖಲಿಸಬಹುದು. ರೈತರೆ ತಮ್ಮಲ್ಲಿ ಇರುವ ಸ್ಮಾರ್ಟ್ ಮೋಬೈಲ್‌ನಲ್ಲಿ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ತಾವು ಬೆಳೆದಿರುವ ಮಾಹಿತಿಯನ್ನು ಆಪ್‌ಲೋಡ್ ಮಾಡಬೇಕು.

ಬೆಳೆ ಸಮೀಕ್ಷೆಯ ಮಾಹಿತಿಯನ್ನು ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ ಮತ್ತು ಸರ್ಕಾರದ ವಿವಿಧ   ಯೋಜನೆಗಳಡಿ ವಿವಿಧ ಸವಲತ್ತುಗಳನ್ನು ಒದಗಿಸಲು ಮತ್ತು ಆರ್.ಟಿ.ಸಿ ಯಲ್ಲಿ ಅಳವಡಿಸಲು ಬಳಸಲಾಗುತ್ತದೆ.

2021 ಮುಂಗಾರು ರೈತರ ಬೆಳೆ ಸಮೀಕ್ಷೆ ಅಪ್ಲಿಕೇಷನ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಲು ಞhಚಿಡಿiಜಿ seಚಿsoಟಿ ಜಿಚಿಡಿmeಡಿ ಛಿಡಿoಠಿ suಡಿveಥಿ 2021-22 ಂಠಿಠಿಟiಛಿಚಿಣioಟಿ ಅನ್ನು ಠಿಟಚಿಥಿ sಣoಡಿe ನಿಂದ ಡೌನ್‌ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆಯನ್ನು ಮಾಡಬಹುದು.

ರೈತರ ಆಧಾರ ಸಂಖ್ಯೆ, ಪೂರ್ಣ ವಿಳಾಸ ಹಾಗೂ ಮೊಬೈಲ್ ನಂಬರ್ ವಿವರವನ್ನು ನಮೂದಿಸಿ ತಮ್ಮ ಜಮೀನಿನ ಸರ್ವೇ ನಂಬರ್ ನಲ್ಲಿ ಬಿತ್ತನೇ/ ನಾಟಿ ಮಾಡಿದ ಬೆಳೆಯ ವಿವರ ಹಾಗೂ ವಿಸ್ತಿರ್ಣವನ್ನು ಹಿಸ್ಸಾವಾರು ಮುಂಗಾರು ರೈತರ ಬೆಳೆ ಸಮೀಕ್ಷೆ 2021 ಆ್ಯಪ್ ನಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕು.

ರೈತರ ಬೆಳೆ ಸಮೀಕ್ಷೆ ಅಪ್ಲಿಕೇಷನ್ ಬಳಸುವ ಬಗ್ಗೆ ನಿಮ್ಮ ಗ್ರಾಮಕ್ಕೆ ನೇಮಕವಾದ ಖಾಸಗಿ ನಿವಾಸಿಗಲು (ಪಿ.ಆರ್) ಅಥವಾ ಗ್ರಾಮ ಲೇಕ್ಕಾಧಿಕಾರಿಗಳು, ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ, ಹೋಬಳಿ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ಕೊರಿದ್ದಾರೆ.


 “ಕೌಶಲ್ಯ ಕಲಿಕೆ ಹಾಗೂ ಉಚಿತ ತರಬೇತಿ”

ಯಾದಗಿರಿ,ಜುಲೈ03(ಕ.ವಾ):- ಕೊರೋನಾ ಸಾಂಕ್ರಾಮಿಕ ರೋಗದಿಂದ ಬಹುತೇಕ ಕ್ಷೇತ್ರಗಳಲ್ಲಿ ಅದರಲ್ಲೂ ಹೆಚ್ಚಾಗಿ ಶಿಕ್ಷಣ, ಹೋಟೆಲ್, ಪ್ರವಾಸೋದ್ಯಮದಲ್ಲಿ ಉದ್ಯೋಗ ನಷ್ಟವಾಗಿವೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಶಿಕ್ಷಕರು, ಪ್ರವಾಸಿ ಮಾರ್ಗದರ್ಶಿಗಳು, ಹೋಟೆಲ್ ಉದ್ಯೋಗಿಗಳು ಸೇರಿದಂತೆ ಇನ್ನಿತರ ವಲಯಗಳಲ್ಲಿ ಉದ್ಯೋಗ ಕಳೆದುಕೊಂಡ ಆಸಕ್ತರಿಗೆ ಉದ್ಯೋಗದ ಕೌಶಲ್ಯಗಳನ್ನು ನವೀನ ಕಾರ್ಯಕ್ರಮದ ಮೂಲಕ “ಕೌಶಲ್ಯ ಕಲಿಕೆ ಹಾಗೂ ಉಚಿತ ತರಬೇತಿ”ಯನ್ನು ನೀಡಲಿದೆ. 

ಜಿಲ್ಲೆಯ ಆಸಕ್ತರು ತಮ್ಮ ವಿವರಗಳನ್ನು hಣಣಠಿs://ಛಿoviಜhoಠಿes.ಞಚಿushಚಿಟಞಚಿಡಿ.ಛಿom ಇಲ್ಲಿ ಭರ್ತಿ ಮಾಡಿ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 9880072695 ವಿಠೋಬ ಮೊ,ಸಂ: 9986657432 ಸಂರ್ಪಕಿಸಬಹುದಾಗಿದೆ. ಹಾಗೂ ನೋಂದಣಿಗಾಗಿ ಸಹಾಯಕ ನಿರ್ದೇಶಕರು, ಕೌಶಲ್ಯಭಿವೃದ್ಧಿ ಅಧಿಕಾರಿ, ಬಸಪ್ಪ ತಳವಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶುಕ್ರವಾರ, ಜುಲೈ 2, 2021

 ವಿದ್ಯಾರ್ಥಿ ವೇತನ:ಬ್ಯಾಂಕ್‌ನಲ್ಲಿ ಆಧಾರ ಜೋಡಣೆಗಾಗಿ ಮನವಿ

*****************************
ಯಾದಗಿರಿ: ಜುಲೈ 02(ಕ.ವಾ):2019-20 ಮತ್ತು 2020-21 ನೇ ಸಾಲಿನ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಪಡೆಯಲು ವಿದ್ಯಾರ್ಥಿಗಳು ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಗೆ ಎನ್.ಪಿ.ಸಿ.ಐ ನಲ್ಲಿ ಆಧಾರ್ ಜೋಡಣೆ ಮಾಡಿಕೊಳ್ಳಲು ಯಾದಗಿರಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಧಾರ್ ಜೋಡಣೆ ಆದರೆ ಮಾತ್ರ ಡಿ.ಬಿ.ಟಿ ಮುಖಾಂತರ ವಿದ್ಯಾರ್ಥಿವೇತನ ಮಂಜೂರು ಮಾಡಲು ಆಗುವುದು. ಮೆಟ್ರಿಕ್ ನಂತರ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ತಮ್ಮ ಆಧಾರ್‌ನ್ನು ಸಂಬAಧಿಸಿದ ಬ್ಯಾಂಕ್ ಹೋಗಿ ಆಧಾರ ಜೋಡಣೆ ಮಾಡಲು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಯಾದಗಿರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಐ.ಟಿ.ಐ ಪಾಸಾದ ಅಭ್ಯರ್ಥಿಗಳಿಂದ ಶಿಶಿಕ್ಷÄ ತರಬೇತಿಗಾಗಿ ಅರ್ಜಿ ಆಹ್ವಾನ
**********************
ಯಾದಗಿರಿ: ಜುಲೈ 02(ಕ.ವಾ): ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವ್ಯಾಪ್ತಿಯ ಟೆಕ್ನಿಕಲ್ ಟ್ರೆöÊನಿಂಗ್ ಇನ್‌ಸ್ಟಿಟ್ಯೂಟ್ ಕೆಳಕಂಡ ವಿವಿಧ ಟ್ರೇಡ್‌ಗಳಲ್ಲಿ ಅಪ್ರೆಂಟಿಸ್‌ತರಬೇತಿಗಾಗಿ ಐ.ಟಿ.ಐ ಪಾಸಾದ ಅಭ್ಯರ್ಥಿಗಳಿಂದ ಶಿಶಿಕ್ಷÄ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿರುತ್ತಾರೆ.

ಟ್ರೇಡ್ ಹೆಸರು ಹಾಗೂ ಖಾಲಿ ಹುದ್ದೆಗಳ ವಿವರ: ಫಿಟ್ಟರ್,  ಟರ್ನರ್,  ಮಶಿನಿಸ್ಟ್, ಎಲೆಕ್ಟಿçÃಷನ್,  ವೆಲ್ಡರ್,  ಪಾಸಾ/ಕೊಪಾ,  ಫೌಂಡ್ರಿಮನ್, ಶೀಟ್ ಮೆಟಲ್ ವರ್ಕ್ಅರ್ಹ  ಆಸಕ್ತಿಯುಳ್ಳ  ಅಭ್ಯರ್ಥಿಗಳು  ಎಸ್.ಎಸ್.ಎಲ್.ಸಿ, ಐ.ಟಿ.ಐ  ಪಾಸಾದಅಂಕಪಟ್ಟಿ, ಅಧಾರಕಾರ್ಡ್ಜಾತಿ ಪ್ರಮಾಣ ಪತ್ರ  (ಮೀಸಲಾತಿ  ಬಯಸಿದ್ದಲ್ಲಿ  ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಓಬಿಸಿ, ಅಂಗವಿಕಲ, ಪ್ರಮಾಣಪತ್ರಹೊಂದಿದ್ದಲ್ಲಿ ), NIC MIS portal Registration Number (www.apprenticeship.gov.in)     ಹಾಗೂ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಲಗತ್ತಿಸಿ ಇದೇ 2021 ಜುಲೈ 22 ರೊಳಗೆ  ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ  ವಿನಿಮಯ ಕಛೇರಿ, ಯಾದಗಿರಿ ಕಛೇರಿಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ  ಯಾದಗಿರಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಗ್ರಂಥಾಲಯಗಳಿಗೆ ಪುಸ್ತಕಗಳ ಆಯ್ಕೆ: ಅರ್ಜಿ ಆಹ್ವಾನ

ಯಾದಗಿರಿ,ಜುಲೈ.02.(ಕ.ವಾ.)-ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿ 2021ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳ ಕನ್ನಡ, ಆಂಗ್ಲ, ಇತರೆ ಭಾರತೀಯ ಭಾಷೆಗಳ ಗ್ರಂಥಗಳ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳಿAದ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಯಾದಗಿರಿ ನಗರ  ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2021ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥ ಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಕಬ್ಬನ್ ಉದ್ಯಾನವನ, ಬೆಂಗಳೂರು ಇಲ್ಲಿ 2021ರ ಜುಲೈ 31ರೊಳಗೆ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಮಾತ್ರ ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಕಚೇರಿಗೆ 2021ರ ಜುಲೈ 31ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಯಾವುದೇ ಪುಸ್ತಕಗಳನ್ನು ಆಯ್ಕೆಗೆ ಸ್ವೀಕರಿಸಲಾಗುವುದಿಲ್ಲ. 

ಪುಸ್ತಕಗಳು 2021ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾಗಿರಬೇಕು. ಮರು ಮುದ್ರಣವಾದಲ್ಲಿ ಹತ್ತು ವರ್ಷಗಳ ಅಂತರ ಇರಬೇಕು. ಈ ಬಗ್ಗೆ ದೃಢೀಕರಣ ಪತ್ರ ನೀಡಬೇಕು. ನಿಗದಿತ ಅರ್ಜಿ ನಮೂನೆ, ಹಾಗೂ ನಿಬಂಧನೆ, ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆ  ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ತಿತಿತಿ.ಜಠಿಟ.ಞಚಿಡಿಟಿಚಿಣಚಿಞಚಿ.gov.iಟಿ  ವೆಬ್‌ಸೈಟ್  ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಕಚೇರಿಯನ್ನು ಸಂಪರ್ಕಿಸಲು ಕೋರಿದೆ.

ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಯಾದಗಿರಿ ಜು.2.(ಕ.ವಾ)-ನಾಲವಾರ  ರೈಲ್ವೆ ನಿಲ್ದಾಣದ ಪ್ಲಾಟಫಾರಂ-2ರಲ್ಲಿ ಜೂನ್ 25ರಂದು ಸುಮಾರು 65 ವರ್ಷದ ಅಪರಿಚಿತ (ಪುರುಷ) ವ್ಯಕ್ತಿಯ ಮೃತ ದೇಹವು ಪತ್ತೆಯಾಗಿದ್ದು, ಈವರೆಗೆ ಮೃತನ ವಾರಸುದಾರರು ಯಾರೂ ಪತ್ತೆಯಾಗಿರುವುದಿಲ್ಲ.

ರಾಯಚೂರು ಪೊಲೀಸ್ ಠಾಣೆಯಲ್ಲಿ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದ್ದು, ಮೃತನು, ಉದ್ದನೆಯ ಮೂಗು,  ಗೋಧಿ ಮೈಬಣ್ಣ, ಸದೃಢ ಮೈಕಟ್ಟು ಮತ್ತು 5 ಅಡಿ 4 ಇಂಚು ಎತ್ತರ ಇದ್ದು, ತಲೆಯಲ್ಲಿ ಒಂದೂವರೆ ಇಂಚು ಉದ್ದದ ಕಪ್ಪು ಮಿಶ್ರಿತ ಬಿಳಿ ಕೂದಲು,ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾನೆ.

ಮೃತ ವ್ಯಕ್ತಿಯು ಒಂದು ನೀಲಿ ಮತ್ತು  ಬಿಳಿಯ ಗೆರುಗಳ್ಳುಳ ಹಾಫ್ ಟೀ ಶರ್ಟ್, ಒಂದು ನೀಲಿ ಬಣ್ಣದ ಲುಂಗಿ, ಕಾವಿ ಬಣ್ಣದ ಮೂರು ಲುಂಗಿ, ಒಂದು ಮಾಸಿದ ಕೆಂಪು ಮತ್ತು ನೀಲಿ ಮಿಶ್ರಿತ ಹಾಫ್ ಶರ್ಟ್, ಒಂದು ಸ್ಟೀಲ್ ಗ್ಲಾಸ್,ಒಂದು ಕಪ್ಪು ಬಣ್ಣದ ರಗ್ಗು ಹೊಂದಿರುತ್ತಾರೆ.

ಈ ವ್ಯಕ್ತಿಯ ವಾರಸುದಾರರು ಯಾರಾದರೂ ಇದ್ದಲ್ಲಿ ರಾಯಚೂರು ಪೋಲಿಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಇವರನ್ನು ಅಥವಾ ಠಾಣೆಯ ದೂರವಾಣಿ ಸಂಖ್ಯೆ 08532-231716, ಮೊಬೈಲ್ ಸಂಖ್ಯೆ 948080211ಗೆ ಅಥವಾ ರೇಲ್ವೆ ಪೋಲಿಸ್ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ.080-22871291 ಸಂಪರ್ಕಿಸಲು ಕೋರಿದೆ.




ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...