ಶುಕ್ರವಾರ, ಜುಲೈ 23, 2021

 ವಿಶ್ವ ಕೌಶಲ್ಯ ದಿನ ಆಚರಣೆ

ಕೌಶಲ್ಯ ವೃದ್ಧಿಸಿಕೊಂಡು ಉದ್ಯೋಗ ಪಡೆದುಕೊಳ್ಳಲು ಯುವಜನತೆಗೆ ಕರೆ

ಯಾದಗಿರಿ:ಜುಲೈ 23(ಕ.ವಾ): ಯುವ ಜನತೆಯ ನಿರುದ್ಯೋಗ ಪರಿಹಾರಕ್ಕಾಗಿ ಉದ್ಯೋಗ ಅವಕಾಶಗಳನ್ನು ಹೆಚ್ಚಿಸಲು ಸರಕಾರವು ಕೌಶಲ್ಯಾಭಿವೃದ್ಧಿ, ಉಧ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆ ಹಾಗೂ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ ನಿರುದ್ಯೋಗ ಯುವಕ ಯುವತಿಯರಿಗೆ ಮಾರುಕಟ್ಟೆ/ಉದ್ಯೋಗ ಆಧಾರಿತ ವಿವಿಧ ಕೌಶಲ್ಯ ತರಬೇತಿಗಳನ್ನು ನೀಡಲಾಗುತ್ತಿದ್ದು ಯುವಜನತೆ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಅವರು ತಿಳಿಸಿದರು.


ವಿಶ್ವ ಕೌಶಲ್ಯ ದಿನದ ಪ್ರಯುಕ್ತ ಮಾತನಾಡಿದ ಅವರು, ಯಾದಗಿರಿ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ 01 ತರಬೇತಿ ಕೇಂದ್ರದ ವತಿಯಿಂದ 05 ವಿವಿಧ ವಿಷಯಗಳಲ್ಲಿ 150 ಅಭ್ಯರ್ಥಿಗಳಿಗೆ, ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ 09 ವಿವಿಧ ವಿಷಯಗಳಲ್ಲಿ 840 ಅಭ್ಯರ್ಥಿಗಳಿಗೆ ಹಾಗೂ ದಿನ ದಯಾಳ್ ಅಂತ್ಯೋದಯ-ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ 07 ವಿವಿಧ ವಿಷಯಗಳಲ್ಲಿ 872 ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿಯನ್ನು ಒದಗಿಸಲಾಗಿರುತ್ತದೆ.

 ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ತರಬೇತಿ ಪಡೆದುಕೊಂಡ ಅಭ್ಯರ್ಥಿಗಳು ಬೆಂಗಳೂರು ಹಾಗೂ ಹೈದರಾಬಾದ್ ನಂತಹ ನಗರಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗಕ್ಕೆ ಸೇರಿಕೊಂಡು ಕೌಟುಂಬಿಕ ಜೀವನ ಸಾಗಿಸುತ್ತಿರುವುದು ರಾಷ್ಟç ಮಟ್ಟದಲ್ಲಿ ಪ್ರಶಂಸನೀಯವಾಗಿದೆ. ದೀನ ದಯಾಳ್ ಅಂತ್ಯೋದಯ ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಲ್ಲಿ ತರಬೇತಿ ಪಡೆದುಕೊಂಡ ಹಲವಾರು ಅಭ್ಯರ್ಥಿಗಳು ಜಿಲ್ಲೆಯ ವಿವಿಧ ಬ್ಯಾಂಕುಗಳಲ್ಲಿ ಸಾಲ ಪಡೆದುಕೊಂಡು ಸ್ವಯಂ ಉದ್ಯೋಗದಲ್ಲಿ ತೊಡಗಿಕೊಂಡಿರುತ್ತಾರೆ.

ಪ್ರಸ್ತುತ ಕೋವಿಡ್-19ರ ಸಾಂಕ್ರಾಮಿಕ ರೋಗದ ನಿರ್ವಹಣೆಗಾಗಿ ಮಾನವ ಸಂಪನ್ಮೂಲದ ಸಿದ್ದತೆಗಾಗಿ ಆರೋಗ್ಯ ಕ್ಷೇತ್ರಕ್ಕೆ ಸಂಬAಧಿಸಿದAತೆ ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿ ಜಿಲ್ಲೆಯಲ್ಲಿನ ನಿರುದ್ಯೋಗ ಯುವಕ ಯುವತಿಯರಿಗೆ 06 ವಿವಿಧ ವಿಷಯಗಳಲ್ಲಿ ಕೌಶಲ್ಯ ತರಬೇತಿಯನ್ನು ನೀಡಲು ಯೋಜನೆಯನ್ನು ರೂಪಿಸಲಾಗಿರುತ್ತದೆ. 

 ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ  ಸುಮಾರು 4000 ಕ್ಕಿಂತ ಹೆಚ್ಚಿನ ನಿರುದ್ಯೋಗ ಯುವಕ ಯುವತಿಯರಿಗೆ ವಿವಿಧ ವಿಷಯಗಳಲ್ಲಿ ಕೌಶಲ್ಯ ತರಬೇತಿಗಳನ್ನು ನೀಡಲು ಶಾಸಕರ ಪ್ರಯತ್ನದಿಂದ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ವತಿಯಿಂದ ಸುಮಾರು ರೂ. 4 ಕೋಟಿಯಷ್ಟು ಅನುದಾನವನ್ನು ಕಾಯ್ದಿರಿಸಲಾಗಿದೆ. ಈ ವಿಷಯವು ರಾಜ್ಯದಲ್ಲಿಯೇ ಪ್ರಥಮ ಪ್ರಯತ್ನವಾಗಿರುತ್ತದೆ. ಇದರಿಂದಾಗಿ ಯುವಜನತೆಗೆ ವಿವಿಧ ಕೈಗಾರಿಕೆ, ಉದ್ಯಮಸಂಸ್ಥೆಗಳಲ್ಲಿ ವೇತನಾಧಾರಿತ ಉದ್ಯೋಗ ಹಾಗೂ ಸ್ವಯಂ ಉದ್ಯೋಗ ಪಡೆಯುವಲ್ಲಿ ಸಹಕಾರಿಯಾಗುವುದು ಎಂದರು.                                                            


ಜಿಲ್ಲೆಯಲ್ಲಿನ ನಿರುದ್ಯೋಗ ಯುವಕ-ಯುವತಿಯರು ಹಾಗೂ ಉದ್ಯೋಗಕಾಂಕ್ಷಿಗಳು ಸರಕಾರದ ಕೌಶಲ್ಯ ಯೋಜನೆಗಳ ಸೌಲಭ್ಯ ಪಡೆದುಕೊಂಡು ವಿವಿಧ ವಲಯಗಳಲ್ಲಿ ಉದ್ಯೋಗವಕಾಶಗಳನ್ನು ಹೊಂದುವAತಾಗಲಿ, ಕೌಶಲ್ಯವಿಲ್ಲದೆ ಭವಿಷ್ಯವಿಲ್ಲ-ಕೌಶಲ್ಯ ಭಾರತ ನಿರ್ಮಾಣಕ್ಕೆ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಭು ದೊರೆ, ಸಹಾಯಕ ನಿರ್ದೇಶಕರಾದ ಬಸಪ್ಪ ತಳವಡಿ ಇದ್ದರು.


ಸ್ವಚ್ಛತೆಯಿಂದ ಡೆಂಗ್ಯೂ ನಿಯಂತ್ರಿಸಲು ಸಾಧ್ಯ:  ಡಾ.ಲಕ್ಷಿö್ಮÃಕಾಂತ 

ಯಾದಗಿರಿ,ಜುಲೈ-23,(ಕ.ವಾ): ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದರ ಮೂಲಕ ಡೆಂಗ್ಯೂ ಜ್ವರ ನಿಯಂತ್ರಣ ಮಾಡಲು ಸಾಧ್ಯ. ಡೆಂಗಿಗೆ ಯಾವುದೇ ಲಸಿಕೆ ಅಥವಾ ವ್ಯಾಕ್ಸಿನ್ ಇಲ್ಲ ಆದ್ದುದರಿಂದಾಗಿ ನಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವುದರಿಂದಾಗಿ ಡೆಂಗ್ಯೂ ರೋಗದಂತಹ ಸಾಂಕ್ರಾಮಿಕ ರೋಗಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಲಕ್ಷಿö್ಮÃಕಾಂತ ಅಭಿಪ್ರಾಯ ವ್ಯಕ್ತಪಡಿಸಿದರು.    

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಿಗಳ ನಿಯಂತ್ರಣಾಧಿಕಾರಿಗಳ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಧಿಕಾರಿಗಳ ಸಭಾಂಗಣದಲ್ಲಿ ಡೆಂಗಿ ವಿರೋಧಿ ಮಾಸಾಚರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅವರು “ಡೆಂಗೀ ತಡೆಗಟ್ಟುವಿಕೆ ಮನೆಯಿಂದಲೇ ಪ್ರಾರಂಭ” ಎಂಬ ಘೋಷವಾಕ್ಯದೊಂದಿಗೆ ಮಾತನಾಡಿದರು.  

ಮಳೆಗಾಲ ಆರಂಭವಾದರೆ ಡೆಂಗ್ಯೂ, ಕಾಮಾಲೆ, ಮಲೇರಿಯಾ ಮತ್ತು ಚಿಕ್ಕನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳು ಉಲ್ಬಣವಾಗುತ್ತದೆ.  ಮಳೆ ನೀರು, ಚರಂಡಿ ನೀರು, ಗ್ಯಾರೇಜ್ ಹಾಗೂ ಬಸ್ ಡಿಪೋಗಳಲ್ಲಿನ ಬಳಕೆಗೆಬಾರದ ಟಯರ್ ಗಳಲ್ಲಿ ನೀರು ಶೇಖರಣೆಗೊಳ್ಳುವುದರಿಂದಾಗಿ ಲಾರ್ವೆಗಳ ಉತ್ಪತ್ತಿಗೆ ಕಾರಣವಾಗುತ್ತದೆ. ಲಾರ್ವೆಗಳನ್ನು ನಾಶಪಡಿಸುವ ಸಲುವಾಗಿ ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ 70% ರಷ್ಟು ಕಪ್ಪೆಮೀನುಗಳನ್ನು ಬಿಡಲಾಗಿದೆ ಎಂದು ಹೇಳಿದರು. 

ಡೆಂಗಿ ಜ್ವರ ವೈರಸಿನಿಂದ ಉಂಟಾಗುವ ಕಾಯಿಲೆಯಾಗಿದ್ದು, ಈಡಿಸ್ ಇಜಿಪ್ಟೆöÊ ಸೊಳ್ಳೆಯ ಕಚ್ಚುವಿಕೆಯಿಂದಾಗಿ ಒಬ್ಬರಿಂದ ಒಬ್ಬರಿಗೆ ಹರಡುತ್ತಾ ಹೋಗುತ್ತದೆ. ಪ್ರಾರಂಭದ ಹಂತದಲ್ಲಿ ತೀವ್ರ ಜ್ವರ,ವಿಪರೀತ ತಲೆನೋವು, ಬಾಯಿ,ಮೂಗು ಮತ್ತು ಒಸಡುಗಳಲ್ಲಿ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳೇ ಡೆಂಗಿನ ಲಕ್ಷಣಗಳಾಗಿವೆ ಮತ್ತು ಲಕ್ಷಣಗಳಿಗನುಸಾರವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಹೇಳಿದರು. 

ಸಾರ್ವಜನಿಕರು ಯಾವುದೇ ಜ್ವರವಿರಲಿ ರಕ್ತಪರೀಕ್ಷೆ ಮಾಡಿಸಿಕೊಂಡು ಸೊಳ್ಳೆ ಪರದೆ ಉಪಯೋಗಿಸುವುದರ ಮುಖಾಂತರವಾಗಿ ಸಾಂಕ್ರಾಮಿಕ ರೋಗದಿಂದ ಮುಕ್ತರಾಗಲು ಸಾಧ್ಯವಾಗುತ್ತದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ನಿಲ್ಲದಂತೆ ಎಚ್ಚರವಹಿಸುವುದು ಮುಖ್ಯವಾಗಿದೆ. ಆರೋಗ್ಯ ಕಾರ್ಯಕರ್ತರು ಮನೆಭೇಟಿಗೆ ಬಂದಾಗ ಎಲ್ಲರೂ ಸಹಕರಿಸಿ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಎಲ್ಲರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. 

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಇಂದುಮತಿ ಕಾಮಶೆಟ್ಟಿ ಮಾತನಾಡಿ, ಡೆಂಗ್ಯೂ ನಿವಾರಣೆಗಾಗಿ ಸೊಳ್ಳೆಗಳ ಉತ್ಪತ್ತಿಯಾಗದಂತೆ ಮಾಡುವುದರಿಂದಾಗಿ ಡೆಂಗ್ಯೂನ್ನು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಈ ಸೊಳ್ಳೆಗಳು ನೀರನ್ನು ಸಂಗ್ರಹಿಸಿಡುವ ಸಿಮೆಂಟ್ ತೊಟ್ಟಿ,ಕಲ್ಲುಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್ಮು,ಬ್ಯಾರೆಲ್, ಮಣ್ಣಿನ ಮಡಿಕೆ ಮತ್ತು ಉಪಯೋಗಿಸಿದ ಒರಳುಕಲ್ಲು ಮುಂತಾದ ಕಡೆ ಶೇಖರಿಸಿರುವ ನೀರುಗಳಲ್ಲಿ ಲಾರ್ವೆಗಳ ಉತ್ಪತ್ತಿಯಾಗದಂತೆ ವಾರಕ್ಕೊಮ್ಮೆ ಶುಚಿಗೊಳಿಸಬೇಕು ಎಂದು ಅವರು ತಿಳಿಸಿದರು.  

ಬಯಲಿನಲ್ಲಿ ಘನತ್ಯಾಜ್ಯ ವಸ್ತುಗಳಾದ ಟಯರ್,ಎಳನೀರು ಚಿಪ್ಪು,ಒಡೆದ ಬಾಟಲಿ, ಮುಂತಾದವುಗಳಲ್ಲಿ ಮನೆ ನೀರು ಸಂಗ್ರಹವಾಗದAತೆ ಎಚ್ಚರ ವಹಿಸಬೇಕು.  ಸೂಕ್ತ ವಿಲೇವಾರಿ ಮಾಡುವುದರ ಜೊತೆಗೆ ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆಯನ್ನು ಬಳಸಿ, ಸೊಳ್ಳೆಗಳ ಕಚ್ಚುವಿಕೆಯಿಂದ ದೂರವಿರಬೇಕು. ರೋಗ ಬಂದ ಮೇಲೆ ಚಿಕಿತ್ಸೆ ಪಡೆಯುದಕ್ಕಿಂತ ರೋಗಬಾರದಂತೆ ಮುಂಜಾಗೃತೆಕ್ರಮ ತೆಗೆದುಕೊಳ್ಳುವುದು ಅತ್ತುö್ಯತ್ತಮ ಎಂದರು.  

ಈ ಸಂದರ್ಭದಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಹಾಗೂ ಪತ್ರಕರ್ತರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ ಕಾಂತ ನಿರೂಪಿಸಿ,ವಂದಿಸಿದರು. 






ಬೆಳೆ ನಿರ್ವಹಣೆ ಕುರಿತು ರೈತರಿಗೆ ಸಲಹೆಗಳು 

ಯಾದಗಿರಿ:ಜುಲೈ 23(ಕ.ವಾ):  ಜಿಲ್ಲೆಯಲ್ಲಿ ಸುಮಾರು 15326 ಹೇಕ್ಟರ್ ರಷ್ಟು ಹೆಸರು ಬೀತ್ತನೇಯಾಗಿದ್ದು ಕಳೆದ ವಾರದರಿಂದ ಸುರಿಯುತ್ತಿರುವ ಮಳೆ ಮತ್ತು ಮೊಡ ಕವಿದ ವಾತವರಣದಿಂದ ಸಮೃದ್ದವಾಗಿ ಬೆಳೆದ ಬೆಳೆಯು ಹೂ ಮತ್ತು ಕಾಯಿ ಕಟ್ಟುವ ಹಂತದಲ್ಲಿದ್ದು ಬೆಳೆಗೆ ಅನೇಕ ಕೀಟ ಮತ್ತು ರೋಗಗಳ ಭಾದೆ ಅಲ್ಲಲಿ ಕಂಡುಬರುತ್ತಿದೆ. 

ಮುಖ್ಯವಾಗಿ ಸಸ್ಯ ಹೇನು, ನುಸಿಗಳು, ಥ್ರೀಪ್ಸ, ಮತ್ತು ಹಳದಿ ನಂಜಾಣು ರೋಗ ಕಂಡುಬAದಿದ್ದು ಇವುಗಳ ನಿಯಂತ್ರಣ ಕ್ರಮಗಳು ಈ ಕೆಳಗಿನಂತಿವೆ.

1. ಸಸ್ಯ ಹೇನು ಹಾಗೂ ಥ್ರೀಪ್ಸ್ ಕೀಟದಲಕ್ಷಣ:-

ಚಿಗುರೆಲೆ ಮತ್ತು ಕಾಯಿಗಳಿಂದ ರಸ ಹೀರುವುದರಿಂದ ಇಳುವರಿ ಕಡಿಮೆಯಾಗುತ್ತದೆ.

ನಿಯಂತ್ರಣ: ಪ್ರತಿ ಲೀಟರ್ ನೀರಿಗೆ 1 ಮೀ.ಲೀ ಮಿಥೈಲ್ ಪ್ಯಾರಾಥಿಯಾನ್ 50 ಇ.ಸಿ ಅಥವಾ 1 ಮಿ.ಲೀ ಮನೋಕ್ರೋಟೊಫಾಸ್ 36 ಎಸ್.ಎಲ್‌ಅಥವಾ 1.7 ಮಿ.ಲಿ ಡೈಮಿಥೋಯೆಟ್ 30 ಇ.ಸಿ ಬೆರಸಿ ಸಿಂಪಡಿಸಬೇಕು.

2. ಹಳದಿ ನಂಜಾಣು ರೋಗ ರೋಗದ ಲಕ್ಷಣ:-

ಈ ರೋಗ ಭಾದೆಯಿಂದ ಗಿಡಗಳು ಕುಳ್ಳಗಾಗುತ್ತವೆ. ಎಲೆಗಳ ಮೇಲೆ ಹಳದಿ ಬಣ್ಣ ಕಾಣಿಸಿಕೊಂಡು ಎಲೆಗಳು ಉದುರುತ್ತವೆ. 

ನಿಯಂತ್ರಣ: ರೋಗಗ್ರಸ್ತ ಗಿಡಗಳು ಕಂಡುಬAದಲ್ಲಿತಕ್ಷuವೆಕಿತ್ತಿ ಮಣ್ಣಿನಲ್ಲಿ ಮುಚ್ಚಿ ಹಾಕುವುದು. ಮೋನೋಕ್ರೊಟೋಫಾಸ್ 2.0 ಮೀ ಲೀ/ಲೀ ನೀರಿಗೆ ಬೇರಸಿ ಸಿಂಪಡಿಸಿರಿ ಅಥವಾಇಮಿಡಾಕ್ಲೊಪ್ರಿಡ್ 0.5 ಮಿ.ಲಿ/ಲೀ ನೀರಿಗೆ ಬೆರಸಿ ಸಿಂಪಡಿಸಿರಿ 

3. ಕಾಯಿ ಕೊರೆಯುವ ಹುಳು ಹಾನಿ ಕೀಟದಲಕ್ಷಣ :-

ಈ ಕೀಟಗಳು ಎಲೆ ಮತ್ತು ಕಾಯಿ ಕೊರೆದು ತಿನ್ನುವುದರಿಂದ ಬೆಳೆಯಲ್ಲಿ ಹೆಚ್ಚು ಹಾನಿಯಾಗುತ್ತದೆ. 

ನಿಯಂತ್ರಣ: ಪ್ರತಿ ಲೀಟರ್ ನೀರಿಗೆ 1 ಮಿ.ಲೀ ಮನೋಕ್ರೋಟೊಫಾಸ್ 36 ಎಸ್.ಎಲ್‌ಅಥವಾ 0.5 ಮಿ.ಲಿ ಫೆನವಲರೇಟ್ 20 ಇ.ಸಿ ಅಥವಾ 2 ಮಿ.ಲೀ. ಕ್ವಿನಾಲ್‌ಫಾಸ್ 25 ಇ.ಸಿ ಬೆರೆಸಿ ಸಿಂಪರಿಸಬೇಕು. 


ಸೂಚನೆ: ಹೂವಾಡುವ ಮತ್ತು ಕಾಳು ಕಟ್ಟುವ ಸಮಯದಲ್ಲಿ ಶೇ.1ರ 19:19:19 (10ಗ್ರಾಂ/ಲೀಟರ್ ನೀರಿಗೆ) ಅಥವಾ ಶೇ.2ರ 

ಡಿ.ಎ.ಪಿ. (20ಗ್ರಾಂ ಡಿ.ಎ.ಪಿ. ಪ್ರತಿ ಲೀಟರ್ ನೀರಿಗೆ) ಬೆರಿಸಿ ಸಿಂಪರಣೆ ಮಾಡಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜುಲೈ 26 ರಂದು ಐ.ಟಿ.ಐ ಕಾಲೇಜುನಲ್ಲಿ ಕೋವಿಡ್-19 ರ ಲಸಿಕೆ ಅಭಿಯಾನ

ಯಾದಗಿರಿ:ಜುಲೈ 23(ಕ.ವಾ): ಯಾದಗಿರಿ ತಾಲೂಕಿನ ಸರಕಾರಿ ಅನುದಾನಿತ ಹಾಗೂ ಖಾಸಗಿ ಐ.ಟಿ.ಐ ಕಾಲೇಜುಗಳ ಸಹಭಾಗಿತ್ವದಲ್ಲಿ ಸುಮಾರು 400 ಮಮದಿ ತರಬೇತಿ ಪಡೆಯುತ್ತಿರುವ ಕೌಶಲ್ಯ ಅಭಿವೃದ್ಧಿ ವಿದ್ಯಾರ್ಥಿಗಳಿದ್ದು, ವಿದ್ಯಾರ್ಥಿಗಳಿಗೆ ಜುಲೈ 26 ರಂದು ಐ.ಟಿ.ಐ ಕಾಲೇಜಿನಲ್ಲಿ ಕೋವಿಡ್-19 ರ ಲಸಿಕೆ ಅಭಿಯಾನ ಕಾರ್ಯಕ್ರಮವನ್ನು ಯಾದಗಿರಿ ಜವಾಹರ ಐ.ಟಿ.ಐ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಾದಗಿರಿ ಸರಕಾರಿ ಐ.ಟಿ.ಐ ಕಾಲೇಜಿನ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ. 










ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಕಿರುಚಿತ್ರ ಸ್ಪರ್ಧೆ

ಯಾದಗಿರಿ:ಜುಲೈ 23(ಕ.ವಾ): ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ ಯೋಜನೆಯು(ನಗರ) ಪ್ರಾರಂಭವಾಗಿ 2021ರ ಜೂನ್ 25ಕ್ಕೆ 6 ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನಗರ ಪ್ರದೇಶದ ಜನರಿಗೆ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು ಮತ್ತು ಯಶೋಗಾಥೆಗಳನ್ನು ಸಮಾಜಕ್ಕೆ ತಿಳಿಸಲು, ಸಮುದಾಯಾದರಿತ ಸಂಘ/ಸAಸ್ಥೆಗಳು ಮತ್ತು  ಯುವ ಜನಾಂಗವನ್ನು ಉತ್ತೇಜಿಸಲು ಮತ್ತು ಅವರಲ್ಲಿ ಉತ್ತಮ ಸ್ಪರ್ಧಾಭಾವನೆಯನ್ನು ತರುವ ನಿಟ್ಟನಲ್ಲಿ ಪಿ.ಎಂ.ಎ.ವೈ.ಯೋಜನೆಯ ಫಲಾನುಭವಿಗಳ ಯಶೋಗಾಥೆಗಳ ಕಿರುಚಿತ್ರಗಳನ್ನು ತಯಾರಿಸಲು 18 ವರ್ಷ ಮೇಲ್ಪಟ್ಟ ಎಲ್ಲಾ ಭಾರತೀಯರಿಗೆ ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸುವಲು ಅರ್ಜಿ ಆಹ್ವಾನಿಸಲಾಗಿದೆ.

ಸ್ಪರ್ಧೆಯ ವಿಷಯ ಕುಶೀಯೋನ್ ಕಾ ಆಶಿಯಾನ “ಸಂತಸ ತಂದ ಮನೆ” ಸ್ಪರ್ಧೆಗೆ ಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ತಮ್ಮ ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸಬೇಕು. ಸ್ಪರ್ಧೆಯು 1ನೇ ಜುಲೈ-2021 ರಿಂದ ಪ್ರಾರಂಭವಾಗಿ 2021  ಸೆಪ್ಟಂಬರ್ 15 ರ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ.

ಫಲಾನುಭವಿಗಳ ಪಟ್ಟಿಯನ್ನು ಸಂಬAದಿಸಿದ ನಗರ ಸ್ಥಳೀಯ ಸಂಸ್ಥೆಗಳು ನೊಂದಾಯಿಸಿಕೊAಡ ಅರ್ಹ ಸ್ಪರ್ಧಿದಾರರಿಗೆ ನೀಡಲಾಗುವುದು. ಸ್ಫರ್ಧಿಗಳಿಗೆ ಸಹಾಯಕವಾಗಿ ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂಧಿ ಮತ್ತು ಜಿಲ್ಲಾ ನಗರ ತಾಂತ್ರಿಕ ಕೋಶದ ತಜ್ಞರುಗಳ ಸೇವೆ ಲಭ್ಯವಿರುತ್ತದೆ. 

ಸ್ಪರ್ಧಿಗಳು ಉತ್ತಮ ಸಂದೇಶ ಮತ್ತು ಉತ್ತಮ ಮೊಬೈಲ್(ಊigh-ಡಿಚಿಜiಚಿಣioಟಿ) ಅಥವಾ ಕ್ಯಾಮರಾಗಳಿಂದ ಚಿತ್ರಿಕರಣ ಮಾಡುವುದು. ಚಿತ್ರಿಕರಿಸಿದ ಕಿರುಚಿತ್ರವನ್ನು ಆನ್‌ಲೈನ್ ಮೂಲಕ ಅಪ್ಲೋಡ್ ಮಾಡುವುದು. ಆನ್‌ಲೈನ್ ಮೂಲಕ ಅಪ್ಲೋಡ್ ಮಾಡಿದ ಕಿರುಚಿತ್ರವನ್ನು ರಾಜ್ಯ ಮಟ್ಟದ ನೋಡಲ್ ಏಜೆನ್ಸಿ ಪರಿಶೀಲಿಸಿ, ಆಯ್ಕೆಯಾದ ಕಿರುಚಿತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿ ಸ್ಪರ್ಧಿಸಿದ ಎಲ್ಲಾ ಸ್ಪರ್ಧಿಗಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಸ್ಪರ್ಧೇಯಲ್ಲಿ ವಿಜೇತರಾಗುವ ಕ್ರಮವಾಗಿ 25 ಫಲಾನುಭವಿಗಳಿಗೆ ಪ್ರಥಮ ಬಹುಮಾನವಾಗಿ ರೂ. 25,000/-ದ್ವಿತೀಯ ಬಹುಮಾನವಾಗಿ ರೂ.20,000/- ಮತ್ತು ತೃತೀಯ ಬಹುಮಾನವಾಗಿ ರೂ.15,000/- ಗಳ ನಗದು  ಮತ್ತು ಪ್ರಶಸ್ತಿ ಪತ್ರಗಳನ್ನು ಕೇಂದ್ರ ಸರ್ಕಾರದಿಂದ ನೀಡಲಾಗುವುದು.

ಜಿಲ್ಲೆಯ ಎಲ್ಲಾ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಪಿ.ಎಮ.ಎ.ವೈ.(ನ) ಯೋಜನೆಯು ಅನುಷ್ಠಾನಗೊಳ್ಳುತ್ತಿದ್ದು, ಸ್ಪರ್ಧೆಯಲ್ಲಿ ಭಾಗವಹಿಸುವ ಸ್ಪರ್ಧಿಗಳು ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ವಸತಿ ವಿಷಯ ನಿರ್ವಾಹಕರು, ಜಿಲ್ಲಾ ನಗರಾಭಿವೃದ್ಧಿ ಕೋಶದ ನಗರ ಮಟ್ಟದ ತಾಂತ್ರಿಕ ಕೋಶದ ತಜ್ಞರುಗಳನ್ನು ಸಂಪರ್ಕಿಸಲು ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರು ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

                  

ನಿರುದ್ಯೋಗಿಗಳಿಗೆ ಸಾಲ: ಡೇ-ನಲ್ಮ್ ಯೋಜನೆಯಡಿ ಅರ್ಜಿ ಆಹ್ವಾನ

ಯಾದಗಿರಿ:ಜುಲೈ 23(ಕ.ವಾ): ಜಿಲ್ಲೆಯ ನಗರಸಭೆ ಹಾಗೂ ಪುರಸಭೆಗಳ ವ್ಯಾಪ್ತಿಯಲ್ಲಿನ  ನಿರುದ್ಯೋಗ ಯುವಕ-ಯುವತಿಯರಿಗೆ ದೀನದಯಾಳ್ ಅಂತ್ಯೋದಯ (ಡೇ-ನಲ್ಮ್) ಯೋಜನೆಯಡಿ 2021-22ನೇ ಸಾಲಿಗೆ ಬ್ಯಾಂಕಿನಿAದ ಬಡ್ಡಿ ಸಹಾಯಧನ ಸಾಲ ಪಡೆದು ಸ್ವ-ಉದ್ಯೋಗ ಮಾಡಲಿಚ್ಚಿಸುವವರಿಗೆ ಹಾಗೂ ಮಹಿಳೆಯರಿಗೆ ಸ್ವ-ಸಹಾಯ ಸಂಘ ರಚಿಸುವ ಕುರಿತು ಮತ್ತು ಸ್ವ-ಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ಪಡೆದುಕೊಳ್ಳುವವರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳವರು ಆಯಾ ನಗರಸ್ಥಳೀಯ ಸಂಸ್ಥೆಗಳಲ್ಲಿರುವ ಸಮುದಾಯ ಸಂಘಟನಾಧಿಕಾರಿಗಳು/ಸಮುದಾಯ ಸಂಘಟಕರನ್ನು ಭೇಟಿ ಮಾಡಿ, ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ನಿಗಧಿತ ಅವಧಿಯೊಳಗಾಗಿ ಅರ್ಜಿಗಳನ್ನು ಆಯಾ ನಗರಸಭೆಯ ಪೌರಾಯುಕ್ತರು ಹಾಗೂ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆ ತಿಳಿಸದೆ.









ಪ್ರಧಾನ ಮಂತ್ರಿ ಆವಾಸ ಯೋಜನೆ ತರಬೇತಿ ಮತ್ತು ಕಾರ್ಯಾಗಾರ

ಯಾದಗಿರಿ:ಜುಲೈ 23(ಕ.ವಾ): ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಆವಾಸ ಯೋಜನೆಯು(ನಗರ) ಪ್ರಾರಂಭವಾಗಿ 2021ರ ಜೂನ್ 25ಕ್ಕೆ 6 ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನಗರ ಪ್ರದೇಶದ ಜನರಿಗೆ ಯೋಜನೆಯ ಕುರಿತು ಹೆಚ್ಚಿನ ಅರಿವು ಮೂಡಿಸಲು “ಆವಾಸ್ ಪರ ಸಂವಾದ” ಎಂಬ ಶೀರ್ಷಿಕೆಯಡಿಯಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳಿಗೆ, ಹಣಕಾಸು ಸಂಸ್ಥೆಗಳು, ಸಮುದಾಯ ಆದಾರಿತ ಸಂಘಸAಸ್ಥೆಗಳ ಪದಾಧಿಕಾರಿಗಳಿಗೆ ಮತ್ತು ಯುವಕರಿಗೆ ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಕಾರ್ಯಾಗಾರ ಮತ್ತು ತರಬೇತಿಗಳನ್ನು ಏರ್ಪಡಿಸಲು ಅರ್ಹ ಸ್ವಯಂ ಸೇವಾ ಸಂಸ್ಥೆಗಳು. ಶಿಕ್ಷಣ ಸಂಸ್ಥೆಗಳು ಹಣಕಾಸು ಸಂಸ್ಥೆಗಳು ಮತ್ತು ಬ್ಯಾಂಕ್‌ಗಳಿAದ ಅರ್ಜಿ ಆಹ್ವಾನಿಸಲಾಗಿದೆ. 

ತರಬೇತಿ ಮತ್ತು ಕಾರ್ಯಗಾರ ಹಮ್ಮಿಕೊಳ್ಳಲು ಆಸಕ್ತ ಇರುವ ಸಂಸ್ಥೆಗಳು ಪಿ.ಎಂ.ಎ.ವೈ. ವೆಬ್‌ಸೈಟ್ ನಲ್ಲಿ (hಣಣಠಿ://ಠಿmಚಿಥಿ-uಡಿbಚಿಟಿ.gov.iಟಿ/) ಕಡ್ಡಾಯವಾಗಿ ನೊಂದಾಯಿಸಿಕೊಳ್ಳಬೇಕು. ಆಯ್ಕೆಯಾಗುವ ಅರ್ಹ ಸಂಸ್ಥೆಗಳಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಮಾಹಿತಿ ನೀಡಲಾಗುವುದು. ನೊಂದಣಿ ಮಾಡಿಸಿಕೊಳ್ಳಲು ಜುಲೈ 28 ಕೊನೆಯ ದಿನವಾಗಿದ್ದು, ತರಬೇತಿ ಮತ್ತು ಕಾರ್ಯಾಗಾರಗಳನ್ನು 2021 ರ ಸೆಪ್ಟಂಬರ್ 30 ರೊಳಗೆ ಆಯೋಜಿಸುವುದು. 

ತರಬೇತಿಯ ಪೋಟೋ, ವಿಡಿಯೋ, ಮತ್ತಿತರ ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಸರ್ಕಾರಕ್ಕೆ ಸಲ್ಲಿಸಬೇಕು. ತರಬೇತಿಯಲ್ಲಿ ಭಾಗವಹಿಸುವ ಎಲ್ಲರಿಗೂ ಪ್ರಮಾಣ ಪತ್ರವನ್ನು, ಪ್ರತಿ ಆನ್‌ಲೈನ್ ತರಬೇತಿಗೆ ರೂ.7000/- ಮತ್ತು ಆಫ್‌ಲೈನ್ ತರಬೇತಿಗೆ ರೂ.35,000/-ಗಳ ಅನುದಾನವನ್ನು ನೀಡಲಾಗುವುದು. 

ಹೆಚ್ಚಿನ ಮಾಹಿತಿಗಾಗಿ ಆಯಾ ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ವಸತಿ ವಿಷಯ ನಿರ್ವಾಹಕರು ಮತ್ತು ಯಾದಗಿರಿ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ನಗರ ಮಟ್ಟದ ತಾಂತ್ರಿಕ ಕೋಶದ ತಜ್ಞರುಗಳನ್ನು ಸಂಪರ್ಕಿಸಲು ಕೊರಲಾಗಿದೆ.


ಅಲ್ಪ ಸಂಖ್ಯಾತರ ಆಯೋಗ ಪ್ರವಾಸ ರದ್ದು

ಯಾದಗಿರಿ.ಜುಲೈ.23(ಕ.ವಾ): ಕರ್ನಾಟಕ ಅಲ್ಪ ಸಂಖ್ಯಾತರ ಆಯೋಗವು ಜುಲೈ 28 ರಂದು ನಿಗದಿಪಡಿಸಿದ್ದ ಯಾದಗಿರಿ ಜಿಲ್ಲಾ ಪ್ರವಾಸವನ್ನು ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಕಾರಣ ರದ್ದು ಪಡಿಸಲಾಗಿದೆ ಎಂದು ಅಲ್ಪ ಸಂಖ್ಯಾತೆರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.



ಉದ್ಯಮಶೀಲತಾ ಅಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಯಾದಗಿರಿ.ಜುಲೈ.23(ಕ.ವಾ): ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ  ಇಲಾಖೆ  ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಭ್ಯರ್ಥಿಗಳು  18 ರಿಂದ 40 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್ಸೆಸ್ಸೆಲ್ಸಿ ಪಾಸಾಗಿರಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿಗಳನ್ನು ಜಂಟಿ ನಿರ್ದೇಶಕರು, ಯಾದಗಿರ ಜಿಲ್ಲಾಡಳಿತ ಭವನ, ಸಿಡಾಕ್-ಉದ್ಯಮಶೀಲತಾ ಮಾರ್ಗದರ್ಶನ ಕೇಂದ್ರ 1ನೇ ಮಹಡಿ, ಎ ಬ್ಲಾಕ್, ರೋ. ನಂ. ಎ11, ಕಚೇರಿ ವೇಳೆಯಲ್ಲಿ ಪಡೆಯಬಹುದಾಗಿದ್ದು, ಜುಲೈ 28ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ. ಸಂ: 8147307003, 9901914945 ಸಂಪರ್ಕಿಸಬಹುದು.






28ರAದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೋನ್-ಇನ್ ಕಾರ್ಯಕ್ರಮ

ಯಾದಗಿರಿ:ಜುಲೈ-23(ಕ.ವಾ): ಸಾರ್ವಜನಿಕರು ಹಾಗೂ ಪೊಲೀಸ್ ಇಲಾಖೆಯ ಮಧ್ಯೆ ಉತ್ತಮ ಸಂಪರ್ಕ ಬೆಳೆಯುವ ನಿಟ್ಟಿನಲ್ಲಿ ಮತ್ತು ಉತ್ತಮ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಸುಧಾರಿಸಲು ಜುಲೈ 28 ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ ಪೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.

   ಜಿಲ್ಲೆಯ ಎಲ್ಲಾ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಸಂಬAಧಿಸಿದAತೆ ಯಾವುದಾದರೂ ದೂರು ಮತ್ತು ಜಿಲ್ಲೆಯ ಸಂಚಾರ ವ್ಯವಸ್ಥೆ ಸೇರಿದಂತೆ ಇನ್ನಿತರ ಸುಧಾರಣೆಗಳ ಬಗ್ಗೆ ಸಲಹೆ ಅಥವಾ ಸಮಸ್ಯೆಗಳಿದ್ದರೆ ನೇರವಾಗಿ ದೂ.ಸಂ:08473-253730 ಕರೆ ಮಾಡಿ ಪರಿಹಾರ ಕಂಡುಕೊಳ್ಳುವAತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...