ಗುರುವಾರ, ಆಗಸ್ಟ್ 19, 2021

 19 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಯಾದಗಿರಿ ಆಗಸ್ಟ್.18(ಕರ್ನಾಟಕ ವಾರ್ತೆ): ನಿರಂತರ ವಿದ್ಯುತ್ ಪೂರೈಸಲು ಹಾಗೂ ವಿದ್ಯುತ್ ಅವಘಡ ಆಗದಂತೆ ತಡೆಯಲು 110ಕೆವಿ ಶಹಾಪೂರ, ಶಹಾಬಾದ ವಿದ್ಯುತ್ ಮಾರ್ಗದ ವಿದ್ಯುತ್‌ತಂತಿ ಬದಲಾವಣೆ ಕೆಲಸ ನಿರ್ವಹಿಸುತ್ತಿರುವ ಪ್ರಯುಕ್ತ ಆಗಸ್ಟ್ 19 ರ ಗುರುವಾರ ದಂದು ಬೆಳಿಗ್ಗೆ 9 ರಿಂದ ಸಾಯಂಕಾಲ 5ಗಂಟೆಯ ವರೆಗೆ 11ಕೆವಿ ಬಿ.ಗುಡಿಫೀಡರ್, 11ಕೆವಿ ಮುಡಬೂಳ ಎನ್.ಜೆ.ವೈ ಫೀಡರ್, 11ಕೆವಿ ಮದ್ದರಕಿ ಐಪಿಸೆಟ್ ಫೀಢರ್‌ಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಬಿ.ಗುಡಿ, ಎನ್.ಜಿ.ಓಕಾಲೋನಿ, ಬಾಪುಗೌಡ ನಗರ, ಮೂಡಬೂಳ, ಮದ್ದರಕಿ, ಕೊಡಮನಹಳ್ಳಿ, ಅರಳಹಳ್ಳಿ, ಸಾದ್ಯಪೂರ, ಹುಲಕಲ್, ಹೋತಪೇಠ, ಮಕ್ತಾಪೂರ, ಹಾಲಭಾವಿ, ಇಂಗಳಗಿ, ಸಲಾದಪೂರ, ಶಾಖಾಪೂರ, ದಿಗ್ಗಿ, ಸೈದಾಪೂರ, ಉಮರದೊಡ್ಡಿ, ನಾಗನಟಗಿ, ಬಾಣತಿಹಾಳ ಗ್ರಾಮಗಳಿಗೆ ಹಾಗೂ ಸುತ್ತಮುತ್ತಲಿನ ತಾಂಡಗಳಿಗೆ ಮತ್ತು ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಜೆಸ್ಕಾಂಗೆ ಸಹಕರಿಸುವಂತೆ ಕಾರ್ಯನಿರ್ವಾಹಕ ಅಭಿಯಂತರರು (ವಿ), ಕಾ ಮತ್ತು ಪಾ ವಿಭಾಗ, ಗು.ವಿ.ಸ.ಕಂ.ನಿ, ಯಾದಗಿರಿ ಇವರು ಈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...