ಸೋಮವಾರ, ಆಗಸ್ಟ್ 30, 2021

 ಸೆಪ್ಟೆಂಬರ್ ತಿಂಗಳ ಪಡಿತರ ವಿತರಣೆಗೆ ಲಭ್ಯ

ಯಾದಗಿರಿ,ಆಗಸ್ಟ್ 30, (ಕರ್ನಾಟಕ ವಾರ್ತೆ): ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿಯಲ್ಲಿ ಸೆಪ್ಟೆಂಬರ್-2021 ರ ತಿಂಗಳಿಗೆ ಯಾದಗಿರಿ ಜಿಲ್ಲೆಯ ಎಎವೈ 29,527 ಪ್ರತಿ ಪಡಿತರ ಚೀಟಿಗಳಿಗೆ 35 ಕೆಜಿ ಅಕ್ಕಿ ಹಾಗೂ ಬಿಪಿಎಲ್ 8,48,467 ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ, ಮತ್ತು ಬಿಪಿಎಲ್ 2,33,804 ಪ್ರತಿ ಪಡಿತರ ಚೀಟಿಗಳಿಗೆ 2 ಕೆ.ಜಿ ಗೋಧಿ ಉಚಿತವಾಗಿ ವಿತರಿಸಲಾಗುವುದು ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಡಿಯಲ್ಲಿ ಸೆಪ್ಟೆಂಬರ್-2021 ರ ಮಾಹೆಗೆ ಎಎವೈ 1,19,663 ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಹಾಗೂ ಬಿಪಿಎಲ್ 8,48,467 ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್-2021 ರ ಮಾಹೆಗೆ ಆಹಾರಧಾನ್ಯ ಪಡೆಯಲು ಇಚ್ಛೆಯನ್ನು ವ್ಯಕ್ತಪಡಿಸಿದ ಆದ್ಯತೇತರ ಪಡಿತರ ಚೀಟಿ ಹೊಂದಿದವರಿಗೆ ಏಕ ಸದಸ್ಯರಿಗೆ ಅಕ್ಕಿ 5 ಕೆಜಿ ಹಾಗೂ ಎರಡು ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆಜಿ ಅಕ್ಕಿ ಯನ್ನು ಪ್ರತಿ ಕೆಜಿಗೆ ರೂ,15/- ರಂತೆ ನೀಡಿ ಆಹಾರಧಾನ್ಯವನ್ನು ಪಡೆಯಬಹುದಾಗಿದೆ.
ಜಿಲ್ಲೆಯ ಆಯ್ದ 399 ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಓ.ಟಿ.ಪಿ. ಮುಖಾಂತರ ಅಥವಾ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು (Point of Sale – POS Shop Module) ವ್ಯವಸ್ಥೆ ಮಾಡಲಾಗಿದೆ. ಕುಟುಂಬದ ಸದಸ್ಯರಿಗೆ ಲಭ್ಯವಾಗಿರುವ ಅರ್ಹತಾ ಪ್ರಮಾಣವನ್ನು ತಿಳಿದುಕೊಂಡು ಆಹಾರ ಧಾನ್ಯ ಪಡೆದುಕೊಳ್ಳಲು ಸೂಚಿಸಿದೆ.
ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯ ಮತ್ತು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಆಯಾ ತಾಲೂಕಿನ ತಹಸೀಲ್ದಾರ, ಜಿಲ್ಲೆಯ ಉಪ ನಿರ್ದೇಶಕರ ಕಚೇರಿU ದೂ.ಸಂ 08473-253707 ಅಥವಾ ಸಹಾಯವಾಣಿ 1967 ಸಂಖ್ಯೆಗೆ ದೂರನ್ನು ದಾಖಲಿಸಲು ಕೋರಿದೆ. ಪಡಿತರ ಚೀಟಿದಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ನ್ಯಾಯಬೆಲೆ ಅಂಗಡಿಯಿAದ ಆಹಾರಧಾನ್ಯವನ್ನು ಪಡೆದುಕೊಳ್ಳಲು ಪ್ರಕಟಣೆ ತಿಳಿಸಿದೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...