ಮಂಗಳವಾರ, ಆಗಸ್ಟ್ 31, 2021

 


ಕಾರ್ಮಿಕ ಅದಾಲತ್‌ಆಟೋ ಪ್ರಚಾರಕ್ಕೆ ಚಾಲನೆ

ಯಾದಗಿರಿ,ಆಗಸ್ಟ್ 31, (ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲಾ ಕಾರ್ಮಿಕ ಇಲಾಖೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ  ಮಂಗಳವಾರದAದು “ಕಾರ್ಮಿಕ ಅದಾಲತ್‌ನ ಕುರಿತಾದ ಆಟೋ ಪ್ರಚಾರಕ್ಕೆ” ಯಾದಗಿರಿಯ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ನ್ಯಾಯಾಧೀಶರಾದ ಸಾಹೀಲ್ ಎಸ್ ಕುನ್ನಿಭಾವಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. 

ನಂತರ ಮಾತನಾಡಿದ ಅವರು, ಕಾರ್ಮಿಕ ಇಲಾಖೆಯಿಂದ ಈಗಾಗಲೇ ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಸಾಕಷ್ಟು ಯೊಜನೆಗಳು ಜಾರಿಯಲ್ಲಿದ್ದು, ಅವುಗಳ ಕುರಿತು ಕಾರ್ಮಿಕ ವರ್ಗದವರಲ್ಲಿ ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಕೈಗೊಂಡು ಬಾಕಿ ಇರುವ ಅರ್ಜಿಗಳ ವಿಲೇವಾರಿ ಮಾಡುತ್ತಿರುವುದು ಸ್ವಾಗತಾರ್ಹ ಎಂದು ತಿಳಿಸಿದರು.  ಈ ಕಾರ್ಮಿಕ ಅದಾಲತ


ಸೆ.16 ರವರೆಗೆ ಚಾಲ್ತಿಯಲ್ಲಿದ್ದು, ಸೂಕ್ತ ದಾಖಲೆಗಳನ್ನು ಇಲಾಖೆಗೆ ಸಲ್ಲಿಸುವ ಮೂಲಕ ಅದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ತಿಳಿಸಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಯಾದಗಿರಿ ಕಾರ್ಮಿಕ ನಿರೀಕ್ಷಕರಾದ ಗಂಗಾಧರ, ಕಾರ್ಮಿಕ ನಿರೀಕ್ಷಕರಾದ ಸಾಬಿರಾ ಬೇಗಂ ಸೇರಿದಂತೆ ಇತರೆ ಸಿಬ್ಬಂದಿಗಳಿದ್ದರು.   

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...