ಸೋಮವಾರ, ಆಗಸ್ಟ್ 30, 2021

 ಪಡಿತರ ಚೀಟಿ:ಇ-ಕೆವೈಸಿ ಮಾಡಿಸಲು ಸೆ.10 ಕೊನೆಯ ದಿನ

ಯಾದಗಿರಿ,ಆಗಸ್ಟ್ 30, (ಕರ್ನಾಟಕ ವಾರ್ತೆ): ಜಿಲ್ಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳು ಹಾಗೂ ಆದ್ಯತೇತರ (ಎಪಿಎಲ್) ಪಡಿತರ ಚೀಟಿಗಳಲ್ಲಿರುವ ಸದಸ್ಯರು ಇಲ್ಲಿಯವರೆಗೂ ಇ-ಕೆವೈಸಿ (ಬಯೋಮೆಟ್ರಿಕ್ ದೃಢೀಕರಣ) ಮಾಡಲಾದ ಸದಸ್ಯರನ್ನು ಹೊರತುಪಡಿಸಿ ಉಳಿದ ಸದಸ್ಯರು ಸೆಪ್ಟೆಂಬರ್.1 ರಿಂದ 10 ರ ಒಳಗೆ ತಮ್ಮ ಪಡಿತರ ಚೀಟಿಯನ್ನು ನಿಯೋಜಿಸಲಾದ  ನ್ಯಾಯಬೆಲೆ ಅಂಗಡಿಗಳಲ್ಲಿಯೇ ಕಡ್ಡಾಯವಾಗಿ ಪಡಿತರ ಚೀಟಿಗಳ ಸದಸ್ಯರು ಉಚಿತವಾಗಿ ಇ-ಕೆವೈಸಿ (ಬಯೋಮೆಟ್ರಿಕ್ ದೃಢೀಕರಣ)  ಮಾಡಿಸಿಕೊಳ್ಳಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...