ಶುಕ್ರವಾರ, ಆಗಸ್ಟ್ 23, 2024

ಕಾಣೆಯಾದ ಬಾಲಕೀಯ ಪತ್ತೆಗೆ ಗುರುಮಿಠಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಮನವಿ

 

                                                             ವಾ.ವಿ.ಸಂ.128

ಕಾಣೆಯಾದ ಬಾಲಕೀಯ ಪತ್ತೆಗೆ ಗುರುಮಿಠಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಮನವಿ


ಯಾದಗಿರಿ : ಆಗಸ್ಟ್ 23, (ಕ.ವಾ) : ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಯಂಪಾಡ ತಾಂಡ ಗ್ರಾಮದ ಬಾಲಕಿ ಕುಮಾರಿ ಸೋನಿಬಾಯಿ ತಂದೆ ಪಾಂಡು ರಾಠೋಡ್ ಬಾಲಕಿಯು ಕಾಣೆಯಾಗಿದ್ದು, ಈಕೆಯ ಬಗ್ಗೆ ಮಾಹಿತಿ ಬಂದರೆ ಗುರುಮಿಠಕಲ್ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂ.ಗೆ ತಿಳಿಸಲು ಪಿಎಸ್‌ಐ ಭೀಮರಾಯ ಅವರು ಕೋರಿದ್ದಾರೆ.


     ಕಾಣೆಯಾದ ಬಾಲಕಿಯು ಮೇ 17 ರಂದು ಬೆಳಿಗ್ಗೆ 5 ಗಂಟೆಗೆ ಬಯಲು ವಿಸರ್ಜನೆಗೆ ಹೋಗಿ  ಬರುತ್ತೇನೆ ಎಂದು ಹೋಗಿದ್ದು, ಮರಳಿ ಮನೆಗೆ ಬಂದಿರುವುದಿಲ್ಲ. ಕುಟುಂಬದವರು ಎಲ್ಲಾ ಕಡೆ ಹುಡುಕಾಡಿದ್ದು ಎಲ್ಲಿಯೂ ಕಂಡು ಬಂದಿರುವುದಿಲ್ಲ.


     ಬಾಲಕೀಯು ಕಾಣೆಯಾದ ಬಗ್ಗೆ ಗುರುಮಿಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ಒಂಬತ್ತನೇ ತರಗತಿ ಓದುತ್ತಿದ್ದು, ವಯಸ್ಸು 15 ಇದ್ದು, ಎತ್ತರ 5.2, ಕನ್ನಡ, ತೆಲುಗು, ಹಿಂದಿ, ಲಂಬಾಣಿ ಭಾಷೆ ಮಾತನಾಡುತ್ತಾಳೆ, ದುಂಡನೆ ಮುಖ, ಗೋದಿ ಬಣ್ಣ, ಸದೃಢ ಮೈಕಟ್ಟು, ತಲೆಯಲ್ಲಿ ಕಪ್ಪು ಕೂದಲಿದ್ದು, ಕಪ್ಪು ಬಣ್ಣದ ಟಾಪ್ ಮತ್ತು ಕೆಂಪು ಬಣ್ಣದ ಪೈಜಾಮ್ ಬಟ್ಟೆ ಧರಿಸಿದ್ದಳು. ಬಾಲಕಿ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಗುರುಮಿಠಕಲ್ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಮ್ 112ಗೆ ಕರೆ ಮಾಡಲು ಕೋರಿದ್ದಾರೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ. 9480803581, 08473 225054, 9480803543, 08473 225153, 9480803526, 08473 252301, 9980803600 ಎಂದು ಅವರು ತಿಳಿಸಿದ್ದಾರೆ.


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

                                                               ವಾ.ವಿ.ಸಂ.150 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ...