ಶುಕ್ರವಾರ, ಆಗಸ್ಟ್ 23, 2024

“ದೀನ್ ದಯಾಳ್ ಸ್ಪರ್ಶ್ ಯೋಜನೆ” ಅರ್ಜಿ ಆಹ್ವಾನ

 ವಾ.ವಿ.ಸಂ.127


“ದೀನ್ ದಯಾಳ್ ಸ್ಪರ್ಶ್ ಯೋಜನೆ” ಅರ್ಜಿ ಆಹ್ವಾನ

ಯಾದಗಿರಿ : ಆಗಸ್ಟ್ 23, (ಕ.ವಾ) : ಅಂಚೆ ಇಲಾಖೆಯು 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಯಾದಗಿರಿ ಭಾರತೀಯ ಅಂಚೆ ಇಲಾಖೆ ಅಧೀಕ್ಷಕರು ತಿಳಿಸಿದ್ದಾರೆ.

     9 ನೇ ತರಗತಿಗೆ ಫಾರ್ ಶಾಲಾ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸಲು “ದೀನ್ ದಯಾಳ್ ಸ್ಪರ್ಶ್ ಯೋಜನೆ” ಅಡಿಯಲ್ಲಿ ವಿದ್ಯಾರ್ಥಿವೇತನವನ್ನು ನೀಡುವುದು. ಸ್ಪರ್ಶ ಎಂದರೆ ಸ್ಟಾಂಪ್‌ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿವೇತನ.

ಶೈಕ್ಷಣಿಕ ಪಠ್ಯಕ್ರಮವನ್ನು ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ ಚಿಕ್ಕ ವಯಸ್ಸಿನಲ್ಲಿ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹವನ್ನು ಉತ್ತೇಜಿಸುವುದು ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ.   

     ಯೋಜನೆಯಡಿಯಲ್ಲಿ, 2023-24 ಶೈಕ್ಷಣಿಕ ವರ್ಷದಲ್ಲಿ 60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ, ಫಿಲಾಟೆಲಿಕ್ ಕ್ಲಬ್‌ನ ಸದಸ್ಯ ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6ನೇ ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ 6000 ರೂ.ಗಳ ವಿದ್ಯಾರ್ಥಿವೇತನ ನೀಡಲಾಗುತ್ತದೆ. ವರ್ಷ ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಾಗುತ್ತದೆ. ಹಂತ-1 ಅಂಚೆ ಚೀಟಿಗಳ ಸಂಗ್ರಹದ ರಸ ಪ್ರಶ್ನೆಯಲ್ಲಿ ಭಾಗವಹಿಸಲು 2024ರ ಸೆಪ್ಟೆಂಬರ್ 3ರ ಒಳಗೆ ಅರ್ಜಿಸಲ್ಲಿಸಬೇಕು. ಕರ್ನಾಟಕದ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ವಿದ್ಯಾರ್ಥಿವೇತನ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲು ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ www.indiapost.gov.in, www.karnatakapost.gov.inನಲ್ಲಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಣೆಯಾದ ಬಾಲಕೀಯ ಪತ್ತೆಗೆ ಗುರುಮಿಠಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಮನವಿ

 

                                                             ವಾ.ವಿ.ಸಂ.128

ಕಾಣೆಯಾದ ಬಾಲಕೀಯ ಪತ್ತೆಗೆ ಗುರುಮಿಠಕಲ್ ಪೊಲೀಸ್ ಠಾಣೆಯ ಅಧಿಕಾರಿಗಳು ಮನವಿ


ಯಾದಗಿರಿ : ಆಗಸ್ಟ್ 23, (ಕ.ವಾ) : ಗುರುಮಿಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಯಂಪಾಡ ತಾಂಡ ಗ್ರಾಮದ ಬಾಲಕಿ ಕುಮಾರಿ ಸೋನಿಬಾಯಿ ತಂದೆ ಪಾಂಡು ರಾಠೋಡ್ ಬಾಲಕಿಯು ಕಾಣೆಯಾಗಿದ್ದು, ಈಕೆಯ ಬಗ್ಗೆ ಮಾಹಿತಿ ಬಂದರೆ ಗುರುಮಿಠಕಲ್ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂ.ಗೆ ತಿಳಿಸಲು ಪಿಎಸ್‌ಐ ಭೀಮರಾಯ ಅವರು ಕೋರಿದ್ದಾರೆ.


     ಕಾಣೆಯಾದ ಬಾಲಕಿಯು ಮೇ 17 ರಂದು ಬೆಳಿಗ್ಗೆ 5 ಗಂಟೆಗೆ ಬಯಲು ವಿಸರ್ಜನೆಗೆ ಹೋಗಿ  ಬರುತ್ತೇನೆ ಎಂದು ಹೋಗಿದ್ದು, ಮರಳಿ ಮನೆಗೆ ಬಂದಿರುವುದಿಲ್ಲ. ಕುಟುಂಬದವರು ಎಲ್ಲಾ ಕಡೆ ಹುಡುಕಾಡಿದ್ದು ಎಲ್ಲಿಯೂ ಕಂಡು ಬಂದಿರುವುದಿಲ್ಲ.


     ಬಾಲಕೀಯು ಕಾಣೆಯಾದ ಬಗ್ಗೆ ಗುರುಮಿಠಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯ ಒಂಬತ್ತನೇ ತರಗತಿ ಓದುತ್ತಿದ್ದು, ವಯಸ್ಸು 15 ಇದ್ದು, ಎತ್ತರ 5.2, ಕನ್ನಡ, ತೆಲುಗು, ಹಿಂದಿ, ಲಂಬಾಣಿ ಭಾಷೆ ಮಾತನಾಡುತ್ತಾಳೆ, ದುಂಡನೆ ಮುಖ, ಗೋದಿ ಬಣ್ಣ, ಸದೃಢ ಮೈಕಟ್ಟು, ತಲೆಯಲ್ಲಿ ಕಪ್ಪು ಕೂದಲಿದ್ದು, ಕಪ್ಪು ಬಣ್ಣದ ಟಾಪ್ ಮತ್ತು ಕೆಂಪು ಬಣ್ಣದ ಪೈಜಾಮ್ ಬಟ್ಟೆ ಧರಿಸಿದ್ದಳು. ಬಾಲಕಿ ಬಗ್ಗೆ ಮಾಹಿತಿ ತಿಳಿದು ಬಂದಲ್ಲಿ ಗುರುಮಿಠಕಲ್ ಪೊಲೀಸ್ ಠಾಣೆ ಅಥವಾ ಕಂಟ್ರೋಲ್ ರೂಮ್ 112ಗೆ ಕರೆ ಮಾಡಲು ಕೋರಿದ್ದಾರೆ. ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ. 9480803581, 08473 225054, 9480803543, 08473 225153, 9480803526, 08473 252301, 9980803600 ಎಂದು ಅವರು ತಿಳಿಸಿದ್ದಾರೆ.


ಗುರುವಾರ, ಆಗಸ್ಟ್ 22, 2024

         ವಾ.ವಿ.ಸಂ.121


ಜಿಲ್ಲೆಯಾದ್ಯಂತ ಶಾಂತಿ ಸೌಹಾರ್ದಯುತವಾಗಿ ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬ  ಆಚರಿಸಿ : ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

ಯಾದಗಿರಿ : ಆಗಸ್ಟ್ 22, (ಕ.ವಾ) : ನಮ್ಮ ಜಿಲ್ಲೆಯು ಹಿಂದು ಮುಸ್ಲಿಂ ಭಾವೈಕ್ಯತೆಗೆ ಹೆಸರುವಾಸಿಯಾಗಿದ್ದು ಸೆಪ್ಟೆಂಬರ್ 7 ರಿಂದ ಆಚರಿಸುವ  ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಮನವಿ ಮಾಡಿದ್ದಾರೆ.

     ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ನಡೆದ ಶ್ರೀ ಗೌರಿ ಗಣೇಶ ಹಬ್ಬದ ಆಚರಣೆ ಕುರಿತ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಈ ಹಬ್ಬದ ಅಂಗವಾಗಿ ಪಿಓಪಿ ಹಾಗೂ ರಾಸಾಯನಿಕ ಬಣ್ಣಗಳ ಮಿಶ್ರಿತ ಮೂರ್ತಿಗಳನ್ನು ಪ್ರತಿಷ್ಠಾಪಿಸದೇ ಪರಿಸರ ಸ್ನೇಹಿ ವಿಗ್ರಹಗಳನ್ನು ಸ್ಥಾಪಿಸಬೇಕು. ಜಿಲ್ಲೆಯಾದ್ಯಂತ ಮಣ್ಣಿನಿಂದ ತಯಾರಿಸಿದ ಶ್ರೀ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಸರ್ಕಾರ ನಿಗದಿಪಡಿಸಿದ ನಿಯಮಗಳನ್ನು ಪಾಲಿಸುವಂತೆ ಅವರು ಸಲಹೆ ನೀಡಿದರು.

     ಶ್ರೀ ಗಣೇಶ ಹಬ್ಬವನ್ನು ಎಲ್ಲರೂ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಸಂಭ್ರಮದಿAದ ಆಚರಿಸುವಂತೆ ವಿವಿಧ ಸಮಿತಿ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಮನವಿ ಮಾಡಿದರು.

     ಸಮಾಜದ ಎಲ್ಲಾ ಭಾಂದವರು ಭಾವೈಕ್ಯತೆಯಿಂದ ಮತ್ತು ಸಂತಸದಿAದ ಈ ಹಬ್ಬ ಆಚರಿಸಬೇಕು. ಇತರರಿಗೆ ನೋವಾಗದ ರೀತಿಯಲ್ಲಿ ಡಿಜೆ ಧ್ವನಿವರ್ಧಕಗಳನ್ನು ಬಳಸದೇ ಭಕ್ತಿ ಭಾವದಿಂದ ಆಚರಿಸಬೇಕು. ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳನ್ನು ಬಳಸದೇ, ಸಾಂಸ್ಕೃತಿಕ ಮತ್ತು ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೆ ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದAತೆ ಶ್ರೀ ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಅವರು ಸಲಹೆ ನೀಡಿದರು.

     ಜಿಲ್ಲೆಯಲ್ಲಿ ಸಾರ್ವಜನಿಕರು ಗಣೇಶನ ಪ್ರತಿಮೆಯನ್ನು ರಸ್ತೆಯಲ್ಲಿ ಕೂಡಿಸಿ ಇತರರಿಗೆ ತೊಂದರೆ ಮಾಡಬಾರದು. ಸಣ್ಣ ಪುಟ್ಟ ಗಣೇಶನ ಪ್ರತಿಮೆಯನ್ನು ಹೊರತು ಪಡಿಸಿ, ಉಳಿದ ಎಲ್ಲರೂ ತಪ್ಪದೇ ಪೂರ್ವ ಪರವಾನಿಗೆಯನ್ನು ಸಂಬAಧಿಸಿದ ಇಲಾಖೆಗಳಾದ ತಹಸೀಲ್ದಾರರ ನೇತೃತ್ವದಲ್ಲಿ  ಪೊಲೀಸ್ ಇಲಾಖೆ, ಜೆಸ್ಕಾಂ


     ಇಲಾಖೆ, ನಗರ ಸಭೆ, ಅಗ್ನಿ ಶಾಮಕ ದಳ ಇಲಾಖೆಯವರಿಂದ ಪರವಾನಿಗೆಯನ್ನು ಕಡ್ಡಾಯವಾಗಿ ಪಡೆದುಕೊಂಡು ಪ್ರತಿಷ್ಠಾಪಿಸಬೇಕು. ಪರವಾನಿಗೆ ಕುರಿತು ಏಕಗವಾಕ್ಷಿ ವ್ಯವಸ್ಥೆಯನ್ನು ನಗರ ಪೊಲೀಸ್ ಠಾಣೆ, ಯಾದಗಿರಿ, ಆಯಾ ತಾಲೂಕು ಕೇಂದ್ರಗಳು ಮತ್ತು ಗ್ರಾಮಗಳಲ್ಲಿ ಅರ್ಜಿಸಲ್ಲಿಸಿದ ಪೊಲೀಸ್ ಇಲಾಖೆ ಪರವಾನಿಗೆ ನೀಡುವ ವ್ಯವಸ್ಥೆ ಮಾಡಲು ಎಲ್ಲಾ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

     ಶ್ರೀ ಗಣೇಶ ಪ್ರತಿಷ್ಠಾಪಿಸುವ ಪ್ರತಿಯೊಂದು ಸ್ಥಳದಲ್ಲಿ 10 ಜನ ಸ್ವಯಂ ಸೇವಕರು ನೇಮಕ ಮಾಡಲು ಹಾಗೂ ಕಮಿಟಿಯಲ್ಲಿಯ ಸದಸ್ಯರ ಕುರಿತಾದ ವರದಿಯನ್ನು ಸಂಬAಧಿಸಿದ ತಾಲೂಕಿನ ತಹಸೀಲ್ದಾರರಿಗೆ ಹಾಗೂ ಸಂಬAಧಪಟ್ಟ ಪೊಲೀಸ್ ಇಲಾಖೆಗೆ ಸಲ್ಲಿಸಬೇಕು. ಪ್ರತಿಯೊಂದು ಗಣೇಶ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿದ ಸ್ಥಳಗಳಲ್ಲಿ ಸೂಕ್ತ ಪೋಲೀಸ್ ಮತ್ತು ಹೋಮ್‌ಗಾರ್ಡ ಸಿಬ್ಬಂದಿಯವರನ್ನು ಬಂದೋಬಸ್ತಗಾಗಿ ನಿಯೋಜಿಸಿ, ನಿಯಂತ್ರಿಸಿಕೊAಡು ಹೋಗಲು ಪೋಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

    ಗಣೇಶ ಪ್ರತಿಮೆಯ ವಿಸರ್ಜನೆಯನ್ನು ಯಾದಗಿರಿ ನಗರದ ದೊಡ್ಡ ಕೆರೆಯಲ್ಲಿ ವಿಸರ್ಜಿಸತಕ್ಕದೆಂದು ಹಾಗೂ ಸಣ್ಣ ಕೆರೆಯ ಸುತ್ತಮುತ್ತ ಇರುವ ಮುಳ್ಳುಕಂಟಿಗಳನ್ನು ತೆಗೆದು ಹಾಗೂ ರಸ್ತೆ ದುರಸ್ತಿ ಮಾಡಿ ರಸ್ತೆಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆಯನ್ನು ಹಾಗೂ ಸ್ಥಳದಲ್ಲಿ ಜೆ.ಸಿ.ಬಿ. ಮತ್ತು ಜನರೇಟರ್‌ಗಳ ವ್ಯವಸ್ಥೆಯನ್ನು ಮಾಡಲು ನಗರಸಭೆ ಪೌರಾಯುಕ್ತರು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ವಿವಿಧ ಕಡೆಯಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಬೇಕು. ಮೆರವಣಿಗೆ ಮಾರ್ಗದ ಮಧ್ಯದ ವಿದ್ಯುತ್ ತಂತಿ ಸರಿಪಡಿಸಬೇಕು. ಗಿಡ ಗಂಟಿಗಳನ್ನು ತೆರವುಗೊಳಿಸಲು ಸೂಚಿಸಿದರು.

     ಗಣೇಶ ವಿಸರ್ಜನೆಯ ದಿನಗಳಾದ 1, 3, 5, 7, 9 ಹಾಗೂ 11 ನೇ ದಿವಸಗಳಂದು ವಿಸರ್ಜನೆಯ ಸ್ಥಳಗಳಲ್ಲಿ ಅಂಬ್ಯುಲೆನ್ಸ್ ಹಾಗೂ ಫೈರ್ ಇಂಜೀನ್‌ನ ವ್ಯವಸ್ಥೆಯನ್ನು ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯಾದಗಿರಿ ಹಾಗೂ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಿಗೆ ಸೂಚಿಸಿದರು.

     ಯಾವುದೇ ಕಾರಣಕ್ಕೂ ಗಣೇಶ ಮೂರ್ತಿ ವಿಸರ್ಜನೆಯನ್ನು ಭೀಮಾ ಮತ್ತು ಕೃಷ್ಣಾ ನದಿಯಲ್ಲಿ ಅಥವಾ ಯಾವುದೇ ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಕೂಡದು. ಗಣೇಶ ವಿಸರ್ಜನೆಯ ದಿನಗಳಾದ 1, 3, 5, 7, 9 ಹಾಗೂ 11 ನೇ ದಿನಗಳಂದು ವಿದ್ಯುತ್ ವ್ಯತಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಜೆಸ್ಕಾಂ ಇಲಾಖೆಗೆ ಹಾಗೂ ಸೂಕ್ತ ಪೊಲೀಸ್ ಬಂದೊಬಸ್ತಗೆ ಸೂಚಿಸಿದರು.

     ಗಣೇಶ ವಿಸರ್ಜನೆಯ ದಿನದಂದು ಸಂಚಾರ ವ್ಯವಸ್ಥೆಗೆ ಅಡೆ ತಡೆಯಾಗದಂತೆ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದAತೆ ಸಹಕರಿಸಲು ತಿಳಿಸಲಾಯಿತು.

     ಯಾದಗಿರಿ ಸಮಾಜದ ಮುಖಂಡರ ಕೋರಿಕೆಯಂತೆ, ಗಣೇಶ ವಿಸರ್ಜನಾ ಹೊಂಡದ ಪಕ್ಕದಲ್ಲಿ ಪರಿಣಿತ ಈಜುಗಾರರನ್ನು ಹಾಗೂ ಅಗ್ನಿಶಾಮಕ ಇಲಾಖೆಯವರು ಸದರಿ ಸಮಯದಲ್ಲಿ ಇರುವ ಹಾಜರಿರುವ ಕುರಿತು ಕ್ರಮ ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.


     ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಯ ಹೊಗೆಯು ಮಾಲಿನ್ಯಕಾರಕ ಹಾಗೂ ಕಿವಿಗೆ ಹಾನಿಕಾರಕವಾದ್ದರಿಂದ, ಪಟಾಕಿಗಳನ್ನು ಸಿಡಿಸಬಾರದು. ಯಾವುದೇ ರೀತಿಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ವಸ್ತುಗಳನ್ನು ಉಪಯೋಗಿಸಬಾರದು. ಯಾದಗಿರಿ ಜಿಲ್ಲೆಯಾದ್ಯಂತ ಗಣೇಶ ವಿಗ್ರಹವನ್ನು ಮೆರವಣಿಗೆ ಮೂಲಕ ವಿಸರ್ಜನೆ ಮಾಡಲು ಕೊಂಡೊಯ್ಯುವ ಪ್ರತಿಯೊಂದು ವಾಹನದ ಚಾಲಕರು ಸುಸ್ಥಿತಿಯಲ್ಲಿರುವಂತೆ (ಮದ್ಯಪಾನ ಮಾಡದೇ) ಹಾಗೂ ಗಣೇಶ ವಿಗ್ರಹವನ್ನು ಹಿಡಿಯುವ ವ್ಯಕ್ತಿಗಳೂ ಸಹ ಎಚ್ಚರಿಕೆ ವಹಿಸಲು ಎಲ್ಲಾ ಸಮಿತಿಯವರಿಗೆ ವಿಶೇಷವಾಗಿ ಗಣೇಶ ಉತ್ಸವದ ಮೇಲ್ವಿಚಾರಣೆಗಾಗಿ ನೇಮಕ ಮಾಡಲಾದ ಸಮಿತಿಯವರಿಗೆ ಸೂಚಿಸಿದರು.

     ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಲಕ್ಷಿö್ಮÃಕಾಂತ, ಸಿಪಿಐ ಸುನಿಲ್ ಮೂಲಿಮನಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಮುಖಂಡರಾದ ಅಯ್ಯಣ್ಣ ಹುಂಡೇಕಾರ್, ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಸಿರವಾರ, ಬಾಬು ದೋಖಾ, ಮರೆಪ್ಪ ಚಟ್ಟೆರಕರ್ ಇನ್ನಿತರ ಯುವ ಮುಖಂಡರು ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

         ವಾ.ವಿ.ಸಂ.121


ಜಿಲ್ಲೆಯಾದ್ಯಂತ ಶಾಂತಿ ಸೌಹಾರ್ದಯುತವಾಗಿ ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬ  ಆಚರಿಸಿ : ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ

ಯಾದಗಿರಿ : ಆಗಸ್ಟ್ 22, (ಕ.ವಾ) : ನಮ್ಮ ಜಿಲ್ಲೆಯು ಹಿಂದು ಮುಸ್ಲಿಂ ಭಾವೈಕ್ಯತೆಗೆ ಹೆಸರುವಾಸಿಯಾಗಿದ್ದು ಸೆಪ್ಟೆಂಬರ್ 7 ರಿಂದ ಆಚರಿಸುವ  ಶ್ರೀ ಗೌರಿ ಗಣೇಶ ಚತುರ್ಥಿ ಹಬ್ಬವನ್ನು ಅರ್ಥಪೂರ್ಣವಾಗಿ, ಶಾಂತಿ ಸೌಹಾರ್ದಯುತವಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲಾ.ಬಿ ಅವರು ಮನವಿ ಮಾಡಿದ್ದಾರೆ.

     ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ನಡೆದ ಶ್ರೀ ಗೌರಿ ಗಣೇಶ ಹಬ್ಬದ ಆಚರಣೆ ಕುರಿತ ಶಾಂತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

     ಈ ಹಬ್ಬದ ಅಂಗವಾಗಿ ಪಿಓಪಿ ಹಾಗೂ ರಾಸಾಯನಿಕ ಬಣ್ಣಗಳ ಮಿಶ್ರಿತ ಮೂರ್ತಿಗಳನ್ನು ಪ್ರತಿಷ್ಠಾಪಿಸದೇ ಪರಿಸರ ಸ್ನೇಹಿ ವಿಗ್ರಹಗಳನ್ನು ಸ್ಥಾಪಿಸಬೇಕು. ಜಿಲ್ಲೆಯಾದ್ಯಂತ ಮಣ್ಣಿನಿಂದ ತಯಾರಿಸಿದ ಶ್ರೀ ಗಣೇಶ ವಿಗ್ರಹಗಳನ್ನು ಸ್ಥಾಪಿಸಿ ಸರ್ಕಾರ ನಿಗದಿಪಡಿಸಿದ ನಿಯಮಗಳನ್ನು ಪಾಲಿಸುವಂತೆ ಅವರು ಸಲಹೆ ನೀಡಿದರು.

     ಶ್ರೀ ಗಣೇಶ ಹಬ್ಬವನ್ನು ಎಲ್ಲರೂ ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಸಂಭ್ರಮದಿAದ ಆಚರಿಸುವಂತೆ ವಿವಿಧ ಸಮಿತಿ ಮತ್ತು ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಮನವಿ ಮಾಡಿದರು.

     ಸಮಾಜದ ಎಲ್ಲಾ ಭಾಂದವರು ಭಾವೈಕ್ಯತೆಯಿಂದ ಮತ್ತು ಸಂತಸದಿAದ ಈ ಹಬ್ಬ ಆಚರಿಸಬೇಕು. ಇತರರಿಗೆ ನೋವಾಗದ ರೀತಿಯಲ್ಲಿ ಡಿಜೆ ಧ್ವನಿವರ್ಧಕಗಳನ್ನು ಬಳಸದೇ ಭಕ್ತಿ ಭಾವದಿಂದ ಆಚರಿಸಬೇಕು. ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳನ್ನು ಬಳಸದೇ, ಸಾಂಸ್ಕೃತಿಕ ಮತ್ತು ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದೆ ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದAತೆ ಶ್ರೀ ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕರಿಸುವಂತೆ ಅವರು ಸಲಹೆ ನೀಡಿದರು.

     ಜಿಲ್ಲೆಯಲ್ಲಿ ಸಾರ್ವಜನಿಕರು ಗಣೇಶನ ಪ್ರತಿಮೆಯನ್ನು ರಸ್ತೆಯಲ್ಲಿ ಕೂಡಿಸಿ ಇತರರಿಗೆ ತೊಂದರೆ ಮಾಡಬಾರದು. ಸಣ್ಣ ಪುಟ್ಟ ಗಣೇಶನ ಪ್ರತಿಮೆಯನ್ನು ಹೊರತು ಪಡಿಸಿ, ಉಳಿದ ಎಲ್ಲರೂ ತಪ್ಪದೇ ಪೂರ್ವ ಪರವಾನಿಗೆಯನ್ನು ಸಂಬAಧಿಸಿದ ಇಲಾಖೆಗಳಾದ ತಹಸೀಲ್ದಾರರ ನೇತೃತ್ವದಲ್ಲಿ  ಪೊಲೀಸ್ ಇಲಾಖೆ, ಜೆಸ್ಕಾಂ


     ಇಲಾಖೆ, ನಗರ ಸಭೆ, ಅಗ್ನಿ ಶಾಮಕ ದಳ ಇಲಾಖೆಯವರಿಂದ ಪರವಾನಿಗೆಯನ್ನು ಕಡ್ಡಾಯವಾಗಿ ಪಡೆದುಕೊಂಡು ಪ್ರತಿಷ್ಠಾಪಿಸಬೇಕು. ಪರವಾನಿಗೆ ಕುರಿತು ಏಕಗವಾಕ್ಷಿ ವ್ಯವಸ್ಥೆಯನ್ನು ನಗರ ಪೊಲೀಸ್ ಠಾಣೆ, ಯಾದಗಿರಿ, ಆಯಾ ತಾಲೂಕು ಕೇಂದ್ರಗಳು ಮತ್ತು ಗ್ರಾಮಗಳಲ್ಲಿ ಅರ್ಜಿಸಲ್ಲಿಸಿದ ಪೊಲೀಸ್ ಇಲಾಖೆ ಪರವಾನಿಗೆ ನೀಡುವ ವ್ಯವಸ್ಥೆ ಮಾಡಲು ಎಲ್ಲಾ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

     ಶ್ರೀ ಗಣೇಶ ಪ್ರತಿಷ್ಠಾಪಿಸುವ ಪ್ರತಿಯೊಂದು ಸ್ಥಳದಲ್ಲಿ 10 ಜನ ಸ್ವಯಂ ಸೇವಕರು ನೇಮಕ ಮಾಡಲು ಹಾಗೂ ಕಮಿಟಿಯಲ್ಲಿಯ ಸದಸ್ಯರ ಕುರಿತಾದ ವರದಿಯನ್ನು ಸಂಬAಧಿಸಿದ ತಾಲೂಕಿನ ತಹಸೀಲ್ದಾರರಿಗೆ ಹಾಗೂ ಸಂಬAಧಪಟ್ಟ ಪೊಲೀಸ್ ಇಲಾಖೆಗೆ ಸಲ್ಲಿಸಬೇಕು. ಪ್ರತಿಯೊಂದು ಗಣೇಶ ಪ್ರತಿಮೆಗಳನ್ನು ಪ್ರತಿಷ್ಠಾಪಿಸಿದ ಸ್ಥಳಗಳಲ್ಲಿ ಸೂಕ್ತ ಪೋಲೀಸ್ ಮತ್ತು ಹೋಮ್‌ಗಾರ್ಡ ಸಿಬ್ಬಂದಿಯವರನ್ನು ಬಂದೋಬಸ್ತಗಾಗಿ ನಿಯೋಜಿಸಿ, ನಿಯಂತ್ರಿಸಿಕೊAಡು ಹೋಗಲು ಪೋಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

    ಗಣೇಶ ಪ್ರತಿಮೆಯ ವಿಸರ್ಜನೆಯನ್ನು ಯಾದಗಿರಿ ನಗರದ ದೊಡ್ಡ ಕೆರೆಯಲ್ಲಿ ವಿಸರ್ಜಿಸತಕ್ಕದೆಂದು ಹಾಗೂ ಸಣ್ಣ ಕೆರೆಯ ಸುತ್ತಮುತ್ತ ಇರುವ ಮುಳ್ಳುಕಂಟಿಗಳನ್ನು ತೆಗೆದು ಹಾಗೂ ರಸ್ತೆ ದುರಸ್ತಿ ಮಾಡಿ ರಸ್ತೆಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆಯನ್ನು ಹಾಗೂ ಸ್ಥಳದಲ್ಲಿ ಜೆ.ಸಿ.ಬಿ. ಮತ್ತು ಜನರೇಟರ್‌ಗಳ ವ್ಯವಸ್ಥೆಯನ್ನು ಮಾಡಲು ನಗರಸಭೆ ಪೌರಾಯುಕ್ತರು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ವಿವಿಧ ಕಡೆಯಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಬೇಕು. ಮೆರವಣಿಗೆ ಮಾರ್ಗದ ಮಧ್ಯದ ವಿದ್ಯುತ್ ತಂತಿ ಸರಿಪಡಿಸಬೇಕು. ಗಿಡ ಗಂಟಿಗಳನ್ನು ತೆರವುಗೊಳಿಸಲು ಸೂಚಿಸಿದರು.

     ಗಣೇಶ ವಿಸರ್ಜನೆಯ ದಿನಗಳಾದ 1, 3, 5, 7, 9 ಹಾಗೂ 11 ನೇ ದಿವಸಗಳಂದು ವಿಸರ್ಜನೆಯ ಸ್ಥಳಗಳಲ್ಲಿ ಅಂಬ್ಯುಲೆನ್ಸ್ ಹಾಗೂ ಫೈರ್ ಇಂಜೀನ್‌ನ ವ್ಯವಸ್ಥೆಯನ್ನು ಮಾಡಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯಾದಗಿರಿ ಹಾಗೂ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳಿಗೆ ಸೂಚಿಸಿದರು.

     ಯಾವುದೇ ಕಾರಣಕ್ಕೂ ಗಣೇಶ ಮೂರ್ತಿ ವಿಸರ್ಜನೆಯನ್ನು ಭೀಮಾ ಮತ್ತು ಕೃಷ್ಣಾ ನದಿಯಲ್ಲಿ ಅಥವಾ ಯಾವುದೇ ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಕೂಡದು. ಗಣೇಶ ವಿಸರ್ಜನೆಯ ದಿನಗಳಾದ 1, 3, 5, 7, 9 ಹಾಗೂ 11 ನೇ ದಿನಗಳಂದು ವಿದ್ಯುತ್ ವ್ಯತಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಜೆಸ್ಕಾಂ ಇಲಾಖೆಗೆ ಹಾಗೂ ಸೂಕ್ತ ಪೊಲೀಸ್ ಬಂದೊಬಸ್ತಗೆ ಸೂಚಿಸಿದರು.

     ಗಣೇಶ ವಿಸರ್ಜನೆಯ ದಿನದಂದು ಸಂಚಾರ ವ್ಯವಸ್ಥೆಗೆ ಅಡೆ ತಡೆಯಾಗದಂತೆ ಮತ್ತು ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದAತೆ ಸಹಕರಿಸಲು ತಿಳಿಸಲಾಯಿತು.

     ಯಾದಗಿರಿ ಸಮಾಜದ ಮುಖಂಡರ ಕೋರಿಕೆಯಂತೆ, ಗಣೇಶ ವಿಸರ್ಜನಾ ಹೊಂಡದ ಪಕ್ಕದಲ್ಲಿ ಪರಿಣಿತ ಈಜುಗಾರರನ್ನು ಹಾಗೂ ಅಗ್ನಿಶಾಮಕ ಇಲಾಖೆಯವರು ಸದರಿ ಸಮಯದಲ್ಲಿ ಇರುವ ಹಾಜರಿರುವ ಕುರಿತು ಕ್ರಮ ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.


     ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಯ ಹೊಗೆಯು ಮಾಲಿನ್ಯಕಾರಕ ಹಾಗೂ ಕಿವಿಗೆ ಹಾನಿಕಾರಕವಾದ್ದರಿಂದ, ಪಟಾಕಿಗಳನ್ನು ಸಿಡಿಸಬಾರದು. ಯಾವುದೇ ರೀತಿಯ ಪ್ಲಾಸ್ಟಿಕ್‌ನಿಂದ ತಯಾರಿಸಿದ ವಸ್ತುಗಳನ್ನು ಉಪಯೋಗಿಸಬಾರದು. ಯಾದಗಿರಿ ಜಿಲ್ಲೆಯಾದ್ಯಂತ ಗಣೇಶ ವಿಗ್ರಹವನ್ನು ಮೆರವಣಿಗೆ ಮೂಲಕ ವಿಸರ್ಜನೆ ಮಾಡಲು ಕೊಂಡೊಯ್ಯುವ ಪ್ರತಿಯೊಂದು ವಾಹನದ ಚಾಲಕರು ಸುಸ್ಥಿತಿಯಲ್ಲಿರುವಂತೆ (ಮದ್ಯಪಾನ ಮಾಡದೇ) ಹಾಗೂ ಗಣೇಶ ವಿಗ್ರಹವನ್ನು ಹಿಡಿಯುವ ವ್ಯಕ್ತಿಗಳೂ ಸಹ ಎಚ್ಚರಿಕೆ ವಹಿಸಲು ಎಲ್ಲಾ ಸಮಿತಿಯವರಿಗೆ ವಿಶೇಷವಾಗಿ ಗಣೇಶ ಉತ್ಸವದ ಮೇಲ್ವಿಚಾರಣೆಗಾಗಿ ನೇಮಕ ಮಾಡಲಾದ ಸಮಿತಿಯವರಿಗೆ ಸೂಚಿಸಿದರು.

     ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ನಗರಸಭೆ ಪೌರಾಯುಕ್ತ ಲಕ್ಷಿö್ಮÃಕಾಂತ, ಸಿಪಿಐ ಸುನಿಲ್ ಮೂಲಿಮನಿ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸಿದ್ದಪ್ಪ ಹೊಟ್ಟಿ, ಮುಖಂಡರಾದ ಅಯ್ಯಣ್ಣ ಹುಂಡೇಕಾರ್, ಚನ್ನಪ್ಪಗೌಡ ಮೋಸಂಬಿ, ವಿಶ್ವನಾಥ ಸಿರವಾರ, ಬಾಬು ದೋಖಾ, ಮರೆಪ್ಪ ಚಟ್ಟೆರಕರ್ ಇನ್ನಿತರ ಯುವ ಮುಖಂಡರು ಸೇರಿದಂತೆ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

 


                                                             ವಾ.ವಿ.ಸಂ.119

ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಲು ಸೂಚನೆ


ಯಾದಗಿರಿ : ಆಗಸ್ಟ್ 22, (ಕ.ವಾ) : ಪಡಿತರ ಚೀಟಿದಾರರ ಗಮನಕ್ಕೆ ಪಡಿತರ ಚೀಟಿಯಲ್ಲಿನ ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ.

     ಜಿಲ್ಲೆಯಲ್ಲಿ ಇ-ಕೆವೈಸಿ ಮಾಡಿಸದ ಪಡಿತರ ಚೀಟಿಗಳಲ್ಲಿನ ಸದಸ್ಯರು ಸಂಬAಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಅಥವಾ ಯಾವ ನ್ಯಾಯಬೆಲೆ ಅಂಗಡಿಯಿAದ ಆಹಾರ ಧಾನ್ಯಗಳನ್ನು ಪಡೆಯುತ್ತಿರುವಿರೊ ಅಂತಹ ನ್ಯಾಯಬೆಲೆ ಅಂಗಡಿಯಲ್ಲಿ ಈ ತಿಂಗಳ ಅಂತ್ಯದವರೆಗೆ ಇ-ಕೆವೈಸಿಯನ್ನು ಕಡ್ಡಾಯವಾಗಿ ಮಾಡಿಸಲು ತಿಳಿಸಿದೆ. ಇ-ಕೆವೈಸಿ ಮಾಡಿಸುವ ಸಮಯದಲ್ಲ್ಲಿ ಎಸ್.ಸಿ, ಎಸ್.ಟಿ, ಇತರೆ ಆಗಿದ್ದಲ್ಲಿ ಜಾತಿ ಪ್ರಮಾಣ ಪತ್ರ ಸಂಖ್ಯೆಯನ್ನು, ಅನಿಲ ಸಂಪರ್ಕ ಹೊಂದಿದ್ದಲ್ಲಿ ಗ್ರಾಹಕರ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಸಂಬAಧಪಟ್ಟ ನ್ಯಾಯಬೆಲೆ ಅಂಗಡಿ ವರ್ತಕರಿಗೆ ಸಲ್ಲಿಸಲು ತಿಳಿಸಲಾಗಿದೆ ಹಾಗೂ ಸದರಿ ಕಾರ್ಯಕ್ಕೆ ಪಡಿತರ ಚೀಟಿಯಲ್ಲಿನ ಸದಸ್ಯರು ಯಾವುದೇ ಹಣ ನೀಡುವಂತ್ತಿಲ್ಲ. ಇದು ಸಂಪೂರ್ಣ ಉಚಿತವಾಗಿದ್ದು, ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಹಣ ಕೇಳಿದ್ದಲ್ಲಿ ಮಾನ್ಯ ಆಯುಕ್ತರ ಕಛೇರಿಯ ಖಿoಟಟ ಈಡಿee ದೂರವಾಣಿ ಸಂಖ್ಯೆ 1967ಗೆ, ಉಪ ನಿರ್ದೇಶಕರ ಕಛೇರಿ, ಆಹಾರ ಇಲಾಖೆ, ಸಂಬAಧಪಟ್ಟ ತಾಲ್ಲೂಕು ಕಛೇರಿಯ ಆಹಾರ ಶಾಖೆಗೆ ದೂರು ಸಲ್ಲಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಅಲ್ಲಿಪೂರ ಮುಖ್ಯ ರಸ್ತೆಯಿಂದ ಹೋರುಂಚಾ ವರೆಗೆ ರಸ್ತೆ ನಿರ್ಮಾಣ ಅಂದಾಜು ಮೊತ್ತ 300 ಲಕ್ಷ ರೂ.ಗಳ ಕಾಮಗಾರಿಯ ಅಡಿಗಲ್ಲು ಉದ್ಘಾಟನೆ ಕಾರ್ಯಕ್ರಮ


ಯಾದಗಿರಿ : ಆಗಸ್ಟ್ 22, (ಕ.ವಾ) : ಲೋಕೋಪಯೋಗಿ ಇಲಾಖೆವತಿಯಿಂದ 2023-24ನೇ ಸಾಲಿನ ಲೆಕ್ಕ ಶೀರ್ಷಿಕೆ ಕೆ.ಕೆ.ಆರ್.ಡಿ.ಬಿ ಮ್ಯಾಕ್ರೋ (ನಾನ್ ಸೋಶಿಯಲ್) ಅನುದಾನದ ಅಡಿಯಲ್ಲಿ ಯಾದಗಿರಿ ಜಿಲ್ಲೆಯ ಗುರುಮಠಕಲ್ ಮತಕ್ಷೇತ್ರದಲ್ಲಿ ಅಲ್ಲಿಪೂರ ಮುಖ್ಯ ರಸ್ತೆಯಿಂದ ಹೋರುಂಚಾ ವರೆಗೆ ರಸ್ತೆ ನಿರ್ಮಾಣ ಅಂದಾಜು ಮೊತ್ತ 300 ಲಕ್ಷ ರೂ.ಗಳ ಕಾಮಗಾರಿಯ ಅಡಿಗಲ್ಲು ಸಮಾರಂಭವನ್ನು 2024ರ ಆಗಸ್ಟ್ 23 ರಂದು ಬೆಳಿಗ್ಗೆ 11 ಗಂಟೆಗೆ ಹೋರುಂಚಾ ನಡುವಿನ ತಾಂಡಾದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
 
     ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಮತ್ತು ಜೇವರ್ಗಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಕಲಬುರಗಿ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರಾದ ಶ್ರೀ ಡಾ.ಅಜಯಸಿಂಗ್, ಕರ್ನಾಟಕ ವಿಧಾನ ಪರಿಷತ್ತು ವಿರೋಧ ಪಕ್ಷ ನಾಯಕ ಶ್ರೀ ಛಲವಾದಿ ಟಿ.ನಾರಾಯಣಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ನೆರವೇರಿಸುವರು.

     ಗುರುಮಠಕಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶರಣಗೌಡ ಕಂದಕೂರ ಅವರು ಕಾರ್ಯಕ್ರಮದ ಅಧ್ಯಕ್ಷ ವಹಿಸಿ ಉದ್ಘಾಟಿಸುವರು. ಕಲಬುರಗಿ ಲೋಕಸಭಾ ಸದಸ್ಯರು ಶ್ರೀ ರಾಧಾಕೃಷ್ಣ ದೊಡ್ಡಮನಿ, ವಿಧಾನ ಪರಿಷತ್ತು ಸದಸ್ಯರು ಶ್ರೀ ಬಿ.ಜಿ.ಪಾಟೀಲ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶ್ರೀ ಶಶೀಲ್ ಜಿ.ನಮೋಶಿ, ಅಲ್ಲಿಪೂರ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ವಿಠ್ಠಲ ರಾಠೋಡ  ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

     ಕಾರ್ಯಕ್ರಮಕ್ಕೆ ಸರ್ವರೂ ಆಗಮಿಸುವಂತೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ, ಯಾದಗಿರಿ ವಿಭಾಗ ಲೋಕೋಪಯೋಗಿ ಕಾರ್ಯಪಾಲಕ ಇಂಜಿನೀಯರರು ಶ್ರೀ ಅಭಿಮನ್ಯ ಕೆ.ಎಸ್, ಯಾದಗಿರಿ ಉಪ ವಿಭಾಗ ಲೋಕೋಪಯೋಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರರು ಶ್ರೀ ಶ್ರೀಧರ್ ಅವರು ಪ್ರಕಟಣೆ ಕೋರಿದೆ.  

 ಅಲ್ಲಿಪೂರ ಮುಖ್ಯ ರಸ್ತೆಯಿಂದ ಹೋರುಂಚಾ ವರೆಗೆ ರಸ್ತೆ ನಿರ್ಮಾಣ ಅಂದಾಜು ಮೊತ್ತ 300 ಲಕ್ಷ ರೂ.ಗಳ ಕಾಮಗಾರಿಯ ಅಡಿಗಲ್ಲು ಉದ್ಘಾಟನೆ ಕಾರ್ಯಕ್ರಮ press note release date 22-08-2024

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...