ಶನಿವಾರ, ಸೆಪ್ಟೆಂಬರ್ 21, 2024

                                                              ವಾ.ವಿ.ಸಂ.106


 ಶ್ರೀ ಸಿದ್ದಲಿಂಗಯ್ಯ ಗದ್ದುಗೆ ಹಿರೇಮಠ ಪ್ರವೇಶ ಮಾಡದಂತೆ ನಿರ್ಬಂಧ ಆದೇಶ ಜಾರಿ

ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ಯಾದಗಿರಿ ಜಿಲ್ಲೆಯಲ್ಲಿ 2024ರ ಸೆಪ್ಟೆಂಬರ್ 20 ರಿಂದ 22ರ ವರೆಗೆ ಶ್ರೀ ಸಿದ್ದಲಿಂಗಯ್ಯ ತಂದೆ ಕರುಣಯ್ಯ ಗದ್ದುಗೆ ಹಿರೇಮಠ ಸಾ.ಆಂದೋಲ ತಾ.ಜೇವರ್ಗಿ ಹಿಂದೂಪರ ಭಾಷಣಕಾರ ರವರನ್ನು ಶಹಾಪೂರ ತಾಲ್ಲೂಕಿನಾದ್ಯಂತ ಪ್ರವೇಶ ಮಾಡದಂತೆ ನಿರ್ಬಂಧ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಹೊರಡಿಸಿದ್ದಾರೆ.


     2024ರ ಸೆಪ್ಟೆಂಬರ್ 20 ರಂದು ರಾತ್ರಿ 12 ಗಂಟೆಯಿAದ 2024ರ ಸೆಪ್ಟೆಂಬರ್ 22ರ ಮಧ್ಯಾಹ್ನ 2 ಗಂಟೆಯ ವರೆಗೆ ಶ್ರೀ ಸಿದ್ದಲಿಂಗಯ್ಯ ತಂದೆ ಕರುಣಯ್ಯ ಗದ್ದುಗೆ ಹಿರೇಮಠ ಸಾ.ಆಂದೋಲ ತಾ.ಜೇವರ್ಗಿ ಇವರಿಗೆ ಶಹಾಪೂರ ತಾಲ್ಲೂಕು ಪ್ರವೇಶ ಮಾಡದಂತೆ ಬಿ.ಎನ್.ಎಸ್.ಎಸ್ ಕಾಯ್ದೆ 2023 ಸೆಕ್ಷನ್ 152, 162, 163 ರನ್ವಯ ನಿರ್ಬಂಧ ಜಾರಿಗೊಳಿಸಿ ಆದೇಶಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


                                                              ವಾ.ವಿ.ಸಂ.104

ಕಾರ್ಮಿಕರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ, ಭವಿಷ್ಯ ರೂಪಿಸಿ :

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್ ರೇಖಾ

ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ಕಾರ್ಮಿಕರು ಬಡತನವಿದೆ ಎಂದು ನೊಂದುಕೊಳ್ಳಬಾರದು,  ನಾವು ಯಾರಿಗೂ ಕಡಿಮೆ ಇಲ್ಲ ಎನ್ನುವ ಆತ್ಮ ವಿಶ್ವಾಸ ಬೆಳೆಸಿಕೊಳ್ಳಬೇಕು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ, ಭವಿಷ್ಯ ರೂಪಿಸಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಗೌರವಾನ್ವಿತ ಶ್ರೀಮತಿ ಬಿ.ಎಸ್ ರೇಖಾ ಅವರು ನಿರ್ದೇಶಿಸಿದರು.

     ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಮಿಕ ಇಲಾಖೆಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳು, ಯೋಜನೆಗಳು ಹಾಗೂ ಬಡತನ ನಿರ್ಮೂಲನೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಒಂದು ದಿನದ ಜಿಲ್ಲಾಮಟ್ಟದ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

     ಕಾರ್ಮಿಕರು ಇಲ್ಲದೇ ಜೀವನವಿಲ್ಲ, ಪ್ರತಿಯೊಂದು ಹಂತದಲ್ಲಿ ಕಾರ್ಮಿಕರ ಅವಶ್ಯಕತೆ ಇರುತ್ತದೆ. ಬಡತನ ಇರುವ ಕಾರಣಕ್ಕೆ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸುವ ಬದಲು ಕೆಲಸಕ್ಕೆ ಕಳಿಸುವ ಪ್ರಕರಣಗಳನ್ನು ಕಾಣುತ್ತಿದ್ದೇವೆ. ಕಾರ್ಮಿಕರ ಮಕ್ಕಳು ಪೌರ ಕಾರ್ಮಿಕರೇ ಆಗಬೇಕೆಂದೇನೂ ಇಲ್ಲ. ಸೂಕ್ತ ಶಿಕ್ಷಣ ಕೊಟ್ಟರೆ ಉನ್ನತ ಅಧಿಕಾರಿಗಳಾಗಿ ಹೊರ ಹೊಮ್ಮುತ್ತಾರೆ ಎಂದರು.

     ಇದೇ ವೇಳೆ ಕಾರ್ಮಿಕ ಇಲಾಖೆಯ ವಿವಿಧ ಯೋಜನೆಗಳ ಮಾಹಿತಿ ನೀಡುವ ಕುರಿತು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು ನ್ಯಾಯಾಧೀಶರು ವೀಕ್ಷಣೆ ಮಾಡಿದರು.

      ಈ ಸಂದರ್ಭದಲ್ಲಿ  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಕೆ.ಮರಿಯಪ್ಪ ಅವರು ವಿವಿಧ ಕಾರ್ಮಿಕ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ಮಾತನಾಡಿದರು.

    ಯಾದಗಿರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಶ್ರೀಹರಿ ಆರ್.ದೇಶಪಾಂಡೆ ಅವರು ಉಪಧನ ಪಾವತಿಕಾಯ್ದೆ, ಹೆರಿಗೆ ಸೌಲಭ್ಯಕಾಯ್ದೆ, ಕೈಗಾರಿಕಾ ವಿವಾದ ಕಾಯ್ದೆ ಕುರಿತು ಮಾಹಿತಿ ನೀಡಿದರು.

     ಇನ್ನಿತರೆ ಸಂಪನ್ಮೂಲ ವ್ಯಕ್ತಿಗಳಿಂದ ಕಾರ್ಮಿಕ ಇಲಾಖೆಯ ವಿವಿಧ ಕಾಯ್ದೆಗಳ ಕುರಿತು ಉಪನ್ಯಾಸ ನಡೆಯಿತು..

     ಈ ಸಂದರ್ಭದಲ್ಲಿ ಕಾರ್ಮಿಕ ಇಲಾಖೆಯ ಎಕ್ಸಿಕ್ಯುಟಿವ್ ಆರ್.ಎನ್.ಶಿವರಾಜ, ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ರಿಯಾಜ್ ಪಟೇಲ್ ವರ್ಕನಳ್ಳಿ, ಕಾರ್ಮಿಕ ನಿರೀಕ್ಷಕಿ ಸಂಗೀತಾ ಹೊನ್ನೂರು ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಗೂ ಜಿಲ್ಲೆಯ ಕಾರ್ಮಿಕರು ಉಪಸ್ಥಿತರಿದ್ದರ






                                                              ವಾ.ವಿ.ಸಂ.103

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ಲವೀಶ್ ಒರಡಿಯಾ ಜಿ.ಪಂ.ಸಿಒ

2024 ಸ್ವಚ್ಛತಯಡಿಗೆ ದಿಟ್ಟ ಹೆಜ್ಜೆ ತಾಯಿಯ ಹೆಸರಲ್ಲಿ ಒಂದು ಗಿಡ ಅಭಿಯಾನ






ಯಾದಗಿರಿ : ಸೆಪ್ಟೆಂಬರ್ 21, (ಕ.ವಾ) : ವೈಯಕ್ತಿಕ ಸ್ವಚ್ಛತೆಯ ಜೊತೆ ಪರಿಸರ ಸ್ವಚ್ಛತೆ ಕಾಪಾಡುವುದು ಮತ್ತು ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲವೀಶ್ ಒರಡಿಯಾ ಅವರು ಹೇಳಿದರು.

    ಸ್ವಚ್ಛ ಭಾರತ ಮಿಷನ್ (ಗ್ರಾ) ಮತ್ತು ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸೆಪ್ಟೆಂಬರ್ 17 ರಿಂದ 2024ರ ಅಕ್ಟೋಬರ್ 2 ವರೆಗೆ ಹಮ್ಮಿಕೊಂಡಿರುವ 15 ದಿನಗಳ ವಿಶೇಷ ಆಂದೋಲನಗಳಾದ ಸ್ವಚ್ಛತೆಯೇ ಸೇವೆ-2024, ಸ್ವಚ್ಛತೆÀಯಡಿಗೆ ದಿಟ್ಟ ಹೆಜ್ಜೆ ಹಾಗೂ ತಾಯಿಯ ಹೆಸರಲ್ಲಿ ಒಂದು ಗಿಡ ಅಭಿಯಾನದ ಅಂಗವಾಗಿ ಸೆಪ್ಟೆಂಬರ್ 21 ರಂದು ಜಿಲ್ಲಾ ಪಂಚಾಯತಿ ಆವರಣದಲ್ಲಿ ಸಸಿ ನೆಟ್ಟು ನೀರುಣಿಸಿ ಮಾತನಾಡಿದರು.

     ಪರಿಸರ ಸ್ನೇಹಿ ಚಟುವಟಿಕೆ ಮೈಗೊಡಿಸಿಕೊಳ್ಳಬೇಕು ಮತ್ತು ಪರಿಸರ ಉಳಿಸ ಬೆಳಸಲು ಅವಶ್ಯವಿರುವ ಅಂಶಗಳನ್ನು, ಅಭ್ಯಾಸಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು ಹಾಗೂ ಪರಿಸರ ಸಂರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇಂದಿನ ಯುವ ಪೀಳಿಗೆಯಲ್ಲಿ, ಮಕ್ಕಳಲ್ಲಿ ಪರಿಸರದ ಕಾಳಜಿ ಹೆಚ್ಚಿಸಬೇಕಿದೆ. ತಾಯಿಯ ಹೆಸರಲ್ಲಿ ಒಂದು ಗಿಡ ಆಂದೋಲನದಲ್ಲಿ ಸಸಿ ನೆಟ್ಟು ಅದರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ ಎಂಬುವುದು ನಾವು ಮರೆಯಬಾರದು ಕಿವಿ ಮಾತು ಹೇಳಿದರು.

   ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತಯೇ ಸೇವೆ ಪಾಕ್ಷಿಕ ಆಂದೋಲನದ ಅಂಗವಾಗಿ ಗ್ರಾಮ ಪಂಚಾಯತಿ, ಅಂಗನವಾಡಿ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಶ್ರಮದಾನ ಮಾಡುವುದು, ಬ್ಲಾಕ್ ಸ್ಪಾಟ್ ಕ್ಲೀನಿಂಗ್, ಚರಂಡಿ ಸ್ವಚ್ಚಗೊಳಿಸುವುದು ಮುಂತಾದ ಸ್ವಚ್ಛತೆಯ ಚಟುವಟಿಕೆಗಳನ್ನು  ಹಮ್ಮಿಕೊಳ್ಳಲಾಗುತ್ತಿದೆ ಶಾಲೆಯಲ್ಲಿ ಮಕ್ಕಳಿಗೆ ಸ್ವಚ್ಛತೆಯ ಪ್ರತಿಜ್ಞಾ ವಿಧಿ ಭೋದಿಸುವುದು ಹಾಗೂ ಸ್ವಚ್ಛತೆಯೇ ಸೇವೆ ಆಂದೋಲನದ ಉದ್ದೇಶ ಪ್ರತಿಯೊಬ್ಬರಿಗೂ ತಲುಪಿಸಿ ಅವರ ಸ್ವಭಾವದಲ್ಲಿಯೇ ಸ್ವಚ್ಛತೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಅವರ ಸಂಸ್ಕಾರದಲ್ಲಿ ಸ್ವಚ್ಛತೆ ತರುವ ಉದ್ದೇಶವಾಗಿದೆ ಎಂದರು.

ಗ್ರಾಮದ ಸ್ವಚ್ಛತೆ ಕಾಪಾಡಲು ಕೆಲಸ ಮಾಡುತ್ತಿರುವ ಸಪಾಯಿಮಿತ್ರರಿಗೆ ಆರೋಗ್ಯ ಶಿಬಿರ ಏರ್ಪಡಿಸಲಾಗುತ್ತಿದೆ. ಸ್ವಚ್ಛತೆಯ ಕೆಲಸ ಮಾಡುತ್ತಿರುವುದರಿಂದ ಅವರ ಆರೋಗದ್ಯ ಕಾಳಜಿ ಮುಖ್ಯ

     ಈ ಸಂದರ್ಭದಲ್ಲಿ ಉಪಕಾರ್ಯದರ್ಶಿಗಳಾದ ವಿಜಯ ಕುಮಾರ ಮಡ್ಡೆ, ಯೋಜನಾ ನಿರ್ದೇಶಕರು ಹಾಗೂ ಸ್ವ.ಭಾ.ಮಿ & ನರೇಗಾ ಯೋಜನೆಯ ನೋಡಲ್ ಅಧಿಕಾರಿಗಲಾದ ಬಿ.ಎಸ್.ರಾಠೋಡ್, ಸಿಪಿಒ ಕೆ.ಕುಮಲಯ್ಯ, ಸಿಇಒ ವೆಂಕಟೇಶ ಚಟ್ನಳ್ಳಿ, ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಹ್ಮದ ಹಸದ್, ಅರಣ್ಯ ಇಲಾಖೆಯ ಅಧಿಕಾರಿಗಳು, ಅಧಿಕ್ಷರು, ಸ್ವ.ಭಾ.ಮಿ, ನರೇಗಾ, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು. 


ಗುರುವಾರ, ಆಗಸ್ಟ್ 29, 2024

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

 


                                                             ವಾ.ವಿ.ಸಂ.150

ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ

ಯಾದಗಿರಿ : ಆಗಸ್ಟ್ 29, (ಕ.ವಾ) : ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಆಗಸ್ಟ್ 30, 31 ರಂದು ಹಾಗೂ ಸೆಪ್ಟೆಂಬರ್ 2, 3 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಪ್ರವಾಸವು ಕೆಳಗಿನಂತಿದೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಶ್ರೀಶೈಲ ಜಿ.ಬಿದರಕುಂದಿ ಅವರು ತಿಳಿಸಿದ್ದಾರೆ.

     2024ರ ಆಗಸ್ಟ್ 30ರ ಶುಕ್ರವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ದಿಂದ ನಿರ್ಗಮಿಸಿ ಬೆಳಿಗ್ಗೆ  10.30 ಗಂಟೆಗೆ ಆಗಮಿಸಿ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ತದನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

     2024ರ ಆಗಸ್ಟ್ 31ರ ಶನಿವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 6 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

     2024ರ ಸೆಪ್ಟೆಂಬರ್ 2ರ ಸೋಮವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಶಹಾಪೂರ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 6 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು.

      2024ರ ಸೆಪ್ಟೆಂಬರ್ 3ರ ಮಂಗಳವಾರ ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿದಿಂದ ನಿರ್ಗಮಿಸಿ ಬೆಳಿಗ್ಗೆ 10 ಗಂಟೆಗೆ ಆಗಮಿಸಿ ಕೆಂಭಾವಿ ನಗರದಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಹಾಗೂ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ನಂತರ ಸಂಜೆ 5.30 ಗಂಟೆಗೆ ಕಲಬುರಗಿ ಪ್ರಯಾಣ ಬೆಳೆಸುವರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

 



                                                              ವಾ.ವಿ.ಸಂ.149




ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನ ಜಿಲ್ಲೆಯಲ್ಲಿ ಬೃಹತ್ ಮಾನವ ಸರಪಳಿ ಆಯೋಜನೆ : ಜಿಲ್ಲಾಧಿಕಾರಿ ಡಾ.ಸುಶೀಲ.ಬಿ

ಯಾದಗಿರಿ : ಆಗಸ್ಟ್ 29, (ಕ.ವಾ) : ಸೆ.15 ರಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಯಾದಗಿರಿ ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು, ಯರಗೋಳ ಗ್ರಾಮದಿಂದ ಕಡೆಚೂರ ಗ್ರಾಮದ ಗಡಿ ರವರೆಗೆ ಬರುವಂತಹ ಸುಮಾರು 27 ಜನ ವಸತಿ ಸ್ಥಳಗಳಲ್ಲಿ ಮಾನವ ಸರಪಳಿ ನಿರ್ಮಿಸಲು ಮೂಲಕ ಯಶಸ್ವಿಗೊಳಿಸುವಂತೆ  ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಧಿಕಾರಿಗಳಿಗೆ ಸೂಚಿಸಿದರು.


     ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಗುರುವಾರದಂದು ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತಂತೆ ಅಧಿಕಾರಿಗಳೊಂದಿಗೆ ಪೂರ್ವ ಸಿದ್ಧತಾ ಸಭೆ ನಡೆಸಿ ಅವರು ಮಾತನಾಡಿದರು.

     ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಬೀದರ್‌ನಿಂದ ಚಾಮರಾಜನಗರದವರೆಗೆ ಬೃಹತ್ ಮಾನವ ಸರಪಳಿ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ದಾರಿಯುದ್ದಕ್ಕೂ ಪಸರಿಸುವ ಉದ್ದೇಶ ಹೊಂದಿದ್ದು, ಜಿಲ್ಲೆಯ ಜನತೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

     ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಮಾನವ ಸರಪಳಿ ನಿರ್ಮಿಸುವ ಮೂಲಕ ಸಂವಿಧಾನದ ಗೌರವ, ಘನತೆ ಹೆಚ್ಚಿಸುವ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಾರಿ ಹೇಳುವಂತಹ ಮಾನವ ಸರಪಳಿ ರಚಿಸಿ ಯಶಸ್ವಿಯಾಗಿ,  ಯಾವುದೇ ಲೋಪ ಆಗದಂತೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

     ಈ ಕಾರ್ಯಕ್ರಮದ ಯಶಸ್ವಿಗಾಗಿ 20 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ.  ಪ್ರತಿ 1 ಕಿ.ಮೀ. ವ್ಯಾಪ್ತಿಗೆ ಏರಿಯಾ ಅಧಿಕಾರಿಗಳು ಮತ್ತು ಪ್ರತಿ 3 ಕಿಲೋಮೀಟರ್ ವ್ಯಾಪ್ತಿಗೆ ತಾಲೂಕ ಮಟ್ಟದ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗುತ್ತದೆ ಎಂದು ತಿಳಿಸಿದರು.

     ಕಾರ್ಯಕ್ರಮಕ್ಕೆ ಅತಿಥಿ ಗಣ್ಯರನ್ನು ಆಹ್ವಾನಿಸಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ದೇಶಭಕ್ತಿ,ಐಕ್ಯತೆ, ಸಂವಿಧಾನ  ಮತ್ತು  ಪ್ರಜಾಪ್ರಭುತ್ವದ ಮಹತ್ವ  ಸಾರುವಂತಹ ಮಾನವ ಸರ್ಪಳಿಯನ್ನು ನಿರ್ಮಿಸಬೇಕು. ವಿವಿಧ ಸಾಂಸ್ಕೃತಿಕ, ಕಲಾ ತಂಡಗಳ, ಸಂಘ ಸಂಸ್ಥೆಗಳ ಸಹಭಾಗಿತ್ವ ದೊಂದಿಗೆ ಕಾರ್ಯಕ್ರಮ ಯಶಸ್ವಿಗೊಳಿಸಬೇಕು.  ತುರ್ತು ಸೇವೆಗಾಗಿ ಆರೋಗ್ಯ ಇಲಾಖೆಯಿಂದ  ನುರಿತ ಸಿಬ್ಬಂದಿ ಗಳೊಂದಿಗೆ ಚಿಕಿತ್ಸೆ ಸೌಲಭ್ಯ ಇರುವ ಆಂಬುಲೆನ್ಸ್ ವ್ಯವಸ್ಥೆ, ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿವಿಧ ಕಲಾತಂಡಗಳ ನಿಯೋಜನೆ ಮಾಡುವಂತೆ ಹಾಗೂ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

     ರೂಟ್ ಮ್ಯಾಪ್ ಗ್ರಾಮಗಳು : ಯರಗೋಳ, ಯರಗೋಳ ತಾಂಡ, ಮಲ್ಕಪನಳ್ಳಿ, ಗೇಮುನಾಯಕ ತಾಂಡ, ವೆಂಕಟೇಶ ನಗರ, ಅಲ್ಲಿಪೂರ ತಾಂಡ, ಅಲ್ಲಿಪೂರ, ಕಂಚಗಾರಹಳ್ಳಿ, ಚಾಮನಳ್ಳಿ ತಾಂಡ,  ಆರ್ಯಭಟ ಸ್ಕೂಲ್, ಆದರ್ಶ ಸ್ಕೂಲ್, ಮೆಡಿಕಲ್ ಕಾಲೇಜು, ಮುದ್ನಾಳ ದೊಡ್ಡತಾಂಡ, ಮುಂಡರಗಿ, ಆಶನಾಳ ತಾಂಡ, ರಾಮಸಮುದ್ರ, ಮೈಲಾಪೂರ, ಹಳಿಗೇರಾ, ಆರ್ ಹೊಸಳ್ಳಿ, ನಗಲಾಪೂರ, ಬಳಿಚಕ್ರ, ಕಿಲ್ಲನಕೇರಾ, ಕರಿಬೆಟ್ಟ, ರಾಚನಳ್ಳಿ, ಶೆಟ್ಟಿಹಳ್ಳಿ, ಕಡೆಚೂರ, ಕಡೆಚೂರ ಬಾರ್ಡರ್ ಒಟ್ಟು 68 ಕಿಲೋಮೀಟರ್ ಮಾನವ ಸರಪಳಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಿಳಿಸಿದರು.

     ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್ ಪಾಟೀಲ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ ಎಸ್‌ಪಿ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ಡಿವೈಎಸ್ಪಿ ಅರುಣಕುಮಾರ , ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಕುಮಾರಿ ಸರೋಜಾ, ಡಿಡಿಪಿಐ ಮಂಜುನಾಥ, ಡಿಡಿಪಿಯು ಚನ್ನಬಸಪ್ಪ ಕುಳಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೀರನಗೌಡ, ತಹಶೀಲ್ದಾರ ಸುರೇಶ ಅಂಕಲಗಿ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


                                                              ವಾ.ವಿ.ಸಂ.148

“ಆರೋಗ್ಯ ಮೇಳ” ಕಾರ್ಯಕ್ರಮ




ಒಬ್ಬ ವ್ಯಕ್ತಿ ಅಂಗಾಗ ದಾನವು ಹಲವು ಜನರಿಗೆ ಜೀವವನ್ನು ಉಳಿಸಬಹುದು

ಯಾದಗಿರಿ : ಆಗಸ್ಟ್ 29, (ಕ.ವಾ) : ಹೆಚ್ಚು ಹೆಚ್ಚಾಗಿ ಸ್ವಯಂ ಪ್ರೇರಣೆಯಿಂದ ಅಂಗಾದ ದಾನ ಮಾಡುವುದು ಮತ್ತು ಕುಟುಂಬಸ್ಥರಿಗೆ ಪ್ರೇರೆಪಿಸುವುದು ಇದು ಒಬ್ಬ ವ್ಯಕ್ತಿ ಅಂಗಾAಗ ದಾನವು ಹಲವು ಜನರಿಗೆ ಜೀವವನ್ನು ಉಳಿಸ ಬಹುದು ಎಂದು ಮತ್ತು ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಸೊಳ್ಳೆಗಳ ನಿಯಂತ್ರಣ ಸಮುದಾಯ ಜವಾಬ್ದಾರಿಯಾಗಿದ್ದು ಎಲ್ಲರ ಸಹಕಾರದಿಂದ ಸೊಳ್ಳೆಗಳಿಂದ ಹರಡುವ ರೋಗಗಳಿಂದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ನಿಯಂತ್ರಿಸಲು ಸಾರ್ವಜನಿಕರಿಗೆ ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿಗಳಾದ ಡಾ.ಸಾಜೀದ್ ಕರೆ ನೀಡಿದರು.

   ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಕುರಕುಂದ ಗ್ರಾಮದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುರಕುಂದ ಪ್ರಾ.ಆ.ಕೇಂದ್ರ ಸಹಯೋಗದಲ್ಲಿ “ಆರೋಗ್ಯ ಮೇಳ” ನೇತ್ರದಾನ ಪಾಕ್ಷಿಕ ವiತ್ತು ಅಂಗಾAಗ ದಾನ ಕುರಿತು ಆರೋಗ್ಯದ ಅರಿವು ಆರೋಗ್ಯ ಮೇಳ ಇತ್ತೀಚಿನ ಕಾರ್ಯಕ್ರಮದಲ್ಲಿ ಮಾತನಾಡಿದರು. 

     ವಡಗೇರಾ ತಾಲೂಕಿನ ಕುರಕುಂದ ಗ್ರಾಮದಲ್ಲಿ ಗ್ರಾಮದ ಸಾರ್ವಜನಿಕರು ಅಂಗಾAಗದಾನದ ಮಹತ್ವದ ಕುರಿತು ತಿಳಿದುಕೊಂಡು ಹೆಚ್ಚು ಹೆಚ್ಚಾಗಿ ಸ್ವಯಂ ಪ್ರೇರಣೆಯಿಂದ ಅಂಗಾದ ದಾನ ಮಾಡುವುದು ಮತ್ತು ಕುಟುಂಬಸ್ಥರಿಗೆ ಪ್ರೇರೆಪಿಸುವುದು ಇದು ಒಬ್ಬ ವ್ಯಕ್ತಿ ಅಂಗಾAಗ ದಾನವು ಹಲವು ಜನರಿಗೆ ಜೀವವನ್ನು ಉಳಿಸ ಬಹುದು ಎಂದು ಮತ್ತು ವಿಶ್ವ ಸೊಳ್ಳೆ ದಿನದ ಪ್ರಯುಕ್ತ ಸೊಳ್ಳೆಗಳ ನಿಯಂತ್ರಣ ಸಮುದಾಯ ಜವಾಬ್ದಾರಿಯಾಗಿದ್ದು ಎಲ್ಲರ ಸಹಕಾರದಿಂದ ಸೊಳ್ಳೆಗಳಿಂದ ಹರಡುವ ರೋಗಗಳಿಂದ ಮುಂಜಾಗ್ರತಾ ಕ್ರಮ ವಹಿಸಬೇಕು ಎಂದು ಹೇಳಿದರು.


     ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿಗಳಾದ ಡಾ.ಮಲ್ಲಪ್ಪ ಕಣಜಿಕರ್ ಅವರು ಮಾತನಾಡಿ, ರಾಷ್ಟಿçÃಯ 39ನೇ ನೇತ್ರದಾನ ಪಾಕ್ಷಿಕ ಕಾರ್ಯಕ್ರಮ ಆಗಸ್ಟ್ 25 ರಿಂದ ಸೆಪ್ಟೆಂಬರ್ 8ರ ವರೆಗೆ ನಡೆಯಲಿದ್ದು, ಕಣ್ಣಿನ ಮಹತ್ವ ಕುರಿತು ವಿವರಿಸಿ ಎಲ್ಲರೂ ನೇತ್ರದಾನ ಮಾಡುವಂತೆ ಆನ್‌ಲೈನ್ ಪೋರ್ಟಲ್‌ನಲ್ಲಿ ಜೀವನ್ ಸಾರ್ಥಕತೆ ಆ್ಯಪ್ ಮೂಲಕ ನೋಂದಾಯಿಸಕೊಳ್ಳಬೇಕು ಇದರಿಂದ ಒಬ್ಬ ವ್ಯಕ್ತಿಯ ನೇತ್ರದಾನವು ಇಬ್ಬರು ಕಾರ್ನಿಯಾ ಅಂಧರಿಗೆ ವರವಾಗುವುದು, ನೇತ್ರದಾನ ಮರಣದ 6 ಗಂಟೆಯೊಳಗೆ ನೇತ್ರಗಳನ್ನು ಸಂಗ್ರಹಿಸಲಾಗುವುದು ಎಂದು ತಿಳಿಸಿದರು. ಶಾಲಾ ಮಕ್ಕಳನ್ನು ಉದ್ದೇಶಿಸಿ ರಕ್ತಹೀನತೆ ತಡೆಗಟ್ಟಲು ಪ್ರತಿವಾರದಲ್ಲಿ ಒಂದು ದಿನ ಕಬ್ಬಿಣಾಂಶ ಮಾತ್ರೆಯನ್ನು ಸೇವಿಸಬೇಕು ಎಂದು ಮತ್ತು ಹೆಣ್ಣುಮಕ್ಕಳು ಮುಟ್ಟಿನ ಶುಚಿತ್ವ ಕಡೆಗಮನ ಹರಿಸಲು ಮತ್ತು ಆರೋಗ್ಯ ಇಲಾಖೆಯಿಂದ ಶುಚಿ ನ್ಯಾಪಕಿನ್ ಉಚಿತವಾಗಿ ಪಡೆದುಕೊಳ್ಳುವಂತೆ ಹೇಳಿದರು.

     ತಾಲೂಕಾ ಆರೋಗ್ಯ ಅಧಿಕಾರಿಗಳಾದ ಡಾ.ರಮೇಶ ಗುತ್ತೇದಾರ ಅವರು ಮಾತನಾಡಿ ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಯಾವುದಿಲ್ಲ ಆರೋಗ್ಯವೇ ಮಹಾಭಾಗ್ಯ ಪೌಷ್ಠಿಕ ಆಹಾರ ಸೇವಿಸಿ ಉತ್ತಮ ಆರೋಗ್ಯ ಪಡೆಯಬೇಕೆಂದು ತಿಳಿಸಿದರು.

     ಕುರಕುಂದ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿಗಳಾದ ಡಾ.ಮರಲಿಂಗಪ್ಪ ಅವರು ಮಾತನಾಡಿ, ಆರೋಗ್ಯ ಮೇಳದಲ್ಲಿ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮ ಕುರಿತು ಜಾಗೃತಿ ಮೂಡಿಸುವುದು ಉಚಿತ ಆರೋಗ್ಯ ತಪಾಸಣೆ ಮಾಡುವುದು ಹಾಗೂ ಚಿಕಿತ್ಸೆಯನ್ನು ನೀಡುವುದಾಗಿರುತ್ತದೆ, ಸಾರ್ವಜನಿಕರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

     ಕಾರ್ಯಕ್ರಮದಲ್ಲಿ ರಾಷ್ಟಿçÃಯ 39ನೇ ನೇತ್ರಧಾನ ಪಾಕ್ಷೀಕ ಅಂಗವಾಗಿ ಕರಪತ್ರಗಳ ಬಿಡುಗಡೆ ಹಾಗೂ ಹಿರಿಯ ನಾಗರಿಕರಿಗೆ ಉಚಿತವಾಗಿ ಕನ್ನಡಕಗಳನ್ನು ವಿತರಿಸಲಾಯಿತು.

     ಕಾರ್ಯಕ್ರಮದ ನಿರೂಪಣೆ ಯಾದಗಿರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ತುಳಸಿರಾಮ ಚವ್ಹಾಣ ನೆರವೇರಿಸಿದರು, ಪ್ರಾರ್ಥನೆ ಗೀತೆ ವಿದ್ಯಾರ್ಥಿನಿ ಕು.ಅಯ್ಯಮ್ಮ ಕು.ಚಾಂದಬೀ, ಸ್ವಾಗತ ಸಿ.ಹೆಚ್.ಒ ಮಹಾದೇವಪ್ಪ, ವಂದನಾರ್ಪಣೆ ಹೆಚ್.ಎಸ್ ಶಾಂತಿಲಾಲ್ ಅವರು ನೇರವೆರಿಸಿದರು.

     ಈ ಸಂದರ್ಭದಲ್ಲಿ ಕುರಕುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಮುದ್ದಮ್ಮ ಗುಡುಸಾಬ ಶೇಕ್‌ಸಿಂದಿ, ಜಿಲ್ಲಾ ಆರ್.ಸಿ.ಹೆಚ್ ಆಯುಷ್ ವೈದ್ಯರು ಡಾ.ಶೃತಿ, ಶಂಕರಾನAದ, ಸುದರ್ಶನ, ಹಾಗೂ ಡಾ.ಅಮೀತ, ಮಾಳಪ್ಪ ಪುರ್ಲೇ, ಶ್ರೀಮತಿ ಶೀಭಾರಾಣಿ, ಮಹಿಬೂಬ್, ಬಿಹೆಚ್‌ಇಓ, ಬಸವರಾಜ ಎಸ್‌ಟಿಎಸ್ ಉಮೇಶ, ಹಿ.ಆ.ನೀರಿಕ್ಷಣಾಧಿಕಾರಿ ಸಂಗಣ್ಣ ನುಚ್ಚಿನ್, ಪ್ರಾ.ಆ.ಕೇಂದ್ರದ ರಾಜಶೇಖರ, ಹಿ.ಆ.ನಿ.ಅಧಿಕಾರಿಗಳು, ಹಣಂತ್ರಾಯಗೌಡ, ಪಿ.ಹೆಚ್.ಸಿ.ಒ ಶ್ರೀಮತಿ ಮರೇಮ್ಮ, ಯಾದಗಿರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳು, ಅಧಿಕಾರಿಗಳು, ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.


ಸೋಮವಾರ, ಆಗಸ್ಟ್ 26, 2024

ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ

                                                             ವಾ.ವಿ.ಸಂ.131
ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ

ಕಾಣೆಯಾದ ವ್ಯಕ್ತಿ ಪತ್ತೆಗೆ ಮನವಿ
ಯಾದಗಿರಿ : ಆಗಸ್ಟ್ 26, (ಕ.ವಾ) : ಯಾದಗಿರಿ ನಗರದ ಅಜೀಜ್ ಕಾಲೋನಿ ನಿವಾಸಿಯಾದ ಶೇಖ ಇರ್ಫಾನ್ 25 ವರ್ಷ ಪುರುಷ ಕಾಣೆಯಾಗಿದ್ದು, ಈ ಕುರಿತು ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದಾಖಲಿಸಿಕೊಂಡು ತನಿಖೆ ಮುಂದುವರಿದಿದೆ ಎಂದು ನಗರ ಠಾಣಾಧಿಕಾರಿ ತಿಳಿಸಿದ್ದಾರೆ.

     ಕಾಣೆಯಾದ ಪುರುಷ 2024ರ ಆಗಸ್ಟ್ 20 ರಂದು ರಾತ್ರಿ ಸಮಯದಲ್ಲಿ ಅಂದಾಜು 2 ಗಂಟೆಗೆ ಸುಮಾರಿಗೆ ತನ್ನ ಮೊಬೈಲ್ ಮನೆಯಲ್ಲಿ ಬಿಟ್ಟು ಮನೆಯಿಂದ ಹೋಗಿದ್ದು, ಮರಳಿ ಮನೆಗೆ ಬಂದಿರುವುದಿಲ್ಲ. ಕುಟುಂಬದವರು ಪರಿಚಯವಿರುವ ನಗರದಲ್ಲಿ ಎಲ್ಲಾ ಕಡೆ ಹುಡುಕಾಡಿದ್ದು, ಎಲ್ಲಿಯೂ ಕಂಡು ಬಂದಿರುವುದಿಲ್ಲ. ಪುರುಷ ಕಾಣೆಯಾದ ಬಗ್ಗೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುರುಷನ ಮಾಹಿತಿ ಸಿಕ್ಕರೆ ಯಾದಗಿರಿ ನಗರ ಪೊಲೀಸ್ ಠಾಣೆ  ತಿಳಿಸಲು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

                                                             ವಾ.ವಿ.ಸ.45 ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಶರಣಬಸಪ್ಪ ದರ್ಶನಾಪೂರ ಅವರ ಜಿಲ್ಲಾ ಪ್ರವಾಸ ಯಾದಗ...